LIVE NOW
Published : Sep 13, 2026, 07:04 AM ISTUpdated : Sep 13, 2026, 07:58 AM IST

Karnataka News Live: SSLC ಟಾಪರ್ಸ್‌ಗಳಿಗೆ ಉಚಿತ ದೆಹಲಿ ಪ್ರವಾಸದ ಭಾಗ್ಯ; ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಗ್ಯಾರಂಟಿ!

ಸಾರಾಂಶ

ಬಳ್ಳಾರಿ: ಬಳ್ಳಾರಿಯಲ್ಲಿ ಬಿಜೆಪಿ ನಡೆಸಿದ ಬಳ್ಳಾರಿ ಚಲೋ ಪಾದಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್‌ ವತಿಯಿಂದ ಸಮಾವೇಶ ಆಯೋಜಿಸುವ ಕುರಿತು ಪಕ್ಷದ ನಾಯಕರು ಹಾಗೂ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆದಿದೆ. ಶೀಘ್ರದಲ್ಲೇ ಬಳ್ಳಾರಿಯಲ್ಲಿ ಕಾಂಗ್ರೆಸ್‌ನ ಬೃಹತ್ ಸಮಾವೇಶ ನಡೆಸಲಾಗುವುದು ಎಂದು ಶಾಸಕ ಬಿ. ನಾಗೇಂದ್ರ ತಿಳಿಸಿದರು.

ಬಳ್ಳಾರಿ ಜಿಲ್ಲೆಯಲ್ಲಿ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯ ಹಾಗೂ ಸರ್ಕಾರದ ಸಾಧನೆ ಜನರಿಗೆ ತಿಳಿಸುವ ಉದ್ದೇಶದಿಂದ ಸಮಾವೇಶ ಆಯೋಜಿಸಲಾಗುತ್ತಿದೆ. ಸಾವಿರಾರು ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದ್ದು, ಈ ಸಾಧನೆ ಜನರ ಮುಂದಿಡುವುದು ಸಮಾವೇಶದ ಉದ್ದೇಶವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸೂಚನೆ ಮೇರೆಗೆ ಬಳ್ಳಾರಿಯಲ್ಲಿ ಕಾಂಗ್ರೆಸ್‌ ಸಮಾವೇಶ ನಡೆಸುವ ಕುರಿತು ಚರ್ಚೆ ನಡೆಯುತ್ತಿದೆ.

ಸಮಾವೇಶಕ್ಕೆ ಮುಖ್ಯಮಂತ್ರಿ ಶಿವಕುಮಾರ ಅವರಲ್ಲದೇ ಮಾಜಿ ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ರಾಜ್ಯ ಹಾಗೂ ರಾಷ್ಟ್ರಮಟ್ಟದ ಕಾಂಗ್ರೆಸ್‌ ನಾಯಕರು ಭಾಗವಹಿಸುವ ಸಾಧ್ಯತೆ ಇದೆ. ಈ ಕುರಿತು ಎಲ್ಲ ನಾಯಕರೊಂದಿಗೆ ಮತ್ತಷ್ಟು ಚರ್ಚೆ ನಡೆಸಿದ ಬಳಿಕ ಸಮಾವೇಶದ ದಿನಾಂಕ ನಿಗದಿಪಡಿಸಲಾಗುವುದು. ಸಮಾವೇಶದ ಸಿದ್ಧತೆ ಕುರಿತು ಶೀಘ್ರದಲ್ಲೇ ಸಭೆ ನಡೆಸಿ ಅಂತಿಮ ರೂಪ ನೀಡಲಾಗುವುದು ಎಂದು ತಿಳಿಸಿದರು.

07:58 AM (IST) Sep 13

SSLC ಟಾಪರ್ಸ್‌ಗಳಿಗೆ ಉಚಿತ ದೆಹಲಿ ಪ್ರವಾಸದ ಭಾಗ್ಯ; ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಗ್ಯಾರಂಟಿ!

ದಾವಣಗೆರೆ ಲೋಕಸಭಾ ಕ್ಷೇತ್ರದ ಎಸ್ಸೆಸ್ಸೆಲ್ಸಿ ಟಾಪರ್ ವಿದ್ಯಾರ್ಥಿಗಳನ್ನು ಉಚಿತವಾಗಿ ದೆಹಲಿ ಪ್ರವಾಸಕ್ಕೆ ಕರೆದೊಯ್ಯಲಾಗುವುದು ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಘೋಷಿಸಿದ್ದಾರೆ. ಗ್ರಾಮೀಣ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಈ ಶೈಕ್ಷಣಿಕ ಪ್ರವಾಸದಲ್ಲಿ ವಿದ್ಯಾರ್ಥಿಗಳಿಗೆ ಸಂಸತ್ ಭವನ ಸೇರಿದಂತೆ ಐತಿಹಾಸಿಕ ಸ್ಥಳಗಳನ್ನು ನೋಡುವ ಅವಕಾಶ ಸಿಗಲಿದೆ.
Read Full Story

07:55 AM (IST) Sep 13

ಜರ್ಮನಿಯ ಗಣೇಶನಿಗೆ ಪುತ್ತೂರಿನಲ್ಲಿ ತಯಾರಾಯ್ತು ರಜತ ಕಿರೀಟ; ಏನಿದರ ವಿಶೇಷತೆ?

ಜರ್ಮನಿಯ ಬರ್ಲಿನ್‌ನಲ್ಲಿರುವ ಶ್ರೀ ಗಣೇಶ ಹಿಂದೂ ದೇವಸ್ಥಾನದ ಗಣಪತಿ ವಿಗ್ರಹಕ್ಕಾಗಿ ಪುತ್ತೂರಿನ ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ನಲ್ಲಿ ವಿಶೇಷ ರಜತ ಕಿರೀಟವನ್ನು ತಯಾರಿಸಲಾಗಿದೆ. ಶ್ಯಾಮಲಾ ನಾಯಕ್ ಪುಣಚ ಕುಟುಂಬದವರ ಸೇವೆಯಾಗಿ, ಆರು ತಿಂಗಳ ಪರಿಶ್ರಮದಿಂದ ಸಿದ್ಧವಾದ ಈ ಕಿರೀಟವು ಪುತ್ತೂರಿನ ಕರಕುಶಲ ಪರಂಪರೆ ಮತ್ತು ಭಕ್ತಿಯ ಪ್ರತೀಕವಾಗಿದೆ.
Read Full Story

07:47 AM (IST) Sep 13

Belagavi - 756 ಎಕ್ರೆಯ ಪ್ರದೇಶದಲ್ಲಿ ಪಾಲಿಕೆಗೆ ಕಂಟೋನ್ಮೆಂಟ್‌ ಕೊಡೋದೆಷ್ಟು ಜಾಗ?

ಬೆಳಗಾವಿ ಕಂಟೋನ್ಮೆಂಟ್‌ನ ನಾಗರಿಕ ಪ್ರದೇಶವನ್ನು ಮಹಾನಗರ ಪಾಲಿಕೆಗೆ ಹಸ್ತಾಂತರಿಸುವ ಪ್ರಕ್ರಿಯೆ ಚರ್ಚೆಯಲ್ಲಿದೆ. 756 ಎಕರೆ ಪೂರ್ಣ ಪ್ರದೇಶದ ಬದಲು 112 ಎಕರೆ ಮಾತ್ರ ಹಸ್ತಾಂತರಿಸುವ ಪ್ರಸ್ತಾಪದಿಂದ ಗೊಂದಲ ಉಂಟಾಗಿದ್ದು, ಈ ಪ್ರಕ್ರಿಯೆ ಪೂರ್ಣಗೊಳ್ಳಲು ಇನ್ನೂ ಕೆಲವು ತಿಂಗಳುಗಳು ಬೇಕಾಗಬಹುದು.
Read Full Story

07:35 AM (IST) Sep 13

BTM ಲೇಔಟ್‌ ವ್ಯಾಪ್ತಿಯ 3 ನಿಲ್ದಾಣಗಳ ಹೆಸರು ಬದಲಿಸಿ - BMRCLಗೆ ರಾಮಲಿಂಗಾರೆಡ್ಡಿ ಪತ್ರ

ರಾಮಲಿಂಗಾರೆಡ್ಡಿ ಅವರು BTM ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ 3 ಮೆಟ್ರೋ ನಿಲ್ದಾಣಗಳ ಮರುನಾಮಕರಣಕ್ಕೆ ಬಿಎಂಆರ್‌ಸಿಎಲ್‌ಗೆ ಪತ್ರ ಬರೆದಿದ್ದಾರೆ. ಈ ಹೆಸರುಗಳು ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸುತ್ತಿದ್ದು, ಸ್ಥಳೀಯ, ಭೌಗೋಳಿಕ ಮಹತ್ವವನ್ನು ಪರಿಗಣಿಸಿ ಹೆಸರುಗಳನ್ನು ಬದಲಾಯಿಸುವಂತೆ ಸೂಚಿಸಿದ್ದಾರೆ.

Read Full Story

More Trending News