ಮಂಡ್ಯ: ಕೆಆರ್ಎಸ್ ಜಲಾಶಯದಿಂದ ತಮಿಳುನಾಡಿಗೆ ನಿತ್ಯ 8500 ಕ್ಯುಸೆಕ್ಗೂ ಅಧಿಕ ನೀರನ್ನು ಹರಿಸುತ್ತಿದ್ದಾರೆ ಎಂದು ಆರೋಪಿಸಿ ಭೂಮಿತಾಯಿ ಹೋರಾಟ ಸಮಿತಿ ಸದಸ್ಯರು ಕಾವೇರಿ ನದಿಗಿಳಿದು ಪ್ರತಿಭಟಿಸಿದರು. ಪಟ್ಟಣದ ಸ್ನಾನ ಘಟ್ಟದ ಬಳಿ ಸಮಿತಿ ರೈತ ಮುಖಂಡ ಕೆ.ಎಸ್.ನಂಜುಡೇಗೌಡ, ಸಮಿತಿ ಅಧ್ಯಕ್ಷ ಬಿಲ್ಲೇನಹಳ್ಳಿ ಕೃಷ್ಣೇಗೌಡ ನೇತೃತ್ವದಲ್ಲಿ ರೈತರು ನದಿಗಿಳಿದು ಪ್ರಾಧಿಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ನಂಜುಂಡೇಗೌಡ ಮಾತನಾಡಿ, ಸರ್ಕಾರ ಸ್ಥಳೀಯ ನಾಲೆಗಳಿಗೆ ನೀರು ಹರಿಸಿ ರೈತರ ಬೆಳೆ ಉಳಿಸಲು ಮುಂದಾಗುತ್ತಿಲ್ಲ. ಬದಲಿಗೆ ಕಾವೇರಿ ನೀರು ಪ್ರಾಧಿಕಾರ ಹೇಳಿದಂತೆ ಪ್ರತಿ ಬಾರಿ ತಮಿಳುನಾಡಿಗೆ ನೀರು ಹರಿಸುತ್ತಾ ಬಂದಿದೆ. 2 ತಿಂಗಳ ಹಿಂದೆ ಕಟಾವಿಗೆ ಬಂದ ಬೆಳೆ ಬಾಡುತ್ತಿರುವ ಬಗ್ಗೆ ರೈತರು ಸಿಎಂ ಬಳಿ ನೀರು ಕೇಳಿ ಮನವಿ ಮಾಡಿದರೂ ಮುಖ್ಯಮಂತ್ರಿ ನೀರು ಕೇಳಬೇಡಿ, ಬೆಳೆ ಬೆಳೆಯಬೇಡಿ ಎಂದು ರೈತರಿಗೆ ಉಡಾಫೆ ಉತ್ತರ ನೀಡಿ ತಮಿಳುನಾಡಿಗೆ ನೀರು ಹರಿಸುತ್ತಿದ್ದಾರೆ ಎಂದರು.
05:57 AM (IST) Sep 12
05:49 AM (IST) Sep 12
ಗೌರಿ-ಗಣೇಶ ಹಬ್ಬದ ಪ್ರಯುಕ್ತ ಸಾಲು ಸಾಲು ರಜೆ ಇದ್ದ ಕಾರಣ, ಬೆಂಗಳೂರಿನಿಂದ ಊರುಗಳಿಗೆ ತೆರಳುವವರ ಸಂಖ್ಯೆ ಹೆಚ್ಚಾಗಿ ಬಸ್ ನಿಲ್ದಾಣಗಳಲ್ಲಿ ಜನದಟ್ಟಣೆ ಉಂಟಾಗಿತ್ತು. ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಸಾರ್ಟಿಸಿ ಹೆಚ್ಚುವರಿ ಬಸ್ಗಳನ್ನು ಓಡಿಸಿದರೂ, ಖಾಸಗಿ ಬಸ್ಗಳು ದುಪ್ಪಟ್ಟು ದರ ವಸೂಲಿ ಮಾಡಿ ಪ್ರಯಾಣಿಕರಿಗೆ ಹೊರೆಯಾದವು.