LIVE NOW
Published : Jun 11, 2026, 06:43 AM ISTUpdated : Jun 11, 2026, 10:05 AM IST

Karnataka News Live: Kogilu layout eviction case - ಸರ್ಕಾರ ಮನೆ ಕೊಟ್ಟರೂ ಸ್ಥಳ ಬಿಡದ ಕೋಗಿಲು ನಿವಾಸಿಗಳು!ಅಧಿಕಾರಿಗಳಿಗೆ ಹೊಸ ತಲೆನೋವು

ಸಾರಾಂಶ

ಬೆಂಗಳೂರು: ಮಳೆ ಅಭಾವದಿಂದಾಗಿ ರಾಜ್ಯದಲ್ಲಿ ಪೂರ್ವ ಮುಂಗಾರಿನ ಬಿತ್ತನೆ ಪ್ರಮಾಣದಲ್ಲಿ ಭಾರೀ ಕುಂಠಿತವಾಗಿದೆ. ಒಟ್ಟಾರೆ 2.78 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಇಲಾಖೆ ಬಿತ್ತನೆ ಗುರಿ ಹೊಂದಿದ್ದು, ಆದರೆ 1.62 ಲಕ್ಷ ಹೆಕ್ಟೇರ್‌ನಲ್ಲಿ(ಶೇ.58) ಮಾತ್ರ ಬಿತ್ತನೆಯಾಗಿದೆ.

51 ಸಾವಿರ ಹೆಕ್ಟೇರ್‌ನಲ್ಲಿ ಮೆಕ್ಕೆಜೋಳ ಬಿತ್ತುವ ಗುರಿ ಇತ್ತಾದರೂ 38 ಸಾವಿರ ಹೆಕ್ಟೇರ್‌ನಲ್ಲಿ (ಶೇ.74) ಮಾತ್ರ ಬಿತ್ತನೆಯಾಗಿದೆ. ಒಟ್ಟಾರೆ 1.51 ಲಕ್ಷ ಹೆಕ್ಟೇರ್‌ನಲ್ಲಿ ಆಹಾರ ಧಾನ್ಯ ಬಿತ್ತನೆ ಅಂದಾಜಿದ್ದು. ಇದಕ್ಕೆ ಬದಲಾಗಿ 77 ಸಾವಿರ ಹೆಕ್ಟೇರ್‌(ಶೇ.51)ನಲ್ಲಿ ಬಿತ್ತನೆಯಾಗಿದೆ. ಸೂರ್ಯಕಾಂತಿ, ಶೇಂಗಾ ಸೇರಿ 26 ಸಾವಿರ ಹೆಕ್ಟೇರ್‌ನಲ್ಲಿ ಎಣ್ಣೆಕಾಳುಗಳ ಬೆಳೆ ಬೆಳೆಯುವ ಅಂದಾಜಿತ್ತು. ಆದರೆ, 16 ಸಾವಿರ ಹೆಕ್ಟೇರ್‌ನಲ್ಲಿ ಮಾತ್ರ ಬಿತ್ತನೆಯಾಗಿ ಶೇ.42 ರಷ್ಟು ಸಾಧನೆಯಾಗಿದೆ.

ಪೂರ್ವ ಮುಂಗಾರಿನಲ್ಲಿ ಕೊಪ್ಪಳ ಜಿಲ್ಲೆಯಲ್ಲಿ 16 ಸಾವಿರ ಹೆಕ್ಟೇರ್‌ ಬಿತ್ತನೆ ಗುರಿ ಇದ್ದು, 28 ಸಾವಿರ ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿ ಶೇ.175 ರಷ್ಟು ಸಾಧನೆಯಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 6 ಸಾವಿರ ಹೆಕ್ಟೇರ್‌(ಶೇ.71), ಚಾಮರಾಜನಗರ 28 ಸಾವಿರ ಹೆಕ್ಟೇರ್‌(ಶೇ.55), ಮೈಸೂರಿನ 1.63 ಲಕ್ಷ ಹೆಕ್ಟೇರ್‌ ಗುರಿ ಪೈಕಿ ಶೇ.54 ರಷ್ಟು ಬಿತ್ತನೆಯಾಗಿದೆ. ಆದರೆ ಇನ್ನುಳಿದ ಜಿಲ್ಲೆಗಳಲ್ಲಿ ಬಿತ್ತನೆ ಬಹಳಷ್ಟು ಕಡಿಮೆಯಾಗಿದೆ.

10:05 AM (IST) Jun 11

Kogilu layout eviction case - ಸರ್ಕಾರ ಮನೆ ಕೊಟ್ಟರೂ ಸ್ಥಳ ಬಿಡದ ಕೋಗಿಲು ನಿವಾಸಿಗಳು!ಅಧಿಕಾರಿಗಳಿಗೆ ಹೊಸ ತಲೆನೋವು

ಬೆಂಗಳೂರಿನ ಕೋಗಿಲು ಬಡಾವಣೆಯ ಅಕ್ರಮ ಮನೆ ತೆರವು ಪ್ರಕರಣದಲ್ಲಿ, ಸಂತ್ರಸ್ತರಿಗೆ ಸರ್ಕಾರ ಪುನರ್ವಸತಿ ಕಲ್ಪಿಸಿದರೂ ಅವರು ಸ್ಥಳಾಂತರಗೊಳ್ಳಲು ನಿರಾಕರಿಸುತ್ತಿದ್ದಾರೆ ಎಂದು ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

Read Full Story

09:53 AM (IST) Jun 11

ರಾತ್ರಿ 2 ಗಂಟೆಗೆ ಹಾಸ್ಟೆಲ್‌ ನುಗ್ಗಿದವನ ಹಿಡಿದು ಪೊಲೀಸರಿಗೆ ಒಪ್ಪಿಸಿದ ಹುಡುಗಿಯರು

ಚಿಕ್ಕಮಗಳೂರು ಸರ್ಕಾರಿ ಮೆಡಿಕಲ್ ಕಾಲೇಜಿನ ಹುಡುಗಿಯರ ಹಾಸ್ಟೆಲ್‌ಗೆ ಮಧ್ಯರಾತ್ರಿ ನುಗ್ಗಿದ್ದ ಯುವಕನನ್ನು ವಿದ್ಯಾರ್ಥಿನಿಯರೇ ಧೈರ್ಯದಿಂದ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಳ್ಳತನದ ಉದ್ದೇಶದಿಂದ ಬಂದಿದ್ದ ಆರೋಪಿ ಈ ಹಿಂದೆಯೂ ಇದೇ ರೀತಿ ಮಾಡಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದ್ದು, ಈ ಘಟನೆಯು ಹಾಸ್ಟೆಲ್ ಭದ್ರತೆಯ ಬಗ್ಗೆ ಗಂಭೀರ ಚರ್ಚೆಗಳನ್ನು ಹುಟ್ಟುಹಾಕಿದೆ.

Read Full Story

09:31 AM (IST) Jun 11

ತಿಪಟೂರು ಶಾಸಕ ಕೆ. ಷಡಕ್ಷರಿ ದೆಹಲಿಯಲ್ಲಿ ಆಸ್ಪತ್ರೆಗೆ ದಾಖಲು; ಆರೋಗ್ಯ ‌ಸ್ಥಿತಿ ಗಂಭೀರ

ತಿಪಟೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ K ಷಡಕ್ಷರಿ ಅವರ ಆರೋಗ್ಯದಲ್ಲಿ ದಿಡೀರ್ ಏರುಪೇರು ಕಾಣಿಸಿಕೊಂಡಿದೆ. ಇಬ್ಬರ ಉಪಸ್ಥಿತಿಯಲ್ಲಿ ಷಡಕ್ಷರಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ.

Read Full Story

09:16 AM (IST) Jun 11

ಬಿಜೆಪಿಯ ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿ ಝಾಕೀರ್‌ಗೆ ಮಧ್ಯಂತರ ಜಾಮೀನು; 18ನೇ ಆರೋಪಿ

ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ 18ನೇ ಆರೋಪಿ ಝಾಕೀರ್ ಸವಣೂರಿಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಹತ್ಯೆಯ ಸಂಚಿನಲ್ಲಿ ನೇರವಾಗಿ ಭಾಗಿಯಾಗಿದ್ದ ಈತನನ್ನು 2022ರ ಜುಲೈನಲ್ಲಿ ಬಂಧಿಸಲಾಗಿತ್ತು.
Read Full Story

09:05 AM (IST) Jun 11

ಮೀನಕಳಿಯದಲ್ಲಿ ಕಡಲ್ಕೊರೆತ ತಡೆಗೆ ಸ್ಯಾಂಡ್‌ಬ್ಯಾಗ್; ಮರವಂತೆ ಮಾದರಿ ಬ್ರೇಕ್ ವಾಟರ್‌ಗೆ ಒತ್ತಾಯ

ಮಂಗಳೂರಿನ ಮೀನಕಳಿಯದಲ್ಲಿ ತೀವ್ರ ಕಡಲ್ಕೊರೆತ ಉಂಟಾಗಿದ್ದು, ತಾತ್ಕಾಲಿಕವಾಗಿ ಸ್ಯಾಂಡ್‌ಬ್ಯಾಗ್‌ಗಳನ್ನು ಅಳವಡಿಸಲಾಗುತ್ತಿದೆ. ಆದರೆ, ಸ್ಥಳೀಯ ಮೀನುಗಾರರು ಈ ತಾತ್ಕಾಲಿಕ ಪರಿಹಾರದ ಬದಲು ಮರವಂತೆ ಮಾದರಿಯ ಶಾಶ್ವತ ಬ್ರೇಕ್-ವಾಟರ್ ನಿರ್ಮಾಣಕ್ಕೆ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ.
Read Full Story

08:50 AM (IST) Jun 11

Belagavi - ಹೆಮ್ಮಡಾಗೆ ಹೊಸ ಬಸ್ ಸೇವೆ ಆರಂಭ, ಇತ್ತ ಖಾನಾಪುರದ ಹಲವು ಗ್ರಾಮಗಳ ನಿರೀಕ್ಷೆ

ಖಾನಾಪುರದಿಂದ ಹೆಮ್ಮಡಗಾ ಗ್ರಾಮಕ್ಕೆ ಹೊಸ ಬಸ್ ಸೇವೆ ಆರಂಭವಾಗಿದ್ದು, ಇದು ಪ್ರತಿನಿತ್ಯ ಎರಡು ಟ್ರಿಪ್ ಸಂಚರಿಸಲಿದೆ. ಇದೇ ವೇಳೆ, ಹತ್ತರಗುಂಜಿ ಮತ್ತು ಮಾಚಾಳಿ-ಸಾತನಾಳಿ ಸೇರಿದಂತೆ ಹಲವು ಗ್ರಾಮಗಳಿಗೆ ಬಸ್ ಸೌಲಭ್ಯ ಒದಗಿಸುವಂತೆ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.
Read Full Story

08:39 AM (IST) Jun 11

ಬಿಜೆಪಿ ಮುಖಂಡನ ಪುತ್ರನಿಂದ ಪುತ್ತೂರು ಯುವತಿಗೆ ವಂಚನೆ - ರಾಜೀ ಸಂಧಾನಕ್ಕೆ ಪ್ರಸ್ತಾಪ

ಪುತ್ತೂರಿನ ಬಿಜೆಪಿ ಮುಖಂಡರ ಪುತ್ರ ಕೃಷ್ಣಾ ಜೆ. ರಾವ್‌ ವಿರುದ್ಧದ ಅತ್ಯಾ*ಚಾರ ಪ್ರಕರಣದಲ್ಲಿ, ಆರೋಪಿ ಪರ ವಕೀಲರು ರಾಜಿ ಸಂಧಾನದ ಪ್ರಸ್ತಾಪವನ್ನು ಮುಂದಿಟ್ಟಿದ್ದಾರೆ. ಇದನ್ನು ಪರಿಗಣಿಸಿದ ನ್ಯಾಯಾಲಯ, ಮಧ್ಯಸ್ಥಿಕೆ ಕೇಂದ್ರಕ್ಕೆ ಹಾಜರಾಗಲು ಸೂಚಿಸಿದ್ದು, ಸಂತ್ರಸ್ತೆಗೆ ಜೀವನಾಂಶ ಪಾವತಿಸಲು ಆದೇಶಿಸಿದೆ.

Read Full Story

08:25 AM (IST) Jun 11

ನಾನೇ ಹಲವು ಬಾರಿ ಸಮಸ್ಯೆ ಅನುಭವಿಸಿದ್ದೇನೆ, ಶೀಘ್ರವೇ ಪರಿಹಾರ - ಸಂಸದ CN ಮಂಜುನಾಥ್

ಬೆಂಗಳೂರು ಗ್ರಾಮಾಂತರ ಸಂಸದ ಡಾ.ಮಂಜುನಾಥ್ ಅವರು ಆನೇಕಲ್-ಅತ್ತಿಬೆಲೆ ರಸ್ತೆಯಲ್ಲಿನ ರೈಲು ಗೇಟ್ ಬಳಿ ಮೇಲ್ಸೇತುವೆ ನಿರ್ಮಿಸಲು ಸೂಚಿಸಿದ್ದಾರೆ. ಸುಮಾರು ₹70 ಕೋಟಿ ವೆಚ್ಚದ ಈ ಯೋಜನೆಗೆ ಶೀಘ್ರ ಚಾಲನೆ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

Read Full Story

08:12 AM (IST) Jun 11

Belagavi - ಬೆಳಗಾವಿ ನಮ್ಮದೆನ್ನಲು ವಿಳಂಬವೇಕೆ? ಡಿಸಿ ಹೇಳಿದರೂ ಪತ್ರ ಬರೆಯದ ಪಾಲಿಕೆ!

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ಠರಾವು ಅಂಗೀಕಾರದ ಬಗ್ಗೆ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ನೀಡಿದ್ದ ಸೂಚನೆಯನ್ನು ಮಹಾನಗರ ಪಾಲಿಕೆ ಪಾಲಿಸಿಲ್ಲ. ಸಚಿವ ಸತೀಶ ಜಾರಕಿಹೊಳಿ ಸಮ್ಮುಖದಲ್ಲಿ ನಡೆದ ಸಭೆಯ ನಿರ್ಧಾರಕ್ಕೂ ಬೆಲೆ ಸಿಕ್ಕಿಲ್ಲ. ಈ ಆಡಳಿತಾತ್ಮಕ ನಿರ್ಲಕ್ಷ್ಯವು ಕನ್ನಡಪರ ಸಂಘಟನೆಗಳ ಅಸಮಾಧಾನ.

Read Full Story

08:05 AM (IST) Jun 11

ನಿಧಿ ಆಸೆಗಾಗಿ ಮೂಕಬಸವೇಶ್ವರ, ಈಶ್ವರ ಮೂರ್ತಿಯುಳ್ಳ ದೇವಸ್ಥಾನ ಕೆಡವಿದ ನಾಲ್ವರ ಬಂಧನ

ನಿಧಿ ಆಸೆಗಾಗಿ ಪುರಾತನ ಮೂಕಬಸವೇಶ್ವರ ಹಾಗೂ ಈಶ್ವರ ದೇವಸ್ಥಾನವನ್ನು ಕೆಡವಿ, ಜೆಸಿಬಿಯಿಂದ ನೆಲ ಅಗೆದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಕೃತ್ಯದಿಂದ ಧಾರ್ಮಿಕ ನಂಬಿಕೆಗೆ ಧಕ್ಕೆ ತಂದ ಆರೋಪದ ಮೇಲೆ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Read Full Story

07:50 AM (IST) Jun 11

ಶಾಲಾ ಆರಂಭ 15 ನಿಮಿಷ ಮುಂದೂಡಿ, ಮುಕ್ತಾಯದ ಸಮಯದಲ್ಲಿ ಬದಲಾವಣೆ ಬೇಡ; ಶಿಕ್ಷಕರ ಮನವಿ

ಶಾಲಾ ಆರಂಭದ ಸಮಯವನ್ನು 15 ನಿಮಿಷಗಳ ಕಾಲ ಮುಂದೂಡಿ, ಆದ್ರೆ ಶಾಲಾ ಮುಕ್ತಾಯದ ಸಮಯದಲ್ಲಿ ಯಾವುದೇ ಬದಲಾವಣೆ ಮಾಡುವುದು ಬೇಡ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.

Read Full Story

07:43 AM (IST) Jun 11

Bengaluru crime - ಕೆಲಸಕ್ಕಿದ್ದ ಮನೆಯಲ್ಲಿ ₹25 ಲಕ್ಷ ಹಣದೋಚಿದ್ದ ನೇಪಾಳ ದಂಪತಿ ಬಂಧನ; ಕಳ್ಳತನ ಬಳಿಕ ಏನು ಮಾಡಿದ್ರು ನೋಡಿ!

ಬೆಂಗಳೂರಿನ ಗುತ್ತಿಗೆದಾರರೊಬ್ಬರ ಮನೆಯಲ್ಲಿ ಕೆಲಸಕ್ಕಿದ್ದ ನೇಪಾಳಿ ದಂಪತಿ ₹25 ಲಕ್ಷ ಹಣವನ್ನು ದೋಚಿದ್ದಾರೆ. ಕೃತ್ಯ ನಡೆದ ಕೆಲವೇ ಗಂಟೆಗಳಲ್ಲಿ ಅಮೃತಹಳ್ಳಿ ಪೊಲೀಸರು ಆರೋಪಿಗಳನ್ನು ಕೆಂಗೇರಿ ಬಳಿ ಬಂಧಿಸಿ, ಕದ್ದ ಹಣವನ್ನು ವಶಪಡಿಸಿಕೊಂಡಿದ್ದಾರೆ.
Read Full Story

07:36 AM (IST) Jun 11

18 ರಸ್ತೆಗೆ ದುರಸ್ತಿ ಅಭಿವೃದ್ಧಿಗೆ ₹119 ಕೋಟಿ ಬಿಡುಗಡೆ - ಕೋಟಾ ಶ್ರೀನಿವಾಸ್‌ ಪೂಜಾರಿ

ಕೇಂದ್ರದ ಸಿಆರ್‌ಐಎಫ್ ನಿಧಿಯಿಂದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ 18 ರಸ್ತೆಗಳ ಅಭಿವೃದ್ಧಿಗೆ ₹119 ಕೋಟಿ ಬಿಡುಗಡೆಯಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಈ ಅನುದಾನವು ಬಾಳೆಹೊನ್ನೂರು-ಶೃಂಗೇರಿ, ಕೊಪ್ಪ-ಶೃಂಗೇರಿ, ಮತ್ತು ಮುಳ್ಳಯ್ಯನಗಿರಿ ರಸ್ತೆ ಸೇರಿದಂತೆ ಕ್ಷೇತ್ರದ ಪ್ರಮುಖ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಬಳಕೆಯಾಗಲಿದೆ.
Read Full Story

07:07 AM (IST) Jun 11

ಕಸ ಸಂಸ್ಕರಣೆಗೆ ದೆಹಲಿ ಕಂಪನಿಗೆ 35 ವರ್ಷ ಗುತ್ತಿಗೆ ನೀಡಿ ₹10 ಸಾವಿರ ಕೋಟಿ ಕಿಕ್‌ ಬ್ಯಾಕ್‌? ಆರ್ ಅಶೋಕ್ ಗಂಭೀರ ಆರೋಪ

ಬೆಂಗಳೂರಿನ ಕಸ ಸಂಸ್ಕರಣೆ ಗುತ್ತಿಗೆಯಲ್ಲಿ ಕಾಂಗ್ರೆಸ್ ಸರ್ಕಾರ 39 ಸಾವಿರ ಕೋಟಿ ರೂ. ಹಗರಣ ನಡೆಸಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ದೆಹಲಿ ಮೂಲದ ರಾಮ್‌ಕಿ ಕಂಪನಿಗೆ 35 ವರ್ಷ ಗುತ್ತಿಗೆ ನೀಡಿ 10 ಸಾವಿರ ಕೋಟಿ ರೂ. ಕಿಕ್‌ಬ್ಯಾಕ್, ಈ ಸಂಬಂಧ ರಾಜ್ಯಪಾಲರು, ಲೋಕಾಯುಕ್ತಕ್ಕೆ ದೂರು.

Read Full Story

More Trending News