LIVE NOW
Published : Jul 12, 2026, 06:39 AM ISTUpdated : Jul 12, 2026, 08:51 AM IST

Karnataka News Live: 0-4 ಅಂತರದ ಹೀನಾಯ ಸೋಲು -ಕ್ಯಾಪ್ಟನ್ ಶ್ರೇಯಸ್ ಅಯ್ಯರ್ ಗೂಬೆ ಕೂರಿಸಿದ್ದು ಯಾರ ಮೇಲೆ?

ಸಾರಾಂಶ

ಗದಗ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಳೆದ 40 ದಿನಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳದೇ ಕಾಣೆ ಆಗಿದ್ದರಿಂದಲೇ ರಾಜ್ಯದ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗಿದೆ. ಆದರೆ, ರಾಜ್ಯ ನಾಯಕರು ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದ ಚರ್ಚೆಯಲ್ಲೇ ಮಗ್ನರಾಗಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವ್ಯಂಗ್ಯವಾಡಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿಶೇಷ ಮತದಾರರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಕುರಿತು ರಾಜ್ಯ ಸರ್ಕಾರ ಅನಗತ್ಯ ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿದೆ. ಕಷ್ಟದ ಪರಿಸ್ಥಿತಿಯಲ್ಲೂ ಬಿಎಲ್‌ಒಗಳು ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿದ್ದು, ಮತದಾರರ ನೋಂದಣಿ ನಮೂನೆಗಳು ಮನೆ ಮನೆಗೆ ತಲುಪುವಂತೆ ಜಿಲ್ಲಾಧಿಕಾರಿಗಳು ಗಮನಹರಿಸಬೇಕು ಎಂದರು.

08:51 AM (IST) Jul 12

0-4 ಅಂತರದ ಹೀನಾಯ ಸೋಲು -ಕ್ಯಾಪ್ಟನ್ ಶ್ರೇಯಸ್ ಅಯ್ಯರ್ ಗೂಬೆ ಕೂರಿಸಿದ್ದು ಯಾರ ಮೇಲೆ?

ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸಿರೀಸ್‌ನಲ್ಲಿ ಟೀಂ ಇಂಡಿಯಾ ಒಂದೇ ಒಂದು ಮ್ಯಾಚ್ ಗೆಲ್ಲಲಿಲ್ಲ. ಸೋಲಿನ ಬೆನ್ನಲ್ಲೇ ಕ್ರಿಕೆಟ್ ಅಭಿಮಾನಿಗಳು ಭಾರೀ ನಿರಾಸೆಗೊಂಡಿದ್ದಾರೆ. ಇನ್ನು ಸೋಲಿಗೆ ನಾಯಕ ಅಯ್ಯರ್, ಮೈದಾನದ ಮೇಲೆ ಗೂಬೆ ಕೂರಿಸಿದ್ದಾರೆ.

Read Full Story

07:53 AM (IST) Jul 12

ಎಸ್. ಜಾನಕಿ ಕೊನೆಯಾಸೆ & ಕೊನೆ ಕ್ಷಣ ಹೇಗಿತ್ತು? ಕೇರ್‌ಟೇಕರ್ ನವೀನ್ ಬಿಚ್ಚಿಟ್ಟ ರಹಸ್ಯ

ಗಾಯಕಿ ಎಸ್. ಜಾನಕಿ ಅವರ ಕೇರ್‌ಟೇಕರ್ ನವೀನ್, ಅವರ ಅಂತಿಮ ದಿನಗಳ ಬಗ್ಗೆ ಮಾತನಾಡಿದ್ದಾರೆ. ಜಾನಕಿಯವರಿಗೆ ಮೈಸೂರಿನಲ್ಲೇ ಪ್ರಾಣ ಬಿಡುವ ಆಸೆಯಿತ್ತು ಮತ್ತು ಆಸ್ಪತ್ರೆಗೆ ಹೋಗಲು ಭಯಪಡುತ್ತಿದ್ದರು ಎಂದು ನವೀನ್ ಬಹಿರಂಗಪಡಿಸಿದ್ದಾರೆ. ಅವರ ಅಂತ್ಯಕ್ರಿಯೆ ಮೈಸೂರಿನಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ನಡೆಯಲಿದೆ.
Read Full Story

07:43 AM (IST) Jul 12

ಜಾನಕಿಯಂತಹ ಗಾಯಕಿ ಬೇರೊಬ್ಬರು ಇಲ್ಲ.. ಅವರ ಹಾಡು ಕೇಳುವ ಕಾಲದಲ್ಲಿ ನಾವಿದ್ದೇವು ಅನ್ನುವುದೇ ಅದೃಷ್ಟ - - ಅನಂತನಾಗ್

ಹಿರಿಯ ನಟ ಅನಂತನಾಗ್ ಅವರು ಗಾಯಕಿ ಎಸ್. ಜಾನಕಿ ಅವರೊಂದಿಗಿನ ತಮ್ಮ ಒಡನಾಟವನ್ನು ಸ್ಮರಿಸಿಕೊಂಡಿದ್ದಾರೆ. 'ಬಯಲುದಾರಿ' ಚಿತ್ರದಿಂದ ಆರಂಭವಾದ ತಮ್ಮ ಪಯಣ, ತಮ್ಮ ನೂರಕ್ಕೂ ಹೆಚ್ಚು ಚಿತ್ರಗಳಿಗೆ ಜಾನಕಿ ಹಾಡಿರುವುದನ್ನು ನೆನೆದಿದ್ದಾರೆ. ಅವರ ದೈವಿಕ ವ್ಯಕ್ತಿತ್ವ, ಮಂತ್ರಮುಗ್ಧಗೊಳಿಸುವ ಗಾಯನ ಕೊಂಡಾಡಿದ್ದಾರೆ.

Read Full Story

07:42 AM (IST) Jul 12

1400 ರೈತರಿಗೆ ಹಸು ಖರೀದಿಸಲು 2 ಲಕ್ಷ ರು. ಸಾಲ; ಹಾಲು ಒಕ್ಕೂಟದಿಂದ ಬ್ಯಾಂಕ್‌ಗೆ ಮನವಿ

ಸುಮಾರು 1400 ಹೈನುಗಾರರಿಗೆ ಹಸುಗಳನ್ನು ಖರೀದಿಸಲು ತಲಾ 2 ಲಕ್ಷ ರು. ಸಾಲ ನೀಡುವಂತೆ ತುಮಕೂರು ಹಾಲು ಒಕ್ಕೂಟವು ಕೆನರಾ ಬ್ಯಾಂಕ್‌ಗೆ ಮನವಿ ಮಾಡಿದೆ. ಈ ಸಾಲವನ್ನು ಸದ್ಬಳಕೆ ಮಾಡಿಕೊಂಡು ಪ್ರಾಮಾಣಿಕವಾಗಿ ಮರುಪಾವತಿ ಮಾಡುವುದರ ಮಹತ್ವವನ್ನು ತಿಳಿಸಲಾಗಿದ್ದು, ಇದರಿಂದ ರೈತರ ಅಭಿವೃದ್ಧಿ ಸಾಧ್ಯ ಎಂದು ಒತ್ತಿಹೇಳಲಾಗಿದೆ.

Read Full Story

07:30 AM (IST) Jul 12

ನವೀಕರಣಗೊಂಡ ರಾಜ್ಯದ 4 ರೈಲು ನಿಲ್ದಾಣಗಳು ಜುಲೈ 17ರಂದು ಲೋಕಾರ್ಪಣೆ; ಅತ್ಯಾಧುನಿಕ ಸೌಲಭ್ಯ

ಅಮೃತ ಭಾರತ ಯೋಜನೆಯಡಿ ನವೀಕರಣಗೊಂಡ ಕೊಪ್ಪಳ, ಬಾದಾಮಿ, ಅಳ್ನಾವರ ಮತ್ತು ಬಂಟ್ವಾಳ ರೈಲು ನಿಲ್ದಾಣಗಳು ಜುಲೈ 17 ರಂದು ಲೋಕಾರ್ಪಣೆಗೊಳ್ಳಲಿವೆ. ಪ್ರಧಾನಿ ನರೇಂದ್ರ ಮೋದಿಯವರಿಂದ ಉದ್ಘಾಟನೆಗೊಳ್ಳಲಿರುವ ಈ ನಿಲ್ದಾಣಗಳು, ಎಸ್ಕಲೇಟರ್, ಲಿಫ್ಟ್, ಮತ್ತು ವಿಸ್ತರಿತ ಪ್ಲಾಟ್‌ಫಾರ್ಮ್‌ಗಳಂತಹ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿವೆ.
Read Full Story

07:11 AM (IST) Jul 12

ಚಿಲ್ಲರೆ ನೀಡದ್ದಕ್ಕೆ ಸಾರಿಗೆ ಸಚಿವರನ್ನೇ ಬಸ್‌ನಿಂದ ಕೆಳಗಿಳಿಸಿದ ಕಂಡಕ್ಟರ್! ಮುಂದೇನಾಯ್ತು ನೋಡಿ

ಸಾರಿಗೆ ಸಚಿವ ಬೈರತಿ ಸುರೇಶ್‌, ಗುರುತು ಸಿಗದಂತೆ ಮಾಸ್ಕ್‌ ಧರಿಸಿ ಬಿಎಂಟಿಸಿ ಬಸ್‌ನಲ್ಲಿ  ರಿಯಾಲಿಟಿ ಚೆಕ್‌ ನಡೆಸಿದರು. ಈ ವೇಳೆ, ಚಿಲ್ಲರೆ ಇಲ್ಲದ ಕಾರಣಕ್ಕೆ ನಿರ್ವಾಹಕನೊಬ್ಬ ಸಚಿವರನ್ನೇ ಬಸ್‌ನಿಂದ ಕೆಳಗಿಳಿಸಲು ಯತ್ನ, ಪ್ರಯಾಣಿಕರ ಇತರ ಸಮಸ್ಯೆ ಗಮನಿಸಿ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಸೂಚಿಸಿದರು.

Read Full Story

More Trending News