ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನಾದ್ಯಂತ ಸಂಚಲನ ಮೂಡಿಸಿದ್ದ ವಸಂತ ನಾಯ್ಕ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಜ್ಯೋತಿಷಿ ಕಮಲಾಕರ ಭಟ್ಟ ಹಾಗೂ ಸುಚಿತ್ರಾ ಸೇರಿದಂತೆ ಒಟ್ಟು ಐವರು ಆರೋಪಿಗಳಿಗೆ ಫೆ. 21ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಸಿದ್ದಾಪುರ ಜೆಎಂಎಫ್ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಬಂಧಿತ 8 ಆರೋಪಿಗಳ ಪೈಕಿ ಈ ಐವರ ನ್ಯಾಯಾಂಗ ಬಂಧನದ ಅವಧಿ ಬುಧವಾರಕ್ಕೆ ಮುಕ್ತಾಯವಾಗಿತ್ತು.
ಬುಧವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಐವರು ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಒಳಪಡಿಸಿದರು. ಬಳಿಕ, ನ್ಯಾಯಾಂಗ ಬಂಧನದ ಅವಧಿಯನ್ನು ಫೆ.21ರವರೆಗೆ ವಿಸ್ತರಿಸಿ, ಆದೇಶ ನೀಡಿದರು. ಉಳಿದ ಮೂವರು ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲಿದ್ದು, ಫೆ.13ಕ್ಕೆ ಅವರ ಪೊಲೀಸ್ ಕಸ್ಟಡಿಯ ಅವಧಿ ಮುಕ್ತಾಯವಾಗಲಿದೆ.
10:38 PM (IST) Feb 12
ರಿಷಬ್ ಶೆಟ್ಟಿ ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಹೋಗಿದ್ದ ರಂಜನ್, ಅನಿರೀಕ್ಷಿತವಾಗಿ 'ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು' ಚಿತ್ರದ ನಾಯಕನಾದರು. ನಟನೆಯಲ್ಲಿ ಆಸಕ್ತಿ ಇಲ್ಲದಿದ್ದರೂ, ಒಂದು ಸೆಲ್ಫಿ ಅದೃಷ್ಟವನ್ನೇ ಬದಲಿಸಿ, 'ದಡ್ಡ ಪ್ರವೀಣ' ಪಾತ್ರದ ಮೂಲಕ ಸಿನಿಮಾ ಹೀರೋ ಆಗಿ ರೂಪಿಸಿತು.
09:47 PM (IST) Feb 12
09:18 PM (IST) Feb 12
ಬಿಗ್ಬಾಸ್ 12ರ 2ನೇ ರನ್ನರ್ ಅಪ್ ಆದ ಅಶ್ವಿನಿ ಗೌಡ, ಫಲಿತಾಂಶದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದರೆ, ಈ ನೋವಿನ ನಡುವೆಯೂ ಬಿಗ್ಬಾಸ್ ತಮಗೊಂದು ಅಮೂಲ್ಯ ರತ್ನ ನೀಡಿದೆ ಎಂದು ಹೇಳಿದ್ದಾರೆ. ಏನದು ರತ್ನ?
09:02 PM (IST) Feb 12
ವಿಜಯಪುರ ಜಿಲ್ಲೆಯ ಬಬಲೇಶ್ವರ ಕ್ಷೇತ್ರದ ರೈತ ಎತ್ತರದ ಪ್ರದೇಶದಲ್ಲಿ ವೈಜ್ಞಾನಿಕವಾಗಿ ದ್ರಾಕ್ಷಿ ಬೆಳೆದು ಯಶಸ್ಸು ಕಂಡಿದ್ದಾರೆ. ತಮ್ಮ 4 ಎಕರೆ ಜಮೀನಿನಲ್ಲಿ ಸುಮಾರು 40-45 ಲಕ್ಷ ಆದಾಯದ ನಿರೀಕ್ಷೆಯಲ್ಲಿದ್ದು, ಅವರ ಈ ಸಾಧನೆಯನ್ನು ಸಚಿವ ಎಂ.ಬಿ. ಪಾಟೀಲ್ ಶ್ಲಾಘಿಸಿದ್ದಾರೆ.
08:50 PM (IST) Feb 12
ಬೆಂಗಳೂರಿನಲ್ಲಿ ಬಸ್ ಪಿಕ್ಅಪ್ ವಿಚಾರವಾಗಿ ನಡೆದ ಸಣ್ಣ ವಾಗ್ವಾದ, ಆಂಧ್ರಪ್ರದೇಶದಲ್ಲಿ ಹಲ್ಲೆಗೆ ಕಾರಣವಾಗಿದೆ. ತಡವಾಗಿ ಬಂದ ಮಹಿಳಾ ಪ್ರಯಾಣಿಕರೊಬ್ಬರು, ತಿರುಪತಿ ಬಳಿ ತನ್ನ ಸಂಬಂಧಿಕರು ಮತ್ತು ಸ್ಥಳೀಯರಿಂದ ಖಾಸಗಿ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿಸಿದ್ದಾರೆ.
08:43 PM (IST) Feb 12
ಚಳಿಗಾಲದ ನಂತರ ಬೆಂಗಳೂರಿನಲ್ಲಿ ಮೊಟ್ಟೆಯ ಬೆಲೆಗಳು ಪ್ರತಿ ಮೊಟ್ಟೆಗೆ 1.5 ರೂ.ಗಳಷ್ಟು ಇಳಿಕೆಯಾಗಿವೆ. ಹೆಚ್ಚುತ್ತಿರುವ ತಾಪಮಾನ ಮತ್ತು ಬೇಡಿಕೆ ಕಡಿಮೆಯಾಗಿರುವುದು ಈ ಕುಸಿತಕ್ಕೆ ಪ್ರಮುಖ ಕಾರಣವಾಗಿದೆ.
08:30 PM (IST) Feb 12
ಬೆಂಗಳೂರಿನ ಕೋರಮಂಗಲದಲ್ಲಿ 2BHK ಫ್ಲ್ಯಾಟ್ಗೆ ₹70,000 ಬಾಡಿಗೆ ಕೇಳಿದ್ದಕ್ಕೆ ಯುವತಿಯೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಕಳಪೆ ಮೂಲಸೌಕರ್ಯಗಳ ಬಗ್ಗೆ ಬೆಟ್ಟು ಮಾಡಿ, ಇಷ್ಟೊಂದು ಬಾಡಿಗೆ ಏಕೆ ಎಂದು ಪ್ರಶ್ನಿಸಿರುವ ಅವರ ಪೋಸ್ಟ್ ವೈರಲ್ ಆಗಿದೆ.
08:16 PM (IST) Feb 12
ಶಿವಮೊಗ್ಗ ನಗರವನ್ನು ಹಸಿರಾಗಿಸುವ ಮತ್ತು ಪರಿಸರ ಸಂರಕ್ಷಣೆ ಮಾಡುವ ಉದ್ದೇಶದಿಂದ, ಸೂಡಾ 43 ಕೋಟಿ ರು. ವೆಚ್ಚದಲ್ಲಿ 15 ಕೆರೆಗಳನ್ನು ಅಭಿವೃದ್ಧಿಪಡಿಸುತ್ತಿದೆ. ಹೂಳು ತೆಗೆಯುವುದು, ಸುತ್ತಲೂ ಗಿಡಗಳನ್ನು ನೆಡುವುದು ಮತ್ತು ಕೆಲವು ಕೆರೆಗಳನ್ನು ಐಲ್ಯಾಂಡ್ ಮಾದರಿಯಲ್ಲಿ ಅಭಿವೃದ್ಧಿಪಡಿಸುವುದು ಸೇರಿದೆ.
07:46 PM (IST) Feb 12
ಕೊಪ್ಪಳ ಜಿಲ್ಲೆಯ ಕಲಿಕೇರಿ ಗ್ರಾಮವು ಶಾತವಾಹನರು, ರಾಷ್ಟ್ರಕೂಟರು ಮತ್ತು ಚಾಲುಕ್ಯರ ಕಾಲದ ಐತಿಹಾಸಿಕ ಕುರುಹುಗಳನ್ನು ಹೊಂದಿದೆ. ಇಲ್ಲಿ ನಾಣ್ಯ ಟಂಕಸಾಲೆ ಇದ್ದ ಕುರುಹುಗಳಿದ್ದು, ಉತ್ಖನನ ನಡೆಸಲು ಕಂದಾಯ ಇಲಾಖೆಯು ಪ್ರಾಚ್ಯ ವಸ್ತು ಇಲಾಖೆಗೆ ಪತ್ರ ಬರೆದಿದೆ.
07:43 PM (IST) Feb 12
Mysore Silk Craze: Why People Queue at 4 AM for ₹2.5 Lakh Saris ಸೆಲ್ರಬ್ರಿಟಿ ಪ್ರಚಾರ ಅಥವಾ ಇನ್ಸ್ಟಾಗ್ರಾಮ್ ಟ್ರೆಂಡ್ ಹೊರತಾದ ಫ್ಯಾಶನಲ್ ಸೈಕಲ್ಗಿಂತ ಭಿನ್ನವಾಗಿ ಮೈಸೂರು ಸಿಲ್ಕ್ ಸಂಪೂರ್ಣವಾಗಿ ವಿಭಿನ್ನ ವರ್ಗದಲ್ಲಿ ಅಸ್ತಿತ್ವದಲ್ಲಿದೆ.
07:13 PM (IST) Feb 12
07:12 PM (IST) Feb 12
'ಬಿಕ್ಲು ಶಿವ' ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರನ್ನು ಸಿಐಡಿ ಪೊಲೀಸರು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ. ಅಹಮದಾಬಾದ್ನಿಂದ ಆಗಮಿಸುತ್ತಿದ್ದ ಅವರನ್ನು, ಹತ್ಯೆಯ ಆರೋಪಿಗಳೊಂದಿಗಿನ ನಂಟಿನ ಶಂಕೆಯ ಮೇಲೆ ವಿಚಾರಣೆಗಾಗಿ ಕರೆದೊಯ್ಯಲಾಗಿದೆ.
07:07 PM (IST) Feb 12
06:48 PM (IST) Feb 12
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (KREIS) ಅಧೀಕ್ಷಕ ಅಭಿಯಂತರ ಎಚ್.ಎಂ. ಜನಾರ್ಧನ್ ಅವರ ಮೇಲೆ ನಡೆದ ಲೋಕಾಯುಕ್ತ ದಾಳಿಯಲ್ಲಿ, ಅವರ ಆದಾಯಕ್ಕಿಂತ ಶೇ. 216ರಷ್ಟು ಅಧಿಕ ಅಕ್ರಮ ಆಸ್ತಿ ಪತ್ತೆಯಾಗಿದೆ. ಕೋಟ್ಯಂತರ ರೂ. ನಗದು, 34 ಎಕರೆ ಜಮೀನು, ಐಷಾರಾಮಿ ಮನೆಗಳು, ವಾಹನಗಳು ವಶಪಡಿಸಿಕೊಳ್ಳಲಾಗಿದೆ
06:35 PM (IST) Feb 12
06:26 PM (IST) Feb 12
$2,000 Flying Heartbreak: Valentine's Surprise Turns Into Financial Disaster ವ್ಯಾಲಂಟೈನ್ಸ್ ಡೇ ದಿನದಂದು ಪ್ರೇಯಸಿಗೆ ಸರ್ಪ್ರೈಸ್ ನೀಡಲು ಯುವಕನೊಬ್ಬ ತನ್ನ ಒಂದು ತಿಂಗಳ ಸಂಬಳವಾದ ₹1.6 ಲಕ್ಷವನ್ನು ಬಲೂನ್ಗಳಿಗೆ ಕಟ್ಟಿ ನೀಡುತ್ತಾನೆ.
06:09 PM (IST) Feb 12
ಬಿಜೆಪಿ ಸರ್ಕಾರಕ್ಕಿಂತ ಸಿದ್ದರಾಮಯ್ಯ ಸರ್ಕಾರದಲ್ಲಿ ಹೆಚ್ಚು ಭ್ರಷ್ಟಾಚಾರವಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ಆರೋಪಿಸಿದ್ದಾರೆ. ರಾಜ್ಯಾದ್ಯಂತ 37 ಸಾವಿರ ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದ್ದು, ಹಣ ಬಿಡುಗಡೆ ಮಾಡದ ಸರ್ಕಾರದ ವಿರುದ್ಧ ಮಾರ್ಚ್ 5 ರಂದು ಬೃಹತ್ ಹೋರಾಟ ಎಂದಿದ್ದಾರೆ
05:25 PM (IST) Feb 12
Sameer Sm Youtube: ಕನ್ನಡ ಯುಟ್ಯೂಬರ್ ಸ್ಯಾಮ್ ಸಮೀರ್ ಅವರು ಹುಡುಗಿಯ ಜನ್ಮದಿನವನ್ನು ಆಚರಿಸಿದ್ದರು. ಆ ವಿಡಿಯೋವನ್ನು ಅವರು ಯುಟ್ಯೂಬ್ನಲ್ಲಿ ಅಪ್ಲೋಡ್ ಮಾಡಿದರೂ ಕೂಡ ಮುಖವನ್ನು ತೋರಿಸಿಲ್ಲ. ಇದಕ್ಕೆ ಕಾರಣ ಏನು ಎಂದು ಹೇಳಿದ್ದಾರೆ.
05:09 PM (IST) Feb 12
SM Krishna's Name for Mysore-Magadi Road Link (MAR) ಮಾರ್ಚ್ ಅಂತ್ಯದ ವೇಳೆಗೆ MAR ಉದ್ಘಾಟನೆಗೊಳ್ಳುವ ಸಾಧ್ಯತೆ ಇದೆ. ಇದು PRR-2 ಅನ್ನು ಸಂಪರ್ಕಿಸುತ್ತದೆ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಹೆಸರನ್ನು ಇದಕ್ಕೆ ಇಡುವ ತೀರ್ಮಾನ ಮಾಡಲಾಗಿದೆ.
05:05 PM (IST) Feb 12
ಬೆಂಗಳೂರಿನ ಸಂಜಯನಗರದಲ್ಲಿ, ನಿರ್ಲಕ್ಷ್ಯದ ಚಾಲನೆಯಿಂದ ಕಾರಿನ ಚಕ್ರಕ್ಕೆ ಸಿಲುಕಿ ರಾಕಿ ಅಲಿಯಾಸ್ ಕರಿಯಾ ಎಂಬ ಬೀದಿ ನಾಯಿ ಸಾವನ್ನಪ್ಪಿದೆ. ಈ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ, ಸ್ಥಳೀಯರ ದೂರಿನ ಮೇರೆಗೆ ಕಾರು ಚಾಲಕನ ವಿರುದ್ಧ ಸಂಜಯನಗರ ಸಂಚಾರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
04:46 PM (IST) Feb 12
ಮಂಗಳ ಸಂಚಾರ: ಮಿಥುನ ರಾಶಿಗೆ ಮಂಗಳನ ಪ್ರವೇಶ ಬಹಳ ಅಪರೂಪದ ಘಟನೆ. ಇದು ಕೆಲವು ರಾಶಿಯವರ ಸಂಪತ್ತು ಮತ್ತು ಸೌಕರ್ಯವನ್ನು ಹೆಚ್ಚಿಸುತ್ತದೆ. ಅದೃಷ್ಟ ದುಪ್ಪಟ್ಟಾಗಲಿದ್ದು, ಆದಾಯವೂ ಹೆಚ್ಚಾಗಲಿದೆ.
04:42 PM (IST) Feb 12
04:36 PM (IST) Feb 12
Actress Rashmi Prabhakar Photos: ಲಕ್ಷ್ಮೀ ಬಾರಮ್ಮ ಧಾರಾವಾಹಿ ನಟಿ ರಶ್ಮಿ ಪ್ರಭಾಕರ್ ಅವರು ಮಗನಿಗೆ ಹೆಸರು ಇಡುವ ಖುಷಿಯಲ್ಲಿದ್ದಾರೆ. ಮಗನ ಮುದ್ದಾದ ಫೋಟೋಗಳನ್ನು ಕೂಡ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
04:11 PM (IST) Feb 12
ಬೆಂಗಳೂರಿನಲ್ಲಿ ಬೈಕ್ ವ್ಹೀಲಿಂಗ್ ಮಾಡಿ, ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಮಾಡಲು ಯತ್ನಿಸಿದ ಯುವಕನನ್ನು ರಾಜಾಜಿನಗರ ಸಂಚಾರ ಪೊಲೀಸರು ಬಂಧಿಸಿದ್ದಾರೆ. ಈತನನ್ನು ಸ್ಥಳೀಯರು ಸನ್ಮಾನಿಸಿದ್ದರು, ಆದರೆ ವಿಡಿಯೋ ಆಧರಿಸಿ ಪೊಲೀಸರು ಆತನನ್ನು ಬಂಧಿಸಿ ಬೈಕ್ ವಶಪಡಿಸಿಕೊಂಡಿದ್ದಾರೆ.
04:08 PM (IST) Feb 12
03:47 PM (IST) Feb 12
ಹೆಬ್ಬಾಳ-ಸರ್ಜಾಪುರ ಮೆಟ್ರೋ ಮತ್ತು ಡಬಲ್ ಡೆಕ್ಕರ್ ಫ್ಲೈಓವರ್ ಯೋಜನೆಗೆ ಕೇಂದ್ರ ಅನುಮತಿ ನಿರಾಕರಿಸಿದೆ ಎಂಬ ವರದಿಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಈ ಯೋಜನೆಯನ್ನು ಕೇಂದ್ರವೇ ಪ್ರಸ್ತಾಪಿಸಿದ್ದು, ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡಲು ಇದು ಅತ್ಯಗತ್ಯವಾಗಿದೆ.
03:43 PM (IST) Feb 12
Heineken Layoffs 2026: World’s No. 2 Brewer to Cut 6,000 Jobs ಜಾಗತಿಕ ಬ್ರೂವರ್ ಕಂಪನಿಯಾದ ಹೈನೆಕೆನ್, ವಿಶ್ವಾದ್ಯಂತ 6,000 ಉದ್ಯೋಗ ಕಡಿತವನ್ನು ಘೋಷಿಸಿದೆ. 2026ರಲ್ಲಿ ಕಂಪನಿಯ ಲಾಭದಲ್ಲಿ ಇಳಿಮುಖವಾಗಬಹುದು ಎನ್ನುವ ಮುನ್ಸೂಚನೆಯ ಬೆನ್ನಲ್ಲಿಯೇ ಈ ಕ್ರಮ ಕೈಗೊಳ್ಳಲಾಗಿದೆ.
03:35 PM (IST) Feb 12
ವ್ಯಾಲೆಂಟೈನ್ಸ್ ಡೇ ಪ್ರಯುಕ್ತ ಪ್ರೇಯಸಿಯೊಂದಿಗೆ ಶಾಪಿಂಗ್ ಮಾಲ್ಗೆ ಬಂದಿದ್ದ ಪತಿಯನ್ನ ಪತ್ನಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾಳೆ. ಈ ಘಟನೆಯಲ್ಲಿ, ಪತ್ನಿಯ ಆಕ್ರೋಶಕ್ಕೆ ಹೆದರಿದ ಪತಿರಾಯ, ಪ್ರೇಯಸಿಯನ್ನು ಅಲ್ಲೇ ಬಿಟ್ಟು ಓಡಿಹೋಗಿದ್ದಾನೆ. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
02:57 PM (IST) Feb 12
ಹಾವೇರಿ ಜಿಲ್ಲೆಯ ಬಸನಕಟ್ಟಿ ಗ್ರಾಮದಲ್ಲಿ, ರೇಷ್ಮೆ ಸಾಕಾಣಿಕೆ ಮಾಡುತ್ತಿದ್ದ ಹನುಮವ್ವ ಪಾಟೀಲ್ ಎಂಬ ವಯೋವೃದ್ಧ ರೈತ ಮಹಿಳೆಯ ಲಕ್ಷಾಂತರ ಮೌಲ್ಯದ ರೇಷ್ಮೆ ಹುಳುಗಳಿಗೆ ದುಷ್ಕರ್ಮಿಗಳು ವಿಷವಿಕ್ಕಿದ್ದಾರೆ. ಗೂಡು ಕಟ್ಟುವ ಹಂತದಲ್ಲಿದ್ದ ಹುಳುಗಳು ವಿಷಪೂರಿತ ಸೊಪ್ಪು ತಿಂದು ಸಾವನ್ನಪ್ಪಿದೆ.
02:44 PM (IST) Feb 12
02:40 PM (IST) Feb 12
Unmarried Kannada actresses: ಕನ್ನಡ ಧಾರಾವಾಹಿ, ಸಿನಿಮಾಗಳಲ್ಲಿ ಅತ್ತೆ, ತಾಯಿ, ಅಜ್ಜಿ ಪಾತ್ರಕ್ಕೆ ಬಣ್ಣ ಹಚ್ಚಿರೋ ನಟಿಯರು, ರಿಯಲ್ ಆಗಿ ಮದುವೆಯಾಗಿಲ್ಲ. ಅವರು ಹಾಗೆಯೇ ಸಿಂಗಲ್ ಆಗಿ ಉಳಿದುಕೊಂಡಿದ್ದಾರೆ. ಹಾಗಾದರೆ ಅವರು ಯಾರು? ಯಾರು?
02:14 PM (IST) Feb 12
01:43 PM (IST) Feb 12
ಬೆಂಗಳೂರಿನ ಟೌನ್ ಹಾಲ್ ಬಳಿ ನಡೆದ ಭಾರತ್ ಬಂದ್ ಪ್ರತಿಭಟನೆಯು ಪೊಲೀಸ್ ಮತ್ತು ಪ್ರತಿಭಟನಾಕಾರರ ಸಂಘರ್ಷಕ್ಕೆ ಕಾರಣವಾಯಿತು. ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲು ಪೊಲೀಸರು ಪ್ರಯಾಣಿಕರಿದ್ದ ಬಿಎಂಟಿಸಿ ಬಸ್ಸನ್ನು ಬಳಸಿಕೊಂಡಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಯಿತು.
01:19 PM (IST) Feb 12
ಜೀ ಕನ್ನಡದ ಜನಪ್ರಿಯ 'ಕರ್ಣ' ಸೀರಿಯಲ್ ಟಿಆರ್ಪಿಯಲ್ಲಿ ಮುಂಚೂಣಿಯಲ್ಲಿದೆ. ಈ ಲೇಖನವು ಸೀರಿಯಲ್ನ ಶೂಟಿಂಗ್ ಸೆಟ್ನಲ್ಲಿ ಒಂದು ದಿನ ಹೇಗೆ ಕಳೆಯುತ್ತದೆ ಮತ್ತು ತೆರೆಮರೆಯಲ್ಲಿ ಏನೆಲ್ಲಾ ನಡೆಯುತ್ತದೆ ಎಂಬುದರ ಕುತೂಹಲಕಾರಿ ನೋಟವನ್ನು ನೀಡುತ್ತದೆ.
01:00 PM (IST) Feb 12
Astrologer Kamalakar Bhat: ಜ್ಯೋತಿಷಿ ಕಮಲಾಕರ್ ಭಟ್ ಅವರಿಂದ ನನಗೆ ಮಾರಕ ರೋಗ ಬಂದಿದೆ ಎಂದು ಸಂತ್ರಸ್ತೆಯೋರ್ವರು ಮಾಧ್ಯಮದ ಮುಂದೆ ಬಂದು ಹೇಳಿದ್ದಾರೆ. ನನಗೆ ಕಮಲಾಕರ್ ಭಟ್ ಅವರು ತಾಳಿ ಕಟ್ಟಿದ್ದಾರೆ ಎಂದು ಆ ಮಹಿಳೆ ಆರೋಪ ಮಾಡಿದ್ದಾರೆ.
12:46 PM (IST) Feb 12
12:12 PM (IST) Feb 12
Nanda Gokula Kannada Serial Priya: ನಂದಗೋಕುಲ ಧಾರಾವಾಹಿಯಲ್ಲಿ ಪ್ರಿಯಾ ಪಾತ್ರದಿಂದ ಇಡೀ ಮನೆಗೆ ಸಮಸ್ಯೆ ಆಗುವ ಎಲ್ಲ ಲಕ್ಷಣ ಕಾಣುತ್ತಿದೆ. ನಂದಕುಮಾರ್ ಆರಿಸಿದ ಈ ಸೊಸೆಯು ಮನೆಗೆ ಕೊಳ್ಳಿ ಇಡುವ ಎಲ್ಲ ಲಕ್ಷಣಗಳು ಕಾಣುತ್ತಿವೆ. ಪ್ರಿಯಾ ಪಾತ್ರಧಾರಿ ಯಾರು?
11:59 AM (IST) Feb 12
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಹೆಬ್ಬಾಳ–ಸರ್ಜಾಪುರ ಮೆಟ್ರೋ (ರೆಡ್ ಲೈನ್)ಯೋಜನೆಗೆ ಕೇಂದ್ರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಡಬಲ್ ಡೆಕ್ಕರ್ ಫ್ಲೈಓವರ್ ನಿರ್ಮಾಣದಿಂದ ಮೆಟ್ರೋ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗುವ ಕಾರಣ ನೀಡಿ, ₹28,405 ಕೋಟಿ ವೆಚ್ಚದ ಡಿಪಿಆರ್ ಅನ್ನು ಮರುಪರಿಶೀಲನೆಗೆ ಕಳುಹಿಸಿದೆ.
11:56 AM (IST) Feb 12
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ಆಯೋಜಿಸುವ ಕುರಿತು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯುತ್ತಿದೆ. ಸುರಕ್ಷತಾ ಕ್ರಮಗಳು ಮತ್ತು ಸಂಭಾವ್ಯ ಕಾನೂನು ಸವಾಲುಗಳ ಬಗ್ಗೆ ಚರ್ಚೆ. ಸಂಜೆ ನಡೆಯಲಿರುವ ಸಂಪುಟ ಸಭೆಯಲ್ಲಿ ಅಂತಿಮ ನಿರ್ಧಾರ?
11:47 AM (IST) Feb 12
Ayush Upendra Movie: ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ, ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಅವರ ಪುತ್ರ ಆಯುಷ್ ಉಪೇಂದ್ರ ನಾಯಕನಾಗಿ ನಟಿಸುತ್ತಿರುವ ಚಿತ್ರ ಸದ್ದಿಲ್ಲದೆ ಪ್ರಾರಂಭವಾಗಿದೆ. ಈ ಮೂಲಕ ಆಯಷ್ ಉಪೇಂದ್ರ ಸ್ಯಾಂಡಲ್ವುಡ್ಗೆ ನಾಯಕನಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ.