ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನಾದ್ಯಂತ ಸಂಚಲನ ಮೂಡಿಸಿದ್ದ ವಸಂತ ನಾಯ್ಕ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಜ್ಯೋತಿಷಿ ಕಮಲಾಕರ ಭಟ್ಟ ಹಾಗೂ ಸುಚಿತ್ರಾ ಸೇರಿದಂತೆ ಒಟ್ಟು ಐವರು ಆರೋಪಿಗಳಿಗೆ ಫೆ. 21ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಸಿದ್ದಾಪುರ ಜೆಎಂಎಫ್ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಬಂಧಿತ 8 ಆರೋಪಿಗಳ ಪೈಕಿ ಈ ಐವರ ನ್ಯಾಯಾಂಗ ಬಂಧನದ ಅವಧಿ ಬುಧವಾರಕ್ಕೆ ಮುಕ್ತಾಯವಾಗಿತ್ತು.
ಬುಧವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಐವರು ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಒಳಪಡಿಸಿದರು. ಬಳಿಕ, ನ್ಯಾಯಾಂಗ ಬಂಧನದ ಅವಧಿಯನ್ನು ಫೆ.21ರವರೆಗೆ ವಿಸ್ತರಿಸಿ, ಆದೇಶ ನೀಡಿದರು. ಉಳಿದ ಮೂವರು ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲಿದ್ದು, ಫೆ.13ಕ್ಕೆ ಅವರ ಪೊಲೀಸ್ ಕಸ್ಟಡಿಯ ಅವಧಿ ಮುಕ್ತಾಯವಾಗಲಿದೆ.
11:47 AM (IST) Feb 12
Ayush Upendra Movie: ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ, ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಅವರ ಪುತ್ರ ಆಯುಷ್ ಉಪೇಂದ್ರ ನಾಯಕನಾಗಿ ನಟಿಸುತ್ತಿರುವ ಚಿತ್ರ ಸದ್ದಿಲ್ಲದೆ ಪ್ರಾರಂಭವಾಗಿದೆ. ಈ ಮೂಲಕ ಆಯಷ್ ಉಪೇಂದ್ರ ಸ್ಯಾಂಡಲ್ವುಡ್ಗೆ ನಾಯಕನಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ.
11:30 AM (IST) Feb 12
Bigg Boss Kannada Season 12 Kavya Shaiva: ಬಿಗ್ ಬಾಸ್ ಕನ್ನಡ ಸೀಸನ್ 12 ಶೋ ಮುಗಿದು, ತಿಂಗಳಾಗುತ್ತ ಬಂತು, ಹೀಗಿದ್ದರೂ ಕೂಡ ಕಾವ್ಯ ಶೈವ ಅವರನ್ನು ಭೇಟಿ ಮಾಡೋಕೆ ಆಗಿಲ್ಲ ಎಂದು ಓರ್ವ ವ್ಯಕ್ತಿ ನೊಂದುಕೊಂಡಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ. ಲೇಖನ ಓದಿ.
11:27 AM (IST) Feb 12
ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆ ಖಂಡಿಸಿ ಕೇಂದ್ರ ಸರ್ಕಾರದ ಮೌನವನ್ನು ಪ್ರಶ್ನಿಸಿದ್ದಾರೆ. ಕರ್ನಾಟಕದಲ್ಲಿ ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರಹಾಕುವಂತೆ ಆಗ್ರಹಿಸಿದ ಅವರು, ಪಾಕಿಸ್ತಾನದೊಂದಿಗಿನ ಟಿ-20 ಕ್ರಿಕೆಟ್ ಪಂದ್ಯವನ್ನು ಬಹಿಷ್ಕರಿಸಲು ಆಗ್ರಹಿಸಿದರು.
11:13 AM (IST) Feb 12
10:33 AM (IST) Feb 12
ಬೀದರ್ ಜಿಲ್ಲೆಯ ಯುವಕನೊಬ್ಬ ಫೇಸ್ಬುಕ್ ಲೈವ್ನಲ್ಲಿ ಹಿಂದೂ ದೇವತೆಗಳಾದ ಶ್ರೀರಾಮ, ಶ್ರೀಕೃಷ್ಣ ಮತ್ತು ಮಹಾತ್ಮ ಗಾಂಧೀಜಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾನೆ. ಈ ಘಟನೆಯಿಂದಾಗಿ ಹಿಂದೂ ಸಂಘಟನೆಗಳು ಮತ್ತು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.
10:12 AM (IST) Feb 12
10:05 AM (IST) Feb 12
Kannada Serials: ಬ್ರಹ್ಮಗಂಟು, ಶ್ರಾವಣಿ ಸುಬ್ರಹ್ಮಣ್ಯ, ಚಿಕ್ಕೆಜಮಾನಿ, ಪುಟ್ಟಕ್ಕನ ಮಕ್ಕಳು ಧಾರಾವಾಹಿಗಳು ಅಂತ್ಯ ಆಗುತ್ತಿವೆ ಎನ್ನಲಾಗಿದೆ. ಇದರ ಜೊತೆಗೆ ಕೆಲ ಸೀರಿಯಲ್ಗಳು ಕ್ಲೈಮ್ಯಾಕ್ಸ್ ಎಪಿಸೋಡ್ ಥರ ಪ್ರಸಾರ ಆಗುತ್ತವೆ. ಹಾಗಾದರೆ ಇದಕ್ಕೆಲ್ಲ ಕಾರಣ ಏನು?
09:43 AM (IST) Feb 12
ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಅಧಿಕಾರಿಗಳು, ಶಿವಮೊಗ್ಗ, ಧಾರವಾಡ ಮತ್ತು ದಾವಣಗೆರೆಯಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬೆಸ್ಕಾಂ ಎಇಇ ಅರ್ಜುನ ಆರ್.ಹೆಚ್. ಮತ್ತು ಸರ್ವೇಯರ್ ಸೋಮಲಿಂಗಪ್ಪ ಅವರ ನಿವಾಸ, ಕಚೇರಿ ಹಾಗೂ ಫಾರ್ಮ್ ಹೌಸ್ಗಳ ಮೇಲೆ ದಾಳಿ ನಡೆಸಿದ್ದಾರೆ.
08:27 AM (IST) Feb 12
ಬಳ್ಳಾರಿ ನಗರದಲ್ಲಿ ಪೊಲೀಸರು ಅಕ್ರಮ ದಂಧೆಗಳ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿದ್ದು, ಕಳೆದ ಒಂದು ತಿಂಗಳಲ್ಲಿ ಮಟ್ಕಾ, ಜೂಜಾಟ ಸೇರಿದಂತೆ 127 ಪ್ರಕರಣಗಳನ್ನು ದಾಖಲಿಸಿದ್ದಾರೆ. ಈ ಪೊಲೀಸ್ ದಾಳಿಯಿಂದಾಗಿ ಅನೇಕ ದಂಧೆಕೋರರು ಊರು ಬಿಟ್ಟು ತಲೆಮರೆಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಕಾರ್ಯಾಚರಣೆ.
08:14 AM (IST) Feb 12
07:45 AM (IST) Feb 12
ನಾಯಕತ್ವ ಬದಲಾವಣೆಯ ಕುರಿತಾದ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ತಾವೂ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬದ್ಧರಾಗಿರುತ್ತೇವೆ ಎಂದು ಸ್ಪಷ್ಟಪಡಿಸಿದ್ದು, ಈ ಬಗ್ಗೆ ಪದೇ ಪದೇ ಪ್ರಶ್ನೆ ಕೇಳದಂತೆ ಮಾಧ್ಯಮಗಳಿಗೆ ಮನವಿ .
07:45 AM (IST) Feb 12
ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳದ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ಡಾ.ಬಿ.ಡಿ.ಭೂಕಾಂತ್ ಅವರಿಗೆ ನೀಡಲಾಗಿದ್ದ ರಾಜ್ಯ ಸಚಿವ ಸ್ಥಾನಮಾನ ಹಿಂಪಡೆದು ರಾಜ್ಯ ಸರ್ಕಾರ ಆದೇಶಿಸಿದೆ.
07:34 AM (IST) Feb 12
ಕರ್ನಾಟಕ ರಾಜ್ಯ ಹಿಮೋಫಿಲಿಯಾ ಸೊಸೈಟಿ ಕಾರ್ಯದರ್ಶಿ, ಸ್ವತಃ ಕುಸುಮ ರೋಗ ಪೀಡಿತ ಡಾ.ಸುರೇಶ ಹನಗವಾಡಿ ಕಳೆದ 4 ದಶಕದಿಂದ ಕುಸುಮ ರೋಗಿಗಳ ಸೇವೆಗಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದಾರೆ.
07:16 AM (IST) Feb 12
07:11 AM (IST) Feb 12
ನಿವೃತ್ತ ಭಾರತೀಯ ಸೇನಾ ಮುಖ್ಯಸ್ಥ ಜ. ಎಂ.ಎಂ. ನರವಣೆ ಅವರ ಅಪ್ರಕಟಿತ ಆತ್ಮಕಥೆ ‘ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ’ ಆತ್ಮಚರಿತ್ರೆ ಭಾರೀ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ. ಏನಿದು ವಿವಾದ? ಪುಸ್ತಕದಲ್ಲಿ ಅಂಥದ್ದೇನಿದೆ? ರಾಹುಲ್ ಗಾಂಧಿ ಆರೋಪವೇನು? ಇತ್ಯಾದಿಗಳ ಮಾಹಿತಿ ಇಲ್ಲಿದೆ.