ಬೆಂಗಳೂರು: ಕರ್ನಾಟಕ ಬಂದ್ಗೆ ನಾನು ಬದ್ಧವಾಗಿದ್ದೇನೆ, ಭದ್ರವಾಗಿದ್ದೇನೆ. ಇವತ್ತು ಬಂದ್ ಬೇಡ ಎನ್ನುವವರು ಅವತ್ತೇಕೆ ಒಪ್ಪಿಕೊಂಡರು. ಬಂದ್ಗೆ ಬೆಂಬಲವಿಲ್ಲ ಎನ್ನುವವರು ನನಗೆ ಕೈಕೊಟ್ಟಿದ್ದಾರೆಂದು ಹೇಳುವುದಿಲ್ಲ. ಅವರಿಗವರೇ ಕೈಕೊಟ್ಟಿದ್ದಾರೆ ಎಂದು ಎಂದು ಕನ್ನಡ ಹೋರಾಟಗಾರ ಸಾ.ರಾ.ಗೋವಿಂದು ಹೇಳಿಕೆಗೆ ಕನ್ನಡ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ಪ್ರಶ್ನಿಸಿದರು.
ಕರ್ನಾಟಕ ಬಂದ್ಗೆ ವಿದ್ಯಾರ್ಥಿಗಳು, ಯುವಕರೇ ಶಕ್ತಿ. ಅವರೆಲ್ಲರೂ ಒಗ್ಗಟ್ಟಿನಿಂದ ಬಂದ್ಗೆ ಬೆಂಬಲ ಕೊಡಬೇಕು. ವಿದ್ಯಾರ್ಥಿಗಳು ಬಂದ್ನಲ್ಲಿ ಭಾಗವಹಿಸಲು ಖಾಸಗಿ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳು ರಜೆ ಕೊಡಬೇಕು. ಈ ಬಂದ್ ಕೇವಲ ಕಾವೇರಿ ನೀರನ್ನು ಮಾತ್ರ ಒಳಗೊಂಡಿಲ್ಲ. ಮಹದಾಯಿ, ಕಾವೇರಿ, ಕಳಸಾ- ಬಂಡೂರಿ, ಮೇಕೆದಾಟು ಅಣೆಕಟ್ಟು ಸೇರಿದಂತೆ ನಾಡಿನ ನೆಲ- ಜಲ, ಭಾಷೆ- ಗಡಿ ಸೇರಿದಂತೆ ಎಲ್ಲಾ ವಿಷಯಗಳೆಲ್ಲವನ್ನೂ ಒಳಗೊಂಡು ಕರ್ನಾಟಕ ಬಂದ್ ನಡೆಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.
ಸಮಗ್ರ ಕರ್ನಾಟಕದ ಪರಿಸ್ಥಿತಿ ಕಣ್ಣೀರಿನ ಕಥೆಯಾಗಿದೆ. ಇದನ್ನು ಕಂಡೂ ಬೆಂಬಲ ಕೊಡುವುದಿಲ್ಲ ಎಂದರೆ ಬೇಡ ಬಿಡಿ. ಈ ರಾಜ್ಯ ಏನು ಅವರ ಕೈಯ್ಯಲ್ಲಿದೆಯೇ. ಜನರು ಅವರು ಹೇಳಿದಂತೆ ಕೇಳುವರೇ. ಜನರು ನಮ್ಮ ಜೊತೆಗಿದ್ದರೆ ಅಷ್ಟೇ ಸಾಕು ಎಂದರು. ಪ್ರತಿಭಟನೆಯಲ್ಲಿ ಕನ್ನಡ ಸೇನೆ ರಾಜ್ಯಾಧ್ಯಕ್ಷ ಕುಮಾರ್, ಜಿಲ್ಲಾಧ್ಯಕ್ಷ ಎಚ್.ಸಿ.ಮಂಜುನಾಥ್, ಸೌಭಾಗ್ಯ ಇತರರು ಭಾಗವಹಿಸಿದ್ದರು.
11:10 PM (IST) Aug 13
ಯಶ್ ಅಭಿನಯದ ‘ಟಾಕ್ಸಿಕ್’ ಟ್ರೇಲರ್ ಬಳಿಕ ಹೊಸ ಥಿಯರಿಗಳು ಹರಿದಾಡುತ್ತಿವೆ. ರಾಯ, ನಾದಿಯಾ ಮತ್ತು ಟಿಕೆಟ್ ಪಾತ್ರಗಳ ನಡುವೆ ಏನು ಸಂಬಂಧ? ‘ವಿಜಯ ವಿಕ್ರಮ’ ಹಾಗೂ ‘ಬಭ್ರುವಾಹನ’ ಜೊತೆ ಹೋಲಿಕೆ ಯಾಕೆ?
10:52 PM (IST) Aug 13
'ಟಾಕ್ಸಿಕ್' ಸಿನಿಮಾ ಬಿಡುಗಡೆಗೆ ಸಜ್ಜಾಗಿರುವ ನಟ ಯಶ್, ಇದೀಗ 'ಆಪ್ ಕಿ ಅದಾಲತ್' ಶೋನಲ್ಲಿ ಭಾಗವಹಿಸಿದ ಮೊದಲ ಕನ್ನಡಿಗ ಎನಿಸಿಕೊಂಡಿದ್ದಾರೆ. ಶೋನಲ್ಲಿ ಪತ್ರಕರ್ತ ರಜತ್ ಶರ್ಮಾ ಅವರ ಸವಾಲಿನ ಪ್ರಶ್ನೆಗಳಿಗೆ ಯಶ್ ತಮ್ಮದೇ ಖದರ್ನಲ್ಲಿ ಉತ್ತರಿಸಿದ್ದಾರೆ.
10:50 PM (IST) Aug 13
ಸಚಿವ ಜಮೀರ್ ಅಹಮದ್ ಖಾನ್ ಅವರು ತಮಗೆ ಯಾವುದೇ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿ ನೀಡದಂತೆ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ. ಅಲ್ಲದೇ ಆಗಸ್ಟ್ 15ರ ಧ್ವಜಾರೋಹಣ ಕಾರ್ಯಕ್ರಮದಿಂದಲೂ ವಿನಾಯಿತಿ ಕೋರಿದ್ದಾರೆ. ಕಾರಣವೇನು ಗೊತ್ತಾ? ಇಲ್ಲಿದೆ ಸಂಪೂರ್ಣ ವಿವರ.
10:31 PM (IST) Aug 13
ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಸೆಪ್ಟೆಂಬರ್ 11ರಂದು ಬಿಡುಗಡೆಯಾಗಲಿದೆ. ಸ್ತ್ರೀಕೇಂದ್ರಿತ ಕಥೆ ಮತ್ತು ಸಿನಿಮಾದ ಗಂಭೀರ ವಿಚಾರದ ಬಗ್ಗೆ ನಿರ್ದೇಶಕರು ಹೇಳಿದ್ದೇನು?
10:12 PM (IST) Aug 13
09:56 PM (IST) Aug 13
ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ‘ಶಾಂತಿ ಕ್ರಾಂತಿ’ ಸಿನಿಮಾ ಮತ್ತೆ ಬೆಳ್ಳಿತೆರೆಗೆ ಬರಬೇಕು ಎಂಬ ಅಭಿಮಾನಿಗಳ ಆಸೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲೂ ಈ ಕುರಿತ ಚರ್ಚೆ ಜೋರಾಗಿದೆ.
09:18 PM (IST) Aug 13
ಸ್ವಾತಂತ್ರ್ಯ ದಿನಾಚರಣೆ ವಿಶೇಷವಾಗಿ ಕನ್ನಡ ಚಿತ್ರರಂಗದಲ್ಲಿ ದೇಶಪ್ರೇಮ, ಸ್ವಾತಂತ್ರ್ಯ ಹೋರಾಟ ಮತ್ತು ಸೈನಿಕರ ತ್ಯಾಗವನ್ನು ಕಟ್ಟಿಕೊಟ್ಟ ‘ಕಿತ್ತೂರು ಚೆನ್ನಮ್ಮ’, ‘ಮುತ್ತಿನ ಹಾರ’, ‘ವೀರಪ್ಪ ನಾಯ್ಕ’, ‘ಸಂಗೊಳ್ಳಿ ರಾಯಣ್ಣ’ ಸೇರಿದಂತೆ ಪ್ರಮುಖ ಸಿನಿಮಾಗಳನ್ನು ನೆನಪಿಸಿಕೊಳ್ಳೋಣ.
09:03 PM (IST) Aug 13
ಆಗಸ್ಟ್ 2ರಂದು ನಡೆದ ಪೊಲೀಸ್ ಸಿವಿಲ್ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ವಿಳಂಬ ಮತ್ತು ಸೀರಿಯಲ್ ನಂಬರ್ ಗೊಂದಲದಂತಹ ಭಾರಿ ಲೋಪಗಳು ಉಂಟಾಗಿದ್ದವು. ಇಲಾಖೆ ನೀಡಿರುವ ಈ ಟ್ವಿಸ್ಟ್ಗೆ ಸರ್ಕಾರ ಅಭ್ಯರ್ಥಿಗಳು ಕಂಗಾಲಾಗಿದ್ದಾರೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ.
08:58 PM (IST) Aug 13
ಬೆಂಗಳೂರಿನ ಹೊರವರ್ತುಲ ರಸ್ತೆಯ (ORR) ವೈಟ್ಟಾಪಿಂಗ್ ಕಾಮಗಾರಿಯನ್ನು ಶೀಘ್ರಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಸೂಚಿಸಿದ್ದಾರೆ. ಕಾಮಗಾರಿ ವೇಳೆ ಟ್ರಾಫಿಕ್ ದಟ್ಟಣೆ ತಡೆಯಲು, ಐಟಿ-ಬಿಟಿ ಕಂಪನಿಗಳಿಗೆ 50% ಸಿಬ್ಬಂದಿಗೆ 'ವರ್ಕ್ ಫ್ರಮ್ ಹೋಮ್' ನೀಡಲು ಮಾತುಕತೆ ನಡೆಸಲು ಆದೇಶಿಸಲಾಗಿದೆ.
08:41 PM (IST) Aug 13
ಭಯ, ಚಳಿ, ಆಶ್ಚರ್ಯ ಅಥವಾ ತುಂಬಾ ಇಷ್ಟವಾದ ಹಾಡು ಕೇಳುವಾಗಲೂ ದೇಹದಲ್ಲಿ ಥಟ್ಟಂತ ಮೈ ಜುಮ್ ಅನ್ನುತ್ತದೆ. ಕೈ ಮೇಲಿನ ಕೂದಲು ನಿಮಿರಿ ನಿಲ್ಲುವ ಈ ಅನುಭವವನ್ನೇ ಇಂಗ್ಲಿಷ್ನಲ್ಲಿ "Goosebumps" ಅಂತ ಕರೆಯುತ್ತಾರೆ.
08:22 PM (IST) Aug 13
ಹಾಸನ ಜಿಲ್ಲೆಯ ಹಳೇಬೀಡು ಪೊಲೀಸ್ ಠಾಣೆಯ ಪಿಎಸ್ಐ ಮಂಜುನಾಥ್, ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದೂರುದಾರರಿಂದ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದೂರುದಾರರ ದೂರಿನ ಮೇರೆಗೆ ಪಕ್ಕಾ ಪ್ಲಾನ್ ಮಾಡಿ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು, ಲಂಚದ ಹಣದ ಸಮೇತ ಅಧಿಕಾರಿಯನ್ನು ರೆಡ್-ಹ್ಯಾಂಡಾಗಿ ಬಂಧಿಸಿದ್ದಾರೆ.
08:19 PM (IST) Aug 13
ವಿಮಾನದಲ್ಲಿ ಕುಳಿತು ಹೊರಗಿನ ದೃಶ್ಯಗಳನ್ನು ನೋಡಲು ಕಿಟಕಿಯತ್ತ ಕಣ್ಣು ಹಾಯಿಸುವುದು ಸಾಮಾನ್ಯ. ಆದರೆ ವಿಮಾನದ ಕಿಟಕಿಗಳು ಚೌಕಾಕಾರದಲ್ಲಿರದೆ ದುಂಡಾದ ಅಂಚುಗಳನ್ನು ಹೊಂದಿರುವುದೇಕೆ ಎಂದು ಎಂದಾದರೂ ಯೋಚಿಸಿದ್ದೀರಾ?
08:10 PM (IST) Aug 13
ಬೆಂಗಳೂರು ಹೊರವಲಯದ ಆನೇಕಲ್ನಲ್ಲಿ ಹದಗೆಟ್ಟ ರಸ್ತೆಯಿಂದಾಗಿ ಸಂಭವಿಸಿದ ಅಪಘಾತದಲ್ಲಿ ಕೇರಳ ಮೂಲದ ಯುವತಿ ಮೃತಪಟ್ಟಿದ್ದಾರೆ. ಈ ಘಟನೆಯಿಂದ ರೊಚ್ಚಿಗೆದ್ದ ಸ್ಥಳೀಯರು ರಸ್ತೆ ದುರಸ್ತಿಗೆ ಆಗ್ರಹಿಸಿದ್ದಾರೆ. ಅಧಿಕಾರಿಗಳು ಒಂದು ವಾರದೊಳಗೆ ತಾತ್ಕಾಲಿಕ ದುರಸ್ತಿ ಮಾಡುವುದಾಗಿ ಭರವಸೆ ನೀಡಿದ್ದಾರೆ.
07:57 PM (IST) Aug 13
ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾ ಬಿಡುಗಡೆಗೂ ಮುನ್ನವೇ ವಿದೇಶಗಳಲ್ಲಿ, ಅಡ್ವಾನ್ಸ್ ಬುಕಿಂಗ್ ಮೂಲಕ ಭರ್ಜರಿ ಸದ್ದು ಮಾಡುತ್ತಿದೆ. ಚಿತ್ರದ ಬುಕಿಂಗ್ ಜಾಗತಿಕ ಮಟ್ಟದಲ್ಲಿ ಹೆಚ್ಚಾಗಿದೆ. ಈ ಕುರಿತು ಕಂಪ್ಲೀಟ್ ಸ್ಟೋರಿ ಇಲ್ಲಿದೆ.
07:23 PM (IST) Aug 13
06:29 PM (IST) Aug 13
ಸಿದ್ದಾರ್ಥ್ ಮಲ್ಹೋತ್ರಾ ಜೊತೆಗಿನ ಹಳೆ ಸಂಬಂಧದ ಕಾರಣಕ್ಕೆ ಕಿಯಾರಾ ಅಡ್ವಾಣಿ ಮತ್ತು ತಾರಾ ಸುತಾರಿಯಾ ನಡುವೆ ಎಲ್ಲವೂ ಸರಿ ಇಲ್ಲ ಅಂತೊಂದು ವಿಡಿಯೋ ವೈರಲ್ ಆಗಿದೆ. ಇವರಿಬ್ಬರ ನಡುವೆ ಮುನಿಸು ಇದ್ಯಾ? ಇಂಟರ್ನೆಟ್ನಲ್ಲಿ ಏನಿದು ಚರ್ಚೆ? ತಿಳಿಯಲು ಮುಂದೆ ಓದಿ.
06:04 PM (IST) Aug 13
ಕನ್ನಡದ ಹಿಟ್ ಸಿನಿಮಾ ‘777 ಚಾರ್ಲಿ’ ಮೂಲಕ ಪ್ರೇಕ್ಷಕರ ಮನಗೆದ್ದ ನಿರ್ದೇಶಕ ಕಿರಣ್ ರಾಜ್ ಇದೀಗ ಬಾಲಿವುಡ್ನತ್ತ ಹೆಜ್ಜೆ ಇಡಲು ಸಜ್ಜಾಗಿದ್ದಾರೆ ಎನ್ನಲಾಗಿದೆ. 2022ರಲ್ಲಿ ಬಿಡುಗಡೆಯಾದ ‘777 ಚಾರ್ಲಿ’ ಬಳಿಕ..
06:04 PM (IST) Aug 13
ಕೇರಳ ಮೇಧಾ ಆಕರ್ಷ್ ಅವರು ಇಪಿಎಫ್ಒದಲ್ಲಿ ಉದ್ಯೋಗಿಯಾಗಿದ್ದು, ಅವರಿಗೆ ಮೂರು ವರ್ಷದ ಮಗು ಕೂಡ ಇತ್ತು. ಕಳಪೆ ರಸ್ತೆಯೇ ಅಪಘಾತಕ್ಕೆ ಕಾರಣವಾಗಿದ್ದು, ಅವರ ನ್ಯಾಯಬೇಕು ಎಂದು ಸ್ಥಳೀಯರು ಪ್ರತಿಘಟನೆ ನಡೆಸಿದ್ದಾರೆ.
05:40 PM (IST) Aug 13
Sentinelese Tribe: ಆಧುನಿಕ ನಾಗರಿಕತೆಯ ಸಂಪರ್ಕವನ್ನೇ ಹೊಂದದೆ, ಹೊರ ಜಗತ್ತಿನಿಂದ ಸಂಪೂರ್ಣವಾಗಿ ಪ್ರತ್ಯೇಕವಾಗಿ ಬದುಕುತ್ತಿರುವ ಕೆಲವು ಬುಡಕಟ್ಟು ಸಮುದಾಯಗಳು ಇಂದಿಗೂ ವಿಶ್ವದ ವಿವಿಧ ಭಾಗಗಳಲ್ಲಿ ಅಸ್ತಿತ್ವದಲ್ಲಿವೆ.
05:28 PM (IST) Aug 13
ಮೂರು ವರ್ಷಗಳ ದೀರ್ಘ ವಿರಾಮದ ನಂತರ, ಗ್ರೇಟರ್ ಬೆಂಗಳೂರು ಪ್ರಾಧಿಕಾರವು (GBA) ತನ್ನ ಕಲ್ಯಾಣ ಯೋಜನೆಯನ್ನು ಪುನರಾರಂಭಿಸಿದೆ. ಗೌರಿ-ಗಣೇಶ ಹಬ್ಬದ ಕೊಡುಗೆಯಾಗಿ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಆ ಯೋಜನೆ ಯಾವುದು ಗೊತ್ತಾ?
05:09 PM (IST) Aug 13
Snake Psychology: ಹಾವಿನ ಮುಂದೆ ಕನ್ನಡಿಯನ್ನು ಇಟ್ಟರೆ, ಅದರಲ್ಲಿ ಕಾಣಿಸುವ ಪ್ರತಿಬಿಂಬವನ್ನು ಮತ್ತೊಂದು ಹಾವೆಂದು ಭಾವಿಸಿ ಅದು ವಿಚಿತ್ರವಾಗಿ ವರ್ತಿಸುವುದನ್ನು ಕೆಲವೊಮ್ಮೆ ಕಾಣಬಹುದು. ಕೆಲವೊಮ್ಮೆ ಹೆಡೆ ಎತ್ತುವುದು.
04:55 PM (IST) Aug 13
ಬೆಂಗಳೂರಿನಲ್ಲಿ ರಾತ್ರಿ 8ರಿಂದ ಬೆಳಗ್ಗೆ 8ರವರೆಗೆ ಕೆಲವೆಡೆ ಉಚಿತ ಪಾರ್ಕಿಂಗ್ ಮಾಡಲು ಅವಕಾಶ ನೀಡಲಾಗಿದೆ. ಉಳಿದಂತೆ ಬೈಸಿಕಲ್ ಹಾಗೂ ಆಟೋ ನಿಲ್ದಾಣಗಳಿಗೆ ಪಾರ್ಕಿಂಗ್ ಶುಲ್ಕ ವಿಧಿಸಿಲ್ಲ.
04:55 PM (IST) Aug 13
Anupama Parameswaran: ಖ್ಯಾತ ನಟಿ ಅನುಪಮಾ ಪರಮೇಶ್ವರನ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ಇತ್ತೀಚೆಗೆ ಅವರ ವೈಯಕ್ತಿಕ ಜೀವನವೇ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
04:52 PM (IST) Aug 13
04:41 PM (IST) Aug 13
ಕರ್ನಾಟಕ ಸರ್ಕಾರವು ₹6,253 ಕೋಟಿ ಮೌಲ್ಯದ 83 ಕೈಗಾರಿಕಾ ಯೋಜನೆಗಳಿಗೆ ಅನುಮೋದನೆ ನೀಡಿದ್ದು, ರಾಜ್ಯದ ಕೈಗಾರಿಕಾ ಬೆಳವಣಿಗೆಗೆ ದೊಡ್ಡ ಉತ್ತೇಜನ ನೀಡಿದೆ.
04:38 PM (IST) Aug 13
Vijayalakshmi Darshan Instagram Post: ನಟ ದರ್ಶನ್ ಜೈಲು ಸೇರಿದ ಬಳಿಕ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿರುವ ಪೋಸ್ಟ್ಗಳು ಆಗಾಗ್ಗೆ ಚರ್ಚೆಗೆ ಗ್ರಾಸವಾಗುತ್ತಿವೆ.
04:18 PM (IST) Aug 13
ಗ್ಯಾಸ್ ಅಥವಾ ಬೆಂಕಿಯಿಲ್ಲದೆ ಕೋಳಿಯನ್ನು ಬೇಯಿಸಬಹುದು ಎಂಬ ವೈರಲ್ ಸುದ್ದಿಯೊಂದು ಹರಿದಾಡುತ್ತಿದೆ. ಇದು ಸೈದ್ಧಾಂತಿಕವಾಗಿ ಸಾಧ್ಯವಾದರೂ, ಹೇಗೆ ಎನ್ನುವುದರ ಸಂಪೂರ್ಣ ವಿವರ ಇಲ್ಲಿದೆ.
03:20 PM (IST) Aug 13
ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಅವರಿಗೆ ಆಪ್ತ ಗೆಳೆಯನೇ ಸಂಕಷ್ಟ ತಂದೊಡ್ಡಿದ್ದಾನೆ. ತಾನೇ ಚಿನ್ನ ನೀಡಿದ್ದಾಗಿ ಒಪ್ಪಿಕೊಂಡಿರುವ ಆತ, ಅದನ್ನು ದುಬೈನಲ್ಲಿ ನೀಡಿರುವುದರಿಂದ ಭಾರತದ ಕಾನೂನು ತನಗೆ ಅನ್ವಯವಾಗುವುದಿಲ್ಲ ಎಂದು ವಾದಿಸಿ, ಪ್ರಕರಣದ ಸಂಪೂರ್ಣ ಹೊಣೆಯನ್ನು ನಟಿಯ ಮೇಲೆ ಹಾಕಲು ಯತ್ನಿಸಿದ್ದಾನೆ.
02:12 PM (IST) Aug 13
01:56 PM (IST) Aug 13
01:45 PM (IST) Aug 13
01:09 PM (IST) Aug 13
ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ಪತ್ನಿ ದಿ.ಚೆನ್ನಮ್ಮರ ಹೆಸರನ್ನು ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಇಡಬೇಕೆಂದು ಜೆಡಿಎಸ್ ಶಾಸಕ ಶರವಣ ಅವರು ವಿಧಾನ ಪರಿಷತ್ನಲ್ಲಿ ಮನವಿ ಮಾಡಿದ್ದಾರೆ. ಸಂತಾಪ ಸೂಚನೆ ವೇಳೆ ಈ ಪ್ರಸ್ತಾಪವನ್ನು ಮುಂದಿಟ್ಟಿದ್ದಾರೆ.
12:37 PM (IST) Aug 13
ಪುತ್ತೂರಿನ ಕೊಕ್ಕಡದಲ್ಲಿ, ರಾತ್ರಿ ವೇಳೆ ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ಶೇಕ್ ಮುಖ್ತಾರ್ ಎಂಬಾತನಿಗೆ ಸ್ಥಳೀಯ ಯುವಕರ ಗುಂಪು ಹಲ್ಲೆ ನಡೆಸಿದೆ. ಬಾಲಕಿಯ ತಾಯಿ ಅಪಹರಣದ ದೂರು ನೀಡಿದ್ದು, ಹಲ್ಲೆಗೊಳಗಾದ ವ್ಯಕ್ತಿ ಕೂಡ ಪ್ರತಿ ದೂರು ದಾಖಲಿಸಿದ್ದು, ಪೊಲೀಸರಿಂದ ಮುಂದುವರಿದ ತನಿಖೆ.
12:30 PM (IST) Aug 13
12:15 PM (IST) Aug 13
ಪೊಲೀಸರ ಹಲ್ಲೆಯಿಂದ ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿಯೇ ತನ್ನ ಗಂಡನ ಸಾವಾಗಿದೆ ಎಂದು ಮೃತನ ಪತ್ನಿ ಹಾಗೂ ಕುಟುಂಸ್ಥರು ಆರೋಪ ಮಾಡಿದ್ದರು. ಹೀಗಾಗಿ ಪ್ರಕರಣವನ್ನು ಸಿಐಡಿಗೆ ವಹಿಸುವಂತೆ ಒತ್ತಡ ಇದ್ದ ಹಿನ್ನೆಲೆ ಕಳೆದ ವಾರ ಪ್ರಕರಣ ಸಿಐಡಿಗೆ ಹಸ್ತಾಂತರ ಮಾಡಲಾಗಿತ್ತು.
11:38 AM (IST) Aug 13
ರಾಹುಲ್ ಗಾಂಧಿ(Rahul Gandhi) ದೇಶದ ಪ್ರಧಾನಿಯಾಗಬೇಕು. ದೇಶದಲ್ಲಿ ಏಕತೆ, ಪ್ರಜಾಪ್ರಭುತ್ವ ಉಳಿಸಿ, ಸಾಮಾಜಿಕ ನ್ಯಾಯವನ್ನು ಬಲಪಡಿಸಬೇಕು ಎಂದು ಆಗ್ರಹಿಸಿ ಆಂಧ್ರಪ್ರದೇಶದ ವಕೀಲ ಕಾಟೂರಿ ವೆಂಕಟೇಶ್ವರಲು ಬೃಹತ್ ಪಾದಯಾತ್ರೆ ನಡೆಸುತ್ತಿದ್ದಾರೆ ಇಂದು ಕೂಡ್ಲಿಗಿಗೆ ಆಗಮಿಸಿತು.
10:31 AM (IST) Aug 13
2026ರ ಆಗಸ್ಟ್ 15ರಂದು ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಿದೆ. 1947ರ ಮೊದಲ ಆಚರಣೆಯಿಂದ ಲೆಕ್ಕ ಹಾಕಿದರೆ ಇದು 80ನೇ ಆಚರಣೆಯಾಗುತ್ತದೆ. ಆದರೆ, 1947ರಿಂದ 2026ರ ನಡುವೆ 79 ವರ್ಷಗಳು ಕಳೆದಿರುವುದರಿಂದ ದೇಶವು ಸ್ವತಂತ್ರವಾಗಿ 79 ವರ್ಷಗಳನ್ನು ಪೂರೈಸಿದಂತಾಗುತ್ತದೆ. ಹೀಗಾಗಿ 2026ರ ಆಗಸ್ಟ್ 15 ಭಾರತದ 80ನೇ ಸ್ವಾತಂತ್ರ್ಯ ದಿನೋತ್ಸವ ಹಾಗೂ 79 ವರ್ಷಗಳ ಸ್ವಾತಂತ್ರ್ಯದ ಸಂಕೇತವಾಗಿದೆ.
09:49 AM (IST) Aug 13
09:27 AM (IST) Aug 13
08:25 AM (IST) Aug 13