LIVE NOW
Published : Aug 13, 2026, 06:31 AM ISTUpdated : Aug 13, 2026, 08:25 AM IST

Karnataka News Live: ಬೆಂಗಳೂರು - ಭೀಕರ ಬೆಂಕಿ ಅವಘಡಕ್ಕೆ ಪಾರ್ಕಿಂಗ್‌ ನಲ್ಲಿದ್ದ 400 ಇವಿ ಬೈಕ್‌ ಗಳು ಸುಟ್ಟು ಬೂದಿ!

ಸಾರಾಂಶ

ಬೆಂಗಳೂರು: ಕರ್ನಾಟಕ ಬಂದ್‌ಗೆ ನಾನು ಬದ್ಧವಾಗಿದ್ದೇನೆ, ಭದ್ರವಾಗಿದ್ದೇನೆ. ಇವತ್ತು ಬಂದ್ ಬೇಡ ಎನ್ನುವವರು ಅವತ್ತೇಕೆ ಒಪ್ಪಿಕೊಂಡರು. ಬಂದ್‌ಗೆ ಬೆಂಬಲವಿಲ್ಲ ಎನ್ನುವವರು ನನಗೆ ಕೈಕೊಟ್ಟಿದ್ದಾರೆಂದು ಹೇಳುವುದಿಲ್ಲ. ಅವರಿಗವರೇ ಕೈಕೊಟ್ಟಿದ್ದಾರೆ ಎಂದು ಎಂದು ಕನ್ನಡ ಹೋರಾಟಗಾರ ಸಾ.ರಾ.ಗೋವಿಂದು ಹೇಳಿಕೆಗೆ ಕನ್ನಡ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ಪ್ರಶ್ನಿಸಿದರು.

ಕರ್ನಾಟಕ ಬಂದ್‌ಗೆ ವಿದ್ಯಾರ್ಥಿಗಳು, ಯುವಕರೇ ಶಕ್ತಿ. ಅವರೆಲ್ಲರೂ ಒಗ್ಗಟ್ಟಿನಿಂದ ಬಂದ್‌ಗೆ ಬೆಂಬಲ ಕೊಡಬೇಕು. ವಿದ್ಯಾರ್ಥಿಗಳು ಬಂದ್‌ನಲ್ಲಿ ಭಾಗವಹಿಸಲು ಖಾಸಗಿ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳು ರಜೆ ಕೊಡಬೇಕು. ಈ ಬಂದ್ ಕೇವಲ ಕಾವೇರಿ ನೀರನ್ನು ಮಾತ್ರ ಒಳಗೊಂಡಿಲ್ಲ. ಮಹದಾಯಿ, ಕಾವೇರಿ, ಕಳಸಾ- ಬಂಡೂರಿ, ಮೇಕೆದಾಟು ಅಣೆಕಟ್ಟು ಸೇರಿದಂತೆ ನಾಡಿನ ನೆಲ- ಜಲ, ಭಾಷೆ- ಗಡಿ ಸೇರಿದಂತೆ ಎಲ್ಲಾ ವಿಷಯಗಳೆಲ್ಲವನ್ನೂ ಒಳಗೊಂಡು ಕರ್ನಾಟಕ ಬಂದ್ ನಡೆಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ಸಮಗ್ರ ಕರ್ನಾಟಕದ ಪರಿಸ್ಥಿತಿ ಕಣ್ಣೀರಿನ ಕಥೆಯಾಗಿದೆ. ಇದನ್ನು ಕಂಡೂ ಬೆಂಬಲ ಕೊಡುವುದಿಲ್ಲ ಎಂದರೆ ಬೇಡ ಬಿಡಿ. ಈ ರಾಜ್ಯ ಏನು ಅವರ ಕೈಯ್ಯಲ್ಲಿದೆಯೇ. ಜನರು ಅವರು ಹೇಳಿದಂತೆ ಕೇಳುವರೇ. ಜನರು ನಮ್ಮ ಜೊತೆಗಿದ್ದರೆ ಅಷ್ಟೇ ಸಾಕು ಎಂದರು. ಪ್ರತಿಭಟನೆಯಲ್ಲಿ ಕನ್ನಡ ಸೇನೆ ರಾಜ್ಯಾಧ್ಯಕ್ಷ ಕುಮಾರ್, ಜಿಲ್ಲಾಧ್ಯಕ್ಷ ಎಚ್.ಸಿ.ಮಂಜುನಾಥ್, ಸೌಭಾಗ್ಯ ಇತರರು ಭಾಗವಹಿಸಿದ್ದರು.

08:25 AM (IST) Aug 13

ಬೆಂಗಳೂರು - ಭೀಕರ ಬೆಂಕಿ ಅವಘಡಕ್ಕೆ ಪಾರ್ಕಿಂಗ್‌ ನಲ್ಲಿದ್ದ 400 ಇವಿ ಬೈಕ್‌ ಗಳು ಸುಟ್ಟು ಬೂದಿ!

ಬೆಂಗಳೂರಿನ ಕೆ.ಆರ್. ಪುರದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ, ಡೆಲಿವರಿ ಸಂಸ್ಥೆಗಳಿಗೆ ಬಾಡಿಗೆಗೆ ನೀಡಲಾಗುತ್ತಿದ್ದ 400ಕ್ಕೂ ಹೆಚ್ಚು ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು ಸುಟ್ಟು ಕರಕಲಾಗಿವೆ. ಈ ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಾರಣವಿರಬಹುದೆಂದು ಶಂಕಿಸಲಾಗಿದ್ದರೂ, ಕಿಡಿಗೇಡಿಗಳ ಕೃತ್ಯದ ಸಾಧ್ಯತೆಯ ಬಗ್ಗೆಯೂ ತನಿಖೆ ನಡೆಯುತ್ತಿದೆ.
Read Full Story

07:48 AM (IST) Aug 13

ಲಕ್ಕುಂಡಿ ಗ್ರಾ. ಪಂಚಾಯಿತಿಯಲ್ಲಿ ದಿಢೀರ್ ಬದಲಾವಣೆ; ಆಡಳಿತಾಧಿಕಾರಿ, PDO ವರ್ಗಾವಣೆ

ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಮೂಲ ಸೌಲಭ್ಯಗಳ ವೈಫಲ್ಯವನ್ನು ಖಂಡಿಸಿ ಗ್ರಾಮಸ್ಥರು ನಡೆಸಿದ ಪ್ರತಿಭಟನೆ ಯಶಸ್ವಿಯಾಗಿದೆ. ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಆಡಳಿತಾಧಿಕಾರಿ ಹಾಗೂ ಪಿಡಿಒ ಅವರನ್ನು ವರ್ಗಾವಣೆಗೊಳಿಸಿದ್ದಾರೆ.

Read Full Story

07:45 AM (IST) Aug 13

Organ Donation Explain - ಸತ್ತ ಬಳಿಕವೂ ಬದುಕಬೇಕಿದ್ದರೆ ಅಂಗಾಂಗ ದಾನ ಮಾಡಿ!

ಭಾರತದಲ್ಲಿ ಲಕ್ಷಾಂತರ ಜನರಿಗೆ ಅಂಗಾಂಗಗಳ ಅವಶ್ಯಕತೆಯಿದ್ದರೂ, ದಾನಿಗಳ ಕೊರತೆಯಿಂದಾಗಿ ಜೀವಹಾನಿಯಾಗುತ್ತಿದೆ. ಮೆದುಳು ನಿಷ್ಕ್ರಿಯಗೊಂಡ (ಬ್ರೈನ್ ಡೆತ್) ವ್ಯಕ್ತಿಗಳಿಂದ ಅಂಗಾಂಗ ದಾನ, ಅದರ ಕಾನೂನು ಪ್ರಕ್ರಿಯೆ ಮತ್ತು ಮಹತ್ವವನ್ನು ಈ ಲೇಖನ ವಿವರಿಸುತ್ತದೆ.

Read Full Story

07:37 AM (IST) Aug 13

ಸಕಲೇಶಪುರ - ಸುಬ್ರಹ್ಮಣ್ಯ ರೋಡ್‌ - ವಂದೇ ಭಾರತ್ ರೈಲಿನ ಪರೀಕ್ಷಾರ್ಥ ಸಂಚಾರ ಯಶಸ್ವಿ

ಬೆಂಗಳೂರು-ಮಂಗಳೂರು ಮಾರ್ಗದಲ್ಲಿ ವಂದೇ ಭಾರತ್ ರೈಲು ಸಂಚಾರದ ಪೂರ್ವಭಾವಿಯಾಗಿ, ಸಕಲೇಶಪುರ-ಸುಬ್ರಹ್ಮಣ್ಯ ಘಾಟಿ ಮಾರ್ಗದಲ್ಲಿ ಮೊದಲ ಪ್ರಾಯೋಗಿಕ ಸಂಚಾರ ಯಶಸ್ವಿಯಾಗಿದೆ. ವಿಶೇಷವಾಗಿ ವಿನ್ಯಾಸಗೊಳಿಸಲಾದ ಈ ರೈಲು, ವೇಗ ನಿಯಂತ್ರಣ ಮತ್ತು ತುರ್ತು ಬ್ರೇಕ್ ವ್ಯವಸ್ಥೆಗಳ ಪರೀಕ್ಷೆಗೆ ಒಳಪಟ್ಟಿದ್ದು, ಮುಂದಿನ ಪರೀಕ್ಷೆಗಳು ಯಶಸ್ವಿಯಾದರೆ ಈ ಮಾರ್ಗದಲ್ಲಿ ಸೇವೆ ಆರಂಭವಾಗಲಿದೆ.
Read Full Story

07:24 AM (IST) Aug 13

organ donation registration ಅಂಗಾಂಗ ದಾನ ನೋಂದಣೀಲಿ ರಾಜ್ಯಕ್ಕೆ ಧಾರವಾಡ ನಂಬರ್ ಒನ್!

ಆರೋಗ್ಯ ಇಲಾಖೆಯ ಜಾಗೃತಿ ಅಭಿಯಾನದ ಫಲವಾಗಿ ಕರ್ನಾಟಕದಲ್ಲಿ 67,632 ಜನರು ಅಂಗಾಂಗ ದಾನಕ್ಕೆ ವಾಗ್ದಾನ ಮಾಡಿದ್ದಾರೆ. ಈ ಪೈಕಿ, 12,534 ನೋಂದಣಿಗಳೊಂದಿಗೆ ಧಾರವಾಡ ಜಿಲ್ಲೆಯು ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದ್ದು, ಸ್ಥಳೀಯ ಮಟ್ಟದ ಅಭಿಯಾನದ ಯಶಸ್ಸನ್ನು ಸಾಬೀತುಪಡಿಸಿದೆ.
Read Full Story

07:22 AM (IST) Aug 13

ಕ್ಯಾರಿ ಬ್ಯಾಗ್‌ಗೆ ಹೆಚ್ಚುವರಿ ಶುಲ್ಕ - ದಾವಣಗೆರೆಯ Zudio ಮಳಿಗೆಗೆ ₹ 30,000 ದಂಡ

ದಾವಣಗೆರೆಯಲ್ಲಿ, ಗ್ರಾಹಕರಿಂದ ಕ್ಯಾರಿ ಬ್ಯಾಗ್‌ಗೆ ಹೆಚ್ಚುವರಿಯಾಗಿ ₹10 ಶುಲ್ಕ ವಿಧಿಸಿದ್ದಕ್ಕಾಗಿ ಜುಡಿಯೊ ಮಳಿಗೆಗೆ ಜಿಲ್ಲಾ ಗ್ರಾಹಕರ ಆಯೋಗ ₹30,000 ದಂಡ ವಿಧಿಸಿದೆ. ಕ್ಯಾರಿ ಬ್ಯಾಗ್‌ಗೆ ಶುಲ್ಕ ವಸೂಲಿ ಮಾಡುವುದು ಅನ್ಯಾಯದ ವ್ಯಾಪಾರ ಮತ್ತು ಸೇವಾ ನ್ಯೂನತೆ ಎಂದು ಆಯೋಗ ತೀರ್ಪು ನೀಡಿದ್ದು, ಈ ಆದೇಶ ಎಲ್ಲಾ ಮಳಿಗೆಗಳಿಗೂ ಅನ್ವಯಿಸುತ್ತದೆ ಎಂದು ಸ್ಪಷ್ಟಪಡಿಸಿದೆ.
Read Full Story

07:14 AM (IST) Aug 13

Yash ಟಾಕ್ಸಿಕ್ ವಿರುದ್ಧ ಕಿಡಿ ಕಾರಿದ ರಾಜೇಂದ್ರ ಸಿಂಗ್ ಬಾಬು ಪುತ್ರಿ ರಿಷಿಕಾ ಸಿಂಗ್

ನಟಿ ರಿಷಿಕಾ ಸಿಂಗ್, ಯಶ್ ಅವರ 'ಟಾಕ್ಸಿಕ್' ಚಿತ್ರದ ನೋಟವನ್ನು 'ಪ್ಯಾಂಟ್ ಬಿಚ್ಕೊಂಡು ಆಗ್ಬಿಟ್ಟಿದ್ದೀಯ ಮಂಗ' ಎಂದು ಕಟುವಾಗಿ ಟೀಕಿಸಿದ್ದಾರೆ. ಯಶ್ ಅವರ ವೈಯಕ್ತಿಕ ಜೀವನದ ಬಗ್ಗೆಯೂ ಮಾತನಾಡಿರುವ ಅವರ ವಿಡಿಯೋ, ಯಶ್ ಅಭಿಮಾನಿಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
Read Full Story

06:57 AM (IST) Aug 13

ಡ್ರಗ್ಸ್ ಪ್ರಕರಣದಲ್ಲಿ ಜೈಲಲ್ಲಿರುವ ನೈಜೀರಿಯಾ ಪ್ರಜೆಗಳನ್ನು ಅವರ ದೇಶಕ್ಕೆ ಗಡಿಪಾರು ಮಾಡಿ - ಹೈಕೋರ್ಟ್‌

ಮಾದಕ ದ್ರವ್ಯ ಮಾರಾಟ ಆರೋಪದಡಿ ದಾಖಲಾಗಿದ್ದ ಎಫ್‌ಐಆರ್‌ ರದ್ದು ಕೋರಿ ನೈಜೀರಿಯಾ ಪ್ರಜೆಯೊಬ್ಬರು ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್, ರಾಜ್ಯದಲ್ಲಿರುವ ಪ್ರತಿ ನೈಜೀರಿಯಾ ಪ್ರಜೆ ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.

Read Full Story

More Trending News