LIVE NOW
Published : Mar 13, 2026, 05:19 AM ISTUpdated : Mar 13, 2026, 07:27 AM IST

Karnataka News Live: ಗೃಹಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ - 69,000+ ಮೃತರ ಖಾತೆಗೆ ₹79 ಕೋಟಿ ಜಮೆ!

ಸಾರಾಂಶ

ಬೆಂಗಳೂರು: ಒಳ ಮೀಸಲಾತಿ ಕಗ್ಗಂಟು ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟದ ಹಿರಿಯ ಸಚಿವರಿಗಾಗಿ ಸೋಮವಾರ ಔತಣಕೂಟ ಏರ್ಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಚಿವರಾದ ಕೆ.ಎಚ್.ಮುನಿ ಯಪ್ಪ, ಎಚ್.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್, ಎಚ್‌. ಕೆ.ಪಾಟೀಲ್, ಎಂ.ಬಿ.ಪಾಟೀಲ್, ಬೈರತಿ ಸುರೇಶ್, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಸೇರಿ ಸುಮಾರು 15 ಸಚಿವರನ್ನು ಔತಣ ಕೂಟಕ್ಕೆ ಆಹ್ವಾನಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಪರಿಶಿಷ್ಟ ಜಾತಿಯ ಒಳಮೀಸಲಾತಿ ಗೊಂದಲದ ಹಿನ್ನೆಲೆಯಲ್ಲಿ ಔತಣ ಕೂಟದ ರೂಪದಲ್ಲಿ ಸಭೆ ಆಯೋಜಿಸಲಾಗಿದ್ದು, ಸಚಿವರಿಂದ ಸಿಎಂ ಗೊಂದಲ ನಿವಾರಣೆ ಕುರಿತು ಅಭಿಪ್ರಾಯ ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.

Gruha Lakshmi Alert Misused Funds Must Be Refunded Warning for Housewives

07:27 AM (IST) Mar 13

ಗೃಹಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ - 69,000+ ಮೃತರ ಖಾತೆಗೆ ₹79 ಕೋಟಿ ಜಮೆ!

ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮೀ ಯೋಜನೆಯಡಿ, 69 ಸಾವಿರಕ್ಕೂ ಹೆಚ್ಚು ಮೃತ ಫಲಾನುಭವಿಗಳ ಖಾತೆಗೆ ಸುಮಾರು ₹79.75 ಕೋಟಿ ಹಣ ಜಮೆಯಾಗಿದೆ. ಅಧಿಕಾರಿಗಳ ಎಡವಟ್ಟು ಮತ್ತು ತಾಂತ್ರಿಕ ದೋಷಗಳಿಂದಾದ ಈ ದುರ್ಬಳಕೆಯನ್ನು ಸರಿಪಡಿಸಲು ಮುಂದಾಗಿರುವ ಸರ್ಕಾರ, ಅಕ್ರಮವಾಗಿ ಪಡೆದ ಹಣ ವಾಪಸ್ ಪಡೆಯುವುದಾಗಿ ತಿಳಿಸಿದೆ.

Read Full Story

07:07 AM (IST) Mar 13

Karnataka inter-caste marriage bill 2026 - 'ಇವ ನಮ್ಮವ' ವಿಧೇಯಕ - ಮರ್ಯಾದೆಗೇಡು ಹತ್ಯೆ ತಡೆವ ಮಸೂದೆಗೆ ಸಂಪುಟ ಸಭೆ ಅಸ್ತು

ಕರ್ನಾಟಕ ಸಂಪುಟವು 'ಇವ ನಮ್ಮವ ಇವ ನಮ್ಮವ ವಿಧೇಯಕ-2026'ಕ್ಕೆ ಅನುಮೋದನೆ ನೀಡಿದೆ. ಈ ವಿಧೇಯಕವು ಮರ್ಯಾದೆಗೇಡು ಹತ್ಯೆಗಳನ್ನು ತಡೆಗಟ್ಟಿ, ಅಂತರ್ಜಾತಿ ವಿವಾಹಗಳಿಗೆ ರಕ್ಷಣೆ ಒದಗಿಸುವ ಗುರಿ ಹೊಂದಿದೆ.ಜಾತಿ ಕಾರಣಕ್ಕೆ ಮದುವೆ ನಿರಾಕರಿಸಿದರೆ ಏನಾಗುತ್ತೆ? ವಿದೇಯಕದ ಬಗ್ಗೆ ಇನ್ನಷ್ಟು ತಿಳಿಯಿರಿ

Read Full Story

06:44 AM (IST) Mar 13

683 ಕೋಟಿ ವೆಚ್ಚದಲ್ಲಿ 76 ಮೌಲಾನಾ, 41 ಉರ್ದು ಶಾಲೆ ಪಬ್ಲಿಕ್ ಶಾಲೆಗಳ ಉನ್ನತೀಕರಣಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ 117 ಮೌಲಾನಾ ಆಜಾದ್ ಮತ್ತು ಉರ್ದು ಶಾಲೆಗಳನ್ನು ₹683.33 ಕೋಟಿ ವೆಚ್ಚದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಿಸಲು ನಿರ್ಧರಿಸಲಾಗಿದೆ. 2025-26ನೇ ಸಾಲಿನ ಬಜೆಟ್‌ ಪ್ರಸ್ತಾಪದಂತೆ ಈ ನಿರ್ಧಾರ ಮಾಡಲಾಗಿದೆ.

Read Full Story

06:35 AM (IST) Mar 13

Middle East war impact - LPG ದರ ಏರಿಕೆ ಬೆನ್ನಲ್ಲೇ ಇದೀಗ ಅಡುಗೆ ಎಣ್ಣೆ ಬೆಲೆ ಹೆಚ್ಚಳದ ಶಾಕ್!

Middle East war impact ಮಧ್ಯಪ್ರಾಚ್ಯ ಯುದ್ಧದ ಪರಿಣಾಮವಾಗಿ ಬೆಂಗಳೂರಿನಲ್ಲಿ ಅಡುಗೆ ಎಣ್ಣೆ ದರದಲ್ಲಿ ಗಣನೀಯ ಏರಿಕೆಯಾಗಿದೆ. ಹೋಲ್‌ಸೇಲ್‌ ಮಾರುಕಟ್ಟೆಯಲ್ಲಿ ಲೀಟರ್‌ಗೆ ₹7 ರಿಂದ ₹11 ರಷ್ಟು ಹೆಚ್ಚಳವಾಗಿದ್ದು, ಚಿಲ್ಲರೆ ವ್ಯಾಪಾರಿಗಳಿಗೆ ಬೇಡಿಕೆಯಷ್ಟು ಎಣ್ಣೆ ಪೂರೈಕೆಯಾಗುತ್ತಿಲ್ಲ.

Read Full Story

06:07 AM (IST) Mar 13

ಜನರ ಮೇಲೆ ಕಲ್ಲೆಸೆದ ಎಂದು ಆರೋಪಿಸಿ ದಲಿತ ಯುವಕನನ್ನು ಹೊಡೆದು ಕೊಂದ್ರು!

ಬಾಗಲಕೋಟೆ ಜಿಲ್ಲೆಯ ಸಾವಳಗಿ ಗ್ರಾಮದಲ್ಲಿ, ಶಾಲಾ ವಾರ್ಷಿಕೋತ್ಸವದ ವೇಳೆ ಕಲ್ಲು ಎಸೆದಿದ್ದಾನೆಂಬ ಕ್ಷುಲ್ಲಕ ಆರೋಪದ ಮೇಲೆ ದಲಿತ ಯುವಕನನ್ನು ಥಳಿಸಿ ಹತ್ಯೆ ಮಾಡಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Read Full Story

More Trending News