LIVE NOW
Published : Dec 13, 2025, 07:28 AM ISTUpdated : Dec 13, 2025, 11:54 PM IST

Karnataka News Live: ವನ್ಯಜೀವಿ ಸಂರಕ್ಷಣೆ - ಏಷ್ಯಾನೆಟ್ ಸುವರ್ಣ ನ್ಯೂಸ್ & ಕನ್ನಡಪ್ರಭದ ಅಭಿಯಾನಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ಸಾಥ್!

ಸಾರಾಂಶ

ಬೆಳಗಾವಿ: ದಿನ ಒಬ್ಬೊಬ್ಬ ಸ್ಥಳೀಯರು, ನಮ್ಮ ಕ್ಷೇತ್ರದವರು ಪ್ರೀತಿಯಿಂದ ಊಟ ತಂದು ಕೊಡುತ್ತಿದ್ದಾರೆ. ಊಟ ಬೇಡ ಎನ್ನಲು ಆಗುತ್ತದೆಯೇ? ಪ್ರೀತಿಯಿಂದ ಕರೆಯುತ್ತಾರೆ. ಅದಕ್ಕೆ ಒಂದೊಂದು ದಿನ ಒಂದೊಂದು ಕಡೆ ಊಟಕ್ಕೆ ಹೋಗುತ್ತೇವೆ. ಇದು ಯಾವ ಔತಣಕೂಟವೂ ಅಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. 

ಸುದ್ದಿಗಾರರೊಂದಿಗೆ ಮಾತನಾಡಿ, ಗುರುವಾರ ಶಾಸಕರ ಜತೆ ಔತಣಕೂಟದ ಬಗ್ಗೆ ಪ್ರತಿಕ್ರಿಯಿಸಿ, ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ದೊಡ್ಡಣ್ಣನವರ ಕಳೆದ 15 ವರ್ಷಗಳಿಂದ ಮನೆಗೆ ಊಟಕ್ಕೆ ಬನ್ನಿ ಎಂದು ಕರೆಯುತ್ತಿದ್ದರು. ನಾವೆಲ್ಲ ಹೋಗಿದ್ದೆವು. ನನ್ನ ಕ್ಷೇತ್ರದ ಹುಡುಗನೊಬ್ಬ ಇಲ್ಲಿ ಕೆಲಸ ಮಾಡುತ್ತಿದ್ದಾನೆ. ಆತ ಮುದ್ದೆ, ಉಪ್ಸಾರು ಊಟ ಮಾಡಿ ಕಳಿಸುತ್ತೇವೆ ಎನ್ನುತ್ತಿದ್ದಾನೆ. ನಾಡಿದ್ದು ನಮ್ಮ ಆಸೀಫ್ ಸೇಠ್, ಫಿರೋಜ್ ಸೇಠ್ ಊಟಕ್ಕೆ ಕರೆದಿದ್ದಾರೆ ಎಂದರು.

 

11:54 PM (IST) Dec 13

ವನ್ಯಜೀವಿ ಸಂರಕ್ಷಣೆ - ಏಷ್ಯಾನೆಟ್ ಸುವರ್ಣ ನ್ಯೂಸ್ & ಕನ್ನಡಪ್ರಭದ ಅಭಿಯಾನಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ಸಾಥ್!

Golden Star Ganesh wildlife conservation :ಏಷಿಯಾನೆಟ್ ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭ ಆಯೋಜಿಸಿದ್ದ 5ನೇ ವನ್ಯಜೀವಿ ಸಂರಕ್ಷಣಾ ಅಭಿಯಾನದಲ್ಲಿ ರಾಯಭಾರಿ ಗೋಲ್ಡನ್ ಸ್ಟಾರ್ ಗಣೇಶ್ ಚಾಮರಾಜನಗರದ ಮೀಣ್ಯಂ ಗ್ರಾಮದಲ್ಲಿ ಭಾಗವಹಿಸಿದ್ದರು. ಅರಣ್ಯ ಸಂರಕ್ಷಣೆಯ ಮಹತ್ವವನ್ನು ಸಾರಿದರು.

Read Full Story

11:00 PM (IST) Dec 13

ಚಿಕ್ಕಮಗಳೂರು - ಹೈಟೆಕ್ ಕಾರ್‌ನಲ್ಲಿ ಗೋ ಕಳ್ಳತನ; ಸಿನಿಮೀಯ ಶೈಲಿಯಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತರಿಂದ ಚೇಸಿಂಗ್!

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ, ಹೈಟೆಕ್ ಕಾರ್‌ನಲ್ಲಿ ಗೋವುಗಳನ್ನು ಕಳ್ಳತನ ಮಾಡುತ್ತಿದ್ದವರನ್ನು ಹಿಂದೂಪರ ಸಂಘಟನೆ ಕಾರ್ಯಕರ್ತರು ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿದ್ದಾರೆ. ಆದರೆ, ಕಳ್ಳರು ಅತಿವೇಗವಾಗಿ ಚಲಾಯಿಸಿ ತಪ್ಪಿಸಿಕೊಂಡಿದ್ದು, ಈ ಘಟನೆ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗಿದೆ..

Read Full Story

10:37 PM (IST) Dec 13

BREAKING - ದಾವಣಗೆರೆ ಗಡಿ ಭಾಗದಲ್ಲಿ ಭಾರೀ ಸ್ಫೋಟದ ಸದ್ದು; ಭೂಮಿ ಕಂಪಿಸಿದ ಅನುಭವ,ಚಿಕ್ಕಮಲ್ಲನಹೊಳೆ ಗ್ರಾಮಸ್ಥರು ಆತಂಕ

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಗ್ರಾಮದಲ್ಲಿ ರಾತ್ರಿ ಭಾರೀ ಸ್ಫೋಟದ ಸದ್ದಿನೊಂದಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಇದರಿಂದ ಭಯಭೀತರಾದ ಗ್ರಾಮಸ್ಥರು ಮನೆಯಿಂದ ಹೊರಬಂದಿದ್ದು, ಇದು ವಿಜಯನಗರ ಜಿಲ್ಲೆಯ ಕಡೆಯಿಂದ ಬಂದ ಶಬ್ದವಿರಬಹುದು ಎಂದು ತಹಸೀಲ್ದಾರ್ ಸ್ಪಷ್ಟನೆ ನೀಡಿದ್ದಾರೆ.
Read Full Story

10:06 PM (IST) Dec 13

20 ವರ್ಷಗಳ ಹಿಂದೆ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದ ವೃದ್ಧ ದಂಪತಿಯನ್ನ ಒಂದುಗೂಡಿಸಿದ ಲೋಕ ಅದಾಲತ್!

ಹಾವೇರಿಯ ಶಿಗ್ಗಾವಿ ಕೋರ್ಟ್‌ನಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್, 20 ವರ್ಷಗಳ ಹಿಂದೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ 80 ವರ್ಷದ ಅಜ್ಜ ಮತ್ತು 75 ವರ್ಷದ ಅಜ್ಜಿಯನ್ನು ಯಶಸ್ವಿಯಾಗಿ ಒಂದುಗೂಡಿಸಿದೆ. ನ್ಯಾಯಾಧೀಶರು ಮತ್ತು ವಕೀಲರ ಮನವೊಲಿಕೆಯ ಫಲವಾಗಿ, ನಾಲ್ಕು ಜೋಡಿಗಳು ಒಂದಾಗಿದ್ದಾರೆ.

Read Full Story

10:03 PM (IST) Dec 13

ಮೋನಿಕಾ ಜೊತೆ ಪೊಲೀಸಪ್ಪನ ಅಕ್ರಮ ಸಂಬಂಧ ಕೇಸ್‌ಗೆ ಟ್ವಿಸ್ಟ್, ಕಿಚುಕಿಚುಮಾ ಎಂದ ರೀಲ್ಸ್ ರಾಣಿ

ಮೋನಿಕಾ ಜೊತೆ ಪೊಲೀಸಪ್ಪನ ಅಕ್ರಮ ಸಂಬಂಧ ಕೇಸ್‌ಗೆ ಟ್ವಿಸ್ಟ್, ಕಿಚುಕಿಚುಮಾ ಎಂದ ರೀಲ್ಸ್ ರಾಣಿ, ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾದ ಪೊಲೀಸ್ ಪೇದೆ ಜೊತೆ ಮೋನಿಕಾ ಪರಾರಿಯಾದ ಘಟನೆ ಭಾರಿ ಕೋಲಾಹಲ ಸೃಷ್ಟಿಸಿದೆ. ಇದೀಗ ಸ್ವತಃ ಮೋನಿಕಾ ಕೇಸ್‌ಗೆ ಟ್ವಿಸ್ಟ್ ಕೊಟ್ಟಿದ್ದಾಳೆ.

Read Full Story

09:43 PM (IST) Dec 13

ನವೋದಯ ಪ್ರವೇಶ ಪರೀಕ್ಷೆಯಲ್ಲಿ ಶಿಕ್ಷಕನಿಂದಲೇ ಮೋಸ! ಮಗನಿಗೆ ಅಕ್ರಮವಾಗಿ ಉತ್ತರ ಹೇಳಿಕೊಟ್ಟ ತಂದೆ!

ಉತ್ತರ ಕನ್ನಡದ ಹಳಿಯಾಳದಲ್ಲಿ ನಡೆದ ನವೋದಯ ಪ್ರವೇಶ ಪರೀಕ್ಷೆಯಲ್ಲಿ, ಶಿಕ್ಷಕರೊಬ್ಬರು ತಮ್ಮ ಮಗನಿಗೆ ಅಕ್ರಮವಾಗಿ ಉತ್ತರ ಹೇಳಿಕೊಡುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ. ಈ ಘಟನೆಯಿಂದ ಆಕ್ರೋಶಗೊಂಡ ಪೋಷಕರು ಪರೀಕ್ಷೆಯನ್ನು ರದ್ದುಗೊಳಿಸಿ, ಶಿಕ್ಷಕನ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.
Read Full Story

09:23 PM (IST) Dec 13

ಉತ್ತರಕನ್ನಡ - ನೀರು ಕೇಳುವ ನೆಪದಲ್ಲಿ ವೃದ್ಧೆಯ ಚಿನ್ನದ ಸರ ಎಗರಿಸಿ ಖದೀಮರು ಎಸ್ಕೇಪ್!

ಭಟ್ಕಳ ತಾಲೂಕಿನ ಬೆಳಕೆ ಗರಡಿ ಹಿತ್ತಲು ಪ್ರದೇಶದಲ್ಲಿ, ಕೋರಿಯರ್‌ ನೀಡುವ ನೆಪದಲ್ಲಿ ಬಂದ ಇಬ್ಬರು ಕಳ್ಳರು 70 ವರ್ಷದ ವೃದ್ಧೆಯೊಬ್ಬರಿಗೆ ನೀರು ಕೇಳಿ ಗಮನ ಬೇರೆಡೆ ಸೆಳೆದು ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದಾರೆ. ಭಟ್ಕಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read Full Story

08:23 PM (IST) Dec 13

ಬೆಂಗಳೂರು - 2 ಲಕ್ಷ ಬೆಲೆಯ ಗಿಳಿ ರಕ್ಷಿಸಲು ಹೋಗಿ ಕರೆಂಟ್‌ ಶಾಕ್‌ ಹೊಡೆದು ಪ್ರಾಣತೆತ್ತ ಯುವಕ!

ಬೆಂಗಳೂರಿನ ಗಿರಿನಗರದಲ್ಲಿ, ಹೈಟೆನ್ಷನ್ ವೈಯರ್ ಮೇಲೆ ಕುಳಿತಿದ್ದ ಸಾಕು ಗಿಳಿಯನ್ನು ರಕ್ಷಿಸಲು ಯತ್ನಿಸಿದ 32 ವರ್ಷದ ಯುವಕನೊಬ್ಬ ವಿದ್ಯುತ್ ಶಾಕ್‌ನಿಂದ ಮೃತಪಟ್ಟಿದ್ದಾನೆ. ಅಪಾರ್ಟ್‌ಮೆಂಟ್ ಕಾಂಪೌಂಡ್ ಮೇಲೆ ನಿಂತು ಸ್ಟೀಲ್ ಪೈಪ್ ಬಳಸಿ ಗಿಳಿಯನ್ನು ಓಡಿಸಲು ಯತ್ನಿಸಿದಾಗ ಈ ದುರ್ಘಟನೆ ಸಂಭವಿಸಿದೆ. 

Read Full Story

08:20 PM (IST) Dec 13

ವಿಮಾನದಲ್ಲಿ ಹೃದಯಾಘಾತ- ಅಮೆರಿಕ ಪ್ರಜೆಯ ಜೀವ ಉಳಿಸಿದ ಡಾ. ಅಂಜಲಿ ನಿಂಬಾಳ್ಕರ್

ಗೋವಾದಿಂದ ನವದೆಹಲಿಗೆ ತೆರಳುತ್ತಿದ್ದ ವಿಮಾನದಲ್ಲಿ ಅಮೆರಿಕನ್ ಯುವತಿಯೊಬ್ಬರು ಅಸ್ವಸ್ಥರಾದಾಗ, ಮಾಜಿ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ಅವರು ಸಿಪಿಆರ್ ನೀಡಿ ಪ್ರಾಣ ಉಳಿಸಿದ್ದಾರೆ. ವಿಮಾನ ಇಳಿಯುವವರೆಗೂ ಯುವತಿಯ ಆರೈಕೆ ಮಾಡಿ, ಆಸ್ಪತ್ರೆಗೆ ಸೇರಿಸಲು ವ್ಯವಸ್ಥೆ. ಸಮಯೋಚಿತ ಸೇವೆಗೆ ವ್ಯಾಪಕ ಪ್ರಶಂಸೆ

Read Full Story

07:57 PM (IST) Dec 13

ಮಣ್ಣಲ್ಲಿ ಮರೆಯಾಗಿದ್ದ ಜೈನರ ಕಾಲದ ಕಲ್ಯಾಣಿಗೆ ಮರುಜೀವ ನೀಡಿದ ಉದ್ಯೋಗ ಖಾತ್ರಿ ಯೋಜನೆ

ಶಿರಸಿ ತಾಲೂಕಿನ  ಐತಿಹಾಸಿಕ ಶಂಕರ ನಾರಾಯಣ ದೇವಳದ ಪಾಳುಬಿದ್ದಿದ್ದ ಕಲ್ಯಾಣಿಯನ್ನು ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಪುನಶ್ಚೇತನಗೊಳಿಸಲಾಗಿದೆ. ಈ ಕಾಮಗಾರಿಯಿಂದಾಗಿ ಕಲ್ಯಾಣಿಯ ನೀರಿನ ಸಂಗ್ರಹ ಸಾಮರ್ಥ್ಯ ಹೆಚ್ಚಾಗಿದ್ದು, ದೈನಂದಿನ ಬಳಕೆಗೆ ಅನುಕೂಲವಾಗಿದೆ ಮತ್ತು ಪ್ರವಾಸಿಗರನ್ನು ಆಕರ್ಷಿಸುತ್ತಿದೆ.  

Read Full Story

07:57 PM (IST) Dec 13

ನಟಿ ಶಿಲ್ಪಾ ಶೆಟ್ಟಿ ಒಡೆತನದ ಪಬ್‌ನಲ್ಲಿ ಉದ್ಯಮಿಯಿಂದ ಗಲಾಟೆ; ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನ!

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಒಡೆತನದ ಬೆಂಗಳೂರಿನ ಬ್ಯಾಸ್ಟಿಯನ್ ಪಬ್‌ನಲ್ಲಿ ಮಧ್ಯರಾತ್ರಿ ಗಲಾಟೆ ನಡೆದಿದೆ. ಸರ್ವೀಸ್ ವಿಚಾರವಾಗಿ ಉದ್ಯಮಿ ಸತ್ಯ ನಾಯ್ಡು ಮತ್ತು ಸಿಬ್ಬಂದಿ ನಡುವೆ ವಾಗ್ವಾದ ನಡೆದು, ಹಲ್ಲೆಗೆ ಯತ್ನಿಸಲಾಗಿದೆ ಎಂದು ಆರೋಪ. ಕಬ್ಬನ್ ಪಾರ್ಕ್ ಪೊಲೀಸರಿಂದ ಘಟನೆ ಬಗ್ಗೆ ತನಿಖೆ 

Read Full Story

07:42 PM (IST) Dec 13

ಕರಾವಳಿಗೆ ಕೇಂದ್ರದ ಬಲ, ಹಂಗಾರಕಟ್ಟೆ ಸೇರಿ ಕರಾವಳಿಯ ಹಲವು ಬಂದರುಗಳ ಅಭಿವೃದ್ಧಿಗೆ ನೂರಾರು ಕೋಟಿ ಮಂಜೂರು

ಕೇಂದ್ರದ ಸಾಗರಮಾಲಾ ಮತ್ತು ಮತ್ಸ್ಯ ಸಂಪದ ಯೋಜನೆಯಡಿ ಹಂಗಾರಕಟ್ಟೆ ಸೇರಿದಂತೆ ಕರಾವಳಿಯ ಹಲವು ಬಂದರುಗಳ ಅಭಿವೃದ್ಧಿಗೆ ಕೋಟ್ಯಂತರ ರುಪಾಯಿ ಅನುದಾನ ಮಂಜೂರಾತಿ ಪ್ರಕ್ರಿಯೆಯಲ್ಲಿದೆ. ಇದರೊಂದಿಗೆ, ಬೆಂಗಳೂರು-ಕಾರವಾರ ವಂದೇ ಭಾರತ್ ರೈಲು ಶೀಘ್ರ ಆರಂಭಿಸುವಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿದ್ದಾರೆ

Read Full Story

07:22 PM (IST) Dec 13

ಶಾಕಿಂಗ್ - ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಧಗಧಗನೆ ಹೊತ್ತಿ ಉರಿದ 40 ಎಕರೆ ಕಬ್ಬಿನ ಗದ್ದೆ!

ಹಾವೇರಿ ತಾಲೂಕಿನ ಮೇವುಂಡಿ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ 40 ಎಕರೆಗೂ ಅಧಿಕ ಕಬ್ಬಿನ ಗದ್ದೆ ಹೊತ್ತಿ ಉರಿದಿದೆ. ಈ ದುರ್ಘಟನೆಯಿಂದ ಏಳು ಮಂದಿ ರೈತರು ಸುಮಾರು 80 ಲಕ್ಷಕ್ಕೂ ಅಧಿಕ ಮೌಲ್ಯದ ಬೆಳೆಯನ್ನು ಕಳೆದುಕೊಂಡು ಕಂಗಾಲಾಗಿದ್ದಾರೆ.
Read Full Story

07:02 PM (IST) Dec 13

ನಟ ರಿಷಬ್ ಶೆಟ್ಟಿ ಹರಕೆ ಕೋಲ ವಿವಾದ, ದೈವದ ಕಟ್ಟುಕಟ್ಟಳೆಯಲ್ಲಿ ಲೋಪವಾಗಿಲ್ಲ - ವಾರಾಹಿ ದೈವಸ್ಥಾನ ಸಮಿತಿ ಸ್ಪಷ್ಟನೆ

ಕಾಂತಾರ ಸಿನೆಮಾದ ಯಶಸ್ಸಿಗಾಗಿ ನಟ ರಿಷಬ್ ಶೆಟ್ಟಿ ಸಲ್ಲಿಸಿದ್ದ ಹರಕೆಯ ಕೋಲದ 'ಎಣ್ಣೆಬೂಳ್ಯ' ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ, ಬಾರೆಬೈಲ್ ಜಾರಂದಾಯ ದೈವಸ್ಥಾನದ ಸಮಿತಿಯು ಸ್ಪಷ್ಟೀಕರಣ ನೀಡಿದೆ. ದೈವದ ಕಟ್ಟುಕಟ್ಟಳೆಯಲ್ಲಿ ಯಾವುದೇ ಲೋಪವಾಗಿಲ್ಲ ಮತ್ತು ದೈವದ ಅನುಮತಿಯಂತೆ ಎಲ್ಲವೂ ನಡೆದಿದೆ ಎಂದಿದೆ.

Read Full Story

06:52 PM (IST) Dec 13

ಫೇಸ್‌ಬುಕ್ ಚಿಟ್ಟೆಯ ಮುಖ ನೋಡಿ ಹನಿಹೀರಲು ಬಂದವನೇ ಟ್ರ್ಯಾಪ್ ಆಗಿಹೋದ, ಯುವಕನ ಹಲ್ಲೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟವರು ಎಸ್ಕೇಪ್!

Madikeri honey trap case :ಫೇಸ್ಬುಕ್‌ನಲ್ಲಿ ಪರಿಚಯವಾದ ಮಡಿಕೇರಿಯ ಯುವತಿಯನ್ನು ಭೇಟಿಯಾಗಲು ಬಂದ ಮಂಡ್ಯದ ಯುವಕನ ಮೇಲೆ ಮೂವರು ಹಲ್ಲೆ ನಡೆಸಿದ್ದಾರೆ. ಇದು ಹನಿಟ್ರ್ಯಾಪ್ ಕೃತ್ಯ ಎಂದು ಶಂಕಿಸಲಾಗಿದ್ದು, ಯುವತಿ ಪೊಲೀಸರ ವಶದಲ್ಲಿದ್ದಾಳೆ. ಪೊಲೀಸರು ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ.

Read Full Story

06:51 PM (IST) Dec 13

ಬಿಸಿ ನೀರಿಗೆ ಒಂದು ಟಾಬ್ಲೆಟ್​ ಹಾಕಿದ್ರೆ ಸಾಕು, ಎರಡೇ ನಿಮಿಷದಲ್ಲಿ ನೂಡಲ್ಸ್​ ರೆಡಿ- ಏನಿದು AI Tablet?

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಮ್ಯಾಗಿ ಟ್ಯಾಬ್ಲೆಟ್ ವಿಡಿಯೋ ಎಲ್ಲರ ಗಮನ ಸೆಳೆದಿದೆ. ಬಿಸಿ ನೀರಿಗೆ ಹಾಕಿದ ತಕ್ಷಣ ನೂಡಲ್ಸ್ ಸಿದ್ಧವಾಗುವ ಈ ಟ್ಯಾಬ್ಲೆಟ್​ನ ಅಸಲಿಯತ್ತೇನು? ಇಲ್ಲಿದೆ ನೋಡಿ ಇಂಟರೆಸ್ಟಿಂಗ್​ ವಿಷ್ಯ

Read Full Story

06:45 PM (IST) Dec 13

ಬೆಂಗಳೂರಲ್ಲಿ ಪಾಸ್‌ಪೋರ್ಟ್ ಮಾಡಲು ಎಲ್ಲೂ ಹೋಗಬೇಕಿಲ್ಲ, ಮನೆ ಬಾಗಿಲಿಗೆ ಬರಲಿದೆ ವ್ಯಾನ್

ಬೆಂಗಳೂರಲ್ಲಿ ಪಾಸ್‌ಪೋರ್ಟ್ ಮಾಡಲು ಎಲ್ಲೂ ಹೋಗಬೇಕಿಲ್ಲ, ಮನೆ ಬಾಗಿಲಿಗೆ ಬರಲಿದೆ ವ್ಯಾನ್, ಅತೀ ಸುಲಭವಾಗಿ ಪಾಸ್‌ಪೋರ್ಟ್ ಈಗ ಮನೆಬಾಗಿಲಲ್ಲೇ ಸಿಗುವ ವಿನೂತನ ಯೋಜನೆ ಬೆಂಗಳೂರಿನಲ್ಲಿ ಆರಂಭಗೊಂಡಿದೆ. 

Read Full Story

06:24 PM (IST) Dec 13

New Year Mars Transit - ಮೀನ ರಾಶಿಗೆ ಮಂಗಳನ ಪ್ರವೇಶ - ಐದು ರಾಶಿಗೆ ಭಾಗ್ಯೋದಯ- ಆಸೆ ಈಡೇರುವ ಕಾಲ

2026ರ ಏಪ್ರಿಲ್ 2 ರಂದು ಮಂಗಳನು ಮೀನ ರಾಶಿಗೆ ಪ್ರವೇಶಿಸಲಿದ್ದು, ಈ ಸಂಚಾರವು ಕೆಲವು ರಾಶಿಗಳಿಗೆ ಅತ್ಯಂತ ಶುಭಫಲಗಳನ್ನು ತರಲಿದೆ. ವೃಷಭ, ಕರ್ಕಾಟಕ, ವೃಶ್ಚಿಕ, ಮಕರ ಮತ್ತು ಮೀನ ರಾಶಿಯವರಿಗೆ ಈ ಅವಧಿಯಲ್ಲಿ ಸಂಪತ್ತು, ಯಶಸ್ಸು ಮತ್ತು ವೃತ್ತಿಯಲ್ಲಿ ಪ್ರಗತಿ ಕಾಣುವ ಯೋಗವಿದೆ.
Read Full Story

06:16 PM (IST) Dec 13

Coriander Leaves Farming - ಇಷ್ಟು ಎಲೆಗೆ ಅಷ್ಟು ಯಾಕೆ ಕೊಡ್ತೀರಿ? ಸಣ್ಣ ಪಾಟ್‌ನಲ್ಲೇ ಕೊತ್ತುಂಬರಿ ಬೆಳೆಯಲು Tips

ಅಡುಗೆಯಲ್ಲಿ ಕೊತ್ತಂಬರಿ ಸೊಪ್ಪು ಇಲ್ಲ ಅಂದ್ರೆ ಏನೋ ಮಿಸ್‌ ಆದಂತಹ ಅನುಭವ ಆಗುವುದು. ಕೊತ್ತಂಬರಿ ಸೊಪ್ಪಿಗೆ ಬಹುತೇಕ ಯಾವಾಗಲೂ ಡಿಮ್ಯಾಂಡ್‌ ಇರುವುದು. ಒಮ್ಮೆ ಈ ಸೊಪ್ಪು ತಂದರೂ ಕೂಡ ಕೆಲವೊಮ್ಮೆ ಬಳಸೋಕೆ ಮರೆತು ಹೋಗಿ ಅಲ್ಲೇ ಕೊಳೆಯಬಹುದು, ಒಣಗಲೂಬಹುದು. ಕೊತ್ತಂಬರಿ ಬೆಳೆಯೋದು ಹೇಗೆ?

 

Read Full Story

05:59 PM (IST) Dec 13

Amruthadhaare - ಮರಿಡುಮ್ಮ ಅಂದ್ರೆ ಸುಮ್ನೇನಾ? ಅಪ್ಪನ ಬಾಯಿಂದ್ಲೇ ಸತ್ಯ ಹೇಗೆ ಹೊರತರಿಸಿದ ನೋಡಿ!

ಅಮೃತಧಾರೆ ಧಾರಾವಾಹಿಯಲ್ಲಿ ಬೇರೆ ಬೇರೆಯಾಗಿದ್ದ ಗೌತಮ್ ಮತ್ತು ಭೂಮಿಕಾ ಒಂದಾಗುವ ಸಮಯ ಹತ್ತಿರವಾಗಿದೆ. ಭೂಮಿಕಾಳ ಹುಟ್ಟುಹಬ್ಬದ ಸಂಭ್ರಮದ ನಡುವೆ, ಆಕಾಶ್ ಮತ್ತು ಲವ್ ಅಜ್ಜಿಯ ಪ್ರಯತ್ನದಿಂದ ಈ ಜೋಡಿ ಮತ್ತೆ ಒಂದಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿದ್ದು, ಕಥೆ ಸುಖಾಂತ್ಯದತ್ತ ಸಾಗುತ್ತಿದೆ.
Read Full Story

05:51 PM (IST) Dec 13

ಬೆಂಗಳೂರಿನ 2ನೇ ಏರ್‌ಪೋರ್ಟ್‌, ಗುರುತಿಸಿರೋ ಈ 3 ಸ್ಥಳಗಳಲ್ಲಿ ಯಾವುದು ಬೆಸ್ಟ್? ಅಧ್ಯಯನಕ್ಕೆ ಟೆಂಡರ್ ಕರೆದ ಸರ್ಕಾರ!

ಬೆಂಗಳೂರಿನಲ್ಲಿ ರಾಜ್ಯ ಸರ್ಕಾರವು ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮುಂದಾಗಿದೆ. ಈ ಯೋಜನೆಗಾಗಿ ಕನಕಪುರ ರಸ್ತೆ ಮತ್ತು ನೆಲಮಂಗಲ-ಕುಣಿಗಲ್ ರಸ್ತೆಯ ಬಳಿ  3 ಸಂಭಾವ್ಯ ಸ್ಥಳಗಳನ್ನು ಗುರುತಿಸಲಾಗಿದ್ದು, ತಾಂತ್ರಿಕ ಕಾರ್ಯಸಾಧ್ಯತಾ ವರದಿ ತಯಾರಿಸಲು ಟೆಂಡರ್ ಕರೆಯಲಾಗಿದೆ. 

Read Full Story

05:35 PM (IST) Dec 13

ನವೋದಯ ಪರೀಕ್ಷೆಯಲ್ಲಿ ಅಕ್ರಮ ಆರೋಪ; ಬೀದರ್‌ನಲ್ಲಿ ಬಿಇಓಗೆ ವಿದ್ಯಾರ್ಥಿ ಪೋಷಕರಿಂದ ತರಾಟೆ

ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆದ ನವೋದಯ 6ನೇ ತರಗತಿ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಕೋಚಿಂಗ್ ನಡೆಸುವ ಶಿಕ್ಷಕರೇ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಾಯ ಮಾಡಿದ್ದಾರೆ ಎಂದು ಆರೋಪಿಸಿ, ಪೋಷಕರು ಬಿಇಒಗೆ ತರಾಟೆ.

Read Full Story

05:22 PM (IST) Dec 13

Pregnancy before marriage - ಮದ್ವೆಗೂ ಮುನ್ನವೇ ಗರ್ಭಿಣಿಯಾದ ಕನ್ನಡದ ಕಿರುತೆರೆ ನಾಯಕಿಯರು ಇವ್ರು! ಛೇ ಯಾಕೆ ಹೀಗೆ?

ಇತ್ತೀಚಿನ ಕನ್ನಡ ಧಾರಾವಾಹಿಗಳಲ್ಲಿ ನಾಯಕಿಯರು ಮದುವೆಗೂ ಮುನ್ನ ಗರ್ಭಿಣಿಯಾಗುವ ಟ್ರೆಂಡ್ ಹೆಚ್ಚಾಗುತ್ತಿದೆ. ಕರ್ಣ, ಅಮೃತಧಾರೆ, ಮತ್ತು ಮೈನಾದಂತಹ ಸೀರಿಯಲ್‌ಗಳಲ್ಲಿ ಈ ಕಥಾವಸ್ತುವು ರೋಚಕತೆ ಮೂಡಿಸಿದರೂ, ಇದನ್ನು ಅನುಸರಿಸುವ ಸಮಾಜದ ಮೇಲೆ ಆಗಬಹುದಾದ ಪರಿಣಾಮಗಳ ಬಗ್ಗೆ ಆತಂಕ ವ್ಯಕ್ತವಾಗಿದೆ.
Read Full Story

05:21 PM (IST) Dec 13

ಬಾಡಿಗೆದಾರರ ಮನೆಯಿಂದ ಹೊರಹಾಕಲು ಬಂದ ಮಾಲೀಕನಿಗೆ ಆಘಾತ, ತಾಯಿ-ಇಬ್ಬರು ಮಕ್ಕಳ ಶವಪತ್ತೆ

ಬಾಡಿಗೆದಾರರ ಮನೆಯಿಂದ ಹೊರಹಾಕಲು ಬಂದ ಮಾಲೀಕನಿಗೆ ಆಘಾತ, ತಾಯಿ-ಇಬ್ಬರು ಮಕ್ಕಳ ಶವಪತ್ತೆ, ಅಪಾರ್ಟ್‌ಮೆಂಟ್‌ನಲ್ಲಿ ಕೆಲ ತಿಂಗಳಿನಿಂದ ಬಾಡಿಗೆ ನೀಡದೇ ಉಳಿದುಕೊಂಡಿದ್ದ ಬಾಡಿಗೆದಾರರನ್ನು ಹೊರಹಾಕಲು ಕೋರ್ಟ್ ನೋಟಿಸ್ ಹಿಡಿದು ಬಂದ ಮಾಲೀಕ ಕಂಗಾಲಾಗಿದ್ದಾನೆ.

Read Full Story

05:06 PM (IST) Dec 13

10 ವರ್ಷ ಪ್ರೀತಿಸಿದವಳಿಗೆ ಮೋಸ, ₹4.5 ಲಕ್ಷ ವಂಚನೆ, ಬೇರೆ ಮದುವೆಗೆ ಮುಂದಾದ ಯುವಕನ ಮನೆಮುಂದೆ ಪ್ರಿಯತಮೆ ಗಲಾಟೆ!

ಕಳೆದ 10 ವರ್ಷಗಳಿಂದ ಪ್ರೀತಿಸುತ್ತಿದ್ದ ಯುವಕ, ಯುವತಿಯಿಂದ 4.5 ಲಕ್ಷ ರೂ. ಹಣ ಪಡೆದು, ತಾನು ವಿಚ್ಛೇದಿತ ಎಂಬ ಸತ್ಯ ಮುಚ್ಚಿಟ್ಟು ಈಗ ಬೇರೆ ಮದುವೆಗೆ ಸಿದ್ಧತೆ. ಇದರಿಂದ ಆಕ್ರೋಶಗೊಂಡ ಸಂತ್ರಸ್ತ ಯುವತಿ, ಚಿಕ್ಕಮಗಳೂರಿನ ಕಲ್ಯಾಣ ನಗರದಲ್ಲಿರುವ ಯುವಕನ ಮನೆ ಮುಂದೆ ನ್ಯಾಯಕ್ಕಾಗಿ ಗಲಾಟೆ ನಡೆಸಿದ್ದಾರೆ.

Read Full Story

04:38 PM (IST) Dec 13

ಶುಕ್ರ-ಶನಿ ಗ್ರಹಗಳ ಸಂಯೋಗ - 2026ರಲ್ಲಿ ಈ ಮೂರು ರಾಶಿಗೆ ಅನಿರೀಕ್ಷಿತ ಲಾಭ, ಅಂದುಕೊಂಡಿದ್ದೆಲ್ಲ ಈಡೇರುವ ಕಾಲ

2026ರ ಆರಂಭದಲ್ಲಿ ಮೀನ ರಾಶಿಯಲ್ಲಿ ಶನಿ ಮತ್ತು ಶುಕ್ರ ಗ್ರಹಗಳ ಸಂಯೋಗ ನಡೆಯಲಿದೆ. ಈ ಸ್ನೇಹಪರ ಗ್ರಹಗಳ ಸಂಯೋಗದಿಂದಾಗಿ ವೃಷಭ, ಕರ್ಕಾಟಕ ಮತ್ತು ಮೀನ ರಾಶಿಯವರಿಗೆ ಅನಿರೀಕ್ಷಿತ ಆರ್ಥಿಕ ಲಾಭಗಳು ಮತ್ತು ವೃತ್ತಿಜೀವನದಲ್ಲಿ ಪ್ರಗತಿಯ ಯೋಗವಿದೆ.
Read Full Story

04:37 PM (IST) Dec 13

ದಿವ್ಯಾಂಗ ಯುವತಿ ಮೇಲೆ ಬಲಾತ್ಕಾರ - ಯಾರಿಗೂ ಹೇಳದಂತೆ ಬೆದರಿಕೆ!

ಮಂಡ್ಯ ಜಿಲ್ಲೆಯ ಕೆಆರ್ ಪೇಟೆಯಲ್ಲಿ, ದಿವ್ಯಾಂಗ ಯುವತಿಯ ಮೇಲೆ ಬಲತ್ಕಾರ ಎಸಗಿದ ನೆರೆಮನೆಯ ಯುವಕ, ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾನೆ. ಸಂತ್ರಸ್ತೆ ಗರ್ಭಿಣಿಯಾದ ಬಳಿಕ ಮದುವೆಗೆ ನಿರಾಕರಿಸಿದ್ದರಿಂದ, ಆತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Read Full Story

04:35 PM (IST) Dec 13

ಹೋರಾಟದ ದನಿ ಅಡಗಿಸಲು ಈ ದೂರೇ? ರೈತರು, ಕನ್ನಡ ಪರ ಹೋರಾಟಗಾರರ ವಿರುದ್ಧ ತಲಾ 41 ಪ್ರಕರಣ ದಾಖಲು!

ಕಳೆದ 3 ವರ್ಷಗಳಲ್ಲಿ ರಾಜ್ಯದ ರೈತರು ಮತ್ತು ಕನ್ನಡಪರ ಹೋರಾಟಗಾರರ ಮೇಲೆ ತಲಾ 41 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧಾನ ಪರಿಷತ್‌ನಲ್ಲಿ ಮಾಹಿತಿ ನೀಡಿದ್ದಾರೆ. ಈ ಪ್ರಕರಣಗಳ  ಹಿಂಪಡೆಯುವ ಸರ್ಕಾರದ ಮಾನದಂಡಗಳ ಬಗ್ಗೆಯೂ ವಿವರಿಸಿದ್ದಾರೆ.

Read Full Story

04:15 PM (IST) Dec 13

BBK 12 - ಎದೆ ತಟ್ಟಿಕೊಂಡು ಹೇಳ್ತೀನಿ ಕಣಣ್ಣಾ, ಇವ್ರು ಸ್ಪರ್ಧಿಗಳೋ, ಎಲಿಮೆಂಟ್​ಗಳೊ? ಸುದೀಪ್​ ಎದುರೇ ಅಶ್ವಿನಿ ಗೌಡ ಗರಂ

ಬಿಗ್ ಬಾಸ್ ಕನ್ನಡ 12ರ ವೀಕೆಂಡ್ ಪಂಚಾಯಿತಿಯಲ್ಲಿ, ರಜತ್ ಮತ್ತು ಚೈತ್ರಾ ಕುಂದಾಪುರ ತನ್ನನ್ನು ಅನಗತ್ಯವಾಗಿ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಅಶ್ವಿನಿ ಗೌಡ ಕಿಚ್ಚ ಸುದೀಪ್ ಮುಂದೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಏನೇನು ಹೇಳಿದ್ರು ನೋಡಿ! 

Read Full Story

04:13 PM (IST) Dec 13

White Cloth Cleaning - ಚೆಂದವಿದ್ರೂ ಬಿಳಿ ಬಟ್ಟೆ ಹಾಕೋಕೆ ಹೆದರ್ತೀರಾ? ಅದೊಂದು ಪೆನ್‌ನಿಂದ ಕಲೆ ಮಂಗಮಾಯ!

White Cloth Cleaning Tips: ಬಿಳಿ ಬಟ್ಟೆಗಳನ್ನು ಹಾಕಿಕೊಂಡಾಗ ಅವು ನೀಡುವ ಸೌಂದರ್ಯ, ಪ್ರತಿಷ್ಠೆಯೇ ಬೇರೆ. ಬೇಗ ಕಲೆ ಆಗುತ್ತದೆ, ಮ್ಯಾನೇಜ್‌ ಮಾಓಕೆ ಆಗೋದಿಲ್ಲ ಎಂದು ಕೆಲವರು ಬಿಳಿ ಬಟ್ಟೆ ಹಾಕಲು ಯೋಚನೆ ಮಾಡುತ್ತಾರೆ. ಆದರೆ ಬಿಳಿ ಬಟ್ಟೆಯನ್ನು ಬಿಳಿಯಾಗಿ ಇಡಲು ಇರುವ ಸಿಂಪಲ್‌ ಕ್ರಮಗಳು ಇಲ್ಲಿವೆ.

Read Full Story

03:10 PM (IST) Dec 13

ಡಾ ಜಿ ಪರಮೇಶ್ವರ ರಾಜ್ಯದ ಸಿಎಂ ಆಗಬೇಕು, ರಾಜಕೀಯದಲ್ಲಿ ಸಂಚಲನ ಮೂಡಿಸೋ ಹೇಳಿಕೆ ಕೊಟ್ಟ ಕೇಂದ್ರ ಸಚಿವ ವಿ. ಸೋಮಣ್ಣ!

ಕೇಂದ್ರ ಸಚಿವ ವಿ. ಸೋಮಣ್ಣ ಅವರು, ಡಾ. ಜಿ. ರಮೇಶ್ವರ್ ಮುಖ್ಯಮಂತ್ರಿಯಾಗಬೇಕೆಂಬುದು ತುಮಕೂರಿನಲ್ಲಿ ಬಹಿರಂಗವಾಗಿ ಹೇಳಿದ್ದಾರೆ. ಜಿಲ್ಲೆಗೆ ಸಾವಿರಾರು ಕೋಟಿ ವೆಚ್ಚದ ರೈಲ್ವೆ ಯೋಜನೆಗಳು, 20 ಕೋಟಿ ರೂ. ವೆಚ್ಚದ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ ಹಾಗೂ ಮೆಟ್ರೋ ಯೋಜನೆಗೆ ಸಂಪೂರ್ಣ ಬೆಂಬಲ ಘೋಷಿಸಿದರು.

Read Full Story

03:08 PM (IST) Dec 13

Karna Serial - ನಿಧಿ ಮರ್ಯಾದೆ ತೆಗೆದ ಸಂಜಯ್‌; ಸಿಡಿದೆದ್ದ ಕರ್ಣ ಧರ್ಮದೇಟು ಕೊಡೋದನ್ನು ಯಾರಿಂದನೂ ತಡೆಯೋಕಾಗಲ್ಲ

Karna Serial Today Episode Update: ಕರ್ಣ ಧಾರಾವಾಹಿಯಲ್ಲಿ ಸಂಜಯ್‌ಗೆ ನಿಧಿ ಕಂಡರೆ ಆಗೋದಿಲ್ಲ. ಹೀಗಾಗಿ ಅವನು ಈ ಬಾರಿ ಅವಳ ಮರ್ಯಾದೆ ತೆಗೆಯೋ ಕೆಲಸ ಮಾಡಿದ್ದಾನೆ. ಆದರೆ ಕರ್ಣ ಸುಮ್ಮನೆ ಬಿಡಬೇಕಲ್ವಾ? ಬಿಡೋದಿಲ್ಲ. ಕರ್ಣ ಈಗ ಸಿಡಿದೆದ್ದಿದ್ದಾನೆ, ಅವನಿಂದ ಸಂಜಯ್‌ ಬಚಾವ್‌ ಆಗಬೇಕಿದೆ. 

Read Full Story

03:03 PM (IST) Dec 13

ಆಕೆ ಕಂಡ್ರೆ ನಂಗೆ ಹೊಟ್ಟೆ ಉರಿ, ತಪ್ಪು ತಪ್ಪು ಮಾತಾಡಿ ಫೇಮಸ್​ ಆಗೋದು ಸಾಧನೆನಾ? Bigg Boss ಜಾಹ್ನವಿ ಶಾಕಿಂಗ್​ ಹೇಳಿಕೆ

ಬಿಗ್​ಬಾಸ್​ ಮನೆಯಿಂದ ಎಲಿಮಿನೇಟ್ ಆದ ಬಳಿಕ ಆಂಕರ್ ಜಾಹ್ನವಿ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಬಿಗ್ ಬಾಸ್ ಮನೆಯನ್ನು 'ತುಘಲಕ್ ದರ್ಬಾರ್'ಗೆ ಹೋಲಿಸಿರುವ ಅವರು, ಸಹ ಸ್ಪರ್ಧಿ ರಕ್ಷಿತಾ ಶೆಟ್ಟಿ ಅವರ ಖ್ಯಾತಿ ಕಂಡು ತಮಗೆ ಹೊಟ್ಟೆ ಉರಿಯಾಗುತ್ತದೆ ಎಂದು ಹೇಳಿಕೊಂಡಿದ್ದಾರೆ.
Read Full Story

03:01 PM (IST) Dec 13

Bengaluru - ಕಂಡೋರ ಹೆಂಡ್ತಿಯನ್ನು ಪಟಾಯಿಸಿದ ಪೊಲೀಸಪ್ಪ; ಇದು ರೀಲ್ಸ್ ಅಂಟಿಯ ಮೋಹದ ಕಥೆ

Bengaluru: ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್ ಠಾಣೆಯ ಕಾನ್ಸ್‌ಟೇಬಲ್ ರಾಘವೇಂದ್ರ, ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ವಿವಾಹಿತೆ 'ರೀಲ್ಸ್ ರಾಣಿ' ಮೋನಿಕಾ ಜೊತೆ ಅಕ್ರಮ ಸಂಬಂಧ ಬೆಳೆಸಿದ್ದಾನೆ. 

Read Full Story

02:38 PM (IST) Dec 13

ಬೆಂಗಳೂರಿನಲ್ಲಿ ಜಿಮ್‌ಗೆ ಹೋದ್ರೆ, ಚಿಕನ್‌ ತಿಂದ್ರೆ ಮ್ಯಾನೇಜರ್‌ ನಗ್ತಾರೆ - NRI ಪೋಸ್ಟ್‌ನಿಂದ ಆಘಾತಕಾರಿ ಸತ್ಯ ಬಯಲು!

NRI shocked in Bengaluru: ಬೆಂಗಳೂರಿನಲ್ಲಿ ಇಂದು ಎಲ್ಲರೂ ಕೆಲಸದ ಒತ್ತಡದಲ್ಲಿ ಇರುತ್ತಾರೆ. ಹೀಗಿರುವಾಗ ಅಮೆರಿಕದಿಂದ ಬೆಂಗಳೂರಿಗೆ ಬಂದ ಉದ್ಯೋಗಿ, ಸಹದ್ಯೋಗಿಗಳ ಫಿಟ್‌ನೆಸ್‌ ಬಗ್ಗೆ ಮಾತನಾಡಿದ್ದಾರೆ. ಅಷ್ಟೇ ಅಲ್ಲದೆ ಆತಂಕ ಹೊರಹಾಕಿದ್ದಾರೆ.

 

Read Full Story

02:28 PM (IST) Dec 13

Bigg Boss ಟಾಪ್​-5 ಯಾರು? ಐಶ್ವರ್ಯ ಸಿಂಧೋಗಿ ಅಚ್ಚರಿ ಹೇಳಿಕೆ- ಅಪ್ಪಿತಪ್ಪಿಯೂ ಬರಲಿಲ್ಲ ಈ ಹೆಸರು!

ಮಾಜಿ ಬಿಗ್ ಬಾಸ್ ಸ್ಪರ್ಧಿ ಐಶ್ವರ್ಯ ಸಿಂಧೋಗಿ, ಮುಂಬರುವ ಬಿಗ್ ಬಾಸ್ 12ರ ವಿನ್ನರ್ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಗಿಲ್ಲಿ ನಟ, ಧನುಷ್, ಸ್ಪಂದನಾ ಮತ್ತು ರಘು ಅವರ ಆಟವನ್ನು ಶ್ಲಾಘಿಸಿದ ಅವರು, ತಮ್ಮ ಟಾಪ್ ಲಿಸ್ಟ್‌ನಲ್ಲಿ ಅಶ್ವಿನಿ ಗೌಡರ ಹೆಸರನ್ನು ಹೇಳದಿರುವುದು ಚರ್ಚೆಗೆ ಕಾರಣವಾಗಿದೆ.
Read Full Story

02:18 PM (IST) Dec 13

ಗ್ರ್ಯಾಮಿ ಪ್ರಶಸ್ತಿ ವಿಜೇತ ಖ್ಯಾತ ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಬೆಂಗಳೂರು ಮನೆಯಿಂದ ಡೆಲಿವರಿ ಬಾಯ್ಸ್ ಕಳ್ಳತನ!

ಪದ್ಮಶ್ರೀ ಪುರಸ್ಕೃತ, ಗ್ರ್ಯಾಮಿ ವಿಜೇತ ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಅವರ ಬೆಂಗಳೂರಿನ ನಿವಾಸದಲ್ಲಿ ಕಳ್ಳತನ ನಡೆದಿದೆ. ಡೆಲಿವರಿ ಬಾಯ್‌ಗಳ ವೇಷದಲ್ಲಿ ಬಂದ ಇಬ್ಬರು ಕಳ್ಳರು, ಮನೆಯ ನೀರಿನ ಸಂಪ್‌ನ ಕಬ್ಬಿಣದ ಮುಚ್ಚಳವನ್ನು ಕದ್ದೊಯ್ದಿದ್ದು, ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. 

Read Full Story

01:57 PM (IST) Dec 13

ಆ್ಯಂಕರ್ ಸುಮಾ-ರಾಜೀವ್ ವಿಚ್ಛೇದನ - ತಂದೆ-ತಾಯಿ ಡಿವೋರ್ಸ್ ಬಗ್ಗೆ ಅಸಲಿ ಸತ್ಯ ಬಿಚ್ಚಿಟ್ಟ ಮಗ ರೋಶನ್

ಸುಮಾ ಅವರ ಮಗ ರೋಶನ್ ಕನಕಾಲ 'ಮೋಗ್ಲಿ' ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದಾರೆ. 'ಮೋಗ್ಲಿ' ಚಿತ್ರದ ಪ್ರಚಾರದ ಭಾಗವಾಗಿ ಯೂಟ್ಯೂಬ್ ಚಾನೆಲ್‌ಗೆ ಸಂದರ್ಶನ ನೀಡಿದ್ದು, ಅದರಲ್ಲಿ ಸುಮಾ ಮತ್ತು ರಾಜೀವ್ ಅವರ ವಿಚ್ಛೇದನದ ಬಗ್ಗೆಯೂ ವಿವರಿಸಿದ್ದಾರೆ.

Read Full Story

01:46 PM (IST) Dec 13

ನನಗೆ ಎಚ್ಚರಿಕೆ ಕೊಡೋ ಮುನ್ನ ಹುಷಾರ್, ಕಾಮನ್‌ಸೆನ್ಸ್ ಇಟ್ಟುಕೊಂಡು ಡೀಲ್ ಮಾಡಿ, ಪತ್ರ ಬರೆದವನಿಗೆ ಡಿಕೆಶಿ ವಾರ್ನಿಂಗ್!

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ಗಳೊಂದಿಗೆ ನಡೆಸಿದ ಸಭೆಯಲ್ಲಿ, ಸರ್ಕಾರಕ್ಕೆ ಎಚ್ಚರಿಕೆ ಪತ್ರ ಬರೆದಿದ್ದ ಕಿರಣ್ ಹೆಬ್ಬಾರ್ ಎಂಬ ಸದಸ್ಯನ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. 

Read Full Story

01:30 PM (IST) Dec 13

5 ಸಾವಿರ ಕೊಡ್ತೀನಿ ರೂಮ್‌ಗೆ ಬಾ ಅಂದ್ರು? ಬ್ರಹ್ಮಾನಂದ ಗುರೂಜಿಯ ವಿಡಿಯೋ ವೈರಲ್

ಕೆಲವರು ಸೇರಿಕೊಂಡು ನನ್ನನ್ನ ಹನಿಟ್ರ್ಯಾಪ್ ಮಾಡಿದ್ದಾರೆ. ಹನಿಟ್ರ್ಯಾಪ್ ಮೂಲಕ ಹಣಕ್ಕಾಗಿ ಬೇಡಿಕೆ ಇರಿಸಿದ್ದರು. ಹಣ ಕೊಡಲು ಒಪ್ಪದಿದ್ದಾಗ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟಿದ್ದಾರೆ ಎಂದು ವಾಲ್ಮೀಕಿ ಆಶ್ರಮದ ಬ್ರಹ್ಮಾನಂದ ಗುರೂಜಿ ಹೇಳಿದ್ದಾರೆ.

Read Full Story

More Trending News