Published : Jul 12, 2025, 07:25 AM ISTUpdated : Jul 12, 2025, 11:00 PM IST

Karnatata Latest News Live: ರೈತರ ಏಜೆಂಟರಿಗೆ ಬೆಳೆ ವಿಮೆ ಹಣ ನೀಡಬೇಡಿ - ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

ಸಾರಾಂಶ

ಬೆಂಗಳೂರು (ಜು.12): ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ಧರಾಮಯ್ಯ ಹೇಳಿಕೆ ಬಗ್ಗೆ ಡಿಕೆ ಶಿವಕುಮಾರ್‌ ಯಾವುದೇ ಪ್ರತ್ಯುತ್ತರ ನೀಡಿಲ್ಲ. ಈ ನಡುವೆ ಡಿಕೆಶಿ ಸಂಯಮದ ನುಡಿ ನುಡಿದಿದ್ದಾರೆ. ಪಕ್ಷ ಇದ್ದರಷ್ಟೇ ನಾನು, ಇಲ್ಲದಿದ್ರೆ ನಾನಿಲ್ಲ. ಯಾವ ವಿಚಾರಕ್ಕೂ ನಾನು ಪ್ರತಿಕ್ರಿಯೆ ನೀಡಲ್ಲ. ಕೆಪಿಸಿಸಿ ಅಧ್ಯಕ್ಷ ಹುದ್ದೆ. ಡಿಸಿಎಂ ಹೊಣೆಗಾರಿಕೆ ನನ್ನ ಮೇಲಿದೆ ಅದನ್ನು ನಿಭಾಯಿಸುತ್ತೇನೆ ಎಂದು ಹೇಳಿದ್ದಾರೆ ರಾಜ್ಯ ರಾಜಕೀಯ ಹಾಗೂ ರಾಜ್ಯದ ಇತರ ಸುದ್ದಿಗಳ ಬಗ್ಗೆ ಇಂದಿನ ನ್ಯೂಸ್‌ಲೈವ್‌ ಬ್ಲಾಗ್‌

 

11:00 PM (IST) Jul 12

ರೈತರ ಏಜೆಂಟರಿಗೆ ಬೆಳೆ ವಿಮೆ ಹಣ ನೀಡಬೇಡಿ - ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

ರೈತರು ಪ್ರಧಾನಮಂತ್ರಿ ಫಸಲ ಬಿಮಾ ಯೋಜನೆಯ ವಿಮೆ ತುಂಬುವಾಗ ಏಜೆಂಟರು ಮಧ್ಯಸ್ಥಿಕೆ ವಹಿಸಿ ತಮಗೆ ಪರ್ಸೆಂಟೇಜ್‌ ನೀಡಬೇಕು ಎಂದು ರೈತರಿಗೆ ಮೋಸ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ರೈತರು ಹಣ ನೀಡಬಾರದು ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದರು.

Read Full Story

10:12 PM (IST) Jul 12

ಗುಹೆಯಲ್ಲಿ ಮಕ್ಕಳೊಂದಿಗೆ ವಾಸವಿದ್ದ ರಷ್ಯಾ ಮಹಿಳೆ - ಪತ್ತೆ ಹಚ್ಚಿ ರಕ್ಷಿಸಿದ ಗೋಕರ್ಣ ಪೊಲೀಸರು

ಜಿಲ್ಲೆಯ ಗೋಕರ್ಣದ ಕಾಡಿನ ಮಧ್ಯ ಗುಡ್ಡದ ಗುಹೆಯಲ್ಲಿ ಸಣ್ಣ ಸಣ್ಣ ಮಕ್ಕಳೊಂದಿಗೆ ವಾಸಿಸುತ್ತಿದ್ದ 40 ವರ್ಷದ ರಷ್ಯಾದ ಮಹಿಳೆಯನ್ನು ಗಸ್ತು ತಿರುಗುತ್ತಿದ್ದ ಗೋಕರ್ಣ ಪೊಲೀಸರು ರಕ್ಷಿಸಿದ್ದಾರೆ.

Read Full Story

09:55 PM (IST) Jul 12

ಮುರಿದ ಸೇತುವೆ ಮೇಲೆ ಬ್ಯಾಲೆನ್ಸ್ ನಡಿಗೆ - ನಿತ್ಯ ಜೀವ ಕೈಯಲ್ಲಿಡಿದು ನಡೆಯುವ ವಿದ್ಯಾರ್ಥಿಗಳು

ಏಳು ವರ್ಷಗಳ ಹಿಂದೆ ನುಗ್ಗಿದ ಪ್ರವಾಹ ಇದೀಗ ನೂರಾರು ಜನರು ನಿತ್ಯ ಜೀವ ಕೈಯಲ್ಲಿ ಹಿಡಿದು ಓಡಾಡುವಂತೆ ಆಗಿದೆ. ಜನರ ಸಂಕಷ್ಟ ಪರಿಹರಿಸುವ ಸೇತುವೆ ಜೀವಕ್ಕೆ ಕುತ್ತು ತಂದಿರುವುದಾದರೂ ಏಕೆ ಅಂತೀರಾ ಅದನ್ನು ನೀವೇ ಓದಿ.

Read Full Story

09:04 PM (IST) Jul 12

ಗ್ಯಾರಂಟಿ ಯೋಜನೆಗಳ ಮೂಲಕ ಜನರಿಗೆ ಮಂಕುಬೂದಿ ಎರಚಿದ ಕಾಂಗ್ರೆಸ್ - ನಿಖಿಲ್ ಕುಮಾರಸ್ವಾಮಿ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸತ್ತ ಸರ್ಕಾರವಾಗಿದ್ದು ಗ್ಯಾರಂಟಿ ಯೋಜನೆಗಳ ನೆಪದಲ್ಲಿ ಜನರಿಗೆ ಮಂಕುಬೂದಿ ಎರಚಿ ಅಧಿಕಾರದ ಗದ್ದುಗೆಯನ್ನು ಹಿಡಿದಿದೆ ಎಂದು ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು.

Read Full Story

08:42 PM (IST) Jul 12

ರೋಲ್ಸ್‌ ರಾಯ್ಸ್‌ನಲ್ಲಿ 72.3 ಲಕ್ಷ ವಾರ್ಷಿಕ ಪ್ಯಾಕೇಜ್ ಉದ್ಯೋಗ ಪಡೆದ ಕನ್ನಡದ ಮೊದಲ ಹೆಣ್ಣುಮಗಳು!

ರೋಲ್ಸ್-ರಾಯ್ಸ್‌ನಲ್ಲಿ ಉದ್ಯೋಗ ಗಿಟ್ಟಿಸಿಕೊಂಡ ಕರ್ನಾಟಕದ ಕಿರಿಯ ವಯಸ್ಸಿನ ಮೊದಲ ಯುವತಿ ಎಂಬ ಹೆಗ್ಗಳಿಕೆಗೆ ತುಳುನಾಡಿನ ರಿತುಪರ್ಣ ಪಾತ್ರರಾಗಿದ್ದಾರೆ. 72.3 ಲಕ್ಷ ವಾರ್ಷಿಕ ಪ್ಯಾಕೇಜ್ ಪಡೆದ ರಿತುಪರ್ಣ, ರೊಬೊಟಿಕ್ಸ್ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಅಮೆರಿಕದಲ್ಲಿ ಕಾರ್ಯನಿರ್ವಹಿಸಲಿದ್ದಾರೆ.
Read Full Story

08:03 PM (IST) Jul 12

ಕುಳಿತಿದ್ರೂ ಅದು ಬೆಂಕಿನೇ ಅಂತೀರಾ?.. ಚೈತ್ರಾ ಆಚಾರ್ 'ಜೀನ್ಸ್‌-ವೈಟ್' ಲುಕ್‌ಗೆ ಹಾರ್ಟ್‌ಬೀಟ್ ಕಂಟ್ರೋಲ್ ತಪ್ತಿದ್ಯಾ?

ಟೋಬಿ ನಟಿ ಚೈತ್ರಾ ಆಚಾರ್‌ ಸಿನಿರಂಗದ ಜತೆ ಸಾಮಾಜಿಕ ಜಾಲತಾಣದಲ್ಲೂ ಸಖತ್‌ ಆ್ಯಕ್ಟಿವ್ ಆಗಿರುತ್ತಾರೆ. ಆಗಾಗ ಹೊಸ ಹೊಸ ಫೋಟೋಸ್‌ಗಳನ್ನು ಹಂಚಿಕೊಂಡು ಸಿಕ್ಕಾಪಟ್ಟೆ ಸುದ್ದಿಯಾಗುತ್ತಾರೆ.

Read Full Story

07:03 PM (IST) Jul 12

2027ಕ್ಕೆ ಎತ್ತಿನಹೊಳೆ ಯೋಜನೆ ಪೂರ್ಣಗೊಳ್ಳುವ ವಿಶ್ವಾಸ - ಕೆ.ಎಚ್.ಮುನಿಯಪ್ಪ

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಎತ್ತಿನಹೊಳೆ ಯೋಜನೆಯು 2027ಕ್ಕೆ ಪೂರ್ಣಗೊಳ್ಳುವ ವಿಶ್ವಾಸವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್. ಮುನಿಯಪ್ಪ ಅವರು ಹೇಳಿದರು.

Read Full Story

06:52 PM (IST) Jul 12

Bhagyalakshmi Tanvi - ಚಿಕ್ಕಿ ಪೂಜಾಳ ಮದ್ವೆ ಖುಷಿಯಲ್ಲಿ ಸಕತ್​ ಫೋಟೋಶೂಟ್​ ಮಾಡಿಸಿಕೊಂಡ ಭಾಗ್ಯಲಕ್ಷ್ಮಿ ತನ್ವಿ

ಭಾಗ್ಯಲಕ್ಷ್ಮಿ ತನ್ವಿ ಉರ್ಫ್​ ಅಮೃತಾ ಗೌಡ ಫೋಟೋಶೂಟ್​ ಮಾಡಿಸಿಕೊಂಡಿದ್ದು, ಇದನ್ನು ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ.

 

Read Full Story

06:25 PM (IST) Jul 12

ಜು.13ರಂದು ನಟ ದರ್ಶನ್‌ ‘ಡೆವಿಲ್‌’ ಹಾಡಿನ ಶೂಟಿಂಗ್‌ ಥೈಲ್ಯಾಂಡ್‌ನಲ್ಲಿ ಶುರು!

ನಟ ದರ್ಶನ್ ನಟನೆಯ ಡೆವಿಲ್ ಚಿತ್ರದ ಬಾಕಿ ಇರುವ ಒಂದೇ ಒಂದು ಹಾಡಿನ ಶೂಟಿಂಗ್‌ಗಾಗಿ ಥೈಲ್ಯಾಂಡ್‌ ದೇಶಕ್ಕೆ ಹಾರಲಿದ್ದಾರೆ.

Read Full Story

06:10 PM (IST) Jul 12

ಅಸಂಘಟಿತ ಕಾರ್ಮಿಕರಿಗೆ ಭದ್ರತೆ, ಮಹಿಳೆ-ಮಂಗಳಮುಖಿಯರಿಗೆ ಹೊಸ ಅವಕಾಶ - ಶೋಭಾ ಕರಂದ್ಲಾಜೆ

ಸಂಘಟಿತ ಕಾರ್ಮಿಕರಂತೆಯೇ ಅಸಂಘಟಿತ ಕಾರ್ಮಿಕರಿಗೂ ಸಾಮಾಜಿಕ ಭದ್ರತೆ ಒದಗಿಸಿಕೊಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಪ್ರಸ್ತುತ ಚಾಲ್ತಿಯಲ್ಲಿರುವ ಕಾರ್ಮಿಕ ನೀತಿಗಳನ್ನು ಸಂಯೋಜಿಸಿ 'ನಾಲ್ಕು ಕೋಡ್‌'ಗಳನ್ನಾಗಿ ರೂಪಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಿದೆ ಎಂದು ಶೋಭಾ ಕರಂದ್ಲಾಜೆ ಹೇಳಿದರು.

Read Full Story

05:54 PM (IST) Jul 12

ಧಾರವಾಡದಲ್ಲಿ ಲೋಕ ಅದಾಲತ್, 10 ಕೋಟಿಗೂ ಹೆಚ್ಚು ಮೊತ್ತಕ್ಕೆ ಪ್ರಕರಣ ಇತ್ಯರ್ಥ

ಧಾರವಾಡದ ಉಚ್ಛ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ನಡೆದು 1576 ಪ್ರಕರಣಗಳನ್ನು ಪರಿಗಣಿಸಲಾಯಿತು. 275 ಪ್ರಕರಣಗಳನ್ನು ರೂ.10,77,31,500/- ಮೊತ್ತಕ್ಕೆ ಇತ್ಯರ್ಥಪಡಿಸಲಾಯಿತು. ಅಪಘಾತ ಪರಿಹಾರ, ಚೆಕ್ ಅಮಾನ್ಯ, ಸಿವಿಲ್ ಪ್ರಕರಣಗಳು ಸೇರಿದಂತೆ ಹಲವು ಬಗೆಯ ಪ್ರಕರಣಗಳ ಇತ್ಯರ್ಥವಾಯಿತು.
Read Full Story

05:44 PM (IST) Jul 12

Bhagyalakshmi Serial - ಪೂಜಾ-ಕಿಶನ್​ ಮದ್ವೆ ಜೊತೆ ಭಾಗ್ಯ-ಆದಿ ಮದುವೆ! ಆಹಾ ಇದೆಂಥ ಟ್ವಿಸ್ಟು?

ಭಾಗ್ಯಲಕ್ಷ್ಮಿ ಸೀರಿಯಲ್​ನಲ್ಲಿ ಸದ್ಯ ಪೂಜಾ ಮತ್ತು ಕಿಶನ್​ ಮದುವೆಯ ಸಂಭ್ರಮ ನಡೆಯುತ್ತಿದೆ. ಅದರ ನಡುವೆಯೇ ಭಾಗ್ಯ ನೇರಪ್ರಸಾರದಲ್ಲಿ ಬಂದು ಹೇಳಿದ್ದೇನು? ಇದೇನಿದು ಆದಿ-ಭಾಗ್ಯ ಮದುವೆ ಕಾನ್ಸೆಪ್ಟ್​?

 

Read Full Story

05:37 PM (IST) Jul 12

ಸಿಎಂ ಸ್ಥಾನ ಭದ್ರತೆ, ಡಿಕೆಶಿಗೆ ಶಾಸಕರ ಬೆಂಬಲವಿಲ್ಲ ಎಂದ ಸಿದ್ದರಾಮಯ್ಯ ಹೇಳಿಕೆಗೆ ಯಾರು ಏನಂದ್ರು?

ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ಸಿಎಂ ಸ್ಥಾನದ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ, ಕಾಂಗ್ರೆಸ್ ನಾಯಕರು ಸೇರಿದಂತೆ ಹಲವರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.  

Read Full Story

05:30 PM (IST) Jul 12

ನನಗ್ಯಾವುದೇ ತಾರತಮ್ಯ ಇಲ್ಲ - ಹಾಸನ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಕುರಿತು ನಿಖಿಲ್ ಸ್ಪಷ್ಟ ಮಾತು

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಗಳ ಬಗ್ಗೆ ಮಾತನಾಡಿದ್ದಾರೆ. ಹಾಸನ ಕ್ಷೇತ್ರದ ಮೇಲಿನ ತಮ್ಮ ಭಾವನಾತ್ಮಕ ಸಂಬಂಧವನ್ನು ವಿವರಿಸಿದ್ದಾರೆ. 

Read Full Story

05:11 PM (IST) Jul 12

Seetha Rama Sihi ಸೀರಿಯಲ್​ ಬಳಿಕ ಕಾಣೆಯಾಗಿರೋ ಪುಟಾಣಿ ರಿತು ಸಿಂಗ್​ ಈಗೇನು ಮಾಡ್ತಿದ್ದಾಳೆ?

ಸೀತಾರಾಮ ಸೀರಿಯಲ್​ನಲ್ಲಿ ಸಿಹಿಯಾಗಿ, ಸುಬ್ಬಿಯಾಗಿ ಹವಾ ಸೃಷ್ಟಿಸಿದ್ದ ಪುಟಾಣಿ ರಿತುಸಿಂಗ್​ ಈಗ ಏನು ಮಾಡುತ್ತಿದ್ದಾಳೆ? ಬೇರೆ ಸೀರಿಯಲ್​ನಲ್ಲಿ ಬರ್ತಿದ್ದಾಳಾ?

 

Read Full Story

04:19 PM (IST) Jul 12

Na Ninna Bidalare ಶರತ್​ಗೆ ಹುಟ್ಟುಹಬ್ಬ - ಎಂಜಿನಿಯರಿಂಗ್​ ಬಿಟ್ಟು ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ನಟನ ಸ್ಟೋರಿ ಇಲ್ಲಿದೆ...

ನಾ ನಿನ್ನ ಬಿಡಲಾರೆ ಶರತ್​ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಮಗಳು ಹಿತಾಳ ಬಾಯಲ್ಲಿ ಅಪ್ಪಾ ಎಂದು ಕರೆಸಿಕೊಳ್ಳಲು ಕಾಯ್ತಿರೋ ನಟನ ಸ್ಟೋರಿ ಇಲ್ಲಿದೆ...

 

Read Full Story

03:14 PM (IST) Jul 12

ಮೂರು ಪುಸ್ತಕ ಓದಲು ಸಿಎಂ ಸಿದ್ದರಾಮಯ್ಯ ಸಲಹೆ ನೀಡ್ತಾರೆ - ಭವ್ಯಾ ನರಸಿಂಹಮೂರ್ತಿ

ಕಾಂಗ್ರೆಸ್ ವಕ್ತಾರೆ ಭವ್ಯಾ ನರಸಿಂಹಮೂರ್ತಿ ಅವರು ಸಿದ್ದರಾಮಯ್ಯ ಮತ್ತು ದೇವೇಗೌಡರ ಬಳಿ ರಾಜಕೀಯ ಕಲಿಯುವ ಬಯಕೆ ವ್ಯಕ್ತಪಡಿಸಿದ್ದಾರೆ. 

Read Full Story

02:53 PM (IST) Jul 12

ಮನೋವೈದ್ಯ ನಾಗರಾಜನ ಮತ್ತೊಂದು ಕರಾಳಮುಖ ಬಯಲು, ಉಗ್ರರಿಗಷ್ಟೇ ಅಲ್ಲ, ಹೈಪ್ರೊಫೈಲ್‌ ಕೈದಿಗಳಿಗೂ ಮೊಬೈಲ್‌ ಪೂರೈಕೆ!

ಕೇಂದ್ರ ಕಾರಾಗೃಹದಲ್ಲಿ ಉಗ್ರರಿಗೆ ನೆರವು ನೀಡಿದ ಆರೋಪದಡಿ ಬಂಧಿತರಾದ ಮೂವರ ವಿಚಾರಣೆ ತೀವ್ರಗೊಂಡಿದೆ. ಬಂಧಿತ ಮನೋವೈದ್ಯ ನಾಗರಾಜ್, ಹಣಕ್ಕಾಗಿ ಉಗ್ರರಿಗೆ ಮತ್ತು ಇತರೆ ಆರೋಪಿಗಳಿಗೆ ಮೊಬೈಲ್ ಪೂರೈಸುತ್ತಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ.

Read Full Story

02:17 PM (IST) Jul 12

ಮೂರುವರೆ ವರ್ಷದ ಬಾಲಕಿ ಮೇಲೆ ಬಲತ್ಕಾರ - 50 ವರ್ಷದ ವ್ಯಕ್ತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದಲ್ಲಿ ಮೂರುವರೆ ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 50 ವರ್ಷದ ವ್ಯಕ್ತಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. 2ನೇ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಒಂದು ಲಕ್ಷ ರೂಪಾಯಿ ದಂಡವನ್ನೂ ವಿಧಿಸಿದೆ.
Read Full Story

02:14 PM (IST) Jul 12

ಬನ್ನೇರುಘಟ್ಟ ಉದ್ಯಾನವನ - ಟಿಕೆಟ್‌ ದರ ಏರಿಕೆ, ಆಗಸ್ಟ್ 1ರಿಂದಲೇ ಜಾರಿಗೆ

ಬನ್ನೇರುಘಟ್ಟ ಜೈವಿಕ ಉದ್ಯಾನವನದ ಪ್ರವೇಶ ಶುಲ್ಕ ಆಗಸ್ಟ್ 1 ರಿಂದ ಏರಿಕೆಯಾಗಲಿದೆ. ವಯಸ್ಕರು, ಮಕ್ಕಳು ಮತ್ತು ಹಿರಿಯ ನಾಗರಿಕರಿಗೆ ಪ್ರವೇಶ ಶುಲ್ಕ ಹೆಚ್ಚಳವಾಗಲಿದ್ದು, ಸಫಾರಿ ಪ್ಯಾಕೇಜ್‌ಗಳ ದರಗಳು ಸಹ ಏರಿಕೆಯಾಗಿವೆ. ನಿರ್ವಹಣಾ ವೆಚ್ಚ ಹೆಚ್ಚಳದಿಂದಾಗಿ ಈ ಬದಲಾವಣೆ ಅನಿವಾರ್ಯವಾಗಿದೆ.
Read Full Story

01:46 PM (IST) Jul 12

Nonstick Panನಲ್ಲಿ ದೋಸೆ ಚೆನ್ನಾಗಿ ಏಳತ್ತಲ್ವಾ? ಜೊತೆಗೆ ಕ್ಯಾನ್ಸರ್​ ಕೂಡ! ಅಡುಗೆ ಮನೆಯಲ್ಲಿರೋ ಮಹಾಮಾರಿ

ನಾನ್​ಸ್ಟಿಕ್​ ಪ್ಯಾನ್​ನಲ್ಲಿ ಅತ್ಯಂತ ಸುಲಭದಲ್ಲಿ ದೋಸೆ, ಚಪಾತಿ ಮಾಡಬಹುದು. ಅಡುಗೆ ಮನೆಯಲ್ಲಿ ಈ ಪಾತ್ರೆಗಳನ್ನು ಇಟ್ಟರೆ ಅದಕ್ಕೊಂದು ಅಂದವೇ ಬರುತ್ತದೆ. ಆದರೆ ಇದು ನಿಮ್ಮ ಮನೆಯಲ್ಲಿರೋ ಮಹಾಮಾರಿ ಎನ್ನುವುದು ಅರಿವಿದೆಯೆ? ಡಾ.ಖಾದರ್​ ಅವರ ಮಾತು ಕೇಳಿ...

 

Read Full Story

01:03 PM (IST) Jul 12

Bald Headನಲ್ಲಿ ಕೂದಲು ಚಿಗುರಲು ದುಬಾರಿ ಚಿಕಿತ್ಸೆ ಬೇಡವೇ ಬೇಡ - ಇವೆರಡು ಸಾಮಗ್ರಿ ಮ್ಯಾಜಿಕ್​ ನೋಡಿ!

ಬೊಕ್ಕ ತಲೆಯಲ್ಲಿ ಕೂದಲು ಚಿಗುರುವಂತೆ ಮಾಡುವುದು ಇಷ್ಟು ಸುಲಭನಾ? ಅಕ್ಕಿ ತೊಳೆದ ನೀರು ಮತ್ತು ಕಾಮಕಸ್ತೂರಿ ಬೀಜದ (Chia Seeds) ಜೆಲ್​ ತಯಾರಿಸಿ ಕೂದಲು ಬರಿಸುವುದು ಹೇಗೆ ನೋಡಿ. ಇಲ್ಲಿದೆ ಹಂತ ಹಂತದ ಮಾಹಿತಿ...

 

Read Full Story

12:34 PM (IST) Jul 12

Vijaya Raghavendra marriage - ಮೇಘನಾ ರಾಜ್​ ಜೊತೆ ಮದ್ವೆ ಸುದ್ದಿ ಕುರಿತು ಕೊನೆಗೂ ಮೌನ ಮುರಿದ ನಟ!

ಮೇಘನಾ ರಾಜ್​ ಜೊತೆ ವಿಜಯ ರಾಘವೇಂದ್ರ ಅವರ ಮದುವೆಯ ಸುದ್ದಿ ಸದ್ದು ಮಾಡುತ್ತಿದ್ದು, ಈ ಬಗ್ಗೆ ಕೊನೆಗೂ ನಟ ಮೌನ ಮುರಿದಿದ್ದಾರೆ. ಅವರು ಹೇಳಿದ್ದೇನು?

 

Read Full Story

12:24 PM (IST) Jul 12

ಸಿದ್ದರಾಮಯ್ಯ ಸ್ವಲ್ಪ ಮೆತ್ತಗೆ ಆಗುತ್ತಿದ್ದಾರೆ, ಬೆಳಿತಾ ಬೆಳಿತಾ ಹಣ್ಣಾಗಿರಬಹುದು - ಜೆ.ಸಿ. ಮಾಧುಸ್ವಾಮಿ

ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ಹೈಕಮಾಂಡ್‌ನ ಪಾತ್ರವನ್ನು ಪ್ರಶ್ನಿಸಿದ್ದಾರೆ. ಶಾಸಕರಿಗೆ ನಾಯಕತ್ವ ಆಯ್ಕೆ ಮಾಡುವ ಅವಕಾಶ ನೀಡಬೇಕೆಂದು ಅಭಿಪ್ರಾಯಪಟ್ಟಿದ್ದಾರೆ. ಸಿದ್ದರಾಮಯ್ಯ ಅವರನ್ನು ಭೇಟಿಯಾದ ಕುರಿತು ಸ್ಪಷ್ಟನೆ ನೀಡಿದ್ದಾರೆ.
Read Full Story

11:21 AM (IST) Jul 12

ರಾಜ್ಯದಲ್ಲಿ ಹೆಚ್ಚುತ್ತಿರುವ ಡೆಂಘೀ ಪ್ರಕರಣ, ಡೆಂಗ್ಯೂ ವಿರುದ್ಧ 100 ದಿನಗಳ ಕಾರ್ಯ ಯೋಜನೆ

ರಾಜ್ಯದಲ್ಲಿ ಹೆಚ್ಚುತ್ತಿರುವ ಡೆಂಘೀ ಪ್ರಕರಣಗಳನ್ನು ನಿಯಂತ್ರಿಸಲು ಆರೋಗ್ಯ ಇಲಾಖೆ 100 ದಿನಗಳ ಕಾರ್ಯಯೋಜನೆ ರೂಪಿಸಿದೆ. ಸೊಳ್ಳೆ ನಿಯಂತ್ರಣಕ್ಕೆ ₹7.25 ಕೋಟಿ ಮೀಸಲಿಡಲಾಗಿದ್ದು, 1500 ಸ್ವಯಂಸೇವಕರನ್ನು ನಿಯೋಜಿಸಲಾಗುವುದು.
Read Full Story

11:21 AM (IST) Jul 12

ಶಿವಮೊಗ್ಗ - ಶಿವಮೊಗ್ಗ - ಕಾರಾಗೃಹ ಖೈದಿಯೊಬ್ಬನ ಹೊಟ್ಟೆಯಲ್ಲಿ ಪತ್ತೆಯಾದ ಮೊಬೈಲ್ ಫೋನ್!

ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಖೈದಿಯೊಬ್ಬನ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆ. ಶಸ್ತ್ರಚಿಕಿತ್ಸೆಯ ಮೂಲಕ ಮೊಬೈಲ್ ಹೊರತೆಗೆಯಲಾಗಿದ್ದು, ಈ ಘಟನೆ ಜೈಲಿನ ಭದ್ರತಾ ವ್ಯವಸ್ಥೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ತನಿಖೆ ಮುಂದುವರೆದಿದೆ.
Read Full Story

10:46 AM (IST) Jul 12

ಸರ್ಕಾರಿ ಭೂಮಿ‌ ಒತ್ತುವರಿ ಮಾಡಿದವರಿಗೆ ಶಾಕ್‌, ಒಂದೇ ದಿನ, 50.26 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು!

ಬೆಂಗಳೂರಿನಲ್ಲಿ ಅಕ್ರಮ ಭೂ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರೆದಿದ್ದು, ಶುಕ್ರವಾರ ಒಂದೇ ದಿನ 50.26 ಕೋಟಿ ಮೌಲ್ಯದ ಒತ್ತುವರಿಯನ್ನು ತೆರವುಗೊಳಿಸಲಾಗಿದೆ.\

Read Full Story

10:25 AM (IST) Jul 12

Raichur - ಸೆಲ್ಫಿ ವಿಚಾರಕ್ಕೆ ಕಿರಿಕ್‌, ಫೋಟೋ ತೆಗೆಯುವ ನೆಪದಲ್ಲಿ ಗಂಡನನ್ನೇ ನದಿಗೆ ತಳ್ಳಿದ ಪತ್ನಿ!

ರಾಯಚೂರಿನಲ್ಲಿ ನವದಂಪತಿಯ ನಡುವೆ ಸೆಲ್ಫಿ ವಿಚಾರಕ್ಕೆ ಶುರುವಾದ ಕಿರಿಕ್ ಪತ್ನಿ ಗಂಡನನ್ನು ನದಿಗೆ ನೂಕುವವರೆಗೂ ಮುಂದುವರಿದ ಘಟನೆ ನಡೆದಿದೆ. ಫೋಟೋ ತೆಗೆಯುವ ನೆಪದಲ್ಲಿ ಪತಿಯನ್ನೇ ಪತ್ನಿ ನದಿಗೆ ತಳ್ಳಿದ್ದಾಳೆ. ಸ್ಥಳೀಯ ಮೀನುಗಾರರ ಸಹಾಯದಿಂದ ಪತಿಯನ್ನು ರಕ್ಷಿಸಲಾಗಿದೆ.
Read Full Story

09:58 AM (IST) Jul 12

ಗಾಳಿ ಆಂಜನೇಯ ದೇವಾಲಯ ಮುಜರಾಯಿಗೆ ಭಾರೀ ವಿರೋಧ, ಪ್ರತಿಭಟನೆ

ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಾಲಯವನ್ನು ಮುಜರಾಯಿ ಇಲಾಖೆಗೆ ಹಸ್ತಾಂತರಿಸುವ ಸರ್ಕಾರದ ನಿರ್ಧಾರಕ್ಕೆ ಭಕ್ತರು ಮತ್ತು ಟ್ರಸ್ಟ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಹುಂಡಿ ಕಳವು ಪ್ರಕರಣವನ್ನು ನೆಪವಾಗಿಸಿಕೊಂಡು ಈ ಷಡ್ಯಂತ್ರ ನಡೆದಿದೆ ಎಂದು ಟ್ರಸ್ಟ್ ಆರೋಪಿಸಿದೆ.
Read Full Story

08:35 AM (IST) Jul 12

ನೈಸ್‌ ರಸ್ತೆ ಟೋಲ್‌ ಶುಲ್ಕ ಏರಿಕೆ, 1ಕಿಮೀಗೆ ₹7, ವಾಹನ ಸವಾರರ ಆಕ್ರೋಶ

ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್ (ನೈಸ್) ತನ್ನ ರಸ್ತೆ ಟೋಲ್‌ ಶುಲ್ಕವನ್ನು ಹೆಚ್ಚಿಸಿದ್ದು, ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜುಲೈ 1 ರಿಂದ ಜಾರಿಗೆ ಬರುವಂತೆ 8 ಟೋಲ್ ಪ್ಲಾಜಾಗಳಲ್ಲಿ ಶುಲ್ಕ ಹೆಚ್ಚಳವಾಗಿದ್ದು, ಪ್ರತಿ ಕಿ.ಮೀ.ಗೆ ದುಬಾರಿ ವೆಚ್ಚವಾಗಲಿದೆ

Read Full Story

08:17 AM (IST) Jul 12

Heart health secret - ಪ್ರತಿ ದಿನ ಹೀಗೆ ಕಳೆಯಿರಿ 'ಹೃದಯಾಘಾತ'ದ ಭಯವೇ ಇರೋದಿಲ್ಲ!

ಮಾನವ ದೇಹದ ಪ್ರಮುಖ ಅಂಗ ಹೃದಯದ ಆರೋಗ್ಯ ಕಾಪಾಡಿಕೊಳ್ಳುವುದು ಸುದೀರ್ಘ ಜೀವನಕ್ಕೆ ಅತ್ಯಗತ್ಯ. ಮಾನಸಿಕ ಒತ್ತಡ, ಜಡ ಜೀವನಶೈಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ಕಾರಣವಾಗಬಹುದು. 

Read Full Story

07:56 AM (IST) Jul 12

'ದಡ್ಡ' ವಿದ್ಯಾರ್ಥಿಗಳಿಗೆ ಬಾಹ್ಯ ನೋಂದಣಿ ಶಿಕ್ಷೆ! ಶೇ.100ರಷ್ಟು SSLC ಫಲಿತಾಂಶಕ್ಕಾಗಿ ಶಾಲೆಗಳ ಮತ್ತೊಂದು ಅಡ್ಡಮಾರ್ಗ ಪತ್ತೆ!

ಖಾಸಗಿ ಶಾಲೆಗಳು ಕಡಿಮೆ ಅಂಕ ಗಳಿಸುವ ವಿದ್ಯಾರ್ಥಿಗಳನ್ನು ಬೇರೆ ಶಾಲೆಗಳಿಗೆ ವರ್ಗಾಯಿಸುವ ಮೂಲಕ ಶೇಕಡ 100 ಫಲಿತಾಂಶವನ್ನು ಗಳಿಸುವ ಹಗರಣ ಬಯಲಾಗಿದೆ. ಮಕ್ಕಳ ರಕ್ಷಣಾ ಆಯೋಗವು ಈ ಬಗ್ಗೆ ತನಿಖೆ ನಡೆಸುತ್ತಿದೆ.
Read Full Story

07:38 AM (IST) Jul 12

ಕಪ್‌ ತುಳಿತಕ್ಕೆ ಕೆಎಸ್‌ಸಿಎ, ಆರ್‌ಸಿಬಿ, ಡಿಎನ್‌ಎ, ಪೊಲೀಸ್‌, ಗುಪ್ತಚರ ಹೊಣೆ?

ಆರ್‌ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ತುಳಿತ ದುರ್ಘಟನೆಗೆ ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ (ಕೆಎಸ್‌ಸಿಎ), ಆರ್‌ಸಿಬಿ ಮತ್ತು ಡಿಎನ್‌ಎ ಎಂಟರ್‌ಟೈನ್ಮೆಂಟ್‌ ನೆಟ್‌ವರ್ಕ್ಸ್‌ ಹಾಗೂ ಪೊಲೀಸ್‌ ಮತ್ತು ಗುಪ್ತಚರ ಇಲಾಖೆಗಳನ್ನು ಹೊಣೆ

Read Full Story

07:36 AM (IST) Jul 12

ಡಿಕೆಶಿ ಸಂಯಮದ ನುಡಿ : ಸಿದ್ದು ‘ಅಧಿಕಾರ ಹಂಚಿಕೆ ಇಲ್ಲ’ ಹೇಳಿಕೆಗೆ ತಿರುಗೇಟು, ಪ್ರತ್ಯುತ್ತರ ಇಲ್ಲ!

ಪಕ್ಷ ನನಗೆ ಕೆಪಿಸಿಸಿ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಹುದ್ದೆ, ಜವಾಬ್ದಾರಿ ನೀಡಿದೆ. ಅದನ್ನು ಜವಾಬ್ದಾರಿಯುತವಾಗಿ ನಿಭಾಯಿಸುತ್ತೇನೆ. ಉಳಿದ ಯಾವ ವಿಚಾರಗಳಿಗೂ ನಾನು ಪ್ರತಿಕ್ರಿಯಿಸಲ್ಲ. ನನ್ನ ಗಮನವೇನಿದ್ದರೂ ಪಕ್ಷ ಮತ್ತು ಸರ್ಕಾರದ ಹಿತಾಸಕ್ತಿ ಕಾಪಾಡುವುದರ ಕಡೆಗಿದೆ.

 

Read Full Story

07:35 AM (IST) Jul 12

ಬೇರೆ ಯಾವ ರಾಜ್ಯದಲ್ಲೂ 'ನಾನೇ ಸಿಎಂ' ಎನ್ನುವ ಸ್ಥಿತಿ ಇಲ್ಲ: ಪ್ರಲ್ಹಾದ್ ಜೋಶಿ

ಸಿದ್ದರಾಮಯ್ಯ ಮತ್ತು ಡಿಕೆಶಿ ನಡುವಿನ ಸಿಎಂ ಸ್ಥಾನದ ಗೊಂದಲದಿಂದ ರಾಜ್ಯದ ಆಡಳಿತ ಕುಸಿದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. ಜೈಲಿನಲ್ಲಿ ಭಯೋತ್ಪಾದಕರಿಗೆ ಸಿಗುತ್ತಿರುವ ಸೌಲಭ್ಯಗಳು ಮತ್ತು ದೇಶದ್ರೋಹ ಚಟುವಟಿಕೆಗಳ ಬಗ್ಗೆಯೂ ಅವರು ಕಳವಳ ವ್ಯಕ್ತಪಡಿಸಿದರು.

 

Read Full Story

07:35 AM (IST) Jul 12

ಶ್ರೀಮಠದ ಪರಿವಾರಕ್ಕೆ ವಾರ್ಷಿಕ ₹6 ಲಕ್ಷದವರೆಗೆ ಅನುಗ್ರಹ: ರಾಘವೇಶ್ವರ ಭಾರತೀ ಸ್ವಾಮೀಜಿ

ರಾಘವೇಶ್ವರ ಭಾರತೀ ಸ್ವಾಮೀಜಿಗಳು ಶ್ರೀಮಠದ ಪರಿವಾರದ ಸೇವೆಯನ್ನು ಶ್ಲಾಘಿಸಿ, ಸೈನಿಕರಂತೆ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿರುವ ಪರಿವಾರದವರಿಗೆ ವಾರ್ಷಿಕ ₹೩ ರಿಂದ ₹೬ ಲಕ್ಷದವರೆಗೆ ಅನುಗ್ರಹ ನೀಡುವುದಾಗಿ ಘೋಷಿಸಿದ್ದಾರೆ. ಪರಿವಾರದವರ ತ್ಯಾಗ ಮತ್ತು ಸಮರ್ಪಣೆಯನ್ನು ಸಮಾಜ ಗುರುತಿಸಬೇಕು ಎಂದು ಕರೆ ನೀಡಿದರು.

 

Read Full Story

07:35 AM (IST) Jul 12

ಡಿಕೆ ಶಿವಕುಮಾರ್‌ಗೆ ಪ್ರಸಾದದ ರೂಪದಲ್ಲಿ ಸಿಎಂ ಕುರ್ಚಿ ಸಿಗಲಿದೆ: ಶಾಸಕ ಕೊತ್ತೂರು ಮಂಜುನಾಥ್ ಭವಿಷ್ಯ

ಶಾಸಕ ಕೊತ್ತೂರು ಮಂಜುನಾಥ್ ಅವರು ಡಿಕೆಶಿ ಅವರಿಗೆ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಪಟ್ಟ ಸಿಗುವುದು ಖಚಿತ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ಇಬ್ಬರೂ ಒಂದೇ ಎಂದು ಹೇಳಿದ ಅವರು, ಪಕ್ಷದ ತೀರ್ಮಾನವೇ ಅಂತಿಮ ಎಂದರು.

 

Read Full Story

07:34 AM (IST) Jul 12

ಹೊಸಪೇಟೆ: ವಕ್ಫ್‌ ಕಾಯ್ದೆ ಸಂವಿಧಾನ ವಿರೋಧಿ -ಮಹಮ್ಮದ್ ಇಮಾಮ್‌ ನಿಯಾಜಿ

ಹೊಸಪೇಟೆಯಲ್ಲಿ ಕೇಂದ್ರ ಸರ್ಕಾರದ ವಕ್ಫ್ ಕಾಯ್ದೆ ವಿರುದ್ಧ ಚಿತ್ತವಾಡ್ಗಿ ಜಾಮೀಯಾ ಮಸೀದಿ ಅಡಳಿತ ಮಂಡಳಿ ನೇತೃತ್ವದಲ್ಲಿ ಮಾನವ ಸರಪಳಿ ಪ್ರತಿಭಟನೆ ನಡೆಯಿತು.

 

Read Full Story

07:33 AM (IST) Jul 12

ಮಲೆಮಹದೇಶ್ವರ ದುರಂತ ಬೆನ್ನಲ್ಲೇ ಬನ್ನೇರುಘಟ್ಟದಲ್ಲಿ 3 ಹುಲಿಮರಿ ಸಾವು

ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ 5 ಹುಲಿಗಳು ವಿಷಪ್ರಾಶನದಿಂದ ಮೃತಪಟ್ಟ ಘಟನೆ ಹಚ್ಚಹಸಿರಾಗಿರುವಾಗಲೇ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ 3 ಹುಲಿ ಮರಿಗಳು ಸಂಶಯಾಸ್ಪದವಾಗಿ ಸಾವಿಗೀಡಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ.

 

Read Full Story

07:33 AM (IST) Jul 12

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಅಗತ್ಯ: ಸತೀಶ್ ಜಾರಕಿಹೊಳಿ

‘ಮುಖ್ಯಮಂತ್ರಿ ಬದಲಾವಣೆಯಿಲ್ಲ, 2028 ರವರೆಗೆ ನಾನೇ ಮುಖ್ಯಮಂತ್ರಿ’ ಎಂದು ದೆಹಲಿಯಲ್ಲಿ ಕುಳಿತು ಸಿದ್ದರಾಮಯ್ಯ ಶಾಕ್‌ ನೀಡಿದ ಬೆನ್ನಲ್ಲೇ, ಇದೀಗ ಬೆಂಗಳೂರಿನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರು ‘ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಬೇಕು’ ಎಂದು ಪುನರುಚ್ಚರಿಸಿದ್ದಾರೆ.

 

Read Full Story

More Trending News