LIVE NOW
Published : May 13, 2026, 06:33 AM ISTUpdated : May 13, 2026, 08:14 AM IST

Karnataka News Live: ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟನಟ ದಿಲೀಪ್ ರಾಜ್ ನಿಧನ

ಸಾರಾಂಶ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಡಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರಕಾರ ಎಸ್‌ಐಟಿ ರಚಿಸಿ ನಡೆಸಿದ ತನಿಖೆ ಸಂದರ್ಭ ದುಡಿದ ಕಾರ್ಮಿಕರಿಗೆ ವೇತನ, ಜೆಸಿಬಿ ಬಾಡಿಗೆ ಇನ್ನೂ ಪಾವತಿಯಾಗಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಎಸ್‌ಐಟಿ ತನಿಖೆ ಶುರುವಾಗಿ ಮಾಸ್ಕ್‌ಮ್ಯಾನ್ ಚಿನ್ನಯ್ಯನನ್ನು ಆತ ಹೇಳಿದ ಸ್ಥಳಕ್ಕೆ ಕರೆದುಕೊಂಡು ಬಂದು, ಸ್ಥಳ ಗುರುತು ಮಾಡಿ ಒಟ್ಟು 17 ಕಡೆಗಳಲ್ಲಿ ಹೊಂಡಗಳನ್ನು ತೋಡಿ ಶೋಧ ನಡೆಸಲಾಗಿತ್ತು. ಒಟ್ಟು ಹತ್ತು ದಿನ ಜೆಸಿಬಿಯಿಂದ ಕೆಲಸ ಮಾಡಲಾಗಿತ್ತು. ಒಟ್ಟು ₹71,500 ಬಿಲ್ ಮಾಡಿ ಕೊಟ್ಟಿದ್ದರು. ಆದರೆ, ಜೆಸಿಬಿ ಬಾಡಿಗೆ ಇನ್ನೂ ಬಂದಿಲ್ಲ.

ದಿನ ನಿತ್ಯ 10-12 ಕಾರ್ಮಿಕರು ಎಸ್‌ಐಟಿ ತಂಡಕ್ಕೆ ಸಹಾಯವಾಗಿ ದುಡಿಯುತ್ತಿದ್ದರು. ಆದರೆ, ಕಾರ್ಮಿಕರ ಕೂಲಿ ಕೊಡದೆ ಬಾಕಿ ಉಳಿಸಿಕೊಳ್ಳಲಾಗಿದೆ. ಕಾರ್ಮಿಕರದ್ದು ಒಟ್ಟು ₹80 ಸಾವಿರಕ್ಕೂ ಅಧಿಕ ಹಣ ಕೊಡುವುದು ಬಾಕಿ ಇದೆ. ಇದೀಗ ಕಾರ್ಮಿಕರು ದುಡಿದ ಹಣಕ್ಕಾಗಿ ಅಲೆದಾಡುವಂತಾಗಿದೆ.

ಎಸ್‌ಐಟಿ ತಂಡಕ್ಕೆ ಕುಳಿತುಕೊಳ್ಳಲು ಶಾಮಿಯಾನ ವ್ಯವಸ್ಥೆ ಮಾಡಲಾಗಿತ್ತು. ಇದರ ಬಿಲ್ ಕೂಡ ಬಾಕಿ ಇದೆ. ಹಾರೆ, ಪಿಕಾಸು, ನೀರಿನ ಬಾಟಲಿ, ಕೂಲಿಯಾಳುಗಳನ್ನು ಕರೆ ತಂದ ವಾಹನ ಬಾಡಿಗೆ ಹೀಗೆ ಒಟ್ಟು ₹2 ಲಕ್ಷಕ್ಕೂ ಅಧಿಕ ಬಿಲ್ ಕೊಡಲು ಬಾಕಿ ಇದೆ.

08:14 AM (IST) May 13

ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟನಟ ದಿಲೀಪ್ ರಾಜ್ ನಿಧನ

ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ದಿಲೀಪ್ ರಾಜ್ ನಿಧನರಾಗಿದ್ದಾರೆ. ಕನ್ನಡ ಸಿನಿಮಾಗಳ ಜೊತೆಯಲ್ಲಿ ಸೀರಿಯಲ್‌ಗಳಲ್ಲಿಯೂ ದಿಲೀಪ್ ರಾಜ್ ನಟಿಸಿದ್ದರು. ಝೀ ಕನ್ನಡದ ಹಿಟ್ಲರ್ ಕಲ್ಯಾಣ ಸೀರಿಯಲ್‌ನಲ್ಲಿ ನಾಯಕ ನಟನಾಗಿ ದಿಲೀಪ್ ರಾಜ್ ನಟಿಸಿದ್ದರು.

 

Read Full Story

07:43 AM (IST) May 13

ನೀಟ್ ಪರೀಕ್ಷೆ ರದ್ದು ಬೆನ್ನಲ್ಲೇ ರಾಜಕೀಯ ಕದನ! ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸಚಿವರು ವಾಗ್ದಾಳಿ

ನೀಟ್‌ ಪರೀಕ್ಷೆ ರದ್ದುಪಡಿಸಿರುವ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸಚಿವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪರೀಕ್ಷಾ ವೈಫಲ್ಯದ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಮತ್ತು ಈ ಹಿಂದೆ ಇದ್ದಂತೆ ರಾಜ್ಯಗಳಿಗೇ ಪರೀಕ್ಷೆ ನಡೆಸುವ ಅಧಿಕಾರ ನೀಡಬೇಕೆಂದು ಆಗ್ರಹಿಸಿದ್ದಾರೆ.
Read Full Story

07:14 AM (IST) May 13

IMD forecasts - ಈ ವರ್ಷ ಒಂದು ವಾರ ಮೊದಲೇ, ಮೇ 17ಕ್ಕೆ ಅಂಡಮಾನ್‌ಗೆ ಮಾನ್ಸೂನ್‌ ಪ್ರವೇಶ

ಈ ವರ್ಷ ಮುಂಗಾರು ಮಾರುತಗಳು ವಾಡಿಕೆಗಿಂತ ಮುಂಚಿತವಾಗಿ ಆಗಮಿಸುವ ಸಾಧ್ಯತೆಯಿದೆ. ಯುರೋಪ್‌ ಹವಾಮಾನ ಮುನ್ಸೂಚನೆ ಕೇಂದ್ರದ ಪ್ರಕಾರ, ಮೇ 17ರಂದು ಅಂಡಮಾನ್‌ ಮತ್ತು ಮೇ 25ರ ಸುಮಾರಿಗೆ ಕೇರಳಕ್ಕೆ ಮಾನ್ಸೂನ್ ಪ್ರವೇಶಿಸಲಿದ್ದು, ದಕ್ಷಿಣ ಭಾರತಕ್ಕೆ ಬಿಸಿಲಿನಿಂದ ಶೀಘ್ರದಲ್ಲೇ ಮುಕ್ತಿ ಸಿಗಲಿದೆ.
Read Full Story

07:00 AM (IST) May 13

HD Kumaraswamy - ಇಂಧನ ಮಿತಬಳಕೆ ಕುರಿತು ಮೋದಿ ಹೇಳಿಕೆ ಟೀಕಿಸಿದ ಕಾಂಗ್ರೆಸ್‌ಗೆ ಹೆಚ್‌ಡಿಕೆ ತಿರುಗೇಟು

ಪ್ರಧಾನಿ ಮೋದಿ ಅವರ ಇಂಧನ ಮಿತಬಳಕೆ ಹೇಳಿಕೆಯನ್ನು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಸಮರ್ಥಿಸಿಕೊಂಡಿದ್ದಾರೆ. ದೇಶದ ಹಿತದೃಷ್ಟಿಯಿಂದ ನೀಡಿದ ಸಲಹೆಯನ್ನು ಟೀಕಿಸುವ ಮೂಲಕ ಕಾಂಗ್ರೆಸ್ ಸಣ್ಣತನ ಪ್ರದರ್ಶಿಸುತ್ತಿದೆ ಎಂದು ಕಿಡಿಕಾರಿದ್ದಾರೆ.

Read Full Story

06:47 AM (IST) May 13

Bengaluru - ಮನೆಯಲ್ಲಿ ಚಾರ್ಜ್‌ ಹಾಕಿದ್ದಾಗ ಇವಿ ಬೈಕ್‌ ಬ್ಯಾಟರಿ ಸ್ಫೋಟ - ವ್ಯಕ್ತಿ ಸಾವು

ಬೆಂಗಳೂರಿನ ಹಲಸೂರಿನಲ್ಲಿ, ಮನೆಯೊಳಗೆ ಚಾರ್ಜ್‌ಗೆ ಹಾಕಿದ್ದ ಎಲೆಕ್ಟ್ರಿಕ್ ಸ್ಕೂಟರ್ ಮಧ್ಯರಾತ್ರಿ ಸ್ಫೋಟಗೊಂಡಿದೆ. ಈ ದುರ್ಘಟನೆಯಲ್ಲಿ 65 ವರ್ಷದ ಲೂರ್ದ್ ನಾಥನ್ ಎಂಬುವವರು ಸುಟ್ಟಗಾಯಗಳಿಂದ ಮೃತಪಟ್ಟಿದ್ದು, ಬ್ಯಾಟರಿ ಓವರ್‌ಫ್ಲೋನಿಂದ ಸ್ಫೋಟ ಸಂಭವಿಸಿರಬಹುದೆಂದು ಶಂಕಿಸಲಾಗಿದೆ.
Read Full Story

More Trending News