LIVE NOW
Published : Mar 11, 2026, 06:55 AM ISTUpdated : Mar 11, 2026, 09:41 AM IST

Karnataka News Live: ಧಗ ಧಗನೆ ಹೊತ್ತಿ ಉರಿದ ಹೊಸಪೇಟೆಯ ತಾಲೂಕು ಪಂಚಾಯತಿ - ಹಲವು ದಾಖಲೆಗಳು ಬೆಂಕಿಗಾಹುತಿ

ಸಾರಾಂಶ

ಧಾರವಾಡ: ಹುಬ್ಬಳ್ಳಿಯಲ್ಲಿರುವ ನೈಋತ್ಯ ರೈಲ್ವೆ ಗಾಲ್ಫ್ ಮೈದಾನದಲ್ಲಿದ್ದ ಬನ್ನಿ ಮಹಾಂಕಾಳಿದೇವಿ ದೇವಸ್ಥಾನ ಹಾಗೂ 5 ಅಡಿ ಎತ್ತರದ ಸ್ವಾಮಿ ವಿವೇಕಾನಂದರ ಪುತ್ಥಳಿ ತೆರವು ಮಾಡಿರುವುದನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ಕಾರ್ಯಕರ್ತರು ರೈಲ್ವೆ ಕಚೇರಿಗೆ ಮುತ್ತಿಗೆ ಹಾಕಿ, ಡಿಆರ್‌ಎಂ ಕಚೇರಿಯಲ್ಲಿನ ನಾಮಫಲಕ ಕಿತ್ತು ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಆರ್‌ಪಿಎಫ್‌ ಅಧಿಕಾರಿಗಳ ನಡುವೆ ವಾಗ್ವಾದ ನಡೆದು ಬಿಗುವಿನ ವಾತಾವರಣ ನಿರ್ಮಾಣವಾಯಿತು.

ಮಂಗಳವಾರ ವಾಯು ವಿಹಾರಕ್ಕೆ ಹೋದಾಗ ದೇಗುಲ ತೆರವು ಮಾಡುತ್ತಿರುವುದನ್ನು ನೋಡಿದ ಸಾರ್ವಜನಿಕರು ಪ್ರತಿಭಟಿಸಿದ್ದಾರೆ. ಮಧ್ಯಾಹ್ನ ಹಿಂದೂಗಳು ಒಗ್ಗೂಡಿ ತೆರವು ಜಾಗದಲ್ಲಿ ರೈಲ್ವೆ ಇಲಾಖೆ ಅಧಿಕಾರಿಗಳ ನಡೆ ಖಂಡಿಸಿದರು. ಆ ಬಳಿಕ ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗೀಯ ಕಚೇರಿಗೆ ತೆರಳಿದ ಪ್ರತಿಭಟನಾಕಾರರು, ವಿಭಾಗೀಯ ವ್ಯವಸ್ಥಾಪಕಿ ಬೇಲಾ ಮೀನಾ ಕಚೇರಿಗೆ ಮುತ್ತಿಗೆ ಹಾಕಿ, ನಾಮಫಲಕ ಕಿತ್ತೊಗೆದರು.

ಹಿಂದೂ ದೇವಸ್ಥಾನ ತೆಗೆದಿರುವುದು ಮೂರ್ಖತನದ ಪರಮಾವಧಿ. ಶನಿವಾರದೊಳಗೆ ದೇವಸ್ಥಾನ ಹಾಗೂ ಪುತ್ಥಳಿ ಪುನರ್‌ ಸ್ಥಾಪಿಸಬೇಕು. ಇಲ್ಲವಾದರೆ ಉಗ್ರ ಹೋರಾಟ ಮಾಡುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

09:42 AM (IST) Mar 11

ಧಗ ಧಗನೆ ಹೊತ್ತಿ ಉರಿದ ಹೊಸಪೇಟೆಯ ತಾಲೂಕು ಪಂಚಾಯತಿ - ಹಲವು ದಾಖಲೆಗಳು ಬೆಂಕಿಗಾಹುತಿ

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಿಂದಾಗಿ ಹಲವು ಹಳೆಯ ದಾಖಲೆಗಳು ಮತ್ತು ಪೀಠೋಪಕರಣಗಳು ಸುಟ್ಟು ಕರಕಲಾಗಿವೆ. ಇದು ಕಿಡಿಗೇಡಿಗಳ ಕೃತ್ಯವೇ ಅಥವಾ ಉದ್ದೇಶಪೂರ್ವಕ ಘಟನೆಯೇ ಎಂಬ ಕೋನದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Read Full Story

09:36 AM (IST) Mar 11

ಕೂಲಿ ಕೆಲಸ ಮುಗಿಸಿ ನಡೆದು ಹೋಗುತ್ತಿದ್ದ ವ್ಯಕ್ತಿಗೆ ಜಾಡಿಸಿ ಒದ್ದ ಕುದುರೆ, ಬಡಪಾಯಿ ದುರಂತ ಸಾವು!

ಬೀದರ್‌ನ ಮೈಲೂರ್ ರಸ್ತೆಯಲ್ಲಿ ಕೂಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೈಜನಾಥ ಎಂಬ 60 ವರ್ಷದ ವ್ಯಕ್ತಿಗೆ ಕುದುರೆಯೊಂದು ಒದ್ದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಹೈದರಾಬಾದ್‌ಗೆ ಸಾಗಿಸುವ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ. 

Read Full Story

09:30 AM (IST) Mar 11

ಬೆಂಗಳೂರಿನಲ್ಲಿ ಗ್ಯಾಸ್ ಸಂಕಷ್ಟ - ಹೋಟೆಲ್‌ ಬಂದ್‌, ಪಿಜಿಗಳಲ್ಲಿ ಊಟ ನಿಲ್ಲಿಸಿದ ಮಾಲೀಕರು! ಊಟಕ್ಕೇನು ಮಾಡೋದು?

ಬೆಂಗಳೂರಿನಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆಯು ಹೋಟೆಲ್‌ ಮತ್ತು ಪಿಜಿಗಳ ಮೇಲೆ ತೀವ್ರ ಪರಿಣಾಮ ಬೀರಿದೆ. ಇದರಿಂದಾಗಿ ಹಲವು ಹೋಟೆಲ್‌ಗಳು ಬಂದ್ ಆಗುವ ಸ್ಥಿತಿಯಲ್ಲಿದ್ದು, ಪಿಜಿಗಳಲ್ಲಿ ಮಧ್ಯಾಹ್ನದ ಊಟ ಸ್ಥಗಿತಗೊಂಡಿದೆ, ಇದು ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳಿಗೆ ತೊಂದರೆ ಉಂಟುಮಾಡಿದೆ.
Read Full Story

08:52 AM (IST) Mar 11

ಬೆಲೆ ಏರಿಕೆ, ಪೂರೈಕೆ ಕೊರತೆ - ಸ್ಮಾರ್ಟ್‌ ಆಗಿ ಅಡುಗೆ ಮಾಡಿ ಜಾಣರಾಗಿ ಹಣ ಉಳಿಸಿಕೊಳ್ಳಿ

ಇರಾನ್-ಇಸ್ರೇಲ್ ಯುದ್ಧದಿಂದಾಗಿ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿದೆ ಮತ್ತು 25 ದಿನಗಳ ಬುಕಿಂಗ್ ನಿಯಮ ಜಾರಿಯಾಗಿದೆ. ಬೆಲೆ ಏರಿಕೆ ಮತ್ತು ಸಿಲಿಂಡರ್ ಕೊರತೆ ಎರಡೂ ಒಟ್ಟಿಗೆ ಬಂದಾಗ, ಹಳೆಯ ದಾರಿ ಬಿಟ್ಟು ಹೊಸ ಮತ್ತು ಅಗ್ಗದ ದಾರಿ ಹಿಡಿಯುವುದೇ ಜಾಣತನ.

Read Full Story

08:29 AM (IST) Mar 11

Bengaluru - ಬೆಂಗಳೂರಿನ ಶೇಷಾದ್ರಿಪುರಂ ರೈಲ್ವೆ ಅಂಡರ್‌ಪಾಸ್‌ನಲ್ಲಿ ಕಳಚಿಬಿದ್ದ ಶೀಟ್

ಬೆಳಗ್ಗೆ ಈ ಘಟನೆ ನಡೆದಿದ್ದರಿಂದ ಶೇಷಾದ್ರಿಪುರಂ ಅಂಡರ್‌ಪಾಸ್ ಮಾರ್ಗವಾಗಿ ತೆರಳುತ್ತಿದ್ದ ಜನರಿಗೆ ಟ್ರಾಫಿಕ್ ಬಿಸಿತಾಗಿತ್ತು. ಟ್ರಾಫಿಕ್ ಪೊಲೀಸರು ಮತ್ತು ರೈಲ್ವೇ ಸಿಬ್ಬಂದಿ ಜೊತೆಯಾಗಿ ಟ್ರಾಫಿಕ್ ನಿಯಂತ್ರಣ ಮಾಡಿದರು.

Read Full Story

08:20 AM (IST) Mar 11

ಆ್ಯಸಿಡ್‌ ದಾಳಿ ಸಂತ್ರಸ್ತರಿಗೆ ಮಾಸಿಕ 50 ಸಾವಿರ ಪಿಂಚಣಿ - ಗೃಹಸಚಿವ ಪರಮೇಶ್ವರ್ ಭರವಸೆ

ಆ್ಯಸಿಡ್ ದಾಳಿ ಸಂತ್ರಸ್ತೆಯರಿಗೆ ನೀಡುವ ಮಾಸಿಕ ಪಿಂಚಣಿಯನ್ನು 10 ಸಾವಿರದಿಂದ 50 ಸಾವಿರಕ್ಕೆ ಹೆಚ್ಚಿಸಲು ಸರ್ಕಾರ ಮುಂದಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಭರವಸೆ ನೀಡಿದ್ದಾರೆ. ಇದರೊಂದಿಗೆ, ಸಂತ್ರಸ್ತೆಯರಿಗೆ ಉಚಿತ ಮನೆ, ಸಾಲವನ್ನು ಅನುದಾನವಾಗಿ ಪರಿವರ್ತಿಸುವುದ..  ಮಹತ್ವದ ಕ್ರಮ ಘೋಷಿಸಲಾಗಿದೆ.

Read Full Story

08:01 AM (IST) Mar 11

'ಸುಮ್ಮನೆ ಬಿಟ್ರೆ ಚಾಳಿ ಮುಂದುವರಿಸ್ತಾರೆ' - ದರ್ಶನ್‌ ಫ್ಯಾನ್ಸ್‌ ವಿರುದ್ಧ ದೂರು, ಕೋರ್ಟಲ್ಲಿ ಸಾಕ್ಷ್ಯ ನುಡಿದ ರಮ್ಯಾ

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿ, ಅತ್ಯಾ೧ಚಾರ ಹಾಗೂ ಜೀವ ಬೆದರಿಕೆ ಹಾಕಿದ ನಟ ದರ್ಶನ್‌ ಅಭಿಮಾನಿಗಳ ವಿರುದ್ಧ ದಾಖಲಿಸಿದ್ದ ದೂರಿಗೆ ಸಂಬಂಧಿಸಿದಂತೆ ನಟಿ ರಮ್ಯಾ ನ್ಯಾಯಾಲಯಕ್ಕೆ ಹಾಜರಾಗಿ ಸಾಕ್ಷ್ಯ ದಾಖಲಿಸಿದ್ದಾರೆ. ಹೆಣ್ಣುಮಕ್ಕಳಿಗೆ ಬೆದರಿಕೆ ಹಾಕುವವರಿಗೆ ಭಯ ಬರಬೇಕು ಹೀಗಾಗಿ ಈ ಕೇಸ್ ಎಂದಿದ್ದಾರೆ.

Read Full Story

07:53 AM (IST) Mar 11

ಗುಟ್ಕಾ, ಪಾನ್ ತಿಂದು ಹಲ್ಲಿನ ಬಣ್ಣ ಕೊಳಕಾಗಿದೆಯಾ? ಹಲ್ಲು ಫಳಫಳ ಹೊಳೆಯಲು ಮಾಡುವ ಟಿಪ್ಸ್

ಗುಟ್ಕಾ, ಪಾನ್ ಮಸಾಲಾದಿಂದ ಉಂಟಾದ ಹಲ್ಲುಗಳ ಮೇಲಿನ ಹಳದಿ ಕಲೆಗಳನ್ನು ತೆಗೆದುಹಾಕಲು ಈ ಲೇಖನವು ಪರಿಣಾಮಕಾರಿ ಮನೆಮದ್ದನ್ನು ವಿವರಿಸುತ್ತದೆ. ಮೂರು ವಸ್ತು ಬಳಸಿ ತಯಾರಿಸಿದ ಮಿಶ್ರಣವನ್ನು ಏಳು ದಿನಗಳ ಕಾಲ ಬಳಸುವುದರಿಂದ ಹಲ್ಲುಗಳನ್ನು ಮತ್ತೆ ಫಳಫಳ ಹೊಳೆಯುವಂತೆ ಮಾಡಬಹುದು.

Read Full Story

07:23 AM (IST) Mar 11

ರಸ್ತೆ ಡಾಂಬರೀಕರಣಕ್ಕೆ ಪ್ಲಾಸ್ಟಿಕ್ ಕಸ ಬಳಕೆ

ನಗರದಲ್ಲಿ ಸಂಗ್ರಹವಾಗುವ ಪ್ಲಾಸ್ಟಿಕ್ ಕಸವನ್ನು ರಸ್ತೆ ಡಾಂಬರೀಕರಣಕ್ಕೆ ಬಳಸಲಾಗುತ್ತದೆ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ತಿಳಿಸಿದ್ದಾರೆ. ಸ್ವಚ್ಛ ಸರ್ವೇಕ್ಷಣಾ 2025-26 ಅಂಗವಾಗಿ ಮಂಗಳವಾರ ಅಂಜನಾಪುರ ವಾರ್ಡ್‌ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಪೌರ ಕಾರ್ಮಿಕರೊಂದಿಗೆ ‘ಚಹಾ ಸಂವಾದ ನಡೆಸಿ ಮಾತನಾಡಿದರು

Read Full Story

07:16 AM (IST) Mar 11

Bengaluru drug bust - ಡ್ರಗ್ಸ್ ಮಾಫಿಯಾ ವಿರುದ್ಧ ನಿಲ್ಲದಬೇಟೆ - ಐವರು ಪೆಡ್ಲರ್‌ಗಳ ಬಂಧನ

ಬೆಂಗಳೂರಿನಲ್ಲಿ ಪೊಲೀಸರು ಮತ್ತು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಬೃಹತ್ ಕಾರ್ಯಾಚರಣೆಯಲ್ಲಿ ಐವರು ಡ್ರಗ್ಸ್ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ. ಕೆಂಪೇಗೌಡ ವಿಮಾನ ನಿಲ್ದಾಣ ಹಾಗೂ ನಗರದ ಇತರೆಡೆ ನಡೆದ ದಾಳಿಗಳಲ್ಲಿ ಒಟ್ಟು 5.73 ಕೋಟಿ ರೂಪಾಯಿ ಮೌಲ್ಯದ ಹೈಡ್ರೋ ಗಾಂಜಾ ಮತ್ತು ಗಾಂಜಾವನ್ನು ವಶಕ್ಕೆ

Read Full Story

07:12 AM (IST) Mar 11

ಗೌಡ್ರ ಬಲವಂತಕ್ಕೆ ವಿತ್ತ ಸಚಿವನಾಗಿದ್ದೆ - ನಂಬಿಕಸ್ಥ ಬೇಕು ಅಂತ ವಿತ್ತ ಸಚಿವ ಮಾಡಿದ್ರು - ಸಿದ್ದು

1994ರಲ್ಲಿ ದೇವೇಗೌಡರು ತಮ್ಮನ್ನು ಬಲವಂತವಾಗಿ ವಿತ್ತ ಸಚಿವರನ್ನಾಗಿ ಮಾಡಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸದನದಲ್ಲಿ ಸ್ಮರಿಸಿಕೊಂಡರು. ತಮಗೆ ಕಂದಾಯ ಇಲಾಖೆಯ ಆಸಕ್ತಿ ಇದ್ದರೂ, ನಂಬಿಕಸ್ಥ ವ್ಯಕ್ತಿ ಬೇಕೆಂಬ ಕಾರಣಕ್ಕೆ ದೇವೇಗೌಡರು ಆರ್ಥಿಕ ಇಲಾಖೆಯನ್ನು ನೀಡಿದರೆಂದು ಅವರು ವಿವರಿಸಿದರು.
Read Full Story

More Trending News