ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಷಯದಲ್ಲಿ ಇನ್ನೆರಡು ದಿನಗಳಲ್ಲಿ ಪೂರಕ ವಾತಾವರಣ ಸೃಷ್ಟಿಯಾಗಲಿದ್ದು, ಜನವರಿ 16ರಂದು ಈ ಬಗ್ಗೆ ನಾನು ಮಾತನಾಡುತ್ತೇನೆ. ಸಿಹಿ ಸುದ್ದಿ ಸಿಗುವ ವಿಶ್ವಾಸವಿದೆ ಎಂದು ಡಿಕೆಶಿ ಆಪ್ತ, ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಎಲ್ಲರೂ ಸೈಲೆಂಟ್ ಆಗಿಬಿಟ್ರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಯಾವ ಸೈಲೆಂಟೂ ಇಲ್ಲ. ಇನ್ನೆರಡು ದಿನಗಳಲ್ಲಿ ಪೂರಕ ವಾತಾವರಣ ಸೃಷ್ಟಿಯಾಗಲಿದ್ದು, ಸಂಕ್ರಾಂತಿ ಬಳಿಕ, ಜನವರಿ 16ರಂದು ಈ ಬಗ್ಗೆ ಮಾತನಾಡುವೆ ಎಂದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪಕ್ಷಕ್ಕಾಗಿ ಶ್ರಮಿಸಿದ್ದು, ಅವರು ಸಿಎಂ ಆಗಬೇಕು ಎಂಬುದು ನಮ್ಮ ಇಚ್ಛೆ ಎಂದರು. ಈ ವಿಷಯದಲ್ಲಿ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರವೇ ಅಂತಿಮವಾಗಿದ್ದು, ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಂಡು, ಡಿಕೆಶಿಗೆ ಸಿಎಂ ಆಗಲು ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.

11:54 PM (IST) Jan 14
Actress Karunya Ram Sister Controversy: ಕನ್ನಡದಲ್ಲಿ ಕೆಲ ಸಿನಿಮಾ, ಬಿಗ್ ಬಾಸ್ ಶೋನಲ್ಲಿ ಭಾಗವಹಿಸಿರುವ ಕಾರುಣ್ಯಾ ರಾಮ್ ಅವರು ಒಡಹುಟ್ಟಿದ ತಂಗಿ ಸಮೃದ್ಧಿ ರಾಮ್ ವಿರುದ್ಧವೇ ದೂರು ನೀಡಿದ್ದಾರೆ. ಅಷ್ಟಕ್ಕೂ ಅವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದು ಯಾಕೆ?
11:11 PM (IST) Jan 14
Bigg Boss Kannada 12 Elimination: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಟಾಪ್ 6 ಸ್ಪರ್ಧಿಗಳ ಆಯ್ಕೆ ಆಗಬೇಕು. ಹೀಗಿರುವಾಗ ಮಿಡ್ ವೀಕ್ ಎಲಿಮಿನೇಶನ್ ಆಗಿದೆ. ಧ್ರುವಂತ್ ಮನೆಯಿಂದ ಹೊರಬಂದಿದ್ದಾರೆ. ಹಾಗಾದರೆ ಯಾರದು?
10:23 PM (IST) Jan 14
ಅಂತ್ಯಸಂಸ್ಕಾರದ ವೇಳೆ ಅಚ್ಚರಿ, ಪ್ರೀತಿಯ ಅಜ್ಜಿ ನಿಧನಕ್ಕೆ ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ. ಅಂತ್ಯಸಂಸ್ಕಾರಕ್ಕೆ ಎಲ್ಲಾ ಸಿದ್ಧತೆ ನಡೆದಿದೆ. ಅಚ್ಚರಿ ಎಂಬಂತೆ ಚಿತೆಯಿಂದ ಎದ್ದು ಬಂದ ಅಜ್ಜಿ ತಮ್ಮ 103ನೇ ವರ್ಷದ ಬರ್ತ್ಡೇ ಆಚರಿಸಿದ ಘಟನೆ ನಡೆದಿದೆ.
09:42 PM (IST) Jan 14
ಬಿಗ್ ಬಾಸ್ ಪುಟುಗೋಸಿ ಶೋ, ಆಕ್ರೋಶಕ್ಕೆ ಗುರಿಯಾದ ಬೆಂಗಳೂರು ಕರವೇ ನಾಯಕನ ಹೇಳಿಕೆ, ಈ ಕಾರ್ಯಕ್ರಮ ನಮಗೆ ಪುಟುಗೋಸಿ ಅಂದರೆ ಪುಟುಗೋಸಿ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಬೆಂಗಳೂರು ಕರವೇ ಅಧ್ಯಕ್ಷನ ಹೇಳಿಕೆ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶಕ್ಕೆ ಗುರಿಯಾಗಿದೆ.
08:51 PM (IST) Jan 14
ಬೆಂಗಳೂರಿಗೆ ಬಂತು ಅಮೆರಿಕ ಟೆಸ್ಲಾ ಇವಿ ಕಾರು, ಮೊದಲ ಪಾಪ್ ಅಪ್ ಎಕ್ಸ್ಪೀರಿಯೆನ್ಸ್ ಆರಂಭಿಸಿದೆ. ಗ್ರಾಹಕರು ಟೆಸ್ಲಾ ಕಾರು ಡ್ರೈವ್ ಮಾಡುವ ಅವಕಾಶ ನೀಡಲಾಗಿದೆ. ಬುಕಿಂಗ್ ಆರಂಭಗೊಂಡಿದೆ. ಬೆಂಗಳೂರಿನಲ್ಲಿ ಟೆಸ್ಲಾ ಕಾರಿನ ಬೆಲೆ ಎಷ್ಟು, ಮೈಲೇಜ್ ಎಷ್ಟಿದೆ?
08:22 PM (IST) Jan 14
ಮದ್ದೂರು ಶಾಸಕ ಕೆ.ಎಂ. ಉದಯ್, ಮುಂದಿನ ಚುನಾವಣೆಯಲ್ಲಿ ಪದ್ಮನಾಭನಗರದಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ ಅವರನ್ನು ಸೋಲಿಸಲು ವೈಯಕ್ತಿಕವಾಗಿ ಶ್ರಮಿಸುವುದಾಗಿ ಸವಾಲು ಹಾಕಿದ್ದಾರೆ. ಮದ್ದೂರು ನಗರಸಭೆ ರಚನೆ ವಿಚಾರದಲ್ಲಿ ಅಶೋಕ್ ಅವರ ನಿಲುವನ್ನು ಟೀಕಿಸಿದ್ದಾರೆ.
07:51 PM (IST) Jan 14
ಬಿಗ್ಬಾಸ್ ಮನೆಯಿಂದ ಹೊರಬಂದಿರುವ ರಾಶಿಕಾ ಶೆಟ್ಟಿ, ಸೂರಜ್ ಸಿಂಗ್ ಜೊತೆಗಿನ ಪ್ರೇಮ ಸಂಬಂಧದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ತಾವಿಬ್ಬರೂ ಕೇವಲ ಸ್ನೇಹಿತರು ಎಂದಿರುವ ಅವರು, ಸೂರಜ್ ಸೀರಿಯಲ್ನಲ್ಲಿ ನಟಿಸುತ್ತಿರುವ ವಿಷಯ ತನಗೆ ಮನೆಯಲ್ಲಿ ತಿಳಿದಿರಲಿಲ್ಲ ಎಂದು ಅಚ್ಚರಿ ವ್ಯಕ್ತಪಡಿಸಿದ್ದಾರೆ.
07:43 PM (IST) Jan 14
07:05 PM (IST) Jan 14
ಬೆಂಗಳೂರು-ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ (ನೈಸ್) ಯೋಜನೆಯು ದಶಕಗಳಿಂದ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಯೋಜನೆ ರದ್ದುಗೊಳಿಸಿ, ಬೆಂಗಳೂರಿನ ಪ್ರಸ್ತುತ ಅಗತ್ಯಗಳಿಗೆ ತಕ್ಕಂತೆ ಹೊಸ ಯೋಜನೆ ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
06:50 PM (IST) Jan 14
RCB Bids Goodbye to Bengaluru: Raipur to Host Home Matches in IPL 2026 ರಾಯ್ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಎರಡು ಐಪಿಎಲ್ 2026 ಪಂದ್ಯಗಳನ್ನು ಆಯೋಜಿಸಲಿದೆ.
06:45 PM (IST) Jan 14
ಕಾರವಾರದ ಕದ್ರಾದಲ್ಲಿ ರಿಶೇಲ್ ಡಿಸೋಜಾ ಎಂಬ ಯುವತಿ ಆತ್ಮ*ಹತ್ಯೆ ಮಾಡಿಕೊಂಡಿದ್ದು, ಜೆಡಿಎಸ್ ನಾಯಕಿ ಪುತ್ರ ಚಿರಾಗ್ ಕೊಠಾರಕರ ಕಿರುಕುಳವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಪ್ರೀತಿ ನಿರಾಕರಿಸಿದ್ದಕ್ಕೆ ಚಿರಾಗ್ ಮಾನಸಿಕ ಹಿಂಸೆ ನೀಡಿದ್ದಾಗಿ ದೂರು ನೀಡಲಾಗಿದೆ
06:35 PM (IST) Jan 14
ಸಚಿವ ಜಮೀರ್ ಅಹಮದ್ ಖಾನ್ ಪುತ್ರನ ಸಿನಿಮಾ ಪೋಸ್ಟರ್ ತೆರವುಗೊಳಿಸಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಸ್ಥಳೀಯ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವಾಚ್ಯವಾಗಿ ನಿಂದಿಸಿ, ಕೊಲೆ ಬೆದರಿಕೆ ಹಾಕಿದ್ದಾರೆ. ಇದಕ್ಕೆ ಏಷ್ಯಾನೆಟ್ ಸುವರ್ಣ ನ್ಯೂಸ್ ರಾಜೀವ್ ಗೌಡನಿಂದ ಕ್ಷಮೆ ಕೇಳಿಸಿದೆ.
05:45 PM (IST) Jan 14
Karna Serial Episode Update: ಕರ್ಣ ಧಾರಾವಾಹಿಯಲ್ಲಿ ನಿತ್ಯಾ ಹಾಗೂ ತೇಜಸ್ ಮದುವೆಗೆ ಸಕಲ ತಯಾರಿಯೂ ನಡೆದಿತ್ತು. ಆದರೆ ಕೊನೆ ಗಳಿಗೆಯಲ್ಲಿ ತೇಜಸ್ ಮದುವೆ ಆಗೋದಿಲ್ಲ ಎಂದು ಹೇಳಿದ್ದಾನೆ. ಇದಕ್ಕೆ ಕಾರಣ ರಮೇಶ್. ಹಾಗಾದರೆ ಏನಾಯ್ತು?
05:06 PM (IST) Jan 14
04:48 PM (IST) Jan 14
ಗದಗಿನ ಲಕ್ಕುಂಡಿಯಲ್ಲಿ ಪತ್ತೆಯಾದ ನಿಧಿಯು ಸುಮಾರು 300 ವರ್ಷಗಳಷ್ಟು ಹಳೆಯದಾದ ವಿಜಯನಗರ ಕಾಲದ ಬಂಗಾರದ ಒಡವೆಗಳೆಂದು ತಿಳಿದುಬಂದಿದೆ. ಸರ್ಕಾರಕ್ಕೆ ಒಪ್ಪಿಸಿದ ರಿತ್ತಿ ಕುಟುಂಬಕ್ಕೆ ನಿವೇಶನ, ಮನೆ ಹಾಗೂ ಉದ್ಯೋಗ ನೀಡಲು ಜಿಲ್ಲಾಡಳಿತ ಮುಂದಾಗಿದೆ. ಜಿಲ್ಲಾಧಿಕಾರಿ ಕೊಟ್ಟ ಮಾಹಿತಿ ಇಲ್ಲಿದೆ ನೋಡಿ.
04:47 PM (IST) Jan 14
ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಬಳಿಕ ಏನು ಮಾಡಬೇಕು ಎಂದು ನೋಡಬೇಕು. ಇದ್ದಕ್ಕಿದ್ದಂತೆ ಕೆಲವರು ಶ್ರೀಮಂತರಾಗುವುದುಂಟು. ಆದರೆ ಒಂದಲ್ಲ ಒಂದು ರೀತಿಯ ಸಂಕಷ್ಟಗಳು ಬರುತ್ತವೆ, ಅರ್ಧಾಯುಷ್ಯಕ್ಕೆ ಸಾಯುತ್ತಾರೆ, ಒಂದೊಂದು ದಿಕ್ಕಿನಿಂದ ಸಮಸ್ಯೆ ಬರುವುದು.
04:31 PM (IST) Jan 14
ಲಕ್ಕುಂಡಿಯಲ್ಲಿ ಮನೆ ಅಡಿಪಾಯ ತೋಡುವಾಗ ಗಂಗವ್ವ, ಪ್ರಜ್ವಲ್ ಎಂಬ ತಾಯಿ-ಮಗನಿಗೆ ಚಿನ್ನಾಭರಣಗಳಿದ್ದ ಮಡಿಕೆಯೊಂದು ಸಿಕ್ಕಿದೆ. ಕೆಜಿಎಫ್ ಕಥೆಯಂತೆ ಆಸೆಪಡದೆ, ಪ್ರಾಮಾಣಿಕವಾಗಿ ಅದನ್ನು ಸರ್ಕಾರಕ್ಕೆ ಒಪ್ಪಿಸಿದ ಈ ಘಟನೆಯು, ಸಿಕ್ಕಿದ್ದು ನಿಧಿಯೋ ಅಥವಾ ಪೂರ್ವಜರ ಆಸ್ತಿಯೋ ಎಂಬ ಚರ್ಚೆಯನ್ನು ಹುಟ್ಟುಹಾಕಿದೆ.
03:55 PM (IST) Jan 14
Bigg Boss Kannada Season 12 Episode: ಬಿಗ್ ಬಾಸ್ ಮನೆಯಲ್ಲಿ ಮಿಡ್ ವೀಕ್ ಎಲಿಮಿನೇಶನ್ ಶುರುವಾಗಿದೆ. ಕಲರ್ಸ್ ಕನ್ನಡ ವಾಹಿನಿಯು ಹೊಸ ಪ್ರೋಮೋ ರಿಲೀಸ್ ಮಾಡಿದ್ದು, ಮನೆಯಿಂದ ಯಾರು ಎಲಿಮಿನೇಟ್ ಆಗ್ತಾರೆ ಎಂದು ಸೂಚನೆ ನೀಡಿದೆ. ಹಾಗಾದರೆ ಯಾರು ಔಟ್ ಆದರು?
03:47 PM (IST) Jan 14
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ, ಮಾಜಿ ಅಧ್ಯಕ್ಷ ಹೆಚ್.ವಿ.ರಾಜೀವ್ ವಿರುದ್ಧ ತನಿಖೆ ನಡೆಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಈ ಮಧ್ಯೆ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ‘ಬಿ’ ರಿಪೋರ್ಟ್ಗೆ ತೀರ್ಪನ್ನು ಕಾಯ್ದಿರಿಸಿದೆ.
02:40 PM (IST) Jan 14
ಬಾಗಲಕೋಟೆ ಜಿಲ್ಲೆಯ ಕಮತಗಿ ಬಳಿ ನಡೆದ ಟ್ರ್ಯಾಕ್ಟರ್ ಅಪಘಾತದಲ್ಲಿ ಗಾಯಗೊಂಡಿದ್ದ ಅಕ್ಕ-ತಮ್ಮ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇದರೊಂದಿಗೆ, ವಿಜಯನಗರ ಜಿಲ್ಲೆಯ ತಾಂಡಾಗಳಿಗೆ ಮರಳುತ್ತಿದ್ದ ಕಬ್ಬು ಕಟಾವು ಕಾರ್ಮಿಕರ ಸಾವಿನ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
01:08 PM (IST) Jan 14
BBK 12: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಗಿಲ್ಲಿ ನಟ ಸೇರಿದಂತೆ ಏಳು ಸ್ಪರ್ಧಿಗಳಿದ್ದಾರೆ. ಇವರಲ್ಲಿ ಯಾರು ಫಿನಾಲೆಗೆ ಹೋಗಲಿದ್ದಾರೆ ಎಂದು ಕಾದು ನೋಡಬೇಕಿದೆ. ಗಿಲ್ಲಿ ನಟ ಯಾಕೆ ಗೆಲ್ಲಬೇಕು ಎಂದು ಸಂಭಾಷಣೆಕಾರ ನಂದೀಶ್ ತೀರ್ಥಹಳ್ಳಿ ಅವರು ಸೋಶಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿದ್ದಾರೆ.
12:51 PM (IST) Jan 14
12:49 PM (IST) Jan 14
ಬಿಗ್ಬಾಸ್ ಕನ್ನಡ ಸೀಸನ್ 12ರ ಫಿನಾಲೆ ಸಮೀಪಿಸುತ್ತಿದ್ದಂತೆ, ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಟಿ.ಎ.ನಾರಾಯಣ ಗೌಡರು ನಟ ಸುದೀಪ್ ಅವರನ್ನು ಭೇಟಿಯಾಗಿದ್ದಾರೆ. ಬಿಗ್ಬಾಸ್ ಸ್ಪರ್ಧಿ ಅಶ್ವಿನಿ ಗೌಡರ ಆಸೆಯಂತೆ ನಾರಾಯಣ ಗೌಡರು ಮನೆಗೆ ಪ್ರವೇಶಿಸುತ್ತಾರೆಯೇ ಎಂಬ ಕುತೂಹಲ ಸೃಷ್ಟಿಯಾಗಿದೆ.
12:45 PM (IST) Jan 14
BBK 12: ಬಿಗ್ ಬಾಸ್ ಕನ್ನಡ ಸೀಸನ್ 12 ಶೋ ಈಗ ರಿಯಾಲಿಟಿ ಶೋ ಆಗಿ ಉಳಿದುಕೊಂಡಿಲ್ಲ. ಸ್ಪರ್ಧಿಗಳ ಜೊತೆಯಲ್ಲಿ ಮನೆಯವರು, ಸ್ನೇಹಿತರು, ಕುಟುಂಬಸ್ಥರು, PR ಟೀಂ ಎಲ್ಲರೂ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ.
12:44 PM (IST) Jan 14
ಬಿಗ್ ಬಾಸ್ ಕನ್ನಡ ಸೀಸನ್-12 ಅಂತಿಮ ಹಂತ ತಲುಪಿದ್ದು, ಗೆಲ್ಲುವ ಸ್ಪರ್ಧಿ ಎಂದು ಬಿಂಬಿತವಾಗಿದ್ದ ಗಿಲ್ಲಿಗೆ ವಿನ್ನರ್ ಪಟ್ಟ ಕೈತಪ್ಪುವ ಸಾಧ್ಯತೆ ಇದೆ. ಕೊನೆಯ ವಾರಗಳಲ್ಲಿ ಗಿಲ್ಲಿಯ ಆಟ ಡಲ್ ಆಗಿದ್ದು, ಹಿಂದಿನ ಸೀಸನ್ಗಳಂತೆ ಈ ಬಾರಿಯೂ ಅನಿರೀಕ್ಷಿತ ಫಲಿತಾಂಶ ಬಂದು ಗಿಲ್ಲಿ ರನ್ನರ್ ಅಪ್ ಆಗಬಹುದು.
12:43 PM (IST) Jan 14
ಬಿಗ್ಬಾಸ್ ಮನೆಯಲ್ಲಿ ಗಿಲ್ಲಿ ನಟ, ಕಾವ್ಯಾ ಶೈವ ಮತ್ತು ರಕ್ಷಿತಾ ಶೆಟ್ಟಿ ನಡುವೆ ತ್ರಿಕೋನ ಪ್ರೇಮಕಥೆ ನಡೆಯುತ್ತಿದೆ ಎಂದು ಭಾವಿಸಲಾಗಿತ್ತು. ಆದರೆ, ಗಿಲ್ಲಿ ನಟನ ಕುರಿತು ಅನಿರೀಕ್ಷಿತ ಹೇಳಿಕೆ ಎಲ್ಲವನ್ನೂ ಬದಲಿಸಿದೆ. ಅಷ್ಟಕ್ಕೂ ಆಗಿದ್ದೇನು?
12:29 PM (IST) Jan 14
ಹಾನಗಲ್ನ ಶಾಸಕರ ಸರ್ಕಾರಿ ಮಾದರಿ ಶಾಲೆಯಲ್ಲಿ, ಅತಿಥಿ ಶಿಕ್ಷಕ ಮತ್ತು ಎಸ್ಡಿಎಂಸಿ ಅಧ್ಯಕ್ಷರು ಮಕ್ಕಳ ಮುಂದೆಯೇ ಹೊಡೆದಾಡಿಕೊಂಡಿದ್ದಾರೆ. ವೈಯಕ್ತಿಕ ಭಿನ್ನಾಭಿಪ್ರಾಯದಿಂದ ಆರಂಭವಾದ ಜಗಳ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ.
12:21 PM (IST) Jan 14
12:15 PM (IST) Jan 14
12:09 PM (IST) Jan 14
12:01 PM (IST) Jan 14
11:55 AM (IST) Jan 14
ಬೆಂಗಳೂರಿನಲ್ಲಿ ಸುಮಾರು 2 ಲಕ್ಷಕ್ಕೂ ಅಧಿಕ ಅಕ್ರಮ ಬಾಂಗ್ಲಾ ವಲಸಿಗರು ನೆಲೆಸಿದ್ದಾರೆ ಎಂದು ಶಂಕಿಸಲಾಗಿದೆ. ನಕಲಿ ದಾಖಲೆಗಳನ್ನು ಪಡೆದು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಇವರನ್ನು ಪತ್ತೆ ಹಚ್ಚಿ ಗಡೀಪಾರು ಮಾಡಲು ವಿಶೇಷ ಟಾಸ್ಕ್ ಫೋರ್ಸ್ ರಚಿಸಬೇಕೆಂದು ವಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ
11:47 AM (IST) Jan 14
ಹಾಸನದಲ್ಲಿ ಎರಡನೇ ಮದುವೆ ವಿಚಾರವಾಗಿ ಪ್ರಶ್ನಿಸಿದ್ದಕ್ಕೆ ಪತಿಯೇ ಪತ್ನಿಯನ್ನು ಕೊಂದು ನದಿಗೆ ಎಸೆದರೆ, ಮತ್ತೊಂದು ಪ್ರಕರಣದಲ್ಲಿ ಮರುಮದುವೆಗೆ ಒಪ್ಪದ ಪತ್ನಿಯನ್ನು ಪತಿ ಕತ್ತು ಹಿಸುಕಿ ಕೊಂದಿದ್ದಾನೆ.
11:14 AM (IST) Jan 14
ರಾಜ್ಯದಲ್ಲಿ ಹೆಚ್ಚುತ್ತಿರುವ ಚಿನ್ನಾಭರಣ ದರೋಡೆ ಪ್ರಕರಣ ತಡೆಯಲು, ಕರ್ನಾಟಕದ ಚಿನ್ನದ ವ್ಯಾಪಾರಿಗಳ ಒಕ್ಕೂಟವು ಮಳಿಗೆಗಳಿಗೆ ಪ್ರವೇಶಿಸುವ ಗ್ರಾಹಕರಿಗೆ ಬುರ್ಖಾ, ಹೆಲ್ಮೆಟ್ ಮತ್ತು ಮಾಸ್ಕ್ ನಿಷೇಧಿಸಲು ಚಿಂತನೆ ನಡೆಸಿದೆ. ಭದ್ರತಾ ದೃಷ್ಟಿಯಿಂದ ಈ 'ನೋ ಫೇಸ್ ಮಾಸ್ಕ್, ನೋ ಎಂಟ್ರಿ' ನಿಯಮ ಜಾರಿಯಾಗಲಿದೆ.
11:07 AM (IST) Jan 14
ಸರಿಗಮಪ ಖ್ಯಾತಿಯ ಗಾಯಕಿ ಸುಹಾನಾ ಸೈಯದ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ವಿಶೇಷ ದಿನದಂದು, ಅವರ ಪತಿ ನಿತಿನ್ ಶಿವಾಂಶ್ ಸುಂದರವಾದ ಕವನವನ್ನು ಬರೆದು ಶುಭ ಕೋರಿದ್ದಾರೆ.
10:40 AM (IST) Jan 14
ಬಾಳೆ ಎಲೆಗಳಿಗೆ ಜಾಗತಿಕವಾಗಿ ಬೇಡಿಕೆ ಹೆಚ್ಚಾಗಿದ್ದು, ಇದು ಕೋಟಿ ಗಳಿಸುವ ಉದ್ಯಮವಾಗಿ ಬೆಳೆಯುತ್ತಿದೆ. ಕಡಿಮೆ ಹೂಡಿಕೆಯಲ್ಲಿ ಆರಂಭಿಸಬಹುದಾದ ಈ ವ್ಯವಹಾರವು, ರಫ್ತುದಾರರಿಗೆ ತಿಂಗಳಿಗೆ ಲಕ್ಷಾಂತರ ರೂಪಾಯಿ ಆದಾಯ ತಂದುಕೊಡಬಲ್ಲದು. ಈ ಉದ್ಯಮವನ್ನು ಹೇಗೆ ಪ್ರಾರಂಭಿಸಬೇಕು ಎಂಬ ಡಿಟೇಲ್ ಇಲ್ಲಿದೆ.
10:30 AM (IST) Jan 14
10:10 AM (IST) Jan 14
ಇರಾನ್ ನಲ್ಲಿ ಸರ್ವಾಧಿಕಾರಿ ಆಯತೊಲ್ಲಾ ಖಮೇನಿ ವಿರೋಧಿ ಪ್ರತಿಭಟನೆಯ ಕಿಚ್ಚು ದೇಶಾದ್ಯಂತ ಆವರಿಸಿದ್ದು, ಇಡೀ ದೇಶ ಹೊತ್ತಿ ಉರಿಯುವಂತೆ ಮಾಡಿದೆ. ಖಮೇನಿಯ ಕಟ್ಟರ್ ಇಸ್ಲಾಮಿಕ್ ಆಡಳಿತದ ವಿರುದ್ಧ ತಿರುಗಿ ಬಿದ್ದಿರುವ ಜನ ಅವರ ಪದತ್ಯಾಗಕ್ಕೆ ಪಟ್ಟು ಹಿಡಿದು ಲಕ್ಷಾಂತರ ಸಂಖ್ಯೆಯಲ್ಲಿ ಬೀದಿಗಿಳಿದಿದ್ದಾರೆ.
09:52 AM (IST) Jan 14
ನಮ್ಮ ಮೆಟ್ರೋದಲ್ಲಿ ಪ್ರಯಾಣಿಕರಿಗೆ 1, 3, 5 ದಿನಗಳ ಅನಿಯಮಿತ ಸಂಚಾರದ ಪಾಸ್ ಜ.15ರಿಂದ ಕ್ಯುಆರ್ (QR) ಕೋಡ್ ಸ್ವರೂಪದಲ್ಲೂ ಸಿಗಲಿದೆ. ಸ್ಮಾರ್ಟ್ ಕಾರ್ಡ್ನಂತೆ ₹50 ಠೇವಣಿ ಇಡದೆ ಕೇವಲ ಪಾಸ್ ಮೊತ್ತವನ್ನು ಮಾತ್ರ ಪಾವತಿಸಿ ಇದನ್ನು ಪಡೆಯುವ ಅವಕಾಶವನ್ನು ಬಿಎಂಆರ್ಸಿಎಲ್ ನೀಡಿರುವುದು ವಿಶೇಷ.
09:26 AM (IST) Jan 14
ಕರ್ಣ ಸೀರಿಯಲ್ನಲ್ಲಿ ನಿತ್ಯಾ-ತೇಜಸ್ ಮದುವೆ ನಿಂತುಹೋಗಿದೆ. ನಿತ್ಯಾಳ ಗರ್ಭದ ಬಗ್ಗೆ ಅನುಮಾನಗೊಂಡ ತೇಜಸ್ ಸತ್ಯ ತಿಳಿಯಲು ಮುಂದಾಗಿದ್ದಾನೆ. ಇದರಿಂದಾಗಿ, ತಮ್ಮ ಪ್ರೀತಿಯನ್ನು ಹೇಳಿಕೊಳ್ಳಲು ಕಾದಿದ್ದ ಕರ್ಣ ಮತ್ತು ನಿಧಿ ಪ್ಲಾನ್ ವಿಫಲವಾಗಿದ್ದು, ಕಥೆ ರೋಚಕ ತಿರುವು ಪಡೆದಿದೆ.