ಧಾರವಾಡ: ಹುಬ್ಬಳ್ಳಿಯಲ್ಲಿರುವ ನೈಋತ್ಯ ರೈಲ್ವೆ ಗಾಲ್ಫ್ ಮೈದಾನದಲ್ಲಿದ್ದ ಬನ್ನಿ ಮಹಾಂಕಾಳಿದೇವಿ ದೇವಸ್ಥಾನ ಹಾಗೂ 5 ಅಡಿ ಎತ್ತರದ ಸ್ವಾಮಿ ವಿವೇಕಾನಂದರ ಪುತ್ಥಳಿ ತೆರವು ಮಾಡಿರುವುದನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ಕಾರ್ಯಕರ್ತರು ರೈಲ್ವೆ ಕಚೇರಿಗೆ ಮುತ್ತಿಗೆ ಹಾಕಿ, ಡಿಆರ್ಎಂ ಕಚೇರಿಯಲ್ಲಿನ ನಾಮಫಲಕ ಕಿತ್ತು ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಆರ್ಪಿಎಫ್ ಅಧಿಕಾರಿಗಳ ನಡುವೆ ವಾಗ್ವಾದ ನಡೆದು ಬಿಗುವಿನ ವಾತಾವರಣ ನಿರ್ಮಾಣವಾಯಿತು.
ಮಂಗಳವಾರ ವಾಯು ವಿಹಾರಕ್ಕೆ ಹೋದಾಗ ದೇಗುಲ ತೆರವು ಮಾಡುತ್ತಿರುವುದನ್ನು ನೋಡಿದ ಸಾರ್ವಜನಿಕರು ಪ್ರತಿಭಟಿಸಿದ್ದಾರೆ. ಮಧ್ಯಾಹ್ನ ಹಿಂದೂಗಳು ಒಗ್ಗೂಡಿ ತೆರವು ಜಾಗದಲ್ಲಿ ರೈಲ್ವೆ ಇಲಾಖೆ ಅಧಿಕಾರಿಗಳ ನಡೆ ಖಂಡಿಸಿದರು. ಆ ಬಳಿಕ ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗೀಯ ಕಚೇರಿಗೆ ತೆರಳಿದ ಪ್ರತಿಭಟನಾಕಾರರು, ವಿಭಾಗೀಯ ವ್ಯವಸ್ಥಾಪಕಿ ಬೇಲಾ ಮೀನಾ ಕಚೇರಿಗೆ ಮುತ್ತಿಗೆ ಹಾಕಿ, ನಾಮಫಲಕ ಕಿತ್ತೊಗೆದರು.
ಹಿಂದೂ ದೇವಸ್ಥಾನ ತೆಗೆದಿರುವುದು ಮೂರ್ಖತನದ ಪರಮಾವಧಿ. ಶನಿವಾರದೊಳಗೆ ದೇವಸ್ಥಾನ ಹಾಗೂ ಪುತ್ಥಳಿ ಪುನರ್ ಸ್ಥಾಪಿಸಬೇಕು. ಇಲ್ಲವಾದರೆ ಉಗ್ರ ಹೋರಾಟ ಮಾಡುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
09:42 AM (IST) Mar 11
09:36 AM (IST) Mar 11
ಬೀದರ್ನ ಮೈಲೂರ್ ರಸ್ತೆಯಲ್ಲಿ ಕೂಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೈಜನಾಥ ಎಂಬ 60 ವರ್ಷದ ವ್ಯಕ್ತಿಗೆ ಕುದುರೆಯೊಂದು ಒದ್ದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಹೈದರಾಬಾದ್ಗೆ ಸಾಗಿಸುವ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ.
09:30 AM (IST) Mar 11
08:52 AM (IST) Mar 11
ಇರಾನ್-ಇಸ್ರೇಲ್ ಯುದ್ಧದಿಂದಾಗಿ ಎಲ್ಪಿಜಿ ಸಿಲಿಂಡರ್ ಬೆಲೆ ಏರಿದೆ ಮತ್ತು 25 ದಿನಗಳ ಬುಕಿಂಗ್ ನಿಯಮ ಜಾರಿಯಾಗಿದೆ. ಬೆಲೆ ಏರಿಕೆ ಮತ್ತು ಸಿಲಿಂಡರ್ ಕೊರತೆ ಎರಡೂ ಒಟ್ಟಿಗೆ ಬಂದಾಗ, ಹಳೆಯ ದಾರಿ ಬಿಟ್ಟು ಹೊಸ ಮತ್ತು ಅಗ್ಗದ ದಾರಿ ಹಿಡಿಯುವುದೇ ಜಾಣತನ.
08:29 AM (IST) Mar 11
ಬೆಳಗ್ಗೆ ಈ ಘಟನೆ ನಡೆದಿದ್ದರಿಂದ ಶೇಷಾದ್ರಿಪುರಂ ಅಂಡರ್ಪಾಸ್ ಮಾರ್ಗವಾಗಿ ತೆರಳುತ್ತಿದ್ದ ಜನರಿಗೆ ಟ್ರಾಫಿಕ್ ಬಿಸಿತಾಗಿತ್ತು. ಟ್ರಾಫಿಕ್ ಪೊಲೀಸರು ಮತ್ತು ರೈಲ್ವೇ ಸಿಬ್ಬಂದಿ ಜೊತೆಯಾಗಿ ಟ್ರಾಫಿಕ್ ನಿಯಂತ್ರಣ ಮಾಡಿದರು.
08:20 AM (IST) Mar 11
ಆ್ಯಸಿಡ್ ದಾಳಿ ಸಂತ್ರಸ್ತೆಯರಿಗೆ ನೀಡುವ ಮಾಸಿಕ ಪಿಂಚಣಿಯನ್ನು 10 ಸಾವಿರದಿಂದ 50 ಸಾವಿರಕ್ಕೆ ಹೆಚ್ಚಿಸಲು ಸರ್ಕಾರ ಮುಂದಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಭರವಸೆ ನೀಡಿದ್ದಾರೆ. ಇದರೊಂದಿಗೆ, ಸಂತ್ರಸ್ತೆಯರಿಗೆ ಉಚಿತ ಮನೆ, ಸಾಲವನ್ನು ಅನುದಾನವಾಗಿ ಪರಿವರ್ತಿಸುವುದ.. ಮಹತ್ವದ ಕ್ರಮ ಘೋಷಿಸಲಾಗಿದೆ.
08:01 AM (IST) Mar 11
ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿ, ಅತ್ಯಾ೧ಚಾರ ಹಾಗೂ ಜೀವ ಬೆದರಿಕೆ ಹಾಕಿದ ನಟ ದರ್ಶನ್ ಅಭಿಮಾನಿಗಳ ವಿರುದ್ಧ ದಾಖಲಿಸಿದ್ದ ದೂರಿಗೆ ಸಂಬಂಧಿಸಿದಂತೆ ನಟಿ ರಮ್ಯಾ ನ್ಯಾಯಾಲಯಕ್ಕೆ ಹಾಜರಾಗಿ ಸಾಕ್ಷ್ಯ ದಾಖಲಿಸಿದ್ದಾರೆ. ಹೆಣ್ಣುಮಕ್ಕಳಿಗೆ ಬೆದರಿಕೆ ಹಾಕುವವರಿಗೆ ಭಯ ಬರಬೇಕು ಹೀಗಾಗಿ ಈ ಕೇಸ್ ಎಂದಿದ್ದಾರೆ.
07:53 AM (IST) Mar 11
ಗುಟ್ಕಾ, ಪಾನ್ ಮಸಾಲಾದಿಂದ ಉಂಟಾದ ಹಲ್ಲುಗಳ ಮೇಲಿನ ಹಳದಿ ಕಲೆಗಳನ್ನು ತೆಗೆದುಹಾಕಲು ಈ ಲೇಖನವು ಪರಿಣಾಮಕಾರಿ ಮನೆಮದ್ದನ್ನು ವಿವರಿಸುತ್ತದೆ. ಮೂರು ವಸ್ತು ಬಳಸಿ ತಯಾರಿಸಿದ ಮಿಶ್ರಣವನ್ನು ಏಳು ದಿನಗಳ ಕಾಲ ಬಳಸುವುದರಿಂದ ಹಲ್ಲುಗಳನ್ನು ಮತ್ತೆ ಫಳಫಳ ಹೊಳೆಯುವಂತೆ ಮಾಡಬಹುದು.
07:23 AM (IST) Mar 11
ನಗರದಲ್ಲಿ ಸಂಗ್ರಹವಾಗುವ ಪ್ಲಾಸ್ಟಿಕ್ ಕಸವನ್ನು ರಸ್ತೆ ಡಾಂಬರೀಕರಣಕ್ಕೆ ಬಳಸಲಾಗುತ್ತದೆ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ತಿಳಿಸಿದ್ದಾರೆ. ಸ್ವಚ್ಛ ಸರ್ವೇಕ್ಷಣಾ 2025-26 ಅಂಗವಾಗಿ ಮಂಗಳವಾರ ಅಂಜನಾಪುರ ವಾರ್ಡ್ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಪೌರ ಕಾರ್ಮಿಕರೊಂದಿಗೆ ‘ಚಹಾ ಸಂವಾದ ನಡೆಸಿ ಮಾತನಾಡಿದರು
07:16 AM (IST) Mar 11
ಬೆಂಗಳೂರಿನಲ್ಲಿ ಪೊಲೀಸರು ಮತ್ತು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಬೃಹತ್ ಕಾರ್ಯಾಚರಣೆಯಲ್ಲಿ ಐವರು ಡ್ರಗ್ಸ್ ಪೆಡ್ಲರ್ಗಳನ್ನು ಬಂಧಿಸಲಾಗಿದೆ. ಕೆಂಪೇಗೌಡ ವಿಮಾನ ನಿಲ್ದಾಣ ಹಾಗೂ ನಗರದ ಇತರೆಡೆ ನಡೆದ ದಾಳಿಗಳಲ್ಲಿ ಒಟ್ಟು 5.73 ಕೋಟಿ ರೂಪಾಯಿ ಮೌಲ್ಯದ ಹೈಡ್ರೋ ಗಾಂಜಾ ಮತ್ತು ಗಾಂಜಾವನ್ನು ವಶಕ್ಕೆ
07:12 AM (IST) Mar 11