ಬೆಂಗಳೂರು: ಮಳೆ ಅಭಾವದಿಂದಾಗಿ ರಾಜ್ಯದಲ್ಲಿ ಪೂರ್ವ ಮುಂಗಾರಿನ ಬಿತ್ತನೆ ಪ್ರಮಾಣದಲ್ಲಿ ಭಾರೀ ಕುಂಠಿತವಾಗಿದೆ. ಒಟ್ಟಾರೆ 2.78 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಇಲಾಖೆ ಬಿತ್ತನೆ ಗುರಿ ಹೊಂದಿದ್ದು, ಆದರೆ 1.62 ಲಕ್ಷ ಹೆಕ್ಟೇರ್ನಲ್ಲಿ(ಶೇ.58) ಮಾತ್ರ ಬಿತ್ತನೆಯಾಗಿದೆ.
51 ಸಾವಿರ ಹೆಕ್ಟೇರ್ನಲ್ಲಿ ಮೆಕ್ಕೆಜೋಳ ಬಿತ್ತುವ ಗುರಿ ಇತ್ತಾದರೂ 38 ಸಾವಿರ ಹೆಕ್ಟೇರ್ನಲ್ಲಿ (ಶೇ.74) ಮಾತ್ರ ಬಿತ್ತನೆಯಾಗಿದೆ. ಒಟ್ಟಾರೆ 1.51 ಲಕ್ಷ ಹೆಕ್ಟೇರ್ನಲ್ಲಿ ಆಹಾರ ಧಾನ್ಯ ಬಿತ್ತನೆ ಅಂದಾಜಿದ್ದು. ಇದಕ್ಕೆ ಬದಲಾಗಿ 77 ಸಾವಿರ ಹೆಕ್ಟೇರ್(ಶೇ.51)ನಲ್ಲಿ ಬಿತ್ತನೆಯಾಗಿದೆ. ಸೂರ್ಯಕಾಂತಿ, ಶೇಂಗಾ ಸೇರಿ 26 ಸಾವಿರ ಹೆಕ್ಟೇರ್ನಲ್ಲಿ ಎಣ್ಣೆಕಾಳುಗಳ ಬೆಳೆ ಬೆಳೆಯುವ ಅಂದಾಜಿತ್ತು. ಆದರೆ, 16 ಸಾವಿರ ಹೆಕ್ಟೇರ್ನಲ್ಲಿ ಮಾತ್ರ ಬಿತ್ತನೆಯಾಗಿ ಶೇ.42 ರಷ್ಟು ಸಾಧನೆಯಾಗಿದೆ.
ಪೂರ್ವ ಮುಂಗಾರಿನಲ್ಲಿ ಕೊಪ್ಪಳ ಜಿಲ್ಲೆಯಲ್ಲಿ 16 ಸಾವಿರ ಹೆಕ್ಟೇರ್ ಬಿತ್ತನೆ ಗುರಿ ಇದ್ದು, 28 ಸಾವಿರ ಹೆಕ್ಟೇರ್ನಲ್ಲಿ ಬಿತ್ತನೆಯಾಗಿ ಶೇ.175 ರಷ್ಟು ಸಾಧನೆಯಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 6 ಸಾವಿರ ಹೆಕ್ಟೇರ್(ಶೇ.71), ಚಾಮರಾಜನಗರ 28 ಸಾವಿರ ಹೆಕ್ಟೇರ್(ಶೇ.55), ಮೈಸೂರಿನ 1.63 ಲಕ್ಷ ಹೆಕ್ಟೇರ್ ಗುರಿ ಪೈಕಿ ಶೇ.54 ರಷ್ಟು ಬಿತ್ತನೆಯಾಗಿದೆ. ಆದರೆ ಇನ್ನುಳಿದ ಜಿಲ್ಲೆಗಳಲ್ಲಿ ಬಿತ್ತನೆ ಬಹಳಷ್ಟು ಕಡಿಮೆಯಾಗಿದೆ.
08:37 PM (IST) Jun 11
07:53 PM (IST) Jun 11
Youtuber Madhu Gowda: ಕನ್ನಡದ ಯುಟ್ಯೂಬರ್ ನಿಖಿಲ್, ನಿಶಾ, ಮಧು ಈ ಬಾರಿ ಜಗಳ ಆಡಿಕೊಂಡಿರೋ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಹೌದು, ಈಗ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ. ಇದರ ಹಿಂದಿನ ಸತ್ಯ ಬೇರೆಯೇ ಇದೆ.
07:38 PM (IST) Jun 11
07:10 PM (IST) Jun 11
06:50 PM (IST) Jun 11
ಅವರ ಎರಡು ಕೈಗಳ ಮೇಲೆ ಇಬ್ಬರು ಜಾಗತಿಕ ಮಟ್ಟದ ದಿಗ್ಗಜರ ಟ್ಯಾಟೂಗಳಿವೆ. ಈ ಟ್ಯಾಟೂಗಳು ಕೇವಲ ಸ್ಟೈಲ್ಗಾಗಿ ಹಾಕಿಸಿಕೊಂಡದ್ದಲ್ಲ, ಅದರ ಹಿಂದೆ ಒಂದು ಅದ್ಭುತವಾದ ಕಾರಣ ಇದೆ. ಇಷ್ಟೂ ದಿನ ಕಾಪಾಡಿಕೊಂಡಿದ್ದ ಆ ಸೀಕ್ರೆಟ್ ಏನು ನೋಡಿ..!
06:37 PM (IST) Jun 11
Madhyama Kutumba Youtube Channel: ಮಂಗಳೂರು ಮೂಲದ ಮಧ್ಯಮ ಕುಟುಂಬ ಎಂಬ ಯುಟ್ಯೂಬ್ ಚಾನೆಲ್ನವರು ಹೊಸ ಮನೆಗೆ ಕಾಲಿಟ್ಟು, ಕೆಲ ತಿಂಗಳುಗಳು ಕಳೆದಿವೆ. ಈಗ ಅವರು ಹೊಸ ಫ್ರಿಡ್ಜ್ ತಗೊಂಡಿದ್ದು, ಇದರ ಬೆಲೆ ಹಾಗೂ ಫೀಚರ್ ನೋಡಿ ವೀಕ್ಷಕರು ಕಂಗಾಲಾಗಿದ್ದಾರೆ.
06:23 PM (IST) Jun 11
05:55 PM (IST) Jun 11
Jothe Jotheyali Serial Actor Aniruddha: ಜೊತೆ ಜೊತೆಯಲಿ ಧಾರಾವಾಹಿ ನಟ ಅನಿರುದ್ಧ್ ಜತ್ಕರ್ ಮನೆಯಲ್ಲಿ ವಿಶೇಷ ಪೂಜೆ ನಡೆದಿದೆ. ಈ ಸುಂದರ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
05:50 PM (IST) Jun 11
ಧರ್ಮಸ್ಥಳದಲ್ಲಿ 26 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಸತೀಶ್, ಸಲೀಂ ಅಬ್ದುಲ್ ಅನ್ಸಾರಿ ಹೆಸರಿನಲ್ಲಿ ಮಹಾರಾಷ್ಟ್ರದಲ್ಲಿ ಬದುಕು ಕಟ್ಟಿಕೊಂಡ ಬಳಿಕ ಮತ್ತೆ ಹುಟ್ಟೂರಿಗೆ ಮರಳಿದ್ದಾರೆ. ತಾಯಿ-ಮಗನ ಭಾವುಕ ಮಿಲನದ ಸಂಪೂರ್ಣ ಕಥೆ ಇಲ್ಲಿದೆ.
05:42 PM (IST) Jun 11
05:28 PM (IST) Jun 11
ಕನ್ನಡದ ಜನಪ್ರಿಯ ನಟಿ ಶ್ರುತಿ ಅವರ ನಿಜವಾದ ಹೆಸರು ಗಿರಿಜಾ ಎಂಬುದು ನಿಮಗೆ ಗೊತ್ತಿತ್ತಾ? ಗಿರಿಜಾ ಹೇಗೆ ಶ್ರುತಿ ಆದರು, ಅವರ 175ನೇ ಸಿನಿಮಾ 'ಮದರ್'ವರೆಗೆ ನಡೆದ ಸಿನಿ ಪಯಣದ ಸಂಪೂರ್ಣ ಮಾಹಿತಿ ಇಲ್ಲಿದೆ.
05:09 PM (IST) Jun 11
04:40 PM (IST) Jun 11
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಆರೋಪಿ-1 ಪವಿತ್ರಾ ಗೌಡ, ಪರಪ್ಪನ ಅಗ್ರಹಾರ ಜೈಲಿನಲ್ಲಿ ಆತ್ಮಚರಿತ್ರೆ ಬರೆಯುತ್ತಿದ್ದಾರೆ ಎನ್ನಲಾಗಿದೆ. ಈ ಆತ್ಮಕಥೆಯಲ್ಲಿ ಅವರು ದರ್ಶನ್ ಜೊತೆಗಿನ ಸಂಬಂಧ ಮತ್ತು ಪ್ರಕರಣದ ಹಿಂದಿನ ಸತ್ಯವನ್ನು ಬಹಿರಂಗಪಡಿಸುತ್ತಾರೆಯೇ ಎಂಬ ಕುತೂಹಲ ಕಾಡುತ್ತಿದೆ.
04:36 PM (IST) Jun 11
ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಜೂನ್ 26ರಿಂದ ‘ಬಿಲ್ಲಾ ರಂಗ ಬಾಷಾ’ ಶೂಟಿಂಗ್ ಆರಂಭವಾಗಲಿದ್ದು, ಒಟ್ಟಿಗೆ 4 ಹೊಸ ಸಿನಿಮಾಗಳಿಗೆ ಒಪ್ಪಿಗೆ ನೀಡಿರುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ.
03:16 PM (IST) Jun 11
02:55 PM (IST) Jun 11
ಕಲ್ಯಾಣ್ ಅವರ ಮೂಲ ಹೆಸರಿನ ನಾಮಕರಣ ನಡೆದಿದ್ದು ಪವಿತ್ರ ತಿರುಮಲದ ಯೋಗ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ. ಅಂದು ಅವರಿಗೆ ಇಟ್ಟ ಹೆಸರು 'ಶ್ರೀ ಕಲ್ಯಾಣ್ ಕುಮಾರ್'. ಎಷ್ಟೋ ಜನರಿಗೆ ಗೊತ್ತಿಲ್ಲದ ವಿಷಯವೆಂದರೆ, ಅವರ ಮನೆಯವರು ಮತ್ತು ಆಪ್ತರು ಇಂದಿಗೂ ಅವರನ್ನು ಪ್ರೀತಿಯಿಂದ 'ಕಲ್ಯಾಣ್' ಎಂದೇ ಕರೆಯುತ್ತಾರೆ.
01:29 PM (IST) Jun 11
12:53 PM (IST) Jun 11
12:29 PM (IST) Jun 11
12:27 PM (IST) Jun 11
Viral Video: ಸುಮಾರು 40 ವರ್ಷಗಳಿಂದ ಮಾಳವ್ವ ಎಂಬುವವರು ಹೋಟೆಲ್ ನಡೆಸುತ್ತಿದ್ದಾರೆ. ರುಚಿಕರವಾದ ತಿಂಡಿಗಳಿಗೆ ಮಾತ್ರವಲ್ಲದೆ, ಹಸಿದು ಬಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ಆಹಾರ ನೀಡಿ, ಜನರ ಪ್ರೀತಿಗೆ ಪಾತ್ರರಾಗಿ 'ಅನ್ನಪೂರ್ಣೇಶ್ವರಿ' ಎನಿಸಿಕೊಂಡಿದ್ದಾರೆ.
12:09 PM (IST) Jun 11
12:08 PM (IST) Jun 11
ಸದ್ಯ ಪ್ರಿ-ಪ್ರೊಡಕ್ಷನ್ ಕೆಲಸಗಳಲ್ಲಿ ಬ್ಯುಸಿಯಾಗಿರುವ ಚಿತ್ರತಂಡ, ಮುಂಬರುವ ಸೆಪ್ಟೆಂಬರ್ ತಿಂಗಳಿನಿಂದ ಚಿತ್ರೀಕರಣ ಆರಂಭಿಸಲು ಪ್ಲ್ಯಾನ್ ಮಾಡಿಕೊಂಡಿದೆ. ಸಿನಿಮಾದಲ್ಲಿ ಸ್ಯಾಂಡಲ್ವುಡ್ನ ಕೆಲವು ಪ್ರಮುಖ ನಟರು ಕೂಡ ಅತಿಥಿ ಪಾತ್ರಗಳಲ್ಲಿ ನಟಿಸಲಿದ್ದಾರೆ.
12:06 PM (IST) Jun 11
11:55 AM (IST) Jun 11
11:41 AM (IST) Jun 11
11:34 AM (IST) Jun 11
11:07 AM (IST) Jun 11
10:41 AM (IST) Jun 11
ದಾವಣಗೆರೆ ಜಿಲ್ಲೆಯ ಚನ್ನಗಿರಿ ವಲಯ ವ್ಯಾಪ್ತಿಯ ಕುಕ್ಕವಾಡ ಮೀಸಲು ಅರಣ್ಯದಲ್ಲಿ ನಡೆಯುತ್ತಿದ್ದ ಅಕ್ರಮ ಕಬ್ಬಿಣದ ಅದಿರು ದಂಧೆ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ.
10:05 AM (IST) Jun 11
ಬೆಂಗಳೂರಿನ ಕೋಗಿಲು ಬಡಾವಣೆಯ ಅಕ್ರಮ ಮನೆ ತೆರವು ಪ್ರಕರಣದಲ್ಲಿ, ಸಂತ್ರಸ್ತರಿಗೆ ಸರ್ಕಾರ ಪುನರ್ವಸತಿ ಕಲ್ಪಿಸಿದರೂ ಅವರು ಸ್ಥಳಾಂತರಗೊಳ್ಳಲು ನಿರಾಕರಿಸುತ್ತಿದ್ದಾರೆ ಎಂದು ಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ.
09:53 AM (IST) Jun 11
ಚಿಕ್ಕಮಗಳೂರು ಸರ್ಕಾರಿ ಮೆಡಿಕಲ್ ಕಾಲೇಜಿನ ಹುಡುಗಿಯರ ಹಾಸ್ಟೆಲ್ಗೆ ಮಧ್ಯರಾತ್ರಿ ನುಗ್ಗಿದ್ದ ಯುವಕನನ್ನು ವಿದ್ಯಾರ್ಥಿನಿಯರೇ ಧೈರ್ಯದಿಂದ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಳ್ಳತನದ ಉದ್ದೇಶದಿಂದ ಬಂದಿದ್ದ ಆರೋಪಿ ಈ ಹಿಂದೆಯೂ ಇದೇ ರೀತಿ ಮಾಡಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದ್ದು, ಈ ಘಟನೆಯು ಹಾಸ್ಟೆಲ್ ಭದ್ರತೆಯ ಬಗ್ಗೆ ಗಂಭೀರ ಚರ್ಚೆಗಳನ್ನು ಹುಟ್ಟುಹಾಕಿದೆ.
09:31 AM (IST) Jun 11
ತಿಪಟೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ K ಷಡಕ್ಷರಿ ಅವರ ಆರೋಗ್ಯದಲ್ಲಿ ದಿಡೀರ್ ಏರುಪೇರು ಕಾಣಿಸಿಕೊಂಡಿದೆ. ಇಬ್ಬರ ಉಪಸ್ಥಿತಿಯಲ್ಲಿ ಷಡಕ್ಷರಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ.
09:16 AM (IST) Jun 11
09:05 AM (IST) Jun 11
08:50 AM (IST) Jun 11
08:39 AM (IST) Jun 11
ಪುತ್ತೂರಿನ ಬಿಜೆಪಿ ಮುಖಂಡರ ಪುತ್ರ ಕೃಷ್ಣಾ ಜೆ. ರಾವ್ ವಿರುದ್ಧದ ಅತ್ಯಾ*ಚಾರ ಪ್ರಕರಣದಲ್ಲಿ, ಆರೋಪಿ ಪರ ವಕೀಲರು ರಾಜಿ ಸಂಧಾನದ ಪ್ರಸ್ತಾಪವನ್ನು ಮುಂದಿಟ್ಟಿದ್ದಾರೆ. ಇದನ್ನು ಪರಿಗಣಿಸಿದ ನ್ಯಾಯಾಲಯ, ಮಧ್ಯಸ್ಥಿಕೆ ಕೇಂದ್ರಕ್ಕೆ ಹಾಜರಾಗಲು ಸೂಚಿಸಿದ್ದು, ಸಂತ್ರಸ್ತೆಗೆ ಜೀವನಾಂಶ ಪಾವತಿಸಲು ಆದೇಶಿಸಿದೆ.
08:25 AM (IST) Jun 11
ಬೆಂಗಳೂರು ಗ್ರಾಮಾಂತರ ಸಂಸದ ಡಾ.ಮಂಜುನಾಥ್ ಅವರು ಆನೇಕಲ್-ಅತ್ತಿಬೆಲೆ ರಸ್ತೆಯಲ್ಲಿನ ರೈಲು ಗೇಟ್ ಬಳಿ ಮೇಲ್ಸೇತುವೆ ನಿರ್ಮಿಸಲು ಸೂಚಿಸಿದ್ದಾರೆ. ಸುಮಾರು ₹70 ಕೋಟಿ ವೆಚ್ಚದ ಈ ಯೋಜನೆಗೆ ಶೀಘ್ರ ಚಾಲನೆ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
08:12 AM (IST) Jun 11
ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ಠರಾವು ಅಂಗೀಕಾರದ ಬಗ್ಗೆ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ನೀಡಿದ್ದ ಸೂಚನೆಯನ್ನು ಮಹಾನಗರ ಪಾಲಿಕೆ ಪಾಲಿಸಿಲ್ಲ. ಸಚಿವ ಸತೀಶ ಜಾರಕಿಹೊಳಿ ಸಮ್ಮುಖದಲ್ಲಿ ನಡೆದ ಸಭೆಯ ನಿರ್ಧಾರಕ್ಕೂ ಬೆಲೆ ಸಿಕ್ಕಿಲ್ಲ. ಈ ಆಡಳಿತಾತ್ಮಕ ನಿರ್ಲಕ್ಷ್ಯವು ಕನ್ನಡಪರ ಸಂಘಟನೆಗಳ ಅಸಮಾಧಾನ.
08:05 AM (IST) Jun 11
ನಿಧಿ ಆಸೆಗಾಗಿ ಪುರಾತನ ಮೂಕಬಸವೇಶ್ವರ ಹಾಗೂ ಈಶ್ವರ ದೇವಸ್ಥಾನವನ್ನು ಕೆಡವಿ, ಜೆಸಿಬಿಯಿಂದ ನೆಲ ಅಗೆದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಕೃತ್ಯದಿಂದ ಧಾರ್ಮಿಕ ನಂಬಿಕೆಗೆ ಧಕ್ಕೆ ತಂದ ಆರೋಪದ ಮೇಲೆ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
07:50 AM (IST) Jun 11
ಶಾಲಾ ಆರಂಭದ ಸಮಯವನ್ನು 15 ನಿಮಿಷಗಳ ಕಾಲ ಮುಂದೂಡಿ, ಆದ್ರೆ ಶಾಲಾ ಮುಕ್ತಾಯದ ಸಮಯದಲ್ಲಿ ಯಾವುದೇ ಬದಲಾವಣೆ ಮಾಡುವುದು ಬೇಡ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.
07:43 AM (IST) Jun 11