ಮಂಗಳೂರು: ಅಪ್ರಾಪ್ತ ಕಾರು ಚಲಾಯಿಸಿ ಒಂದು ಕಾರು ಹಾಗೂ ನಿಲ್ಲಿಸಿದ್ದ 6 ಬೈಕ್ಗೆ ಡಿಕ್ಕಿ ಹೊಡೆದ ಘಟನೆ ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಅಪಘಾತಕ್ಕೆ ಕಾರಣವಾದ ಕಾರಿನ ಮಾಲೀಕರಾದ ಬಾಲಕನ ತಾಯಿ ವಿರುದ್ಧ ಪ್ರಕರಣ ದಾಖಲಾಗಿದೆ. ಮೊದಲು ಕಾರೊಂದಕ್ಕೆ ಡಿಕ್ಕಿ ಹೊಡೆದ ಅಪ್ರಾಪ್ತನ ಕಾರು ಬಳಿಕ ರಸ್ತೆ ಬದಿ ನಿಲ್ಲಿಸಲಾಗಿದ್ದ 6 ಬೈಕ್ಗೆ ಡಿಕ್ಕಿ ಹೊಡೆದು ನೆಲಕ್ಕುರುಳಿಸಿತ್ತು. ಅಪ್ರಾಪ್ತ ಕಾರು ನಿಲ್ಲಿಸದೆ ಅಲ್ಲಿಂದ ಪರಾರಿಯಾಗಿದ್ದ. ನಂತರ ಪೆರಿಗೇರಿ ಎಂಬಲ್ಲಿ ಸ್ಥಳೀಯರು ಕಾರನ್ನು ತಡೆದು ಪೊಲೀಸರಿಗೆ ಒಪ್ಪಿಸಿದ್ದರು. ತನಿಖೆ ನಡೆಸಿದ ಪೊಲೀಸರು ವಾಹನ ಮಾಲೀಕಿ ಆದ ಆತನ ತಾಯಿ ಕೆ.ಎ.ಮಮ್ತಾಜ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

09:58 AM (IST) Mar 14
ಮದುವೆ ವಿಚಾರವಾಗಿ ನಡೆದ ಜಗಳದಲ್ಲಿ ಅಯ್ಯಪ್ಪ ಎಂಬಾತ ತನ್ನ ಪ್ರೇಯಸಿ ರಂಜಿತಾಳನ್ನು ವೈಯರ್ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾನೆ. ಈಗಾಗಲೇ ಮದುವೆಯಾಗಿದ್ದ ಅಯ್ಯಪ್ಪ, ಪತ್ನಿಗೆ ವಿಚ್ಛೇದನ ನೀಡದೆ ರಂಜಿತಾ ಜೊತೆ ವಾಸಿಸುತ್ತಿದ್ದ. ವರ್ತೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
09:22 AM (IST) Mar 14
ಯುಜಿಸಿ ನಿಗದಿಪಡಿಸಿದ ಹೊಸ ಅರ್ಹತಾ ಮಾನದಂಡಗಳಿಂದಾಗಿ, ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ದಶಕಗಳಿಂದ ಸೇವೆ ಸಲ್ಲಿಸುತ್ತಿದ್ದ ಸಾವಿರಾರು ಅತಿಥಿ ಉಪನ್ಯಾಸಕರು ಉದ್ಯೋಗ ಕಳೆದುಕೊಂಡಿದ್ದಾರೆ. ಸೇವಾ ಭದ್ರತೆಗಾಗಿ ಹೋರಾಡುತ್ತಿದ್ದ ಇವರಿಗೆ, ಹೈಕೋರ್ಟ್ ಆದೇಶದ ನಂತರ ಹೊಸ ನಿಯಮ ಪಾಲಿಸದ ಕಾರಣ ನಿರುದ್ಯೋಗದ ಸಂಕಷ್ಟ
08:41 AM (IST) Mar 14
ಬೆಂಗಳೂರಿನ ರಾಜಭವನ ರಸ್ತೆಯಲ್ಲಿ, ಮೊಬೈಲ್ನಲ್ಲಿ ಮಾತನಾಡುತ್ತಾ ಕಾರು ಚಲಾಯಿಸುತ್ತಿದ್ದ ಚಾಲಕನೊಬ್ಬ ಮಾಜಿ ಸಚಿವ ನಾರಾಯಣಗೌಡ ಅವರ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಈ ವೇಳೆ, ನಿರ್ಲಕ್ಷ್ಯದ ಚಾಲನೆಯ ಬಗ್ಗೆ ನಾರಾಯಣಗೌಡ ಅವರು ಚಾಲಕನನ್ನು ತರಾಟೆಗೆ ತೆಗೆದುಕೊಂಡರು.
08:35 AM (IST) Mar 14
ಪ್ರಸಿದ್ಧ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ನಡೆದ ಹುಂಡಿ ಎಣಿಕೆಯಲ್ಲಿ ದಾಖಲೆಯ ₹3.07 ಕೋಟಿ ಕಾಣಿಕೆ ಸಂಗ್ರಹವಾಗಿದೆ. ಈ ಎಣಿಕೆಯಲ್ಲಿ ₹2.78 ಕೋಟಿ ನಗದು, 100 ಗ್ರಾಂ ಚಿನ್ನ ಹಾಗೂ ಸುಮಾರು 4.5 ಕೆಜಿ ಬೆಳ್ಳಿ ಸೇರಿದೆ.
08:27 AM (IST) Mar 14
ಬೆಂಗಳೂರಿನಲ್ಲಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ತೀವ್ರ ಅಭಾವದಿಂದ ಹೋಟೆಲ್ ಉದ್ಯಮವು ಸಂಕಷ್ಟಕ್ಕೆ ಸಿಲುಕಿದೆ. ಕಾಳಸಂತೆಯಲ್ಲಿ ಸಿಲಿಂಡರ್ ಬೆಲೆ ₹4000 ದಾಟಿದ್ದು, ಅನಿವಾರ್ಯವಾಗಿ ಹಲವು ಹೋಟೆಲ್ಗಳು ಸೌದೆ ಒಲೆಗಳ ಮೊರೆ ಹೋಗಿವೆ. ಇದರಿಂದ ಅಡುಗೆ ಸಿಬ್ಬಂದಿ ಹೊಗೆ ಹಾಗೂ ಅನುಭವದ ಕೊರತೆಯಿಂದ ಪರದಾಟ.
08:22 AM (IST) Mar 14
ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಬಾಗಲಕೋಟೆಗೆ ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರ ಹೆಸರು ಬಹುತೇಕ ಅಂತಿಮವಾಗಿದ್ದು, ದಾವಣಗೆರೆಯಲ್ಲಿನ ಭಿನ್ನಾಭಿಪ್ರಾಯಗಳ ನಡುವೆ ಅಚ್ಚರಿಯ ಅಭ್ಯರ್ಥಿ ಆಯ್ಕೆಯ ಸಾಧ್ಯತೆಗಳಿವೆ.
07:48 AM (IST) Mar 14
ವಿಧಾನಪರಿಷತ್ತಿನಲ್ಲಿ ಕಾಂಗ್ರೆಸ್ನ ರಮೇಶ್ ಬಾಬು ಅವರು 'ಕರ್ನಾಟಕ ಚಿನ್ನ ಅಡಮಾನವಿಟ್ಟ ಸಾಲಗಾರರ ರಕ್ಷಣಾ ವಿಧೇಯಕ 2025' ಎಂಬ ಖಾಸಗಿ ವಿಧೇಯಕವನ್ನು ಮಂಡಿಸಿದ್ದಾರೆ. ಈ ವಿಧೇಯಕವು ಚಿನ್ನದ ಸಾಲಗಾರರ ಹಿತರಕ್ಷಣೆಗಾಗಿ, ಅಡವಿಟ್ಟ ಚಿನ್ನದ ಹರಾಜು ಪ್ರಕ್ರಿಯೆಯನ್ನು ನಿಯಂತ್ರಣ ಉದ್ದೇಶಿಸಿದೆ.
07:47 AM (IST) Mar 14
07:28 AM (IST) Mar 14
07:28 AM (IST) Mar 14
ಬೆಂಗಳೂರಿನ ಚಂದ್ರಾಲೇಔಟ್ನಲ್ಲಿ ಹಣದಾಸೆಗಾಗಿ 15 ವರ್ಷದ ಮಗಳನ್ನು ತಾಯಿಯೇ ವೇಶ್ಯಾವಾಟಿಕೆಗೆ ದೂಡಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಬಾಲಕಿಯ ತಾಯಿ, ಮಲತಂದೆ ಹಾಗೂ ಮಧ್ಯವರ್ತಿಯನ್ನು ಪೊಲೀಸರು ಬಂಧಿಸಿದ್ದು, ಬಾಲಕಿಯನ್ನು ರಕ್ಷಿಸಿದ್ದಾರೆ.
07:08 AM (IST) Mar 14
ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯ 'ಆಪರೇಷನ್ ಕಮಲ'ದ ಭೀತಿಯಿಂದ ಒಡಿಶಾದ 8 ಕಾಂಗ್ರೆಸ್ ಶಾಸಕರನ್ನು ರಾಮನಗರದ ವಂಡರ್ ಲಾ ರೆಸಾರ್ಟ್ಗೆ ಸ್ಥಳಾಂತರಿಸಲಾಗಿದೆ. ಅಡ್ಡ ಮತದಾನ ತಡೆಯಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈ ಶಾಸಕರ ಉಸ್ತುವಾರಿ ವಹಿಸಿಕೊಂಡಿದ್ದಾರೆ.
07:00 AM (IST) Mar 14