ಬೆಂಗಳೂರು : ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆ ಅಬ್ಬರ ಮುಂದುವರೆದಿದ್ದು, ಸಿಡಿಲು ಬಡಿದು ರಾಜ್ಯದಲ್ಲಿ 24 ಗಂಟೆಯಲ್ಲಿ 9 ಮಂದಿ ಮೃತಪಟ್ಟಿದ್ದಾರೆ. ಚಿಕ್ಕಮಗಳೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು, ಹಾವೇರಿ, ಬಳ್ಳಾರಿ, ಕೊಪ್ಪಳ, ಚಿತ್ರ ದುರ್ಗ, ಮಡಿಕೇರಿ, ಹುಬ್ಬಳ್ಳಿ, ದಾವಣೆಗೆರೆ, ರಾಯಚೂರು, ಶಿವಮೊಗ್ಗ, ಧಾರವಾಡ ಸೇರಿದಂತೆ ಹಲವೆಡೆ ಮಂಗಳವಾರ ಭಾರೀ ಮಳೆಯಾಗಿದೆ. ಇನ್ನೂ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಸುರಿದ ಮಳೆಗೆ ಹಲವೆಡೆ ಮರಗಳು ಧರೆಗುರುಳಿವೆ. ಮೆಜೆಸ್ಟಿಕ್, ಕೆ.ಆರ್ ವೃತ್ತ ಸೇರಿದಂತೆ ಹಲವೆಡೆ ರಸ್ತೆಯಲ್ಲಿ ನೀರು ನಿಂತು ವಾಹನ ಸವಾರರು ಪರದಾಡುವಂತಾಗಿತ್ತು. ರಾಜ್ಯದ 17 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಗುಡುಗು, ಮಿಂಚು, ಗಾಳಿ ಸಹಿತ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಿಗೆ 'ಯಲ್ಲೋ ಅಲರ್ಟ್' ನೀಡಲಾ ಗಿದೆ. ಕಳೆದ ಒಂದೆರಡು ದಿನಗಳಿಂದ ರಾಜ್ಯದಲ್ಲಿ ಮತ್ತೆ ಪೂರ್ವ ಮುಂಗಾರು ಮಳೆ ಅಬ್ಬರ ಹೆಚ್ಚಳವಾ ಗಿದ್ದು, ಇನ್ನೂ ಒಂದು ವಾರ ಅಧಿಕ ಮಳೆ ಮುಂದುವರೆಯುವ ಸಾಧ್ಯತೆ ಇದೆ.

08:28 PM (IST) May 14
ವರ್ಕ್ ಫ್ರಮ್ ಹೋಮ್ ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿ ಲಕ್ಷಾಂತರ ರೂಪಾಯಿ ವಂಚಿಸಿದ್ದ ಅಂತರರಾಜ್ಯ ಆನ್ಲೈನ್ ಗ್ಯಾಂಗ್ನ 12 ಮಂದಿ ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಈ ಗ್ಯಾಂಗ್, 400ಕ್ಕೂ ಹೆಚ್ಚು ಸಿಮ್ ಕಾರ್ಡ್ಗಳನ್ನು ಬಳಸಿ ವಂಚನೆ ಎಸಗುತ್ತಿತ್ತು.
ಪೂರ್ತಿ ಓದಿ05:20 PM (IST) May 14
ಬೆಂಗಳೂರಿನ ಪಿಂಕ್ ಲೈನ್ ಮೆಟ್ರೋ ಯೋಜನೆಯು ಮತ್ತೆ ವಿಳಂಬವಾಗಿದ್ದು, 2026ಕ್ಕೆ ಉದ್ಘಾಟನೆಯಾಗುವ ಸಾಧ್ಯತೆ ಇದೆ. ಕಾಮಗಾರಿಯಲ್ಲಿನ ಸವಾಲುಗಳು ಮತ್ತು ಭೂಗತ ಭಾಗದ ನಿರ್ಮಾಣದಲ್ಲಿನ ತೊಂದರೆಗಳು ಈ ವಿಳಂಬಕ್ಕೆ ಕಾರಣವಾಗಿವೆ.
ಪೂರ್ತಿ ಓದಿ04:33 PM (IST) May 14
ತುಮಕೂರಿನ ಕುಣಿಗಲ್ನಲ್ಲಿ ಐಸ್ಕ್ರೀಮ್ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುವಾಗ ಅಪ್ಪ-ಮಗನ ನಡುವೆ ಜಗಳ ನಡೆದು, ಮಗನೇ ಅಪ್ಪನನ್ನು ಟವೆಲ್ನಿಂದ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಕೊಲೆಯನ್ನು ಮುಚ್ಚಿಡಲು ಕರೆಂಟ್ ಶಾಕ್ ಹೊಡೆದಿದೆ ಎಂದು ಬಿಂಬಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪೂರ್ತಿ ಓದಿ02:46 PM (IST) May 14
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ NHM ಯೋಜನೆಯಡಿ ಕೆಲಸ ಮಾಡುವ ವೈದ್ಯರು ಮತ್ತು ನರ್ಸ್ಗಳ ವೇತನ ಪರಿಷ್ಕರಣೆಯಾಗಿದೆ. ಹೊಸದಾಗಿ ನೇಮಕವಾಗುವ ಸಿಬ್ಬಂದಿಗೆ ಮಾತ್ರ ಈ ಹೆಚ್ಚಳ ಅನ್ವಯವಾಗುತ್ತದೆ. ಹಳೆಯ ಸಿಬ್ಬಂದಿ ಹೊಸ ವೇತನ ಪಡೆಯಲು ರಾಜೀನಾಮೆ ನೀಡಿ ಪುನಃ ಅರ್ಜಿ ಸಲ್ಲಿಸಬೇಕು.
ಪೂರ್ತಿ ಓದಿ12:11 PM (IST) May 14
ಕಾರವಾರ ಬಂದರಿಗೆ ಆಗಮಿಸಿದ್ದ ಸರಕು ಹಡಗಿನಲ್ಲಿ ಪಾಕಿಸ್ತಾನ ಪ್ರಜೆಯೊಬ್ಬ ಇದ್ದ. ಭಾರತದ ನೆಲಕ್ಕೆ ಇಳಿಯಲು ಅನುಮತಿಸದೆ, ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡರು. ಹಡಗು ಇರಾಕ್ನಿಂದ ಬಿಟುಮಿನ್ ತುಂಬಿಕೊಂಡು ಬಂದಿತ್ತು.
ಪೂರ್ತಿ ಓದಿ11:45 AM (IST) May 14
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ಸಂಜೀವ್ ಖನ್ನಾ ನಿವೃತ್ತಿ ಹೊಂದಿದ್ದು, ಬಿ.ಆರ್ ಗವಾಯಿ 52ನೇ ಮುಖ್ಯ ನ್ಯಾಯಾಧೀಶರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ನ್ಯಾ. ಖನ್ನಾ ಅವರ ಅವಧಿಯಲ್ಲಿ 370ನೇ ವಿಧಿ ರದ್ದು, ಚುನಾವಣಾ ಬಾಂಡ್, ಇವಿಎಂ ವಿವಿಪ್ಯಾಟ್ ಬಗ್ಗೆ ತೀರ್ಪುಗಳು ಸೇರಿದಂತೆ ಹಲವು ಮಹತ್ವದ ಪ್ರಕರಣಗಳ ವಿಚಾರಣೆ ನಡೆದಿವೆ.
ಪೂರ್ತಿ ಓದಿ11:43 AM (IST) May 14
ಸಿಂಧನೂರು ನಗರಸಭೆಯ ಪೌರಾಯುಕ್ತ ಮಂಜುನಾಥ ಗುಂಡೂರು ಅವರನ್ನು ದುರುಪಯೋಗದ ಆರೋಪದ ಮೇಲೆ ಅಮಾನತುಗೊಳಿಸಲಾಗಿದೆ. ಅಕಾಲಿಕ ಮಳೆಯಿಂದಾಗಿ ಸಿಂಧನೂರು ಮತ್ತು ಮಸ್ಕಿ ತಾಲೂಕುಗಳಲ್ಲಿ ರೈತರ ಒಣಗಲು ಹಾಕಿದ್ದ ಭತ್ತ ಹಾಳಾಗಿದ್ದು, ರೈತರು ಪರಿಹಾರಕ್ಕಾಗಿ ಒತ್ತಾಯಿಸಿದ್ದಾರೆ.
ಪೂರ್ತಿ ಓದಿ11:36 AM (IST) May 14
Bengaluru Employee Says He Is corporate Slave: ಕಾರ್ಪೋರೇಟ್ ರಂಗದಲ್ಲಿ ಕೆಲಸ ಮಾಡುವುದು ಎಷ್ಟು ಕಷ್ಟ ಎಂದು ಬೆಂಗಳೂರಿನ ಉದ್ಯೋಗಿಯೋರ್ವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
11:08 AM (IST) May 14
ಸಿಹಿ ಹಂಚಿದ ನಂತರ ಕೈಯನ್ನು ರಾಷ್ಟ್ರಧ್ವಜದಿಂದ ಒರೆಸಿಕೊಂಡ ಪ್ರಕರಣದಲ್ಲಿ ಕನ್ನಡಾಭಿಮಾನಿ ಸಂಘದ ಅಧ್ಯಕ್ಷ ಎ. ಕೃಷ್ಣಪ್ಪ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಭಾರತೀಯ ಸೇನೆಯ ಪಾಕಿಸ್ತಾನದ ಮೇಲಿನ ದಾಳಿಯ ಯಶಸ್ಸಿನ ಸಂಭ್ರಮಾಚರಣೆಯಲ್ಲಿ ಆಕಸ್ಮಿಕವಾಗಿ ಈ ಘಟನೆ ನಡೆದಿದೆ ಎಂದು ಕೃಷ್ಣಪ್ಪ ಪರ ವಕೀಲರು ವಾದಿಸಿದ್ದಾರೆ.
ಪೂರ್ತಿ ಓದಿ10:44 AM (IST) May 14
ಮಂಡ್ಯದಲ್ಲಿ ಸರಣಿ ದುರಂತಗಳು ಸಂಭವಿಸಿದ್ದು, ರೈಲಿಗೆ ಸಿಲುಕಿ ವಿದ್ಯಾರ್ಥಿ, ಕಾರು ಡಿಕ್ಕಿಯಾಗಿ ಮಹಿಳೆ ಮತ್ತು ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.
ಪೂರ್ತಿ ಓದಿ10:27 AM (IST) May 14
ಅರೇಹಳ್ಳಿಯಲ್ಲಿ ಕಾರಿನಲ್ಲಿ ಬಂದ ನಾಲ್ವರು ತಂದೆಯ ಎದುರಲ್ಲೇ ಮಗಳನ್ನು ಅಪಹರಿಸಿದ್ದಾರೆ. ಕಾರನ್ನು ತಡೆಯಲು ಯತ್ನಿಸಿದ ತಂದೆಯನ್ನು ರಸ್ತೆಯಲ್ಲಿ ಎಳೆದೊಯ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಚನ್ನರಾಯಪಟ್ಟಣದ ಯುವಕನೊಬ್ಬ ಪ್ರೀತಿಸಿ ಮದುವೆಯಾದ ಹೆಂಡತಿಯನ್ನು ಕರೆದೊಯ್ಯಲು ಈ ಕೃತ್ಯ ಎಸಗಿದ್ದಾನೆ.
ಪೂರ್ತಿ ಓದಿ10:00 AM (IST) May 14
ಚನ್ನರಾಯಪಟ್ಟಣ ತಹಸಿಲ್ದಾರ್ ನವೀನ್ ಅವರು ಸರ್ಕಾರವನ್ನು ಅವಹೇಳನಕಾರಿಯಾಗಿ ನಿಂದಿಸಿದ್ದಾರೆ ಎನ್ನಲಾದ ಆಡಿಯೊ ವೈರಲ್ ಆಗಿದ್ದು, ಪ್ರತಿಭಟನೆಗೆ ಕಾರಣವಾಗಿದೆ. ಭ್ರಷ್ಟಾಚಾರ ವಿರೋಧಿ ಹೋರಾಟ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು ನವೀನ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿವೆ.
ಪೂರ್ತಿ ಓದಿ