LIVE NOW
Published : Jul 15, 2026, 07:18 AM ISTUpdated : Jul 15, 2026, 09:13 AM IST

Karnataka News Live: ಚಿಕನ್, ಮೊಟ್ಟೆ ಪ್ರಿಯರಿಗೆ ಬಿಗ್ ಶಾಕ್ - ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲೆ ಮಟ್ಟಕ್ಕೆ ಏರಿದ ದರ!

ಸಾರಾಂಶ

ಮಂಡ್ಯ ಜಿಲ್ಲೆಯಲ್ಲಿ ಬೆಳೆದು ನಿಂತಿರುವ ಬೆಳೆಗಳಿಗೆ ಕೆಆರ್‌ಎಸ್ ಅಣೆಕಟ್ಟೆಯಿಂದ ನೀರು ಹರಿಸದ ರಾಜ್ಯ ಸರ್ಕಾರ ತಮಿಳುನಾಡಿಗೆ ಕದ್ದು ಮುಚ್ಚಿ ನೀರು ಬಿಡುವುದರ ಮೂಲಕ ಕಿವುಡುತನ ಪ್ರದರ್ಶಿಸುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.

ತಾಲೂಕಿನ ಚಿಕ್ಕಮುಲಗೂಡು ಗ್ರಾಮದಲ್ಲಿ ಜಮೀನುಗಳಲ್ಲಿ ಒಣಗುತ್ತಿರುವ ಕಬ್ಬು ಬೆಳೆಗಳನ್ನು ಮಂಗಳವಾರ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, 3 ದಿನದಲ್ಲಿ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆ ಮಾಡದಿದ್ದರೆ ಬಿಜೆಪಿ ವತಿಯಿಂದ ಕೆಆರ್‌ಎಸ್‌ಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.

ನೀರಿಲ್ಲದ ಸಂದರ್ಭದಲ್ಲಿ ಕುಡಿಯುವ ನೀರನ್ನು ಯಾವ ರೀತಿ ಪೂರೈಕೆ ಮಾಡಬೇಕು. ತಮಿಳುನಾಡಿನವರು ನ್ಯಾಯಾಲಯಕ್ಕೆ ಹೋದರೆ ನ್ಯಾಯಾಲಯದಲ್ಲಿ ಅದನ್ನು ಸಮರ್ಥವಾಗಿ ಎದುರಿಸಲು ಏನು ಮಾಡಬೇಕೆಂದು ಚರ್ಚಿಸಲು ಕೂಡಲೇ ಸರ್ವಪಕ್ಷ ಸಭೆ ಕರೆಯಬೇಕು. ವಿಪಕ್ಷವನ್ನು ಬಿಟ್ಟು ನೀರಾವರಿ ಸಭೆ ನಡೆಸಬಾರದು. ಎಲ್ಲರನ್ನೂ ಆಹ್ವಾನ ಮಾಡಬೇಕೆಂದು ಅಶೋಕ್ ಆಗ್ರಹಿಸಿದರು.

09:13 AM (IST) Jul 15

ಚಿಕನ್, ಮೊಟ್ಟೆ ಪ್ರಿಯರಿಗೆ ಬಿಗ್ ಶಾಕ್ - ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲೆ ಮಟ್ಟಕ್ಕೆ ಏರಿದ ದರ!

ಬೆಂಗಳೂರಿನಲ್ಲಿ ಚಿಕನ್ ಮತ್ತು ಮೊಟ್ಟೆ ದರ ಸಾರ್ವಕಾಲಿಕ ದಾಖಲೆ ಮಟ್ಟಕ್ಕೆ ಏರಿಕೆಯಾಗಿದೆ. ಕೋಳಿಗಳ ಬೆಳವಣಿಗೆ ಕುಂಠಿತ ಮತ್ತು ಬೇರೆ ರಾಜ್ಯಗಳಿಗೆ ರಫ್ತು ಹೆಚ್ಚಾಗಿದ್ದರಿಂದ ಪೂರೈಕೆ ಕಡಿಮೆಯಾಗಿ, ಬೆಲೆ ಗಗನಕ್ಕೇರಿದ್ದು, ಇದು ಗ್ರಾಹಕರು ಮತ್ತು ವ್ಯಾಪಾರಿಗಳ ಮೇಲೆ ಪರಿಣಾಮ ಬೀರಿದೆ.
Read Full Story

08:40 AM (IST) Jul 15

ನಾಡಗೀತೆಗೆ ಬೌದ್ಧ ಪದ ಸೇರ್ಪಡೆಗೆ ತಜ್ಞರ ಸಮಿತಿಯಿಂದ ಶಿಫಾರಸು; ಮಹತ್ವದ ಬದಲಾವಣೆ ಸಾಧ್ಯತೆ

ರಾಷ್ಟ್ರಕವಿ ಕುವೆಂಪು ರಚಿತ ನಾಡಗೀತೆಯಲ್ಲಿ 'ಪಾರಸಿಕ ಜೈನರುದ್ಯಾನ' ಎಂಬ ಸಾಲಿಗೆ 'ಬೌದ್ಧ' ಪದವನ್ನು ಸೇರಿಸಲು ತಜ್ಞರ ಸಮಿತಿಯು ಸರ್ಕಾರಕ್ಕೆ ಸರ್ವಾನುಮತದಿಂದ ಶಿಫಾರಸು ಮಾಡಿದೆ. ಕುವೆಂಪು ಅವರ ಮೂಲ ಕರಡಿನಲ್ಲಿ ಈ ಪದವಿದ್ದು, ಈ ಸೇರ್ಪಡೆಯಿಂದ ಗೀತೆಯ ಲಯಕ್ಕೆ ಧಕ್ಕೆಯಾಗುವುದಿಲ್ಲ ಎಂದು ಸಮಿತಿ ಖಚಿತಪಡಿಸಿದೆ.
Read Full Story

08:35 AM (IST) Jul 15

ಫುಟ್ಪಾತ್ ಒತ್ತುವರಿ, ವಾಹನ ತೆರವು ಬಳಿಕ, ಈಗ ಮತ್ತೊಂದು ಮಹತ್ವದ ಅಭಿಯಾನ ಘೋಷಿಸಿದ ಸಚಿವ ಕೃಷ್ಣಬೈರೇಗೌಡ! ಆ.1ರಿಂದಲೇ ಶುರು!

ಕಸದಿಂದ ಸ್ವಾತಂತ್ರ್ಯ ಎಂಬ ಘೋಷವಾಕ್ಯದೊಂದಿಗೆ ನಗರದಲ್ಲಿ ಎಲ್ಲೆಂದರಲ್ಲಿ ಬಿದ್ದಿರುವ ಕಸವನ್ನು ತೆರವುಗೊಳಿಸಲು ‘ಕಸ ಮುಕ್ತ ಬೆಂಗಳೂರು’ ಹೆಸರಿನ ವಿಶೇಷ ಅಭಿಯಾನವನ್ನು ಆಗಸ್ಟ್‌ 1ರಿಂದ 1 ತಿಂಗಳು ಹಮ್ಮಿಕೊಳ್ಳಲಾಗುವುದು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

Read Full Story

07:57 AM (IST) Jul 15

ಮುಂಡಗೋಡ-ಸವದತ್ತಿ - ಭಕ್ತರ ಬಹುದಿನದ ಕನಸು ನನಸು, ನೂತನ ಬಸ್‌ಗೆ ಶಾಸಕ ಹೆಬ್ಬಾರ್ ಚಾಲನೆ

ಮಂಗಳವಾರ ಮುಂಡಗೋಡ ಬಸ್ ನಿಲ್ದಾಣದಲ್ಲಿ ಶಾಸಕ ಶಿವರಾಮ ಹೆಬ್ಬಾರ ಅವರು ಮುಂಡಗೋಡ-ಸವದತ್ತಿ ನೂತನ ಬಸ್ ಸೇವೆಗೆ ಹಸಿರು ನಿಶಾನೆ ತೋರಿದರು. ಈ ಹೊಸ ಬಸ್ ಸೇವೆಯು ಸವದತ್ತಿ ಯಲ್ಲಮ್ಮ ದೇವಿ ದೇವಸ್ಥಾನಕ್ಕೆ ತೆರಳುವ ಉತ್ತರ ಕನ್ನಡ ಜಿಲ್ಲೆಯ ಭಕ್ತರಿಗೆ ಮತ್ತು ಸಾರ್ವಜನಿಕರಿಗೆ ಹೆಚ್ಚು ಅನುಕೂಲಕರವಾಗಲಿದೆ.
Read Full Story

07:56 AM (IST) Jul 15

14 ವರ್ಷಗಳ ದ್ವೇಷ... ತಪ್ಪಿಸಿಕೊಂಡಿದ್ದ ಕುಟುಂಬದ ಮೇಲೆ ಒಂಟಿ ಸಲಗದ ದಾಳಿ... ನಾಲ್ವರು ಬಲಿ!

ನೇಪಾಳದ ಕುಖ್ಯಾತ "ಧುರ್ಬೆ" ಆನೆ 14 ವರ್ಷಗಳ ಅವಧಿಯಲ್ಲಿ ಶನಿಚಾರ ಬೋಟೆ ಎಂಬುವವರ ಒಂದೇ ಕುಟುಂಬದ ನಾಲ್ವರನ್ನು ಬಲಿಪಡೆದಿದೆ. 2012 ರಲ್ಲಿ ಹೆತ್ತವರನ್ನು ಕೊಂದ ಆನೆಗೆ ಹೆದರಿ 9 ಮೈಲು ದೂರ ವಲಸೆ ಹೋಗಿದ್ದ ಕುಟುಂಬವನ್ನು ಬೆನ್ನಟ್ಟಿದ ಆನೆ, ಜುಲೈ 2026 ರಲ್ಲಿ ಸೊಸೆ ಹಾಗೂ 4 ವರ್ಷದ ಮೊಮ್ಮಗನನ್ನು ಕೊಂದಿದೆ. 25 ಜನರನ್ನು ಬಲಿಪಡೆದಿರುವ ಈ ಆನೆ ನೇಪಾಳದ ಅತ್ಯಂತ ಅಪಾಯಕಾರಿ ವನ್ಯಜೀವಿಯಾಗಿದೆ.

Read Full Story

07:41 AM (IST) Jul 15

ಬೆಂಗಳೂರಿನಲ್ಲಿದ್ದ ಚುಂಚನಗಿರಿ ಮಠದ 100 ಕೋಟಿ ಮೌಲ್ಯದ 6 ಎಕರೆ ಭೂಮಿ ಕಬಳಿಕೆ ಯತ್ನ

ಆದಿಚುಂಚನಗಿರಿ ಮಠಕ್ಕೆ ಸೇರಿದ ಸುಮಾರು 100 ಕೋಟಿ ರೂ. ಮೌಲ್ಯದ 6 ಎಕರೆ ಭೂಮಿಯನ್ನು ನಕಲಿ ದಾಖಲೆಗಳ ಮೂಲಕ ಕಬಳಿಸಲು ಯತ್ನಿಸಿದ ಪ್ರಕರಣವನ್ನು ಕೆಂಗೇರಿ ಪೊಲೀಸರು ಭೇದಿಸಿದ್ದಾರೆ. ಈ ಸಂಬಂಧ ಆರು ಸರ್ಕಾರಿ ಅಧಿಕಾರಿಗಳು ಸೇರಿದಂತೆ ಒಟ್ಟು 11 ಮಂದಿಯನ್ನು ಬಂಧಿಸಲಾಗಿದೆ.
Read Full Story

More Trending News