ಬೆಂಗಳೂರು: ಆ.6ರಿಂದ ಮಳೆಗಾಲದ ವಿಧಾನಮಂಡಲ ಅಧಿವೇಶನ ಕರೆಯಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಆ.6 ರಂದು ಅಧಿವೇಶನ ಕರೆಯಲು ತೀರ್ಮಾನಿಸಿರುವುದಾಗಿ ತಿಳಿಸಿದರು. ಹೀಗಾಗಿ ಆಗಸ್ಟ್ ಮೊದಲ ವಾರ ಅಧಿವೇಶನ ನಡೆಯುವುದು ಬಹುತೇಕ ಖಚಿತಗೊಂಡಿದೆ.
ಆ.6 ರಿಂದ ಅಧಿವೇಶನ ಶುರುವಾಗಲಿದ್ದು, ಮೊದಲ ದಿನ ಹಂಗಾಮಿ ಸ್ಪೀಕರ್ ಆಗಿರುವ ಉಪಸಭಾಧ್ಯಕ್ಷರ ಅಧ್ಯಕ್ಷತೆಯಲ್ಲಿ ಸಭಾಧ್ಯಕ್ಷರ ಚುನಾವಣೆ ಪ್ರಕ್ರಿಯೆ ನಡೆಯಲಿದೆ. ಬಳಿಕ ನಿಧನರಾದ ಮಾಜಿ ಸಚಿವ ಸುಧಾಕರ್ ಅವರಿಗೆ ಸಂತಾಪ ಸೂಚನೆ ನಡೆಯಲಿದೆ. ನಂತರ ಆ.10 ರಿಂದ ಕಾರ್ಯಕಲಾಪ ಶುರುವಾಗಲಿದ್ದು ಆ.14ರವರೆಗೆ ನಡೆಯುತ್ತದೆಯೇ ಅಥವಾ ಆ.21ರವರೆಗೆ ನಡೆಯುತ್ತದೆಯೇ ಎಂಬುದು ಇನ್ನೂ ಅಂತಿಮಗೊಂಡಿಲ್ಲ.
ಸರ್ಕಾರದಿಂದ ವಿಧಾನಸಭೆ ಸಚಿವಾಲಯಕ್ಕೆ ಈವರೆಗೆ ದಿನಾಂಕದ ಬಗ್ಗೆ ಯಾವುದೇ ಮಾಹಿತಿ ತಲುಪಿಲ್ಲ. ದಿನಾಂಕದ ಬಗ್ಗೆ ಮಾಹಿತಿ ತಲುಪಿದರೆ ಶಾಸಕರಿಗೆ ಪ್ರಶ್ನೋತ್ತರಕ್ಕೆ ಪ್ರಶ್ನೆಗಳನ್ನು ಸಲ್ಲಿಸಲು ಸೂಚಿಸಬೇಕಾಗುತ್ತದೆ. ಸಚಿವಾಲಯಕ್ಕೆ ಇನ್ನೂ ಯಾವುದೇ ಮಾಹಿತಿ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ.
08:05 AM (IST) Jul 14
08:02 AM (IST) Jul 14
ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಅವರು ಶಿವಮೊಗ್ಗ-ಮಂಗಳೂರು ರೈಲ್ವೇ ಯೋಜನೆಯ ಮಾರ್ಗ ವಿವಾದ, ಶೃಂಗೇರಿಯ ಗ್ರಾಮ ಸಡಕ್ ಯೋಜನೆಗಳ ವಿಳಂಬ ಮತ್ತು ಶಾಶ್ವತ ವಾಸ್ತವ್ಯದ ಪ್ರಮಾಣಪತ್ರಗಳ ದುರ್ಬಳಕೆ ಕುರಿತು ಮಾತನಾಡಿದರು.
07:39 AM (IST) Jul 14
07:33 AM (IST) Jul 14
ಹಾರ್ಮುಜ್ ಜಲಸಂಧಿಯಲ್ಲಿ ಯುಎಇಗೆ ಸೇರಿದ ಎರಡು ತೈಲ ಟ್ಯಾಂಕರ್ಗಳ ಮೇಲೆ ಇರಾನ್ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಓರ್ವ ಭಾರತೀಯ ಸಿಬ್ಬಂದಿ ಸಾವನ್ನಪ್ಪಿ, ಇತರ ಆರು ಭಾರತೀಯರು ಗಾಯಗೊಂಡಿದ್ದಾರೆ. ಈ ಘಟನೆಯು ಅಮೆರಿಕ-ಇರಾನ್ ಸಂಘರ್ಷವನ್ನು ಉಲ್ಬಣಗೊಳಿಸಿದ್ದು, ಜಾಗತಿಕ ತೈಲ ಬೆಲೆಗಳಲ್ಲಿ ತೀವ್ರ ಏರಿಕೆಗೆ ಕಾರಣವಾಗಿದೆ.
07:23 AM (IST) Jul 14
ಭಾರೀ ಮಳೆಗೆ ತೋಟಗಾರಿಕೆ ಇಲಾಖೆಯ ಕಚೇರಿ ಕಟ್ಟಡ ಕುಸಿದುಬಿದ್ದಿದೆ. ಕಟ್ಟಡ ಕುಸಿಯುವ ಮುನ್ಸೂಚನೆ ನೀಡಿದ ಚಾಯ್ವಾಲಾ ಆದಂ ಅವರ ಎಚ್ಚರಿಕೆಯಿಂದಾಗಿ, ಸಿಬ್ಬಂದಿ ಪ್ರಮುಖ ದಾಖಲೆಗಳನ್ನು ಸ್ಥಳಾಂತರಿಸಿ ದೂರ ಉಳಿದಿದ್ದರಿಂದ ಏಳು ಮಂದಿಯ ಪ್ರಾಣ ಉಳಿದಿದೆ.
07:11 AM (IST) Jul 14
ವಸತಿ ಉದ್ದೇಶಕ್ಕಾಗಿ ಪಡೆದ ಪರವಾನಗಿಯಲ್ಲಿ ಮಸೀದಿ ನಿರ್ಮಿಸಲಾಗುತ್ತಿದೆ ಎಂದು ಆರೋಪಿಸಿ ಸ್ಥಳೀಯ ನಿವಾಸಿಗಳು ಪುರಸಭೆಗೆ ದೂರು ನೀಡಿದ್ದಾರೆ. ಈ ಅಕ್ರಮ ನಿರ್ಮಾಣದಿಂದಾಗಿ ಬಡಾವಣೆಯಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದ್ದು, ಕೂಡಲೇ ಕಾಮಗಾರಿ ನಿಲ್ಲಿಸುವಂತೆ ಆಗ್ರಹಿಸಿದ್ದಾರೆ.
06:13 AM (IST) Jul 14
ರಾಜ್ಯದ 13 ಪ್ರಮುಖ ಪ್ರವಾಸಿ ತಾಣಗಳಲ್ಲಿ ಉದ್ದೇಶಿತ ರೋಪ್ವೇ ಯೋಜನೆಗಳ ವಿಳಂಬಕ್ಕೆ ಸಚಿವ ಕೆ.ಜೆ.ಜಾರ್ಜ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಹಲವು ವರ್ಷಗಳಿಂದ ಪ್ರಸ್ತಾಪದ ಹಂತದಲ್ಲೇ ಇರುವುದಕ್ಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿರುವ ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ.ಜಾರ್ಜ್, ತ್ವರಿತ ಅನುಷ್ಠಾನಕ್ಕೆ ಸೂಚನೆ ನೀಡಿದ್ದಾರೆ.
06:04 AM (IST) Jul 14
05:30 AM (IST) Jul 14
05:23 AM (IST) Jul 14