ಬೆಂಗಳೂರು: ಒಳ ಮೀಸಲಾತಿ ಕಗ್ಗಂಟು ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟದ ಹಿರಿಯ ಸಚಿವರಿಗಾಗಿ ಸೋಮವಾರ ಔತಣಕೂಟ ಏರ್ಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಚಿವರಾದ ಕೆ.ಎಚ್.ಮುನಿ ಯಪ್ಪ, ಎಚ್.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್, ಎಚ್. ಕೆ.ಪಾಟೀಲ್, ಎಂ.ಬಿ.ಪಾಟೀಲ್, ಬೈರತಿ ಸುರೇಶ್, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಸೇರಿ ಸುಮಾರು 15 ಸಚಿವರನ್ನು ಔತಣ ಕೂಟಕ್ಕೆ ಆಹ್ವಾನಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಪರಿಶಿಷ್ಟ ಜಾತಿಯ ಒಳಮೀಸಲಾತಿ ಗೊಂದಲದ ಹಿನ್ನೆಲೆಯಲ್ಲಿ ಔತಣ ಕೂಟದ ರೂಪದಲ್ಲಿ ಸಭೆ ಆಯೋಜಿಸಲಾಗಿದ್ದು, ಸಚಿವರಿಂದ ಸಿಎಂ ಗೊಂದಲ ನಿವಾರಣೆ ಕುರಿತು ಅಭಿಪ್ರಾಯ ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.

07:27 AM (IST) Mar 13
ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮೀ ಯೋಜನೆಯಡಿ, 69 ಸಾವಿರಕ್ಕೂ ಹೆಚ್ಚು ಮೃತ ಫಲಾನುಭವಿಗಳ ಖಾತೆಗೆ ಸುಮಾರು ₹79.75 ಕೋಟಿ ಹಣ ಜಮೆಯಾಗಿದೆ. ಅಧಿಕಾರಿಗಳ ಎಡವಟ್ಟು ಮತ್ತು ತಾಂತ್ರಿಕ ದೋಷಗಳಿಂದಾದ ಈ ದುರ್ಬಳಕೆಯನ್ನು ಸರಿಪಡಿಸಲು ಮುಂದಾಗಿರುವ ಸರ್ಕಾರ, ಅಕ್ರಮವಾಗಿ ಪಡೆದ ಹಣ ವಾಪಸ್ ಪಡೆಯುವುದಾಗಿ ತಿಳಿಸಿದೆ.
07:07 AM (IST) Mar 13
ಕರ್ನಾಟಕ ಸಂಪುಟವು 'ಇವ ನಮ್ಮವ ಇವ ನಮ್ಮವ ವಿಧೇಯಕ-2026'ಕ್ಕೆ ಅನುಮೋದನೆ ನೀಡಿದೆ. ಈ ವಿಧೇಯಕವು ಮರ್ಯಾದೆಗೇಡು ಹತ್ಯೆಗಳನ್ನು ತಡೆಗಟ್ಟಿ, ಅಂತರ್ಜಾತಿ ವಿವಾಹಗಳಿಗೆ ರಕ್ಷಣೆ ಒದಗಿಸುವ ಗುರಿ ಹೊಂದಿದೆ.ಜಾತಿ ಕಾರಣಕ್ಕೆ ಮದುವೆ ನಿರಾಕರಿಸಿದರೆ ಏನಾಗುತ್ತೆ? ವಿದೇಯಕದ ಬಗ್ಗೆ ಇನ್ನಷ್ಟು ತಿಳಿಯಿರಿ
06:44 AM (IST) Mar 13
ರಾಜ್ಯ ಸಚಿವ ಸಂಪುಟ ಸಭೆಯಲ್ಲಿ 117 ಮೌಲಾನಾ ಆಜಾದ್ ಮತ್ತು ಉರ್ದು ಶಾಲೆಗಳನ್ನು ₹683.33 ಕೋಟಿ ವೆಚ್ಚದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಿಸಲು ನಿರ್ಧರಿಸಲಾಗಿದೆ. 2025-26ನೇ ಸಾಲಿನ ಬಜೆಟ್ ಪ್ರಸ್ತಾಪದಂತೆ ಈ ನಿರ್ಧಾರ ಮಾಡಲಾಗಿದೆ.
06:35 AM (IST) Mar 13
Middle East war impact ಮಧ್ಯಪ್ರಾಚ್ಯ ಯುದ್ಧದ ಪರಿಣಾಮವಾಗಿ ಬೆಂಗಳೂರಿನಲ್ಲಿ ಅಡುಗೆ ಎಣ್ಣೆ ದರದಲ್ಲಿ ಗಣನೀಯ ಏರಿಕೆಯಾಗಿದೆ. ಹೋಲ್ಸೇಲ್ ಮಾರುಕಟ್ಟೆಯಲ್ಲಿ ಲೀಟರ್ಗೆ ₹7 ರಿಂದ ₹11 ರಷ್ಟು ಹೆಚ್ಚಳವಾಗಿದ್ದು, ಚಿಲ್ಲರೆ ವ್ಯಾಪಾರಿಗಳಿಗೆ ಬೇಡಿಕೆಯಷ್ಟು ಎಣ್ಣೆ ಪೂರೈಕೆಯಾಗುತ್ತಿಲ್ಲ.
06:07 AM (IST) Mar 13