ಬೆಂಗಳೂರು: ಅಸಂಘಟಿತ ವಲಯದ ಕಾರ್ಮಿಕರ ಅನುಕೂಲಕ್ಕಾಗಿ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಹೆಚ್ಚುವರಿ ತೆರಿಗೆ ವಿಧಿಸಲು ಕ್ರಮ ಕೈಗೊಳ್ಳುವಂತೆ ಕಾರ್ಮಿಕ ಇಲಾಖೆಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರ ಆರೋಗ್ಯ, ಅಪಘಾತ ಪರಿಹಾರ, ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನ, ಅಂತ್ಯಕ್ರಿಯೆ ವೆಚ್ಚ ಪಾವತಿ ಸೇರಿ ಮತ್ತಿತರ ಯೋಜನೆಗಳ ಜಾರಿಗೊಳಿಸಲಾಗುತ್ತಿದೆ. ಅದಕ್ಕಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ -ನಿರ್ದೇಶನದಂತೆ, ಯೋಜನೆಗಳ ಜಾರಿಗೆ ಅಗತ್ಯವಿರುವ ಹೆಚ್ಚುವರಿ ಅನುದಾನಕ್ಕಾಗಿ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಅಂಸಘಟಿತ ಕಾರ್ಮಿಕ ಕಲ್ಯಾಣದ ಹೆಚ್ಚುವರಿ ತೆರಿಗೆ ವಿಧಿಸಲು ಕ್ರಮ ಕೈಗೊಳ್ಳುವಂತೆ ಆರ್ಥಿಕ ಇಲಾಖೆ ಕಾರ್ಮಿಕ ಇಲಾಖೆಯಿಂದ ಸರ್ಕಾರಕ್ಕೆ ಪ್ರಸ್ತಾಪ ಮತ್ತು ವಾಣಿಜ್ಯ ತೆರಿಗೆ ಇಲಾಖೆಗೆ ಮನವಿ ಮಾಡಲಾಗಿದೆ.

12:02 AM (IST) Nov 14
11:40 PM (IST) Nov 13
ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಕಬ್ಬಿನ ಬಾಕಿ ಮತ್ತು ನ್ಯಾಯಯುತ ಬೆಲೆಗಾಗಿ ಪ್ರತಿಭಟಿಸುತ್ತಿದ್ದ ರೈತರ ಟ್ರ್ಯಾಕ್ಟರ್ಗೆ ಬೆಂಕಿ ಹಚ್ಚಲಾಗಿದೆ. ಈ ಕೃತ್ಯಕ್ಕೆ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ರೈತ ಸಂಘಟನೆಗಳು ಆರೋಪಿಸಿದ್ದು, ಘಟನೆಯಿಂದ ಜಮಖಂಡಿ ಮುಧೋಳ ಭಾಗದ ರೈತರ ನಡುವೆ ಆಕ್ರೋಶ ಭುಗಿಲೆದ್ದಿದೆ.
11:04 PM (IST) Nov 13
ವಿಶ್ವದ ಏಕೈಕ ಜೈ ಶ್ರೀರಾಮ್ ಎಡಿಶನ್ ಐಫೋನ್ 17 ಪ್ರೋ ಮ್ಯಾಕ್ಸ್ ಖರೀದಿಸಿದ ಟೆಕ್ನಿಕಲ್ ಗುರೂಜಿ , ಚಿನ್ನ ಲೇಪಿತ ಈ ಐಫೋನ್ ಹಿಂಭಾಗದಲ್ಲಿ ಶ್ರೀರಾಮ ಹಾಗೂ ಹನುಮಾನ್ ಫೋಟೋ ಫ್ರೇಮ್ ಇದೆ. ಇಷ್ಟೇ ಅಲ್ಲ ಜೈ ಶ್ರೀರಾಮ್ ಎಂದು ಬರೆಯಲಾಗಿದೆ.
10:41 PM (IST) Nov 13
10:05 PM (IST) Nov 13
ಬಾಲಿವುಡ್ ನಟ ಧರ್ಮೇಂದ್ರ ಹೆಲ್ತ್ ಅಪ್ಡೇಟ್ ಪ್ರಕರಣ, ಪೊಲೀಸರಿಂದ ಆಸ್ಪತ್ರೆ ಉದ್ಯೋಗಿ ಅರೆಸ್ಟ್ , ಅಷ್ಟಕ್ಕೂ ಧರ್ಮೇಂದ್ರ ಆರೋಗ್ಯ ಪ್ರಕರಣಕ್ಕೂ ಆಸ್ಪತ್ರೆ ಸಿಬ್ಬಂದಿ ಅರೆಸ್ಟ್ ಆಗಿದ್ದೇಕೆ? ಈ ಬೆಳವಣಿಗೆಗೆ ಕಾರಣವೇನು?
09:59 PM (IST) Nov 13
ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ಬುಲೆಟ್ ಬೈಕ್ ಹಾಗೂ ಸ್ಕೂಟಿ ನಡುವೆ ನಡೆದ ಭೀಕರ ಅಪಘಾತದಲ್ಲಿ 15 ವರ್ಷದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಯುವಕನ ತಾಯಿ ಹಾಗೂ ಬುಲೆಟ್ ಸವಾರರಾದ ಮೆಡಿಕಲ್ ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.
09:00 PM (IST) Nov 13
ರೈತ ಪ್ರತಿಭಟನೆಯಲ್ಲಿ ಕಲ್ಲು ತೂರಾಟ, ಅಡಿಷನಲ್ ಎಸ್ಪಿಗೆ ಗಂಭೀರ ಗಾಯ, ನಿಷೇಧಾಜ್ಞೆ ಜಾರಿ, ರೈತರ ಪ್ರತಿಭಟೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, 50ಕ್ಕೂ ಹೆಚ್ಚು ಟ್ರಾಕ್ಟರ್ ಬೆಂಕಿಗೆ ಆಹುತಿಯಾಗಿದೆ. ಇತ್ತ ಪೊಲೀಸ್ ಅಧಿಕಾರಿಯನ್ನು ಆಸ್ಪತ್ರೆ ದಾಖಲಿಸಲಾಗಿದೆ.
08:00 PM (IST) Nov 13
Techie hit and run case ಬೆಂಗಳೂರಿನಲ್ಲಿ ರಸ್ತೆ ಗಲಾಟೆಯಿಂದ ಕುಪಿತಗೊಂಡ ಸಾಫ್ಟ್ವೇರ್ ಇಂಜಿನಿಯರ್, ದಂಪತಿ ಹಾಗೂ ಮಗು ಸಂಚರಿಸುತ್ತಿದ್ದ ಬೈಕ್ಗೆ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದು ಪರಾರಿಯಾಗಿದ್ದಾನೆ. ಸಿಸಿಟಿವಿಯಲ್ಲಿ ಸೆರೆಯಾದ ಈ ಭಯಾನಕ ಕೃತ್ಯ. ಆತನನ್ನು ಕೊಲೆಯತ್ನ ಪ್ರಕರಣದಡಿ ಬಂಧಿಸಲಾಗಿದೆ.
07:35 PM (IST) Nov 13
ಕುಶಾಲನಗರ ಗಣಪತಿ ರಥೋತ್ಸವದ ಅಂಗವಾಗಿ ನಡೆದ ಜಾನುವಾರು ಜಾತ್ರೆಯಲ್ಲಿ ಲಕ್ಷಾಂತರ ರೂಪಾಯಿ ಬೆಲೆಬಾಳುವ ಹೋರಿಗಳು ಪ್ರದರ್ಶನಗೊಂಡವು. ಮೈಸೂರು, ಹಾಸನ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳ ರೈತರು ತಮ್ಮ ಅಮೃತ್ ಮಹಲ್, ಹಳ್ಳಿಕಾರ್ ತಳಿಯ ಹೋರಿಗಳನ್ನು ಪ್ರದರ್ಶಿಸಿದರು.
07:31 PM (IST) Nov 13
07:17 PM (IST) Nov 13
ಪವರ್ ಬ್ಯಾಂಕ್ಗಳು ಮೊಬೈಲ್ ಚಾರ್ಜಿಂಗ್ಗೆ ಅತ್ಯಗತ್ಯವಾಗಿದ್ದರೂ, ಕೆಲವು ಅಪಾಯಕಾರಿ ಸಂಕೇತಗಳನ್ನು ನೀಡಬಹುದು. ಬ್ಯಾಟರಿ ಊತ, ಅತಿಯಾದ ಬಿಸಿ, ವಾಸನೆ ಅಥವಾ ಔಟ್ಪುಟ್ ಸಮಸ್ಯೆಗಳಂತಹ ಚಿಹ್ನೆಗಳು ಕಂಡರೆ, ಅದು ಸ್ಫೋಟದಂತಹ ದೊಡ್ಡ ಅನಾಹುತಕ್ಕೆ ಕಾರಣವಾಗಬಹುದು.ಈ ಲೇಖನದಲ್ಲಿ ವಿವರಿಸಲಾಗಿದೆ.
07:02 PM (IST) Nov 13
ಕೈಮೀರಿದ ರೈತ ಪ್ರತಿಭಟನೆ, ಮುಧೋಳದಲ್ಲಿ ಟ್ರಾಕ್ಟರ್ಗೆ ಹಚ್ಚಿದ ಬೆಂಕಿಯಿಂದ ನೂರಾರು ಟನ್ ಕಬ್ಬು ನಾಶ, ಸುಮಾರು 20ಕ್ಕೂ ಹೆಚ್ಚು ಟ್ರಾಕ್ಟರ್ಗಳಿಗೆ ರೈತರು ಬೆಂಕಿ ಹಚ್ಚಿದ್ದಾರೆ. ಸಮೀರವಾಡಿ ಕಾರ್ಖಾನೆ ಆವರಣದಲ್ಲಿ ಈ ಘಟನೆ ನಡೆದಿದೆ.
06:44 PM (IST) Nov 13
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ, ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ತುಮಕೂರಿನಲ್ಲಿ ಸ್ವಪಕ್ಷದ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 2004ರಲ್ಲಿ ತಾನು ಜೆಡಿಎಸ್ನಲ್ಲಿದ್ದಾಗ ಕಾಂಗ್ರೆಸ್ಗೆ 'ವೈಟ್ ವಾಶ್' ಮಾಡಿದ್ದೆ. ಅಂತಹ ಸಂದರ್ಭ ಬರಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.
06:35 PM (IST) Nov 13
ಮಧೋಳ ರೈತರ ಕಿಚ್ಚಿಗೆ ಹೊತ್ತಿ ಉರಿದ ಕಬ್ಬು ತುಂಬಿದ ಟ್ರಾಕ್ಟರ್, 20ಕ್ಕೂ ಹೆಚ್ಚು ವಾಹನ ಭಸ್ಮ, ಸಮೀರವಾಡಿ ಕಬ್ಬು ಕಾರ್ಖಾನೆಯತ್ತ ನೂರಾರು ರೈತರು ನುಗ್ಗಿದ್ದಾರೆ. ಇತ್ತ ಟ್ರಾಕ್ಟರ್ ಹೊತ್ತಿ ಉರಿದಿದೆ.
06:29 PM (IST) Nov 13
06:01 PM (IST) Nov 13
ಕಲಬುರಗಿ ಹೈಕೋರ್ಟ್ನಿಂದ ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕೆ ಷರತ್ತುಬದ್ಧ ಅನುಮತಿ ಸಿಕ್ಕ ಬೆನ್ನಲ್ಲೇ, ಇದೇ ದಿನದಂದು ತಮಗೂ ಪಥಸಂಚಲನಕ್ಕೆ ಅವಕಾಶ ನೀಡಬೇಕೆಂದು ಭೀಮ್ ಆರ್ಮಿ ಸಂಘಟನೆ ಪಟ್ಟು ಹಿಡಿದಿದೆ. ಅನುಮತಿ ಸಿಗದಿದ್ದರೂ ಸಾವಿರಾರು ಜನರೊಂದಿಗೆ ಮೆರವಣಿಗೆ ನಡೆಸುವುದಾಗಿ ಘೋಷಿಸಿದೆ.
05:42 PM (IST) Nov 13
ತೃತೀಯ ಲಿಂಗಿಯರು ಲಿಂಗ ಪರಿವರ್ತನೆಗೆ ಒಳಗಾಗುವಾಗ ಎದುರಿಸುವ ಸವಾಲುಗಳನ್ನು ಈ ಲೇಖನ ವಿವರಿಸುತ್ತದೆ. ಈ ಶಸ್ತ್ರಚಿಕಿತ್ಸೆಯು ಅತ್ಯಂತ ದುಬಾರಿ ಮತ್ತು ನೋವಿನಿಂದ ಕೂಡಿದ್ದು, ಲಕ್ಷಾಂತರ ರೂಪಾಯಿ ವೆಚ್ಚವಾಗುತ್ತದೆ. ಅವರು ಅನುಭವಿಸುವ ಸಂಕಷ್ಟಗಳ ಬಗ್ಗೆ ಇದು ಬೆಳಕು ಚೆಲ್ಲುತ್ತದೆ.
05:29 PM (IST) Nov 13
ದೆಹಲಿ ಸ್ಪೋಟದ ಕುರಿತ ಬಸವರಾಜ ರಾಯರಡ್ಡಿ ಅವರ ಹೇಳಿಕೆಗೆ ಮಾಜಿ ಸಚಿವ ಶ್ರೀರಾಮುಲು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರವನ್ನು ಸಮರ್ಥಿಸಿಕೊಂಡ ಅವರು, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಮೋಜು-ಮಸ್ತಿ ಮಾಡುತ್ತಿರುವ ಬಗ್ಗೆ ಗಮನಹರಿಸುವಂತೆ ಕಾಂಗ್ರೆಸ್ಗೆ ಸವಾಲು.
04:56 PM (IST) Nov 13
ದೆಹಲಿಯ ಕೆಂಪುಕೋಟೆ ಬಳಿಯ ಕಾರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ತುಮಕೂರಿನ ಮುಜಾಯುದ್ದೀನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಹಿಂದೆ 'ಕಲಿಫತ್' ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಈತನಿಗೆ, ಪ್ರಸ್ತುತ ಸ್ಫೋಟ ಸಂಬಂಧ ವಿಚಾರಣೆ ನಡೆಸಿ ಬಿಟ್ಟುಕಳಿಸಲಾಗಿದೆ.
04:56 PM (IST) Nov 13
04:16 PM (IST) Nov 13
ನಿರ್ಧಾರ ಬದಲು, ಕೋರ್ಟ್ ತೀರ್ಪಿಗೂ ಮುನ್ನ RSS ಪಥಸಂಚಲನಕ್ಕೆ ಅವಕಾಶ ಕೊಟ್ಟಿದ್ದ ಚಿತ್ತಾಪುರ ತಹಶಿಲ್ದಾರ್ ಪತ್ರ ಸುವರ್ಣನ್ಯೂಸ್ಗೆ ಲಭ್ಯವಾಗಿದೆ. ಕಳೆದ ಒಂದು ತಿಂಗಳಿನಿಂದ ಅವಕಾಶ ನಿರಾಕರಿಸಿದ್ದ ತಹಶಿಲ್ದಾರ್ ಕೋರ್ಟ್ ತೀರ್ಪಿಗೂ ಮೊದಲೇ ಗ್ರೀನ್ ಸಿಗ್ನಲ್.
03:33 PM (IST) Nov 13
ಕರ್ನಾಟಕ ಬ್ಯಾಂಕ್ ಸಿಬ್ಬಂದಿ ಎಡವಟ್ಟಿಗೆ 1 ಲಕ್ಷ ಕೋಟಿ ರೂ ಬೇರೊಂದು ಖಾತೆಗೆ ಟ್ರಾನ್ಸ್ಫರ್ ಮಾಡಿದ ಘಟನೆ ನಡೆದಿದೆ. ಕರ್ನಾಕ ಬ್ಯಾಂಕ್ನ ಒಟ್ಟು ಠೇವಣಿ ಮೊತ್ತ. 1.4 ಲಕ್ಷ ಕೋಟಿ ರೂಪಾಯಿ. ಕಣ್ತಪ್ಪಿನಿಂದ ಆದ ತಪ್ಪಿಗೆ ಬ್ಯಾಂಕ್ ಖಾಲಿಯಾಗಿದೆ.
03:10 PM (IST) Nov 13
ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ, ಕಂಡೀಷನ್ ಅಪ್ಲೈ, ಆದರೆ ಕೆಲ ಷರತ್ತುಗಳನ್ನು ಹೈಕೋರ್ಟ್ ವಿಧಿಸಿದೆ. ಬ್ಯಾಂಡ್ ಸಿಬ್ಬಂದಿ, ಸ್ವಯಂ ಸೇವಕರ ಒಟ್ಟು ಸಂಖ್ಯೆ ಸೇರಿದಂತೆ ಕೆಲ ವಿಚಾರದಲ್ಲಿ ಷರತ್ತು ವಿಧಿಸಲಾಗಿದೆ.
03:07 PM (IST) Nov 13
01:59 PM (IST) Nov 13
ಸುಧೀರ್ ಅತ್ತಾವರ್ ನಿರ್ದೇಶನದ ‘ಕೊರಗಜ್ಜ’ ಚಿತ್ರದ ಆಡಿಯೋ ಬಿಡುಗಡೆ ಜೊತೆಗೆ ಅದ್ದೂರಿಯಾಗಿ ಕೊರಗಜ್ಜನ ಕೋಲ ಸೇವೆಯೂ ನಡೆಯಿತು. ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಡಿಯೋ ಬಿಡುಗಡೆ ನಂತರ ಕೋಲ ಸೇವೆ ನಡೆಯಿತು.
01:43 PM (IST) Nov 13
01:28 PM (IST) Nov 13
ಮೂಲತಃ ಮರಾಠಿ ಸಿನಿಮಾ ರಂಗದ ಪ್ರಮುಖ ನಟಿ ಗಿರಿಜಾ ಓಕ್. ಮಹಾರಾಷ್ಟ್ರ ಮೂಲದ ಚೆಲುವೆ ಮರಾಠಿ ಹಾಗೂ ಹಿಂದಿ ಸಿನಿಮಾ, ವೆಬ್ ಸೀರಿಸ್ಗಳಲ್ಲಿ ಅಭಿನಯಿಸಿದ್ದಾರೆ. ಹಿಂದಿ ಚಿತ್ರವಾದ 'ಶೋರ್ ಇನ್ ದಿ ಸಿಟಿ'ಯಲ್ಲಿ ಅವರ ಪಾತ್ರ ಗಮನಾರ್ಹವಾಗಿತ್ತು.
01:27 PM (IST) Nov 13
girl leaves home for ias dream: ಐಎಎಸ್ ಅಧಿಕಾರಿಯಾಗುವ ಕನಸು ಕಂಡಿದ್ದ ಮಧ್ಯಪ್ರದೇಶದ ಯುವತಿಯೊಬ್ಬಳು, ಪೋಷಕರು ಮದುವೆಗೆ ಒತ್ತಾಯಿಸಿದ್ದರಿಂದ ಮನೆ ಬಿಟ್ಟು ಹೋಗಿದ್ದಾಳೆ. ಆದರೆ ಮಗಳು ನಾಪತ್ತೆಯಾಗಿದ್ದಾಳೆ ಎಂದು ತಂದೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ.
01:09 PM (IST) Nov 13
ಭಾರತದ ಪ್ರಸಿದ್ಧ ಟೆನಿಸ್ ತಾರೆ ಸಾನಿಯಾ ಮಿರ್ಜಾ, ತಮ್ಮ ಕಷ್ಟದ ದಿನಗಳನ್ನು ಬಹಿರಂಗಪಡಿಸಿದ್ದಾರೆ. ಡಿವೋರ್ಸ್ ನಂತ್ರ ಏನೆಲ್ಲ ಆಯ್ತು, ಸಹಾಯಕ್ಕೆ ಬಂದವರು ಯಾರು ಎಂಬುದನ್ನು ತಮ್ಮ ಯೂಟ್ಯೂಬ್ ಚಾನೆಲ್ನ ಮೊದಲ ಎಪಿಸೋಡ್ ನಲ್ಲಿ ಬಹಿರಂಗಪಡಿಸಿದ್ದಾರೆ.
12:19 PM (IST) Nov 13
ಬಿಗ್ ಬಾಸ್ ಖ್ಯಾತಿಯ ಡಾಗ್ ಸತೀಶ್, 2001ರಲ್ಲಿ ತೆರೆಕಂಡ 'ದರ್ಶನ್' ಚಿತ್ರದಲ್ಲಿ ತಮಗಾದ ಅನುಭವವನ್ನು ಹಂಚಿಕೊಂಡಿದ್ದಾರೆ. ತಮಗೆ ಕೆಟ್ಟದಾಗಿ ಮೇಕಪ್ ಮಾಡಿ ಅವಮಾನಿಸಲಾಯಿತು ಮತ್ತು ಇದನ್ನು ಪ್ರಶ್ನಿಸಿದ್ದಕ್ಕೆ ತಮ್ಮ ಪಾತ್ರವನ್ನು ಅರ್ಧಕ್ಕೆ ಸಾಯಿಸಲಾಯಿತು ಎಂದು ನಟ ಆರೋಪಿಸಿದ್ದಾರೆ.
11:25 AM (IST) Nov 13
‘ಜೈಲರ್ 2’ ಚಿತ್ರದಲ್ಲಿ ನಟಿ ಮೇಘನಾ ರಾಜ್ ನಟಿಸುತ್ತಿದ್ದಾರೆ. ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ ಮೇಘನಾ ರಾಜ್ ಅವರು ಈಗಾಗಲೇ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ ಎನ್ನಲಾಗುತ್ತಿದೆ.
10:53 AM (IST) Nov 13
ಮಹೇಶ್ ಬಾಬು ಮತ್ತು ರಾಜಮೌಳಿ ಕಾಂಬಿನೇಷನ್ನಲ್ಲಿ ತಯಾರಾಗುತ್ತಿರುವ `ಗ್ಲೋಬ್ ಟ್ರೋಟರ್` ಚಿತ್ರದಿಂದ ಪ್ರಿಯಾಂಕಾ ಚೋಪ್ರಾ ಪಾತ್ರದ ಫಸ್ಟ್ ಲುಕ್ ಬಂದಿದೆ. ಅವರ ಹೆಸರಿನಲ್ಲೇ ರಾಜಮೌಳಿ ಅಸಲಿ ಕಥೆ ಹೇಳಿದ್ದಾರೆ.
10:31 AM (IST) Nov 13
ಜನರ ಎಲ್ಲಾ ಸಮಸ್ಯೆಗಳನ್ನೂ ಬಗೆಹರಿಸಲು ಆಗುವುದಿಲ್ಲ. ಆದರೆ ಯಾವುದನ್ನು ಬಗೆಹರಿಸಲು ಸಾಧ್ಯತೆ ಇದೆಯೋ ಅದನ್ನು ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.
10:06 AM (IST) Nov 13
ಪ್ರತಿಯೊಬ್ಬರ ಲೈಫ್ನಲ್ಲೂ ವಿಜಯ್ ದೇವರಕೊಂಡ ಅವರಂತಹ ವ್ಯಕ್ತಿ ಇರುವುದು ಒಂದು ವರ ಎಂದು ರಶ್ಮಿಕಾ ಮಂದಣ್ಣ ಹೇಳಿದ್ದಾರೆ. 'ದಿ ಗರ್ಲ್ಫ್ರೆಂಡ್' ಸಕ್ಸಸ್ ಇವೆಂಟ್ನಲ್ಲಿ ವಿಜಯ್ ಆಕೆಯ ಕೈಗೆ ಕಿಸ್ ಮಾಡಿದ್ದು ಹೈಲೈಟ್ ಆಗಿತ್ತು.
09:59 AM (IST) Nov 13
ಇತ್ತೀಚಿನ ದಿನಗಳಲ್ಲಿ ವಲಸಿಗರ ಸ್ವರ್ಗವಾಗುತ್ತಿರುವ ಬೆಂಗಳೂರು ಸಹ ವಾಯು ಮಾಲಿನ್ಯದಲ್ಲಿ 2ನೇ ದೆಹಲಿ ಆಗುತ್ತಿದ್ದು, ನಗರದ ಹಲವೆಡೆ ವಾಯು ಗುಣಮಟ್ಟ ಹದಗೆಡತೊಡಗಿದೆ ಎಂಬುದನ್ನು ಸಾಬೀತುಪಡಿಸುತ್ತಿದೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಂಕಿ-ಅಂಶಗಳು.
09:58 AM (IST) Nov 13
Karnataka RTO NOC delay: ರಾಜ್ಯದಲ್ಲಿ ಕಳೆದ ಮೂರು ತಿಂಗಳಿಂದ ಆರ್ಟಿಒ ಅಧಿಕಾರಿಗಳು ವಾಹನಗಳ ಮರು ನೋಂದಣಿಗೆ ಎನ್ಒಸಿ ನೀಡುತ್ತಿಲ್ಲ. ಇದರಿಂದಾಗಿ, ವಾಹನಗಳನ್ನು ಮಾರಾಟ ಮಾಡಿದ ಮಾಲೀಕರು ಮಾಲೀಕತ್ವವನ್ನು ವರ್ಗಾಯಿಸಲು ಸಾಧ್ಯವಾಗದೆ, ಸಂಭವನೀಯ ಕಾನೂನು ಅಪಾಯಗಳನ್ನು ಎದುರಿಸುತ್ತಿದ್ದಾರೆ.
09:50 AM (IST) Nov 13
ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಪದೇಪದೆ ಹುಲಿ ದಾಳಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಾಡಂಚಿನ ಪ್ರದೇಶಗಳಲ್ಲಿ ಹೆಚ್ಚುವರಿ ಕ್ಯಾಮೆರಾ ಅಳವಡಿಸಿ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ.
09:28 AM (IST) Nov 13
ಬಿಜೆಪಿ ಕರ್ನಾಟಕ ಅಭಿವೃದ್ಧಿಗೆ ವಿರೋಧಿ ಪಕ್ಷವಾಗಿದ್ದು, ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಂಡರೂ ಅದನ್ನು ವಿರೋಧಿಸುತ್ತಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
09:11 AM (IST) Nov 13
ಮೈಸೂರು, ಮಡಿಕೇರಿ, ಕುಂದಾಪುರದ ಬಳಿಕ ಇದೀಗ ದಾವಣಗೆರೆಗೆ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನೇರ ಫ್ಲೈಬಸ್ ಸೇವೆಯನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಆರಂಭಿಸಿದ್ದು, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬುಧವಾರ ಚಾಲನೆ ನೀಡಿದರು.
09:01 AM (IST) Nov 13
ಸಾರ್ವಜನಿಕರಿಗೆ ಒಂದು ದಿನದ ಮಟ್ಟಿಗೆ ಟ್ರಾಫಿಕ್ ಪೊಲೀಸ್ ಆಗುವ ಸುವರ್ಣ ಅವಕಾಶವನ್ನು ನಗರದ ಸಂಚಾರ ಪೊಲೀಸರು ಕಲ್ಪಿಸಿದ್ದಾರೆ.
18 ವರ್ಷ ಮೇಲ್ಪಟ್ಟವರು ಮತ್ತು ದೈಹಿಕವಾಗಿ ಫಿಟ್ ಆಗಿ ಇರುವವರು ಯಾರು ಬೇಕಾದರೂ ಒಂದು ದಿನದ ಮಟ್ಟಿಗೆ ಸಂಚಾರ ಪೊಲೀಸ್ ಆಗಿ ಕರ್ತವ್ಯ ನಿರ್ವಹಿಸಬಹುದಾಗಿದೆ.