ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ನಾಗರೀಕರ ರಕ್ಷಣಾ ಕಾರ್ಯಚಟುವಟಿಕೆಗಳ ಕುರಿತು ರಾಜ್ಯದ ಹಿರಿಯ ಪೋಲಿಸ್ ಅಧಿಕಾರಿಗಳು, ಎಲ್ಲಾ ಮಹಾನಗರಗಳ ಆಯುಕ್ತರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ವಿಡಿಯೋ ಸಂವಾದ ನಡೆಸಿದರು. ಗೃಹ ಸಚಿವರಾದ ಡಾ ಜಿ ಪರಮೇಶ್ವರ್, ಗ್ರಾಮೀಣಾಭಿವೃದ್ಧಿ ಸಚಿವರಾದ ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವರು ಸಭೆಯಲ್ಲಿ ಭಾಗಿಯಾಗಿದ್ದರು. ರಾಜ್ಯದಲ್ಲಿ ಸುಳ್ಳು ಸುದ್ದಿಗಳಿಗೆ ಕಡ್ಡಾಯವಾಗಿ ಕಡಿವಾಣ ಹಾಕಬೇಕು. ಅಗತ್ಯ ಬಿದ್ದರೆ ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹರಡುವುದನ್ನು ತಪ್ಪಿಸಲು ಕಟ್ಟೆಚ್ಚರ ವಹಿಸಬೇಕು. ರಾಜ್ಯದ ಕಾನೂನು ಸುವ್ಯವಸ್ಥೆಗಿಂತ ಯಾವುದೂ ದೊಡ್ಡದಲ್ಲ. ರಾಜ್ಯದ ಜನರ ರಕ್ಷಣೆಗೆ ಮೊದಲ ಆಧ್ಯತೆ ನೀಡಬೇಕು. ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ವರದಿ ನೀಡಬೇಕು. ಪ್ರಮುಖ ಸ್ಥಳಗಳಲ್ಲಿ Mock Drill ಮಾಡಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ.

11:39 AM (IST) May 11
ಹನಿಮೂನ್ ಮೊಟಕುಗೊಳಿಸಿ ದೇಶಸೇವೆಯ ಪಣತೊಟ್ಟು ಯುದ್ಧ ಭೂಮಿಯತ್ತ ಹೊರಟ ಯೋಧನ ಕಾರ್ಯಕ್ಕೆ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದ ನಿವಾಸಿವಾದ ಯೋಧ ಜಯಂತ್ ಎಂಬುವವರೇ ಇದೀಗ ದೇಶಸೇವೆಗೆ ತೆರಳಿದ ಯೋಧ.
ಪೂರ್ತಿ ಓದಿ11:22 AM (IST) May 11
ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ಪರಿಸರ ಹದಗೆಡುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ, ಮಾಲಿನ್ಯ ತಪಾಸಣಾ ಯಂತ್ರೋಪಕರಣವುಳ್ಳ ಸುಸಜ್ಜಿತ ವಾಹನ ಇಲ್ಲೀಗ ಹರಿದಾಡುತ್ತಿದೆ.
ಪೂರ್ತಿ ಓದಿ10:19 AM (IST) May 11
‘ರಾಜ್ಯದಲ್ಲಿ ಜನರ ರಕ್ಷಣೆ ಹಾಗೂ ಭದ್ರತೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಪ್ರಮುಖ ಸ್ಥಳಗಳಲ್ಲಿ ಮಾಕ್ ಡ್ರಿಲ್ ನಿರ್ವಹಿಸಬೇಕು. ಜತೆಗೆ ರಾಜ್ಯದಲ್ಲಿ ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕಿ, ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಪೂರ್ತಿ ಓದಿ10:08 AM (IST) May 11
ರಾಜ್ಯದ ಗ್ರಾಪಂ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹ ಪ್ರಮಾಣ ಏರಿಕೆಯಾಗುತ್ತಿರುವ ರೀತಿಯಲ್ಲೇ, ತೆರಿಗೆ ಬಾಕಿ ಪ್ರಮಾಣವೂ ಹೆಚ್ಚಳವಾಗುತ್ತಿದೆ. 2024-25ನೇ ಸಾಲಿನ ಅಂತ್ಯಕ್ಕೆ ಬಾಕಿ ತೆರಿಗೆ ಪ್ರಮಾಣ 2,657.70 ಕೋಟಿ ರು. ತಲುಪಿದೆ.
ಪೂರ್ತಿ ಓದಿ10:06 AM (IST) May 11
ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸ್ನಾತಕೋತ್ತರ ವೈದ್ಯಕೀಯ ಕೋರ್ಸುಗಳ ಪ್ರವೇಶದಲ್ಲಿ ರಾಜ್ಯ ಅಥವಾ ನಿವಾಸಿ ಕೋಟಾ(ಡೊಮಿಸೈಲ್) ಮೀಸಲಾತಿ ರದ್ದಾಗುವ ಆತಂಕ ಎದುರಾಗಿರುವ ಬೆನ್ನಲ್ಲೇ, ಕೇಂದ್ರ ಸರ್ಕಾರ ಅದರಿಂದಾಗುವ ಪರಿಣಾಮಗಳ ಬಗ್ಗೆ ಕರ್ನಾಟಕ ಸೇರಿ ಎಲ್ಲಾ ರಾಜ್ಯಗಳ ಅಭಿಪ್ರಾಯ ಕೇಳಿದೆ.
09:55 AM (IST) May 11
ಕರ್ನಾಟಕದಲ್ಲಿ ಇವತ್ತು ಭಾನುವಾರ ಬಿಸಿಲು ಜಾಸ್ತಿ ಇರುತ್ತದೆ. ದಕ್ಷಿಣ ಒಳನಾಡಿನ ಬೆಂಗಳೂರು ಹಾಗೂ ಕರಾವಳಿಯ ಮಂಗಳೂರಿನ ಕೆಲವು ಕಡೆ ಮಳೆ ಬರಬಹುದು. ಗುಡುಗು-ಸಿಡಿಲು ಜೊತೆಗೆ ಮಳೆ ಬರುವ ಸಾಧ್ಯತೆ ಇದೆ.
ಪೂರ್ತಿ ಓದಿ08:59 AM (IST) May 11
ರಾಜ್ಯದಲ್ಲಿ ಅತಿ ಹೆಚ್ಚು ಶಿಸ್ತಿನಿಂದ ಬ್ಯಾಂಕು, ಸಹಕಾರಿ ಸಂಘಗಳಲ್ಲಿ ಸಾಲಗಳು ಮರುಪಾವತಿಯಾಗುವುದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶ್ಲಾಘಿಸಿದ್ದಾರೆ.
ಪೂರ್ತಿ ಓದಿ08:24 AM (IST) May 11
ಶುದ್ಧ ಕುಡಿಯುವ ನೀರಿನ ಘಟಕಗಳನ್ನು (ಆರ್ಒ) ಮೇಲ್ದರ್ಜೆಗೇರಿಸುವುದಕ್ಕೆ ಚಿಂತನೆ ನಡೆಸಿರುವ ಬೆಂಗಳೂರು ಜಲಮಂಡಳಿಯು, ದಿನದ 24 ಗಂಟೆ ಸೇವೆ ನೀಡುವುದರೊಂದಿಗೆ ನಾಣ್ಯ ಸಮಸ್ಯೆ ಪರಿಹಾರಕ್ಕೆ ಯುಪಿಐ ಪೇಮೆಂಟ್ ಸಿಸ್ಟಂ ಅಳವಡಿಕೆಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಪೂರ್ತಿ ಓದಿ08:05 AM (IST) May 11
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಕೃಷಿ ವಿಜ್ಞಾನಿ ಡಾ. ಸುಬ್ಬಣ್ಣ ಅಯ್ಯಪ್ಪನ್ ಅವರ ಶವ ಮೈಸೂರಿನ ಶ್ರೀರಂಗಪಟ್ಟಣದ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ. ಮೇ 7 ರಿಂದ ನಾಪತ್ತೆಯಾಗಿದ್ದ ಅವರ ಸಾವಿನ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪೂರ್ತಿ ಓದಿ06:21 AM (IST) May 11
ಕೇರಳಕ್ಕೆ ನೈಋತ್ಯ ಮಾನ್ಸೂನ್ ಮಳೆ ಮೇ.27ರಂದು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ವಾಡಿಕೆಯಂತೆ ಜೂ.1ರಂದು ಮಳೆ ಕೇರಳಕ್ಕೆ ಕಾಲಿಡುತ್ತದೆ.
ಪೂರ್ತಿ ಓದಿ05:35 AM (IST) May 11
ದೇಶ ಕಾಯುವ ಸೈನಿಕರ ಅಭಿವೃದ್ಧಿಗಾಗಿ 3 ಕೋಟಿ ರು.ನೀಡುವುದಾಗಿ ‘ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್’ ಸಂಸ್ಥಾಪಕ, ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ‘ಸಹಕಾರ ರತ್ನ’ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಘೋಷಿಸಿದ್ದಾರೆ.
ಪೂರ್ತಿ ಓದಿ05:00 AM (IST) May 11
ಸಹಕಾರಿ ತತ್ವಕ್ಕೆ ಮಹಿಳೆಯರು ಶಕ್ತಿ ತುಂಬುತ್ತಿದ್ದು, ಇದು ರಾಜ್ಯ ಹಾಗೂ ದೇಶದ ಅಭಿವೃದ್ಧಿಗೆ ಇನ್ನಷ್ಟು ಸಹಕಾರಿಯಾಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಪೂರ್ತಿ ಓದಿ