Published : Aug 14, 2025, 07:34 AM ISTUpdated : Aug 14, 2025, 10:53 PM IST

Karnatata Latest News Live: ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿಗಳಾದ ಪರಮಪೂಜ್ಯ ಡಾ. ಶರಣಬಸವಪ್ಪ ಅಪ್ಪನವರು ಲಿಂಗೈಕ್ಯ

ಸಾರಾಂಶ

ಬೆಂಗಳೂರು (ಆ.14): ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ನೀಡಿರುವ ಜಾಮೀನು ಮುಂದುವರೆಸಬೇಕೋ ಅಥವಾ ರದ್ದುಪಡಿಸಬೇಕೋ ಎಂಬುದರ ಬಗ್ಗೆ ಸುಪ್ರೀಂಕೋರ್ಟ್ ಗುರುವಾರ ಮಹತ್ವದ ತೀರ್ಪು ನೀಡಲಿದೆ. ದರ್ಶನ್ ಮತ್ತು ಪ್ರಕರಣದ ಇತರೆ 7 ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಕಳೆದ ವರ್ಷ ಡಿ.13ರಂದು ನೀಡಿದ್ದ ಜಾಮೀನು ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಈ ಅರ್ಜಿಯನ್ನು ಜು.24ರಂದು ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಲಾಗಿತ್ತು.ಅದರೊಂದಿಗೆ ರಾಜ್ಯ ರಾಜಕೀಯ ಹಾಗೂ ರಾಜ್ಯದ ಇತರ ಸುದ್ದಿಗಳ ಬಗ್ಗೆ ಇಂದಿನ ನ್ಯೂಸ್‌ಲೈವ್‌ ಬ್ಲಾಗ್‌

 

10:53 PM (IST) Aug 14

ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿಗಳಾದ ಪರಮಪೂಜ್ಯ ಡಾ. ಶರಣಬಸವಪ್ಪ ಅಪ್ಪನವರು ಲಿಂಗೈಕ್ಯ

ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿಗಳಾದ ಡಾ. ಶರಣಬಸವಪ್ಪ ಅಪ್ಪನವರು ಲಿಂಗೈಕ್ಯರಾಗಿದ್ದಾರೆ. ಚಿಕಿತ್ಸೆ ಮುಂದುವರೆದಿದ್ದರೂ, ಇಂದು ಸಂಜೆ ಮಹಾಮನೆಯಲ್ಲಿ ಕೊನೆಯುಸಿರೆಳೆದರು. ಕಲ್ಯಾಣ ಕರ್ನಾಟಕದ ಶಿಕ್ಷಣ ಕ್ರಾಂತಿಯ ಹರಿಕಾರರಾಗಿದ್ದರು.
Read Full Story

10:01 PM (IST) Aug 14

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ರಾಜ್ಯದಲ್ಲಿ 1 ವಾರ ಮಳೆ - ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ ಒಂದು ವಾರ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Read Full Story

09:54 PM (IST) Aug 14

ಆಸ್ತಿ ನೋಂದಣಿ ದಾಖಲೆ ಡಿಜಿಟಲ್‌ ಮಾದರಿಯಲ್ಲಿ ಇರುವುದು ಕಡ್ಡಾಯ - ಸಚಿವ ಕೃಷ್ಣ ಬೈರೇಗೌಡ

ತಿದ್ದುಪಡಿ ವಿಧೇಯಕದ ಮೂಲಕ ಆಸ್ತಿ ನೋಂದಣಿ ಸರಳೀಕರಣ ಮತ್ತು ನೋಂದಣಿ ಪ್ರಕ್ರಿಯೆಯಲ್ಲಿ ತಾಂತ್ರಿಕತೆ ಬಳಸಿಕೊಂಡು ಅಧಿಕಾರಿಗಳ ಮಧ್ಯಪ್ರವೇಶವನ್ನು ಸಕ್ರಿಯವಾಗಿ ಕಡಿಮೆ ಮಾಡಲಾಗಿದೆ.

Read Full Story

09:28 PM (IST) Aug 14

ಧರ್ಮಸ್ಥಳ ಕೇಸ್ ಅಪ್‌ಡೇಟ್ - ಮಹಿಳಾ ಆಯೋಗದಿಂದ ಪೊಲೀಸ್ ಇಲಾಖೆಗೆ ಪತ್ರ

ಧರ್ಮಸ್ಥಳದಲ್ಲಿ ನೂರಾರು ಶವಗಳ ಆರೋಪದ ತನಿಖೆಯಲ್ಲಿ ಯಾವುದೇ ಅಸ್ಥಿಪಂಜರಗಳು ಪತ್ತೆಯಾಗಿಲ್ಲ. ಮಹಿಳಾ ಆಯೋಗವು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಮಿಷನರ್‌ಗೆ ಪತ್ರ ಬರೆದು ಕೆಲವೊಂದು ಮಾಹಿತಿಯನ್ನು ಕೇಳಿದೆ.

Read Full Story

09:10 PM (IST) Aug 14

ಕೆರೆಯಲ್ಲಿ ಕ್ಯಾಟ್‌ಫಿಶ್‌ ಸಾಕಿದರೆ ಕೇಸು - ಸಚಿವ ಮಂಕಾಳ ವೈದ್ಯ

ನಿಷೇಧವಿದ್ದರೂ ಆಫ್ರಿಕನ್‌ ಕ್ಯಾಟ್‌ಫಿಶ್‌ ಸಾಕುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಸಚಿವ ಮಂಕಾಳ ಎಸ್‌.ವೈದ್ಯ ತಿಳಿಸಿದರು.

Read Full Story

08:10 PM (IST) Aug 14

ದರ್ಶನ್, ಪವಿತ್ರಾ ಗೌಡ ಸೇರಿ ಐವರಿಗೆ ಮತ್ತೊಮ್ಮೆ ಪರಪ್ಪನ ಆಗ್ರಹಾರ ಜೈಲಿಗೆ ಶಿಫ್ಟ್

ಸುಪ್ರೀಂಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಜಾಗೊಂಡ ನಂತರ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಐವರನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ. ಐಷಾರಾಮಿ ಜೀವನದ ಫೋಟೋ ವೈರಲ್ ಆದ ಬಳಿಕ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ದರ್ಶನ್‌ರನ್ನು ಶಿಫ್ಟ್ ಮಾಡಲಾಗುತ್ತಿದೆ.

Read Full Story

08:04 PM (IST) Aug 14

ಕೈಗಾರಿಕೆ ಸ್ಥಾಪಿಸಲು 2 ಎಕ್ರೆವರೆಗೆ ಬಳಸಲು ಭೂಪರಿವರ್ತನೆ ಅನಗತ್ಯ - ಸಚಿವ ಕೃಷ್ಣ ಬೈರೇಗೌಡ

ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಂಡಿಸಿದ ವಿಧೇಯಕದ ಮೇಲೆ ಸುದೀರ್ಘ ಚರ್ಚೆ ಹಾಗೂ ಸಲಹೆಗಳ ಬಳಿಕ ಮೂಲಕ ವಿಧೇಯಕಕ್ಕೆ ಅಂಗೀಕಾರ ನೀಡಲಾಯಿತು.

Read Full Story

07:53 PM (IST) Aug 14

ರಸಗೊಬ್ಬರ ಸಮಸ್ಯೆಗೆ ಕೇಂದ್ರದ ಮಲತಾಯಿ ಧೋರಣೆ ಕಾರಣ - ಸಚಿವ ಚಲುವರಾಯಸ್ವಾಮಿ ಟೀಕೆ

ರಸಗೊಬ್ಬರ ಸಮಸ್ಯೆಗೆ ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿರುವ ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ.

Read Full Story

07:43 PM (IST) Aug 14

ಆಶಾ ಕಾರ್ಯರ್ತೆಯರಿಗೆ ₹1500 ವೇತನ ಹೆಚ್ಚಳ - ಸಚಿವ ದಿನೇಶ್‌ ಗುಂಡೂರಾವ್‌

ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಮಾಸಿಕ 1500 ರು. ಗೌರವಧನ ಹೆಚ್ಚಿಸಲು ತೀರ್ಮಾನಿಸಿದ್ದೇವೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದರು.

Read Full Story

07:29 PM (IST) Aug 14

ದಲಿತ ಅಸ್ತ್ರದಿಂದ ನನ್ನನ್ನು ಕುಗ್ಗಿಸಲು ಸಾಧ್ಯವಿಲ್ಲ - ಸಂಸದ ಡಾ.ಕೆ.ಸುಧಾಕರ್

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಜನರಿಗಾಗಿ ತಾವು ಮಾಡಿರುವ ಕೆಲಸಗಳು ಜನರಿಗೆ ತಿಳಿದಿದೆ. ಈ ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಗೆ ಬರುತ್ತೇನೆ ಎಂದು ಸಂಸದ ಡಾ.ಕೆ.ಸುಧಾಕರ್‌ ಹೇಳಿದರು.

Read Full Story

06:49 PM (IST) Aug 14

ದರ್ಶನ್ ಜಾಮೀನು ರದ್ದು ತೀರ್ಪು ಲ್ಯಾಂಡ್‌ಮಾರ್ಕ್ ಎಂದು ಘೋಷಿಸಿದ ಸುಪ್ರೀಂ, ಹೈಕೋರ್ಟ್‌ಗೆ ರವಾನೆಗೆ ಸೂಚನೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಆಘಾತ ನೀಡಿದೆ. ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಗೊಳಿಸಿದೆ. ಜೈಲಿನಲ್ಲಿ ವಿಐಪಿ ಟ್ರೀಟ್‌ಮೆಂಟ್‌, ಸಾಕ್ಷ್ಯ ನಾಶದ ಪ್ರಯತ್ನ ಸೇರಿದಂತೆ ಹಲವು ಅಂಶಗಳನ್ನು ಪರಿಗಣಿಸಿ ಈ ತೀರ್ಪು ನೀಡಲಾಗಿದೆ.

Read Full Story

06:47 PM (IST) Aug 14

ದರ್ಶನ್ ಬಂಧನದ ಬಳಿಕ ಡೆವಿಲ್ ಅಭಿಮಾನಿಗಳಿಗೆ ಮತ್ತೊಂದು ಬೇಸರದ ನ್ಯೂಸ್

ಈ ಸುದ್ದಿ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ. ದರ್ಶನ್ ಬಂಧನದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.

Read Full Story

06:47 PM (IST) Aug 14

ಜಯದೇವ ಹೃದಯ, ಕಿದ್ವಾಯಿ ಕ್ಯಾನ್ಸರ್ ಉಪಕೇಂದ್ರ ಸ್ಥಾಪನೆ ಪ್ರಸ್ತಾವನೆ ಇಲ್ಲ - ಶರಣ ಪ್ರಕಾಶ್ ಪಾಟೀಲ್

ಜಯದೇವ ಹೃದ್ರೋಗ ಸಂಸ್ಥೆ ಮತ್ತು ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಯ ಉಪ ಕೇಂದ್ರಗಳನ್ನು ಸ್ಥಾಪಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸಚಿವ ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

Read Full Story

06:14 PM (IST) Aug 14

ಆಗೋದೆಲ್ಲ ಆಗಲಿ ಹಾಯಾಗಿರು - ಬಂಧನಕ್ಕೂ ಮುನ್ನ ಡಿ-ಗ್ಯಾಂಗ್‌ನ ಆರೋಪಿಯ ಬಿಂದಾಸ್‌ ಸ್ಟೇಟಸ್

ಮಗ ಜೈಲುಪಾಲು ಆಗ್ತಿರೊ ವಿಷಯ ತಿಳಿದು ಹೆತ್ತಕರಳು ಕಣ್ಣೀರು ಹಾಕುತ್ತಿದ್ರೆ ಡಿ-ಗ್ಯಾಂಗ್ ಆರೋಪಿ ಅನುಕುಮಾರ್, ಆಗೋದೆಲ್ಲ ಆಗಲಿ ಹಾಯಾಗಿರು, ಏನೇ ಎದುರಾಗಲಿ ಖುಷಿಯಾಗಿರು' ಎಂಬ ಸ್ಟೇಟಸ್ ಹಾಕಿಕೊಂಡಿದ್ದಾನೆ.

Read Full Story

06:09 PM (IST) Aug 14

ದೂರದರ್ಶನ ಕೇಂದ್ರ ಮುಚ್ಚದಂತೆ ಕೇಂದ್ರ ಸರ್ಕಾರಕ್ಕೆ ಪತ್ರ - ಸಿಎಂ ಸಿದ್ದರಾಮಯ್ಯ

ದೂರದರ್ಶನ ಕೇಂದ್ರದ ಅಭಿವೃದ್ಧಿ ಕೇಂದ್ರದ ಕೈಯಲ್ಲಿದೆ. ದೂರದರ್ಶನ ಕೇಂದ್ರ ಮುಚ್ಚುವ ಅಧಿಕೃತ ಮಾಹಿತಿ ಕೇಂದ್ರದಿಂದ ಲಭ್ಯವಾದಲ್ಲಿ ತಕ್ಷಣ ಪತ್ರ ಬರೆದು, ಇದು ಮುಚ್ಚದಂತೆ ಆಗ್ರಹಿಸಲಾಗುತ್ತದೆ ಎಂದು ಸಿಎಂ ಹೇಳಿದ್ದಾರೆ.

Read Full Story

06:05 PM (IST) Aug 14

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸರ್ಕಾರ ಯಾವುದೇ ಕಾಲಮಿತಿ ನೀಡಿಲ್ಲ - ಗೃಹ ಸಚಿವರ ಸ್ಪಷ್ಟನೆ

ಧರ್ಮಸ್ಥಳದಲ್ಲಿ ನಡೆದ ಶವಗಳ ಹೂಳುವಿಕೆ ಪ್ರಕರಣದ ತನಿಖೆಗೆ ಸರ್ಕಾರ ಯಾವುದೇ ಕಾಲಮಿತಿ ಹಾಕಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ವರದಿ ಬಂದ ನಂತರ ಹೆಚ್ಚಿನ ಪ್ರತಿಕ್ರಿಯೆ ನೀಡುವುದಾಗಿ ತಿಳಿಸಿದ ಅವರು, ಎಸ್ಐಟಿಗೆ ಸಾಕ್ಷಿದಾರರ ಗಂಭೀರತೆ ಅರಿವಿದೆ ಎಂದರು. ಸತ್ಯ ಹೊರಬರಬೇಕೆಂದು ಹೇಳಿದರು

Read Full Story

05:44 PM (IST) Aug 14

Darshan Arrest - ನಿಜವಾಗೇ ಹೋಯ್ತು ದರ್ಶನ್​ ಕುರಿತ ಕೋಡಿಶ್ರೀ ನುಡಿ - ನಟನ ಭವಿಷ್ಯವೇನು?

ನಟ ದರ್ಶನ್​, ಪವಿತ್ರಾ ಗೌಡ ಸೇರಿದಂತೆ ಇನ್ನು ಇತರರಿಗೆ ಸಿಕ್ಕ ಜಾಮೀನನ್ನು ಸುಪ್ರೀಂಕೋರ್ಟ್​ ರದ್ದುಗೊಳಿಸುತ್ತಲೇ ಎಲ್ಲರ ಅರೆಸ್ಟ್​ ಆಗಿದೆ. ಇದೇ ವೇಳೆ ಕೋಡಿಮಠದ ಶ್ರೀಗಳ ವಿಡಿಯೋ ವೈರಲ್​ ಆಗಿದೆ.

 

Read Full Story

05:38 PM (IST) Aug 14

ದರ್ಶನ್ ಜಾಮೀನು ರದ್ದು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ, ಪೊಲೀಸರಿಗೆ ಸೂಚನೆ

ರೇಣುಕಾಸ್ವಾಮಿ ಹ*ತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಮತ್ತು ಡಿ ಗ್ಯಾಂಗ್ ಜಾಮೀನು ರದ್ದಾದ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಕಾನೂನು ಪಾಲನೆಯ ಮಹತ್ವವನ್ನು ಒತ್ತಿ ಹೇಳಿದ್ದಾರೆ. ನ್ಯಾಯಾಲಯದ ನಿರ್ದೇಶನದಂತೆ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದಾರೆ.
Read Full Story

05:05 PM (IST) Aug 14

ಕರುನಾಡಿನ ಗೃಹಲಕ್ಷ್ಮೀಯರಿಗೆ ಗಣೇಶ ಹಬ್ಬಕ್ಕೆ ಸಿಹಿ ಸುದ್ದಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಜೂನ್ ಮತ್ತು ಜುಲೈ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆಯಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಡುಪಿಯಲ್ಲಿ ತಿಳಿಸಿದ್ದಾರೆ. ಫಲಾನುಭವಿಗಳ ಖಾತೆಗೆ ಶೀಘ್ರದಲ್ಲೇ ಹಣ ಜಮೆಯಾಗಲಿದೆ. ಗಣೇಶ ಚತುರ್ಥಿ ಒಳಗೆ ಜುಲೈ ತಿಂಗಳ ಹಣ ಬಿಡುಗಡೆ ಮಾಡುವ ಗುರಿ ಹೊಂದಲಾಗಿದೆ.
Read Full Story

04:58 PM (IST) Aug 14

ಬೈಸಿಕಲ್‌ಗಳಿಂದ ಬಿಲಿಯನ್‌ಗಳ ತನಕ - ಭಾರತೀಯ ಬಾಹ್ಯಾಕಾಶ ಕ್ಷೇತ್ರ ಸಾಗಿಬಂದ ಹಾದಿ

ಭಾರತದ ಬಾಹ್ಯಾಕಾಶ ಕಾರ್ಯಕ್ರಮಗಳ ಬೇರು 1962ರಲ್ಲಿ ಆರಂಭಗೊಂಡಿತು. ಆಗ ಭಾರತದ ಸರ್ವಶ್ರೇಷ್ಠ ವಿಜ್ಞಾನಿಗಳಲ್ಲಿ ಒಬ್ಬರಾದ ವಿಕ್ರಮ್ ಸಾರಾಭಾಯಿ ಅವರ ನೇತೃತ್ವದಲ್ಲಿ ಇಂಡಿಯನ್ ನ್ಯಾಷನಲ್ ಕಮಿಟಿ ಫಾರ್ ಸ್ಪೇಸ್ ರಿಸರ್ಚ್ ಸ್ಥಾಪನೆಗೊಂಡಿತು.

Read Full Story

04:37 PM (IST) Aug 14

ಅನನ್ಯಾ ಭಟ್, ಪದ್ಮಲತಾ ಆಯ್ತು, ಇದೀಗ ಹೇಮಾವತಿ - 13 ವರ್ಷದ ಹಿಂದೆ ಕಾಣೆಯಾದ ಯುವತಿ ಅಣ್ಣನಿಂದ ದೂರು

13 ವರ್ಷಗಳ ಹಿಂದೆ ಧರ್ಮಸ್ಥಳಕ್ಕೆ ಕರೆದೊಯ್ಯಲಾದ ಸಹೋದರಿ ಹಿಂತಿರುಗದ ಕಾರಣ ಅಣ್ಣನು ಎಸ್ಐಟಿ ಕಚೇರಿಯಲ್ಲಿ ದೂರು ದಾಖಲಿಸಿದ್ದಾರೆ. ಕರೆದೊಯ್ದ ಮಹಿಳೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಕುಟುಂಬದ ನೋವು ಮತ್ತು ನ್ಯಾಯಕ್ಕಾಗಿ ಹೋರಾಟದ ಕಥೆ.

Read Full Story

04:09 PM (IST) Aug 14

ರೇಣುಕಾಸ್ವಾಮಿ ಪ್ರಕರಣ - ಪತ್ನಿ ಮನೆಯಲ್ಲಿದ್ದ ನಟ ದರ್ಶನ್ ಬಂಧನ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿದೆ. ಜಾಮೀನಿನ ಮೇಲೆ ಹೊರಗಿದ್ದ ದರ್ಶನ್‌ರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಈಗಾಗಲೇ ಎ1 ಆರೋಪಿ ಪವಿತ್ರಾ ಗೌಡ ಬಂಧನವಾಗಿದೆ.
Read Full Story

04:06 PM (IST) Aug 14

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವ ಗ್ಯಾಂಗ್ ಗೆ ಡಿಕೆಶಿ ವಿಧಾನಸಭೆಯಿಂದಲೇ ವಾರ್ನಿಂಗ್!

ಧರ್ಮಸ್ಥಳದ ವಿಚಾರದಲ್ಲಿ ಸರ್ವರ ಭಾವನೆಗಳೂ ಅರ್ಥವಾಗುತ್ತದೆ ಎಂದು ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಧರ್ಮಸ್ಥಳದ ಬಗ್ಗೆ ಬಿಜೆಪಿಗಿಂತ ಹೆಚ್ಚಿನ ಕಾಳಜಿ ನಮಗಿದೆ ಎಂದೂ ಹೇಳಿದ್ದಾರೆ. ಧರ್ಮಸ್ಥಳದ ಮೇಲೆ ಅಪಪ್ರಚಾರ ಮಾಡಿದವರಿಗೆ ಶಿಕ್ಷೆ ಇದೆ ಎಂದೂ ಎಚ್ಚರಿಸಿದ್ದಾರೆ.
Read Full Story

03:50 PM (IST) Aug 14

ಜಾಮೀನು ರದ್ದಾದ ಬಳಿಕ ನಾಪತ್ತೆಯಾದ್ರಾ ನಟ ದರ್ಶನ್ ? ತಮಿಳುನಾಡಿಗೆ ಹೋಗಿದ್ದು ಯಾಕೆ?

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸೇರಿದಂತೆ 7 ಜನರ ಜಾಮೀನು ರದ್ದಾಗಿದೆ. ಜಾಮೀನು ರದ್ದಾದ ಬಳಿಕ ದರ್ಶನ್ ನಾಪತ್ತೆಯಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ದರ್ಶನ್ ತಮಿಳುನಾಡಿಗೆ ಹೋಗಿರಬಹುದು ಎಂಬ ಸುದ್ದಿ ಹಬ್ಬಿದೆ.
Read Full Story

03:41 PM (IST) Aug 14

ಆಶೀಕ್ ಜೊತೆ ಪರಾರಿಯಾಗಿರುವ ಶಂಕೆ; ಮಹಿಳೆ ಗಂಡನಿಂದ ದೂರು, ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

ಚಿಕ್ಕಮಗಳೂರಿನಲ್ಲಿ 22 ವರ್ಷದ ಮಹಿಳೆಯೊಬ್ಬರು ನಾಪತ್ತೆಯಾಗಿದ್ದು, ಪತಿ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಗಳು ಮತ್ತು ಗ್ರಾಮಸ್ಥರು ಪ್ರತಿಭಟನೆ ನಡೆಸಿ ರಸ್ತೆ ತಡೆ ನಡೆಸಿದರು.

Read Full Story

03:04 PM (IST) Aug 14

ಗೌರಿ ಗಣೇಶ ಸಿನಿಮಾಕ್ಕೂ ಮೀರಿದ ಕಟ್ಟು ಕಥೆ ಕಟ್ಟಿದ ಸುಜಾತಾ ಭಟ್‌, ಇಲ್ಲಿದೆ EXCLUSIVE ಮಾಹಿತಿ!

ಅನನ್ಯಾ ಭಟ್ ನಾಪತ್ತೆ ಪ್ರಕರಣದಲ್ಲಿ ಸುದ್ದಿಯಾದ ಸುಜಾತಾ ಭಟ್ ಅವರ ಜೀವನದ ಹಲವು ಅಂಶಗಳು ನಿಗೂಢವಾಗಿವೆ. ತನಿಖೆಯಿಂದ ಹೊರಬಂದ ಮಾಹಿತಿಗಳು ಅನನ್ಯಾ ಅಸ್ತಿತ್ವದ ಬಗ್ಗೆಯೇ ಅನುಮಾನ ಮೂಡಿಸಿವೆ. 

Read Full Story

02:34 PM (IST) Aug 14

'ಸತ್ಯವೇ ಎಲ್ಲಕ್ಕಿಂತ ಶಕ್ತಿಶಾಲಿ..' ಜಾಮೀನು ರದ್ದಾಗುವ ಸೂಚನೆಯಲ್ಲೇ ಪೋಸ್ಟ್‌ ಹಾಕಿದ್ದ ಪವಿತ್ರಾ ಗೌಡ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳ ಜಾಮೀನು ರದ್ದತಿಯಾಗಿದೆ. ಸುಪ್ರೀಂ ಕೋರ್ಟ್ ತೀರ್ಪು ನೀಡುವ ಮುನ್ನ ಪವಿತ್ರಾ ಗೌಡ ಅವರ ಇನ್ಸ್ಟಾಗ್ರಾಂ ಪೋಸ್ಟ್ ಚರ್ಚೆಗೆ ಗ್ರಾಸವಾಗಿದೆ. ಹೈಕೋರ್ಟ್ ಜಾಮೀನು ನೀಡಿದ್ದನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ಟೀಕಿಸಿದೆ.
Read Full Story

01:54 PM (IST) Aug 14

ಧರ್ಮಸ್ಥಳ ಪ್ರಕರಣ - ಮಂಡ್ಯದಲ್ಲೊಬ್ಬ ಮುಸುಕುಧಾರಿ ಭೀಮ ಪ್ರತ್ಯಕ್ಷ!

ಧರ್ಮಸ್ಥಳದಲ್ಲಿ ನಡೆಯುತ್ತಿರುವ ಎಸ್‌ಐಟಿ ಉತ್ಖನನವನ್ನು ವಿರೋಧಿಸಿ ಮಂಡ್ಯದಲ್ಲಿ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಮುಸುಕುಧಾರಿ ವ್ಯಕ್ತಿಯೊಬ್ಬರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದು ಕುತೂಹಲ ಮೂಡಿಸಿದೆ. ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಎನ್‌ಐಎ ತನಿಖೆಗೆ ಆದೇಶಿಸಬೇಕೆಂದು ಆಗ್ರಹಿಸಲಾಗಿದೆ.
Read Full Story

01:34 PM (IST) Aug 14

ದರ್ಶನ್ ಜಾಮೀನು ರದ್ದು ಕೇಳಿ ರೇಣುಕಾಸ್ವಾಮಿ ಕುಟುಂಬ ಭಾವುಕ, ತೀರ್ಪು ಸಮಯದಲ್ಲಿ ಲಿಂಗಪೂಜೆಯಲ್ಲಿದ್ದ ತಂದೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಸೇರಿದಂತೆ ಏಳು ಆರೋಪಿಗಳ ಜಾಮೀನು ರದ್ದಾಗಿದೆ. ಈ ತೀರ್ಪಿನಿಂದ ರೇಣುಕಾಸ್ವಾಮಿ ಕುಟುಂಬ ಭಾವುಕರಾಗಿದ್ದು, ನ್ಯಾಯ ದೊರಕುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕುಟುಂಬದವರು ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸಿದ್ದಾರೆ.
Read Full Story

01:02 PM (IST) Aug 14

ಗನ್ ಹಿಡಿದು ಜ್ಯುವೆಲ್ಲರಿ ಶಾಪ್‌ಗೆ ನುಗ್ಗಿದ ಮುಸುಕುಧಾರಿಗಳು; ಸಿಸಿಟಿವಿಯಲ್ಲಿ ಸೆರೆಯಾಯ್ತು ಬೆಚ್ಚಿಬಿಳಿಸೋ ದೃಶ್ಯ!

ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಜ್ಯುವೆಲ್ಲರಿ ಅಂಗಡಿಗೆ ಮುಸುಕುಧಾರಿ ದರೋಡೆಕೋರರು ನುಗ್ಗಿ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ನಡೆದಿದೆ. ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಘಟನೆಯಿಂದ ಸ್ಥಳೀಯ ವ್ಯಾಪಾರಿಗಳಲ್ಲಿ ಆತಂಕ ಮೂಡಿದೆ.
Read Full Story

12:13 PM (IST) Aug 14

ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೂಗಳ ಹತ್ಯೆ, ಗುಪ್ತಚರ ಇಲಾಖೆ ವಿಫಲ, ಕೊಪ್ಪಳ ಯುವಕನ ಹತ್ಯೆ ಪ್ರಕರಣ ಎನ್‌ಐಎಗೆ ವಹಿಸುವಂತೆ ಬಿಜೆಪಿ ಆಗ್ರಹ

ಕೊಪ್ಪಳದ ಗವಿಸಿದ್ದಪ್ಪ ನಾಯಕ ಕೊಲೆ ಪ್ರಕರಣವನ್ನು ಎನ್‌ಐಎಗೆ ವಹಿಸಬೇಕೆಂದು ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್‌ ಶಾಸಕರ ನಿಯೋಗವು ರಾಜ್ಯಪಾಲರಿಗೆ ಮನವಿ ನೀಡಿದೆ. ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕೆಂದು ಶ್ರೀರಾಮುಲು ಆಗ್ರಹಿಸಿದ್ದಾರೆ. 

Read Full Story

12:09 PM (IST) Aug 14

ಮೆಡಿಕಲ್‌ ಬೇಲ್‌ಅನ್ನು ದರ್ಶನ್‌ ದುರುಪಯೋಗ ಮಾಡಿಕೊಂಡಿದ್ದಾರೆ ಎಂದ ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ!

ನಟ ದರ್ಶನ್‌ಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಇದನ್ನು ಸ್ವಾಗತಿಸಿದ್ದಾರೆ. ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದ್ದುದರಿಂದ ಜಾಮೀನು ರದ್ದತಿಯು ತನಿಖೆಗೆ ಪೂರಕ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Read Full Story

10:59 AM (IST) Aug 14

ದರ್ಶನ್‌ ಜಾಮೀನು ರದ್ದು, ರಾಜಾತಿಥ್ಯ ನೀಡಿದ್ದ ಜೈಲಾಧಿಕಾರಿಗಳ ಸಸ್ಪೆಂಡ್‌ಗೆ ಸುಪ್ರೀಂ ಕೋರ್ಟ್‌ ಆದೇಶ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸ್ನೇಹಿತೆ ಪವಿತ್ರಾ ಗೌಡ ಸೇರಿ ಏಳು ಮಂದಿಯ ಜಾಮೀನು ರದ್ದಾಗಿದೆ. ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿದ್ದಕ್ಕಾಗಿ ಜೈಲು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
Read Full Story

10:58 AM (IST) Aug 14

ಧರ್ಮಸ್ಥಳ ಪ್ರಕರಣ - ಗೃಹ ಸಚಿವರನ್ನ ಭೇಟಿಯಾದ ದ.ಕ. ಕಾಂಗ್ರೆಸ್ ನಾಯಕರ ನಿಯೋಗ, ಚರ್ಚಿಸಿದ್ದೇನು?

ಧರ್ಮಸ್ಥಳದಲ್ಲಿ ನಡೆದಿರುವ ಶವ ಹೂತು ಹಾಕಿರುವ ಆರೋಪ ಪ್ರಕರಣದ ಕುರಿತು ಕಾಂಗ್ರೆಸ್ ನಾಯಕರ ನಿಯೋಗವು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿ ಚರ್ಚಿಸಿದೆ. ಪ್ರಕರಣದ ಸದ್ಯದ ಪರಿಸ್ಥಿತಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುಳ್ಳು ಸುದ್ದಿಗಳ ಬಗ್ಗೆಯೂ ಚರ್ಚಿಸಲಾಗಿದೆ. 

Read Full Story

10:44 AM (IST) Aug 14

Breaking ದರ್ಶನ್ , ಪವಿತ್ರಾ ಜಾಮೀನು ರದ್ದು, ಬಳ್ಳಾರಿ ಜೈಲಿಗೆ ಕಿಲ್ಲಿಂಗ್ ಸ್ಟಾರ್!

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ, ದರ್ಶನ್ ಸೇರಿದಂತೆ ಏಳು ಮಂದಿಗೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದತಿ ಕುರಿತು ಸುಪ್ರೀಂ ಕೋರ್ಟ್ ಇಂದು ತೀರ್ಪು ಪ್ರಕಟಿಸಲಿದೆ. ಜಾಮೀನು ರದ್ದಾಗುವುದೇ ಅಥವಾ ಮುಂದುವರಿಯುವುದೇ ಎಂಬ ಕುತೂಹಲ ಮನೆಮಾಡಿದೆ.
Read Full Story

10:16 AM (IST) Aug 14

ಆರು ತಿಂಗಳು ಕ್ರಿಕೆಟ್ ಆಡದಿದ್ರೂ ಒನ್‌ಡೇ ರ್‍ಯಾಂಕಿಂಗ್‌ನಲ್ಲಿ ರೋಹಿತ್ ಶರ್ಮಾ ನಂ.2!

ಭಾರತ ಏಕದಿನ ತಂಡದ ನಾಯಕ ರೋಹಿತ್ ಶರ್ಮಾ ಕಳೆದ ಆರು ತಿಂಗಳಿನಿಂದ ಒನ್‌ಡೇ ಮ್ಯಾಚ್ ಆಡದೇ ಇದ್ದರೂ ಏಕದಿನ ರ್‍ಯಾಂಕಿಂಗ್‌ನಲ್ಲಿ ನಂ.2 ಸ್ಥಾನಕ್ಕೇರಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

Read Full Story

10:14 AM (IST) Aug 14

ಬೆಂಗಳೂರು ನಗರದಲ್ಲಿರೋದು ಕೇವಲ 4324 ರಸ್ತೆಗುಂಡಿಗಳಂತೆ; ಬಿಬಿಎಂಪಿ ಮತ್ತೆ ಸುಳ್ಳು ಲೆಕ್ಕ?

ಬೆಂಗಳೂರಿನ ರಸ್ತೆಗಳಲ್ಲಿ ಸಾವಿರಾರು ಗುಂಡಿಗಳಿದ್ದು, ಬಿಬಿಎಂಪಿ ಲೆಕ್ಕದ ಪ್ರಕಾರ 6,230 ಗುಂಡಿಗಳನ್ನು ಮುಚ್ಚಲಾಗಿದೆ ಮತ್ತು 4,324 ಗುಂಡಿಗಳು ಬಾಕಿ ಇವೆ. ಆದರೆ, ಈ ಲೆಕ್ಕ ಸುಳ್ಳು ಎಂಬ ಆರೋಪ ಕೇಳಿಬಂದಿದೆ.

Read Full Story

09:36 AM (IST) Aug 14

'ಮುಸ್ಲಿಂ ಯುವತಿಯರನ್ನ ಮದುವೆಯಾದ್ರೆ ₹'5 ಲಕ್ಷ ಘೋಷಣೆ; ಯತ್ನಾಳ್ ವಿರುದ್ಧ ಕಲಬುರಗಿಯಲ್ಲಿ ಎಫ್‌ಐಆರ್!

ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಕಲಬುರಗಿಯಲ್ಲಿ ಎಫ್‌ಐಆರ್ ದಾಖಲು. ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ. ಕೊಡುವ ಘೋಷಣೆ ವಿವಾದಕ್ಕೆ ಕಾರಣ.
Read Full Story

09:10 AM (IST) Aug 14

ಧರ್ಮಸ್ಥಳ ಕೇಸ್‌ ಅನಾಮಿಕ ಹಿಂದೆಯಾರ ಕೈವಾಡವಿದೆ ಅನ್ನೋದು ತನಿಖೆ ನಡೆಸಬೇಕಿದೆ - ದಿನೇಶ್‌ ಗುಂಡೂರಾವ್

ಧರ್ಮಸ್ಥಳದಲ್ಲಿ ಶವಗಳನ್ನು ಹೂಳಲಾಗಿದೆ ಎಂಬ ಆರೋಪಗಳ ತನಿಖೆ ನಡೆಯುತ್ತಿದ್ದು, ಸುಳ್ಳು ಆರೋಪ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂಬ ಬೇಡಿಕೆ ಇದೆ. ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಹಬ್ಬಿಸಿದವರ ಹಿಂದಿನ ಉದ್ದೇಶವೇನೆಂಬುದರ ಬಗ್ಗೆ ತನಿಖೆ ನಡೆಸಬೇಕಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
Read Full Story

08:26 AM (IST) Aug 14

ಸಾರಿಗೆ ಸಚಿವರ ಮಾತಿಗೆ ಕಿಮ್ಮತ್ತಿಲ್ವಾ? ಸಾಲು ಸಾಲು ರಜೆ, ಮತ್ತೆ ಸುಲಿಗೆಗೆ ಇಳಿದ್ರಾ ಖಾಸಗಿ ಬಸ್​ ಮಾಲಿಕರು?

ಸ್ವಾತಂತ್ರ್ಯ ದಿನಾಚರಣೆ ಮತ್ತು ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಸತತ ಮೂರು ದಿನಗಳ ರಜೆ ಘೋಷಣೆಯಾಗಿದ್ದು, ಖಾಸಗಿ ಬಸ್ ಮಾಲಿಕರು ಟಿಕೆಟ್ ದರವನ್ನು ದುಪ್ಪಟ್ಟುಗೊಳಿಸಿ ಪ್ರಯಾಣಿಕರಿಗೆ ಆಘಾತ ನೀಡಿದ್ದಾರೆ.

Read Full Story

More Trending News