ಬಂಗಾರಪೇಟೆ (ಕೋಲಾರ): ಮಷಿನ್ ಗನ್ಗೆ ಬಳಸುವ7.6 ಎಂಎಂನ 135 ಜೀವಂತ ಬುಲೆಟ್ಗಳು ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ದಾಸರಮಲ್ಲ ಗ್ರಾಮದ ಸೇತುವೆಯೊಂದರ ಕೆಳಗೆ ಪತ್ತೆಯಾಗಿವೆ. ಮಹಾರಾಷ್ಟ್ರದಲ್ಲಿ 1969ರಲ್ಲಿ ತಯಾರಿಸಲಾಗಿರುವ ಬುಲೆಟ್ಗಳು ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಗ್ರಾಮಸ್ಥರು ಮಾಹಿತಿ ನೀಡಿದ ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಬುಲೆಟ್ಗಳನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ತಮಿಳುನಾಡಿನ ಗಡಿಯಲ್ಲಿರುವ ದಾಸರಮಲ್ಲ ಗ್ರಾಮದ ಬಳಿಯ ಸೇತುವೆ ಕೆಳಗೆ ಬಳಸಿರುವ ಬುಲೆಟ್ (ಡಮ್ಮಿ) ಹಾಗೂ ಬಸಳದೆ ಇರುವ ಬುಲೆಟ್ಗಳನ್ನು ಅನಾಮಿಕರು ಬಿಸಾಡಿ ಹೋಗಿದ್ದಾರೆ ಎನ್ನಲಾಗಿದೆ. ಇದನ್ನು ಗಮನಿಸಿದಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಾಮಸಮುದ್ರ ಪೊಲೀಸರು ಬುಲೆಟ್ಗಳನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ.
08:03 AM (IST) May 14
12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು 'ಮನೆ ಮನೆಗೂ ಯೋಗ, ಎಲ್ಲರಿಗೂ ಯೋಗ' ಪರಿಕಲ್ಪನೆಯಡಿ ರಾಜ್ಯಾದ್ಯಂತ ಆಚರಿಸಲು ಸರ್ಕಾರ ಸಿದ್ಧತೆ ನಡೆಸಿದೆ. ಇದರ ಮುಖ್ಯ ಕಾರ್ಯಕ್ರಮ ಜೂ.21 ರಂದು ವಿಧಾನಸೌಧದ ಆವರಣದಲ್ಲಿ ನಡೆಯಲಿದ್ದು, ಸುಮಾರು 5000 ಯೋಗಪಟುಗಳು ಭಾಗವಹಿಸಲಿದ್ದಾರೆ.
07:46 AM (IST) May 14
07:44 AM (IST) May 14
ಮಂಗಳೂರಿನ ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಘೇರಾವ್ ಹಾಕಿದ ಆರೋಪದ ಮೇಲೆ 11 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಖಾದರ್ ಅವರ ಅಂಗರಕ್ಷಕರು ನೀಡಿದ ದೂರಿನ ಅನ್ವಯ ಕ್ರಮ.
07:32 AM (IST) May 14
ಉದ್ಯಮಿಯೊಬ್ಬರು ರೀಲ್ಸ್ ಸ್ಟಾರ್ ತನ್ನಗೆ ಬ್ಲ್ಯಾಕ್ಮೇಲ್ ಮಾಡಿ ಹಣ ವಸೂಲಿ ಮಾಡಿದ್ದಾಳೆಂದು ದೂರು ನೀಡಿದ್ದರು. ಆದರೆ, ಇದೀಗ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ತನ್ನ ಅನೈತಿಕ ಸಂಬಂಧ ಮುಚ್ಚಿಕೊಳ್ಳಲು ಪತಿಯೇ ಈ ಸುಳ್ಳು ಕಥೆ ಕಟ್ಟಿದ್ದಾನೆ ಎಂದು ಉದ್ಯಮಿಯ ಪತ್ನಿಯೇ ಪೊಲೀಸರಿಗೆ ಪತ್ರ ಬರೆದು ಗಂಭೀರ ಆರೋಪ ಮಾಡಿದ್ದಾರೆ.
07:20 AM (IST) May 14
ಸಿದ್ದಾಪುರದಿಂದ ವಾಜಗದ್ದೆ, ನಾಣಿಕಟ್ಟಾ ಮಾರ್ಗವಾಗಿ ಶಿರಸಿಗೆ ಸಂಚರಿಸುವ ಸಾರಿಗೆ ಬಸ್ನ ಸಮಯವನ್ನು ಬದಲಾಯಿಸಲಾಗಿದೆ. ಸಾರ್ವಜನಿಕರ ಮತ್ತು ವಿದ್ಯಾರ್ಥಿಗಳ ನಿರಂತರ ಹೋರಾಟದ ಫಲವಾಗಿ ಈ ಬದಲಾವಣೆ ಮಾಡಲಾಗಿದ್ದು, ಇದು ಪ್ರಯಾಣಿಕರ ಬಹುಕಾಲದ ಸಮಸ್ಯೆಗೆ ಪರಿಹಾರ ನೀಡಿದೆ.
07:18 AM (IST) May 14