ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ರಾಜ್ಯದ ಮುಜರಾಯಿ ಇಲಾಖೆ ಆಧೀನದ ಪ್ರಸಿದ್ಧ ನಾಗಾರಾಧನೆಯ ಪುಣ್ಯ ಕ್ಷೇತ್ರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯವು 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ ₹167 ಕೋಟಿ ಆದಾಯ ಗಳಿಸಿದೆ. 2025ರ ಏ.1ರಿಂದ 2026ರ ಮಾ.31ರ ತನಕದ ಆರ್ಥಿಕ ವರ್ಷದಲ್ಲಿ ದೇವಳಕ್ಕೆ ಈ ಆದಾಯ ಲಭಿಸಿದೆ. ಇದರಲ್ಲಿ ಒಟ್ಟು ₹85.20 ಕೋಟಿ ಖರ್ಚಾಗಿದೆ. 2024-2025ನೇ ಸಾಲಿನಲ್ಲಿ ₹155 ಕೋಟಿ ಆದಾಯ ಗಳಿಸಿತ್ತು. ಈ ಬಾರಿ ₹167 ಕೋಟಿ ಆದಾಯ ಗಳಿಸುವ ಮೂಲಕ ಈ ಆರ್ಥಿಕ ವರ್ಷದಲ್ಲಿ ಕಳೆದ ಆರ್ಥಿಕ ವರ್ಷದಿಂದ ಸುಮಾರು ₹12 ಕೋಟಿ ಅಧಿಕ ಆದಾಯ ಗಳಿಸಿದೆ. ಈ ಮೂಲಕ ಸತತ 15ನೇ ವರ್ಷ ಆದಾಯ ಗಳಿಕೆಯಲ್ಲಿ ನಂ.1 ಮುಜರಾಯಿ ದೇವಸ್ಥಾನವಾಗಿ ಹೊರಹೊಮ್ಮಿದೆ.

07:26 AM (IST) May 11
ಅನಾರೋಗ್ಯದಿಂದ ವಿಧಿವಶರಾದ ಸಚಿವ ಡಿ ಸುಧಾಕರ್ ಅಂತ್ಯಕ್ರಿಯೆ ಇಂದು ನಡೆಯಲಿದೆ. ಆದೆರೆ ಸಚಿವ ಭಾಗವಹಿಸಿದ್ದ ಕೊನೆಯ ಕಾರ್ಯಕ್ರಮದಲ್ಲಿ ಸಾವಿನ ಕುರಿತು ಮಾರ್ಮಿಕವಾಗಿ ಮಾತನಾಡಿದ್ದರು. ಈ ವಿಡಿಯೋ ವೈರಲ್ ಆಗಿದೆ.
06:43 AM (IST) May 11
06:35 AM (IST) May 11
ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ 3000ಕ್ಕೂ ಅಧಿಕ ಪುರಾತನ ಕುರುಹುಗಳು ಪತ್ತೆಯಾಗಿದ್ದು, ಇದು ದೇಶದಲ್ಲೇ ಅತಿ ಹೆಚ್ಚು ಪ್ರಾಚ್ಯಾವಶೇಷಗಳನ್ನು ಹೊಂದಿದ ಗ್ರಾಮವಾಗುವತ್ತ ಸಾಗಿದೆ. ಇತ್ತೀಚಿನ ಉತ್ಖನನದಲ್ಲಿ 9-10ನೇ ಶತಮಾನದ ರಾಷ್ಟ್ರಕೂಟರ ಕಾಲದ ಅಪರೂಪದ ವೀರಗಲ್ಲು ಕೂಡ ಪತ್ತೆಯಾಗಿದೆ
06:12 AM (IST) May 11
05:51 AM (IST) May 11
05:41 AM (IST) May 11
05:34 AM (IST) May 11
05:29 AM (IST) May 11
05:21 AM (IST) May 11