LIVE NOW
Published : Sep 12, 2026, 05:22 AM ISTUpdated : Sep 12, 2026, 05:57 AM IST

Karnataka News Live: ಕೈದಿಗಳಿಗೆ ಮೊಬೈಲ್‌ ಪೂರೈಕೆ - ಮತ್ತಿಬ್ಬರು ಜೈಲಿನ ಸಿಬ್ಬಂದಿ ಸೆರೆ, 12 ಮೊಬೈಲ್ ಖರೀದಿ

ಸಾರಾಂಶ

ಮಂಡ್ಯ:  ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ನಿತ್ಯ 8500 ಕ್ಯುಸೆಕ್‌ಗೂ ಅಧಿಕ ನೀರನ್ನು ಹರಿಸುತ್ತಿದ್ದಾರೆ ಎಂದು ಆರೋಪಿಸಿ ಭೂಮಿತಾಯಿ ಹೋರಾಟ ಸಮಿತಿ ಸದಸ್ಯರು ಕಾವೇರಿ ನದಿಗಿಳಿದು ಪ್ರತಿಭಟಿಸಿದರು. ಪಟ್ಟಣದ ಸ್ನಾನ ಘಟ್ಟದ ಬಳಿ ಸಮಿತಿ ರೈತ ಮುಖಂಡ ಕೆ.ಎಸ್.ನಂಜುಡೇಗೌಡ, ಸಮಿತಿ ಅಧ್ಯಕ್ಷ ಬಿಲ್ಲೇನಹಳ್ಳಿ ಕೃಷ್ಣೇಗೌಡ ನೇತೃತ್ವದಲ್ಲಿ ರೈತರು ನದಿಗಿಳಿದು ಪ್ರಾಧಿಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ನಂಜುಂಡೇಗೌಡ ಮಾತನಾಡಿ, ಸರ್ಕಾರ ಸ್ಥಳೀಯ ನಾಲೆಗಳಿಗೆ ನೀರು ಹರಿಸಿ ರೈತರ ಬೆಳೆ ಉಳಿಸಲು ಮುಂದಾಗುತ್ತಿಲ್ಲ. ಬದಲಿಗೆ ಕಾವೇರಿ ನೀರು ಪ್ರಾಧಿಕಾರ ಹೇಳಿದಂತೆ ಪ್ರತಿ ಬಾರಿ ತಮಿಳುನಾಡಿಗೆ ನೀರು ಹರಿಸುತ್ತಾ ಬಂದಿದೆ. 2 ತಿಂಗಳ ಹಿಂದೆ ಕಟಾವಿಗೆ ಬಂದ ಬೆಳೆ ಬಾಡುತ್ತಿರುವ ಬಗ್ಗೆ ರೈತರು ಸಿಎಂ ಬಳಿ ನೀರು ಕೇಳಿ ಮನವಿ ಮಾಡಿದರೂ ಮುಖ್ಯಮಂತ್ರಿ ನೀರು ಕೇಳಬೇಡಿ, ಬೆಳೆ ಬೆಳೆಯಬೇಡಿ ಎಂದು ರೈತರಿಗೆ ಉಡಾಫೆ ಉತ್ತರ ನೀಡಿ ತಮಿಳುನಾಡಿಗೆ ನೀರು ಹರಿಸುತ್ತಿದ್ದಾರೆ ಎಂದರು.

05:57 AM (IST) Sep 12

ಕೈದಿಗಳಿಗೆ ಮೊಬೈಲ್‌ ಪೂರೈಕೆ - ಮತ್ತಿಬ್ಬರು ಜೈಲಿನ ಸಿಬ್ಬಂದಿ ಸೆರೆ, 12 ಮೊಬೈಲ್ ಖರೀದಿ

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಹಣದಾಸೆಗಾಗಿ ಕೈದಿಗಳಿಗೆ ಕಾನೂನುಬಾಹಿರವಾಗಿ ಮೊಬೈಲ್ ಪೂರೈಸುತ್ತಿದ್ದ ಇಬ್ಬರು ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಮುಖ್ಯ ವೀಕ್ಷಕ ವಿಜಯ್ ಕುಮಾರ್ ಮತ್ತು ವೀಕ್ಷಕ ಶ್ರೀನಿವಾಸ್ ನಾಯ್ಕ್, ಬೇನಾಮಿ ಹೆಸರಿನಲ್ಲಿ ಮೊಬೈಲ್ ಖರೀದಿಸಿ ಕೈದಿಗಳಿಗೆ ಮಾರಾಟ ಮಾಡುತ್ತಿದ್ದರು ಎಂಬುದು ತನಿಖೆಯಿಂದ ಬಯಲಾಗಿದೆ.
Read Full Story

05:49 AM (IST) Sep 12

Holiday - ಸಾಲು ಸಾಲು ರಜೆ - ಊರಿನತ್ತ ಹೊರಟ ಬೆಂಗಳೂರಿನ ಜನರು, ಖಾಸಗಿ ಬಸ್‌ಗಳ ಸುಲಿಗೆ

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಸಾಲು ಸಾಲು ರಜೆ ಇದ್ದ ಕಾರಣ, ಬೆಂಗಳೂರಿನಿಂದ ಊರುಗಳಿಗೆ ತೆರಳುವವರ ಸಂಖ್ಯೆ ಹೆಚ್ಚಾಗಿ ಬಸ್ ನಿಲ್ದಾಣಗಳಲ್ಲಿ ಜನದಟ್ಟಣೆ ಉಂಟಾಗಿತ್ತು. ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಸಾರ್ಟಿಸಿ ಹೆಚ್ಚುವರಿ ಬಸ್‌ಗಳನ್ನು ಓಡಿಸಿದರೂ, ಖಾಸಗಿ ಬಸ್‌ಗಳು ದುಪ್ಪಟ್ಟು ದರ ವಸೂಲಿ ಮಾಡಿ ಪ್ರಯಾಣಿಕರಿಗೆ ಹೊರೆಯಾದವು.

Read Full Story

More Trending News