LIVE NOW
Published : Jun 13, 2026, 06:47 AM ISTUpdated : Jun 13, 2026, 07:53 PM IST

Karnataka News Live: ಮದುವೆಯಾಗಿ ಮಗು ಇರೋ ಹುಡುಗಿಗೆ ನಾನು ಬಾಳು ಕೊಟ್ರೆ, ಅವಳ ಮಗಳನ್ನು ನೋಡ್ಕೊಂಡ್ರೆ ತಪ್ಪೇನು?‌ Bigg Boss ರಂಜಿತ್

ಸಾರಾಂಶ

ಮೈಸೂರು: ಲಲಿತಾಭಿನಂದನ- ಕೆ.ಲಲಿತಾ ಜಿ.ಟಿ. ದೇವೇಗೌಡ ಅಭಿನಂದನಾ ಸಮಾರಂಭದಲ್ಲಿ ಮಾಜಿ ಸಚಿವ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಅವರು ಕೆಲಕಾಲ ಭಾವುಕರಾದರು. ಪುತ್ರ ಶಾಸಕ ಹರೀಶ್ ಗೌಡ ಹೊರತುಪಡಿಸಿ ಕುಟುಂಬದ ಪ್ರತಿಯೊಬ್ಬ ಸದಸ್ಯರು ಭಾಗಿಯಾಗಿದ್ದರು.

ನಗರದ ರಾಜ್ಯ ಮುಕ್ತ ವಿವಿ ಘಟಿಕೋತ್ಸವ ಭವನದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಶಾಸಕ ಜಿ.ಟಿ. ದೇವೇಗೌಡ ಅವರು ಮಾತು ಆರಂಭಿಸುವ ಮುನ್ನವೇ ಗದ್ಗಿತರಾಗಿ ಕಣ್ಣೀರಿಟ್ಟರು. ಏನನ್ನೂ ನೆನೆದುಕೊಂಡು ಜಿ.ಟಿ. ದೇವೇಗೌಡರು ಬಿಕ್ಕಿ ಬಿಕ್ಕಿ ಅತ್ತರು, ಸಭಾಂಗಣದಲ್ಲಿ ನೆರೆದಿದ್ದವರ ಕಣ್ಣಂಚು ಒದ್ದೆಯಾಯಿತು. 

ಬೆಂಬಲಿಗರು ‘ಸದಾ ಕಾಲ ನಿಮ್ಮ ಜೊತೆಗಿರುತ್ತೇವೆ ವಿ ಅಣ್ಣಾ, ಅಳಬೇಡಿ’ ಎಂದು ಕೂಗಿದರು. ಸುಧಾರಿಸಿಕೊಂಡು ಮಾತನಾಡಿದ ಜಿ.ಟಿ. ದೇವೇಗೌಡರು, ನಾನು ಬಂಗಾರದ ಮನುಷ್ಯ ಸಿನೆಮಾ ನೋಡಿ ಅಳುತ್ತಿದ್ದೆ, ಅದರಿಂದ ಪ್ರೇರಣೆ ಪಡೆದು ಪ್ರಗತಿಪರ ಕೃಷಿಕನಾದೆ. ನನಗೆ 32 ವರ್ಷ ಇದ್ದಾಗ, ಲಲಿತಾಳಿಗೆ 16 ವರ್ಷ ಹೈಸ್ಕೂಲ್‌ ಓದುತ್ತಿದ್ದಳು. ದಲಿತ ಚೆಲುವಯ್ಯ ಹಾಗೂ ಲಿಂಗೇಗೌಡ ನನ್ನ ತಾಯಿಯ ಸೂಚನೆಯಂತೆ ಹುಡುಗಿ ನೋಡಿಕೊಂಡು ಬಂದಿದ್ದರು. ನಂತರ ಮದುವೆಯ ಬಳಿಕ ಅವಳು ಒಂದು ದಿನಾನು ಸುಖ ಪಟ್ಟಿಲ್ಲ ಎಂದು ಭಾವುಕರಾದರು.

07:53 PM (IST) Jun 13

ಮದುವೆಯಾಗಿ ಮಗು ಇರೋ ಹುಡುಗಿಗೆ ನಾನು ಬಾಳು ಕೊಟ್ರೆ, ಅವಳ ಮಗಳನ್ನು ನೋಡ್ಕೊಂಡ್ರೆ ತಪ್ಪೇನು?‌ Bigg Boss ರಂಜಿತ್

Bigg Boss Ranjith: ಬಿಗ್‌ ಬಾಸ್‌ ರಂಜಿತ್‌ ಅವರ ಪತ್ನಿ ಮಾನಸಾ ಗೌಡಗೆ ಈ ಹಿಂದೆ ಮದುವೆಯಾಗಿ ಮಗು ಕೂಡ ಇದೆಯಂತೆ. ಈ ಹಿಂದೆ ಅಕ್ಕ ರಶ್ಮಿ ಜೊತೆಗಿನ ಜಗಳದಲ್ಲಿ ಈ ವಿಷಯ ಜಗಳ ಆಗಿತ್ತು. ಈಗ ರಂಜಿತ್‌ ಹಾಗೂ ಮಾನಸಾ ಅವರು ಸಂದರ್ಶನವೊಂದರಲ್ಲಿ ಹೆಂಡ್ತಿಗೆ ಎರಡನೇ ಮದುವೆ ಆಗಿರೋ ವಿಷಯವನ್ನು ಹೇಳಿದ್ದಾರೆ.

 

Read Full Story

06:51 PM (IST) Jun 13

ಅಧಿಕಾರಿಗಳು 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು, ಆಡಳಿತ ಚುರುಕುಗೊಳಿಸಲು ಡಿಕೆಶಿ ಖಡಕ್ ಸೂಚನೆ

ಕಚೇರಿಗೆ ಸಮಸ್ಯೆ ಹೇಳಿ ಬರುವ ಸಾರ್ವಜನಿಕರಿಗೆ ಪಾಸಿಟೀವ್ ಆಗಿ ಸ್ವಂದಿಸಿ ಸಮಸ್ಯೆ ಪರಿಹರಿಸಬೇಕು. ಎಲ್ಲಾ ಅಧಿಕಾರಿಗಳು ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರರಿಬೇಕು ಎಂದು ಡಿಕೆ ಶಿವಕುಮಾರ್ ಖಡಕ್ ವಾರ್ನಿಂಗ್ ನೀಡಿದ್ದಾರೆ.

Read Full Story

06:49 PM (IST) Jun 13

Government Job - ₹15 ಲಕ್ಷ ಸಂಬಳದ ಕೆಲಸ ಬೇಡ, ಸರ್ಕಾರಿ ನೌಕರಿ ಮಾಡು ಅಂದ ಅಪ್ಪ! ವೈರಲ್ ಆಯ್ತು ಪೋಸ್ಟ್

India Jobs: ವರ್ಷಕ್ಕೆ 15 ಲಕ್ಷ ರೂಪಾಯಿ ಪ್ಯಾಕೇಜ್‌ನ MNC ಉದ್ಯೋಗ ಸಿಕ್ಕರೂ ಮಗನನ್ನು ಕೆಲಸಕ್ಕೆ ಕಳುಹಿಸದ ತಂದೆ, ಸರ್ಕಾರಿ ನೌಕರಿಗೆ ತಯಾರಿ ಮಾಡು ಎಂದು ಒತ್ತಾಯಿಸಿದ್ದಾರೆ. ಈ ಘಟನೆ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

Read Full Story

06:22 PM (IST) Jun 13

ಕಾಕ್ರೋಚ್ ಜನತಾ ಪಾರ್ಟಿ ಬೆಂಗಳೂರು ಹೋರಾಟಕ್ಕೆ ತಮಿಳಿಗರಿಗೆ ಆಹ್ವಾನ, ರಕ್ಷಣಾ ವೇದಿಕೆ ಖಡಕ್ ಎಚ್ಚರಿಕೆ

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಆಯೋಜಿಸಿರುವ ಪ್ರತಿಭಟನಾ ಹೋರಾಟಕ್ಕೆ ತಮಿಳಿಗರಿಗೆ ಆಹ್ವಾನ ನೀಡಿರುವ ಕುರಿತು ಕರ್ನಾಟಕ ರಕ್ಷಣಾ ವೇದಿಕೆ ವಾರ್ನಿಂಗ್ ನೀಡಿದೆ, ಸಿಜೆಪಿಗೆ ಎಚ್ಚರಿಕೆ ನೀಡಿದ್ದೇಕೆ?

Read Full Story

06:18 PM (IST) Jun 13

Chanakya Niti - ಮಹಿಳೆಯರು ಯಾಕೆ ಹೆಚ್ಚು ಹೊತ್ತು ಬಾಗಿಲು, ಕಿಟಕಿ ಬಳಿ ನಿಲ್ಲಬಾರದು? ಇಲ್ಲಿದೆ 4 ಕಾರಣ!

Chanakya Niti For Women: ಆಚಾರ್ಯ ಚಾಣಕ್ಯರ ಪ್ರಕಾರ, ಮಹಿಳೆಯರು ಮನೆಯ ಮುಖ್ಯ ಬಾಗಿಲು ಅಥವಾ ಕಿಟಕಿಯ ಬಳಿ ಹೆಚ್ಚು ಹೊತ್ತು ನಿಲ್ಲಬಾರದು. ಯಾಕೆ ಹೀಗೆ ಹೇಳಿದ್ದಾರೆ? ಇದರಿಂದ ಕುಟುಂಬಕ್ಕೆ ಯಾವ ರೀತಿ ಸಮಸ್ಯೆ ಆಗಬಹುದು? ಇಲ್ಲಿದೆ ಮಾಹಿತಿ.

Read Full Story

06:02 PM (IST) Jun 13

Dharmasthala Case - ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ಬಂದ ಗಿರೀಶ್‌ ಮಟ್ಟೆಣ್ಣವ‌ರ್, ಚಿನ್ನಯ್ಯನ ಬಗ್ಗೆ ಹೇಳಿದ್ದೇನು?

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಆರೋಪಿ ಚಿನ್ನಯ್ಯ 200 ಕೋಟಿ ಡೀಲ್ ಷಡ್ಯಂತ್ರದ ಆರೋಪ ಮಾಡಿದ ಬಳಿಕ ಪ್ರಕರಣ ಹೊಸ ತಿರುವು ಪಡೆದಿದೆ. ಇದಕ್ಕೆ ಪ್ರತಿಯಾಗಿ ಗಿರೀಶ್ ಮಟ್ಟೆಣ್ಣವರ್, ಚಿನ್ನಯ್ಯ ಹಾಗೂ ತನಗೆ ಬ್ರೈನ್ ಮ್ಯಾಪಿಂಗ್ ಮಾಡುವಂತೆ ದೂರು ನೀಡಿದ್ದಾರೆ. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದೆ.
Read Full Story

05:59 PM (IST) Jun 13

Injured Tiger - ಉರುಳಿಗೆ ಸಿಲುಕಿ ನರಳುತ್ತಿರುವ ಹುಲಿ - ಮುಳ್ಳಯ್ಯನಗಿರಿ ತಪ್ಪಲಿನ ಗ್ರಾಮಗಳಲ್ಲಿ ಆತಂಕ!

Chikkamagaluru: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಉರುಳಿಗೆ ಸಿಲುಕಿದ ಗಾಯಗೊಂಡ ಹುಲಿ ಕಳೆದ ನಾಲ್ಕು ದಿನಗಳಿಂದ ಸಂಚರಿಸುತ್ತಿದೆ. ಅರಣ್ಯ ಇಲಾಖೆ ಸೆರೆ ಕಾರ್ಯಾಚರಣೆ ನಡೆಸುತ್ತಿದ್ದು, ಗ್ರಾಮಸ್ಥರು ಹಾಗೂ ಕಾರ್ಮಿಕರಲ್ಲಿ ಆತಂಕ ಮನೆಮಾಡಿದೆ.

Read Full Story

05:51 PM (IST) Jun 13

ಬೆಂಗಳೂರಿನಲ್ಲಿ ಮಳೆ ಆರಂಭ, ಮುಂದಿನ ಮೂರು ಗಂಟೆ ಯೆಲ್ಲೋ ಅಲರ್ಟ್ ನೀಡಿದ ಹವಾಮಾನ ಇಲಾಖೆ

ಬೆಂಗಳೂರಿನ ಹಲೆವೆಡೆ ಮಳೆ ಆರಂಭಗೊಂಡಿದೆ. ಇದರ ಬೆನ್ನಲ್ಲೇ ಹವಾಮಾನ ಇಲಾಖೆ ಮಹತ್ವದ ಎಚ್ಚರಿಕೆ ನೀಡಿದೆ. ಮುಂದಿನ ಮೂರು ಗಂಟೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಸಾರ್ವಜನಿಕರು ಎಚ್ಚರಿಕೆ ವಹಿಸಬೇಕಾಗಿ ಸೂಚಿಸಿದೆ.

Read Full Story

05:50 PM (IST) Jun 13

ಫಸ್ಟ್‌ ಟೈಮ್‌ ಪತಿಯ ಫೋಟೋ ಶೇರ್‌ ಮಾಡಿದ Geetha Serial Actress Sharmitha Gowda - ಇಷ್ಟು ಎತ್ತರದ ಮಗನಿದ್ದಾನಾ?

Geetha Kannada Serial Actress Sharmitha Gowda: ಕನ್ನಡದ ಅನೇಕ ಧಾರಾವಾಹಿ, ಸಿನಿಮಾಗಳಲ್ಲಿ ನಟಿಸಿರುವ ಶರ್ಮಿತಾ ಗೌಡ ಅವರು ಪತಿಯ ಫೋಟೋವನ್ನು ಸೋಶಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಿಕೊಂಡಿದ್ದಾರೆ. ಇವರ ಪತಿ ಯಾರು? ಏನು ಕೆಲಸ ಮಾಡುತ್ತಿದ್ದಾರೆ?

 

Read Full Story

05:47 PM (IST) Jun 13

Energy Drink - ಯಾದಗಿರಿಯಲ್ಲಿ ಆಘಾತಕಾರಿ ಘಟನೆ - ಎನರ್ಜಿ ಡ್ರಿಂಕ್ ಚಟಕ್ಕೆ 18 ವರ್ಷದ ಯುವಕ ಬಲಿ?

Energy Drink: ಯಾದಗಿರಿ ಜಿಲ್ಲೆಯ ನಾರಾಯಣಪುರದಲ್ಲಿ 18 ವರ್ಷದ ಯುವಕನ ಸಾವಿನ ಬಳಿಕ ಎನರ್ಜಿ ಡ್ರಿಂಕ್ ಸೇವನೆ ಕುರಿತು ಚರ್ಚೆ ಜೋರಾಗಿದೆ. ಅತಿಯಾದ ಸೇವನೆಯಿಂದ ಆರೋಗ್ಯ ಸಮಸ್ಯೆ ಉಂಟಾಗಿರುವ ಶಂಕೆ ವ್ಯಕ್ತವಾಗಿದೆ.

Read Full Story

05:38 PM (IST) Jun 13

Belagavi - 2 ಕೋಟಿ ವಿಮೆಗಾಗಿ ಮಾಜಿ ಸೈನಿಕನ ಕೊಂದ ಪತ್ನಿ, ವಿಡಿಯೋ ಮಾಡಿ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಪ್ರಿಯಕರ!

ಬೆಳಗಾವಿಯ ಘೋಡಗೇರಿ ಗ್ರಾಮದ ಮಾಜಿ ಸೈನಿಕ ಸಂದೀಪ್ ಮಾಂಜರಿ ಅವರ ನಿಗೂಢ ಸಾವು ಕೊಲೆ ಎಂದು ದೃಢಪಟ್ಟಿದೆ. 2 ಕೋಟಿ ರೂಪಾಯಿ ವಿಮೆ ಹಣಕ್ಕಾಗಿ ಪತ್ನಿ ಸುಮಾ, ಪ್ರಿಯಕರನ ಸಹಾಯದಿಂದ ವಿಷವಿಕ್ಕಿ ಕೊಂದಿರುವುದು ಪ್ರಿಯಕರನ ಸೆಲ್ಫಿ ವಿಡಿಯೋದಿಂದ ಬಯಲಾಗಿದೆ. ಶವಪರೀಕ್ಷೆಯಲ್ಲಿ ವಿಷಪ್ರಾಶನ ದೃಢಪಟ್ಟಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
Read Full Story

05:32 PM (IST) Jun 13

Vajramuni - ಲಭಕ್ ಸ್ವಾಹಾ, ಯಲಾಕುನ್ನಿ ಅಂತಿದ್ದ ವಜ್ರಮುನಿಗೆ ಒಂದು ಸಿನಿಮಾಗೆ ಸಿಗುತ್ತಿದ್ದ ಸಂಭಾವನೆ ಎಷ್ಟು?

Vajramuni Salary: ಕನ್ನಡದ ದಿಗ್ಗಜ ಖಳನಾಯಕ ವಜ್ರಮುನಿ ಒಂದು ಸಿನಿಮಾಗೆ ಎಷ್ಟು ಸಂಭಾವನೆ ಪಡೆಯುತ್ತಿದ್ದರು? ಪುತ್ರ ವಿಶ್ವನಾಥ್ ವಜ್ರಮುನಿ ಸಂದರ್ಶನದಲ್ಲಿ ಹಂಚಿಕೊಂಡ ಅಪರೂಪದ ಮಾಹಿತಿ, ಅವರ ಜೀವನಶೈಲಿ ಮತ್ತು ಸಿನಿಮಾ ಪಯಣದ ವಿವರ ಇಲ್ಲಿದೆ. 

Read Full Story

05:31 PM (IST) Jun 13

Doddanna - ಸಾವಿನ ವದಂತಿ ಬೆನ್ನಲ್ಲೇ ಕಂಟಕ ಪರಿಹಾರಕ್ಕಾಗಿ ಆಂಜನೇಯನ ಸ್ವಾಮಿಗೆ ಮೊರೆ ಹೋದ ನಟ ದೊಡ್ಡಣ್ಣ

ಇದು ಮೊದಲೇನಲ್ಲ. ಕಳೆದ 2021ರ ಮೇ ತಿಂಗಳಲ್ಲೂ ಸಹ ಇದೇ ರೀತಿ ಕಿಡಿಗೇಡಿಗಳು ಅವರ ಸಾವಿನ ವದಂತಿ ಹಬ್ಬಿಸಿ ವಿಕೃತ ಸುಖ ಅನುಭವಿಸಿದ್ದರು. ಪದೇ ಪದೇ ಹಿರಿಯ ನಟರ ಜೀವನದ ಜೊತೆ ಆಟವಾಡುತ್ತಿರುವುದಕ್ಕೆ ಸಾರ್ವಜನಿಕರಿಂದ ಬೇಸರ ವ್ಯಕ್ತವಾಗುತ್ತಿದೆ. ಏಕೆ ಹೀಗೆ? ಈ ಸ್ಟೋರಿ ನೋಡಿ..

Read Full Story

05:17 PM (IST) Jun 13

ಗಂಡನ ಅಕ್ರಮ ಸಂಬಂಧ; ಏಕಾಂಗಿಯಾಗಿ ಮಗಳನ್ನು ಸಾಕ್ತಿದ್ದಾರೆ; 'ಕೃಷ್ಣ ರುಕ್ಕು' ಸೀರಿಯಲ್‌ ಕಲ್ಯಾಣಿ ರಿಯಲ್‌ ಕಥೆ

ಕೃಷ್ಣ ರುಕ್ಕು ಧಾರಾವಾಹಿಯಲ್ಲಿ ಕಲ್ಯಾಣಿ ಪಾತ್ರದಲ್ಲಿ ನಟಿಸುತ್ತಿರುವ ದಿವ್ಯಶ್ರೀ ಸುಳ್ಯ ಅವರು ಈಗ ಮಗಳನ್ನು ಏಕಾಂಗಿಯಾಗಿ ಸಾಕುತ್ತಿದ್ದಾರೆ. ಗಂಡನ ಅಕ್ರಮ ಸಂಬಂಧಕ್ಕೆ ಬೇಸರಗೊಂಡು ಡಿವೋರ್ಸ್‌ ತಗೊಂಡೆ ಎಂದು ಅವರು ನ್ಯೂಸೋ ನ್ಯೂಸು ಯುಟ್ಯೂಬ್‌ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.

 

Read Full Story

04:48 PM (IST) Jun 13

DGP Alok Kumar - ಧಾರವಾಡ ಜೈಲರ್ ಆತ್ಮ*ಹತ್ಯೆ ಪ್ರಕರಣ - ಡಿಜಿಪಿ ಅಲೋಕ್ ಕುಮಾರ್ ವಿರುದ್ಧ ಕುಟುಂಬದ ಗಂಭೀರ ಆರೋಪ!

ಧಾರವಾಡ ಕೇಂದ್ರ ಕಾರಾಗೃಹದ ಜೈಲರ್ ಸಿದ್ದರಾಮಪ್ಪ ವಡ್ಡರ್ ಅವರ ಆತ್ಮಹತ್ಯೆ ಪ್ರಕರಣವು ಹಿರಿಯ ಪೊಲೀಸ್ ಅಧಿಕಾರಿಯತ್ತ ಬೆರಳು ಮಾಡಿದೆ. ಡಿಜಿಪಿ ಅಲೋಕ್ ಕುಮಾರ್ ಅವರ ಮಾನಸಿಕ ಕಿರುಕುಳವೇ ಸಾವಿಗೆ ಕಾರಣ ಎಂದು ಮೃತರ ಕುಟುಂಬ ಆರೋಪಿಸಿದ್ದು, ಅವರ ವಿರುದ್ಧ ದೂರು ದಾಖಲಿಸಲು ಸಜ್ಜಾಗಿದೆ. ಅಮಾನತುಗೊಂಡಿದ್ದ ಸಿದ್ದರಾಮಪ್ಪ, ನಿರಂತರ ಕಿರುಕುಳದಿಂದ ನೊಂದು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಪತ್ನಿ ದೂರಿದ್ದಾರೆ.
Read Full Story

04:15 PM (IST) Jun 13

Mruthyudevathe Movie Review - ಒಂದು ರಾತ್ರಿ, ನಾಲ್ಕು ಜನ, ಭಯಾನಕ ಸತ್ಯ, ಒಂದು ರಹಸ್ಯ!

Mruthyudevathe Review: ಅನಿರೀಕ್ಷಿತ ತಿರುವುಗಳು, ಸಸ್ಪೆನ್ಸ್ ಥ್ರಿಲ್ಲರ್ ಕಥೆ ಹಾಗೂ ಮಹಿಳಾ ಶಕ್ತಿಯ ಸಂದೇಶ ಹೊಂದಿರುವ ಮೃತ್ಯುದೇವತೆ ಸಿನಿಮಾದ ಸಂಪೂರ್ಣ ವಿಮರ್ಶೆ. ಕಥೆ, ನಟನ, ನಿರ್ದೇಶನ ಮತ್ತು ಹೈಲೈಟ್ಸ್ ಓದಿ. 

Read Full Story

03:52 PM (IST) Jun 13

ಧಾರವಾಡ ಜೈಲಲ್ಲಿ ಶಿವಮೊಗ್ಗ ಹರ್ಷಾ ಕೊಲೆ ಆರೋಪಿಗಳ ಪುಂಡಾಟ, ವಾರ್ಡನ್ ಮೇಲೆ ಭೀಕರ ಹಲ್ಲೆ, ಜೈಲರ್ ಕಠಿಣ ಶಿಕ್ಷೆ!

ಶಿವಮೊಗ್ಗದ ಹರ್ಷಾ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳು ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಜೈಲು ವಾರ್ಡನ್ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಪುಂಡಾಟಿಕೆಯಿಂದಾಗಿ, ಆರೋಪಿಗಳಿಗೆ ಒಂದು ತಿಂಗಳ ಕಾಲ ಕುಟುಂಬಸ್ಥರ ಭೇಟಿಯನ್ನು ನಿಷೇಧಿಸಲಾಗಿದ್ದು, ಭೇಟಿಗೆ ಬಂದಿದ್ದ ಅವರ ಕುಟುಂಬಸ್ಥರು ನಿರಾಸೆಯಿಂದ ವಾಪಸ್ಸಾಗಿದ್ದಾರೆ.
Read Full Story

03:15 PM (IST) Jun 13

ಬೆಂಗಳೂರಿಂದ ಧರ್ಮಸ್ಥಳ - ಕುಕ್ಕೆ ಸುಬ್ರಹ್ಮಣ್ಯಕ್ಕೆ ಕೆಎಸ್‌ಟಿಡಿಸಿ ವೀಕೆಂಡ್ ಟೂರ್ ಪ್ಯಾಕೇಜ್, ವಿಶೇಷ ಶೀಘ್ರ ದರ್ಶನ!

ಬೆಂಗಳೂರಿನಿಂದ ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯಕ್ಕೆ KSTDCಯು ಹೊಸ ವಾರಾಂತ್ಯದ ಪ್ರವಾಸ ಪ್ಯಾಕೇಜ್ ಆರಂಭಿಸಿದೆ. ಈ ಪ್ಯಾಕೇಜ್‌ನಲ್ಲಿ ಪ್ರಯಾಣ, ವಸತಿ, ವಿಶೇಷ ಶೀಘ್ರ ದರ್ಶನ ಮತ್ತು ಗೈಡ್ ಸೌಲಭ್ಯಗಳು ಸೇರಿದ್ದು, ಆನ್‌ಲೈನ್ ಮೂಲಕ ಬುಕಿಂಗ್ ಮಾಡಬಹುದಾಗಿದೆ.
Read Full Story

01:37 PM (IST) Jun 13

ಧರ್ಮಶಾಲಾದಲ್ಲಿಂದು ಭಾರತ-ಆಫ್ಘಾನಿಸ್ತಾನ ಮ್ಯಾಚ್ ನಡೆಯೋದೇ ಡೌಟ್..! ಬಯಲಾಯ್ತು ಇಂಟ್ರೆಸ್ಟಿಂಗ್ ಮಾಹಿತಿ

India vs Afghanistan 1st ODI: ಭಾರತ ಕ್ರಿಕೆಟ್ ತಂಡವು ಇಂದಿನಿಂದ ಮುಂಬರುವ 2027ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಸಿದ್ದತೆ ಆರಂಭಿಸುತ್ತಿದೆ. ಇಂದಿನಿಂದ ಭಾರತ ಹಾಗೂ ಆಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಹೀಗಿರುವಾಗಲೇ ಮೊದಲ ಪಂದ್ಯ ನಡೆಯೋದೇ ಅನುಮಾನ ಎನಿಸಿದೆ.

Read Full Story

01:29 PM (IST) Jun 13

ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? - Actress Bhavya Gowda

Karna Serial Actress Bhavya Gowda: ಕರ್ಣ ಧಾರಾವಾಹಿ ನಟಿ ಭವ್ಯಾ ಗೌಡ, ಬಣ್ಣದ ಲೋಕದ ಹಿಂದಿನ ಸತ್ಯವನ್ನು ಬಿಚ್ಚಿಟ್ಟಿದ್ದಾರೆ. ತಮ್ಮದೇ ಆದ ಯುಟ್ಯೂಬ್‌ ಚಾನೆಲ್‌ನಲ್ಲಿ ಕರ್ಣ ಧಾರಾವಾಹಿ BTS ವಿಡಿಯೋ ಶೇರ್‌ ಮಾಡಿಕೊಂಡು, ಪೀರಿಯಡ್ಸ್‌ ದಿನ ಮಹಿಳಾ ಕಲಾವಿದರಿಗೆ ಆಗುವ ಕಷ್ಟದ ಬಗ್ಗೆ ಮಾತನಾಡಿದ್ದಾರೆ.

 

Read Full Story

01:27 PM (IST) Jun 13

Mangaluru Railway Updates - ಮಂಗಳೂರು ರೈಲು ಪ್ರಯಾಣಿಕರಿಗೆ ಒಂದು ಕಹಿ, ಒಂದು ಸಿಹಿ ಸುದ್ದಿ! ಜೂ.16ರಿಂದ ಬದಲಾವಣೆ

ರೈಲು ಹಳಿ ನಿರ್ವಹಣಾ ಕಾಮಗಾರಿಯಿಂದಾಗಿ ಮಂಗಳೂರು-ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಸಂಚಾರದಲ್ಲಿ ತಾತ್ಕಾಲಿಕ ವಿಳಂಬವಾಗಲಿದೆ. ಇದೇ ವೇಳೆ, ಪ್ರಯಾಣಿಕರ ಅನುಕೂಲಕ್ಕಾಗಿ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ ಕಟೀಲು, ಬೊಕ್ಕಪಟ್ಣ ಸೇರಿದಂತೆ ವಿವಿಧೆಡೆಗೆ ಕೆಎಸ್‌ಆರ್‌ಟಿಸಿ ಹೊಸ ಬಸ್ ಸೇವೆಯನ್ನು ಆರಂಭಿಸಿದೆ.
Read Full Story

01:06 PM (IST) Jun 13

Nirmala Sitharaman Visits Udupi - ಉಡುಪಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ, ಶ್ರೀ ಕೃಷ್ಣ ದರ್ಶನ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡು, ಪ್ರಸಿದ್ಧ ಶ್ರೀ ಕೃಷ್ಣ ಮಠ, ಕಾಪು ಮಾರಿಗುಡಿ ಹಾಗೂ ಉಚ್ಚಿಲ ಮಹಾಲಕ್ಷ್ಮಿ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರು ಬಿಜೆಪಿ ಜಿಲ್ಲಾ ಪ್ರಶಿಕ್ಷಣ ವರ್ಗ ಕಾರ್ಯಕ್ರಮವನ್ನು ಉದ್ಘಾಟಿಸಿ, ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
Read Full Story

12:14 PM (IST) Jun 13

Football - ಗ್ರಾಮೀಣ ಫುಟ್ಬಾಲ್ ಪ್ರತಿಭೆಗಳಿಗೆ ಸ್ಥಾಪಿಸಿದ್ದ ಬಳ್ಳಾರಿ ಕ್ರೀಡಾ ವಸತಿ ನಿಲಯ ಬೆಂಗಳೂರಿಗೆ ಶಿಫ್ಟ್!

ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ ಬಳ್ಳಾರಿಯ ಹಿರಿಯರ ಫುಟ್‌ಬಾಲ್ ಕ್ರೀಡಾ ವಸತಿ ನಿಲಯವನ್ನು ಏಕಾಏಕಿ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ. ಈ ನಿರ್ಧಾರವು ಕಲ್ಯಾಣ ಕರ್ನಾಟಕ ಭಾಗದ ಗ್ರಾಮೀಣ ಮತ್ತು ಬಡ ಕ್ರೀಡಾಪಟುಗಳ ಭವಿಷ್ಯಕ್ಕೆ ಕುತ್ತು ತಂದಿದ್ದು, ಸ್ಥಳೀಯರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
Read Full Story

12:03 PM (IST) Jun 13

Karnataka Rain - ರಾಜ್ಯದಲ್ಲಿ ಜೂ.18ರವರೆಗೆ ಮಳೆ ಮುಂದುವರಿಕೆ, ಬೆಂಗಳೂರಿನಲ್ಲಿ ಮಧ್ಯಾಹ್ನ ನಂತರ ಬಿರುಗಾಳಿ ಮಳೆ!

ರಾಜ್ಯಾದ್ಯಂತ ಜೂನ್ 13 ರಂದು ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಹವಾಮಾನ ಇಲಾಖೆಯು ಕರಾವಳಿ ಜಿಲ್ಲೆಗಳಿಗೆ 'ರೆಡ್ ಅಲರ್ಟ್' ಘೋಷಿಸಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲೂ ಮಧ್ಯಾಹ್ನದ ನಂತರ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ.

Read Full Story

11:39 AM (IST) Jun 13

ಧಾರವಾಡ - ಲವ್ ಜಿಹಾದ್ ಆರೋಪಿತ ಅಪ್ರಾಪ್ತೆಯ ಆ*ತ್ಮಹ*ತ್ಯೆ ಪ್ರಕರಣ, ಸಿಪಿಐ ಶಿವಯೋಗಿ ಲೋಹಾರ್ ಸಸ್ಪೆಂಡ್‌

ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ನಡೆದ ಅಪ್ರಾಪ್ತೆಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಪೊಲೀಸ್ ಇನ್ಸ್ಪೆಕ್ಟರ್ ಶಿವಯೋಗಿ ಲೋಹಾರ್ ಅವರನ್ನು ಅಮಾನತುಗೊಳಿಸಲಾಗಿದೆ. 

Read Full Story

11:36 AM (IST) Jun 13

Darshan-Pavithra Gowda - ದರ್ಶನ್ ಕೈಯಲ್ಲಿ ಪುಸ್ತಕ, ಪವಿತ್ರಾ ಕೈಯಲ್ಲಿ ಪೆನ್ನು; ಜೈಲಿನಲ್ಲೇ ಶುರುವಾಯ್ತು ಹೊಸ ಕಥೆ 'ಪವಿತ್ರ ದರ್ಶನ'..!

ಕಳೆದ ಒಂದು ತಿಂಗಳಿಂದಲೂ ಜೈಲಿನಲ್ಲಿ ಬಿಳಿ ಹಾಳೆ ಮತ್ತು ಪೆನ್ನು ಹಿಡಿದು ಕೂತಿರೋ ಪವಿತ್ರಾ ತಮ್ಮ ಆತ್ಮಚರಿತ್ರೆ ಬರೆಯುತ್ತಾ ಟೈಂ ಪಾಸ್ ಮಾಡುತ್ತಿದ್ದಾರಂತೆ. ‘ತಾನು ಯಾರು, ತನ್ನ ಬದುಕು ಹೇಗಿತ್ತು.? ತಾನು ಏನು ಮಾಡಿದ್ದೇನೆ ಎಂಬುದನ್ನೆಲ್ಲಾ ಅವರು ಬರೆಯುತ್ತಿದ್ದಾರೆ ಎನ್ನಲಾಗಿದೆ.

Read Full Story

11:18 AM (IST) Jun 13

Karnataka Weather - ಬೆಂಗಳೂರಿಗರೇ ಸುಖಾಸುಮ್ಮನೆ ಹೊರಬರಬೇಡಿ, ಭಾರೀ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ!

Karnataka Weather Alert: ಕೆ: ಜೂನ್ 13 ರಂದು ಬೆಂಗಳೂರಿನಲ್ಲಿ ಮುಂಗಾರು ಚುರುಕುಗೊಂಡಿದೆ.. ನಗರದಾದ್ಯಂತ ಸತತವಾಗಿ ಸುರಿದ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Read Full Story

11:09 AM (IST) Jun 13

ಮದುವೆ ವಾರ್ಷಿಕೋತ್ಸವದಂದೇ ದರ್ಶನ್ ಬ್ಯಾಡ್ ಟೈಂ ಶುರು? ಪವಿತ್ರಾ ಗೌಡ ಕಾರಣಕ್ಕೇ ದರ್ಶನ್‌ಗೆ ಸಿಕ್ಕ ಗಿಫ್ಟ್ ಜೈಲು?

2025ರಲ್ಲಿ ದರ್ಶನ್​​​​ ಪಾಲಿಗೆ ಹೇಗಿತ್ತು? ಸಿಹಿ ಹಾಗೂ ಕಹಿ ಎರಡೂ ಸಿಕ್ಕಿತ್ತು. ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ ಜೈಲು ಸೇರಿದ್ದ ದರ್ಶನ್​​​​​, ಪರಪ್ಪನ ಅಗ್ರಹಾರ ಹಾಗೂ ಬಳ್ಳಾರಿ ಜೈಲುವಾಸದಲ್ಲಿ ಶತಕದಿನವನ್ನು ಪೂರೈಸಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ರು. ಆದ್ರೆ ಮುಂದೇನಾಯ್ತು?

Read Full Story

11:05 AM (IST) Jun 13

ಶ್ರೀರಾಮ ದಶರಥನ ಮಗನಲ್ಲ ಪುರೋಹಿತರಿಗೆ ಹುಟ್ಟಿದವನು! ಸಾಹಿತಿ ಭಗವಾನ್ ವಿವಾದಾತ್ಮಕ ಹೇಳಿಕೆಗೆ ತೀವ್ರ ಆಕ್ರೋಶ

ಸಾಹಿತಿ ಪ್ರೊ. ಕೆ.ಎಸ್. ಭಗವಾನ್ ಅವರು ಶ್ರೀರಾಮನು ದಶರಥನ ಮಗನಲ್ಲ, ಪುರೋಹಿತರಿಗೆ ಹುಟ್ಟಿದವನು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯು ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ ಎಂದು ಆರೋಪಿಸಿ, ರಾಜ್ಯದ ಹಲವೆಡೆ ಅವರ ವಿರುದ್ಧ ದೂರು ದಾಖಲಾಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ.
Read Full Story

10:42 AM (IST) Jun 13

ವಿಜಯನಗರ - 565 ವಿದ್ಯಾರ್ಥಿನಿಯರು ಓದುವ ಈ ಸರ್ಕಾರಿ ಕಾಲೇಜಲ್ಲಿ ಶೌಚಕ್ಕೆ ಸರದಿ ಸಾಲು ನಿಲ್ಲಬೇಕು!

ಹೂವಿನಹಡಗಲಿ: ಇಲ್ಲಿನ ಶ್ರೀಮತಿ ಸೊಪ್ಪಿನ ಕಾಳಮ್ಮ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು(Soppina Kalamma Girls Government Pre-Graduate College) ಪ್ರವೇಶ ಪಡೆಯಲು ವಿದ್ಯಾರ್ಥಿನಿಯರು ದುಂಬಾಲು ಬಿದ್ದಿದ್ದಾರೆ. 565 ಬಾಲಕಿಯರು ದಾಖಲಾಗಿದ್ದಾರೆ.

Read Full Story

10:23 AM (IST) Jun 13

ಬೆಂಗಳೂರು ರಸ್ತೆಯಲ್ಲಿ ಮತ್ತೊಮ್ಮೆ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ, ಅಡ್ಡಾದಿಡ್ಡಿ ಓಡಾಟ!

ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಒಡೆತನದ ಲ್ಯಾಂಬೋರ್ಗಿನಿ ಕಾರು ಬೆಂಗಳೂರಿನ ಏರ್ಪೋರ್ಟ್ ರಸ್ತೆಯಲ್ಲಿ ಅತಿವೇಗ ಹಾಗೂ ಕರ್ಕಶ ಶಬ್ದದೊಂದಿಗೆ ಪುಂಡಾಟಿಕೆ ನಡೆಸಿದೆ. ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ಈ ಹಿಂದೆ ಕಬ್ಬನ್ ಪಾರ್ಕ್ ಬಳಿ ರೇಸಿಂಗ್ ನಡೆಸಿದ್ದ ಇದೇ ಕಾರಿನ ವಿರುದ್ಧ ಪೊಲೀಸರು ಇದೀಗ ಮತ್ತೊಮ್ಮೆ ತನಿಖೆ ಆರಂಭಿಸಿದ್ದಾರೆ.
Read Full Story

10:21 AM (IST) Jun 13

ಸರ್ಕಾರಿ ಶಾಲೆಯಲ್ಲಿ 1988- 89ರಿಂದ 1995- 96ರ ಹಳೆಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ

ನರೇಗಲ್ಲ ಪಟ್ಟಣದ ಸರ್ಕಾರಿ ಮಾದರಿ ಕೇಂದ್ರ ಕನ್ನಡ ಗಂಡುಮಕ್ಕಳ ಶಾಲೆಯಲ್ಲಿ 1988-89 ರಿಂದ 1995-96ನೇ ಸಾಲಿನಲ್ಲಿ ವ್ಯಾಸಂಗ ಮಾಡಿದ ಹಳೆಯ ವಿದ್ಯಾರ್ಥಿಗಳು ಜೂ. 14 ರಂದು ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಶಾಲೆಯ ನಿವೃತ್ತ ಹಾಗೂ ಹಾಲಿ ಶಿಕ್ಷಕರಿಗೆ ಸನ್ಮಾನವನ್ನು ಏರ್ಪಡಿಸಲಾಗಿದೆ.
Read Full Story

10:10 AM (IST) Jun 13

ಬಹುನಿರೀಕ್ಷಿತ ತಾಳಗುಪ್ಪ-ಹುಬ್ಬಳ್ಳಿ ಮಾರ್ಗದ ಕುರಿತು ಮಹತ್ವದ ಅಪ್‌ಡೇಟ್ ನೀಡಿದ ಸಂಸದರು

ಸಂಸದ ಬಿ.ವೈ.ರಾಘವೇಂದ್ರ ಅವರು ತಾಳಗುಪ್ಪ-ಹುಬ್ಬಳ್ಳಿ ರೈಲು ಮಾರ್ಗ ನಿರ್ಮಾಣ ಖಚಿತ ಎಂದು ಭರವಸೆ ನೀಡಿದ್ದಾರೆ. ₹3.93 ಕೋಟಿ ವೆಚ್ಚದ ಸಮೀಕ್ಷೆ ಪೂರ್ಣಗೊಂಡಿದ್ದು, ಡಿಪಿಆರ್ ಸಿದ್ಧಪಡಿಸಿ ಕೇಂದ್ರಕ್ಕೆ ಸಲ್ಲಿಸಲಾಗುವುದು. 

Read Full Story

09:37 AM (IST) Jun 13

Lokayukta raids - 27 ಪಡಿತರ ಗೋದಾಮುಗಳ ಮೇಲೆ ಲೋಕಾಯುಕ್ತ ದಾಳಿ!

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ 27 ಗೋದಾಮುಗಳ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ. ಈ ವೇಳೆ, ಯಾವುದೇ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ನೂರಾರು ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದ್ದು, ಗೋದಾಮುಗಳ ನಿರ್ವಹಣೆಯಲ್ಲಿ ಹಲವು ಲೋಪದೋಷಗಳು ಪತ್ತೆಯಾಗಿವೆ.
Read Full Story

09:28 AM (IST) Jun 13

ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ ವಿವಿಧ ಭಾಗಗಳಿಗೆ ಹೊಸ ಬಸ್ ಸೇವೆ; ವೇಳಾಪಟ್ಟಿ ಇಲ್ಲಿದೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ (ಪಡೀಲ್) ನಗರದ ಪ್ರಮುಖ ಭಾಗಗಳಾದ ಕಟೀಲು, ಬೊಕ್ಕಪಟ್ಣ, ಸ್ಟೇಟ್‍ಬ್ಯಾಂಕ್, ಮತ್ತು ಕೋಡಿಕಲ್‌ಗೆ ಹೊಸ ನಗರ ಸಾರಿಗೆ ಸೇವೆಯನ್ನು ಆರಂಭಿಸಿದೆ. ಈ ಪ್ರಕಟಣೆಯು ವಿವಿಧ ಮಾರ್ಗಗಳ ವಿವರವಾದ ವೇಳಾಪಟ್ಟಿಯನ್ನು ಒದಗಿಸುತ್ತದೆ.
Read Full Story

09:22 AM (IST) Jun 13

CM DK Shivakumar - ದೆಹಲಿ ಭೇಟಿ ಬಳಿಕ ಇಂದು ಸಿಎಂ ಡಿಕೆಶಿ ಮೊದಲ ಡೀಸಿ, ಸಿಇಒಗಳ ಜೊತೆ ಸಭೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳು ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳೊಂದಿಗೆ ರಾಜ್ಯಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ವಿಧಾನಸೌಧದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಹಲವು ನಿರ್ದೇಶನಗಳನ್ನು ನೀಡುವ ಸಾಧ್ಯತೆ.

Read Full Story

09:14 AM (IST) Jun 13

ಮಕ್ಕಳನ್ನು ಹೊರಗೆ ಹಾಕಿ ಉರ್ದು ಶಾಲೆಗೆ ಬೀಗ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ; ಮನವಿ ಸಲ್ಲಿಕೆ

Urdu School: ವಿಜಯಪುರ ಜಿಲ್ಲೆಯ ನಾಗೂರ ಉರ್ದು ಶಾಲೆಯಲ್ಲಿ ಶಿಕ್ಷಕರ ತೀವ್ರ ಕೊರತೆಯಿಂದಾಗಿ ಗ್ರಾಮಸ್ಥರು ಶಾಲೆಗೆ ಬೀಗ ಜಡಿದು ಪ್ರತಿಭಟಿಸಿದ್ದಾರೆ.  ಇದು ಶಾಲೆಯನ್ನು ಮುಚ್ಚುವ ಹುನ್ನಾರ ಎಂದು ಆರೋಪಿಸಿದ್ದಾರೆ.

Read Full Story

09:06 AM (IST) Jun 13

Shivamogga - ಗ್ರಾಮಸ್ಥರೇ ಎರಡು ಕಿಲೋ ಮೀಟರ್ ರಸ್ತೆ ನಿರ್ಮಿಸಿ ವಿನೂತನ ಪ್ರತಿಭಟನೆ!

ಸಾಗರ ತಾಲೂಕಿನ ಪಡವಗೋಡು ಗ್ರಾಮದಲ್ಲಿ, ಆಡಳಿತದ ನಿರ್ಲಕ್ಷ್ಯದಿಂದ ಬೇಸತ್ತ ಗ್ರಾಮಸ್ಥರು ರೈತ ಸಂಘದ ಸಹಯೋಗದೊಂದಿಗೆ ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿ ಮಾಡಿದ್ದಾರೆ. ಸುಮಾರು 2 ಲಕ್ಷ ರೂ. ವೆಚ್ಚದಲ್ಲಿ ಜೆಸಿಬಿ, ಟಿಪ್ಪರ್ ಬಳಸಿ ಶ್ರಮದಾನದ ಮೂಲಕ ರಸ್ತೆ ಅಭಿವೃದ್ಧಿಪಡಿಸಿ ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ.

Read Full Story

08:52 AM (IST) Jun 13

Bengaluru Rains - ಪದೇ ಪದೇ ಜಾಲವೃತಗೊಳ್ಳುವ 10 ಪ್ರದೇಶಗಳಲ್ಲಿ ಮಳೆ ನೀರು ನಿಲ್ಲದಂತೆ ಕ್ರಮ

ಮಳೆಗಾಲದಲ್ಲಿ ಜಲಾವೃತವಾಗುವ 10 ಪ್ರಮುಖ ಪ್ರದೇಶಗಳಲ್ಲಿ ತಕ್ಷಣದಿಂದ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಪಾಲಿಕೆ ಆಯುಕ್ತರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಡ್ಡಾದಿಡ್ಡಿ ವಾಹನ ಪಾರ್ಕಿಂಗ್ ತಡೆ ಬನ್ನೇರುಘಟ್ಟ ರಸ್ತೆಯ ಸಂಚಾರ ದಟ್ಟಣೆ ನಿಯಂತ್ರಣದ ಬಗ್ಗೆಯೂ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.

Read Full Story

08:37 AM (IST) Jun 13

ಭೂ ಮಾಫಿಯಾದ ಹೊಸ ತಂತ್ರ ಬಯಲು; ದಾಖಲೆಯಲ್ಲಿ ‘ಜೀವಂತ’ರಾದ ಮೃತ ಮಾಲೀಕರು, ಭಾರಿ ಜಾಲದ ಶಂಕೆ

40 ವರ್ಷಗಳ ಹಿಂದೆ ಮೃತಪಟ್ಟ ವ್ಯಕ್ತಿಗಳ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನನ್ನು ಮಾರಾಟ ಮಾಡಿರುವ ಭೂ ಹಗರಣ ಬೆಳಕಿಗೆ ಬಂದಿದೆ. ತಾಲೂಕಾಡಳಿತವು ಈ ವಂಚನೆಯನ್ನು ಪತ್ತೆಹಚ್ಚಿದ್ದು, ನೋಂದಣಿ ಪ್ರಕ್ರಿಯೆಯನ್ನು ತಡೆಹಿಡಿದು ತನಿಖೆ ಆರಂಭಿಸಿದೆ.

Read Full Story

More Trending News