ಮೈಸೂರು: ಲಲಿತಾಭಿನಂದನ- ಕೆ.ಲಲಿತಾ ಜಿ.ಟಿ. ದೇವೇಗೌಡ ಅಭಿನಂದನಾ ಸಮಾರಂಭದಲ್ಲಿ ಮಾಜಿ ಸಚಿವ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಅವರು ಕೆಲಕಾಲ ಭಾವುಕರಾದರು. ಪುತ್ರ ಶಾಸಕ ಹರೀಶ್ ಗೌಡ ಹೊರತುಪಡಿಸಿ ಕುಟುಂಬದ ಪ್ರತಿಯೊಬ್ಬ ಸದಸ್ಯರು ಭಾಗಿಯಾಗಿದ್ದರು.
ನಗರದ ರಾಜ್ಯ ಮುಕ್ತ ವಿವಿ ಘಟಿಕೋತ್ಸವ ಭವನದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಶಾಸಕ ಜಿ.ಟಿ. ದೇವೇಗೌಡ ಅವರು ಮಾತು ಆರಂಭಿಸುವ ಮುನ್ನವೇ ಗದ್ಗಿತರಾಗಿ ಕಣ್ಣೀರಿಟ್ಟರು. ಏನನ್ನೂ ನೆನೆದುಕೊಂಡು ಜಿ.ಟಿ. ದೇವೇಗೌಡರು ಬಿಕ್ಕಿ ಬಿಕ್ಕಿ ಅತ್ತರು, ಸಭಾಂಗಣದಲ್ಲಿ ನೆರೆದಿದ್ದವರ ಕಣ್ಣಂಚು ಒದ್ದೆಯಾಯಿತು.
ಬೆಂಬಲಿಗರು ‘ಸದಾ ಕಾಲ ನಿಮ್ಮ ಜೊತೆಗಿರುತ್ತೇವೆ ವಿ ಅಣ್ಣಾ, ಅಳಬೇಡಿ’ ಎಂದು ಕೂಗಿದರು. ಸುಧಾರಿಸಿಕೊಂಡು ಮಾತನಾಡಿದ ಜಿ.ಟಿ. ದೇವೇಗೌಡರು, ನಾನು ಬಂಗಾರದ ಮನುಷ್ಯ ಸಿನೆಮಾ ನೋಡಿ ಅಳುತ್ತಿದ್ದೆ, ಅದರಿಂದ ಪ್ರೇರಣೆ ಪಡೆದು ಪ್ರಗತಿಪರ ಕೃಷಿಕನಾದೆ. ನನಗೆ 32 ವರ್ಷ ಇದ್ದಾಗ, ಲಲಿತಾಳಿಗೆ 16 ವರ್ಷ ಹೈಸ್ಕೂಲ್ ಓದುತ್ತಿದ್ದಳು. ದಲಿತ ಚೆಲುವಯ್ಯ ಹಾಗೂ ಲಿಂಗೇಗೌಡ ನನ್ನ ತಾಯಿಯ ಸೂಚನೆಯಂತೆ ಹುಡುಗಿ ನೋಡಿಕೊಂಡು ಬಂದಿದ್ದರು. ನಂತರ ಮದುವೆಯ ಬಳಿಕ ಅವಳು ಒಂದು ದಿನಾನು ಸುಖ ಪಟ್ಟಿಲ್ಲ ಎಂದು ಭಾವುಕರಾದರು.
10:23 AM (IST) Jun 13
10:21 AM (IST) Jun 13
10:10 AM (IST) Jun 13
ಸಂಸದ ಬಿ.ವೈ.ರಾಘವೇಂದ್ರ ಅವರು ತಾಳಗುಪ್ಪ-ಹುಬ್ಬಳ್ಳಿ ರೈಲು ಮಾರ್ಗ ನಿರ್ಮಾಣ ಖಚಿತ ಎಂದು ಭರವಸೆ ನೀಡಿದ್ದಾರೆ. ₹3.93 ಕೋಟಿ ವೆಚ್ಚದ ಸಮೀಕ್ಷೆ ಪೂರ್ಣಗೊಂಡಿದ್ದು, ಡಿಪಿಆರ್ ಸಿದ್ಧಪಡಿಸಿ ಕೇಂದ್ರಕ್ಕೆ ಸಲ್ಲಿಸಲಾಗುವುದು.
09:37 AM (IST) Jun 13
09:28 AM (IST) Jun 13
09:22 AM (IST) Jun 13
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ರಾಜ್ಯಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ವಿಧಾನಸೌಧದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಹಲವು ನಿರ್ದೇಶನಗಳನ್ನು ನೀಡುವ ಸಾಧ್ಯತೆ.
09:14 AM (IST) Jun 13
Urdu School: ವಿಜಯಪುರ ಜಿಲ್ಲೆಯ ನಾಗೂರ ಉರ್ದು ಶಾಲೆಯಲ್ಲಿ ಶಿಕ್ಷಕರ ತೀವ್ರ ಕೊರತೆಯಿಂದಾಗಿ ಗ್ರಾಮಸ್ಥರು ಶಾಲೆಗೆ ಬೀಗ ಜಡಿದು ಪ್ರತಿಭಟಿಸಿದ್ದಾರೆ. ಇದು ಶಾಲೆಯನ್ನು ಮುಚ್ಚುವ ಹುನ್ನಾರ ಎಂದು ಆರೋಪಿಸಿದ್ದಾರೆ.
09:06 AM (IST) Jun 13
ಸಾಗರ ತಾಲೂಕಿನ ಪಡವಗೋಡು ಗ್ರಾಮದಲ್ಲಿ, ಆಡಳಿತದ ನಿರ್ಲಕ್ಷ್ಯದಿಂದ ಬೇಸತ್ತ ಗ್ರಾಮಸ್ಥರು ರೈತ ಸಂಘದ ಸಹಯೋಗದೊಂದಿಗೆ ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿ ಮಾಡಿದ್ದಾರೆ. ಸುಮಾರು 2 ಲಕ್ಷ ರೂ. ವೆಚ್ಚದಲ್ಲಿ ಜೆಸಿಬಿ, ಟಿಪ್ಪರ್ ಬಳಸಿ ಶ್ರಮದಾನದ ಮೂಲಕ ರಸ್ತೆ ಅಭಿವೃದ್ಧಿಪಡಿಸಿ ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ.
08:52 AM (IST) Jun 13
ಮಳೆಗಾಲದಲ್ಲಿ ಜಲಾವೃತವಾಗುವ 10 ಪ್ರಮುಖ ಪ್ರದೇಶಗಳಲ್ಲಿ ತಕ್ಷಣದಿಂದ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಪಾಲಿಕೆ ಆಯುಕ್ತರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಡ್ಡಾದಿಡ್ಡಿ ವಾಹನ ಪಾರ್ಕಿಂಗ್ ತಡೆ ಬನ್ನೇರುಘಟ್ಟ ರಸ್ತೆಯ ಸಂಚಾರ ದಟ್ಟಣೆ ನಿಯಂತ್ರಣದ ಬಗ್ಗೆಯೂ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.
08:37 AM (IST) Jun 13
40 ವರ್ಷಗಳ ಹಿಂದೆ ಮೃತಪಟ್ಟ ವ್ಯಕ್ತಿಗಳ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನನ್ನು ಮಾರಾಟ ಮಾಡಿರುವ ಭೂ ಹಗರಣ ಬೆಳಕಿಗೆ ಬಂದಿದೆ. ತಾಲೂಕಾಡಳಿತವು ಈ ವಂಚನೆಯನ್ನು ಪತ್ತೆಹಚ್ಚಿದ್ದು, ನೋಂದಣಿ ಪ್ರಕ್ರಿಯೆಯನ್ನು ತಡೆಹಿಡಿದು ತನಿಖೆ ಆರಂಭಿಸಿದೆ.
08:35 AM (IST) Jun 13
ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಾವಕಾಶ ಹೆಚ್ಚಿಸಲು, ಕರ್ನಾಟಕ ಸರ್ಕಾರವು 50 ಸರ್ಕಾರಿ ಕಾಲೇಜುಗಳಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಕೃತಕ ಬುದ್ಧಿಮತ್ತೆ (AI) ಲ್ಯಾಬ್ಗಳನ್ನು ಸ್ಥಾಪಿಸಲು ಅನುಮೋದನೆ ನೀಡಿದೆ. ಕೇಂದ್ರ ಸರ್ಕಾರದ ಎಐ ಮಿಷನ್ ಸಹಭಾಗಿತ್ವದಲ್ಲಿ ನಡೆಯುವ ಈ ಯೋಜನೆ ಬಗ್ಗೆ ತಿಳಿಯಿರಿ