ಬೆಂಗಳೂರು: ಒಳ ಮೀಸಲಾತಿ ಕಗ್ಗಂಟು ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟದ ಹಿರಿಯ ಸಚಿವರಿಗಾಗಿ ಸೋಮವಾರ ಔತಣಕೂಟ ಏರ್ಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಚಿವರಾದ ಕೆ.ಎಚ್.ಮುನಿ ಯಪ್ಪ, ಎಚ್.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್, ಎಚ್. ಕೆ.ಪಾಟೀಲ್, ಎಂ.ಬಿ.ಪಾಟೀಲ್, ಬೈರತಿ ಸುರೇಶ್, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಸೇರಿ ಸುಮಾರು 15 ಸಚಿವರನ್ನು ಔತಣ ಕೂಟಕ್ಕೆ ಆಹ್ವಾನಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಪರಿಶಿಷ್ಟ ಜಾತಿಯ ಒಳಮೀಸಲಾತಿ ಗೊಂದಲದ ಹಿನ್ನೆಲೆಯಲ್ಲಿ ಔತಣ ಕೂಟದ ರೂಪದಲ್ಲಿ ಸಭೆ ಆಯೋಜಿಸಲಾಗಿದ್ದು, ಸಚಿವರಿಂದ ಸಿಎಂ ಗೊಂದಲ ನಿವಾರಣೆ ಕುರಿತು ಅಭಿಪ್ರಾಯ ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.

11:32 PM (IST) Mar 13
ವರದಿ: ಬಸವರಾಜ ಹಿರೇಮಠ
ಮಧ್ಯಪ್ರಾಚ್ಯದಲ್ಲಿನ ಯುದ್ಧವು ಧಾರವಾಡ ಆಪೂಸ್ ಎಂದೇ ಖ್ಯಾತವಾದ ಅಲ್ಫಾನ್ಸೋ ಮಾವಿನ ರಫ್ತಿಗೆ ಅಡ್ಡಿಯಾಗಿದ್ದು, ರೈತರು ಆತಂಕಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ, ಬೆಳೆಗಾರರ ಸಂಘವು ಅಮೆರಿಕ, ಯುಕೆ ಮತ್ತು ಸಿಂಗಾಪುರದಂತಹ ಪರ್ಯಾಯ ಅಂತರರಾಷ್ಟ್ರೀಯ ಮಾರುಕಟ್ಟೆಗಳನ್ನು ಹುಡುಕುತ್ತಿದೆ.
11:17 PM (IST) Mar 13
10:59 PM (IST) Mar 13
'ಪುಟ್ಟಕ್ಕನ ಮಕ್ಕಳು' ಸೀರಿಯಲ್ನಿಂದ ಪೂರ್ವಸೂಚನೆ ನೀಡಿ ಹೊರಬಂದಿದ್ದ ನಟಿ ಸಂಜನಾ ಬುರ್ಲಿ, ಇದೀಗ 'ಗಂಧದ ಗುಡಿ' ಧಾರಾವಾಹಿಯಿಂದ ದಿಢೀರ್ ನಿರ್ಗಮಿಸಿದ್ದಾರೆ. ಅವರ ಮದುವೆ ಕಾರಣ ಎನ್ನಲಾಗುತ್ತಿದ್ದರೂ, ಅವರು ಹಂಚಿಕೊಂಡಿರುವ ಒಂದು ನಿಗೂಢ ಪೋಸ್ಟ್ನಿಂದಾಗಿ ಅವರ ನಿರ್ಧಾರದ ಬಗ್ಗೆ ಅನುಮಾನಗಳು ಮೂಡಿವೆ.
10:52 PM (IST) Mar 13
10:32 PM (IST) Mar 13
ಎಷ್ಟೆಲ್ಲಾ ಕಟ್ಟುನಿಟ್ಟಿನ ನಿಯಮ ಜಾರಿಗೆ ತಂದರೂ ಕೆಪಿಎಸ್ಸಿಯವರಿಗೆ ಭಯ ಇಲ್ಲದಂತಾಗಿದೆ. ಖಾಲಿ ಪತ್ರಿಕೆ ನೀಡಿದವರೂ ಆಯ್ಕೆಯಾಗಿದ್ದಾರೆ. ಹೀಗಾಗಿ ಕೆಪಿಎಸ್ಸಿ ಸಂಸ್ಥೆಯನ್ನೇ ರದ್ದುಪಡಿಸಬೇಕು’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ.
10:28 PM (IST) Mar 13
10:02 PM (IST) Mar 13
ಗುತ್ತಿಗೆ ಆಧಾರದಡಿ ನೀಡಿರುವ ಜಾಗದ ವಿಚಾರದಲ್ಲಿ ಈಗಾಗಲೇ ಸಚಿವ ಸಂಪುಟ ಕೈಗೊಂಡಿರುವ ತೀರ್ಮಾನವೇ ಅಂತಿಮವಾಗಿದ್ದು, ಗುತ್ತಿಗೆ ಮುಂದುವರಿಯಲಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
09:18 PM (IST) Mar 13
Reels Reshma: ಒಂದಿನ ಗಂಡ ಹೊಡೆಯುತ್ತಾನೆ, ಬೈತಾನೆ, ಗಂಡ ಪ್ರೀತಿ ಮಾಡ್ತಾನೆ ಎಂದೆಲ್ಲ ಹೇಳಿಕೊಂಡು ವಿಡಿಯೋ ಮಾಡುತ್ತಿದ್ದ ರೇಷ್ಮಾ ಆಂಟಿ ಈಗಾಗಲೇ ‘ಗಿಚ್ಚಿ ಗಿಲಿಗಿಲಿ’ ಶೋನಲ್ಲಿ ಭಾಗಿ ಆಗಿದ್ದರು. ಇವರನ್ನು ಬೈಯ್ಯುವವರೇ ಜಾಸ್ತಿ ಇದ್ದರೂ ಕೂಡ, ವೈಯಕ್ತಿಕ ಬದುಕಿನ ಕರಾಳ ವಿಷಯಗಳು ಅನೇಕರಿಗೆ ಗೊತ್ತಿಲ್ಲ.
09:00 PM (IST) Mar 13
ಸಂಸದ ಜಗದೀಶ ಶೆಟ್ಟರ್ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ನವದೆಹಲಿಯ ಸಂಸತ್ ಭವನದಲ್ಲಿರುವ ಅವರ ಕಚೇರಿಯಲ್ಲಿ ಭೇಟಿ ಮಾಡಿ ಕಾಮಗಾರಿಗಳ ಕುರಿತು ಚರ್ಚಿಸಿದರು.
08:48 PM (IST) Mar 13
ಕೃಷಿ ವಿಶ್ವವಿದ್ಯಾಲಯ ತಂದು ಜಿಲ್ಲೆಗೆ ಶಾಶ್ವತ ಕೊಡುಗೆ ನೀಡಿದ್ದೇವೆ. ಇನ್ನು ಲಕ್ಷ ಕೋಟಿ ಅನುದಾನ ತಂದರೂ ಕೃಷಿ ವಿಶ್ವವಿದ್ಯಾನಿಲಯಕ್ಕೆ ಸಮನಾಗುವುದಿಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
07:48 PM (IST) Mar 13
ಬಿಗ್ಬಾಸ್ ವಿಜೇತ ವಿನಯ್ ಗೌಡ ಅವರು, ಡಾಗ್ ಸತೀಶ್ರನ್ನು ನಾಯಿಗಳ ಹೆಸರೇ ಗೊತ್ತಿಲ್ಲದ ಬ್ರೀಡರ್ ಎಂದು ಕರೆದಿದ್ದಾರೆ. ಗೂಗಲ್ನಲ್ಲಿ ನಂಬರ್ ಒನ್ ಎಂದು ಸ್ವಯಂ ಘೋಷಿಸಿಕೊಂಡಿರುವ ಸತ್ಯ ಬಿಚ್ಚಿಟ್ಟಿರುವ ವಿನಯ್, ಮುಖ್ಯಮಂತ್ರಿಗಳ ವಿರುದ್ಧ ಮಾತನಾಡಿರುವ ವಿರುದ್ಧ ಕೇಸ್ ಹಾಕ್ಬೇಕು ಎಂದಿದ್ದಾರೆ.
07:34 PM (IST) Mar 13
07:34 PM (IST) Mar 13
ನಟಿ ಮೇಘನಾ ರಾಜ್ ತಮ್ಮ 'ಸಂಗೀತಾ ಬಾರ್ & ರೆಸ್ಟೋರೆಂಟ್' ಸಿನಿಮಾ ಶೂಟಿಂಗ್ ಮುಗಿದಿದ್ದಕ್ಕೆ ತಮಗೇ ಉಡುಗೊರೆ ಖರೀದಿಸಲು ಮಾಲ್ಗೆ ಹೋಗಿದ್ದರು. ಆದರೆ, ಇಷ್ಟದ ಬ್ಯಾಗ್ ಸಿಗದಿದ್ದಾಗ, ಮಗ ರಾಯನ್ಗಾಗಿ ಆರ್ಮಿ ಆಫೀಸರ್ ಕಾಸ್ಟ್ಯೂಮ್ ಖರೀದಿಸಿದರು.
07:16 PM (IST) Mar 13
Savitha Lokesh Yadav Video: ಆರು ಮೂಟೆ ರಾಗಿಯನ್ನು ಆರು ತಿಂಗಳಿಗೆ ಖಾಲಿ ಮಾಡಿದೆ. 12 ತಿಂಗಳೊಳಗಡೆ ರಾಗಿ ಚೀಲ ಖಾಲಿ ಮಾಡ್ತೀನಿ, ನಿಮ್ಮ ಮನೆಯಲ್ಲಿ ರಾಗಿ ಇದ್ದರೆ ನಾನೇ ಖರೀದಿ ಮಾಡ್ತೀನಿ, ಯಾರಿಗೂ ಕೊಡಬೇಡಿ ಎಂದು ಸವಿತಾ ಲೋಕೇಶ್ ಯಾದವ್ ಎನ್ನುವವರು ವಿಡಿಯೋ ಹಂಚಿಕೊಂಡಿದ್ದಾರೆ.
07:13 PM (IST) Mar 13
ಸೌತ್ ಸಿನಿಮಾಗಳ ನಟಿಯರಿಗೆ ಬೇಡಿಕೆ ಮುಗಿಲು ಮುಟ್ಟಿದೆ. ಅಲ್ಲಿನ ನಟಿಯರು ಈಗ ಕೋಟಿ ಕೋಟಿ ಸಂಭಾವನೆ ಪಡೆಯುತ್ತಿದ್ದಾರೆ. ಹಾಗಾದ್ರೆ, ಅತಿ ಹೆಚ್ಚು ಸಂಭಾವನೆ ಪಡೆಯುವ ಟಾಪ್ 5 ನಟಿಯರು ಯಾರು? ಅವರ ಸಂಭಾವನೆ ಕೇಳಿದ್ರೆ ನೀವು ಶಾಕ್ ಆಗ್ತೀರಾ.
05:49 PM (IST) Mar 13
ಏನಾದ್ರೂ ಖರ್ಚು ಬಂದ್ರೆ, ನಾನು ಅವಳ ಹತ್ರನೇ ದುಡ್ಡು ಕೇಳ್ತೀನಿ ಅಂತ ತಮಿಳು ನಟ ಶಿವಕಾರ್ತಿಕೇಯನ್ ಹೇಳಿದ್ದಾರೆ. ತನ್ನ ಯಶಸ್ಸಿನ ಸಂಪೂರ್ಣ ಕ್ರೆಡಿಟ್ ಅನ್ನು ಪತ್ನಿ ಆರತಿಗೆ ನೀಡಿದ್ದಾರೆ.
05:13 PM (IST) Mar 13
05:13 PM (IST) Mar 13
Master Anand New Home: ಕನ್ನಡದ ಅನೇಕ ಸಿನಮಾಗಳಲ್ಲಿ ಬಾಲನಟನಾಗಿ ನಟಿಸಿದ್ದ ಮಾಸ್ಟರ್ ಆನಂದ್ ಅವರು ಸಾಕಷ್ಟು ಧಾರಾವಾಹಿಗಳ ನಿರ್ದೇಶನ, ನಿರ್ಮಾಣ ಮಾಡಿದ್ದಾರೆ. ಅಂದಹಾಗೆ ಸಾಕಷ್ಟು ಶೋಗಳ ನಿರೂಪಣೆ ಕೂಡ ಮಾಡಿದ್ದಾರೆ. ಈಗ ಅವರು ಹೊಸ ಮನೆಗೆ ಕಾಲಿಟ್ಟಿದ್ದಾರೆ. ಈ ಬಗ್ಗೆ ಮಾಹಿತಿ ಇಲ್ಲಿದೆ.
05:02 PM (IST) Mar 13
ಸಾರ್ವಜನಿಕ ಸ್ಥಳಗಳಲ್ಲಿ ನಟಿಯರ ಅಸಭ್ಯ ಚಿತ್ರ, ವೀಡಿಯೋ ತೆಗೆಯುವ ಪಾಪರಾಜಿಗಳ ವಿರುದ್ಧ ಇತ್ತೀಚೆಗೆ ನಟಿ ಸಪ್ತಮಿ ಗೌಡ ಕಿಡಿಕಾರಿದ್ದರು. ಇದೀಗ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅವರ ಬೆಂಬಲಕ್ಕೆ ನಿಂತಿದೆ.
04:48 PM (IST) Mar 13
ಈ ಕಥೆ ವಿಭಿನ್ನವಾಗಿದೆ ಎನ್ನುವುದಕ್ಕಿಂತ ಹೆಚ್ಚು ನೈಜವಾಗಿದೆ ಮತ್ತು ಮನಸ್ಸಿಗೆ ಬಹಳ ಹತ್ತಿರವಾಗುವಂತಿದೆ ಎಂಬ ಕಾರಣಕ್ಕೆ ಒಪ್ಪಿಕೊಂಡೆ. ಗ್ಯಾಂಗ್ಸ್ಟರ್ ಕಥೆಯಾದರೂ, ಚಿತ್ರದಲ್ಲಿ ಒಳ್ಳೆಯ ಮೌಲ್ಯಗಳಿವೆ ಎಂದರು ವಸಿಷ್ಠ ಸಿಂಹ.
04:47 PM (IST) Mar 13
ಇರಾನ್-ಇಸ್ರೇಲ್ ಯುದ್ಧದ ಹಿನ್ನೆಲೆಯಲ್ಲಿ ಹರ್ಮೋಜ್ ಜಲಸಂಧಿಯಲ್ಲಿ ಇರಾನ್ ನಿರ್ಬಂಧ ಹೇರಿದ್ದರೂ, ಯುಎಇಯಿಂದ 3100 ಟನ್ ಬಿಟುಮೆನ್ (ಕಚ್ಚಾ ಡಾಂಬರ್) ಹೊತ್ತ 'ಚೆಂಗ್ ಎಕ್ಸ್' ಹೆಸರಿನ ಹಡಗು ಕರ್ನಾಟಕದ ಕಾರವಾರ ಬಂದರಿಗೆ ಯಶಸ್ವಿಯಾಗಿ ಆಗಮಿಸಿದೆ.
04:42 PM (IST) Mar 13
Priyanka Shivanna New Home: ಅಗ್ನಿಸಾಕ್ಷಿ, ಅವನು ಮತ್ತೆ ಶ್ರಾವಣಿ, ಸತ್ಯ ಹೀಗೆ ಕನ್ನಡದ ಸಾಕಷ್ಟು ಧಾರಾವಾಹಿಗಳಲ್ಲಿ ನಟಿಸಿದ್ದ ಪ್ರಿಯಾಂಕಾ ಶಿವಣ್ಣ ಅವರು ಹೊಸ ಮನೆಗೆ ಕಾಲಿಟ್ಟಿದ್ದಾರೆ. ಹಾಗಾದರೆ ಯಾವೆಲ್ಲ ಕಲಾವಿದರು ಬಂದಿದ್ದರು? ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.
04:32 PM (IST) Mar 13
ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಕೇರಳ ರಾಜ್ಯಗಳ ಚಿತ್ರೋದ್ಯಮ ಪ್ರದರ್ಶಕರು ಭಾಗವಹಿಸಿದ್ದ ಸಭೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಯಿತು. ಈ ಸಭೆಯ ಪ್ರಮುಖ ಅಂಶಗಳೆಂದರೆ...
04:18 PM (IST) Mar 13
ಸರಿಯಾಗಿ ಹದಿನೈದು ದಿನಗಳ ಹಿಂದೆ ರಶ್ಮಿಕಾ ಮಂದಣ್ಣ ಮದುವೆಯಾದರು. 2018ರ ಸೆಪ್ಟೆಂಬರ್ 18ರಿಂದ 2026ರ ಫೆಬ್ರವರಿ 26 ತನಕ ಅವರನ್ನು ಸೋಷಿಯಲ್ ಮೀಡಿಯಾದ ಸತ್ಪ್ರಜೆಗಳು ಎಷ್ಟು ಸಾಧ್ಯವೋ ಅಷ್ಟು ಹಿಂಸಿಸಿದ್ದರು.
04:16 PM (IST) Mar 13
03:23 PM (IST) Mar 13
03:21 PM (IST) Mar 13
02:52 PM (IST) Mar 13
ಅಪರೇಶನ್ ಕಮಲಕ್ಕೆ ಹೆದರಿ ಬಿಡದಿ ರೆಸಾರ್ಟ್ಗೆ 8 ಕಾಂಗ್ರೆಸ್ ಶಾಸಕರು ಶಿಫ್ಟ್, ಮಹತ್ವದ ಬೆಳವಣಿಗೆ ನಡೆದಿದೆ. ಅಧಿಕಾರ ಬದಲಾವಣೆ ಚರ್ಚೆಗಳ ನಡುವೆ ಈ ಬೆಳವಣಿಗೆ ತೀವ್ರ ಕೋಲಾಹಲ ಸೃಷ್ಟಿಸಿದೆ. ಯಾವ ಶಾಸಕರು ರೆಸಾರ್ಟ್ಗೆ ಶಿಪ್ಟ್?
01:10 PM (IST) Mar 13
ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಿಂದ ಕುಮಾರ ಪರ್ವತ ಚಾರಣಕ್ಕೆ ಹೋಗುವವರಿಗೆ ಸರ್ಕಾರ ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಇನ್ಮುಂದೆ ಆನ್ಲೈನ್ನಲ್ಲಿ ಕಡ್ಡಾಯವಾಗಿ ಟಿಕೆಟ್ ಬುಕ್ ಮಾಡಬೇಕು, ಪ್ರತಿದಿನ ಕೇವಲ 150 ಜನರಿಗೆ ಮಾತ್ರ ಅವಕಾಶವಿದ್ದು, ರಾತ್ರಿ ವಾಸ್ತವ್ಯವನ್ನು ನಿಷೇಧಿಸಲಾಗಿದೆ.
12:30 PM (IST) Mar 13
12:00 PM (IST) Mar 13
ಬೆಂಗಳೂರು: ಒಂದು ಕಡೆ ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್ ನಡುವೆ ಯುದ್ದದ ಕಾವು ಜೋರಾಗುತ್ತಲೇ ಇದೆ. ಹೀಗಿರುವಾಗಲೇ ಚಿನ್ನದ ಬೆಲೆಯಲ್ಲೂ ಏರಿಳಿತಗಳು ಮುಂದುವರೆದಿದೆ. ಇದೀಗ ಸತತ ಎರಡನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿದೆ.
11:50 AM (IST) Mar 13
ಬೆಂಗಳೂರಿನ ಬನಶಂಕರಿಯಲ್ಲಿ ಸಾವಿರಾರು ಜೇನ್ನೊಣಗಳು ತಾಯಿ-ಮಗುವಿನ ಮೇಲೆ ದಾಳಿ ಮಾಡಿದಾಗ, ವೀರಕಪುತ್ರ ಶ್ರೀನಿವಾಸ ಅವರು ತಮ್ಮ ಪ್ರಾಣವನ್ನೂ ಲೆಕ್ಕಿಸದೆ ರಕ್ಷಿಸಿದ್ದಾರೆ. ತಾಯಿ-ಮಗುವನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿ ಕಾಪಾಡಿದ ಶ್ರೀನಿವಾಸ್, ತಾವೇ ಜೇನ್ನೊಣಗಳ ದಾಳಿಗೆ ತುತ್ತಾಗಿ ಅಸ್ವಸ್ಥರಾಗಿದ್ದಾರೆ.
10:49 AM (IST) Mar 13
10:45 AM (IST) Mar 13
Agnisakshi Kannada Serial Part 2: ಕನ್ನಡದಲ್ಲಿ ಸಾಕಷ್ಟು ಮೆಗಾ ಧಾರಾವಾಹಿಗಳು ಬಂದಿದ್ದು, ಅವುಗಳಲ್ಲಿ ಅಗ್ನಿಸಾಕ್ಷಿ ಸೀರಿಯಲ್ಗೆ ಅಗ್ರಗಣ್ಯ ಸ್ಥಾನವಿದೆ. ಈಗಲೂ ಸಿದ್ದಾರ್ಥ್-ಸನ್ನಿಧಿ ಜೋಡಿಗೆ ಅಭಿಮಾನಿಗಳಿದ್ದಾರೆ. ಈಗ ಈ ಟೀಂನಿಂದ ಗುಡ್ನ್ಯೂಸ್ ಸಿಕ್ಕಿದೆ. ಕಲರ್ಸ್ ಕನ್ನಡವೇ ಈ ಬಗ್ಗೆ ಹೇಳಿದೆ.
10:30 AM (IST) Mar 13
ತುಮಕೂರಿನಲ್ಲಿ ನಡೆದ ಅಹವಾಲು ಸ್ವೀಕಾರ ಸಭೆಯಲ್ಲಿ, ತಾಯಿಯೊಬ್ಬರ ಮನವಿಯಂತೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಅಪ್ಪನಿಲ್ಲದ ಮಗುವಿಗೆ 'ಚಿರಾಗ್' ಎಂದು ನಾಮಕರಣ ಮಾಡಿದರು.
09:28 AM (IST) Mar 13
08:39 AM (IST) Mar 13
ಅಸ್ಸಾಂ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ, ಬಿಜೆಪಿಯ 'ಆಪರೇಷನ್ ಕಮಲ'ದ ಭೀತಿಯಿಂದ 12 ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಬಂದಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಲಹೆಯಂತೆ ಆಗಮಿಸಿರುವ ಅವರು, ಬಿಡದಿ ಬಳಿಯ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿದ್ದಾರೆ.
08:35 AM (IST) Mar 13
Shri Gandhada Gudi Serial: ಕೆಲ ದಿನಗಳಿಂದ ಜನಪ್ರಿಯ ವಾಹಿನಿಯ ಧಾರಾವಾಹಿಯಿಂದ ನಾಯಕಿಯೊಬ್ಬರು ಹೊರಗಡೆ ಬರುತ್ತಾರೆ ಎಂಬ ಪೋಸ್ಟ್ ಹರಿದಾಡುತ್ತಿತ್ತು. ಈಗ ಯಾವ ಧಾರಾವಾಹಿ ಎಂದು ರಿವೀಲ್ ಆಗಿದೆ. ಹೌದು, ಗಂಧದಗುಡಿ ಧಾರಾವಾಹಿಯಿಂದ ಹೀರೋಯಿನ್ ಬದಲಾವಣೆ ಆಗಿದೆ.
08:30 AM (IST) Mar 13
08:15 AM (IST) Mar 13