ಬೆಂಗಳೂರು: ಕರ್ನಾಟಕ ಬಂದ್ಗೆ ನಾನು ಬದ್ಧವಾಗಿದ್ದೇನೆ, ಭದ್ರವಾಗಿದ್ದೇನೆ. ಇವತ್ತು ಬಂದ್ ಬೇಡ ಎನ್ನುವವರು ಅವತ್ತೇಕೆ ಒಪ್ಪಿಕೊಂಡರು. ಬಂದ್ಗೆ ಬೆಂಬಲವಿಲ್ಲ ಎನ್ನುವವರು ನನಗೆ ಕೈಕೊಟ್ಟಿದ್ದಾರೆಂದು ಹೇಳುವುದಿಲ್ಲ. ಅವರಿಗವರೇ ಕೈಕೊಟ್ಟಿದ್ದಾರೆ ಎಂದು ಎಂದು ಕನ್ನಡ ಹೋರಾಟಗಾರ ಸಾ.ರಾ.ಗೋವಿಂದು ಹೇಳಿಕೆಗೆ ಕನ್ನಡ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ಪ್ರಶ್ನಿಸಿದರು.
ಕರ್ನಾಟಕ ಬಂದ್ಗೆ ವಿದ್ಯಾರ್ಥಿಗಳು, ಯುವಕರೇ ಶಕ್ತಿ. ಅವರೆಲ್ಲರೂ ಒಗ್ಗಟ್ಟಿನಿಂದ ಬಂದ್ಗೆ ಬೆಂಬಲ ಕೊಡಬೇಕು. ವಿದ್ಯಾರ್ಥಿಗಳು ಬಂದ್ನಲ್ಲಿ ಭಾಗವಹಿಸಲು ಖಾಸಗಿ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳು ರಜೆ ಕೊಡಬೇಕು. ಈ ಬಂದ್ ಕೇವಲ ಕಾವೇರಿ ನೀರನ್ನು ಮಾತ್ರ ಒಳಗೊಂಡಿಲ್ಲ. ಮಹದಾಯಿ, ಕಾವೇರಿ, ಕಳಸಾ- ಬಂಡೂರಿ, ಮೇಕೆದಾಟು ಅಣೆಕಟ್ಟು ಸೇರಿದಂತೆ ನಾಡಿನ ನೆಲ- ಜಲ, ಭಾಷೆ- ಗಡಿ ಸೇರಿದಂತೆ ಎಲ್ಲಾ ವಿಷಯಗಳೆಲ್ಲವನ್ನೂ ಒಳಗೊಂಡು ಕರ್ನಾಟಕ ಬಂದ್ ನಡೆಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.
ಸಮಗ್ರ ಕರ್ನಾಟಕದ ಪರಿಸ್ಥಿತಿ ಕಣ್ಣೀರಿನ ಕಥೆಯಾಗಿದೆ. ಇದನ್ನು ಕಂಡೂ ಬೆಂಬಲ ಕೊಡುವುದಿಲ್ಲ ಎಂದರೆ ಬೇಡ ಬಿಡಿ. ಈ ರಾಜ್ಯ ಏನು ಅವರ ಕೈಯ್ಯಲ್ಲಿದೆಯೇ. ಜನರು ಅವರು ಹೇಳಿದಂತೆ ಕೇಳುವರೇ. ಜನರು ನಮ್ಮ ಜೊತೆಗಿದ್ದರೆ ಅಷ್ಟೇ ಸಾಕು ಎಂದರು. ಪ್ರತಿಭಟನೆಯಲ್ಲಿ ಕನ್ನಡ ಸೇನೆ ರಾಜ್ಯಾಧ್ಯಕ್ಷ ಕುಮಾರ್, ಜಿಲ್ಲಾಧ್ಯಕ್ಷ ಎಚ್.ಸಿ.ಮಂಜುನಾಥ್, ಸೌಭಾಗ್ಯ ಇತರರು ಭಾಗವಹಿಸಿದ್ದರು.
08:25 AM (IST) Aug 13
07:48 AM (IST) Aug 13
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಮೂಲ ಸೌಲಭ್ಯಗಳ ವೈಫಲ್ಯವನ್ನು ಖಂಡಿಸಿ ಗ್ರಾಮಸ್ಥರು ನಡೆಸಿದ ಪ್ರತಿಭಟನೆ ಯಶಸ್ವಿಯಾಗಿದೆ. ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಆಡಳಿತಾಧಿಕಾರಿ ಹಾಗೂ ಪಿಡಿಒ ಅವರನ್ನು ವರ್ಗಾವಣೆಗೊಳಿಸಿದ್ದಾರೆ.
07:45 AM (IST) Aug 13
ಭಾರತದಲ್ಲಿ ಲಕ್ಷಾಂತರ ಜನರಿಗೆ ಅಂಗಾಂಗಗಳ ಅವಶ್ಯಕತೆಯಿದ್ದರೂ, ದಾನಿಗಳ ಕೊರತೆಯಿಂದಾಗಿ ಜೀವಹಾನಿಯಾಗುತ್ತಿದೆ. ಮೆದುಳು ನಿಷ್ಕ್ರಿಯಗೊಂಡ (ಬ್ರೈನ್ ಡೆತ್) ವ್ಯಕ್ತಿಗಳಿಂದ ಅಂಗಾಂಗ ದಾನ, ಅದರ ಕಾನೂನು ಪ್ರಕ್ರಿಯೆ ಮತ್ತು ಮಹತ್ವವನ್ನು ಈ ಲೇಖನ ವಿವರಿಸುತ್ತದೆ.
07:37 AM (IST) Aug 13
07:24 AM (IST) Aug 13
07:22 AM (IST) Aug 13
07:14 AM (IST) Aug 13
06:57 AM (IST) Aug 13
ಮಾದಕ ದ್ರವ್ಯ ಮಾರಾಟ ಆರೋಪದಡಿ ದಾಖಲಾಗಿದ್ದ ಎಫ್ಐಆರ್ ರದ್ದು ಕೋರಿ ನೈಜೀರಿಯಾ ಪ್ರಜೆಯೊಬ್ಬರು ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್, ರಾಜ್ಯದಲ್ಲಿರುವ ಪ್ರತಿ ನೈಜೀರಿಯಾ ಪ್ರಜೆ ಡ್ರಗ್ ಪೆಡ್ಲಿಂಗ್ನಲ್ಲಿ ತೊಡಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.