LIVE NOW
Published : Apr 15, 2026, 06:45 AM ISTUpdated : Apr 15, 2026, 10:14 AM IST

Karnataka News Live: Vijayapur Horror - 'ನಿನ್ನ ಮಗ ನಿನ್ನ ಹೋಲಿಕೆ ಇಲ್ಲ' ಎಂದು ಸ್ನೇಹಿತರು ಛೇಡಿಸಿದ್ದಕ್ಕೆ ಪತ್ನಿ ಮೇಲೆ ಅನುಮಾನಗೊಂಡು ಮಗನನ್ನು ಕೊಂದೇ ಬಿಟ್ಟ!

ಸಾರಾಂಶ

ದಾವಣಗೆರೆ: ವಚನಾನಂದ ಸ್ವಾಮೀಜಿಗೆ ನೈತಿಕತೆ ಇದ್ದರೆ ತಕ್ಷಣವೇ ಹರಿಹರ ಪಂಚಮಸಾಲಿ ಮಠವನ್ನು ತೊರೆಯಲಿ. ಇಲ್ಲದಿದ್ದರೆ ಮಠದಿಂದ ಹೇಗೆ ಖಾಲಿ ಮಾಡಿಸಬೇಕೆಂಬುದೂ ನಮಗೆ ಗೊತ್ತಿದೆ. ಕಾದು ನೋಡಿ ಎಂದು ಪೀಠದ ಟ್ರಸ್ಟಿ ಚಂದ್ರಶೇಖರ ಪೂಜಾರ ಹೇಳಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಪೀಠಾಧ್ಯಕ್ಷರಾಗಿದ್ದ ವಚನಾನಂದ ಶ್ರೀಗಳ ಆಚಾರ, ವಿಚಾರ, ನಡೆ, ನುಡಿಗಳನ್ನು ತಿದ್ದಿಕೊಳ್ಳಲು ಹಲವಾರು ಸಲ ಹೇಳಿದ್ದರೂ ಕಿವಿಗೊಡದ ಹಿನ್ನೆಲೆಯಲ್ಲಿ ಪೀಠದಿಂದ ಉಚ್ಚಾಟಿಸಿದ್ದು, ತಕ್ಷಣವೇ ಮಠದಿಂದ ಜಾಗ ಖಾಲಿ ಮಾಡಬೇಕು ಎಂದರು.

10:14 AM (IST) Apr 15

Vijayapur Horror - 'ನಿನ್ನ ಮಗ ನಿನ್ನ ಹೋಲಿಕೆ ಇಲ್ಲ' ಎಂದು ಸ್ನೇಹಿತರು ಛೇಡಿಸಿದ್ದಕ್ಕೆ ಪತ್ನಿ ಮೇಲೆ ಅನುಮಾನಗೊಂಡು ಮಗನನ್ನು ಕೊಂದೇ ಬಿಟ್ಟ!

ವಿಜಯಪುರ ತಾಲೂಕಿನ ನಾಗಠಾಣದಲ್ಲಿ, ತನ್ನಂತೆ ಹೋಲಿಕೆ ಇಲ್ಲ ಎಂಬ ಕಾರಣಕ್ಕೆ ತಂದೆಯೇ ತನ್ನ 6 ವರ್ಷದ ಮಗನನ್ನು ಕೃಷ್ಣಾ ನದಿಗೆ ತಳ್ಳಿ ಹತ್ಯೆ ಮಾಡಿದ್ದಾನೆ. ಕೋಚಿಂಗ್‌ಗೆ ಸೇರಿಸುವುದಾಗಿ ನಂಬಿಸಿ ಕರೆದೊಯ್ದು ಈ ಕೃತ್ಯ ಎಸಗಿದ್ದು, ಪತ್ನಿ ನೀಡಿದ ದೂರಿನ ಮೇರೆಗೆ ಆರೋಪಿ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.
Read Full Story

08:46 AM (IST) Apr 15

ಜಮೀರ್ ನಮಗ್ಯಾಕೆ ಫಂಡಿಂಗ್ ಮಾಡ್ತಾನೆ? - ಎಸ್‌ಡಿಪಿಐ ರಾಜ್ಯಾಧ್ಯಕ್ಷರ ಅಬ್ದುಲ್‌ ಮಜೀದ್ ಪ್ರಶ್ನೆ

ಸಚಿವ ಜಮೀರ್ ಅಹ್ಮದ್ ಖಾನ್ ತಮ್ಮ ಪಕ್ಷಕ್ಕೆ ಫಂಡಿಂಗ್ ಮಾಡಿದ್ದಾರೆ ಎಂಬ ಆರೋಪವನ್ನು ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್‌ ಮಜೀದ್ ತಳ್ಳಿಹಾಕಿದ್ದಾರೆ. ದಾವಣಗೆರೆಯಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡದ ಕಾರಣ ಜನರು ಎಸ್‌ಡಿಪಿಐಗೆ ಮತ ಹಾಕಿದ್ದಾರೆ ಎಂದರು.

Read Full Story

08:45 AM (IST) Apr 15

Channapatna - ರೈಲ್ವೆ ಹಳಿ ಮೇಲೆ ಸಿಲಿಂಡರ್, ಸ್ವವ್ ಪತ್ತೆ - ರೈಲು ಸಂಚಾರದಲ್ಲಿ ವ್ಯತ್ಯಯ

ರೈಲ್ವೆ ಹಳಿ ಮೇಲೆ ಗ್ಯಾಸ್ ಸಿಲಿಂಡರ್, ಸ್ಟವ್ ಹಾಗೂ ಬಟ್ಟೆಗಳು ಕಾಣಿಸುವ ಮೂಲಕ ಕೆಲಕಾಲ ಆತಂಕ ಮೂಡಿಸಿದ್ದ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆ ಸೋಮವಾರ ಬೆಳಿಗ್ಗೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

Read Full Story

08:24 AM (IST) Apr 15

ಆಟೋ ಚಾಲಕರಿಗೆ ಉಚಿತ ಗ್ಯಾಸ್‌ ಕೂಪನ್, ಆಹಾರ ಕಿಟ್‌ ವಿತರಣೆ

ಕೋಲಾರದ ಮಾಲೂರಿನಲ್ಲಿ ಜೆಡಿಎಸ್ ಮುಖಂಡ ಹೂಡಿ ವಿಜಯ್ ಕುಮಾರ್ ಅವರು ಅಂಬೇಡ್ಕರ್ ಜಯಂತಿ ಅಂಗವಾಗಿ ಆಟೋ ಚಾಲಕರಿಗೆ ಉಚಿತ ಗ್ಯಾಸ್ ಕೂಪನ್‌ಗಳು ಮತ್ತು ಆಹಾರ ಕಿಟ್‌ಗಳನ್ನು ವಿತರಿಸಿದರು. ಗ್ಯಾಸ್ ಅಭಾವದ ಹಿನ್ನೆಲೆಯಲ್ಲಿ ಚಾಲಕರಿಗೆ ನೆರವಾಗುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

Read Full Story

08:07 AM (IST) Apr 15

ಪ್ರೇಮ ಪ್ರಕರಣಗಳೆಲ್ಲಾ ಲವ್ ಜಿಹಾದ್‌ಗಳಲ್ಲ - ಬಿಜೆಪಿ ಆರೋಪಕ್ಕೆ ಸಂಸದ ಹಿಟ್ನಾಳ ತಿರುಗೇಟು

ಕೊಪ್ಪಳದಲ್ಲಿನ ಹಿಂದು-ಮುಸ್ಲಿಂ ಪ್ರೇಮ ಪ್ರಕರಣಕ್ಕೆ ಲವ್ ಜಿಹಾದ್ ಪಟ್ಟ ಕಟ್ಟಲಾಗುತ್ತಿದ್ದು, ಇದು ರಾಜಕೀಯ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿದೆ. ಎಲ್ಲಾ ಪ್ರೇಮ ಪ್ರಕರಣಗಳು ಲವ್ ಜಿಹಾದ್ ಅಲ್ಲ ಎಂದು ಸಂಸದ ರಾಜಶೇಖರ ಹಿಟ್ನಾಳ ಹೇಳಿದ್ದಾರೆ.

Read Full Story

08:01 AM (IST) Apr 15

Karnataka cabinet reshuffle - 'ಸಿಎಂ ಆರ್ಥಿಕ ಸಲಹೆಗಾರ' ಎಂದು ಸುಮ್ನೆ ಹುದ್ದೆ ಕೊಟ್ಟಿದ್ದಾರೆ - ರಾಯರಡ್ಡಿ

ಮೇ 4ರ ನಂತರ ಸಚಿವ ಸಂಪುಟ ಪುನರ್‌ ರಚನೆಯಾಗುವ ಸಾಧ್ಯತೆಯಿದೆ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದ್ದಾರೆ. ಈಗಿರುವ 25 ಸಚಿವರನ್ನು ಕೈಬಿಟ್ಟು ಹೊಸಬರು ಮತ್ತು ಹಿರಿಯರಿಗೆ ಅವಕಾಶ ನೀಡಿದರೆ ಸರ್ಕಾರ ಇನ್ನಷ್ಟು ಕ್ರಿಯಾಶೀಲವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
Read Full Story

07:52 AM (IST) Apr 15

₹7.50 ಲಕ್ಷ ಮೌಲ್ಯದ ₹2000 ಖೋಟಾ ನೋಟು ಬದಲಿಸಿಕೊಳ್ಳಲು ಬೆಂಗಳೂರಿನ RBIಗೆ ಬಂದ; ಮುಂದೇನಾಯ್ತು?

ಚಲಾವಣೆ ಸ್ಥಗಿತಗೊಂಡಿರುವ ₹2000 ಮುಖಬೆಲೆಯ ಖೋಟಾ ನೋಟುಗಳನ್ನು ಆರ್‌ಬಿಐನಲ್ಲಿ ಬದಲಿಸಲು ಯತ್ನಿಸಿದ ವ್ಯಕ್ತಿಯನ್ನು ಬೆಂಗಳೂರಿನ ಹಲಸೂರು ಗೇಟ್‌ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ  ₹7.50 ಲಕ್ಷ ಮೌಲ್ಯದ 375 ನಕಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ.

Read Full Story

07:30 AM (IST) Apr 15

ಕಾಂಗ್ರೆಸ್ ಪದಾಧಿಕಾರಿ ಪಟ್ಟಿಯಲ್ಲಿ ಆರೆಎಸ್ಸೆಸ್‌ ಕಾರ್ಯಕರ್ತರ ಹೆಸರು! ಹೇಗೆ ಸೇರಿದವು? ಯಾರ ಬೆಂಬಲಿಗರು?

ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳ ಪಟ್ಟಿಯಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರ ಹೆಸರುಗಳು ಕಾಣಿಸಿಕೊಂಡು ಭಾರೀ ವಿವಾದ ಸೃಷ್ಟಿಯಾಗಿದೆ. ಬಿಜೆಪಿಯಿಂದ ಉಚ್ಛಾಟಿತರಾದ ಇವರ ನೇಮಕಾತಿಗೆ ಪಕ್ಷದೊಳಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ ಜಿಲ್ಲಾಧ್ಯಕ್ಷರು ಈ ನೇಮಕಾತಿಗೆ ತಡೆ ನೀಡಿದ್ದಾರೆ.

Read Full Story

07:12 AM (IST) Apr 15

ಏನೇ ಪುಂಗಿ ಬಾರಿಸಿದರೂ 2 ಕ್ಷೇತ್ರದಲ್ಲಿ ಬಿಜೆಪಿಯೇ ಗೆಲ್ಲುವುದು; ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ದಾವಣಗೆರೆ ಮತ್ತು ಬಾಗಲಕೋಟೆಯಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ. ಅಭಿವೃದ್ಧಿ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬಹಿರಂಗ ಚರ್ಚೆಗೆ ಬರುವಂತೆ ಸವಾಲು.

Read Full Story

07:12 AM (IST) Apr 15

ಅಪಘಾತದಲ್ಲಿ ಮೃತ ಕ್ಷೌರಿಕನ ಕುಟುಂಬಕ್ಕೆ 44 ಲಕ್ಷ ಪರಿಹಾರ - ವಿಮಾ ಕಂಪನಿಗೆ ಹೈಕೋರ್ಟ್‌ ಆದೇಶ

ರಸ್ತೆ ಅಪಘಾತದಲ್ಲಿ ಮೃತಪಟ್ಟ ಕ್ಷೌರಿಕನ ಕುಟುಂಬಕ್ಕೆ ಹೈಕೋರ್ಟ್ ನ್ಯಾಯ ಒದಗಿಸಿದೆ. ನ್ಯಾಯಾಧೀಕರಣ ನೀಡಿದ್ದ 32 ಲಕ್ಷ ರೂ. ಪರಿಹಾರವನ್ನು 44.47 ಲಕ್ಷ ರೂ.ಗೆ ಹೆಚ್ಚಿಸಿ, ಆರು ವಾರಗಳಲ್ಲಿ ಹಣ ಪಾವತಿಸುವಂತೆ ವಿಮಾ ಕಂಪನಿಗೆ ಆದೇಶಿಸಿದೆ.
Read Full Story

More Trending News