ಗದಗ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಳೆದ 40 ದಿನಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳದೇ ಕಾಣೆ ಆಗಿದ್ದರಿಂದಲೇ ರಾಜ್ಯದ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗಿದೆ. ಆದರೆ, ರಾಜ್ಯ ನಾಯಕರು ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದ ಚರ್ಚೆಯಲ್ಲೇ ಮಗ್ನರಾಗಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವ್ಯಂಗ್ಯವಾಡಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿಶೇಷ ಮತದಾರರ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಕುರಿತು ರಾಜ್ಯ ಸರ್ಕಾರ ಅನಗತ್ಯ ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿದೆ. ಕಷ್ಟದ ಪರಿಸ್ಥಿತಿಯಲ್ಲೂ ಬಿಎಲ್ಒಗಳು ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿದ್ದು, ಮತದಾರರ ನೋಂದಣಿ ನಮೂನೆಗಳು ಮನೆ ಮನೆಗೆ ತಲುಪುವಂತೆ ಜಿಲ್ಲಾಧಿಕಾರಿಗಳು ಗಮನಹರಿಸಬೇಕು ಎಂದರು.
08:51 AM (IST) Jul 12
ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸಿರೀಸ್ನಲ್ಲಿ ಟೀಂ ಇಂಡಿಯಾ ಒಂದೇ ಒಂದು ಮ್ಯಾಚ್ ಗೆಲ್ಲಲಿಲ್ಲ. ಸೋಲಿನ ಬೆನ್ನಲ್ಲೇ ಕ್ರಿಕೆಟ್ ಅಭಿಮಾನಿಗಳು ಭಾರೀ ನಿರಾಸೆಗೊಂಡಿದ್ದಾರೆ. ಇನ್ನು ಸೋಲಿಗೆ ನಾಯಕ ಅಯ್ಯರ್, ಮೈದಾನದ ಮೇಲೆ ಗೂಬೆ ಕೂರಿಸಿದ್ದಾರೆ.
07:53 AM (IST) Jul 12
07:43 AM (IST) Jul 12
ಹಿರಿಯ ನಟ ಅನಂತನಾಗ್ ಅವರು ಗಾಯಕಿ ಎಸ್. ಜಾನಕಿ ಅವರೊಂದಿಗಿನ ತಮ್ಮ ಒಡನಾಟವನ್ನು ಸ್ಮರಿಸಿಕೊಂಡಿದ್ದಾರೆ. 'ಬಯಲುದಾರಿ' ಚಿತ್ರದಿಂದ ಆರಂಭವಾದ ತಮ್ಮ ಪಯಣ, ತಮ್ಮ ನೂರಕ್ಕೂ ಹೆಚ್ಚು ಚಿತ್ರಗಳಿಗೆ ಜಾನಕಿ ಹಾಡಿರುವುದನ್ನು ನೆನೆದಿದ್ದಾರೆ. ಅವರ ದೈವಿಕ ವ್ಯಕ್ತಿತ್ವ, ಮಂತ್ರಮುಗ್ಧಗೊಳಿಸುವ ಗಾಯನ ಕೊಂಡಾಡಿದ್ದಾರೆ.
07:42 AM (IST) Jul 12
ಸುಮಾರು 1400 ಹೈನುಗಾರರಿಗೆ ಹಸುಗಳನ್ನು ಖರೀದಿಸಲು ತಲಾ 2 ಲಕ್ಷ ರು. ಸಾಲ ನೀಡುವಂತೆ ತುಮಕೂರು ಹಾಲು ಒಕ್ಕೂಟವು ಕೆನರಾ ಬ್ಯಾಂಕ್ಗೆ ಮನವಿ ಮಾಡಿದೆ. ಈ ಸಾಲವನ್ನು ಸದ್ಬಳಕೆ ಮಾಡಿಕೊಂಡು ಪ್ರಾಮಾಣಿಕವಾಗಿ ಮರುಪಾವತಿ ಮಾಡುವುದರ ಮಹತ್ವವನ್ನು ತಿಳಿಸಲಾಗಿದ್ದು, ಇದರಿಂದ ರೈತರ ಅಭಿವೃದ್ಧಿ ಸಾಧ್ಯ ಎಂದು ಒತ್ತಿಹೇಳಲಾಗಿದೆ.
07:30 AM (IST) Jul 12
07:11 AM (IST) Jul 12
ಸಾರಿಗೆ ಸಚಿವ ಬೈರತಿ ಸುರೇಶ್, ಗುರುತು ಸಿಗದಂತೆ ಮಾಸ್ಕ್ ಧರಿಸಿ ಬಿಎಂಟಿಸಿ ಬಸ್ನಲ್ಲಿ ರಿಯಾಲಿಟಿ ಚೆಕ್ ನಡೆಸಿದರು. ಈ ವೇಳೆ, ಚಿಲ್ಲರೆ ಇಲ್ಲದ ಕಾರಣಕ್ಕೆ ನಿರ್ವಾಹಕನೊಬ್ಬ ಸಚಿವರನ್ನೇ ಬಸ್ನಿಂದ ಕೆಳಗಿಳಿಸಲು ಯತ್ನ, ಪ್ರಯಾಣಿಕರ ಇತರ ಸಮಸ್ಯೆ ಗಮನಿಸಿ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಸೂಚಿಸಿದರು.