Published : May 10, 2025, 10:01 AM IST

Karnataka News Live: ಆಶಾ ಕಾರ್ಯಕರ್ತೆಯರಿಗೆ ಹೆಚ್ಚುವರಿ 1 ಸಾವಿರ ಪ್ರೋತ್ಸಾಹ ಧನ: ಸಂಪುಟ ನಿರ್ಧಾರ

ಸಾರಾಂಶ

ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ 2 ವರ್ಷ ಪೂರೈಕೆ ಮಾಡಿರುವ ಸಂಭ್ರಮವನ್ನು ಮುಂದೂಡಲಾಗಿದ. ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಏರಿ ಮೇ 20ಕ್ಕೆ 2 ವರ್ಷವಾಗಲಿದೆ. ಇದರ ಹಿನ್ನಲೆಯಲ್ಲಿ ಕಲ್ಯಾಣ ಕರ್ನಾಟಕ ಭಾಗವಾದ ಹೊಸಪೇಟೆಯಲ್ಲಿ ನಡೆಸಲು ಉದ್ದೇಶಿಸಲಾಗಿದ್ದ ಸಾಧನಾ ಸಮಾವೇಶವನ್ನು ಮುಂದೂಡಿಕೆ ಮಾಡಲಾಗಿದೆ.
 

Karnataka News Live: ಆಶಾ ಕಾರ್ಯಕರ್ತೆಯರಿಗೆ ಹೆಚ್ಚುವರಿ 1 ಸಾವಿರ ಪ್ರೋತ್ಸಾಹ ಧನ: ಸಂಪುಟ ನಿರ್ಧಾರ

08:27 PM (IST) May 10

ಸೋಮವಾರ ಬುದ್ಧ ಪೂರ್ಣಿಮೆ; ಮಾಂಸ ಮಾರಾಟ ನಿಷೇಧಿಸಿ ಬಿಬಿಎಂಪಿ ಆದೇಶ

ಬುದ್ಧ ಪೂರ್ಣಿಮೆ ಪ್ರಯುಕ್ತ ಸೋಮವಾರ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ಬಿಬಿಎಂಪಿ ನಿಷೇಧಿಸಿದೆ. ಮೇ 12 ರಂದು ಬುದ್ಧ ಪೂರ್ಣಿಮೆ ಆಚರಣೆ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮಂಗಳವಾರದಿಂದ ಎಂದಿನಂತೆ ಮಾಂಸ ಮಾರಾಟ ಮುಂದುವರಿಯಲಿದೆ.

ಪೂರ್ತಿ ಓದಿ

01:01 PM (IST) May 10

ಆಶಾ ಕಾರ್ಯಕರ್ತೆಯರಿಗೆ ಹೆಚ್ಚುವರಿ 1 ಸಾವಿರ ಪ್ರೋತ್ಸಾಹ ಧನ: ಸಂಪುಟ ನಿರ್ಧಾರ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈದಿಗಳ ಸನ್ನಡತೆ ಆಧಾರದ ಮೇಲೆ ಬಿಡುಗಡೆ, ಆಶಾ ಕಾರ್ಯಕರ್ತೆಯರಿಗೆ ಹೆಚ್ಚುವರಿ 1 ಸಾವಿರ ರು. ಪ್ರೋತ್ಸಾಹಧನ ವಿತರಣೆ ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

ಪೂರ್ತಿ ಓದಿ

12:41 PM (IST) May 10

ಅಪಾಯಕಾರಿ ಕೆಲಸಕ್ಕೆ ಮಕ್ಕಳ ಬಳಕೆ: ಕೆಮಿಕಲ್‌ ಕಂಪನಿ ವಿರುದ್ಧ ದೂರು ದಾಖಲು

ಕೆಮಿಕಲ್‌ ಕಂಪನಿ ವಿರುದ್ಧ ಇಂತಹುದ್ದೊಂದು ದೂರು ನೀಡದಂತೆ ಸ್ಥಳೀಯ ಕೆಲವು ಪ್ರಭಾವಿಗಳು ಹಾಗೂ ಮಧ್ಯವರ್ತಿಗಳು ಕಳೆದೊಂದು ವಾರದಿಂದ ನಿರಂತರ ಪ್ರಯತ್ನಿಕ್ಕಿಳಿದಿತ್ತು ಎನ್ನಲಾಗುತ್ತಿದೆ. 

ಪೂರ್ತಿ ಓದಿ

12:16 PM (IST) May 10

ನನ್ನ ಜನ್ಮದಿನಕ್ಕಿಂತ ಯೋಧರ ಹೋರಾಟ ಮುಖ್ಯ: ಡಿಸಿಎಂ ಡಿಕೆಶಿ ಮನವಿ ಮಾಡಿದ್ದೇನು?

ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಈ ಸೂಕ್ಷ್ಮ ಸಂದರ್ಭದಲ್ಲಿ ಮೇ 15 ರಂದು ಯಾರೂ ನನ್ನ ಜನ್ಮ ದಿನಾಚರಣೆ ಮಾಡುವುದು ಬೇಡ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿದ್ದಾರೆ. 

ಪೂರ್ತಿ ಓದಿ

11:47 AM (IST) May 10

ಮಾರುಕಟ್ಟೆಯಲ್ಲಿ ಬೇಡಿಕೆ ತಂದ ಸಿಂದೂರ ಸೀರೆ: ಪಾತಾಳ ಕಂಡಿದ್ದ ನೇಕಾರರಿಗೆ ಬೂಸ್ಟ್

ಪಹಲ್ಗಾಂ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆ ಆಪರೇಷನ್ ಸಿಂದೂರ ಕಾರ್ಯಾಚರಣೆ ಮೂಲಕ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದ್ದರಿಂದ ದೇಶದೆಲ್ಲೆಡೆ ವಿಜಯೋತ್ಸವ ಆಚರಿಸುತ್ತಿದ್ದಾರೆ. ಆದರೆ, ಸಿಂದೂರ ಹೆಸರಿನಲ್ಲಿ ನಡೆಸಿದ ಈ ಕಾರ್ಯಾಚರಣೆ ಈಗ ಹೊಸದೊಂದು ಅಲೆಯನ್ನೇ ಸೃಷ್ಟಿಸಿದೆ. 
 

ಪೂರ್ತಿ ಓದಿ

10:16 AM (IST) May 10

ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ

ರಾಜ್ಯದಲ್ಲಿ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ವರದಿಯ (ಜಾತಿಗಣತಿ) ದತ್ತಾಂಶಕ್ಕೆ ಸಂಬಂಧಿಸಿ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದ್ದು, 11 ಸಚಿವರು ತಮ್ಮ ಅಭಿಪ್ರಾಯವನ್ನು ಲಿಖಿತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ್ದಾರೆ. 
 

ಪೂರ್ತಿ ಓದಿ

10:16 AM (IST) May 10

ರಾಜ್ಯ ಕಾಂಗ್ರೆಸ್‌ ಸರ್ಕಾರದ 2ನೇ ವರ್ಷಾಚರಣೆ ಮುಂದಕ್ಕೆ: ಕಾರಣವೇನು?

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಎರಡು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮೇ 20ರಂದು ಕಲ್ಯಾಣ ಕರ್ನಾಟಕದ ಹೊಸಪೇಟೆಯಲ್ಲಿ ನಡೆಸಲುದ್ದೇಶಿಸಿದ್ದ ಸಾಧನಾ ಸಮಾವೇಶ ಮುಂದೂಡಲಾಗಿದೆ. 

ಪೂರ್ತಿ ಓದಿ

10:15 AM (IST) May 10

ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ: ಸಂಪುಟ ಸಭೆ ಮಹತ್ವದ ತೀರ್ಮಾನ

ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾಯಂ ಸೂಪರ್‌ ಸ್ಪೆಷಾಲಿಟಿ ವೈದ್ಯರ ವಯೋನಿವೃತ್ತಿ ವಯಸ್ಸು 60ರಿಂದ 65 ವರ್ಷಕ್ಕೆ ಹೆಚ್ಚಿಸಲು ಸಚಿವ ಸಂಪುಟ ಸಭೆ ಮಹತ್ವ ತೀರ್ಮಾನ ಕೈಗೊಂಡಿದೆ. 

ಪೂರ್ತಿ ಓದಿ

10:15 AM (IST) May 10

ಆಪರೇಷನ್ ಸಿಂದೂರ: ಯುದ್ಧಕ್ಕೆ ಬೆಂಗ್ಳೂರು ಮಿಲಿಟರಿ ಘಟಕಗಳು ಸಜ್ಜು!

ಭಾರತ-ಪಾಕಿಸ್ತಾನ ನಡುವೆ ಯುದ್ಧ ಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಸೇನೆಯ ಭಾಷೆಯಲ್ಲಿ ‘ಪೀಸ್ ಸ್ಟೇಷನ್’ ಎಂದೇ ಕರೆಯಲ್ಪಡುವ ಬೆಂಗಳೂರು ನಗರದಲ್ಲಿರುವ ಸೇನಾ ಘಟಕಗಳು ಮತ್ತು ಸೇನೆಗೆ ಸಂಬಂಧಿಸಿದ ಎಲ್ಲಾ ಸಂಸ್ಥೆಗಳು, ವಿಭಾಗಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ. 
 

ಪೂರ್ತಿ ಓದಿ

10:02 AM (IST) May 10

ರಾಜ್ಯ ಕಾಂಗ್ರೆಸ್‌ ಸರ್ಕಾರದ 2ನೇ ವರ್ಷಾಚರಣೆ ಮುಂದಕ್ಕೆ: ಕಾರಣವೇನು?

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಎರಡು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮೇ 20ರಂದು ಕಲ್ಯಾಣ ಕರ್ನಾಟಕದ ಹೊಸಪೇಟೆಯಲ್ಲಿ ನಡೆಸಲುದ್ದೇಶಿಸಿದ್ದ ಸಾಧನಾ ಸಮಾವೇಶ ಮುಂದೂಡಲಾಗಿದೆ. 

ಪೂರ್ತಿ ಓದಿ

10:02 AM (IST) May 10

ಸರ್ಕಾರಿ ನೌಕರರ ವರ್ಗಾವಣೆ ಮೇ.15ಕ್ಕೆ ಶುರು, ಒಂದು ತಿಂಗಳು ಪ್ರಕ್ರಿಯೆ: ಸಂಪುಟ ನಿರ್ಧಾರ

ಪ್ರಸಕ್ತ 2025-26ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಇದೇ 15ರಿಂದ ಒಂದು ತಿಂಗಳ ಕಾಲ ನಡೆಯಲಿದೆ. ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದೆ. 

ಪೂರ್ತಿ ಓದಿ

10:02 AM (IST) May 10

ಇಂದು ರಾಜ್ಯದಲ್ಲಿ ನಿಗದಿಯಂತೆ ನಡೆಯಲಿದೆ ಕಾಮೆಡ್‌ಕೆ ಪರೀಕ್ಷೆ

ಕರ್ನಾಟಕ ಸೇರಿ 18 ರಾಜ್ಯಗಳ ವಿವಿಧ ನಗರಗಳಲ್ಲಿ ಶನಿವಾರ ನಿಗದಿಯಂತೆ ಕಾಮೆಡ್‌-ಕೆ ಯುಜಿಇಟಿ ಮತ್ತು ಯೂನಿಗೇಜ್‌ ಪರೀಕ್ಷೆ ನಡೆಯಲಿದೆ. 
 

ಪೂರ್ತಿ ಓದಿ


More Trending News