ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಷಯದಲ್ಲಿ ಇನ್ನೆರಡು ದಿನಗಳಲ್ಲಿ ಪೂರಕ ವಾತಾವರಣ ಸೃಷ್ಟಿಯಾಗಲಿದ್ದು, ಜನವರಿ 16ರಂದು ಈ ಬಗ್ಗೆ ನಾನು ಮಾತನಾಡುತ್ತೇನೆ. ಸಿಹಿ ಸುದ್ದಿ ಸಿಗುವ ವಿಶ್ವಾಸವಿದೆ ಎಂದು ಡಿಕೆಶಿ ಆಪ್ತ, ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಎಲ್ಲರೂ ಸೈಲೆಂಟ್ ಆಗಿಬಿಟ್ರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಯಾವ ಸೈಲೆಂಟೂ ಇಲ್ಲ. ಇನ್ನೆರಡು ದಿನಗಳಲ್ಲಿ ಪೂರಕ ವಾತಾವರಣ ಸೃಷ್ಟಿಯಾಗಲಿದ್ದು, ಸಂಕ್ರಾಂತಿ ಬಳಿಕ, ಜನವರಿ 16ರಂದು ಈ ಬಗ್ಗೆ ಮಾತನಾಡುವೆ ಎಂದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪಕ್ಷಕ್ಕಾಗಿ ಶ್ರಮಿಸಿದ್ದು, ಅವರು ಸಿಎಂ ಆಗಬೇಕು ಎಂಬುದು ನಮ್ಮ ಇಚ್ಛೆ ಎಂದರು. ಈ ವಿಷಯದಲ್ಲಿ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರವೇ ಅಂತಿಮವಾಗಿದ್ದು, ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಂಡು, ಡಿಕೆಶಿಗೆ ಸಿಎಂ ಆಗಲು ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.

09:26 AM (IST) Jan 14
ಕರ್ಣ ಸೀರಿಯಲ್ನಲ್ಲಿ ನಿತ್ಯಾ-ತೇಜಸ್ ಮದುವೆ ನಿಂತುಹೋಗಿದೆ. ನಿತ್ಯಾಳ ಗರ್ಭದ ಬಗ್ಗೆ ಅನುಮಾನಗೊಂಡ ತೇಜಸ್ ಸತ್ಯ ತಿಳಿಯಲು ಮುಂದಾಗಿದ್ದಾನೆ. ಇದರಿಂದಾಗಿ, ತಮ್ಮ ಪ್ರೀತಿಯನ್ನು ಹೇಳಿಕೊಳ್ಳಲು ಕಾದಿದ್ದ ಕರ್ಣ ಮತ್ತು ನಿಧಿ ಪ್ಲಾನ್ ವಿಫಲವಾಗಿದ್ದು, ಕಥೆ ರೋಚಕ ತಿರುವು ಪಡೆದಿದೆ.
08:49 AM (IST) Jan 14
08:36 AM (IST) Jan 14
ಹೋಟೆಲ್, ಆನ್ಲೈನ್ ಡೆಲಿವರಿ ಊಟೋಪಹಾರಗಳ ಮೇಲಿನ ಅನಿಯಂತ್ರಿತ ದುಬಾರಿ ದರದಿಂದಾಗಿ ಮಧ್ಯಮ ವರ್ಗಕ್ಕೆ ಹೊರೆಯಾಗುತ್ತಿದೆ. ಸರ್ಕಾರ ಮಧ್ಯಪ್ರವೇಶಿಸಿ ಈ ಬೆಲೆಯೇರಿಕೆಗೆ ಕಡಿವಾಣ ಹಾಕಬೇಕೆಂಬ ಒತ್ತಾಯ ಹೆಚ್ಚಾಗಿದೆ.
08:23 AM (IST) Jan 14
ರಾಜಧಾನಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಏರುಮುಖವಾಗಿದ್ದು, ಪ್ರತಿ ದಿನ ಸರಾಸರಿ 21 ಸಾವಿರಕ್ಕೂ ಅಧಿಕ ಪ್ರಕರಣಗಳು ದಾಖಲಾಗುತ್ತಿರುವ ಕಳಕಳಕಾರಿ ಸಂಗತಿ ಬೆಳಕಿಗೆ ಬಂದಿದೆ. ಕಳೆದ ವರ್ಷ 11 ತಿಂಗಳಲ್ಲಿ 68 ಲಕ್ಷ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆ ಎನ್ನುತ್ತಾರೆ ಪೊಲೀಸರು.
08:07 AM (IST) Jan 14
ಹಾನಗಲ್ಲ ಪಟ್ಟಣದ ಶಾಸಕರ ಸರ್ಕಾರಿ ಮಾದರಿ ಶಾಲೆಯಲ್ಲಿ 690 ವಿದ್ಯಾರ್ಥಿಗಳಿಗೆ ಶೌಚಾಲಯದ ವ್ಯವಸ್ಥೆಯಿಲ್ಲದೆ, ವಿಶೇಷವಾಗಿ ವಿದ್ಯಾರ್ಥಿನಿಯರು ಪರದಾಡುತ್ತಿದ್ದಾರೆ.
07:56 AM (IST) Jan 14
ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ಪತ್ತೆಯಾದ ನಿಧಿಯನ್ನು ಸರ್ಕಾರಕ್ಕೆ ಹಸ್ತಾಂತರಿಸಿದ ಪ್ರಜ್ವಲ್ ರಿತ್ತಿಗೆ ಸನ್ಮಾನ ಮಾಡಲಾಯಿತು. ಆದರೆ, ಈ ಘಟನೆಯನ್ನು ಆಧರಿಸಿ, ಪ್ರಾಮಾಣಿಕತೆಗೆ ಸಿಕ್ಕ ಪ್ರತಿಫಲ ಮತ್ತು ಸರ್ಕಾರದ ನಿಲುವನ್ನು ವಿಡಂಬನೆ ಮಾಡುವ ರೀಲ್ಸ್ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
07:46 AM (IST) Jan 14
07:37 AM (IST) Jan 14
ಬೇಲೆಕೇರಿ ಬಂದರು ಅಕ್ರಮ ಅದಿರು ಸಾಗಾಟ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕಾರವಾರ-ಅಂಕೋಲಾ ಶಾಸಕ ಸತೀಶ್ ಸೈಲ್ ಅವರಿಗೆ ಹೈಕೋರ್ಟ್ ಮಧ್ಯಂತರ ಜಾಮೀನು ವಿಸ್ತರಿಸಿದೆ. ವೈದ್ಯಕೀಯ ಕಾರಣಗಳಿಗಾಗಿ ಈ ವಿಸ್ತರಣೆ ನೀಡಲಾಗಿದೆ.
07:32 AM (IST) Jan 14
ಬೆಳಗಾವಿ ನಗರದಲ್ಲಿ ಸಂಜೆ ವೇಳೆಯಲ್ಲಿ ಅಕಾಲಿಕ ಸುರಿದ ಧಾರಾಕಾರ ಮಳೆಯಿಂದಾಗಿ ಜನರು ಹೈರಾಣದರು. ಒಂದೆಡೆ ವರ್ಷದ ಮೊದಲ ವರ್ಷಧಾರೆಗೆ ಹರ್ಷವಾಗಿದ್ದು, ಮತ್ತೊಂದೆಡೆ ಮಕರ ಸಂಕ್ರಮಣದ ಹಬ್ಬದ ಸಂಭ್ರಮಕ್ಕೆ ಖರೀದಿಯಲ್ಲಿ ತೊಡಗಿದ್ದ ಜನತೆಗೆ ಅಡ್ಡಿಯುಂಟಾಯಿತು.
07:31 AM (IST) Jan 14
07:23 AM (IST) Jan 14
ಮನರೇಗಾ ಯೋಜನೆ ಬದಲಿಸಿ ವಿಬಿ ಜಿ ರಾಮ್ ಜಿ ಕಾಯ್ದೆ ಜಾರಿಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸುವ ಸಂಬಂಧ ವಿಶೇಷ ಅಧಿವೇಶನ ಕರೆಯಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಬುಧವಾರ ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಣಯ
07:18 AM (IST) Jan 14
ವಿವಾದಿತ ನಿವೇಶನದ ಜಿಪಿಎ ಹೊಂದಿರುವ ದೇವರಾಜು, ನಟ ಯಶ್ ತಾಯಿ ಪುಷ್ಪಾ ಅವರಿಗೆ ಕಾನೂನುಬದ್ಧ ದಾಖಲೆಗಳನ್ನು ಬಹಿರಂಗಪಡಿಸುವಂತೆ ಸವಾಲು ಹಾಕಿದ್ದಾರೆ. ನ್ಯಾಯಾಲಯದ ಆದೇಶದಂತೆ ಕಾಂಪೌಂಡ್ ತೆರವುಗೊಳಿಸಲಾಗಿದೆ ಎಂದು ಹೇಳಿದ ಅವರು, ಪುಷ್ಪಾ ಅವರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದಿದ್ದಾರೆ.
07:17 AM (IST) Jan 14
ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಫೆಬ್ರವರಿ 13ರಂದು 1000 ದಿನ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಸಾಧನಾ ಸಮಾವೇಶ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
07:06 AM (IST) Jan 14
ಬೀದಿ ನಾಯಿ ನಿಯಂತ್ರಣ ನಿಯಮಾವಳಿ ಅನುಷ್ಠಾನಕ್ಕೆ ತಾರದೆ ಕಳೆದ 5 ವರ್ಷಗಳಿಂದ ಸುಮ್ಮನೆ ಕೂತಿರುವ ಸರ್ಕಾರಗಳ ವಿರುದ್ಧ ಹಾಗೂ ಅವನ್ನು ಪೋಷಿಸುತ್ತಿರುವ ಸಂಘ ಸಂಸ್ಥೆಗಳು ಮತ್ತು ಶ್ವಾನಪ್ರಿಯರ ವಿರುದ್ಧ ಸುಪ್ರೀಂ ಕೋರ್ಟ್ ಮಂಗಳವಾರ ಗರಂ ಆಗಿದೆ.
07:00 AM (IST) Jan 14
ಇರಾನ್ ಮೇಲೆ ದಾಳಿ ಮಾಡುವುದಾಗಿ ಸುಳಿವು ನೀಡುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈಗ ಇರಾನ್ ಜತೆ ವ್ಯಾಪಾರ ವಹಿವಾಟು ನಡೆಸುವ ದೇಶಗಳ ಮೇಲೆ ಆಮದು ಸುಂಕ ಅಸ್ತ್ರ ಪ್ರಯೋಗಿಸಿದ್ದಾರೆ.
06:54 AM (IST) Jan 14
ಇರಾನಿ ಸರ್ವಾಧಿಕಾರಿ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಆಡಳಿತದ ವಿರುದ್ಧ ದಂಗೆ ಎದ್ದಿರುವ ಜನತೆಯನ್ನು ಬೆಂಬಲಿಸಿ, ಇರಾನ್ ಮೇಲೆ ದಾಳಿಯ ಸುಳಿವು ನೀಡಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ