LIVE NOW
Published : Mar 12, 2026, 06:40 AM ISTUpdated : Mar 12, 2026, 09:46 AM IST

Karnataka News Live: ಬೀದರ್ - ಶಾಲಾ ಕಟ್ಟಡದಿಂದ ಜಿಗಿದು 10ನೇ ಕ್ಲಾಸ್ ಬಾಲಕಿ ಸಾವಿಗೆ ಶರಣು

ಸಾರಾಂಶ

ಬೆಳಗಾವಿ: ಮದುವೆಗೆ ವಧು ಸಿಗದಕ್ಕೆ ನೊಂದು ಇಲ್ಲಿನ ಹಿಂಡಲಗಾ ಜೈಲಿನ ವಾರ್ಡರ್‌ ವಿನೋದ್‌ ತಿಗಡಿ (31) ನದಿಗೆ ಹಾಕಿ ಆತ್ಮ*ಹತ್ಯೆಗೆ ಶರಣಾಗಿರುವ ಘಟನೆ ಮಂಗಳವಾರ ನಡೆದಿದೆ. ವಿನೋದ್‌ ಇತ್ತೀಚೆಗೆ ಹೊಸ ಮನೆ ಕಟ್ಟಿಸಿದ್ದರು. ಮದುವೆ ಆಗಲು ವಧು ಕೂಡ ಹುಡುಕುತ್ತಿದ್ದರು ಎಂದು ಹೇಳಲಾಗಿದೆ. ಆದರೆ, ವಧು ಸಿಗದಿದ್ದರಿಂದ ಜಿಗುಪ್ಸೆಗೊಂಡು ನದಿಗೆ ಹಾರಿ ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ ಎಂದು ಚನ್ನಮ್ಮ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

09:46 AM (IST) Mar 12

ಬೀದರ್ - ಶಾಲಾ ಕಟ್ಟಡದಿಂದ ಜಿಗಿದು 10ನೇ ಕ್ಲಾಸ್ ಬಾಲಕಿ ಸಾವಿಗೆ ಶರಣು

ಬೀದರ್ ಜಿಲ್ಲೆಯ ಭೆಮಳಖೇಡ ಗ್ರಾಮದಲ್ಲಿ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಶಾಲಾ ಕಟ್ಟಡದಿಂದ ಜಿಗಿದು ಸಾವಿಗೆ ಶರಣಾಗಿದ್ದಾಳೆ. ಪ್ರಾರ್ಥನೆ ವೇಳೆ ತರಗತಿಯಲ್ಲೇ ಉಳಿದಿದ್ದ ಬಾಲಕಿಯ ಸಾವಿಗೆ ಶಾಲೆಯ ನಿರ್ಲಕ್ಷ್ಯವೇ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ.

Read Full Story

09:39 AM (IST) Mar 12

ಸಿದ್ದರಾಮಯ್ಯ ಅಭಿವೃದ್ಧಿಗಾಗಿ ಸಾಲ ಮಾಡಿದ್ದಾರೆ, ಅಮೆರಿಕ, ಚೀನಾ ಕೂಡ ಸಾಲ ಮಾಡಿವೆ - ಶಿವಲಿಂಗೇಗೌಡ ತಿರುಗೇಟು

ಮುಖ್ಯಮಂತ್ರಿ ಸಿದ್ದರಾಮಯ್ಯ 'ಸಾಲರಾಮಯ್ಯ' ಅಲ್ಲ, 'ಅಭಿವೃದ್ಧಿ ರಾಮಯ್ಯ' ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಸಮರ್ಥಿಸಿಕೊಂಡಿದ್ದಾರೆ. ಬಿಜೆಪಿ ಅವಧಿಯಲ್ಲಿ ಬಸವರಾಜ ಬೊಮ್ಮಾಯಿ ಅವರೇ ರಾಜ್ಯದ ಸಾಲವನ್ನು 5 ಲಕ್ಷ ಕೋಟಿಗೆ ಹೆಚ್ಚಿಸಿದ್ದು, ಸಿದ್ದರಾಮಯ್ಯ ವಿತ್ತೀಯ ಹೊಣೆಗಾರಿಕೆ ಮೀರಿಲ್ಲ ಎಂದು ತಿರುಗೇಟು.

Read Full Story

09:12 AM (IST) Mar 12

ಮೂಢ ನಂಬಿಕೆಯಿಂದಾಗಿ ಸರ್ಕಾರಿ ಕಟ್ಟಡ ಪಾಳು !

ಸರ್ಕಾರಗಳು ಗ್ರಾಮೀಣ ಭಾಗದ ಬಾಲಕಿಯರ ಶಿಕ್ಷಣಕ್ಕೆ ಅನುಕೂಲವಾಗಲೆಂದು ಲಕ್ಷಾಂತರ ರುಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ವಸತಿ ನಿಲಯವೊಂದು ಮೂಢ ನಂಬಿಕೆಯ ಕಾರಣಕ್ಕೆ 8 ವರ್ಷದಿಂದ ಪಾಳು ಬಿದ್ದಿದೆ.

Read Full Story

09:12 AM (IST) Mar 12

DK Shivakumar future CM - ಡಿ.ಕೆ.ಶಿವಕುಮಾರ್‌ರನ್ನು ಭಾವಿ ಸಿಎಂ ಎಂದ ಬಿಜೆಪಿ ಶಾಸಕ!

ವಿಧಾನಸಭೆಯಲ್ಲಿ, ಬೇಲೂರು ಕ್ಷೇತ್ರದ ಬಿಜೆಪಿ ಶಾಸಕ ಎಚ್‌.ಕೆ.ಸುರೇಶ್‌ ಅವರು ಎತ್ತಿನಹೊಳೆ ಕಾಮಗಾರಿ ಸಮಸ್ಯೆಗಳನ್ನು ಪ್ರಸ್ತಾಪಿಸಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು 'ಭಾವಿ ಮುಖ್ಯಮಂತ್ರಿ' ಎಂದು ಸಂಬೋಧಿಸಿ, ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. 

Read Full Story

08:32 AM (IST) Mar 12

Prison break - ಜೈಲಿನಿಂದ ತಪ್ಪಿಸಿಕೊಳ್ಳಲು ನಿರಂತರ 5 ವರ್ಷ ಸುರಂಗ ಕೊರೆದ ಕೈದಿ ತಲುಪಿದ್ದು ಮಾತ್ರ ಎಲ್ಲಿಗೆ?

Brazil prison break story:ಬ್ರೆಜಿಲ್‌ನ ಕೈದಿಯೊಬ್ಬ ಜೈಲಿನಿಂದ ತಪ್ಪಿಸಿಕೊಳ್ಳಲು ಬರೋಬ್ಬರಿ 5 ವರ್ಷಗಳ ಕಾಲ ಸುರಂಗ ಕೊರೆದಿದ್ದಾನೆ. ಆದರೆ ಆತ ಕೊನೆಗೆ ತಲುಪಿದ್ದು ಎಲ್ಲಿಗೆ ಇಲ್ಲಿದೆ ಒಂದು ಇಂಟರೆಸ್ಟಿಂಗ್ ಸ್ಟೋರಿ

Read Full Story

08:25 AM (IST) Mar 12

Karnataka CLP Meeting - ನಾವು ಉತ್ತಮ ಬಜೆಟ್ ಮಂಡನೆ ಮಾಡಿದ್ದೇವೆ - ಸಿಎಂ ಸಿದ್ದರಾಮಯ್ಯ ಸಮರ್ಥನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ, ಕೇಂದ್ರದ ಆರ್ಥಿಕ ಅಸಹಕಾರದ ನಡುವೆಯೂ ಬಜೆಟ್ ಅನ್ನು ಸಮರ್ಥಿಸಿಕೊಂಡರು. ಇದೇ ವೇಳೆ, ಅನುದಾನ ವಿಳಂಬ, ಅಧಿಕಾರಿಗಳ ಮೇಲಿನ ನಿಯಂತ್ರಣದ ಕೊರತೆ ಮತ್ತು ಗ್ಯಾರಂಟಿ ಯೋಜನೆಗಳ ಮರುಪರಿಶೀಲನೆಗೆ ಆಗ್ರಹಿಸಿದರು.

Read Full Story

08:25 AM (IST) Mar 12

ಭಾಗ್ಯಲಕ್ಷ್ಮೀ ಶೂಟಿಂಗ್ ವೇಳೆ ನಟಿ ಸುಷ್ಮಾ ರಾವ್ ತಲೆಗೆ ಪೆಟ್ಟು; ಮೇಕಿಂಗ್ ವಿಡಿಯೋ ವೈರಲ್

ಕಲರ್ಸ್ ಕನ್ನಡ ವಾಹಿನಿಯ 'ಭಾಗ್ಯಲಕ್ಷ್ಮೀ' ಚಿತ್ರೀಕರಣದ ವೇಳೆ ಸುಷ್ಮಾ ರಾವ್ (ಭಾಗ್ಯಾ) ಅವರ ತಲೆಗೆ ಪೆಟ್ಟಾಗಿದೆ. ತಾಂಡವ್ ಮತ್ತು ಆದಿಯ ಅಪಹರಣದ ದೃಶ್ಯದ ಚಿತ್ರೀಕರಣದ ವೇಳೆ ಗೂಂಡಾಗಳು ದೊಣ್ಣೆಯಿಂದ ಹೊಡೆಯುವ ಸನ್ನಿವೇಶದಲ್ಲಿ ಈ ಘಟನೆ ನಡೆದಿದ್ದು, ಇದರ ಮೇಕಿಂಗ್ ವಿಡಿಯೋ ವೈರಲ್ ಆಗಿದೆ.

Read Full Story

08:05 AM (IST) Mar 12

ಚಿತ್ರದುರ್ಗ - ಕಾಂಗ್ರೆಸ್ ಕಾರ್ಯಕರ್ತರಿಂದ ರಾಷ್ಟ್ರಧ್ವಜಕ್ಕೆ ಅವಮಾನ? ಪಕ್ಷದ ಧ್ವಜದೊಂದಿಗೆ ರಾಷ್ಟ್ರಧ್ವಜವೂ ಚರಂಡಿಗೆ!

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ, ಕಾಂಗ್ರೆಸ್ ಕಚೇರಿಯ ಬಳಿ ರಾಷ್ಟ್ರಧ್ವಜವನ್ನು ಪಕ್ಷದ ಧ್ವಜಗಳೊಂದಿಗೆ ಬೇಜವಾಬ್ದಾರಿಯಿಂದ ಎಸೆದಿರುವ ಘಟನೆ ನಡೆದಿದೆ. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

Read Full Story

07:47 AM (IST) Mar 12

Parappana Agrahara ಜೈಲೊಳಗೆ ಒಳಉಡುಪಲ್ಲಿ ಗಾಂಜಾ ಒಯ್ಯುತ್ತಿದ್ದ ವಾರ್ಡನ್ ಅರೆಸ್ಟ್

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಡ್ರಗ್ಸ್ ಪೂರೈಸಲು ಯತ್ನಿಸಿದ ವಾರ್ಡನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ವೇಳೆ, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೋಟ್ಯಂತರ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ ಮಾಡಲಾಗಿದ್ದು, ಕೆಲಸದ ಮನೆಯಲ್ಲಿ ಕಳ್ಳತನ ಮಾಡಿದ ಮಹಿಳೆಯನ್ನೂ ಬಂಧಿಸಲಾಗಿದೆ.
Read Full Story

07:37 AM (IST) Mar 12

Bengaluru Traffic - ಇಂದು ಬೆಂಗಳೂರಿನ ಈ ರಸ್ತೆಗಳತ್ತ ಹೋಗದಿರಿ! ಪರ್ಯಾಯ ಮಾರ್ಗದ ಮಾಹಿತಿ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆಯಿಂದಾಗಿ, ನಗರದ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಶೇಷಾದ್ರಿ ರಸ್ತೆ ಸೇರಿದಂತೆ ಪ್ರಮುಖ ಮಾರ್ಗಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದ್ದು, ಪೊಲೀಸರು ಸಾರ್ವಜನಿಕರ ಅನುಕೂಲಕ್ಕಾಗಿ ಪರ್ಯಾಯ ಮಾರ್ಗಗಳನ್ನು ಸೂಚಿಸಿದ್ದಾರೆ.
Read Full Story

07:17 AM (IST) Mar 12

ಬೆಂಗಳೂರಿನ ಇಂದಿರಾ ಕ್ಯಾಂಟೀನ್‌ಗಳು ಬಂದ್‌

ಗ್ಯಾಸ್‌ ಸಿಲಿಂಡರ್‌ಗಳ ಕೊರತೆ ಹಿನ್ನೆಲೆಯಲ್ಲಿ ನಗರದ 30ಕ್ಕೂ ಹೆಚ್ಚು ಇಂದಿರಾ ಕ್ಯಾಂಟೀನ್‌ಗಳಲ್ಲಿ ಬುಧವಾರ ಊಟ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು, ಮುಂದಿನ ಒಂದೆರಡು ದಿನಗಳಲ್ಲಿ ಇಂದಿರಾ ಕ್ಯಾಂಟೀನ್‌ಗಳಿಗೆ ಸಿಲಿಂಡರ್ ಪೂರೈಕೆಯಾಗದಿದ್ದರೆ ನಗರದ 175ಕ್ಕೂ ಹೆಚ್ಚು ಇಂದಿರಾ ಕ್ಯಾಂಟೀನ್‌ಗಳು ಬಂದ್ ಮಾಡುವ ಆತಂಕ

Read Full Story

07:09 AM (IST) Mar 12

Alnavar-Dandeli - ಶಾಸಕ ಆರ್.ವಿ. ದೇಶಪಾಂಡೆ ಮನವಿ ಮೇರೆಗೆ ರೈಲಿನ ವೇಳಾಪಟ್ಟಿ ಬದಲಾವಣೆ

ಶಾಸಕ ಆರ್.ವಿ. ದೇಶಪಾಂಡೆ ಅವರ ಪ್ರಯತ್ನದ ಫಲವಾಗಿ, ಅಳ್ನಾವರ-ದಾಂಡೇಲಿ ರೈಲಿನ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ. ಈ ಹಿಂದೆ ಭಾನುವಾರ ರಜೆ ಇರುತ್ತಿದ್ದ ರೈಲು ಇನ್ನು ಮುಂದೆ ಗುರುವಾರ ಹೊರತುಪಡಿಸಿ ವಾರದ ಆರು ದಿನ ಸಂಚರಿಸಲಿದೆ. ಬೆಳಗಿನ ಮತ್ತು ಸಂಜೆಯ ರೈಲುಗಳ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.
Read Full Story

07:02 AM (IST) Mar 12

ಕಾಳಸಂತೆಯಲ್ಲಿ ಎಲ್ಪಿಜಿ ಸೇಲ್‌ ಮೇಲೆ ನಿಗಾ - ಅಧಿಕಾರಿಗಳಿಗೆ ಸಿಎಸ್‌ ಸೂಚನೆ

‘ಎಲ್‌ಪಿಜಿ ವಾಣಿಜ್ಯ ಸಿಲಿಂಡರ್‌ ಪೂರೈಕೆಯಲ್ಲಿ ಸಮಸ್ಯೆ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಸಿಲಿಂಡರ್‌ಗಳು ಕಾಳಸಂತೆಯಲ್ಲಿ ಮಾರಾಟ ಹಾಗೂ ಅಕ್ರಮ ದಾಸ್ತಾನು ಆಗದಂತೆ ಪೊಲೀಸ್‌, ಸಾರಿಗೆ ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಕಟ್ಟುನಿಟ್ಟಿನ ನಿಗಾ ವಹಿಸಬೇಕು’ ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್‌ ಸೂಚನೆ ನೀಡಿದ್ದಾರೆ

Read Full Story

07:00 AM (IST) Mar 12

Chikkaballapur baby murder case - ಅನ್ಯಕೋಮಿನವನ ಜತೆ ಮದುವೆ; ಮೊಮ್ಮಗಳ 40 ದಿನದ ಶಿಶುವನ್ನೇ ಕತ್ತು ಹಿಸುಕಿ ಕೊಂದ ಅಜ್ಜಿ!

ಚಿಕ್ಕಬಳ್ಳಾಪುರದಲ್ಲಿ ಅನ್ಯಕೋಮಿನ ಯುವಕನನ್ನು ಮದುವೆಯಾದ ಮೊಮ್ಮಗಳ 40 ದಿನದ ಹಸುಗೂಸನ್ನು ಅಜ್ಜಿಯೇ ಕತ್ತು ಹಿಸುಕಿ ಕೊಂದಿದ್ದಾಳೆ. ಉಸಿರಾಟದ ಸಮಸ್ಯೆಯಿಂದ ಮಗು ಸತ್ತಿದೆ ಎಂದು ನಾಟಕವಾಡಿದ್ದರೂ, ಎಫ್‌ಎಸ್‌ಎಲ್ ವರದಿಯಿಂದ ಕೊಲೆ ರಹಸ್ಯ ಬಯಲಾಗಿದ್ದು, ಪೊಲೀಸರು ಆರೋಪಿ ಅಜ್ಜಿಯನ್ನು ಬಂಧಿಸಿದ್ದಾರೆ.
Read Full Story

More Trending News