ಬೆಂಗಳೂರು: ಬೇಕರಿ, ಕಾಂಡಿಮೆಂಟ್ಸ್, ಜ್ಯೂಸ್, ಚಹಾ ಅಂಗಡಿ, ಹಣ್ಣು-ತರಕಾರಿ ಅಂಗಡಿ ಸೇರಿದಂತೆ ವಿವಿಧ ಮಾದರಿಯ ಸಣ್ಣ ಗಾತ್ರದ ವ್ಯಾಪಾರಿಗಳಿಗೆ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆಯಿಂದ ಜಿಎಸ್ಟಿ ತೆರಿಗೆ ನೋಟಿಸ್ಗಳು ಬರುತ್ತಿರುವ ಹಿನ್ನೆಲೆಯಲ್ಲಿ ನಗರ ದಲ್ಲಿನ ಅನೇಕ ವ್ಯಾಪಾರಿಗಳು ಯುಪಿಐ ಮೂಲಕ ಹಣ ಸ್ವೀಕರಿಸುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಅಂಗಡಿಗಳಲ್ಲಿನ ಟೇಬಲ್ ಮೇಲೆ ರಾಜಾರೋಷವಾಗಿ ಕಾಣಿಸುತ್ತಿದ್ದ ಎರಡೂರು ಕ್ಯೂಆರ್ ಕೋಡ್ಗಳು ಕಳೆದ ಒಂದೆರೆಡು ದಿನಗಳಿಂದ ಮರೆಯಾಗುತ್ತಿವೆ. ಗೋಡೆಗೆ ಅಂಟಿಸಿದ್ದ ಕ್ಯೂಆರ್ ಕೋಡ್ಗಳನ್ನು ವ್ಯಾಪಾರಿಗಳು ಮರೆ ಮಾಡುತ್ತಿದ್ದಾರೆ. ಗ್ರಾಹಕರಿಂದ ನಗದನ್ನು ನಿರೀಕ್ಷೆ ಮಾಡುತ್ತಿದ್ದು, ಯುಪಿಐ ಪೇಮೆಂಟ್ ಮಾಡುತ್ತೇವೆ ಎನ್ನುವವರಿಗೆ ಮಾತ್ರ ಕ್ಯೂಆರ್ಕೋಡ್ ನೀಡುತ್ತಿದ್ದಾರೆ.
11:35 PM (IST) Jul 14
11:10 PM (IST) Jul 14
10:17 PM (IST) Jul 14
ಕಾರ್ಕಳದ ಉಮಿಕಲ್ ಬೆಟ್ಟದ ಪರಶುರಾಮ ಪ್ರತಿಮೆ ನಿರ್ಮಾಣದಲ್ಲಿ ಅಕ್ರಮದ ಆರೋಪದಡಿ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. ಪ್ರತಿಮೆಯನ್ನು ಹಿತ್ತಾಳೆಯಿಂದ ನಿರ್ಮಿಸಲಾಗಿದೆ ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖವಾಗಿದೆ.
08:02 PM (IST) Jul 14
07:40 PM (IST) Jul 14
ಮೈಸೂರು ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಏರಿಕೆ ಕಾಣುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮನೆಮಾಡಿದೆ. ಜನವರಿಯಿಂದ ಜೂನ್ ವರೆಗೆ 9,428 ಪ್ರಕರಣಗಳು ವರದಿಯಾಗಿದ್ದು, ಮಕ್ಕಳು, ಹದಿಹರೆಯದವರು ಮತ್ತು ವಯಸ್ಕರು ಸೇರಿದಂತೆ ಎಲ್ಲಾ ವಯೋಮಾನದವರೂ ಇದಕ್ಕೆ ತುತ್ತಾಗಿದ್ದಾರೆ.
06:49 PM (IST) Jul 14
04:35 PM (IST) Jul 14
04:06 PM (IST) Jul 14
ಭಟ್ಕಳದಲ್ಲಿ ಬಾಂಬ್ ಸ್ಫೋಟದ ಬೆದರಿಕೆ ಇಮೇಲ್ ಬಂದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ನಿತಿನ್ ಶರ್ಮಾ ಅಲಿಯಾಸ್ ಖಾಲಿದ್ ಎಂಬಾತನನ್ನು ಬಂಧಿಸಲಾಗಿದ್ದು, ಈತ ಹಲವು ರಾಜ್ಯಗಳಲ್ಲಿ ಇದೇ ರೀತಿಯ ಬೆದರಿಕೆ ಹಾಕಿದ್ದಾನೆ ಎಂದು ತಿಳಿದುಬಂದಿದೆ.
03:42 PM (IST) Jul 14
ಬಹುಭಾಷಾ ನಟಿ ಡಾ. ಬಿ. ಸರೋಜಾದೇವಿಯವರ ಅಂತ್ಯಕ್ರಿಯೆ ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ನೆರವೇರಲಿದೆ. ತಮ್ಮ ತವರೂರಿನಲ್ಲಿ ಮಾವಿನ ತೋಟದ ಪಕ್ಕದಲ್ಲಿರುವ ತಾಯಿಯ ಸಮಾಧಿ ಪಕ್ಕದಲ್ಲಿಯೇ ಅಂತ್ಯಕ್ರಿಯೆ ನಡೆಸಲು ಕುಟುಂಬ ಚಿಂತನೆ ನಡೆಸಿದೆ.
03:30 PM (IST) Jul 14
ಬೆಂಗಳೂರು ನಗರದ ಅಭಿವೃದ್ಧಿ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಂಸದ ತೇಜಸ್ವಿ ಸೂರ್ಯ, ಒಂದು ವರ್ಷದಲ್ಲಿ ನಗರವನ್ನು ಅಭಿವೃದ್ಧಿಪಡಿಸುವುದಾಗಿ ಸವಾಲು ಹಾಕಿದ್ದಾರೆ. ಬೆಂಗಳೂರು ಸುರಂಗ ರಸ್ತೆ ಯೋಜನೆಯ ವೆಚ್ಚದ ಬಗ್ಗೆಯೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
02:55 PM (IST) Jul 14
02:54 PM (IST) Jul 14
ಬೆಂಗಳೂರಿನಲ್ಲಿ 18,500 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸುರಂಗ ಮಾರ್ಗವು ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಡುತ್ತಿದೆ ಎಂದು ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ. ಈ ಯೋಜನೆಯು ಕೆಲವೇ ಕೋಟ್ಯಧಿಪತಿಗಳಿಗೆ ಮಾತ್ರ ಉಪಯೋಗವಾಗಲಿದ್ದು, ಜನರ ತೆರಿಗೆ ಹಣ ದುರುಪಯೋಗವಾಗುತ್ತಿದೆ
02:12 PM (IST) Jul 14
01:38 PM (IST) Jul 14
12:24 PM (IST) Jul 14
ನಟಿ ಬಿ.ಸರೋಜಾ ದೇವಿ ಅವರ ನಿಧನಕ್ಕೆ ಜಗ್ಗೇಶ್ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಟಿ ಸರೋಜಾ ದೇವಿ ಕನ್ನಡ ಚಿತ್ರರಂಗಕ್ಕಿಂತ ತಮಿಳು ಸಿನಿಮಾದಲ್ಲಿಯೇ ಹೆಚ್ಚು ಖ್ಯಾತಿ ಗಳಿಸಿದ್ದಾರೆ. ಆದರೆ, ತಮಿಳುನಾಡಿನಲ್ಲಿ ಸರೋಜಾದೇವಿಯ ವೈಯ್ಯಾರದ ಬಗ್ಗೆ ಜನರ ಅಭಿಪ್ರಾಯ ಏನಿದೆ ಎಂಬುದನ್ನು ನಟ ಜಗ್ಗೇಶ್ ಹೇಳಿದ್ದಾರೆ.
11:58 AM (IST) Jul 14
11:57 AM (IST) Jul 14
11:43 AM (IST) Jul 14
ರಾಯಚೂರಿನಲ್ಲಿ ಪತ್ನಿಯಿಂದ ನದಿಗೆ ತಳ್ಳಲ್ಪಟ್ಟ ಗಂಡ ತಾತಪ್ಪ, ಸ್ಥಳೀಯರ ಸಹಕಾರದಿಂದ ಪ್ರಾಣ ಉಳಿಸಿಕೊಂಡು ಬದುಕಿ ಬಂದಿದ್ದಾನೆ. ಇದೀಗ ಆತನನ್ನು 2025ರಲ್ಲಿ ಹೆಂಡತಿಯ ಕೊಲೆ ಪ್ರಯತ್ನದ ಬಳಿಕವೂ ಬದುಕುಳಿದ ಏಕೈಕ ಗಂಡ ಎಂದು ಕರೆಯಲಾಗುತ್ತಿದೆ. ಹೆಂಡತಿಯ ಸಂಬಂಧದ ಕುರಿತು ದಿಟ್ಟ ನಿರ್ಧಾರ ಕೈಗೊಂಡಿದ್ದಾನೆ.
10:58 AM (IST) Jul 14
10:02 AM (IST) Jul 14
ಕನ್ನಡದ ಹಿರಿಯ ನಟಿ ಬಿ ಸರೋಜಾ ದೇವಿ ಇನ್ನಿಲ್ಲ. ವಯೋಸಹಜ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ 87 ವರ್ಷ ವಯಸ್ಸಾಗಿತ್ತು.
09:51 AM (IST) Jul 14
09:45 AM (IST) Jul 14
ಲೋಕನಾಥಪುರದ ಸರ್ಕಾರಿ ಶಾಲೆಯ ೮ನೇ ತರಗತಿಯ ವಿದ್ಯಾರ್ಥಿನಿ ಸಿಂಧೂರ ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದು ತುಳುವಿನಕೊಪ್ಪ ಗ್ರಾಮ ಪಂಚಾಯಿತಿಯ ಮಲಗಾರು ಗ್ರಾಮದ ರಸ್ತೆಯ ಅವ್ಯವಸ್ಥೆ ಬಗ್ಗೆ ವಿವರಿಸಿದ್ದಾಳೆ.
08:43 AM (IST) Jul 14
ಉಪೇಂದ್ರ ಸಿನಿಮಾ ರೀತಿ ರಾಜ್ಯ ಬಿಜೆಪಿ ನಾಯಕರು ಜೂನಿಯರ್ ಖರ್ಗೆಗೆ ‘ಐ ಲವ್ ಯು’ ಅಂತಿದ್ದಾರಂತೆ
08:25 AM (IST) Jul 14
08:07 AM (IST) Jul 14
07:17 AM (IST) Jul 14
ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ್ ಕಣ್ಣಿ ಅವರನ್ನು ಮಾದಕ ದ್ರವ್ಯ ಸಾಗಣಿಕೆ ಪ್ರಕರಣದಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದಾರೆ. 120ಕ್ಕೂ ಹೆಚ್ಚು ನಿಷೇಧಿತ ಎನ್ ರೆಕ್ಸ್ ಬಾಟಲ್ಗಳನ್ನು ಸಾಗಿಸುತ್ತಿದ್ದಾಗ ಬಂಧನಕ್ಕೊಳಗಾಗಿದ್ದಾರೆ. ಈ ಘಟನೆ ಕಲಬುರಗಿ ಭಾರೀ ಸಂಚಲನ ಮೂಡಿಸಿದೆ.