ಬೆಳಗಾವಿ: ಶಾಸಕ ಲಕ್ಷ್ಮಣ ಸವದಿ ಹಾಗೂ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಶಾಸಕ ರಾಜು ಕಾಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಒತ್ತಾಯಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಐನಾಪುರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಗೆ ಇನ್ನೂ ಎರಡು ಸಚಿವ ಸ್ಥಾನ ನೀಡಬೇಕೆಂದು ಈಗಾಗಲೇ ಸಿಎಂ ಡಿ.ಕೆ.ಶಿವಕುಮಾರ್ ಗಮನಕ್ಕೆ ತಂದಿದ್ದೇವೆ. ಲಕ್ಷ್ಮಣ ಸವದಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಕೊಡಬೇಕೆಂದು ಹೇಳಿರುವುದಾಗಿ ತಿಳಿಸಿದರು. ಬೆಳಗಾವಿ ಜಿಲ್ಲೆಯ ಶಾಸಕರಿಗಿಂತ ನಾನು ಹಿರಿಯ. ಆದರೆ, ನನ್ನ ಆರೋಗ್ಯ ಸರಿ ಇಲ್ಲದ ಕಾರಣ ನಾನು ಸಚಿವ ಸ್ಥಾನ ಕೇಳಿಲ್ಲ. ಅಶೋಕ ಪಟ್ಟಣ, ಗಣೇಶ ಹುಕ್ಕೇರಿ, ಮಹಾಂತೇಶ ಕೌಜಲಗಿ ಸೇರಿದಂತೆ ಹಲವು ಶಾಸಕರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ ಎಂದರು.

08:53 AM (IST) Jul 11
ಕೇರಳದ ನೂತನ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ದೇಗುಲವು ದಕ್ಷಿಣ ಭಾರತದ ರಾಜಕಾರಣಿಗಳ ಪಾಲಿಗೆ ಪ್ರಮುಖ ಶಕ್ತಿ ಕೇಂದ್ರವಾಗಿ ಮಾರ್ಪಟ್ಟಿದ್ದು, ಅಧಿಕಾರ ಮತ್ತು ಯಶಸ್ಸಿಗಾಗಿ ಹಲವು ನಾಯಕರು ಇಲ್ಲಿಗೆ ಆಗಮಿಸುತ್ತಾರೆ.
08:45 AM (IST) Jul 11
08:24 AM (IST) Jul 11
08:23 AM (IST) Jul 11
ಜಿಲ್ಲೆಯ ಗೃಹಲಕ್ಷ್ಮಿ ಯೋಜನೆಯ ಅರ್ಹ 3,12,818 ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಎರಡು ಅಥವಾ ಮೂರು ದಿನಗಳಲ್ಲಿ ಒಟ್ಟು ₹62,56,36,000 ಗಳ ಮೊತ್ತವನ್ನು ಜಮೆ ಮಾಡಲಾಗುವುದು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ಪಿ. ನಾಯ್ಕ ಹೇಳಿದರು.
08:11 AM (IST) Jul 11
07:57 AM (IST) Jul 11
07:54 AM (IST) Jul 11
ಇರಾನ್ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ನಿಧನಕ್ಕೆ ಗೌರಿಬಿದನೂರು ತಾಲೂಕಿನ ಅಲಿಪುರ ಗ್ರಾಮದ ಶಿಯಾ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಅಂತಿಮ ವಿದಾಯ ಹೇಳಿದರು. ದಶಕಗಳ ಹಿಂದೆ ಖಮೇನಿ ಈ ಗ್ರಾಮಕ್ಕೆ ಭೇಟಿ ನೀಡಿದ್ದರಿಂದ, ಗ್ರಾಮಸ್ಥರು ಅಂತ್ಯಕ್ರಿಯೆಯ ನೇರಪ್ರಸಾರ ವೀಕ್ಷಿಸಿ, ಮೂರು ದಿನಗಳ ಶೋಕಾಚರಣೆ ನಡೆಸಿದರು.
07:24 AM (IST) Jul 11
ಪತ್ನಿಗೆ ಹಿಡಿದ ದೆವ್ವ ಬಿಡಿಸಲು ವಿಫಲನಾದ ಮಾಂತ್ರಿಕನೊಬ್ಬನಿಗೆ ವ್ಯಕ್ತಿಯೊಬ್ಬ ಪಾಠ ಕಲಿಸಿದ್ದಾನೆ. ಪೂಜೆ ನೆಪದಲ್ಲಿ ಮನೆಗೆ ಕರೆಸಿ, ಅಪಹರಿಸಿ ಸುಲಿಗೆ ಮಾಡಲಾಗಿದೆ. ಈ ಸಂಬಂಧ ಸಂಪಿಗೆಹಳ್ಳಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
07:10 AM (IST) Jul 11
ಜಿಮ್ ಮಾಲೀಕ ಮತ್ತು ತರಬೇತುದಾರನೊಬ್ಬ, ತರಬೇತಿಗೆ ಬರುತ್ತಿದ್ದ ಯುವತಿಯರು ಮತ್ತು ಗೃಹಿಣಿಯರಿಗೆ ಬ್ಲ್ಯಾಕ್ಮೇಲ್ ಮಾಡಿ, ಲಕ್ಷಗಟ್ಟಲೆ ಹಣ ವಸೂಲಿ ಮಾಡುತ್ತಿದ್ದ ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದೆ. ತನ್ನ ನಿಜವಾದ ಗುರುತು ಮುಚ್ಚಿಟ್ಟು, ಸಿಸಿ ಕ್ಯಾಮೆರಾಗಳಲ್ಲಿ ದೃಶ್ಯ ಸೆರೆಹಿಡಿದು ಹೆಣ್ಣುಮಕ್ಕಳ ಜೀವನದೊಂದಿಗೆ ಆಟವಾಡುತ್ತಿದ್ದ ಈ ಘಟನೆಯು, ಜಿಮ್ಗಳಿಗೆ ಮಹಿಳೆಯರನ್ನು ಕಳುಹಿಸುವಾಗ ಎಚ್ಚರಿಕೆ ವಹಿಸುವಂತೆ ಒತ್ತಿ ಹೇಳುತ್ತದೆ.
06:58 AM (IST) Jul 11
ಏನೂ ಇಲ್ಲದ ಅಂದಿನ ಭಾರತವನ್ನು ಕಟ್ಟಿದ ನೆಹರು ಎಲ್ಲಿ? ಎಲ್ಲವೂ ಇರುವ ಈಗಿನ ಭಾರತದ ಅಧಿಕಾರ ನಡೆಸುವ ಮೋದಿ ಎಲ್ಲಿ? ಆದರೂ ಅವರಿಬ್ಬರ ಆಡಳಿತವನ್ನು ಹೋಲಿಕೆ ಮಾಡುವ ಕೆಲಸ ನಡೆಯುತ್ತಿರುವುದು ವಿಪರ್ಯಾಸ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.
06:45 AM (IST) Jul 11