ಬೆಂಗಳೂರು: ಅಧಿಕಾರ ಹಂಚಿಕೆ ವಿಚಾರದಲ್ಲಿ ಉಂಟಾಗಿರುವ ಗೊಂದಲ ನಿವಾರಣೆಗೆ ಹೈಕಮಾಂಡ್ ನಾಯಕರು ವಿಳಂಬ ಮಾಡದೇ ತಮ್ಮ ನಿರ್ಣಯ ತಿಳಿಸಬೇಕು ಎಂದು ಕಾಂಗ್ರೆಸ್ ಶಾಸಕ ಆರ್.ವಿ.ದೇಶಪಾಂಡೆ ಆಗ್ರಹಿಸಿದರು. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ದೇಶಪಾಂಡೆ, ಅಧಿಕಾರ ಹಂಚಿಕೆ ಕುರಿತಂತೆ ಹೈಕಮಾಂಡ್ ನಿರ್ಣಯವೇ ಅಂತಿಮ ಎಂದು ಸಿಎಂ ಮತ್ತು ಡಿಸಿಎಂ ತಿಳಿಸಿದ್ದಾರೆ. ಹೀಗಾಗಿ ವಿಳಂಬ ಮಾಡದೇ ಹೈಕಮಾಂಡ್ ನಾಯಕರು ನಿರ್ಣಯ ಹೇಳಬೇಕು. ಗೊಂದಲ ಹೆಚ್ಚುವಂತಾಗಬಾರದು. ಜವಾಬ್ದಾರಿ ಸ್ಥಾನದಲ್ಲಿರುವವರು ಜವಾಬ್ದಾರಿಯಿಂದ ನಿರ್ಧಾರ ಮಾಡಬೇಕು ಎಂದರು.
ಯಾವುದೇ ವಿಚಾರವಾದರೂ ಏನು ಮಾತನಾಡಬೇಕು, ಯಾವುದನ್ನು ಮಾತನಾಡಬಾರದು ಎಂಬುದನ್ನು ಮಾತನಾಡುವ ವ್ಯಕ್ತಿಗೆ ತಿಳಿದಿರಬೇಕು. ಯಾವ ರೀತಿ ಮಾತನಾಡಬೇಕು ಎಂದು ನಾವು ಹೇಳಲು ಆಗುವುದಿಲ್ಲ. ಅಧಿಕಾರ ಹಂಚಿಕೆ ವಿಚಾರವಾಗಿ ಚರ್ಚೆ ಆಗುವ ಅವಶ್ಯಕತೆಯೇ ಇಲ್ಲ ಎಂದರು.
10:41 PM (IST) Feb 11
09:17 PM (IST) Feb 11
ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯಲ್ಲಿ ಆಡಳಿತಾತ್ಮಕ ಸುಧಾರಣೆಗಾಗಿ 129 ಪೊಲೀಸ್ ಇನ್ಸ್ಪೆಕ್ಟರ್ಗಳು ಮತ್ತು 23 ಡಿವೈಎಸ್ಪಿ ದರ್ಜೆಯ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ರಾಜ್ಯದಾದ್ಯಂತ ಈ 'ಮೇಜರ್ ಸರ್ಜರಿ' ನಡೆದರೂ, ಬೆಂಗಳೂರು ನಗರದ ಆಂತರಿಕ ವರ್ಗಾವಣೆ ಪಟ್ಟಿ ಬಿಡುಗಡೆಯಾಗಿಲ್ಲ.
07:37 PM (IST) Feb 11
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ನನೆಗುದಿಗೆ ಬಿದ್ದಿರುವ ಮೈಸೂರು–ಕುಶಾಲನಗರ ರೈಲು ಯೋಜನೆಗೆ ಮರುಚಾಲನೆ ನೀಡಲು ಮತ್ತು ಭೂಸ್ವಾಧೀನ ಪ್ರಕ್ರಿಯೆ ಚುರುಕುಗೊಳಿಸಲು ಕೇಂದ್ರ ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.
07:17 PM (IST) Feb 11
ಸ್ಯಾಂಡಲ್ವುಡ್ ನಟಿಯ ಗೆಳೆಯ ಬಿ.ಕೆ. ವೈಶಾಕ್ ಬಂಧನ ಪ್ರಕ್ರಿಯೆಯಲ್ಲಿ ಕಾನೂನು ಪಾಲಿಸದ ಪೊಲೀಸರು ಮತ್ತು ಮ್ಯಾಜಿಸ್ಟ್ರೇಟ್ ನಡೆಗೆ ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನೋಟಿಸ್ ನೀಡದೆ ಬಂಧಿಸಿರುವುದು ಸಂವಿಧಾನಾತ್ಮಕ ಹಕ್ಕುಗಳ ಉಲ್ಲಂಘನೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
07:02 PM (IST) Feb 11
ಸಿದ್ಧಾಪುರದ ಸಂಚಲನಕಾರಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಸುಚಿತ್ರಾ ಮತ್ತು ಜ್ಯೋತಿಷಿ ಕಮಲಾಕರ ಭಟ್ ಸೇರಿದಂತೆ ಐವರ ನ್ಯಾಯಾಂಗ ಬಂಧನವನ್ನು ಫೆಬ್ರವರಿ 21ರವರೆಗೆ ವಿಸ್ತರಿಸಲಾಗಿದೆ. ಸಿದ್ಧಾಪುರ JMFC ನ್ಯಾಯಾಲಯ ಈ ಆದೇಶ ನೀಡಿದೆ.
06:28 PM (IST) Feb 11
ಟಾಕ್ಸಿಕ್ ಸಿನಿಮಾ ಬಿಡುಗಡೆಗೂ ಮೊದಲೇ ದಾಖಲೆ, ಕಳೆದ ತಿಂಗಳು ಟಾಕ್ಸಿಕ್ ಟ್ರೇಲರ್ ರಿಲೀಸ್ ಆಗಿತ್ತು. ಇಷ್ಟೇ ನೋಡಿ, ಇದೀಗ ಟಾಕ್ಸಿಕ್ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಾಗಿದ್ದು ಮಾತ್ರವಲ್ಲ, ಈಗಲೇ 105 ಕೋಟಿ ರೂಪಾಯಿ ಬಾಚಿಕೊಂಡಿದೆ.
06:23 PM (IST) Feb 11
ನಟರಾದ ಸಾಧು ಕೋಕಿಲ ಮತ್ತು ಮಂಡ್ಯ ರಮೇಶ್ ಅವರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಮೈಸೂರಿನ ಮಹಿಳೆಯೊಬ್ಬರು ದಾಖಲಿಸಿದ್ದ ದೂರಿನಲ್ಲಿ ಸಮರ್ಪಕ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ, ನ್ಯಾಯಾಲಯವು ಕೇಸ್ ರದ್ದುಪಡಿಸಿ ಆದೇಶಿಸಿದೆ.
06:21 PM (IST) Feb 11
ಬಿಗ್ಬಾಸ್ ಹಾಗೂ 'ಪಾರು' ಖ್ಯಾತಿಯ ಮೋಕ್ಷಿತಾ ಪೈ ಇದೀಗ 'ಜಗದ್ಧಾತ್ರಿ' ಎಂಬ ಹೊಸ ಧಾರಾವಾಹಿಯ ಮೂಲಕ ಜೀ ಕನ್ನಡಕ್ಕೆ ಮರಳುತ್ತಿದ್ದಾರೆ. ಈ ಧಾರಾವಾಹಿಯಲ್ಲಿ ಅವರು ಕ್ರೈಂ ಬ್ರ್ಯಾಂಚ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಇದು ತೆಲುಗಿನ ಜನಪ್ರಿಯ ಸೀರಿಯಲ್ನ ರಿಮೇಕ್ ಆಗಿದೆ. ನಟ ಯಾರು?
06:09 PM (IST) Feb 11
'ಭಾರ್ಗವಿ LLB' ಧಾರಾವಾಹಿಯಲ್ಲಿ ಏನಾಗಲಿದೆ ಎಂಬ ಕುತೂಹಲ ಶುರುವಾಗಿದೆ. ವಿಶಿಷ್ಟ ಕಥೆ ಮೂಲಕ ಮನಗೆದ್ದಿರುವ ಈ ಸೀರಿಯಲ್, ಈಗ ಸೀರಿಯಲ್ ದಿಕ್ಕನ್ನೇ ಬದಲಿಸುವ ತಿರುವಿನಲ್ಲಿದೆ. ಇಷ್ಟುದಿನ ವಕೀಲೆಯಾಗಿ ಅನ್ಯಾಯದ ವಿರುದ್ಧ ಸಿಡಿದೇಳುತ್ತಿದ್ದ ಭಾರ್ಗವಿಯ ಬದುಕಿನಲ್ಲಿ ಈಗ ವಿಧಿ ಆಟ ಆಡಿದೆ.
06:07 PM (IST) Feb 11
ಜ್ಯೋತಿಷಿ ಕಮಲಾಕರ ಮತ್ತು ರೀಲ್ಸ್ ರಾಣಿ ಸುಚಿತ್ರಾ ಅವರ ಅಪರಾಧದ ಹಿನ್ನೆಲೆ ಬಯಲಾಗಿದೆ. ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಇವರಿಬ್ಬರ ಹಿಂದೆ ಹಲವು ಮದುವೆಗಳು, ಮೋಸದ ಜಾಲ ಹಾಗೂ ಸುಪಾರಿ ನೀಡಿದ ಕರಾಳ ಕಥೆಯಿದೆ. ಸುಚಿತ್ರಾಳ ಆಪ್ತೆಯೇ ಇವರ ಸಂಬಂಧ ಮತ್ತು ಅಪರಾಧದ ಬಗ್ಗೆ ಸತ್ಯ ಬಾಯಿಬಿಟ್ಟಿದ್ದಾಳೆ.
05:29 PM (IST) Feb 11
Sandalwood Celebrities Resort News: ಕನ್ನಡದ ಅನೇಕ ನಟ-ನಟಿಯರು ನಿರೂಪಣೆ, ನಟನೆ ಜೊತೆಗೆ ಉದ್ಯಮವನ್ನು ಕೂಡ ಹೊಂದಿದ್ದಾರೆ. ಕೆಲವು ಸೆಲೆಬ್ರಿಟಿಗಳು ರೆಸಾರ್ಟ್ ಕೂಡ ಹೊಂದಿದ್ದಾರೆ. ಅವರು ಯಾರು? ಎಲ್ಲಿದೆ? ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.
05:13 PM (IST) Feb 11
ಫೆಬ್ರವರಿ 12, 2026 ರಂದು ಕಾರ್ಮಿಕ ಮತ್ತು ರೈತ ಸಂಘಟನೆಗಳು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿವೆ. ಈ ಬಂದ್ನಿಂದಾಗಿ ಕರ್ನಾಟಕದಲ್ಲಿ ಶಾಲೆಗಳಿಗೆ ಅಧಿಕೃತ ರಜೆ ಘೋಷಿಸಿಲ್ಲವಾದರೂ, ಸ್ಥಳೀಯ ಪರಿಸ್ಥಿತಿ ಅವಲಂಬಿಸಿ ರಜೆ ನೀಡುವ ಸಾಧ್ಯತೆಯಿದೆ.
05:07 PM (IST) Feb 11
04:44 PM (IST) Feb 11
Actress Who Married Thrice: ವೈಯಕ್ತಿಕ ಕಾರಣಗಳಿಂದಾಗಿ ಕೆಲವು ನಟಿಯರು ಒಂದಲ್ಲ, ಎರಡಲ್ಲ, ಮೂರು ಬಾರಿ ಮದುವೆಯಾಗಿದ್ದಾರೆ. ಇವರ ಸಿನಿಮಾ ಕರಿಯರ್ ಚೆನ್ನಾಗಿದ್ದರೂ ಕೂಡ, ವೈಯಕ್ತಿಕ ಜೀವನದಲ್ಲಿ ಏರಿಳಿತ, ಸೋಲು ಹೆಚ್ಚಿತ್ತು. ಹಾಗಾದರೆ ಯಾರು? ಯಾರು ಮೂರು ಮದುವೆಯಾದರು? ಇನ್ನಷ್ಟು ಮಾಹಿತಿ ಇಲ್ಲಿದೆ.
04:19 PM (IST) Feb 11
04:15 PM (IST) Feb 11
ಬೀದರ್ ಜಿಲ್ಲೆಯ ಬಸವಕಲ್ಯಾಣದ ನವೋದಯ ಹಾಸ್ಟೆಲ್ನಲ್ಲಿ 10ನೇ ತರಗತಿ ವಿದ್ಯಾರ್ಥಿ ಶರತ್ ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳದಲ್ಲಿ "ಸಾರಿ ಮಮ್ಮಿ, ಪಾಪ… I love you" ಎಂದು ಬರೆದ ಡೆತ್ನೋಟ್ ಪತ್ತೆಯಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
03:55 PM (IST) Feb 11
ಚಿಕ್ಕಮಗಳೂರಿನ ರಂಗಣ್ಣನ ಛತ್ರದಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ನುಗ್ಗಿದ ಇಬ್ಬರು ಮಂಗಳಮುಖಿಯರು, ₹10,000 ಹಣಕ್ಕಾಗಿ ಪಟ್ಟು ಹಿಡಿದು ವಧು-ವರರ ಮುಂದೆಯೇ ರಂಪಾಟ ನಡೆಸಿದ್ದಾರೆ. ಅಸಭ್ಯವಾಗಿ ವರ್ತಿಸಿ, ಪ್ರಶ್ನಿಸಿದವರಿಗೆ ಬೆದರಿಕೆ ಹಾಕಿದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
03:40 PM (IST) Feb 11
Zameer Ahmed Khan Bold Statement ಸಚಿವ ಜಮೀರ್ ಅಹಮ್ಮದ್ ಖಾನ್ ಅವರು ಹಂಪಿಯಲ್ಲಿ, 2028ರವರೆಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಹೇಳುವ ಮೂಲಕ ಸಿಎಂ ಬದಲಾವಣೆ ಚರ್ಚೆಗೆ ತೆರೆ ಎಳೆದಿದ್ದಾರೆ.
03:24 PM (IST) Feb 11
03:21 PM (IST) Feb 11
ಬೆಂಗಳೂರಿನ ಥಣಿಸಂದ್ರದಲ್ಲಿ ಬೈಕ್ ಮೇಲೆ ಶಾಲಾ ಬಸ್ ಹರಿದು ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಲು ತರಲು ಮಕ್ಕಳನ್ನು ಕರೆದೊಯ್ಯುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ನಾಗನಗೌಡ ಪ್ರಾಣಾಪಾಯದಿಂದ ಪಾರಾಗಿದ್ದು, ಅವರ ಮಗಳು ಮತ್ತು ಅಣ್ಣನ ಮಗಳು ದುರಂತದಲ್ಲಿ ಸಾವನ್ನಪ್ಪಿದ್ದಾರೆ.
03:18 PM (IST) Feb 11
ದರೋಡೆಗೆ ಯತ್ನಿಸಿ ಫಿಲ್ಮಿ ಸ್ಟೈಲ್ನಲ್ಲಿ ಟ್ರಾಪ್, ಇಬ್ಬರು ಕಳ್ಳರ ಪೈಕಿ ಒಬ್ಬ ಎಸ್ಕೇಪ್ ಆದರೆ ಮತ್ತೊಬ್ಬನಿಗೆ ಸಾಧ್ಯವಾಗಲಿಲ್ಲ. ಸಿನೀಮಿಯಾ ಶೈಲಿಯ ಕಳ್ಳತನ ಅದೇ ಶೈಲಿಯಲ್ಲಿ ಟ್ರಾಪ್ ಆಗಿದ್ದಾನೆ. ಕೊನೆಗೆ ಮಾಲೀಕ ಬಾಗಿಲು ತೆರೆಯುವವರೆಗೆ ನೆಲದ ಮೇಲೆ ಮಲಗಿದ್ದಾನೆ.
02:55 PM (IST) Feb 11
Dubai gold in India: ಭಾರತದಲ್ಲಿ ಬಂಗಾರ ದುಬಾರ, ದುಬೈನಲ್ಲಿ ಕಡಿಮೆ ಬೆಲೆಗೆ ಬಂಗಾರ ಸಿಗುವುದು ಎಂದು ಕೆಲವರು ಲೆಕ್ಕಾಚಾರ ಹಾಕಿರುತ್ತಾರೆ. ಹಾಗಾದರೆ ದುಬೈನಿಂದ ಭಾರತಕ್ಕೆ ಎಷ್ಟು ಬಂಗಾರವನ್ನು ತರಬಹುದು ಎಂಬ ಬಗ್ಗೆ ಮಾಹಿತಿ ಇದೆ.
02:34 PM (IST) Feb 11
ಡಿಕೆಶಿ ಖರೀದಿಸಿದ ₹2.8 ಕೋಟಿ ಲೆಕ್ಸಸ್ ಕಾರಿನ ವಿಶೇಷತೆ ಏನು? ಕೆಲವೇ ಮಂದಿಯಲ್ಲಿದೆ ಈ ಕಾರು, ವಿಶೇಷ ಅಂದರೆ ಸೇಮ್ ಲೆಕ್ಸಸ್ LM 350h ಕಾರು ಹೊಂದಿದ ಎರಡನೇ ರಾಜಕಾರಣಿ ಡಿಕೆ ಶಿವಕುಮಾರ್. ಇನ್ನು ಉದ್ಯಮಿ, ಸೆಲೆಬ್ರೆಟಿಗಳು ಸೇರಿ 7 ಮಂದಿಯಲ್ಲಿದೆ ಈ ಕಾರು.
02:31 PM (IST) Feb 11
02:27 PM (IST) Feb 11
ಅನ್ಯಗ್ರಹ ಜೀವಿಗಳನ್ನು ಹುಡುಕಲು ನೀರಿದ್ದರೆ ಸಾಕಾ? ಖಂಡಿತ ಇಲ್ಲ. ಹೊಸ ಸಂಶೋಧನೆಯ ಪ್ರಕಾರ, ರಂಜಕ ಮತ್ತು ಸಾರಜನಕ ಕೂಡ ಅತ್ಯಗತ್ಯ. ಒಂದು ಗ್ರಹ ನಿಜವಾಗಿಯೂ ವಾಸಯೋಗ್ಯವಾಗಲು ಬೇಕಾದ 'ಕೆಮಿಕಲ್ ಗೋಲ್ಡಿಲಾಕ್ಸ್ ಜೋನ್' ಬಗ್ಗೆ ತಿಳಿಯಿರಿ.
02:12 PM (IST) Feb 11
ಜ್ಯೋತಿಷಿ ಕಮಲಾಕರ ಭಟ್ ಮತ್ತು ಸುಚಿತ್ರಾ ನಾಯ್ಕ್ ಪ್ರಕರಣದಲ್ಲಿ ಮೃತಪಟ್ಟ ವಸಂತ್ ಅವರ ಪತ್ನಿ, ಘಟನೆಯ ದಿನ ನಡೆದ ಆಘಾತಕಾರಿ ಸತ್ಯಗಳನ್ನು ಬಹಿರಂಗಪಡಿಸಿದ್ದಾರೆ. ಕೇವಲ ಐದೇ ನಿಮಿಷಗಳಲ್ಲಿ ನಡೆದ ಆ ಘಟನೆಯ ಬಗ್ಗೆ ರಿವೀಲ್ ಮಾಡಿದ್ದಾರೆ.
02:01 PM (IST) Feb 11
ಆಳಂದ ದರ್ಗಾದಲ್ಲಿರುವ ರಾಘವ ಚೈತನ್ಯ ಶಿವಲಿಂಗಕ್ಕೆ ಶಿವರಾತ್ರಿಯಂದು ಪೂಜೆ ಸಲ್ಲಿಸಲು 15 ಜನರಿಗೆ ಅನುಮತಿ ಕೋರಿ ಆಂದೋಲ ಮಠದ ಸಿದ್ದಲಿಂಗ ಸ್ವಾಮೀಜಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಸರ್ಕಾರ, ಜಿಲ್ಲಾಡಳಿತವು ವಕ್ಫ್ ಸಮಿತಿಯೊಂದಿಗೆ ಸೇರಿ ಪೂಜೆಗೆ ಅಡ್ಡಿಪಡಿಸಲು ಷಡ್ಯಂತ್ರ ರೂಪಿಸುತ್ತಿದೆ ಎಂದು ಆರೋಪಿಸಿದರು.
01:31 PM (IST) Feb 11
ಡಿಕೆ ಶಿವಕುಮಾರ್ ಮನೆಗೆ ಬಂತು 2.8 ಕೋಟಿ ಬೆಲೆಯ ಲೆಕ್ಸಸ್ ಕಾರು, ಅಧಿಕಾರ ಬದಲಾವಣೆ ಸೂಚನೆಯೇ? ಇತ್ತೀಚಿನ ಕೆಲ ವರ್ಷಗಳಲ್ಲಿ ಸಿಎಂ ಹೊಸ ಕಾರು ಖರೀದಿಸುವುದು, ಬಳಕೆ ಮಾಡುವುದು ಸಾಮಾನ್ಯವಾಗಿದೆ. ಈ ಎಲ್ಲಾ ಬೆಳವಣಿಗೆ ರಾಜ್ಯದಲ್ಲಿ ಅಧಿಕಾರ ಬದಲಾವಣೆಗಳ ಸೂಚನೆಯೇ?
01:30 PM (IST) Feb 11
ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾವು ಕ್ರೈಸ್ತ ಧರ್ಮದ ಭಾವನೆಗಳಿಗೆ ಧಕ್ಕೆ ತಂದಿದೆ ಎಂಬ ಆರೋಪದ ಮೇಲೆ ವಿವಾದಕ್ಕೆ ಸಿಲುಕಿದೆ. ಚಿತ್ರದಲ್ಲಿನ ಕೆಲವು ದೃಶ್ಯಗಳು ದೇವದೂತರಿಗೆ ಅಪಮಾನ ಮಾಡಿವೆ ಎಂದು ರಾಷ್ಟ್ರೀಯ ಕ್ರೈಸ್ತ ಒಕ್ಕೂಟ ಆರೋಪಿಸಿದ್ದು, ದೃಶ್ಯಗಳನ್ನು ತೆಗೆದುಹಾಕಲು ಪಟ್ಟು ಹಿಡಿದಿದೆ.
01:10 PM (IST) Feb 11
ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದೆ. ಬೆಂಗಳೂರು, ರಾಮನಗರ, ಕನಕಪುರ ಸೇರಿದಂತೆ ವಿವಿಧ ಜಿಲ್ಲೆಗಳ ಸಾವಿರಾರು ಭಕ್ತರು ಕಾಲ್ನಡಿಗೆಯ ಮೂಲಕ ಮಾದಪ್ಪನ ದರ್ಶನಕ್ಕೆ ಆಗಮಿಸುತ್ತಿದ್ದಾರೆ.
01:04 PM (IST) Feb 11
ನಂಜನಗೂಡಿನ ಗೋಳೂರು ಗ್ರಾಮದಲ್ಲಿ, ಗ್ರಾಮದೇವತೆಯ ಜಾತ್ರೆಯ ಸಂದರ್ಭದಲ್ಲಿ ಹೆಣ್ಣುಮಕ್ಕಳ ಸುರಕ್ಷತೆಗಾಗಿ ಒಂದು ವಿನೂತನ ಕ್ರಮ ಕೈಗೊಳ್ಳಲಾಗಿದೆ. ಕಿರುಕುಳ ನೀಡುವ ಅಥವಾ ಅನುಮತಿಯಿಲ್ಲದೆ ವಿಡಿಯೋ ಮಾಡುವ ಕಿಡಿಗೇಡಿಗಳಿಗೆ ₹30,000 ದಂಡ ವಿಧಿಸುವುದಾಗಿ ಡಂಗೂರ ಸಾರಿ ಎಚ್ಚರಿಕೆ ನೀಡಲಾಗಿದೆ.
01:01 PM (IST) Feb 11
ಕನ್ನಡದಲ್ಲಿ ವಲವಾರ ಎನ್ನುವ ಸಿನಿಮಾ ಬಂದಿದ್ದು, ಪ್ರೇಕ್ಷಕರು ಈ ಸಿನಿಮಾದತ್ತ ಮುಖ ಮಾಡಬೇಕಿದೆ. ಈ ಬಗ್ಗೆ ಸಾಮಾಜಿಕ ಹೋರಾಟಗಾರ ವೀರಕಪುತ್ರ ಶ್ರೀನಿವಾಸ್ ಅವರು ಫೇಸ್ಬುಕ್ ಪೋಸ್ಟ್ ಹಂಚಿಕೊಂಡಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.
12:38 PM (IST) Feb 11
12:25 PM (IST) Feb 11
ಬಿಗ್ಬಾಸ್ 12ರ ಸ್ಪರ್ಧಿಯಾಗಿದ್ದ ನಟಿ, ಮಾಡೆಲ್ ರಿಷಾ ಗೌಡ ಅವರು ಇನ್ಸ್ಟಾಗ್ರಾಮ್ ಲೈವ್ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಬಿಗ್ಬಾಸ್ ಸ್ಪರ್ಧಿಗಳನ್ನು ಕಣ್ತುಂಬಿಸಿಕೊಳ್ಳುವ ಅವಕಾಶ ಮತ್ತೊಮ್ಮೆ ಸಿಕ್ಕಿದ್ದಕ್ಕೆ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ನಟಿ ಹೇಳಿದ್ದೇನು?
12:18 PM (IST) Feb 11
ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಾತ್ರಾ ಮಹೋತ್ಸವದಲ್ಲಿ ಮಾತನಾಡಿದ ಸಚಿವ ಡಾ. ಎಚ್.ಸಿ. ಮಹದೇವಪ್ಪ, ಧರ್ಮಕ್ಕಿಂತ ಬದುಕು ಶ್ರೇಷ್ಠವಾಗಿದ್ದು, ರಾಮಾಯಣದ ಸೃಷ್ಟಿಕರ್ತ ವಾಲ್ಮೀಕಿಯನ್ನೇ ಕಡೆಗಣಿಸಲಾಗುತ್ತಿದೆ ಎಂದು ಹೇಳಿದರು. ವಾಲ್ಮೀಕಿ ಮತ್ತು ಅಂಬೇಡ್ಕರ್ ಅವರ ವೈಚಾರಿಕ ಚಿಂತನೆಗಳನ್ನು ಪಾಲಿಸಬೇಕೆಂದರು.
12:09 PM (IST) Feb 11
Saregamapa Kannada Show: ಮತ್ತೆ ಹೊಸದಾಗಿ ಮಕ್ಕಳಿಗೋಸ್ಕರ ಸರಿಗಮಪ ಶೋ ಪ್ರಸಾರ ಆಗಲಿದೆ. ರಾಜ್ಯದ 31 ಜಿಲ್ಲೆಗಳಲ್ಲಿ ಆಡಿಷನ್ ನಡೆಯಲಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.
11:55 AM (IST) Feb 11
ಕನ್ನಡಿಗರನ್ನು ಉಗ್ರ ದಾಳಿಗೆ ಹೋಲಿಸಿ ವಿವಾದ ಸೃಷ್ಟಿಸಿದ್ದ ಗಾಯಕ ಸೋನು ನಿಗಮ್, ಇದೀಗ ಕನ್ನಡಿಗರ ಕ್ಷಮೆ ಕೋರಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ, ಕನ್ನಡಿಗರು ನನ್ನ ಕುಟುಂಬದವರು ಎಂದಿದ್ದಲ್ಲದೆ, 'ಅನಿಸುತಿದೆ ಯಾಕೋ ಇಂದು' ಹಾಡನ್ನು ಹಾಡಿ ರಂಜಿಸಿದ್ದಾರೆ.
11:44 AM (IST) Feb 11
Kannada Serial: ಈಗ ಕನ್ನಡ ಮನರಂಜನಾ ವಾಹಿನಿಗಳಲ್ಲಿ ಕೆಲ ಧಾರಾವಾಹಿಗಳು ಅಂತ್ಯ ಆಗಲಿವೆ. ಈ ಜಾಗಕ್ಕೆ ಹೊಸದಾಗಿ ಹೊಸ ಸೀರಿಯಲ್ಗಳ ಆಗಮನ ಕೂಡ ಆಗಲಿದೆ. ಹಾಗಾದರೆ ಅಂತ್ಯ ಆಗಲಿರುವ ಸೀರಿಯಲ್ಗಳು ಯಾವುವು? ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.
11:43 AM (IST) Feb 11
11:07 AM (IST) Feb 11
ಶಾಸಕ ಜನಾರ್ದನ ರೆಡ್ಡಿ, ಹೈಕಮಾಂಡ್ ಕೃಪೆಯಿಂದ ಕುರ್ಚಿಗೆ ಅಂಟಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಹೇಡಿ ಎಂದು ಟೀಕಿಸಿದ್ದಾರೆ. ಸಿಎಂ-ಡಿಸಿಎಂ ಅಧಿಕಾರ ಕಿತ್ತಾಟದಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದ್ದು, ಜನ ಸರ್ಕಾರದಿಂದ ರೋಸಿ ಹೋಗಿದ್ದಾರೆ ಎಂದರು.