ಬೆಂಗಳೂರು: ಮಳೆ ಅಭಾವದಿಂದಾಗಿ ರಾಜ್ಯದಲ್ಲಿ ಪೂರ್ವ ಮುಂಗಾರಿನ ಬಿತ್ತನೆ ಪ್ರಮಾಣದಲ್ಲಿ ಭಾರೀ ಕುಂಠಿತವಾಗಿದೆ. ಒಟ್ಟಾರೆ 2.78 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಇಲಾಖೆ ಬಿತ್ತನೆ ಗುರಿ ಹೊಂದಿದ್ದು, ಆದರೆ 1.62 ಲಕ್ಷ ಹೆಕ್ಟೇರ್ನಲ್ಲಿ(ಶೇ.58) ಮಾತ್ರ ಬಿತ್ತನೆಯಾಗಿದೆ.
51 ಸಾವಿರ ಹೆಕ್ಟೇರ್ನಲ್ಲಿ ಮೆಕ್ಕೆಜೋಳ ಬಿತ್ತುವ ಗುರಿ ಇತ್ತಾದರೂ 38 ಸಾವಿರ ಹೆಕ್ಟೇರ್ನಲ್ಲಿ (ಶೇ.74) ಮಾತ್ರ ಬಿತ್ತನೆಯಾಗಿದೆ. ಒಟ್ಟಾರೆ 1.51 ಲಕ್ಷ ಹೆಕ್ಟೇರ್ನಲ್ಲಿ ಆಹಾರ ಧಾನ್ಯ ಬಿತ್ತನೆ ಅಂದಾಜಿದ್ದು. ಇದಕ್ಕೆ ಬದಲಾಗಿ 77 ಸಾವಿರ ಹೆಕ್ಟೇರ್(ಶೇ.51)ನಲ್ಲಿ ಬಿತ್ತನೆಯಾಗಿದೆ. ಸೂರ್ಯಕಾಂತಿ, ಶೇಂಗಾ ಸೇರಿ 26 ಸಾವಿರ ಹೆಕ್ಟೇರ್ನಲ್ಲಿ ಎಣ್ಣೆಕಾಳುಗಳ ಬೆಳೆ ಬೆಳೆಯುವ ಅಂದಾಜಿತ್ತು. ಆದರೆ, 16 ಸಾವಿರ ಹೆಕ್ಟೇರ್ನಲ್ಲಿ ಮಾತ್ರ ಬಿತ್ತನೆಯಾಗಿ ಶೇ.42 ರಷ್ಟು ಸಾಧನೆಯಾಗಿದೆ.
ಪೂರ್ವ ಮುಂಗಾರಿನಲ್ಲಿ ಕೊಪ್ಪಳ ಜಿಲ್ಲೆಯಲ್ಲಿ 16 ಸಾವಿರ ಹೆಕ್ಟೇರ್ ಬಿತ್ತನೆ ಗುರಿ ಇದ್ದು, 28 ಸಾವಿರ ಹೆಕ್ಟೇರ್ನಲ್ಲಿ ಬಿತ್ತನೆಯಾಗಿ ಶೇ.175 ರಷ್ಟು ಸಾಧನೆಯಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 6 ಸಾವಿರ ಹೆಕ್ಟೇರ್(ಶೇ.71), ಚಾಮರಾಜನಗರ 28 ಸಾವಿರ ಹೆಕ್ಟೇರ್(ಶೇ.55), ಮೈಸೂರಿನ 1.63 ಲಕ್ಷ ಹೆಕ್ಟೇರ್ ಗುರಿ ಪೈಕಿ ಶೇ.54 ರಷ್ಟು ಬಿತ್ತನೆಯಾಗಿದೆ. ಆದರೆ ಇನ್ನುಳಿದ ಜಿಲ್ಲೆಗಳಲ್ಲಿ ಬಿತ್ತನೆ ಬಹಳಷ್ಟು ಕಡಿಮೆಯಾಗಿದೆ.
10:05 AM (IST) Jun 11
ಬೆಂಗಳೂರಿನ ಕೋಗಿಲು ಬಡಾವಣೆಯ ಅಕ್ರಮ ಮನೆ ತೆರವು ಪ್ರಕರಣದಲ್ಲಿ, ಸಂತ್ರಸ್ತರಿಗೆ ಸರ್ಕಾರ ಪುನರ್ವಸತಿ ಕಲ್ಪಿಸಿದರೂ ಅವರು ಸ್ಥಳಾಂತರಗೊಳ್ಳಲು ನಿರಾಕರಿಸುತ್ತಿದ್ದಾರೆ ಎಂದು ಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ.
09:53 AM (IST) Jun 11
ಚಿಕ್ಕಮಗಳೂರು ಸರ್ಕಾರಿ ಮೆಡಿಕಲ್ ಕಾಲೇಜಿನ ಹುಡುಗಿಯರ ಹಾಸ್ಟೆಲ್ಗೆ ಮಧ್ಯರಾತ್ರಿ ನುಗ್ಗಿದ್ದ ಯುವಕನನ್ನು ವಿದ್ಯಾರ್ಥಿನಿಯರೇ ಧೈರ್ಯದಿಂದ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಳ್ಳತನದ ಉದ್ದೇಶದಿಂದ ಬಂದಿದ್ದ ಆರೋಪಿ ಈ ಹಿಂದೆಯೂ ಇದೇ ರೀತಿ ಮಾಡಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದ್ದು, ಈ ಘಟನೆಯು ಹಾಸ್ಟೆಲ್ ಭದ್ರತೆಯ ಬಗ್ಗೆ ಗಂಭೀರ ಚರ್ಚೆಗಳನ್ನು ಹುಟ್ಟುಹಾಕಿದೆ.
09:31 AM (IST) Jun 11
ತಿಪಟೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ K ಷಡಕ್ಷರಿ ಅವರ ಆರೋಗ್ಯದಲ್ಲಿ ದಿಡೀರ್ ಏರುಪೇರು ಕಾಣಿಸಿಕೊಂಡಿದೆ. ಇಬ್ಬರ ಉಪಸ್ಥಿತಿಯಲ್ಲಿ ಷಡಕ್ಷರಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ.
09:16 AM (IST) Jun 11
09:05 AM (IST) Jun 11
08:50 AM (IST) Jun 11
08:39 AM (IST) Jun 11
ಪುತ್ತೂರಿನ ಬಿಜೆಪಿ ಮುಖಂಡರ ಪುತ್ರ ಕೃಷ್ಣಾ ಜೆ. ರಾವ್ ವಿರುದ್ಧದ ಅತ್ಯಾ*ಚಾರ ಪ್ರಕರಣದಲ್ಲಿ, ಆರೋಪಿ ಪರ ವಕೀಲರು ರಾಜಿ ಸಂಧಾನದ ಪ್ರಸ್ತಾಪವನ್ನು ಮುಂದಿಟ್ಟಿದ್ದಾರೆ. ಇದನ್ನು ಪರಿಗಣಿಸಿದ ನ್ಯಾಯಾಲಯ, ಮಧ್ಯಸ್ಥಿಕೆ ಕೇಂದ್ರಕ್ಕೆ ಹಾಜರಾಗಲು ಸೂಚಿಸಿದ್ದು, ಸಂತ್ರಸ್ತೆಗೆ ಜೀವನಾಂಶ ಪಾವತಿಸಲು ಆದೇಶಿಸಿದೆ.
08:25 AM (IST) Jun 11
ಬೆಂಗಳೂರು ಗ್ರಾಮಾಂತರ ಸಂಸದ ಡಾ.ಮಂಜುನಾಥ್ ಅವರು ಆನೇಕಲ್-ಅತ್ತಿಬೆಲೆ ರಸ್ತೆಯಲ್ಲಿನ ರೈಲು ಗೇಟ್ ಬಳಿ ಮೇಲ್ಸೇತುವೆ ನಿರ್ಮಿಸಲು ಸೂಚಿಸಿದ್ದಾರೆ. ಸುಮಾರು ₹70 ಕೋಟಿ ವೆಚ್ಚದ ಈ ಯೋಜನೆಗೆ ಶೀಘ್ರ ಚಾಲನೆ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
08:12 AM (IST) Jun 11
ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ಠರಾವು ಅಂಗೀಕಾರದ ಬಗ್ಗೆ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ನೀಡಿದ್ದ ಸೂಚನೆಯನ್ನು ಮಹಾನಗರ ಪಾಲಿಕೆ ಪಾಲಿಸಿಲ್ಲ. ಸಚಿವ ಸತೀಶ ಜಾರಕಿಹೊಳಿ ಸಮ್ಮುಖದಲ್ಲಿ ನಡೆದ ಸಭೆಯ ನಿರ್ಧಾರಕ್ಕೂ ಬೆಲೆ ಸಿಕ್ಕಿಲ್ಲ. ಈ ಆಡಳಿತಾತ್ಮಕ ನಿರ್ಲಕ್ಷ್ಯವು ಕನ್ನಡಪರ ಸಂಘಟನೆಗಳ ಅಸಮಾಧಾನ.
08:05 AM (IST) Jun 11
ನಿಧಿ ಆಸೆಗಾಗಿ ಪುರಾತನ ಮೂಕಬಸವೇಶ್ವರ ಹಾಗೂ ಈಶ್ವರ ದೇವಸ್ಥಾನವನ್ನು ಕೆಡವಿ, ಜೆಸಿಬಿಯಿಂದ ನೆಲ ಅಗೆದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಕೃತ್ಯದಿಂದ ಧಾರ್ಮಿಕ ನಂಬಿಕೆಗೆ ಧಕ್ಕೆ ತಂದ ಆರೋಪದ ಮೇಲೆ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
07:50 AM (IST) Jun 11
ಶಾಲಾ ಆರಂಭದ ಸಮಯವನ್ನು 15 ನಿಮಿಷಗಳ ಕಾಲ ಮುಂದೂಡಿ, ಆದ್ರೆ ಶಾಲಾ ಮುಕ್ತಾಯದ ಸಮಯದಲ್ಲಿ ಯಾವುದೇ ಬದಲಾವಣೆ ಮಾಡುವುದು ಬೇಡ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.
07:43 AM (IST) Jun 11
07:36 AM (IST) Jun 11
07:07 AM (IST) Jun 11
ಬೆಂಗಳೂರಿನ ಕಸ ಸಂಸ್ಕರಣೆ ಗುತ್ತಿಗೆಯಲ್ಲಿ ಕಾಂಗ್ರೆಸ್ ಸರ್ಕಾರ 39 ಸಾವಿರ ಕೋಟಿ ರೂ. ಹಗರಣ ನಡೆಸಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ದೆಹಲಿ ಮೂಲದ ರಾಮ್ಕಿ ಕಂಪನಿಗೆ 35 ವರ್ಷ ಗುತ್ತಿಗೆ ನೀಡಿ 10 ಸಾವಿರ ಕೋಟಿ ರೂ. ಕಿಕ್ಬ್ಯಾಕ್, ಈ ಸಂಬಂಧ ರಾಜ್ಯಪಾಲರು, ಲೋಕಾಯುಕ್ತಕ್ಕೆ ದೂರು.