LIVE NOW
Published : Jan 15, 2026, 06:52 AM ISTUpdated : Jan 15, 2026, 09:03 AM IST

Karnataka News Live: ತನ್ನದೇ ತಪ್ಪುಗಳಿಂದ ಸಂಕಷ್ಟಕ್ಕೆ ಸಿಲುಕಿದ ಕರ್ಣ; ತುಪ್ಪ ಸುರಿದು ನಿತ್ಯಾ ಜೀವನ ಹಾಳಾಗಲು ಕಾರಣಳಾದ ನಿಧಿ

ಸಾರಾಂಶ

ಬೆಂಗಳೂರು: ಲೋಕಸಭೆ ವಿರೋಧಪಕ್ಷದ ನಾಯಕ ರಾಹುಲ್‌ಗಾಂಧಿ ಅವರು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರನ್ನು ದೆಹಲಿಗೆ ಆಹ್ವಾನಿಸಿದ್ದು, ಸಂಕ್ರಾಂತಿ ಬಳಿಕ ಅಲ್ಲಿಗೆ ತೆರಳಿ ಗೊಂದಲ ಬಗೆಹರಿಸಿಕೊಂಡು ಬರುತ್ತಾರೆ ಎಂದು ವಿಧಾನಸಭೆ ಸರ್ಕಾರದ ಮುಖ್ಯಸಚೇತಕ ಅಶೋಕ್‌ ಪಟ್ಟಣ್‌ ಹೇಳಿದ್ದಾರೆ. ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಹುಲ್‌ಗಾಂಧಿ ಅವರು ಇಬ್ಬರು ನಾಯಕರ ಜತೆ ಮಂಗಳವಾರ ಏನೂ ಚರ್ಚೆ ಮಾಡಿಲ್ಲ. ದೆಹಲಿಗೆ ಬನ್ನಿ ಎಂದು ಕರೆದಿದ್ದಾರೆ ಅಷ್ಟೇ. ಸಂಕ್ರಾಂತಿ ಬಳಿಕ ಇಬ್ಬರೂ ದೆಹಲಿಗೆ ಹೋಗಲಿದ್ದು, ಆಗ ಶೇ.100 ರಷ್ಟು ಗೊಂದಲ ಬಗೆಹರಿಸುವ ವಿಶ್ವಾಸವಿದೆ ಎಂದು ಹೇಳಿದರು. ಹೈಕಮಾಂಡ್‌ ಏನೇ ತೀರ್ಮಾನ ಮಾಡಿದರೂ ನಾವು ಅದಕ್ಕೆ ಬದ್ಧವಾಗಿದ್ದೇವೆ. ಸಂಪುಟ ವಿಸ್ತರಣೆ ಸೇರಿ ಎಲ್ಲ ವಿಚಾರಗಳ ಬಗ್ಗೆ ಚರ್ಚೆ ಮಾಡುತ್ತಾರೆ. ಸಂಪುಟ ಪುನರ್‌ರಚನೆ ಆಗಬೇಕು ಎಂಬ ಆಸೆ ನಮಗೂ ಇದೆ, ಅದು ನಮ್ಮ ಬೇಡಿಕೆ ಕೂಡ. ಇವೆಲ್ಲದರ ಬಗ್ಗೆಯೂ ದೆಹಲಿಯಲ್ಲಿ ಚರ್ಚೆಯಾಗಲಿದೆ ಎಂದರು.

Karna

09:03 AM (IST) Jan 15

ತನ್ನದೇ ತಪ್ಪುಗಳಿಂದ ಸಂಕಷ್ಟಕ್ಕೆ ಸಿಲುಕಿದ ಕರ್ಣ; ತುಪ್ಪ ಸುರಿದು ನಿತ್ಯಾ ಜೀವನ ಹಾಳಾಗಲು ಕಾರಣಳಾದ ನಿಧಿ

ಗರ್ಭಿಣಿ ನಿತ್ಯಾಳ ಬಗ್ಗೆಕರ್ಣ ತೋರಿದ ಅತಿಯಾದ ಕಾಳಜಿಮತ್ತು ರಮೇಶ್‌ನ ಮಾತುಗಳಿಂದ ತೇಜಸ್ ಅನುಮಾನಗೊಂಡಿದ್ದಾನೆ. ಇದರಿಂದ ನಿತ್ಯಾಳೊಂದಿಗಿನ ಮದುವೆಯನ್ನೇ ನಿಲ್ಲಿಸಿ, ಮಗುವಿನ ತಂದೆ ಯಾರೆಂದು ತಿಳಿಯಲು ವೈದ್ಯಕೀಯ ಪರೀಕ್ಷೆಗೆ ಮುಂದಾಗಿದ್ದಾನೆ. 

Read Full Story

09:02 AM (IST) Jan 15

ಸಿಲಿಕಾನ್ ಸಿಟಿ ಶ್ರೀಮಂತಿಕೆ ಪರಿಚಯಕ್ಕೆ ಬೆಂಗ್ಳೂರು ಹಬ್ಬ

ದೇಶ-ವಿದೇಶಗಳ ಎಲ್ಲ ಭಾಷೆ, ಸಂಸ್ಕೃತಿ ಜನರಿಗೆ ಆಶ್ರಯ ನೀಡಿರುವ ಕನ್ನಡನಾಡಿನ ಹೆಮ್ಮೆಯ ನಗರಿ ಬೆಂಗಳೂರಿನ ಕಲೆ, ಸಂಸ್ಕೃತಿ ಶ್ರೀಮಂತಿಕೆ ಪರಿಚಯಿಸುವ ಬೆಂಗಳೂರು ಹಬ್ಬದ ಮೂರನೇ ಆವೃತ್ತಿ ಜ.16ರಿಂದ 25ರವರೆಗೆ ನಗರದ 15 ಕಡೆ ನಡೆಯಲಿದೆ.

Read Full Story

08:11 AM (IST) Jan 15

ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲೂ ಆಗದಷ್ಟು ಅಭಿವೃದ್ಧಿ ನಮ್ಮಲ್ಲಿ ಆಗಿದೆ ಎಂದ ಕಾಂಗ್ರೆಸ್ ಶಾಸಕ

ಮುಖ್ಯಮಂತ್ರಿಗಳ ಕ್ಷೇತ್ರಕ್ಕಿಂತಲೂ ಹೆಚ್ಚು ಅಭಿವೃದ್ಧಿ ಕಾರ್ಯಗಳಾಗಿವೆ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದ್ದಾರೆ. ರೈಲ್ವೆ, ಹೆದ್ದಾರಿ, ಕೆರೆ ತುಂಬಿಸುವ ಯೋಜನೆ ಸೇರಿದಂತೆ ಹಲವು ಕಾಮಗಾರಿಗಳನ್ನು ಉಲ್ಲೇಖಿಸಿದ ಅವರು, ರಾಜ್ಯದ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿವೆ ಎಂದರು.

Read Full Story

07:51 AM (IST) Jan 15

ಲಕ್ಕುಂಡಿ ಚಿನ್ನದ ರಹಸ್ಯ - ಬಂಗಾರ ಎಲ್ಲಿಯದ್ದು, ಯಾವ ಕಾಲದ್ದು? ನಿಮ್ಮೆಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ಗದಗದ ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವಾಗ ಪತ್ತೆಯಾದ ಚಿನ್ನದ ನಿಧಿಯು ಸುಮಾರು 300 ವರ್ಷಗಳಷ್ಟು ಹಳೆಯದೆಂದು ಅಂದಾಜಿಸಲಾಗಿದೆ. ಪುರಾತತ್ವ ಇಲಾಖೆಯ ತಜ್ಞರು ಈ ಆಭರಣಗಳು ವಿಜಯನಗರ ಸಾಮ್ರಾಜ್ಯದ ಕಾಲದ್ದಾಗಿರಬಹುದು ಎಂದು ಪ್ರಾಥಮಿಕವಾಗಿ ಅಭಿಪ್ರಾಯಪಟ್ಟಿದ್ದು, ಜಿಲ್ಲಾಡಳಿತವು ಅಂತಿಮ ವರದಿಗಾಗಿ ಕಾಯುತ್ತಿದೆ.
Read Full Story

07:38 AM (IST) Jan 15

ಉತ್ತರದ ಮಹಿಳೆಯರು ಬರೀ ಮನೆಗೆಲಸಕ್ಕೆ ಸೀಮಿತ - ದಯಾನಿಧಿ

ತಮಿಳುನಾಡಿನಲ್ಲಿ ಹೆಣ್ಣುಮಕ್ಕಳಿಗೆ ಓದಲು ಪ್ರೋತ್ಸಾಹಿಸುತ್ತಾರೆ. ಆದರೆ ಉತ್ತರ ಭಾರತದಲ್ಲಿ ಅವರಿಗೆ ಮನೆಗೆಲಸ ಮಾಡಿಕೊಂಡಿದ್ದು ಮಕ್ಕಳನ್ನು ಹೆರಲು ಹೇಳುತ್ತಾರೆ’ ಎಂದು ಡಿಎಂಕೆ ಸಂಸದ ದಯಾನಿಧಿ ಮಾರನ್‌ ಹೇಳಿದ್ದಾರೆ. ಇದು ಮತ್ತೆ ಉತ್ತರ-ದಕ್ಷಿಣ ಸಂಘರ್ಷಕ್ಕೆ ನಾಂದಿ ಹಾಡಿದೆ,

Read Full Story

07:38 AM (IST) Jan 15

Chikkaballapur - ಡ್ರಾಪ್ ಕೊಡುವ ನೆಪದಲ್ಲಿ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾ*ಚಾರ

ಚಿಕ್ಕಬಳ್ಳಾಪುರದ ಪೆರೇಸಂದ್ರದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಗೆ ಡ್ರಾಪ್ ಕೊಡುವ ನೆಪದಲ್ಲಿ ವ್ಯಕ್ತಿಯೊಬ್ಬ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾ*ಚಾರ ಎಸಗಿದ್ದಾನೆ. ನಂತರ ಗೆಳೆಯನಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾನೆ.

Read Full Story

07:34 AM (IST) Jan 15

ಅಮೆರಿಕ ಬೆದರಿಕೆ ಬೆನ್ನಲ್ಲೇ ಇರಾನ್‌ ಸಮರಾಭ್ಯಾಸ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸತತ ಸುಳಿವುಗಳನ್ನು ನೀಡುತ್ತಿರುವ ಬೆನ್ನಲ್ಲೇ ಇರಾನ್ ಸಮರಾಭ್ಯಾಸ ಆರಂಭಿಸಿದೆ. ಇದೇ ವೇಳೆ, ‘ಅಮೆರಿಕವು ನಮ್ಮ ಮೇಲೆ ದಾಳಿ ಮಾಡಿದರೆ ಮಧ್ಯಪ್ರಾಚ್ಯದಲ್ಲಿ ಅಮೆರಿಕ ಹೊಂದಿರುವ 3 ಸೇನಾ ನೆಲೆಗಳ ಮೇಲೆ ದಾಳಿ ಮಾಡಬೇಕಾಗುತ್ತದೆ ಎಂದು ಇರಾನ್ ಎಚ್ಚರಿಸಿದೆ.

Read Full Story

07:28 AM (IST) Jan 15

ಜನವರಿ 22ರಂದು ಪುನೀತ್ ರಾಜ್‌ಕುಮಾರ್ ದೇಗುಲ, ಕಂಚಿನ ಪ್ರತಿಮೆ ಲೋಕಾರ್ಪಣೆ

Puneeth Rajkumar Temple: ಶಿವಮೊಗ್ಗದಲ್ಲಿ ಡಾ. ರಾಜ್‌ಕುಮಾರ್ ಮತ್ತು ಡಾ. ಪುನೀತ್ ರಾಜಕುಮಾರ್ ಅಭಿಮಾನಿಗಳ ಸಂಘವು ನಿರ್ಮಿಸಿರುವ ದೇಗುಲ ಹಾಗೂ ಕಂಚಿನ ಪ್ರತಿಮೆ ಜ.22 ರಂದು ಲೋಕಾರ್ಪಣೆಗೊಳ್ಳಲಿದೆ. 

Read Full Story

07:20 AM (IST) Jan 15

ಗಾಳಿಪಟ ದಾರ ಕುತ್ತಿಗೆ ಸೀಳಿ ಮಗಳನ್ನು ಹಾಸ್ಟೆಲ್‌ನಿಂದ ಕರೆತರಲು ಹೊರಟಿದ್ದ ಅಪ್ಪ ದಾರುಣ ಸಾವು

ಬೈಕ್‌ ಮೇಲೆ ತೆರಳುವ ವೇಳೆ ಗಾಳಿಪಟ ಹಾರಿಸುವ ನಿಷೇಧಿತ ಚೀನಿ ಮಾಂಜಾ ದಾರ ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬೀದರ್‌ ಜಿಲ್ಲೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ಸಂಭವಿಸಿದೆ.

Read Full Story

07:15 AM (IST) Jan 15

Gadag - ಯುವತಿ ಮೇಲೆ ಆ್ಯಸಿಡ್ ದಾಳಿ ದಾಳಿಯ ವದಂತಿ; ಜನರಲ್ಲಿ ಆತಂಕ ಸೃಷ್ಟಿಸಿದ ಸ್ಫೋಟ, ಓರ್ವನ ಬಂಧನ

ಗದಗ-ಬೆಟಗೇರಿ ಸಮೀಪದ ನರಸಾಪುರದಲ್ಲಿ ಯುವತಿಯ ಮೇಲೆ ಆ್ಯಸಿಡ್ ದಾಳಿ ನಡೆದಿದೆ ಎಂಬ ಸುದ್ದಿ ಆತಂಕ ಸೃಷ್ಟಿಸಿತ್ತು. ಆದರೆ, ಪೊಲೀಸರ ತನಿಖೆಯಿಂದ ಇದು ಕಸದ ರಾಶಿಯಲ್ಲಿದ್ದ ಏರ್ ಫ್ರೆಶ್‌ನರ್ ಕ್ಯಾನ್ ಸ್ಫೋಟದಿಂದಾದ ಅವಘಡ ಎಂದು ತಿಳಿದುಬಂದಿದೆ. 

Read Full Story

07:03 AM (IST) Jan 15

₹1000+ ಕೋಟಿ ಸೈಬರ್‌ ವಂಚನೆ - ಸ್ವಾಮೀಜಿ.ಕಾಂ, ನಿಯೋ ಸಿಸ್ಟಮ್‌ ಹೆಸರಲ್ಲಿ ಜಾಲ ಪತ್ತೆ

ಷೇರು ಮಾರುಕಟ್ಟೆ (ಟ್ರೇಡಿಂಗ್‌) ಹಾಗೂ ಆನ್‌ಲೈನ್‌ ಬೆಟ್ಟಿಂಗ್ ಹೆಸರಿನಲ್ಲಿ ನಡೆದಿರುವ 1000 ಕೋಟಿ ರು.ಗೂ ಅಧಿಕ ಮೊತ್ತದ ಮಹಾ ಸೈಬರ್ ವಂಚನೆ ಹಗರಣವನ್ನು ಹುಳಿಮಾವು ಠಾಣೆ ಪೊಲೀಸರು ಬಯಲು ಮಾಡಿದ್ದಾರೆ.

Read Full Story

More Trending News