ಬೆಳಗಾವಿ: ಮದುವೆಗೆ ವಧು ಸಿಗದಕ್ಕೆ ನೊಂದು ಇಲ್ಲಿನ ಹಿಂಡಲಗಾ ಜೈಲಿನ ವಾರ್ಡರ್ ವಿನೋದ್ ತಿಗಡಿ (31) ನದಿಗೆ ಹಾಕಿ ಆತ್ಮ*ಹತ್ಯೆಗೆ ಶರಣಾಗಿರುವ ಘಟನೆ ಮಂಗಳವಾರ ನಡೆದಿದೆ. ವಿನೋದ್ ಇತ್ತೀಚೆಗೆ ಹೊಸ ಮನೆ ಕಟ್ಟಿಸಿದ್ದರು. ಮದುವೆ ಆಗಲು ವಧು ಕೂಡ ಹುಡುಕುತ್ತಿದ್ದರು ಎಂದು ಹೇಳಲಾಗಿದೆ. ಆದರೆ, ವಧು ಸಿಗದಿದ್ದರಿಂದ ಜಿಗುಪ್ಸೆಗೊಂಡು ನದಿಗೆ ಹಾರಿ ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ ಎಂದು ಚನ್ನಮ್ಮ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
09:46 AM (IST) Mar 12
ಬೀದರ್ ಜಿಲ್ಲೆಯ ಭೆಮಳಖೇಡ ಗ್ರಾಮದಲ್ಲಿ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಶಾಲಾ ಕಟ್ಟಡದಿಂದ ಜಿಗಿದು ಸಾವಿಗೆ ಶರಣಾಗಿದ್ದಾಳೆ. ಪ್ರಾರ್ಥನೆ ವೇಳೆ ತರಗತಿಯಲ್ಲೇ ಉಳಿದಿದ್ದ ಬಾಲಕಿಯ ಸಾವಿಗೆ ಶಾಲೆಯ ನಿರ್ಲಕ್ಷ್ಯವೇ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ.
09:39 AM (IST) Mar 12
ಮುಖ್ಯಮಂತ್ರಿ ಸಿದ್ದರಾಮಯ್ಯ 'ಸಾಲರಾಮಯ್ಯ' ಅಲ್ಲ, 'ಅಭಿವೃದ್ಧಿ ರಾಮಯ್ಯ' ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಸಮರ್ಥಿಸಿಕೊಂಡಿದ್ದಾರೆ. ಬಿಜೆಪಿ ಅವಧಿಯಲ್ಲಿ ಬಸವರಾಜ ಬೊಮ್ಮಾಯಿ ಅವರೇ ರಾಜ್ಯದ ಸಾಲವನ್ನು 5 ಲಕ್ಷ ಕೋಟಿಗೆ ಹೆಚ್ಚಿಸಿದ್ದು, ಸಿದ್ದರಾಮಯ್ಯ ವಿತ್ತೀಯ ಹೊಣೆಗಾರಿಕೆ ಮೀರಿಲ್ಲ ಎಂದು ತಿರುಗೇಟು.
09:12 AM (IST) Mar 12
ಸರ್ಕಾರಗಳು ಗ್ರಾಮೀಣ ಭಾಗದ ಬಾಲಕಿಯರ ಶಿಕ್ಷಣಕ್ಕೆ ಅನುಕೂಲವಾಗಲೆಂದು ಲಕ್ಷಾಂತರ ರುಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ವಸತಿ ನಿಲಯವೊಂದು ಮೂಢ ನಂಬಿಕೆಯ ಕಾರಣಕ್ಕೆ 8 ವರ್ಷದಿಂದ ಪಾಳು ಬಿದ್ದಿದೆ.
09:12 AM (IST) Mar 12
ವಿಧಾನಸಭೆಯಲ್ಲಿ, ಬೇಲೂರು ಕ್ಷೇತ್ರದ ಬಿಜೆಪಿ ಶಾಸಕ ಎಚ್.ಕೆ.ಸುರೇಶ್ ಅವರು ಎತ್ತಿನಹೊಳೆ ಕಾಮಗಾರಿ ಸಮಸ್ಯೆಗಳನ್ನು ಪ್ರಸ್ತಾಪಿಸಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು 'ಭಾವಿ ಮುಖ್ಯಮಂತ್ರಿ' ಎಂದು ಸಂಬೋಧಿಸಿ, ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.
08:32 AM (IST) Mar 12
Brazil prison break story:ಬ್ರೆಜಿಲ್ನ ಕೈದಿಯೊಬ್ಬ ಜೈಲಿನಿಂದ ತಪ್ಪಿಸಿಕೊಳ್ಳಲು ಬರೋಬ್ಬರಿ 5 ವರ್ಷಗಳ ಕಾಲ ಸುರಂಗ ಕೊರೆದಿದ್ದಾನೆ. ಆದರೆ ಆತ ಕೊನೆಗೆ ತಲುಪಿದ್ದು ಎಲ್ಲಿಗೆ ಇಲ್ಲಿದೆ ಒಂದು ಇಂಟರೆಸ್ಟಿಂಗ್ ಸ್ಟೋರಿ
08:25 AM (IST) Mar 12
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ, ಕೇಂದ್ರದ ಆರ್ಥಿಕ ಅಸಹಕಾರದ ನಡುವೆಯೂ ಬಜೆಟ್ ಅನ್ನು ಸಮರ್ಥಿಸಿಕೊಂಡರು. ಇದೇ ವೇಳೆ, ಅನುದಾನ ವಿಳಂಬ, ಅಧಿಕಾರಿಗಳ ಮೇಲಿನ ನಿಯಂತ್ರಣದ ಕೊರತೆ ಮತ್ತು ಗ್ಯಾರಂಟಿ ಯೋಜನೆಗಳ ಮರುಪರಿಶೀಲನೆಗೆ ಆಗ್ರಹಿಸಿದರು.
08:25 AM (IST) Mar 12
ಕಲರ್ಸ್ ಕನ್ನಡ ವಾಹಿನಿಯ 'ಭಾಗ್ಯಲಕ್ಷ್ಮೀ' ಚಿತ್ರೀಕರಣದ ವೇಳೆ ಸುಷ್ಮಾ ರಾವ್ (ಭಾಗ್ಯಾ) ಅವರ ತಲೆಗೆ ಪೆಟ್ಟಾಗಿದೆ. ತಾಂಡವ್ ಮತ್ತು ಆದಿಯ ಅಪಹರಣದ ದೃಶ್ಯದ ಚಿತ್ರೀಕರಣದ ವೇಳೆ ಗೂಂಡಾಗಳು ದೊಣ್ಣೆಯಿಂದ ಹೊಡೆಯುವ ಸನ್ನಿವೇಶದಲ್ಲಿ ಈ ಘಟನೆ ನಡೆದಿದ್ದು, ಇದರ ಮೇಕಿಂಗ್ ವಿಡಿಯೋ ವೈರಲ್ ಆಗಿದೆ.
08:05 AM (IST) Mar 12
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ, ಕಾಂಗ್ರೆಸ್ ಕಚೇರಿಯ ಬಳಿ ರಾಷ್ಟ್ರಧ್ವಜವನ್ನು ಪಕ್ಷದ ಧ್ವಜಗಳೊಂದಿಗೆ ಬೇಜವಾಬ್ದಾರಿಯಿಂದ ಎಸೆದಿರುವ ಘಟನೆ ನಡೆದಿದೆ. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
07:47 AM (IST) Mar 12
07:37 AM (IST) Mar 12
07:17 AM (IST) Mar 12
ಗ್ಯಾಸ್ ಸಿಲಿಂಡರ್ಗಳ ಕೊರತೆ ಹಿನ್ನೆಲೆಯಲ್ಲಿ ನಗರದ 30ಕ್ಕೂ ಹೆಚ್ಚು ಇಂದಿರಾ ಕ್ಯಾಂಟೀನ್ಗಳಲ್ಲಿ ಬುಧವಾರ ಊಟ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು, ಮುಂದಿನ ಒಂದೆರಡು ದಿನಗಳಲ್ಲಿ ಇಂದಿರಾ ಕ್ಯಾಂಟೀನ್ಗಳಿಗೆ ಸಿಲಿಂಡರ್ ಪೂರೈಕೆಯಾಗದಿದ್ದರೆ ನಗರದ 175ಕ್ಕೂ ಹೆಚ್ಚು ಇಂದಿರಾ ಕ್ಯಾಂಟೀನ್ಗಳು ಬಂದ್ ಮಾಡುವ ಆತಂಕ
07:09 AM (IST) Mar 12
07:02 AM (IST) Mar 12
‘ಎಲ್ಪಿಜಿ ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಸಮಸ್ಯೆ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಸಿಲಿಂಡರ್ಗಳು ಕಾಳಸಂತೆಯಲ್ಲಿ ಮಾರಾಟ ಹಾಗೂ ಅಕ್ರಮ ದಾಸ್ತಾನು ಆಗದಂತೆ ಪೊಲೀಸ್, ಸಾರಿಗೆ ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಕಟ್ಟುನಿಟ್ಟಿನ ನಿಗಾ ವಹಿಸಬೇಕು’ ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಸೂಚನೆ ನೀಡಿದ್ದಾರೆ
07:00 AM (IST) Mar 12