Published : Mar 11, 2026, 06:55 AM ISTUpdated : Mar 11, 2026, 09:12 PM IST

Karnataka News Live: ಸಿಕ್ಕಿದ್ದೇ ಚಾನ್ಸ್‌, ಗ್ಯಾಸ್‌ ವಿಚಾರ ಇಟ್ಕೊಂಡು ಹಗಲು ದರೋಡೆಗೆ ಇಳಿದ ಬೆಂಗಳೂರು ಹೋಟೆಲ್‌ಗಳು!

ಸಾರಾಂಶ

ಧಾರವಾಡ: ಹುಬ್ಬಳ್ಳಿಯಲ್ಲಿರುವ ನೈಋತ್ಯ ರೈಲ್ವೆ ಗಾಲ್ಫ್ ಮೈದಾನದಲ್ಲಿದ್ದ ಬನ್ನಿ ಮಹಾಂಕಾಳಿದೇವಿ ದೇವಸ್ಥಾನ ಹಾಗೂ 5 ಅಡಿ ಎತ್ತರದ ಸ್ವಾಮಿ ವಿವೇಕಾನಂದರ ಪುತ್ಥಳಿ ತೆರವು ಮಾಡಿರುವುದನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ಕಾರ್ಯಕರ್ತರು ರೈಲ್ವೆ ಕಚೇರಿಗೆ ಮುತ್ತಿಗೆ ಹಾಕಿ, ಡಿಆರ್‌ಎಂ ಕಚೇರಿಯಲ್ಲಿನ ನಾಮಫಲಕ ಕಿತ್ತು ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಆರ್‌ಪಿಎಫ್‌ ಅಧಿಕಾರಿಗಳ ನಡುವೆ ವಾಗ್ವಾದ ನಡೆದು ಬಿಗುವಿನ ವಾತಾವರಣ ನಿರ್ಮಾಣವಾಯಿತು.

ಮಂಗಳವಾರ ವಾಯು ವಿಹಾರಕ್ಕೆ ಹೋದಾಗ ದೇಗುಲ ತೆರವು ಮಾಡುತ್ತಿರುವುದನ್ನು ನೋಡಿದ ಸಾರ್ವಜನಿಕರು ಪ್ರತಿಭಟಿಸಿದ್ದಾರೆ. ಮಧ್ಯಾಹ್ನ ಹಿಂದೂಗಳು ಒಗ್ಗೂಡಿ ತೆರವು ಜಾಗದಲ್ಲಿ ರೈಲ್ವೆ ಇಲಾಖೆ ಅಧಿಕಾರಿಗಳ ನಡೆ ಖಂಡಿಸಿದರು. ಆ ಬಳಿಕ ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗೀಯ ಕಚೇರಿಗೆ ತೆರಳಿದ ಪ್ರತಿಭಟನಾಕಾರರು, ವಿಭಾಗೀಯ ವ್ಯವಸ್ಥಾಪಕಿ ಬೇಲಾ ಮೀನಾ ಕಚೇರಿಗೆ ಮುತ್ತಿಗೆ ಹಾಕಿ, ನಾಮಫಲಕ ಕಿತ್ತೊಗೆದರು.

ಹಿಂದೂ ದೇವಸ್ಥಾನ ತೆಗೆದಿರುವುದು ಮೂರ್ಖತನದ ಪರಮಾವಧಿ. ಶನಿವಾರದೊಳಗೆ ದೇವಸ್ಥಾನ ಹಾಗೂ ಪುತ್ಥಳಿ ಪುನರ್‌ ಸ್ಥಾಪಿಸಬೇಕು. ಇಲ್ಲವಾದರೆ ಉಗ್ರ ಹೋರಾಟ ಮಾಡುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

09:12 PM (IST) Mar 11

ಸಿಕ್ಕಿದ್ದೇ ಚಾನ್ಸ್‌, ಗ್ಯಾಸ್‌ ವಿಚಾರ ಇಟ್ಕೊಂಡು ಹಗಲು ದರೋಡೆಗೆ ಇಳಿದ ಬೆಂಗಳೂರು ಹೋಟೆಲ್‌ಗಳು!

ಬೆಂಗಳೂರಿನ 'ಮಿ. ಆಂಧ್ರ ಮೀಲ್ಸ್' ಹೋಟೆಲ್, ಗ್ಯಾಸ್ ಕೊರತೆಯ ನೆಪವೊಡ್ಡಿ ಗ್ರಾಹಕರ ಬಿಲ್‌ನಲ್ಲಿ 'ಗ್ಯಾಸ್ ಶುಲ್ಕ' ವಿಧಿಸುತ್ತಿದೆ. ಈ ಅನ್ಯಾಯವನ್ನು ಗ್ರಾಹಕರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ್ದು, ಈ ಸುಲಿಗೆ ಪಿಜಿಗಳಿಗೂ ವ್ಯಾಪಿಸಿದೆ.
Read Full Story

09:01 PM (IST) Mar 11

ಗ್ರಾಮೀಣ ಭಾಗದ ನೀರಿನ ಸಮಸ್ಯೆಗೆ ಮುಂಜಾಗ್ರತೆ ವಹಿಸಿ - ಶಾಸಕ ಗೋಪಾಲಕೃಷ್ಣ ಬೇಳೂರು

ಈ ಬಾರಿ ಬಿಸಿಲು ಜೋರಾಗಿರುವುದರಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಈಗಿನಿಂದಲೇ ಅಗತ್ಯ ಮುಂಜಾಗ್ರತೆ ವಹಿಸುವಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ ನೀಡಿದ್ದಾರೆ.

Read Full Story

08:57 PM (IST) Mar 11

ದಾಂಡೇಲಿಯಲ್ಲಿ ಮರಕ್ಕೆ ಡಿಕ್ಕಿ ಹೊಡೆದು ನಜ್ಜುಗುಜ್ಜಾದ ಸ್ವಿಫ್ಟ್ ಕಾರು - ಮೂವರು ಗಂಭೀರ

ಉತ್ತರಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಸ್ವಿಫ್ಟ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡ ಆಸ್ಪತ್ರೆಗೆ ದಾಖಲಿಸಲಾಗಿದೆ.

Read Full Story

08:31 PM (IST) Mar 11

ಸರ್ಕಾರ ಆರ್ಥಿಕವಾಗಿ ದಿವಾಳಿ ಆಗಿದೆ - ಸಿದ್ದರಾಮಯ್ಯ ವಿರುದ್ಧ ಆರ್‌.ಅಶೋಕ್‌ ವಾಗ್ದಾಳಿ

ಸಾಲದ ಮೂಲಕ ರಾಜ್ಯ ಬಜೆಟ್‌ ಮಂಡಿಸಲಾಗಿದ್ದು, ಇದು ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿರುವುದನ್ನು ತೋರಿಸುತ್ತದೆ. 2026-27ನೇ ಸಾಲಿನ ಬಜೆಟ್‌ ಖಾಲಿ ಚೊಂಬಿನಂತಿದೆ ಎಂದು ಆರ್‌.ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದರು.

Read Full Story

08:21 PM (IST) Mar 11

E-Khata ಲಂಚ ಆರೋಪ - ದಾಖಲೆ ಕೊಟ್ಟರೆ ಅಧಿಕಾರಿ ವಿರುದ್ಧ ಕ್ರಮ - ಡಿ.ಕೆ.ಶಿವಕುಮಾರ್‌

ಇ-ಖಾತಾ ನೀಡುವ ವಿಚಾರದಲ್ಲಿ ಯಾವುದೇ ಅಧಿಕಾರಿ ಲಂಚ ಪಡೆಯುತ್ತಿದ್ದಾರೆ ಎಂಬ ಆರೋಪಕ್ಕೆ ದಾಖಲೆ ನೀಡಿದರೆ ಅಂಥ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

Read Full Story

08:01 PM (IST) Mar 11

21 ಜಿಲ್ಲೆಯ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ - ಸಚಿವ ಪ್ರಿಯಾಂಕ್‌ ಖರ್ಗೆ

31 ಗ್ರಾಮಗಳಿಗೆ 96 ಟ್ಯಾಂಕರ್‌ಗಳ ಮುಖಾಂತರ ಹಾಗೂ 152 ಗ್ರಾಮಗಳಿಗೆ 154 ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ಕುಡಿಯುವ ನೀರು ಒದಗಿಸಲು ಕ್ರಮವಹಿಸಲಾಗಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ ನೀಡಿದ್ದಾರೆ.

Read Full Story

07:48 PM (IST) Mar 11

ಮಲೆನಾಡು ಜಿಲ್ಲೆಗಳಲ್ಲಿ ರೈತರ ಕೋವಿ ಪರವಾನಗಿ ನೀಡಲು ಸೂಚಿಸ್ತೇನೆ - ಗೃಹ ಸಚಿವ ಡಾ.ಜಿ.ಪರಮೇಶ್ವರ್‌

ಕೃಷಿ ಬೆಳೆ ರಕ್ಷಣೆಗೆ ಸಂಬಂಧಿಸಿ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ರೈತರಿಗೆ ಕೋವಿ ಪರವಾನಗಿ ನೀಡಲು ಸಂಬಂಧಪಟ್ಟವರಿಗೆ ಸೂಚನೆ ನೀಡುತ್ತೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಭರವಸೆ ನೀಡಿದ್ದಾರೆ.

Read Full Story

06:13 PM (IST) Mar 11

ಹುಡುಗಿರಾ, ನಿಮ್​ ಬಳಿ BMW ಇದ್ರೆ ಮಾತ್ರ ಅವನ ಬಳಿ Benz ಕೇಳಿ - Annayya Serial ಗುಂಡಮ್ಮ ಕಿಡಿ

'ಅಣ್ಣಯ್ಯ' ಸೀರಿಯಲ್ ಖ್ಯಾತಿಯ ನಟಿ ಪ್ರತೀಕ್ಷಾ ಶ್ರೀನಾಥ್, ಇಂದಿನ ಹೆಣ್ಣುಮಕ್ಕಳು ತಮ್ಮ ಭಾವಿ ಗಂಡನಿಂದ ಅತಿಯಾದ ನಿರೀಕ್ಷೆಗಳನ್ನು ಇಟ್ಟುಕೊಳ್ಳುವುದರ ಬಗ್ಗೆ ಮಾತನಾಡಿದ್ದಾರೆ. ಸಮಾನತೆಯ ವಿಷಯದಲ್ಲಿ ಗಂಡನ ಆರ್ಥಿಕ ಸ್ಥಿತಿಯ ಬಗ್ಗೆ ಮಾತ್ರ ಹೆಚ್ಚು ಬೇಡಿಕೆ ಇಡುವುದನ್ನು ವಿವರಿಸಿದ್ದಾರೆ.

Read Full Story

05:42 PM (IST) Mar 11

ಉತ್ತರಪ್ರದೇಶ - ಅಂತ್ಯಕ್ರಿಯೆಗೆ ತಯಾರಾಗಿದ್ದ ಕುಟುಂಬಕ್ಕೆ ಅಚ್ಚರಿ, ಉಸಿರಾಡದ ಮಹಿಳೆಗೆ ಜೀವ ಕೊಟ್ಟ ರಸ್ತೆಗುಂಡಿ!

ವೈದ್ಯರು ಮೆದುಳು ನಿಷ್ಕ್ರಿಯವಾಗಿದೆ ಎಂದು ಹೇಳಿದ್ದ 50 ವರ್ಷದ ಮಹಿಳೆಯನ್ನು ಆಂಬ್ಯುಲೆನ್ಸ್‌ನಲ್ಲಿ ಮನೆಗೆ ಕರೆತರುವಾಗ, ವಾಹನವು ರಸ್ತೆಗುಂಡಿಗೆ ಬಿದ್ದಿದೆ. ಈ ಆಘಾತದಿಂದಾಗಿ ಮಹಿಳೆ ಮತ್ತೆ ಉಸಿರಾಡಲು ಆರಂಭಿಸಿ, ನಂತರದ ಚಿಕಿತ್ಸೆಯಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ಅಚ್ಚರಿಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
Read Full Story

04:48 PM (IST) Mar 11

ವಿದೇಶದಲ್ಲಿ ನೆಲೆಸಿರುವವರ ಬೆಂಗಳೂರು ಮನೆಯಿಂದ 3 ಕೋಟಿ ಮೌಲ್ಯದ ವಜ್ರಾಭರಣ ಕದ್ದ 19ರ ಯುವಕ, ಅಮೆರಿಕದಿಂದಲೇ ಕಳ್ಳತನ ನೋಡಿದ ಮಾಲೀಕ!

ಬೆಂಗಳೂರಿನ ಯಲಹಂಕದಲ್ಲಿ ನಡೆದ 3 ಕೋಟಿ ರೂಪಾಯಿ ಮೌಲ್ಯದ ಮನೆಕಳ್ಳತನ ಪ್ರಕರಣದಲ್ಲಿ ರಾಜಸ್ಥಾನ ಮೂಲದ 19 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಪಕ್ಕದ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದು, ಆರು ತಿಂಗಳ ಕಾಲ ಮನೆಯ ಮೇಲೆ ನಿಗಾ ಇಟ್ಟು, ಸ್ಲೈಡ್ ಡೋರ್ ಮೂಲಕ ಒಳನುಗ್ಗಿ ಕಳ್ಳತನ ಮಾಡಿದ್ದ. ಸಿಸಿಟಿವಿ ದೃಶ್ಯಾವಳಿ  ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ರಾಜಸ್ಥಾನದಲ್ಲಿ ಪತ್ತೆಹಚ್ಚಿ ಬಂಧಿಸಿದ್ದಾರೆ.

Read Full Story

04:35 PM (IST) Mar 11

ವಿಷ್ಣುವರ್ಧನ್ ಸರ್ ಥರ ನಾನೂ ಕೈಗೆ ಕಡಗ ಹಾಕಿಕೊಳ್ಳುತ್ತೇನೆ - ಗೋಲ್ಡನ್‌ಸ್ಟಾರ್‌ ಗಣೇಶ್

ನಾನು ವಿಷ್ಣು ಸಾರ್ ದೊಡ್ಡ ಅಭಿಮಾನಿ. ಅವರಂತೆಯೇ ನನ್ನ ಕೈಗೂ ಕಡಗ ಹಾಕ್ಕೊಂಡಿದ್ದೇನೆ. ನೀನು ಯಾವಾಗಲೂ ಸಂತೋಷವಾಗಿರುವಂತೆ ಇರಬೇಡ, ಸಂತೋಷವಾಗಿರು ಎನ್ನುತ್ತಿದ್ದರು ಎಂದು ಗೋಲ್ಡನ್‌ಸ್ಟಾರ್‌ ಗಣೇಶ್ ಹೇಳಿದರು.

Read Full Story

04:16 PM (IST) Mar 11

Love Mocktail 3 - ನಮ್ಮ ಚಿತ್ರ ಚೆನ್ನಾಗಿದೆ, ದೊಡ್ಡ ಚಿತ್ರದ ಭಯ ನಮಗಿಲ್ಲ - ಡಾರ್ಲಿಂಗ್‌ ಕೃಷ್ಣ

ನಾನು ಬರೆದ ಕತೆಗೆ ಪ್ರತಿಯೊಬ್ಬರು ಜೀವ ತುಂಬಿದ್ದಾರೆ. ತುಂಬಾ ಚೆನ್ನಾಗಿ ಬಂದಿದೆ. ಆ ಧೈರ್ಯದಿಂದಲೇ ಮಾರ್ಚ್‌ 19ಕ್ಕೆ ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದೇವೆ ಎಂದರು ಡಾರ್ಲಿಂಗ್‌ ಕೃಷ್ಣ.

Read Full Story

04:02 PM (IST) Mar 11

ಮೈಸೂರು ಸಿಲ್ಕ್ ಪರಂಪರೆ, ಮಾಜಿ ಸಂಸದ ಪ್ರತಾಪ್ ಸಿಂಹ ಬಿಚ್ಚಿಟ್ಟ ತೆರೆಮರೆಯ ಹೋರಾಟದ ಕಥೆ

ಟಿ. ನರಸೀಪುರದಲ್ಲಿರುವ ಕೆಎಸ್ಐಸಿ ರೇಷ್ಮೆ ನೂಲು ಘಟಕದ ಜಾಗದಲ್ಲಿ ಸ್ಟೇಡಿಯಂ ನಿರ್ಮಿಸುವ ಸರ್ಕಾರದ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ವಿರೋಧ ಪಕ್ಷದ ನಾಯಕರು ಮತ್ತು ನೌಕರರ ಹೋರಾಟದ ಫಲವಾಗಿ, ಸರ್ಕಾರ ಈ ಯೋಜನೆಯನ್ನು ಕೈಬಿಟ್ಟು, ಲಾಭದಾಯಕ ಘಟಕವನ್ನು ಉಳಿಸಿ ಅಭಿವೃದ್ಧಿಪಡಿಸುವುದಾಗಿ ಭರವಸೆ ನೀಡಿದೆ. ಈ ಬೆಳವಣಿಗೆಯು ಮೈಸೂರು ಸಿಲ್ಕ್ ಉದ್ಯಮಕ್ಕೆ ನಿಟ್ಟುಸಿರು ತಂದಿದೆ.
Read Full Story

03:42 PM (IST) Mar 11

ವಿದ್ಯಾರ್ಥಿಗಳಿಗೆ ಸಂಕಷ್ಟ ಶುರು, ಲ್ಯಾಪ್‌ಟಾಪ್‌ ಬೆಲೆಯಲ್ಲಿ ಭಾರೀ ಏರಿಕೆ!

ಡಿಡಿಆರ್ ರಾಮ್ ಬೆಲೆ ಏರಿಕೆ ಮತ್ತು ಇಂಟೆಲ್ ಪ್ರೊಸೆಸರ್‌ಗಳ ಕೊರತೆಯಿಂದಾಗಿ ಕಂಪ್ಯೂಟರ್ ಹಾಗೂ ಲ್ಯಾಪ್ಟಾಪ್‌ಗಳ ಬೆಲೆ ಗಣನೀಯವಾಗಿ ಹೆಚ್ಚಾಗಲಿದೆ. ಈ ಬೆಲೆ ಏರಿಕೆಯು ವಿದ್ಯಾರ್ಥಿಗಳು ಮತ್ತು ಸಾಮಾನ್ಯ ಗ್ರಾಹಕರ ಮೇಲೆ ದೊಡ್ಡ ಹೊರೆ ಉಂಟುಮಾಡಲಿದ್ದು, ಭಾರತದಲ್ಲಿ ಪಿಸಿ ಮಾರಾಟ ಕುಸಿಯುವ ಸಾಧ್ಯತೆಯಿದೆ.
Read Full Story

02:59 PM (IST) Mar 11

ಇಂದಿರಾ ಕ್ಯಾಂಟೀನ್‌ಗೂ ತಟ್ಟಿದ LPG ಸಿಲಿಂಡರ್ ಬಿಸಿ; ಬಡವರ ಹೊಟ್ಟೆಗೆ ಕೇವಲ 'ಮೊಸರನ್ನ'ವೇ ಗತಿ!

ಧಾರವಾಡದ ಇಂದಿರಾ ಕ್ಯಾಂಟೀನ್‌ನಲ್ಲಿ ಗ್ಯಾಸ್ ಸಿಲಿಂಡರ್ ಖಾಲಿಯಾದ ಕಾರಣ, ಮಧ್ಯಾಹ್ನದ ಬಿಸಿ ಊಟವನ್ನು ನಿಲ್ಲಿಸಲಾಗಿದೆ. ಇದರಿಂದಾಗಿ, ಊಟಕ್ಕೆ ಬಂದ ನೂರಾರು ಬಡವರು, ವಿದ್ಯಾರ್ಥಿಗಳು ಮತ್ತು ಕಾರ್ಮಿಕರು ಕೇವಲ ಮೊಸರನ್ನ ತಿಂದು ತೃಪ್ತಿಪಡಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಯಿತು.

Read Full Story

02:20 PM (IST) Mar 11

ಕ್ಷಮಿಸಿದ್ರೂ ತಿದ್ದಿಕೊಳ್ಳಲಿಲ್ಲ - ಇನಿಯನ ಜೊತೆಗಿನ ಪಲ್ಲಂಗದಾಟಕ್ಕಾಗಿ ಪತಿಗೆ ಚಟ್ಟ ಕಟ್ಟಿದ ಹೆಂಡ್ತಿ

ಶ್ರೀರಂಗಪಟ್ಟಣದ ಸಿಡಿಎಸ್ ನಾಲೆಯಲ್ಲಿ ಪತ್ತೆಯಾಗಿದ್ದ ಅರ್ಚಕ ಸಿದ್ದಲಿಂಗಪ್ಪನ ಶವದ ಪ್ರಕರಣವು ಕೊಲೆ ಎಂದು ಸಾಬೀತಾಗಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು, ಪತ್ನಿ ಶಾಲಿನಿ ತನ್ನ ಪ್ರಿಯಕರ ಹರೀಶ್ ಜೊತೆ ಸೇರಿ ಕೊಲೆ ಮಾಡಿರುವುದು ಪೊಲೀಸ್ ತನಿಖೆಯಿಂದ ಬಯಲಾಗಿದೆ. 

Read Full Story

01:44 PM (IST) Mar 11

ಕಾಲು ಮುರಿದ್ರೂ ವ್ಹೀಲ್​ ಚೇರ್​ ಮೇಲೆ Naa Ninna Bidalaare ಶೂಟಿಂಗ್​! ವಿಡಿಯೋ ಶೇರ್​ ಮಾಡಿದ ನಟಿ ನೀತಾ

'ನಾ ನಿನ್ನ ಬಿಡಲಾರೆ' ಧಾರಾವಾಹಿ ಖ್ಯಾತಿಯ ನಟಿ ನೀತಾ ಅಶೋಕ್ ಅವರು ಶೂಟಿಂಗ್ ಸೆಟ್‌ನಲ್ಲಿ ಅಪಘಾತಕ್ಕೀಡಾಗಿ ಕಾಲು ಮುರಿದುಕೊಂಡಿದ್ದಾರೆ. ಕಾಲಿಗೆ ಸರ್ಜರಿಯಾಗಿದ್ದರೂ, ಅವರು ವೀಲ್‌ಚೇರ್ ಸಹಾಯದಿಂದಲೇ ಆಸ್ಪತ್ರೆ ಹಾಗೂ ಮನೆಯಿಂದ ಚಿತ್ರೀಕರಣದಲ್ಲಿ ಭಾಗವಹಿಸುವ ಮೂಲಕ ತಮ್ಮ ವೃತ್ತಿಪರತೆಯನ್ನು ಮೆರೆದಿದ್ದಾರೆ.
Read Full Story

01:17 PM (IST) Mar 11

ದೋಸೆ ಹಿಟ್ಟಿಗೆ ಹೆಚ್ಚು ನೀರು ಹಾಕಿಬಿಟ್ರಾ? 4 ಟ್ರಿಕ್ಸ್ ಬಳಸಿ ತಕ್ಷಣ ಗಟ್ಟಿ ಮಾಡಿ

ದೋಸೆ ಹಿಟ್ಟು ಕೈತಪ್ಪಿ ತೆಳುವಾದರೆ, ಅದನ್ನು ಸರಿಪಡಿಸಲು ಹಲವು ಸುಲಭ ಉಪಾಯಗಳಿವೆ. ಅಡುಗೆಮನೆಯ ಕೆಲ ಪದಾರ್ಥಗಳನ್ನು ಬಳಸಿ ಹಿಟ್ಟನ್ನು ಗಟ್ಟಿಗೊಳಿಸಬಹುದು. ಈ ವಿಧಾನಗಳು ದೋಸೆಯನ್ನು ಗರಿಗರಿಯಾಗಿ ಅಥವಾ ಮೃದುವಾಗಿ ಮಾಡಲು ಸಹ ಸಹಕರಿಸುತ್ತವೆ.

Read Full Story

12:56 PM (IST) Mar 11

ವ್ಹಾರೆವ್ಹಾ Karna Serial - ಲಾ ಡಿಗ್ರಿ ಇಲ್ದೇ ಲಾಯರ್​ ಆದ್ಲು, NMC ಸರ್ಟಿಫಿಕೇಟ್​ ಇಲ್ಲ ಎಂದು ಸಸ್ಪೆಂಡ್​ ಆದ ನಿಧಿ

ಕರ್ಣ ಸೀರಿಯಲ್​ನಲ್ಲಿ ಕಾನೂನು ಪದವಿ ಇಲ್ಲದೆ ವಾದಿಸಿ ಗೆದ್ದಿದ್ದ ಡಾ. ನಿಧಿ, ಇದೀಗ ಸಂಚುಕೋರರ ಕುತಂತ್ರದಿಂದ ತನ್ನ ವೈದ್ಯಕೀಯ ವೃತ್ತಿಯಿಂದಲೇ ಸಸ್ಪೆಂಡ್ ಆಗಿದ್ದಾಳೆ. ಈ ಅನಿರೀಕ್ಷಿತ ತಿರುವು ಧಾರಾವಾಹಿಯ ರೋಚಕತೆಯನ್ನು ಹೆಚ್ಚಿಸಿದ್ದು, ನಿಧಿ-ಕರ್ಣರ ಮುಂದಿನ ನಡೆ ಏನು ಎಂಬ ಕುತೂಹಲ ಮೂಡಿಸಿದೆ.
Read Full Story

12:43 PM (IST) Mar 11

ಕಪ್ಪತಗುಡ್ಡ ಗಣಿಗಾರಿಕೆಗೆ ತಡೆ ನೀಡಿ ಹೈಕೋರ್ಟ್ ಮಹತ್ವ ತೀರ್ಪು! ಏನಿದು ಪ್ರಕರಣ?

ಗದಗ ಜಿಲ್ಲೆಯ ಕಪ್ಪತಗುಡ್ಡ ಅಭಯಾರಣ್ಯದಿಂದ 55 ಚದರ ಕಿ.ಮೀ. ಅರಣ್ಯ ಪ್ರದೇಶವನ್ನು ಕೈಬಿಟ್ಟಿದ್ದ ಸರ್ಕಾರದ ಕ್ರಮವನ್ನು ಹೈಕೋರ್ಟ್ ಕಾನೂನುಬಾಹಿರ ಎಂದು ಘೋಷಿಸಿದೆ. ಈ ಪ್ರದೇಶವನ್ನು ಮರಳಿ ಅಭಯಾರಣ್ಯಕ್ಕೆ ಸೇರಿಸಲು ಆದೇಶಿಸುವ ಮೂಲಕ, ಗಣಿಗಾರಿಕೆಯ ಗಂಡಾಂತರವನ್ನು ತಪ್ಪಿಸಿ ಐತಿಹಾಸಿಕ ತೀರ್ಪು ನೀಡಿದೆ.
Read Full Story

12:12 PM (IST) Mar 11

ಡಾ ರಾಜ್‌ಕುಮಾರ್ ಹುಟ್ಟುಹಬ್ಬದ ದಿನ ಏನ್ ತಿಂತಾ ಇದ್ರು..? ಅಂದು ಪಾರ್ವತಮ್ಮ ಹೇಳಿದ್ದ ಸೀಕ್ರೆಟ್ ಈಗ ವೈರಲ್

ಸಾವಿರಾರು ಕೋಟಿ ರೂಪಾಯಿ ವ್ಯವಹಾರ ಮಾಡುವ ಸಿನಿಮಾ ರಂಗದಲ್ಲಿದ್ದರೂ, ಅವರ ಮನಸ್ಸು ಮಾತ್ರ ಯಾವಾಗಲೂ ಕರುನಾಡಿನ ಈ ಸಾಂಪ್ರದಾಯಿಕ ಅಡುಗೆಗಳನ್ನೇ ಬಯಸುತ್ತಿತ್ತು. ಅಣ್ಣಾವ್ರ ಈ ‘ಫುಡ್ ಸೀಕ್ರೆಟ್’ ಕೇಳಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಏನದು ಸೀಕ್ರೆಟ್?

Read Full Story

11:56 AM (IST) Mar 11

ಬೆಂಗಳೂರು - ದ್ವಿಚಕ್ರ ವಾಹನ ಕೊಡದ್ದಕ್ಕೆ ಪ್ರೇಯಸಿ ಕುಟುಂಬಕ್ಕ ಬೆಂಕಿ ಇಟ್ಟ ಪ್ರಕರಣ, ಚಿಕಿತ್ಸೆ ಫಲಿಸದೆ ತಾಯಿ ಸಾವು!

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪ್ರೇಯಸಿ ಹಾಗೂ ಆಕೆಯ ಪೋಷಕರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಪ್ರಕರಣದಲ್ಲಿ, ಪ್ರೇಯಸಿಯ ತಾಯಿ ಮಂಜಮ್ಮ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಸೋಲದೇವನಹಳ್ಳಿ ವ್ಯಾಪ್ತಿಯಲ್ಲಿ ನಡೆದ ಈ ಘಟನೆಯಲ್ಲಿ, ಗಂಭೀರವಾಗಿ ಗಾಯಗೊಂಡಿರುವ ಪ್ರೇಯಸಿ ಸುಮಲತಾ ಮತ್ತು ಆಕೆಯ ತಂದೆಗೆ ಚಿಕಿತ್ಸೆ ಮುಂದುವರೆದಿದೆ. ಆರೋಪಿ ಆಟೋ ಚಾಲಕ ಪಾಂಡು ಸದ್ಯ ಪೊಲೀಸರ ವಶದಲ್ಲಿದ್ದಾನೆ.
Read Full Story

11:31 AM (IST) Mar 11

Middle East Conflict - ಸಂಡೂರಿನಲ್ಲಿ ಗ್ಯಾಸ್ ಸಿಲಿಂಡರ್‌ಗಾಗಿ ಮುಗಿಬಿದ್ದ ಜನತೆ

ಕೊಲ್ಲಿ ರಾಷ್ಟ್ರಗಳಲ್ಲಿನ ಯುದ್ಧದ ಭೀತಿಯಿಂದ ಸಂಡೂರಿನಲ್ಲಿ ಅಡುಗೆ ಅನಿಲ ಸಿಲಿಂಡರ್‌ಗಳಿಗಾಗಿ ಜನರು ಮುಗಿಬಿದ್ದಿದ್ದು, ಕೃತಕ ಅಭಾವದ ಆತಂಕ ಸೃಷ್ಟಿಯಾಗಿದೆ. ಗ್ಯಾಸ್ ಕಂಪನಿಗಳು ಕೊರತೆಯಿಲ್ಲವೆಂದು ಹೇಳುತ್ತಿದ್ದರೂ, ಬಳ್ಳಾರಿಯಲ್ಲಿ ಕಮರ್ಷಿಯಲ್ ಸಿಲಿಂಡರ್‌ಗಳ ಅಭಾವ ತಲೆದೋರಿದೆ.

Read Full Story

11:26 AM (IST) Mar 11

ಪೋಷಕರನ್ನು ಕರೆಸಿ ಬೈದಿದ್ದಕ್ಕೆ ನೇಣು ಬಿಗಿದುಕೊಂಡ ಅರವಿಂದ್; ವಿದ್ಯಾರ್ಥಿಗಳ ಪ್ರತಿಭಟನೆ

ಬಳ್ಳಾರಿಯ ಸಂಜಯ್ ಗಾಂಧಿ ಪಾಲಿಟೆಕ್ನಿಕ್ ಕಾಲೇಜಿನ ಡಿಪ್ಲೋಮಾ ವಿದ್ಯಾರ್ಥಿ ಅರವಿಂದ್ ಆತ್ಮ*ಹತ್ಯೆ ಮಾಡಿಕೊಂಡಿದ್ದಾನೆ. ಕಾಲೇಜಿನಲ್ಲಿ ನಡೆದ ಜಗಳದ ನಂತರ ಪ್ರಿನ್ಸಿಪಾಲ್ ಮತ್ತು ಹೆಚ್‌ಓಡಿ ಪೋಷಕರಿಗೆ ಅವಮಾನಿಸಿದ್ದೇ ಸಾವಿಗೆ ಕಾರಣವೆಂದು ಆರೋಪಿಸಿ ಸಹಪಾಠಿಗಳು ಪ್ರತಿಭಟನೆ ನಡೆಸಿದ್ದಾರೆ.

Read Full Story

11:20 AM (IST) Mar 11

ಅಂಗನವಾಡಿ ಆಟದ ಅಂಗಳದಲ್ಲಿ ಮಗುವಿಗೆ ಕಾದಿತ್ತು ಆಪತ್ತು, ಮರ್ಮಾಂಗಕ್ಕೆ 6 ಹೊಲಿಗೆ!

ಚಿಕ್ಕಮಗಳೂರು ನಗರದ ಅಂಗನವಾಡಿ ಕೇಂದ್ರದಲ್ಲಿ ಆಟವಾಡುತ್ತಿದ್ದ ಮಗುವಿನ ಮರ್ಮಾಂಗಕ್ಕೆ ಕಬ್ಬಿಣದ ತಂತಿ ತಗುಲಿ ಗಂಭೀರ ಗಾಯವಾಗಿದೆ. ಘಟನೆಯ ನಂತರ ಶಿಕ್ಷಕಿ ಪೋಷಕರಿಗೆ ಮಾಹಿತಿ ನೀಡದೆ ಮಗುವನ್ನು ಮನೆಗೆ ಕಳುಹಿಸಿದ್ದು, ಅವರ ನಿರ್ಲಕ್ಷ್ಯದ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Read Full Story

10:53 AM (IST) Mar 11

ಧಾರವಾಡ - ಕಾರಿಗೆ ಕುರಿ ಅಡ್ಡ ಬಂತು ಎಂಬ ಕಾರಣಕ್ಕೆ ಗರ್ಭಿಣಿ ಮಹಿಳೆಗೆ ಅಶ್ಲೀಲ ಪದ ಬಳಸಿದ ಯುವಕ! ಸಿಡಿದೆದ್ದ ಊರ ಜನ

ಧಾರವಾಡದ ನೆಹರು ನಗರದಲ್ಲಿ, ಕಾರಿಗೆ ಕುರಿಯೊಂದು ಅಡ್ಡ ಬಂದ ಕಾರಣಕ್ಕೆ ಶುರುವಾದ ವಾಗ್ವಾದವು ಗಂಭೀರ ಸ್ವರೂಪ ಪಡೆದುಕೊಂಡಿದೆ. ಈ ಸಂದರ್ಭದಲ್ಲಿ ಯುವಕನೊಬ್ಬ ಗರ್ಭಿಣಿ ಮಹಿಳೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವಮಾನ ಮಾಡಿದ್ದಾನೆ. ಈ ಘಟನೆಯು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ಯುವಕರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ ಕೇಳಿಬಂದಿದೆ.
Read Full Story

10:52 AM (IST) Mar 11

ಗೃಹ ಸಚಿವರ ಕ್ಷೇತ್ರದಲ್ಲೇ ಮೌಢ್ಯ - ಮುಟ್ಟಾದ ಹೆಣ್ಣುಮಕ್ಳು ಬಂದರೆ ದೇವಿಗೆ ಕೋಪ; 69 ಲಕ್ಷದ ಸರ್ಕಾರಿ ಹಾಸ್ಟೆಲ್ ಈಗ ಭೂತ ಬಂಗಲೆ!

ಕೊರಟಗೆರೆಯ ಅಕ್ಕಿರಾಂಪುರದಲ್ಲಿ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ 'ಕಸ್ತೂರಿಬಾ ಬಾಲಕಿಯರ ವಿದ್ಯಾರ್ಥಿನಿಲಯ'ವು ಕಳೆದ 8 ವರ್ಷಗಳಿಂದ ಪಾಳುಬಿದ್ದಿದೆ. ಋತುಮತಿ ಹೆಣ್ಣುಮಕ್ಕಳಿಂದ ದೇವಿಗೆ 'ಅಂಟುಮುಂಟು' ತಟ್ಟುತ್ತದೆ ಎಂಬ ಮೌಢ್ಯದಿಂದಾಗಿ ಪೋಷಕರು ಮಕ್ಕಳನ್ನು ಕಳುಹಿಸಲು ನಿರಾಕರಿಸುತ್ತಿದ್ದಾರೆ. 

Read Full Story

10:15 AM (IST) Mar 11

ಹೆಂಡ್ತಿ ಹಿಂದೂ ಆದ್ರೂ ಪತ್ನಿಗೆ ಬುರ್ಖಾ ಹಾಕಿಸಿಲ್ಲ, ಹೆಸ್ರು ಬದಲಿಸಿಲ್ಲ ಮುಬಾರಕ್ ಅಲಿ

ತುಮಕೂರಿನ ಸಿದ್ದಗಂಗಾ ಮಠದಲ್ಲಿ ಸಮಾಜಸೇವೆಯಲ್ಲಿ ತೊಡಗಿರುವ ಮುಬಾರಕ್ ಅಲಿ, ತಮ್ಮ ಮಗಳನ್ನು ಹಿಂದೂ ಸಂಪ್ರದಾಯದಂತೆ ಹಿಂದೂ ಯುವಕನಿಗೆ ವಿವಾಹ ಮಾಡಿಕೊಟ್ಟಿದ್ದಾರೆ. ಜಾತಿಗಿಂತ ಮನುಷ್ಯತ್ವವೇ ಶ್ರೇಷ್ಠ ಎಂದು ನಂಬಿರುವ ಇವರು, ತಮ್ಮ ಮನೆಯಲ್ಲಿ ಸರ್ವಧರ್ಮಗಳನ್ನು ಪಾಲಿಸುತ್ತಾ ಮಾದರಿಯಾಗಿದ್ದಾರೆ.
Read Full Story

10:09 AM (IST) Mar 11

ಬನಶಂಕರಿ ಅಮ್ಮನವರ ಪ್ರಸಾದಕ್ಕೂ ತಟ್ಟಿದ ಯುದ್ಧದ ಬಿಸಿ, ಭಕ್ತಾದಿಗಳಿಗೆ ಸಿಗೋದಿಲ್ಲ ಪ್ರಸಾದ!

ಇರಾನ್-ಇಸ್ರೇಲ್ ಯುದ್ಧದಿಂದ ಉಂಟಾದ ಎಲ್‌ಪಿಜಿ ಸಿಲಿಂಡರ್ ಕೊರತೆಯು ಬೆಂಗಳೂರಿನ ಪ್ರಸಿದ್ಧ ಬನಶಂಕರಿ ದೇವಾಲಯದ ಮೇಲೂ ಗಂಭೀರ ಪರಿಣಾಮ ಬೀರಿದೆ. ಗ್ಯಾಸ್ ಸಿಲಿಂಡರ್‌ಗಳ ಪೂರೈಕೆ ಕಡಿಮೆಯಾದ ಕಾರಣ, ಸಾವಿರಾರು ಭಕ್ತರಿಗೆ ಪ್ರತಿದಿನ ನೀಡಲಾಗುತ್ತಿದ್ದ ಅನ್ನಪ್ರಸಾದ ಸೇವೆಯು ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ.
Read Full Story

09:42 AM (IST) Mar 11

ಧಗ ಧಗನೆ ಹೊತ್ತಿ ಉರಿದ ಹೊಸಪೇಟೆಯ ತಾಲೂಕು ಪಂಚಾಯತಿ - ಹಲವು ದಾಖಲೆಗಳು ಬೆಂಕಿಗಾಹುತಿ

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಿಂದಾಗಿ ಹಲವು ಹಳೆಯ ದಾಖಲೆಗಳು ಮತ್ತು ಪೀಠೋಪಕರಣಗಳು ಸುಟ್ಟು ಕರಕಲಾಗಿವೆ. ಇದು ಕಿಡಿಗೇಡಿಗಳ ಕೃತ್ಯವೇ ಅಥವಾ ಉದ್ದೇಶಪೂರ್ವಕ ಘಟನೆಯೇ ಎಂಬ ಕೋನದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Read Full Story

09:36 AM (IST) Mar 11

ಕೂಲಿ ಕೆಲಸ ಮುಗಿಸಿ ನಡೆದು ಹೋಗುತ್ತಿದ್ದ ವ್ಯಕ್ತಿಗೆ ಜಾಡಿಸಿ ಒದ್ದ ಕುದುರೆ, ಬಡಪಾಯಿ ದುರಂತ ಸಾವು!

ಬೀದರ್‌ನ ಮೈಲೂರ್ ರಸ್ತೆಯಲ್ಲಿ ಕೂಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೈಜನಾಥ ಎಂಬ 60 ವರ್ಷದ ವ್ಯಕ್ತಿಗೆ ಕುದುರೆಯೊಂದು ಒದ್ದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಹೈದರಾಬಾದ್‌ಗೆ ಸಾಗಿಸುವ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ. 

Read Full Story

09:30 AM (IST) Mar 11

ಬೆಂಗಳೂರಿನಲ್ಲಿ ಗ್ಯಾಸ್ ಸಂಕಷ್ಟ - ಹೋಟೆಲ್‌ ಬಂದ್‌, ಪಿಜಿಗಳಲ್ಲಿ ಊಟ ನಿಲ್ಲಿಸಿದ ಮಾಲೀಕರು! ಊಟಕ್ಕೇನು ಮಾಡೋದು?

ಬೆಂಗಳೂರಿನಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆಯು ಹೋಟೆಲ್‌ ಮತ್ತು ಪಿಜಿಗಳ ಮೇಲೆ ತೀವ್ರ ಪರಿಣಾಮ ಬೀರಿದೆ. ಇದರಿಂದಾಗಿ ಹಲವು ಹೋಟೆಲ್‌ಗಳು ಬಂದ್ ಆಗುವ ಸ್ಥಿತಿಯಲ್ಲಿದ್ದು, ಪಿಜಿಗಳಲ್ಲಿ ಮಧ್ಯಾಹ್ನದ ಊಟ ಸ್ಥಗಿತಗೊಂಡಿದೆ, ಇದು ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳಿಗೆ ತೊಂದರೆ ಉಂಟುಮಾಡಿದೆ.
Read Full Story

08:52 AM (IST) Mar 11

ಬೆಲೆ ಏರಿಕೆ, ಪೂರೈಕೆ ಕೊರತೆ - ಸ್ಮಾರ್ಟ್‌ ಆಗಿ ಅಡುಗೆ ಮಾಡಿ ಜಾಣರಾಗಿ ಹಣ ಉಳಿಸಿಕೊಳ್ಳಿ

ಇರಾನ್-ಇಸ್ರೇಲ್ ಯುದ್ಧದಿಂದಾಗಿ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿದೆ ಮತ್ತು 25 ದಿನಗಳ ಬುಕಿಂಗ್ ನಿಯಮ ಜಾರಿಯಾಗಿದೆ. ಬೆಲೆ ಏರಿಕೆ ಮತ್ತು ಸಿಲಿಂಡರ್ ಕೊರತೆ ಎರಡೂ ಒಟ್ಟಿಗೆ ಬಂದಾಗ, ಹಳೆಯ ದಾರಿ ಬಿಟ್ಟು ಹೊಸ ಮತ್ತು ಅಗ್ಗದ ದಾರಿ ಹಿಡಿಯುವುದೇ ಜಾಣತನ.

Read Full Story

08:29 AM (IST) Mar 11

Bengaluru - ಬೆಂಗಳೂರಿನ ಶೇಷಾದ್ರಿಪುರಂ ರೈಲ್ವೆ ಅಂಡರ್‌ಪಾಸ್‌ನಲ್ಲಿ ಕಳಚಿಬಿದ್ದ ಶೀಟ್

ಬೆಳಗ್ಗೆ ಈ ಘಟನೆ ನಡೆದಿದ್ದರಿಂದ ಶೇಷಾದ್ರಿಪುರಂ ಅಂಡರ್‌ಪಾಸ್ ಮಾರ್ಗವಾಗಿ ತೆರಳುತ್ತಿದ್ದ ಜನರಿಗೆ ಟ್ರಾಫಿಕ್ ಬಿಸಿತಾಗಿತ್ತು. ಟ್ರಾಫಿಕ್ ಪೊಲೀಸರು ಮತ್ತು ರೈಲ್ವೇ ಸಿಬ್ಬಂದಿ ಜೊತೆಯಾಗಿ ಟ್ರಾಫಿಕ್ ನಿಯಂತ್ರಣ ಮಾಡಿದರು.

Read Full Story

08:20 AM (IST) Mar 11

ಆ್ಯಸಿಡ್‌ ದಾಳಿ ಸಂತ್ರಸ್ತರಿಗೆ ಮಾಸಿಕ 50 ಸಾವಿರ ಪಿಂಚಣಿ - ಗೃಹಸಚಿವ ಪರಮೇಶ್ವರ್ ಭರವಸೆ

ಆ್ಯಸಿಡ್ ದಾಳಿ ಸಂತ್ರಸ್ತೆಯರಿಗೆ ನೀಡುವ ಮಾಸಿಕ ಪಿಂಚಣಿಯನ್ನು 10 ಸಾವಿರದಿಂದ 50 ಸಾವಿರಕ್ಕೆ ಹೆಚ್ಚಿಸಲು ಸರ್ಕಾರ ಮುಂದಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಭರವಸೆ ನೀಡಿದ್ದಾರೆ. ಇದರೊಂದಿಗೆ, ಸಂತ್ರಸ್ತೆಯರಿಗೆ ಉಚಿತ ಮನೆ, ಸಾಲವನ್ನು ಅನುದಾನವಾಗಿ ಪರಿವರ್ತಿಸುವುದ..  ಮಹತ್ವದ ಕ್ರಮ ಘೋಷಿಸಲಾಗಿದೆ.

Read Full Story

08:01 AM (IST) Mar 11

'ಸುಮ್ಮನೆ ಬಿಟ್ರೆ ಚಾಳಿ ಮುಂದುವರಿಸ್ತಾರೆ' - ದರ್ಶನ್‌ ಫ್ಯಾನ್ಸ್‌ ವಿರುದ್ಧ ದೂರು, ಕೋರ್ಟಲ್ಲಿ ಸಾಕ್ಷ್ಯ ನುಡಿದ ರಮ್ಯಾ

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿ, ಅತ್ಯಾ೧ಚಾರ ಹಾಗೂ ಜೀವ ಬೆದರಿಕೆ ಹಾಕಿದ ನಟ ದರ್ಶನ್‌ ಅಭಿಮಾನಿಗಳ ವಿರುದ್ಧ ದಾಖಲಿಸಿದ್ದ ದೂರಿಗೆ ಸಂಬಂಧಿಸಿದಂತೆ ನಟಿ ರಮ್ಯಾ ನ್ಯಾಯಾಲಯಕ್ಕೆ ಹಾಜರಾಗಿ ಸಾಕ್ಷ್ಯ ದಾಖಲಿಸಿದ್ದಾರೆ. ಹೆಣ್ಣುಮಕ್ಕಳಿಗೆ ಬೆದರಿಕೆ ಹಾಕುವವರಿಗೆ ಭಯ ಬರಬೇಕು ಹೀಗಾಗಿ ಈ ಕೇಸ್ ಎಂದಿದ್ದಾರೆ.

Read Full Story

07:53 AM (IST) Mar 11

ಗುಟ್ಕಾ, ಪಾನ್ ತಿಂದು ಹಲ್ಲಿನ ಬಣ್ಣ ಕೊಳಕಾಗಿದೆಯಾ? ಹಲ್ಲು ಫಳಫಳ ಹೊಳೆಯಲು ಮಾಡುವ ಟಿಪ್ಸ್

ಗುಟ್ಕಾ, ಪಾನ್ ಮಸಾಲಾದಿಂದ ಉಂಟಾದ ಹಲ್ಲುಗಳ ಮೇಲಿನ ಹಳದಿ ಕಲೆಗಳನ್ನು ತೆಗೆದುಹಾಕಲು ಈ ಲೇಖನವು ಪರಿಣಾಮಕಾರಿ ಮನೆಮದ್ದನ್ನು ವಿವರಿಸುತ್ತದೆ. ಮೂರು ವಸ್ತು ಬಳಸಿ ತಯಾರಿಸಿದ ಮಿಶ್ರಣವನ್ನು ಏಳು ದಿನಗಳ ಕಾಲ ಬಳಸುವುದರಿಂದ ಹಲ್ಲುಗಳನ್ನು ಮತ್ತೆ ಫಳಫಳ ಹೊಳೆಯುವಂತೆ ಮಾಡಬಹುದು.

Read Full Story

07:23 AM (IST) Mar 11

ರಸ್ತೆ ಡಾಂಬರೀಕರಣಕ್ಕೆ ಪ್ಲಾಸ್ಟಿಕ್ ಕಸ ಬಳಕೆ

ನಗರದಲ್ಲಿ ಸಂಗ್ರಹವಾಗುವ ಪ್ಲಾಸ್ಟಿಕ್ ಕಸವನ್ನು ರಸ್ತೆ ಡಾಂಬರೀಕರಣಕ್ಕೆ ಬಳಸಲಾಗುತ್ತದೆ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ತಿಳಿಸಿದ್ದಾರೆ. ಸ್ವಚ್ಛ ಸರ್ವೇಕ್ಷಣಾ 2025-26 ಅಂಗವಾಗಿ ಮಂಗಳವಾರ ಅಂಜನಾಪುರ ವಾರ್ಡ್‌ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಪೌರ ಕಾರ್ಮಿಕರೊಂದಿಗೆ ‘ಚಹಾ ಸಂವಾದ ನಡೆಸಿ ಮಾತನಾಡಿದರು

Read Full Story

07:16 AM (IST) Mar 11

Bengaluru drug bust - ಡ್ರಗ್ಸ್ ಮಾಫಿಯಾ ವಿರುದ್ಧ ನಿಲ್ಲದಬೇಟೆ - ಐವರು ಪೆಡ್ಲರ್‌ಗಳ ಬಂಧನ

ಬೆಂಗಳೂರಿನಲ್ಲಿ ಪೊಲೀಸರು ಮತ್ತು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಬೃಹತ್ ಕಾರ್ಯಾಚರಣೆಯಲ್ಲಿ ಐವರು ಡ್ರಗ್ಸ್ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ. ಕೆಂಪೇಗೌಡ ವಿಮಾನ ನಿಲ್ದಾಣ ಹಾಗೂ ನಗರದ ಇತರೆಡೆ ನಡೆದ ದಾಳಿಗಳಲ್ಲಿ ಒಟ್ಟು 5.73 ಕೋಟಿ ರೂಪಾಯಿ ಮೌಲ್ಯದ ಹೈಡ್ರೋ ಗಾಂಜಾ ಮತ್ತು ಗಾಂಜಾವನ್ನು ವಶಕ್ಕೆ

Read Full Story

07:12 AM (IST) Mar 11

ಗೌಡ್ರ ಬಲವಂತಕ್ಕೆ ವಿತ್ತ ಸಚಿವನಾಗಿದ್ದೆ - ನಂಬಿಕಸ್ಥ ಬೇಕು ಅಂತ ವಿತ್ತ ಸಚಿವ ಮಾಡಿದ್ರು - ಸಿದ್ದು

1994ರಲ್ಲಿ ದೇವೇಗೌಡರು ತಮ್ಮನ್ನು ಬಲವಂತವಾಗಿ ವಿತ್ತ ಸಚಿವರನ್ನಾಗಿ ಮಾಡಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸದನದಲ್ಲಿ ಸ್ಮರಿಸಿಕೊಂಡರು. ತಮಗೆ ಕಂದಾಯ ಇಲಾಖೆಯ ಆಸಕ್ತಿ ಇದ್ದರೂ, ನಂಬಿಕಸ್ಥ ವ್ಯಕ್ತಿ ಬೇಕೆಂಬ ಕಾರಣಕ್ಕೆ ದೇವೇಗೌಡರು ಆರ್ಥಿಕ ಇಲಾಖೆಯನ್ನು ನೀಡಿದರೆಂದು ಅವರು ವಿವರಿಸಿದರು.
Read Full Story

More Trending News