LIVE NOW
Published : Jun 13, 2026, 06:47 AM ISTUpdated : Jun 13, 2026, 10:23 AM IST

Karnataka News Live: ಬೆಂಗಳೂರು ರಸ್ತೆಯಲ್ಲಿ ಮತ್ತೊಮ್ಮೆ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ, ಅಡ್ಡಾದಿಡ್ಡಿ ಓಡಾಟ!

ಸಾರಾಂಶ

ಮೈಸೂರು: ಲಲಿತಾಭಿನಂದನ- ಕೆ.ಲಲಿತಾ ಜಿ.ಟಿ. ದೇವೇಗೌಡ ಅಭಿನಂದನಾ ಸಮಾರಂಭದಲ್ಲಿ ಮಾಜಿ ಸಚಿವ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಅವರು ಕೆಲಕಾಲ ಭಾವುಕರಾದರು. ಪುತ್ರ ಶಾಸಕ ಹರೀಶ್ ಗೌಡ ಹೊರತುಪಡಿಸಿ ಕುಟುಂಬದ ಪ್ರತಿಯೊಬ್ಬ ಸದಸ್ಯರು ಭಾಗಿಯಾಗಿದ್ದರು.

ನಗರದ ರಾಜ್ಯ ಮುಕ್ತ ವಿವಿ ಘಟಿಕೋತ್ಸವ ಭವನದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಶಾಸಕ ಜಿ.ಟಿ. ದೇವೇಗೌಡ ಅವರು ಮಾತು ಆರಂಭಿಸುವ ಮುನ್ನವೇ ಗದ್ಗಿತರಾಗಿ ಕಣ್ಣೀರಿಟ್ಟರು. ಏನನ್ನೂ ನೆನೆದುಕೊಂಡು ಜಿ.ಟಿ. ದೇವೇಗೌಡರು ಬಿಕ್ಕಿ ಬಿಕ್ಕಿ ಅತ್ತರು, ಸಭಾಂಗಣದಲ್ಲಿ ನೆರೆದಿದ್ದವರ ಕಣ್ಣಂಚು ಒದ್ದೆಯಾಯಿತು. 

ಬೆಂಬಲಿಗರು ‘ಸದಾ ಕಾಲ ನಿಮ್ಮ ಜೊತೆಗಿರುತ್ತೇವೆ ವಿ ಅಣ್ಣಾ, ಅಳಬೇಡಿ’ ಎಂದು ಕೂಗಿದರು. ಸುಧಾರಿಸಿಕೊಂಡು ಮಾತನಾಡಿದ ಜಿ.ಟಿ. ದೇವೇಗೌಡರು, ನಾನು ಬಂಗಾರದ ಮನುಷ್ಯ ಸಿನೆಮಾ ನೋಡಿ ಅಳುತ್ತಿದ್ದೆ, ಅದರಿಂದ ಪ್ರೇರಣೆ ಪಡೆದು ಪ್ರಗತಿಪರ ಕೃಷಿಕನಾದೆ. ನನಗೆ 32 ವರ್ಷ ಇದ್ದಾಗ, ಲಲಿತಾಳಿಗೆ 16 ವರ್ಷ ಹೈಸ್ಕೂಲ್‌ ಓದುತ್ತಿದ್ದಳು. ದಲಿತ ಚೆಲುವಯ್ಯ ಹಾಗೂ ಲಿಂಗೇಗೌಡ ನನ್ನ ತಾಯಿಯ ಸೂಚನೆಯಂತೆ ಹುಡುಗಿ ನೋಡಿಕೊಂಡು ಬಂದಿದ್ದರು. ನಂತರ ಮದುವೆಯ ಬಳಿಕ ಅವಳು ಒಂದು ದಿನಾನು ಸುಖ ಪಟ್ಟಿಲ್ಲ ಎಂದು ಭಾವುಕರಾದರು.

10:23 AM (IST) Jun 13

ಬೆಂಗಳೂರು ರಸ್ತೆಯಲ್ಲಿ ಮತ್ತೊಮ್ಮೆ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ, ಅಡ್ಡಾದಿಡ್ಡಿ ಓಡಾಟ!

ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಒಡೆತನದ ಲ್ಯಾಂಬೋರ್ಗಿನಿ ಕಾರು ಬೆಂಗಳೂರಿನ ಏರ್ಪೋರ್ಟ್ ರಸ್ತೆಯಲ್ಲಿ ಅತಿವೇಗ ಹಾಗೂ ಕರ್ಕಶ ಶಬ್ದದೊಂದಿಗೆ ಪುಂಡಾಟಿಕೆ ನಡೆಸಿದೆ. ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ಈ ಹಿಂದೆ ಕಬ್ಬನ್ ಪಾರ್ಕ್ ಬಳಿ ರೇಸಿಂಗ್ ನಡೆಸಿದ್ದ ಇದೇ ಕಾರಿನ ವಿರುದ್ಧ ಪೊಲೀಸರು ಇದೀಗ ಮತ್ತೊಮ್ಮೆ ತನಿಖೆ ಆರಂಭಿಸಿದ್ದಾರೆ.
Read Full Story

10:21 AM (IST) Jun 13

ಸರ್ಕಾರಿ ಶಾಲೆಯಲ್ಲಿ 1988- 89ರಿಂದ 1995- 96ರ ಹಳೆಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ

ನರೇಗಲ್ಲ ಪಟ್ಟಣದ ಸರ್ಕಾರಿ ಮಾದರಿ ಕೇಂದ್ರ ಕನ್ನಡ ಗಂಡುಮಕ್ಕಳ ಶಾಲೆಯಲ್ಲಿ 1988-89 ರಿಂದ 1995-96ನೇ ಸಾಲಿನಲ್ಲಿ ವ್ಯಾಸಂಗ ಮಾಡಿದ ಹಳೆಯ ವಿದ್ಯಾರ್ಥಿಗಳು ಜೂ. 14 ರಂದು ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಶಾಲೆಯ ನಿವೃತ್ತ ಹಾಗೂ ಹಾಲಿ ಶಿಕ್ಷಕರಿಗೆ ಸನ್ಮಾನವನ್ನು ಏರ್ಪಡಿಸಲಾಗಿದೆ.
Read Full Story

10:10 AM (IST) Jun 13

ಬಹುನಿರೀಕ್ಷಿತ ತಾಳಗುಪ್ಪ-ಹುಬ್ಬಳ್ಳಿ ಮಾರ್ಗದ ಕುರಿತು ಮಹತ್ವದ ಅಪ್‌ಡೇಟ್ ನೀಡಿದ ಸಂಸದರು

ಸಂಸದ ಬಿ.ವೈ.ರಾಘವೇಂದ್ರ ಅವರು ತಾಳಗುಪ್ಪ-ಹುಬ್ಬಳ್ಳಿ ರೈಲು ಮಾರ್ಗ ನಿರ್ಮಾಣ ಖಚಿತ ಎಂದು ಭರವಸೆ ನೀಡಿದ್ದಾರೆ. ₹3.93 ಕೋಟಿ ವೆಚ್ಚದ ಸಮೀಕ್ಷೆ ಪೂರ್ಣಗೊಂಡಿದ್ದು, ಡಿಪಿಆರ್ ಸಿದ್ಧಪಡಿಸಿ ಕೇಂದ್ರಕ್ಕೆ ಸಲ್ಲಿಸಲಾಗುವುದು. 

Read Full Story

09:37 AM (IST) Jun 13

Lokayukta raids - 27 ಪಡಿತರ ಗೋದಾಮುಗಳ ಮೇಲೆ ಲೋಕಾಯುಕ್ತ ದಾಳಿ!

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ 27 ಗೋದಾಮುಗಳ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ. ಈ ವೇಳೆ, ಯಾವುದೇ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ನೂರಾರು ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದ್ದು, ಗೋದಾಮುಗಳ ನಿರ್ವಹಣೆಯಲ್ಲಿ ಹಲವು ಲೋಪದೋಷಗಳು ಪತ್ತೆಯಾಗಿವೆ.
Read Full Story

09:28 AM (IST) Jun 13

ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ ವಿವಿಧ ಭಾಗಗಳಿಗೆ ಹೊಸ ಬಸ್ ಸೇವೆ; ವೇಳಾಪಟ್ಟಿ ಇಲ್ಲಿದೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ (ಪಡೀಲ್) ನಗರದ ಪ್ರಮುಖ ಭಾಗಗಳಾದ ಕಟೀಲು, ಬೊಕ್ಕಪಟ್ಣ, ಸ್ಟೇಟ್‍ಬ್ಯಾಂಕ್, ಮತ್ತು ಕೋಡಿಕಲ್‌ಗೆ ಹೊಸ ನಗರ ಸಾರಿಗೆ ಸೇವೆಯನ್ನು ಆರಂಭಿಸಿದೆ. ಈ ಪ್ರಕಟಣೆಯು ವಿವಿಧ ಮಾರ್ಗಗಳ ವಿವರವಾದ ವೇಳಾಪಟ್ಟಿಯನ್ನು ಒದಗಿಸುತ್ತದೆ.
Read Full Story

09:22 AM (IST) Jun 13

CM DK Shivakumar - ದೆಹಲಿ ಭೇಟಿ ಬಳಿಕ ಇಂದು ಸಿಎಂ ಡಿಕೆಶಿ ಮೊದಲ ಡೀಸಿ, ಸಿಇಒಗಳ ಜೊತೆ ಸಭೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳು ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳೊಂದಿಗೆ ರಾಜ್ಯಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ವಿಧಾನಸೌಧದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಹಲವು ನಿರ್ದೇಶನಗಳನ್ನು ನೀಡುವ ಸಾಧ್ಯತೆ.

Read Full Story

09:14 AM (IST) Jun 13

ಮಕ್ಕಳನ್ನು ಹೊರಗೆ ಹಾಕಿ ಉರ್ದು ಶಾಲೆಗೆ ಬೀಗ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ; ಮನವಿ ಸಲ್ಲಿಕೆ

Urdu School: ವಿಜಯಪುರ ಜಿಲ್ಲೆಯ ನಾಗೂರ ಉರ್ದು ಶಾಲೆಯಲ್ಲಿ ಶಿಕ್ಷಕರ ತೀವ್ರ ಕೊರತೆಯಿಂದಾಗಿ ಗ್ರಾಮಸ್ಥರು ಶಾಲೆಗೆ ಬೀಗ ಜಡಿದು ಪ್ರತಿಭಟಿಸಿದ್ದಾರೆ.  ಇದು ಶಾಲೆಯನ್ನು ಮುಚ್ಚುವ ಹುನ್ನಾರ ಎಂದು ಆರೋಪಿಸಿದ್ದಾರೆ.

Read Full Story

09:06 AM (IST) Jun 13

Shivamogga - ಗ್ರಾಮಸ್ಥರೇ ಎರಡು ಕಿಲೋ ಮೀಟರ್ ರಸ್ತೆ ನಿರ್ಮಿಸಿ ವಿನೂತನ ಪ್ರತಿಭಟನೆ!

ಸಾಗರ ತಾಲೂಕಿನ ಪಡವಗೋಡು ಗ್ರಾಮದಲ್ಲಿ, ಆಡಳಿತದ ನಿರ್ಲಕ್ಷ್ಯದಿಂದ ಬೇಸತ್ತ ಗ್ರಾಮಸ್ಥರು ರೈತ ಸಂಘದ ಸಹಯೋಗದೊಂದಿಗೆ ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿ ಮಾಡಿದ್ದಾರೆ. ಸುಮಾರು 2 ಲಕ್ಷ ರೂ. ವೆಚ್ಚದಲ್ಲಿ ಜೆಸಿಬಿ, ಟಿಪ್ಪರ್ ಬಳಸಿ ಶ್ರಮದಾನದ ಮೂಲಕ ರಸ್ತೆ ಅಭಿವೃದ್ಧಿಪಡಿಸಿ ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ.

Read Full Story

08:52 AM (IST) Jun 13

Bengaluru Rains - ಪದೇ ಪದೇ ಜಾಲವೃತಗೊಳ್ಳುವ 10 ಪ್ರದೇಶಗಳಲ್ಲಿ ಮಳೆ ನೀರು ನಿಲ್ಲದಂತೆ ಕ್ರಮ

ಮಳೆಗಾಲದಲ್ಲಿ ಜಲಾವೃತವಾಗುವ 10 ಪ್ರಮುಖ ಪ್ರದೇಶಗಳಲ್ಲಿ ತಕ್ಷಣದಿಂದ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಪಾಲಿಕೆ ಆಯುಕ್ತರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಡ್ಡಾದಿಡ್ಡಿ ವಾಹನ ಪಾರ್ಕಿಂಗ್ ತಡೆ ಬನ್ನೇರುಘಟ್ಟ ರಸ್ತೆಯ ಸಂಚಾರ ದಟ್ಟಣೆ ನಿಯಂತ್ರಣದ ಬಗ್ಗೆಯೂ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.

Read Full Story

08:37 AM (IST) Jun 13

ಭೂ ಮಾಫಿಯಾದ ಹೊಸ ತಂತ್ರ ಬಯಲು; ದಾಖಲೆಯಲ್ಲಿ ‘ಜೀವಂತ’ರಾದ ಮೃತ ಮಾಲೀಕರು, ಭಾರಿ ಜಾಲದ ಶಂಕೆ

40 ವರ್ಷಗಳ ಹಿಂದೆ ಮೃತಪಟ್ಟ ವ್ಯಕ್ತಿಗಳ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನನ್ನು ಮಾರಾಟ ಮಾಡಿರುವ ಭೂ ಹಗರಣ ಬೆಳಕಿಗೆ ಬಂದಿದೆ. ತಾಲೂಕಾಡಳಿತವು ಈ ವಂಚನೆಯನ್ನು ಪತ್ತೆಹಚ್ಚಿದ್ದು, ನೋಂದಣಿ ಪ್ರಕ್ರಿಯೆಯನ್ನು ತಡೆಹಿಡಿದು ತನಿಖೆ ಆರಂಭಿಸಿದೆ.

Read Full Story

08:35 AM (IST) Jun 13

ಕೇಂದ್ರದ AI Mission ಸಹಭಾಗಿತ್ವದಲ್ಲಿ 50 ಸರ್ಕಾರಿ ಕಾಲೇಜಲ್ಲಿ ಹೈಟೆಕ್‌ ಎಐ ಲ್ಯಾಬ್‌ ಸ್ಥಾಪನೆಗೆ ಮುಂದಾದ ಸರ್ಕಾರ!

ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಾವಕಾಶ ಹೆಚ್ಚಿಸಲು, ಕರ್ನಾಟಕ ಸರ್ಕಾರವು 50 ಸರ್ಕಾರಿ ಕಾಲೇಜುಗಳಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಕೃತಕ ಬುದ್ಧಿಮತ್ತೆ (AI) ಲ್ಯಾಬ್‌ಗಳನ್ನು ಸ್ಥಾಪಿಸಲು ಅನುಮೋದನೆ ನೀಡಿದೆ. ಕೇಂದ್ರ ಸರ್ಕಾರದ ಎಐ ಮಿಷನ್ ಸಹಭಾಗಿತ್ವದಲ್ಲಿ ನಡೆಯುವ ಈ ಯೋಜನೆ ಬಗ್ಗೆ ತಿಳಿಯಿರಿ

Read Full Story

More Trending News