Published : Apr 15, 2026, 06:45 AM ISTUpdated : Apr 15, 2026, 11:21 PM IST

Karnataka News Live: ಸಿಎಂ ಸಾಹೆಬ್ರೇ, ಸಿಎಂ ಸಾಹೆಬ್ರೇ ಎಂದು ಕೂಗಿ ಕೂಗಿ ಏನ್​ ಹೇಳಿದ್ರು ನೋಡಿ ಈ ಯುವತಿ

ಸಾರಾಂಶ

ದಾವಣಗೆರೆ: ವಚನಾನಂದ ಸ್ವಾಮೀಜಿಗೆ ನೈತಿಕತೆ ಇದ್ದರೆ ತಕ್ಷಣವೇ ಹರಿಹರ ಪಂಚಮಸಾಲಿ ಮಠವನ್ನು ತೊರೆಯಲಿ. ಇಲ್ಲದಿದ್ದರೆ ಮಠದಿಂದ ಹೇಗೆ ಖಾಲಿ ಮಾಡಿಸಬೇಕೆಂಬುದೂ ನಮಗೆ ಗೊತ್ತಿದೆ. ಕಾದು ನೋಡಿ ಎಂದು ಪೀಠದ ಟ್ರಸ್ಟಿ ಚಂದ್ರಶೇಖರ ಪೂಜಾರ ಹೇಳಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಪೀಠಾಧ್ಯಕ್ಷರಾಗಿದ್ದ ವಚನಾನಂದ ಶ್ರೀಗಳ ಆಚಾರ, ವಿಚಾರ, ನಡೆ, ನುಡಿಗಳನ್ನು ತಿದ್ದಿಕೊಳ್ಳಲು ಹಲವಾರು ಸಲ ಹೇಳಿದ್ದರೂ ಕಿವಿಗೊಡದ ಹಿನ್ನೆಲೆಯಲ್ಲಿ ಪೀಠದಿಂದ ಉಚ್ಚಾಟಿಸಿದ್ದು, ತಕ್ಷಣವೇ ಮಠದಿಂದ ಜಾಗ ಖಾಲಿ ಮಾಡಬೇಕು ಎಂದರು.

11:21 PM (IST) Apr 15

ಸಿಎಂ ಸಾಹೆಬ್ರೇ, ಸಿಎಂ ಸಾಹೆಬ್ರೇ ಎಂದು ಕೂಗಿ ಕೂಗಿ ಏನ್​ ಹೇಳಿದ್ರು ನೋಡಿ ಈ ಯುವತಿ

ಬೆಂಗಳೂರಿನ ವಿಪರೀತ ಬಿಸಿಲಿನಲ್ಲಿ ಹೆಲ್ಮೆಟ್ ಧರಿಸುವ ಕಷ್ಟದ ಬಗ್ಗೆ ಯುವತಿಯೊಬ್ಬಳು ರೀಲ್ಸ್​ ಮೂಲಕ ಸಿಎಂಗೆ ಮನವಿ ಮಾಡಿದ್ದಾಳೆ. ಈ ಬಿಸಿಲಿಗೆ ಕೂದಲು ಉದುರುತ್ತಿದೆ, ನಿಯಮ ಸಡಿಲಗೊಳಿಸಿ ಎಂದು ಕೇಳಿಕೊಂಡಿದ್ದು, ಈ ವಿಡಿಯೋ ವೈರಲ್ ಆಗಿದೆ.
Read Full Story

10:55 PM (IST) Apr 15

ಚಿನ್ನಸ್ವಾಮಿಯಲ್ಲಿ RCB 'ರಾಜ' ದರ್ಬಾರ್ - ಲಕ್ನೋ ವಿರುದ್ಧ ಬೆಂಗಳೂರಿಗೆ ಭರ್ಜರಿ ಜಯ; ಅಂಕಪಟ್ಟಿಯಲ್ಲಿ ಅಗ್ರಸ್ಥಾನ!

ತವರಿನಲ್ಲಿ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧ 5 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.  ಬ್ಯಾಟರ್‌ಗಳ ಸ್ಫೋಟಕ ಆಟದಿಂದ ಸುಲಭವಾಗಿ ಗುರಿ ತಲುಪಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

Read Full Story

09:11 PM (IST) Apr 15

ಕುರ್ಚಿ ಕದನದ ಕಾಂಗ್ರೆಸ್ ಸರ್ಕಾರ ಶೀಘ್ರವೇ ಪತನ - ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ

ಸಿಎಂ ಸಿದ್ದರಾಮಯ್ಯ ಹಾಗೂ ದೆಹಲಿ ಹೈಕಮಾಂಡ್ ಬಳಿ ತೀವ್ರ ಲಾಬಿ ಮಾಡುತ್ತಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇನ್ನೆಷ್ಟು ದಿನ ಇರುತ್ತದೋ ಗೊತ್ತಿಲ್ಲ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

Read Full Story

09:06 PM (IST) Apr 15

ಗದಗ - ಮುಂಡರಗಿಯ ಉದ್ಯಾನದಲ್ಲಿ ಹಸಿರೇ ಇಲ್ಲ! ಹೀಗೆ ಮಾಡಿದ್ರೆ ಕಳೆದುಹೋದ ಆ ವೈಭವ ಮರಳೋದು ಹೇಗೆ?

ಒಂದು ಕಾಲದಲ್ಲಿ ಎಲ್ಲರ ಆಕರ್ಷಣೆಯ ಕೇಂದ್ರವಾಗಿದ್ದ ಮುಂಡರಗಿಯ ಪುರಸಭೆ ಉದ್ಯಾನವನವು ಇಂದು ನಿರ್ಲಕ್ಷ್ಯದಿಂದಾಗಿ ಬಿಕೋ ಎನ್ನುತ್ತಿದೆ. ಹಸಿರು, ಕಾರಂಜಿ, ಮಕ್ಕಳ ಆಟಿಕೆಗಳಿಲ್ಲದೆ ಪಾಳುಬಿದ್ದಿದ್ದು, ಅನೈತಿಕ ಚಟುವಟಿಕೆಗಳ ತಾಣವಾಗಿದೆ. ಉದ್ಯಾನವನ್ನು ಪುನಶ್ಚೇತನಗೊಳಿಸಿ, ಸಾರ್ವಜನಿಕ ಬಳಕೆಗೆ ಅನುಕೂಲ ಮಾಡಿಕೊಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
Read Full Story

08:42 PM (IST) Apr 15

ಉಡುಪಿ - ಮೊಬೈಲ್ ಚಾಟಿಂಗ್ ಪ್ರಶ್ನಿಸಿದ ಪತ್ನಿಗೆ ದೈಹಿಕ ಹಲ್ಲೆ, ಜೀವ ಬೆದರಿಕೆ ಹಾಕಿದ ಪತಿ, ಠಾಣೆ ಮೆಟ್ಟಲೇರಿದ ಹೆಂಡತಿ

ಕಾರ್ಕಳದಲ್ಲಿ, ಮೊಬೈಲ್ ಚಾಟಿಂಗ್ ಬಗ್ಗೆ ಪ್ರಶ್ನಿಸಿದ್ದಕ್ಕೆ ಪತ್ನಿಗೆ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಿ, ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ಪತಿ, ಅತ್ತೆ ಮತ್ತು ಮಾವನ ವಿರುದ್ಧ ಪ್ರಕರಣ ದಾಖಲಾಗಿದೆ. ಗರ್ಭಿಣಿಯಾಗಿದ್ದಾಗಲೂ ಆರೈಕೆ ಮಾಡದೆ, ಮದ್ಯಪಾನ ಮಾಡಿ ಹಲ್ಲೆ ನಡೆಸಿದ್ದಾಗಿ ಪತ್ನಿ ದೂರಿನಲ್ಲಿ ತಿಳಿಸಿದ್ದಾರೆ.
Read Full Story

08:16 PM (IST) Apr 15

ಕೈ-ಕಮಲ-ದಳಕ್ಕೆ ಒಲಿದ 'ಪರಪ್ಪನ ಅಗ್ರಹಾರ' - ರಕ್ಷಕರಿಗೇ ಸುತ್ತಿಕೊಂಡ ಕಾನೂನು ಕುಣಿಕೆ!

ಕರ್ನಾಟಕದ ಮೂರು ಪಕ್ಷಗಳಾದ ಜೆಡಿಎಸ್, ಕಾಂಗ್ರೆಸ್, ಮತ್ತು ಬಿಜೆಪಿಯ ಪ್ರಭಾವಿ ನಾಯಕರು ಗಂಭೀರ ಅಪರಾಧ ಪ್ರಕರಣಗಳಲ್ಲಿ ಸಿಲುಕಿದ್ದಾರೆ. ಅ*ತ್ಯಾಚಾ*ರ, ಕೊಲೆ ಸಂಚಿನಂತಹ ಆರೋಪಗಳಿಂದಾಗಿ ಪ್ರಜ್ವಲ್ ರೇವಣ್ಣ, ವಿನಯ್ ಕುಲಕರ್ಣಿ, ಮತ್ತು ಬೈರತಿ ಬಸವರಾಜ್‌ರಂತಹ ನಾಯಕರು ವಿಧಾನಸೌಧದ ಬದಲು ಜೈಲು ಸೇರುವಂತಾಗಿದೆ.

Read Full Story

08:11 PM (IST) Apr 15

ಹಿರಿಯರ ಜೊತೆ 5 ಹೊಸಬರಿಗೂ ಮಂತ್ರಿ ಮಾಡ್ಲಿ - ಶಾಸಕ ಬಸವರಾಜ ವಿ. ಶಿವಗಂಗಾ

ಸಚಿವ ಸ್ಥಾನ ಕೊಡುವಂತೆ ಕೇಳಿದರೆ ತಾನೇ ಪಕ್ಷವು ಕೊಡುವುದು. ಹಾಗಾಗಿಯೇ ನಮ್ಮ ಹಿರಿಯ ಶಾಸಕರು ದೆಹಲಿಗೆ ತೆರಳಿದ್ದಾರೆ ಎಂದು ಚನ್ನಗಿರಿ ಕಾಂಗ್ರೆಸ್ ಶಾಸಕ ಬಸವರಾಜ ವಿ. ಶಿವಗಂಗಾ ಶಾಸಕರ ದಿಲ್ಲಿ ಪ್ರವಾಸವನ್ನು ಸಮರ್ಥಿಸಿಕೊಂಡಿದ್ದಾರೆ.

Read Full Story

07:44 PM (IST) Apr 15

ಯೋಗೇಶ್ ಗೌಡ ಹತ್ಯೆಯಲ್ಲಿ ವಿನಯ್ ಕುಲಕರ್ಣಿ ಕೊಲೆಗಾರ, ಸುಳ್ಳು ಸಾಕ್ಷಿ ನೀಡಿದವರ ವಿರುದ್ಧ ಕ್ರಮಕ್ಕೆ ಕೋರ್ಟ್ ಸೂಚನೆ

ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ, ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ 17 ಮಂದಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ದೋಷಿಗಳೆಂದು ಘೋಷಿಸಿದೆ. ದೋಷಿಗಳನ್ನು ತಕ್ಷಣವೇ ವಶಕ್ಕೆ ಪಡೆಯಲು ಸಿಬಿಐಗೆ ನ್ಯಾಯಾಲಯ ನಿರ್ದೇಶನ ನೀಡಿದ್ದು, ಶಿಕ್ಷೆಯ ಪ್ರಮಾಣವನ್ನು ಏಪ್ರಿಲ್ 16 ರಂದು ಪ್ರಕಟಿಸಲಾಗುವುದು. ಸುಳ್ಳು ಸಾಕ್ಷಿ ನೀಡಿದವರ ವಿರುದ್ಧವೂ ಕ್ರಮಕ್ಕೆ ಆದೇಶಿಸಲಾಗಿದೆ.
Read Full Story

07:19 PM (IST) Apr 15

ಕೇಸ್ ದಾಖಲಾದ ಬಳಿಕ ಜರ್ರನೆ ಜ್ವರದಂತೆ ಮೇಲಕ್ಕೇರಿದ 'ಬಿಗ್ ಬಾಸ್' ವಿಷ್ಣುಪ್ರಿಯಾ ಅಕೌಂಟ್ ಬ್ಯಾಲೆನ್ಸ್!

ಕೇವಲ ಕೆಲವೇ ದಿನಗಳಲ್ಲಿ ಸಬ್‌ಸ್ಕ್ರೈಬರ್‌ಗಳ ಸಂಖ್ಯೆ 5,600 ದಾಟಿದೆ! ಈಗ ಅವರ ಮಾಸಿಕ ಆದಾಯ ಬರೋಬ್ಬರಿ 21 ಲಕ್ಷ ರೂಪಾಯಿಗಳಿಗೂ ಅಧಿಕವಾಗಿದೆ. ಅಂದರೆ ಒಂದೇ ಒಂದು ವಿವಾದದಿಂದ ಅವರ ತಿಂಗಳ ಆದಾಯದಲ್ಲಿ 14 ಲಕ್ಷ ರೂಪಾಯಿ ಲಾಭವಾಗಿದೆ! ಇದನ್ನು ನೋಡಿ ನೆಟ್ಟಿಗರು ಏನಂತಿದಾರೆ ನೋಡಿ..

Read Full Story

06:50 PM (IST) Apr 15

ಪರಪ್ಪನ ಅಗ್ರಹಾರ ಜೈಲಿಗೆ ವಿನಯ್ ಕುಲಕರ್ಣಿ, ಆರ್ಡರ್ ಶೀಟ್‌ಗೆ ಕಾಯುತ್ತಿರುವ ಪೊಲೀಸ್

ಪರಪ್ಪನ ಅಗ್ರಹಾರ ಜೈಲಿಗೆ ವಿನಯ್ ಕುಲಕರ್ಣಿ, ಆರ್ಡರ್ ಶೀಟ್‌ಗೆ ಕಾಯುತ್ತಿರುವ ಪೊಲೀಸ್, ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ದೋಷಿ ಎಂದು ಕೋರ್ಟ್ ಮಹತ್ವದ ತೀರ್ಪು ನೀಡಿದೆ. 

Read Full Story

06:48 PM (IST) Apr 15

ತೀರ್ಪು ಪ್ರಕಟವಾಗುತ್ತಿದ್ದಂತೆ ಮೂವರು ಮಕ್ಕಳ ಜೊತೆ ಕೋರ್ಟ್‌ ಹಾಲ್‌ನಲ್ಲೇ ಕಣ್ಣೀರಿಟ್ಟ ಶಾಸಕ ವಿನಯ್‌ ಕುಲಕರ್ಣಿ

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಧಾರವಾಡ ಗ್ರಾಮೀಣ ಶಾಸಕ ವಿನಯ್ ಕುಲಕರ್ಣಿ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದ್ದು, 2 ವರ್ಷಕ್ಕಿಂತ ಅಧಿಕ ಶಿಕ್ಷೆಯಾದರೆ ಅವರ ಶಾಸಕ ಸ್ಥಾನ ಅನರ್ಹಗೊಳ್ಳಲಿದೆ. 

Read Full Story

06:36 PM (IST) Apr 15

ಜಾತಿ, ಧರ್ಮದ ಹೆಸರಿನಲ್ಲಿ ರಾಜಕೀಯ ವ್ಯವಸ್ಥೆ ಹದಗೆಟ್ಟಿದೆ - ಬಸವರಾಜ ರಾಯರೆಡ್ಡಿ

ನಾಯಿ, ಬೆಕ್ಕುಗಳನ್ನು ತಮ್ಮ ಮಲಗುವ ಬೆಡ್ ಮೇಲೆ ಮಲಗಿಸಿಕೊಳ್ಳುತ್ತಾರೆ. ಆದರೆ ಶೋಷಿತ ವರ್ಗದ ಜನರಿಗೆ ದೇವಸ್ಥಾನ, ಮನೆ ಪ್ರವೇಶ ಇಲ್ಲವೆಂಬುದು ನ್ಯಾಯವೇ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಪ್ರಶ್ನಿಸಿದರು.

Read Full Story

06:23 PM (IST) Apr 15

ವಿನಯ್ ಕುಲಕರ್ಣಿ ಕೊಲೆಗಾರ - 40 ಎಕರೆ ಜಮೀನು ತಕರಾರು, ರಾಜಕೀಯ ದ್ವೇಷಕ್ಕೆ ಕುಟುಂಬದ ಆಧಾರವನ್ನೇ ಮುಗಿಸಿದ ಕಥೆ!

ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ, ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ 17 ಮಂದಿಯನ್ನು ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದೆ. ರಾಜಕೀಯ ಮತ್ತು ಆಸ್ತಿ ವಿವಾದದ ಹಿನ್ನೆಲೆಯಲ್ಲಿ ನಡೆದ ಈ ಕೊಲೆಯ ತನಿಖೆಯನ್ನು ಸಿಬಿಐ ನಡೆಸಿತ್ತು, ಇದೀಗ ದಶಕದ ಬಳಿಕ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. 

Read Full Story

06:20 PM (IST) Apr 15

ಒಳ ಮೀಸಲಾತಿ ವಿಚಾರದಲ್ಲಿ ಸಮಾಜ ಒಡೆಯುವ ಯತ್ನ - ಸಚಿವ ಸತೀಶ್ ಜಾರಕಿಹೊಳಿ

ಒಳ ಮೀಸಲಾತಿ ವಿಚಾರದಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳು ಹಿಂದಿನಿಂದಲೂ ನಡೆಯುತ್ತಿವೆ. ಯಾವುದೋ ಕಾರಣವೊಂದನ್ನು ಮುಂದಿಟ್ಟು ಸಮಾಜದಲ್ಲಿ ಭಿನ್ನಾಭಿಪ್ರಾಯ ಸೃಷ್ಟಿಸುವುದು ನಡೆಯುತ್ತಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

Read Full Story

06:05 PM (IST) Apr 15

ಸಾಮಾಜಿಕ ನ್ಯಾಯದ ರಥವನ್ನು ಹಿಂದಕ್ಕೆ ಎಳೆಯಬಾರದು - ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಸಮಾಜದಲ್ಲಿನ ಜಡತ್ವ ಬಲಪಡಿಸುವ ಕೆಲಸದಲ್ಲಿ ತೊಡಗಿವೆ. ಹೀಗಾಗಿ ನಾವು ಸಂವಿಧಾನದಿಂದ ಸಾಮಾಜಿಕ ನ್ಯಾಯದ ರಥವನ್ನು ಮುಂದಕ್ಕೆ ಕೊಂಡೊಯ್ಯಬೇಕೆ ಹೊರತು ಹಿಂದಕ್ಕೆ ಎಳೆಯಬಾರದು’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Read Full Story

05:31 PM (IST) Apr 15

ಯೋಗೇಶ್ ಗೌಡ ಹತ್ಯೆ ಪ್ರಕರಣ - ಶಾಸಕ ವಿನಯ್ ಕುಲಕರ್ಣಿ ದೋಷಿ, ಕೋರ್ಟ್ ಬಿಗ್ ತೀರ್ಪು

ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ, ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ 21 ಆರೋಪಿಗಳ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅಂತಿಮ ತೀರ್ಪು ಪ್ರಕಟಿಸಿದೆ. 2016ರಲ್ಲಿ ನಡೆದ ಈ ಕೊಲೆಯು ಆಸ್ತಿ ವಿವಾದ ಮತ್ತು ರಾಜಕೀಯ ಪ್ರೇರಿತವಾಗಿದ್ದು, ಸಿಬಿಐ ತನಿಖೆಯ ನಂತರ ನ್ಯಾಯಾಲಯವು ಈ ಮಹತ್ವದ ತೀರ್ಪು ನೀಡಿದೆ.
Read Full Story

05:30 PM (IST) Apr 15

ಪ್ರೀತಿಗಾಗಿ ಪ್ರಾಣ ಬಿಟ್ಟ ಸತ್ಯವ್ವ - 12ನೇ ವಯಸ್ಸಿನಲ್ಲೇ ಮದುವೆ ಫಿಕ್ಸ್ ಮಾಡಿ ಮಗಳ ಬದುಕನ್ನೇ ಕಸಿದುಕೊಂಡ ಪೋಷಕರು

ಆಕೆಗೆ ಏನು ಅರಿಯದ ವಯಸ್ಸಲ್ಲಿ ಕುಟುಂಬದವರೇ ಮದ್ವೆ ನಿಶ್ಚಯ ಮಾಡಿದ್ದರು. ಆದರೆ ಹರೆಯಕ್ಕೆ ಕಾಲಿರಿಸಿದ ಆಕೆಗೆ ಬೇರೊಬ್ಬನ ಜತೆ ಪ್ರೀತಿಯಾಗಿತ್ತು. ಪ್ರೀತಿ ತಿಳಿಯುತ್ತಿದ್ದಂತೆ ಮದುವೆ ಮಾಡಿದ್ರು ಪೋಷಕರು ಆದರೆ ಪ್ರೀತಿಸಿದವನೊಂದಿಗೆ ಅಲ್ಲ. ಹೀಗಾಗಿ ತನ್ನ ಗಂಡನ ಬಿಟ್ಟು ಓಡಿ ಹೋದ ಆಕೆಯ ಕತೆ ಮುಂದೇನಾಯ್ತು…

Read Full Story

05:05 PM (IST) Apr 15

ತಿರುಮಲದಲ್ಲಿ ಖ್ಯಾತ ಖಳನಟ - ಪತ್ನಿ, ಮಗನ ಜೊತೆ ತಿಮ್ಮಪ್ಪನ ದರ್ಶನ ಪಡೆದ ಸೋನು ಸೂದ್

ನಟ ಸೋನು ಸೂದ್ ತಮ್ಮ ಪತ್ನಿ ಸೋನಾಲಿ ಮತ್ತು ಮಗ ಇಶಾಂತ್ ಜೊತೆ ತಿರುಮಲ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಮುಂಜಾನೆಯ ತೋಮಾಲ ಸೇವೆಯಲ್ಲಿ ಕುಟುಂಬ ಸಮೇತ ಭಾಗವಹಿಸಿದ್ದರು.

Read Full Story

05:04 PM (IST) Apr 15

ಕೆಪಿಸಿಸಿ ಶಿಸ್ತು ಉಲ್ಲಂಘನೆ - ಸಚಿವ ಜಮೀರ್ ಆಪ್ತೆಗೆ ಗೇಟ್‌ಪಾಸ್, ಉಪಾಧ್ಯಕ್ಷೆ ಸ್ಥಾನದಿಂದ ಉಚ್ಚಾಟನೆ!

ಕೆಪಿಸಿಸಿ ಶಿಸ್ತು ಸಮಿತಿಯು, ಸಚಿವ ಜಮೀರ್ ಅಹಮದ್ ಖಾನ್ ಬೆಂಬಲಿಗರಾದ ಯೂತ್ ಕಾಂಗ್ರೆಸ್ ಉಪಾಧ್ಯಕ್ಷೆ ಅಫ್ರಿನ್ ಖಾನ್ ಅವರನ್ನು ಪಕ್ಷದಿಂದ ಉಚ್ಚಾಟಿಸಿದೆ. ಶಾಸಕ ರಿಜ್ವಾನ್ ಅರ್ಷದ್ ವಿರುದ್ಧ 'ಮೀರ್ ಸಾದಿಕ್' ಎಂದು ಉಲ್ಲೇಖಿಸಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ.
Read Full Story

04:52 PM (IST) Apr 15

ಮಹಿಳಾ ಮೀಸಲಾತಿಯಿಂದ ರಾಜಕೀಯ ಚಿತ್ರಣವೇ ಬದಲು - ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ

ಮಹಿಳಾ ಮೀಸಲಾತಿ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಕ್ಕೆ ಬಂದಲ್ಲಿ ರಾಜಕೀಯ ಚಿತ್ರಣವೇ ಬದಲಾಗಲಿದೆ. ಕ್ಷೇತ್ರಗಳ ಮರು ವಿಂಗಡಣೆಯಾಗಲಿದೆ ಎಂದು ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

Read Full Story

04:35 PM (IST) Apr 15

ಕಿಚ್ಚ ಸುದೀಪ್‌ ಸೋದರಳಿಯನ ಮ್ಯಾಂಗೋ ಪಚ್ಚ ಚಿತ್ರದಲ್ಲಿ ಡಾಲಿ ಧನಂಜಯ - ಯಾವ ಪಾತ್ರ?

ಡಾಲಿ ಧನಂಜಯ ಪಾತ್ರದ ಚಿತ್ರೀಕರಣ ಮುಗಿದಿದೆ. ‘ಮ್ಯಾಂಗೋ ಪಚ್ಚ’ ಚಿತ್ರದ ಮುಂದುವರಿದ ಭಾಗ ಬರಲಿದೆ ಎನ್ನಲಾಗಿದ್ದು, ಡಾಲಿ ಧನಂಜಯ ಪಾತ್ರವೂ ಪಾರ್ಟ್‌ 2ಗೆ ಲೀಡ್‌ ಕೊಡುವಂತೆ ಚಿತ್ರೀಕರಣ ಮಾಡಲಾಗಿದೆಯಂತೆ.

Read Full Story

04:25 PM (IST) Apr 15

ಮುಂದಿನ ಟಾರ್ಗೆಟ್ ವದಂತಿಗೆ ಜಮೀರ್ ಅಹ್ಮದ್ ಖಾನ್ ಉತ್ತರ - ನಾನು ಪಕ್ಷದ ಸೇವಕ, ದೆಹಲಿಗೆ ಹೋಗಲ್ಲ!

ರಾಜ್ಯ ರಾಜಕೀಯದಲ್ಲಿ 'ಮುಂದಿನ ಟಾರ್ಗೆಟ್' ತಾವೇ ಎಂಬ ವದಂತಿಗಳ ಕುರಿತು ಸಚಿವ ಜಮೀರ್ ಅಹ್ಮದ್ ಖಾನ್ ಸ್ಪಷ್ಟನೆ ನೀಡಿದ್ದಾರೆ. ತಾವು ಸಿಎಂ ಮತ್ತು ಡಿಸಿಎಂ ಜೊತೆ ಚರ್ಚಿಸಿದ್ದು, ಜಾತಿ ರಾಜಕಾರಣ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ದೆಹಲಿಗೆ ಹೋಗದೆ ಕೇವಲ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗುವುದಾಗಿ ತಿಳಿಸಿದ್ದಾರೆ.
Read Full Story

04:18 PM (IST) Apr 15

ವಿಶ್ವ ವೇದಿಕೆಯಲ್ಲಿ ಯಶ್ ರಾಮಾಯಣ - ಸಿನಿಮಾಕಾನ್‌ನಲ್ಲಿ ರಾಕಿಂಗ್ ಸ್ಟಾರ್ ಭಾಗಿ

ವಿಶ್ವದಾದ್ಯಂತ ಚಿತ್ರಮಂದಿರಗಳ ಮಾಲೀಕರು ಮತ್ತು ವಿತರಕರು ಸೇರುವ ಅತಿದೊಡ್ಡ ವೇದಿಕೆಯಾದ ಸಿನಿಮಾಕಾನ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್ ಭಾಗಿಯಾಗಿ ‘ರಾಮಾಯಣ’ ಸಿನಿಮಾ ಪ್ರಸ್ತುತ ಪಡಿಸಿದ್ದಾರೆ.

Read Full Story

02:53 PM (IST) Apr 15

ಕರ್ನಾಟಕಕ್ಕೆ ಬಂದ ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ, ಕೇಂದ್ರಕ್ಕೆ ರಾಜ್ಯದ ಬಹುದೊಡ್ಡ ಬೇಡಿಕೆಗಳ ಲಿಸ್ಟ್

ಪ್ರಧಾನಿ ನರೇಂದ್ರ ಮೋದಿಯವರ ಬೆಂಗಳೂರು ಭೇಟಿ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಸಮಗ್ರ ಮನವಿ ಪತ್ರವನ್ನು ಸಲ್ಲಿಸಿದರು. ಈ ಮನವಿಯಲ್ಲಿ ಕೋಲಾರ ರೈಲ್ವೆ ಕೋಚ್ ಫ್ಯಾಕ್ಟರಿ, ಬೆಂಗಳೂರು ಉಪನಗರ ರೈಲು, ಮೇಕೆದಾಟು ಯೋಜನೆ, ಮತ್ತು ಬಾಕಿ ಇರುವ ಅನುದಾನ ಬಿಡುಗಡೆ ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳನ್ನು ಮುಂದಿಡಲಾಗಿದೆ.
Read Full Story

01:34 PM (IST) Apr 15

ಬಿಸಿಲ ಧಗೆಯ ನಡುವೆ ರಾಯಚೂರಲ್ಲೂ ಮಾಂಸದಂಧೆ - ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ - ಮೂವರು ಪಿಂಪ್‌ಗಳು ಅಂದರ್

ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ, ಕಿಂಗ್‌ಪಿನ್ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಬೇರೆ ಜಿಲ್ಲೆಗಳಿಂದ ಹುಡುಗಿಯರನ್ನು ಕರೆತಂದು ಈ ಅಕ್ರಮ ದಂಧೆ ನಡೆಸುತ್ತಿದ್ದರು.

Read Full Story

12:31 PM (IST) Apr 15

ದೆಹಲಿಯಲ್ಲಿ ವರಿಷ್ಠರ ಭೇಟಿಗೆ ಕಾದು ಕಾದು ಸುಸ್ತು, ದಾರಿ ಮಧ್ಯೆ ಅಯೋಧ್ಯೆಯತ್ತ ರಾಜ್ಯ ಕೈ ಶಾಸಕರ ಪ್ರಯಾಣ ರಾಮನ ದರ್ಶನ!

ಸಚಿವ ಸಂಪುಟ ಪುನರ್‌ರಚನೆ ಚರ್ಚೆಯ ನಡುವೆ ದೆಹಲಿಗೆ ತೆರಳಿದ್ದ ಕಾಂಗ್ರೆಸ್ ಹಿರಿಯ ಶಾಸಕರಿಗೆ ಹೈಕಮಾಂಡ್ ನಾಯಕರ ಭೇಟಿ ಸಾಧ್ಯವಾಗಿಲ್ಲ. ಹೀಗಾಗಿ, ಶಾಸಕರು ಅಯೋಧ್ಯೆಗೆ ತೆರಳಿ ರಾಮಲಲ್ಲಾ ದರ್ಶನ ಪಡೆದು, ಮತ್ತೆ ದೆಹಲಿಗೆ ಮರಳಿ ವರಿಷ್ಠರನ್ನು ಭೇಟಿಯಾಗುವ ನಿರೀಕ್ಷೆಯಲ್ಲಿದ್ದಾರೆ.
Read Full Story

12:07 PM (IST) Apr 15

ಡ್ಯಾನ್ಸ್ ಮಾಡ್ತಿರುವಾಗಲೇ ಜಾರಿದ ಭಾರ್ಗವಿ LLB ಸೀರಿಯಲ್ ನಟ ಮನೋಜ್ ಕುಮಾರ್ ಲುಂಗಿ

ಕಿರುತೆರೆ ನಟ ಮನೋಜ್ ಕುಮಾರ್, ನಟಿ ಅನುಷಾ ರಾಜ್ ಜೊತೆ ರೀಲ್ಸ್ ಮಾಡುವಾಗ ಅವರ ಲುಂಗಿ ಜಾರಿದೆ. ಈ 'Behind the scenes' ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಲಕ್ಷಾಂತರ ವೀಕ್ಷಣೆ ಪಡೆದಿದೆ. ಮನೋಜ್ 'ಭಾರ್ಗವಿ ಎಲ್‌ಎಲ್‌ಬಿ' ಸೀರಿಯಲ್‌ನ ನಾಯಕನಾಗಿಯೂ ಪ್ರಸಿದ್ಧರಾಗಿದ್ದಾರೆ.
Read Full Story

11:40 AM (IST) Apr 15

ನಿಮ್ಮ ಅಪ್ಪ ಅಮ್ಮಂದ?.. ಬೀಪ್ ಕಾಮೆಂಟ್ ಮಾಡಿದ ನೆಟ್ಟಿಗನನ್ನು 'ಈ ಮಟ್ಟಿಗೆ' ತರಾಟೆಗೆ ತೆಗೆದುಕೊಂಡ ವರ್ಷ ಕಾವೇರಿ!

ಬಹುತೇಕ ಎಲ್ಲಾ ಸಂಗತಿಗಳಲ್ಲಿ ಕ್ಲಾರಿಟಿ ಕೊಡುವ ಜಾಯಮಾನದ ನಟಿ, ಸೋಷಿಯಲ್ ಮೀಡಿಯಾ ಸ್ಟಾರ್ ವರ್ಷಾ ಕಾವೇರಿ, ಇದೀಗ ಸೋಷಿಯಲ್ ಮೀಡಿಯಾದಲ್ಲಿ ನೆಟ್ಟಿಗನೊಬ್ಬನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈಗೇನು ಹೇಳಿದ್ದಾರೆ ನೋಡಿ.. 

Read Full Story

11:37 AM (IST) Apr 15

ಚಿಕ್ಕಮಗಳೂರು - ಕುಡಿದ ಮತ್ತಿನಲ್ಲಿ ಮೆರವಣಿಗೆ ಮೇಲೆ ಕಾರು ಚಾಲನೆ - 7 ವರ್ಷದ ಸಾನ್ವಿ ಸಾವು ಹಲವರಿಗೆ ಗಾಯ

ಚಿಕ್ಕಮಗಳೂರು ತಾಲೂಕಿನ ಬಿಳೇಕಲ್ಲು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಕುಡಿದ ಅಮಲಿನಲ್ಲಿದ್ದ ಚಾಲಕನೊಬ್ಬ ಕಾರು ಹರಿಸಿದ್ದಾನೆ. ಈ ದುರ್ಘಟನೆಯಲ್ಲಿ 7 ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
Read Full Story

11:05 AM (IST) Apr 15

ಧಾರವಾಡದಲ್ಲಿ ಕಿಡಿಗೇಡಿಗಳ ಅಟ್ಟಹಾಸ - ಮನೆಗೆ ಕಲ್ಲೆಸೆದು ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗಳಿಗೆ ಬೆಂಕಿ

ಧಾರವಾಡದ ಮೆಹಬೂಬ್ ನಗರದಲ್ಲಿ ದುಷ್ಕರ್ಮಿಗಳು ಮನೆಯೊಂದರ ಮೇಲೆ ಕಲ್ಲು ತೂರಾಟ ನಡೆಸಿ, ಹೊರಗೆ ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ಬೆಂಕಿ ಹಚ್ಚಿದ್ದಾರೆ. ಈ ಘಟನೆಯಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗಾಗಿ ತನಿಖೆ ನಡೆಸುತ್ತಿದ್ದಾರೆ.
Read Full Story

11:01 AM (IST) Apr 15

Uttar Kannada - ತೆಂಗಿನ ಮರದ ಪೊಟರೆಯೊಳಗೆ ಸಿಲುಕಿಕೊಂಡಿದ್ದ ಬೃಹತ್ ನಾಗರ ಹಾವಿನ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಘಟನೆಗಳು ನಡೆದಿವೆ. ಅಂಕೋಲಾದಲ್ಲಿ ತೆಂಗಿನ ಮರದ ಪೊಟರೆಯಲ್ಲಿ ಸಿಲುಕಿದ್ದ ನಾಗರ ಹಾವನ್ನು ರಕ್ಷಿಸಲಾಗಿದ್ದರೆ, ಕುಮಟಾದಲ್ಲಿ ಸಣ್ಣ ಹಾವನ್ನು ನುಂಗಿದ್ದ ಬೃಹತ್ ಕಾಳಿಂಗ ಸರ್ಪವನ್ನು ರಕ್ಷಿಸಿ ಕಾಡಿಗೆ ಬಿಡಲಾಗಿದೆ.
Read Full Story

10:30 AM (IST) Apr 15

ಫೋನ್ ಇಲ್ಲ, ಎಟಿಎಂ ಬಳಸುತ್ತಿಲ್ಲ - 100ಕ್ಕೂ ಹೆಚ್ಚು ನಗರಗಳಲ್ಲಿ ಹುಡುಕಾಡಿದರೂ ಪತ್ತೆಯಾಗದ ತನಿಷ್ಕಾ-ತೇಜಸ್ವಿನಿ

PUC girls missing in Bengaluru: ಬೆಂಗಳೂರಿನ ವಿದ್ಯಾರಣ್ಯಪುರದ ಇಬ್ಬರು ಪಿಯುಸಿ ವಿದ್ಯಾರ್ಥಿನಿಯರು 75 ದಿನಗಳಿಂದ ನಾಪತ್ತೆಯಾಗಿದ್ದಾರೆ. ಪೊಲೀಸ್ ವಿಶೇಷ ತಂಡವು ಮುಂಬೈ, ಕೇರಳ ಸೇರಿದಂತೆ 100ಕ್ಕೂ ಹೆಚ್ಚು ಕಡೆ ಹುಡುಕಾಡಿದರೂ ಯಾವುದೇ ಸುಳಿವು ಸಿಕ್ಕಿಲ್ಲ. ಇದು ಪೋಷಕರನ್ನು ಕಂಗಾಲಾಗುವಂತೆ ಮಾಡಿದೆ.

Read Full Story

10:14 AM (IST) Apr 15

Vijayapur Horror - 'ನಿನ್ನ ಮಗ ನಿನ್ನ ಹೋಲಿಕೆ ಇಲ್ಲ' ಎಂದು ಸ್ನೇಹಿತರು ಛೇಡಿಸಿದ್ದಕ್ಕೆ ಪತ್ನಿ ಮೇಲೆ ಅನುಮಾನಗೊಂಡು ಮಗನನ್ನು ಕೊಂದೇ ಬಿಟ್ಟ!

ವಿಜಯಪುರ ತಾಲೂಕಿನ ನಾಗಠಾಣದಲ್ಲಿ, ತನ್ನಂತೆ ಹೋಲಿಕೆ ಇಲ್ಲ ಎಂಬ ಕಾರಣಕ್ಕೆ ತಂದೆಯೇ ತನ್ನ 6 ವರ್ಷದ ಮಗನನ್ನು ಕೃಷ್ಣಾ ನದಿಗೆ ತಳ್ಳಿ ಹತ್ಯೆ ಮಾಡಿದ್ದಾನೆ. ಕೋಚಿಂಗ್‌ಗೆ ಸೇರಿಸುವುದಾಗಿ ನಂಬಿಸಿ ಕರೆದೊಯ್ದು ಈ ಕೃತ್ಯ ಎಸಗಿದ್ದು, ಪತ್ನಿ ನೀಡಿದ ದೂರಿನ ಮೇರೆಗೆ ಆರೋಪಿ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.
Read Full Story

08:46 AM (IST) Apr 15

ಜಮೀರ್ ನಮಗ್ಯಾಕೆ ಫಂಡಿಂಗ್ ಮಾಡ್ತಾನೆ? - ಎಸ್‌ಡಿಪಿಐ ರಾಜ್ಯಾಧ್ಯಕ್ಷರ ಅಬ್ದುಲ್‌ ಮಜೀದ್ ಪ್ರಶ್ನೆ

ಸಚಿವ ಜಮೀರ್ ಅಹ್ಮದ್ ಖಾನ್ ತಮ್ಮ ಪಕ್ಷಕ್ಕೆ ಫಂಡಿಂಗ್ ಮಾಡಿದ್ದಾರೆ ಎಂಬ ಆರೋಪವನ್ನು ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್‌ ಮಜೀದ್ ತಳ್ಳಿಹಾಕಿದ್ದಾರೆ. ದಾವಣಗೆರೆಯಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡದ ಕಾರಣ ಜನರು ಎಸ್‌ಡಿಪಿಐಗೆ ಮತ ಹಾಕಿದ್ದಾರೆ ಎಂದರು.

Read Full Story

08:45 AM (IST) Apr 15

Channapatna - ರೈಲ್ವೆ ಹಳಿ ಮೇಲೆ ಸಿಲಿಂಡರ್, ಸ್ವವ್ ಪತ್ತೆ - ರೈಲು ಸಂಚಾರದಲ್ಲಿ ವ್ಯತ್ಯಯ

ರೈಲ್ವೆ ಹಳಿ ಮೇಲೆ ಗ್ಯಾಸ್ ಸಿಲಿಂಡರ್, ಸ್ಟವ್ ಹಾಗೂ ಬಟ್ಟೆಗಳು ಕಾಣಿಸುವ ಮೂಲಕ ಕೆಲಕಾಲ ಆತಂಕ ಮೂಡಿಸಿದ್ದ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆ ಸೋಮವಾರ ಬೆಳಿಗ್ಗೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

Read Full Story

08:24 AM (IST) Apr 15

ಆಟೋ ಚಾಲಕರಿಗೆ ಉಚಿತ ಗ್ಯಾಸ್‌ ಕೂಪನ್, ಆಹಾರ ಕಿಟ್‌ ವಿತರಣೆ

ಕೋಲಾರದ ಮಾಲೂರಿನಲ್ಲಿ ಜೆಡಿಎಸ್ ಮುಖಂಡ ಹೂಡಿ ವಿಜಯ್ ಕುಮಾರ್ ಅವರು ಅಂಬೇಡ್ಕರ್ ಜಯಂತಿ ಅಂಗವಾಗಿ ಆಟೋ ಚಾಲಕರಿಗೆ ಉಚಿತ ಗ್ಯಾಸ್ ಕೂಪನ್‌ಗಳು ಮತ್ತು ಆಹಾರ ಕಿಟ್‌ಗಳನ್ನು ವಿತರಿಸಿದರು. ಗ್ಯಾಸ್ ಅಭಾವದ ಹಿನ್ನೆಲೆಯಲ್ಲಿ ಚಾಲಕರಿಗೆ ನೆರವಾಗುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

Read Full Story

08:07 AM (IST) Apr 15

ಪ್ರೇಮ ಪ್ರಕರಣಗಳೆಲ್ಲಾ ಲವ್ ಜಿಹಾದ್‌ಗಳಲ್ಲ - ಬಿಜೆಪಿ ಆರೋಪಕ್ಕೆ ಸಂಸದ ಹಿಟ್ನಾಳ ತಿರುಗೇಟು

ಕೊಪ್ಪಳದಲ್ಲಿನ ಹಿಂದು-ಮುಸ್ಲಿಂ ಪ್ರೇಮ ಪ್ರಕರಣಕ್ಕೆ ಲವ್ ಜಿಹಾದ್ ಪಟ್ಟ ಕಟ್ಟಲಾಗುತ್ತಿದ್ದು, ಇದು ರಾಜಕೀಯ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿದೆ. ಎಲ್ಲಾ ಪ್ರೇಮ ಪ್ರಕರಣಗಳು ಲವ್ ಜಿಹಾದ್ ಅಲ್ಲ ಎಂದು ಸಂಸದ ರಾಜಶೇಖರ ಹಿಟ್ನಾಳ ಹೇಳಿದ್ದಾರೆ.

Read Full Story

08:01 AM (IST) Apr 15

Karnataka cabinet reshuffle - 'ಸಿಎಂ ಆರ್ಥಿಕ ಸಲಹೆಗಾರ' ಎಂದು ಸುಮ್ನೆ ಹುದ್ದೆ ಕೊಟ್ಟಿದ್ದಾರೆ - ರಾಯರಡ್ಡಿ

ಮೇ 4ರ ನಂತರ ಸಚಿವ ಸಂಪುಟ ಪುನರ್‌ ರಚನೆಯಾಗುವ ಸಾಧ್ಯತೆಯಿದೆ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದ್ದಾರೆ. ಈಗಿರುವ 25 ಸಚಿವರನ್ನು ಕೈಬಿಟ್ಟು ಹೊಸಬರು ಮತ್ತು ಹಿರಿಯರಿಗೆ ಅವಕಾಶ ನೀಡಿದರೆ ಸರ್ಕಾರ ಇನ್ನಷ್ಟು ಕ್ರಿಯಾಶೀಲವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
Read Full Story

07:52 AM (IST) Apr 15

₹7.50 ಲಕ್ಷ ಮೌಲ್ಯದ ₹2000 ಖೋಟಾ ನೋಟು ಬದಲಿಸಿಕೊಳ್ಳಲು ಬೆಂಗಳೂರಿನ RBIಗೆ ಬಂದ; ಮುಂದೇನಾಯ್ತು?

ಚಲಾವಣೆ ಸ್ಥಗಿತಗೊಂಡಿರುವ ₹2000 ಮುಖಬೆಲೆಯ ಖೋಟಾ ನೋಟುಗಳನ್ನು ಆರ್‌ಬಿಐನಲ್ಲಿ ಬದಲಿಸಲು ಯತ್ನಿಸಿದ ವ್ಯಕ್ತಿಯನ್ನು ಬೆಂಗಳೂರಿನ ಹಲಸೂರು ಗೇಟ್‌ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ  ₹7.50 ಲಕ್ಷ ಮೌಲ್ಯದ 375 ನಕಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ.

Read Full Story

07:30 AM (IST) Apr 15

ಕಾಂಗ್ರೆಸ್ ಪದಾಧಿಕಾರಿ ಪಟ್ಟಿಯಲ್ಲಿ ಆರೆಎಸ್ಸೆಸ್‌ ಕಾರ್ಯಕರ್ತರ ಹೆಸರು! ಹೇಗೆ ಸೇರಿದವು? ಯಾರ ಬೆಂಬಲಿಗರು?

ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳ ಪಟ್ಟಿಯಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರ ಹೆಸರುಗಳು ಕಾಣಿಸಿಕೊಂಡು ಭಾರೀ ವಿವಾದ ಸೃಷ್ಟಿಯಾಗಿದೆ. ಬಿಜೆಪಿಯಿಂದ ಉಚ್ಛಾಟಿತರಾದ ಇವರ ನೇಮಕಾತಿಗೆ ಪಕ್ಷದೊಳಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ ಜಿಲ್ಲಾಧ್ಯಕ್ಷರು ಈ ನೇಮಕಾತಿಗೆ ತಡೆ ನೀಡಿದ್ದಾರೆ.

Read Full Story

More Trending News