LIVE NOW
Published : Jun 15, 2026, 05:01 AM ISTUpdated : Jun 15, 2026, 08:52 AM IST

Karnataka News Live: Shivamogga - ಶಾಲೆಯ ಆವರಣದಲ್ಲಿ ಆಟವಾಡುತ್ತಿದ್ದ 6 ವರ್ಷದ ಬಾಲಕ ಹೃದಯಾಘಾತದಿಂದ ಸಾವು

ಸಾರಾಂಶ

ದಾವಣಗೆರೆ: ತಮ್ಮ ಸಹೋದರ, ಸಚಿವ ಸತೀಶ್‌ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಗದೇ ಇರುವುದು ಒಳ್ಳೆಯದಾಗಿದೆ. ಅಧ್ಯಕ್ಷರಾಗಿದ್ದರೆ 2028ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲಿನ ಹೊಣೆಯನ್ನು ನಾಯಕ ಸಮಾಜಕ್ಕೆ ಕಟ್ಟುತ್ತಿದ್ದರು ಎಂದು ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಬಿಜೆಪಿ ಎಸ್‌ಟಿ ಮೋರ್ಚಾದಿಂದ ಭಾನುವಾರ ನಡೆದ ಸಂವಿಧಾನಬದ್ಧ ಶೇ.7ರ ಎಸ್‌ಟಿ ಮೀಸಲಾತಿ ಜಾರಿಯಾಗಲೇಬೇಕು ಎಂಬ ಸಮಾವೇಶದಲ್ಲಿ ಮಾತನಾಡಿ, ಒಂದು ವೇಳೆ ತಮ್ಮ ಸಹೋದರ ಅಧ್ಯಕ್ಷರಾಗಿದ್ದರೆ ಇಡೀ ನಮ್ಮ ಸಮುದಾಯ ಕೆಡುತ್ತಿತ್ತು. ಕಾಂಗ್ರೆಸ್ ಸೋತರೆ ನಾಯಕ ಸಮಾಜದ ಲೀಡರ್‌ಶಿಪ್‌ನಿಂದಾಗಿಯೇ ಪಕ್ಷಕ್ಕೆ ಸೋಲಾಯಿತು ಅಂತ ನಮ್ಮ ಮೇಲೆಯೇ ಕಾಂಗ್ರೆಸ್ಸಿನವರು ಅಪವಾದ ಹೊರಿಸುತ್ತಿದ್ದರು. ಅದಕ್ಕೆ ದೇವರು ಒಳ್ಳೆಯದನ್ನೇ ಮಾಡಿದ್ದಾನೆ ಎಂದರು.

ಬಿಜೆಪಿ ತಪ್ಪಿನಿಂದಲೇ ಇವತ್ತು ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ನಾವು ಅಧಿಕಾರದಲ್ಲಿದ್ದಾಗ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು, ಎಲ್ಲಾ ಸಮಾಜಗಳನ್ನೂ ಜೊತೆಗೆ ಕರೆದುಕೊಂಡು ಹೋಗಿದ್ದರೆ ಸೋಲುತ್ತಿರಲಿಲ್ಲ. ಗೆದ್ದ ಮೇಲೆ ಒಂದೇ ಸಮುದಾಯದ ರಾಜಕೀಯವನ್ನೂ ಮಾಡಬಾರದು. ಅದನ್ನು ನಾವು ಹೋರಾಟದ ಮೂಲಕ ಗಟ್ಟಿಯಾಗಿ ಎದುರಿಸಬೇಕು ಎಂದು ಹೇಳಿದರು.

08:52 AM (IST) Jun 15

Shivamogga - ಶಾಲೆಯ ಆವರಣದಲ್ಲಿ ಆಟವಾಡುತ್ತಿದ್ದ 6 ವರ್ಷದ ಬಾಲಕ ಹೃದಯಾಘಾತದಿಂದ ಸಾವು

ಶಿವಮೊಗ್ಗ ಜಿಲ್ಲೆಯ ಶಾಲೆಯೊಂದರಲ್ಲಿ ಆಟವಾಡುತ್ತಿದ್ದ 6 ವರ್ಷದ ಬಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಮತ್ತೊಂದು ಘಟನೆಯಲ್ಲಿ, ಬೈಕ್ ವ್ಹೀಲಿಂಗ್ ಮಾಡಿದ ಬ್ಯಾಂಕ್ ನೌಕರನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Read Full Story

08:40 AM (IST) Jun 15

Amruthadhaare Serial - ಎಲ್ಲ ಸತ್ಯ ಹೊರಬಿತ್ತು; ತ್ರಿಶೂಲದ ಗುಟ್ಟು ಗೊತ್ತಾಯ್ತು, ಸೀರಿಯಲ್‌ ಮುಗೀತಾ?

Amruthadhaare Serial Episode: ಅಮೃತಧಾರೆ ಧಾರಾವಾಹಿಯಲ್ಲಿ ಗೌತಮ್‌ ದಿವಾನ್‌ಗೆ ಸ್ವಂತ ಮಗಳನ್ನು ಹುಡುಕೋ ಸಮಸ್ಯೆ ಒಂದುಕಡೆಯಾದರೆ, ಮನೆಯಲ್ಲಿರುವ ಮಿಂಚುಳನ್ನು ಉಳಿಸಿಕೊಳ್ಳಬೇಕಿದೆ. ಇದೊಂದು ಟಾಸ್ಕ್‌ ಆಗಿದೆ. ಹೀಗಿರುವಾಗ ಕರ್ಣ ಧಾರಾವಾಹಿ ಕರ್ಣನ ಆಗಮನದಿಂದ ಎಲ್ಲ ಗೊಂದಲ ಬಗೆಹರಿದಿದೆ.

 

Read Full Story

07:48 AM (IST) Jun 15

ರಾಮಮಂದಿರ ದೇಣಿಗೆ ರಹಸ್ಯ - 18,000 ಸಂಬಳದ ಸಿಬ್ಬಂದಿಯಿಂದ 1.5 ಕೋಟಿ ಮೌಲ್ಯದ ಭೂಮಿ ಖರೀದಿ

ಅಯೋಧ್ಯೆಯ ರಾಮಮಂದಿರದ ದೇಣಿಗೆಯಲ್ಲಿ 7 ಕೋಟಿ ರೂ. ಅಕ್ರಮ ನಡೆದಿದೆ ಎನ್ನಲಾಗಿದ್ದು, ಮೂವರು ಸಿಬ್ಬಂದಿಯನ್ನು ವಶಕ್ಕೆ ಪಡೆಯಲಾಗಿದೆ. ಕಡಿಮೆ ಸಂಬಳ ಪಡೆಯುತ್ತಿದ್ದ ಈ ಸಿಬ್ಬಂದಿ ಇತ್ತೀಚೆಗೆ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಖರೀದಿಸಿದ್ದು, ಓರ್ವನ ಮನೆಯಿಂದ 12 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ.
Read Full Story

07:47 AM (IST) Jun 15

Shivamogga - ತಿಂಗಳುಗಾಗುವಷ್ಟು ರಕ್ತ ಒಂದೇ ದಿನ ಸಂಗ್ರಹ!

ವಿಶ್ವ ರಕ್ತದಾನಿಗಳ ದಿನದಂದು ಶಿವಮೊಗ್ಗದಲ್ಲಿ ಯಶಸ್ವಿ ರಕ್ತ ಸಂಗ್ರಹ ನಡೆದಿದ್ದು, ಜಿಲ್ಲೆಯು ರಕ್ತ ಸಂಗ್ರಹಣೆಯಲ್ಲಿ ಸ್ವಾವಲಂಬನೆ ಸಾಧಿಸುತ್ತಿದೆ. ಜಿಲ್ಲೆಯಲ್ಲಿರುವ 9 ರಕ್ತನಿಧಿ ಕೇಂದ್ರಗಳು ಮತ್ತು ಸ್ವಯಂ ಪ್ರೇರಿತ ದಾನಿಗಳ ನೆರವಿನಿಂದ, ಇದೀಗ ನೆರೆಯ ಜಿಲ್ಲೆಗಳಿಗೂ ರಕ್ತ ಪೂರೈಸುವ ಮಟ್ಟಕ್ಕೆ ಬೆಳೆದಿದೆ.
Read Full Story

07:34 AM (IST) Jun 15

ಮಹಾರಾಜ ಟ್ರೋಫಿ - ಕೋಸ್ಟಲ್ ಕಿಂಗ್ಸ್ ತಂಡ ಹೊಸ ಜೆರ್ಸಿ, ನೂತನ ನಾಯಕನ ಘೋಷಣೆ

ಕೆಎಸ್‌ಸಿಎ ಆಯೋಜಿಸುವ ಮಹಾರಾಜ ಟ್ರೋಫಿ ಟಿ20ಯಲ್ಲಿ ಕೋಸ್ಟಲ್‌ ಕಿಂಗ್ಸ್‌ ಮಂಗಳೂರು ತಂಡಕ್ಕೆ ಕರುಣ್‌ ನಾಯರ್‌ ನಾಯಕರಾಗಿ ಮತ್ತು ಶ್ರೇಯಸ್‌ ಗೋಪಾಲ್‌ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ. ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ತಂಡದ ಜೆರ್ಸಿ ಹಾಗೂ ಥೀಮ್‌ ಸಾಂಗ್‌ ಬಿಡುಗಡೆ ಮಾಡಲಾಗಿದ್ದು, ಜೂ.20ರಿಂದ ಪಂದ್ಯಾವಳಿ ಆರಂಭವಾಗಲಿದೆ.
Read Full Story

07:20 AM (IST) Jun 15

Dharwad - ಮೃತ ಗೆಳೆಯನ ಕುಟುಂಬಕ್ಕೆ ಆರ್ಥಿಕ ನೆರವು ನೀಡಿದ 1999-2000ನೇ ಸಾಲಿನ ಸ್ನೇಹಿತರು

ಧಾರವಾಡದ ಆರ್‌ಎಲ್‌ಎಸ್‌ ಹೈಸ್ಕೂಲಿನ 1999-2000ನೇ ಸಾಲಿನ ವಿದ್ಯಾರ್ಥಿಗಳು ಇತ್ತೀಚೆಗೆ ನಿಧನರಾದ ತಮ್ಮ ಸಹಪಾಠಿ ನಬಿಸಾಬ್‌ ಚಣಕನ್ನವರ ಅವರ ಕುಟುಂಬಕ್ಕೆ ಆರ್ಥಿಕ ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ. ಸಹಪಾಠಿ ನಾಗರಾಜ ಜಾವೂರ ಅವರು ಮೃತನ ಮಗನ ವೈದ್ಯಕೀಯ ಶಿಕ್ಷಣದ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
Read Full Story

07:12 AM (IST) Jun 15

Koppal - ಸ್ವಂತ ಖರ್ಚಿನಲ್ಲಿ ಜನರಿಗೆ ತನ್ನದೇ ಕೊಳಬಾವಿಯ ನೀರು ಪೂರೈಕೆ ಮಾಡುವ ಶಿವಕುಮಾರ್

ಯಲಬುರ್ಗಾ ಪಟ್ಟಣದ 12ನೇ ವಾರ್ಡ್‌ನಲ್ಲಿ ನೀರಿನ ಸಮಸ್ಯೆ ಉಂಟಾದಾಗ, ಶಿವಕುಮಾರ ಮ್ಯಾಗೇರಿ ಎಂಬ ಯುವಕ ತನ್ನ ಸ್ವಂತ ಕೊಳವೆಬಾವಿಯಿಂದ ನಿವಾಸಿಗಳಿಗೆ ಉಚಿತವಾಗಿ ನೀರು ಪೂರೈಸುತ್ತಿದ್ದಾನೆ. ಯಾವುದೇ ಫಲಾಪೇಕ್ಷೆಯಿಲ್ಲದೆ ಆತ ಮಾಡುತ್ತಿರುವ ಈ ಸಮಾಜ ಸೇವೆಯನ್ನು ಸ್ಥಳೀಯರು ಶ್ಲಾಘಿಸಿದ್ದಾರೆ.

Read Full Story

06:46 AM (IST) Jun 15

ದ್ವೇಷಭಾಷಣ ಮಸೂದೆ ರಾಜ್ಯದಲ್ಲಿ ಜಾರಿ ಅನಾವಶ್ಯ - ವಿಧೇಯಕ ಜಾರಿಗೆ ಬಂದರೆ ಹಿರಿಯರು ಬುದ್ಧಿವಾದ ಹೇಳಲಾಗದು, ಇತಿಹಾಸಕಾರರು ಸತ್ಯ ನುಡಿಯಲು ಆಗದು!

ಭಾರತದ ಸಂವಿಧಾನದತ್ತ ಅಭಿವ್ಯಕ್ತಿ ಸ್ವಾತಂತ್ರ್ಯ, ಅದರ ಮೇಲಿನ ನಿಯಂತ್ರಣಗಳು ಮತ್ತು ದ್ವೇಷ ಭಾಷಣದ ಕಾನೂನುಗಳನ್ನು ಈ ಲೇಖನ ವಿವರಿಸುತ್ತದೆ. ಇಂತಹ ಕಾನೂನುಗಳ ದುರುಪಯೋಗವನ್ನು ತಡೆಯಲು ಸುಪ್ರೀಂ ಕೋರ್ಟ್ ನೀಡಿದ ಮಾರ್ಗಸೂಚಿಗಳನ್ನು ಚರ್ಚಿಸುತ್ತಾ, ಕರ್ನಾಟಕದ ಹೊಸ ದ್ವೇಷಭಾಷಣ ಮಸೂದೆಯ ಅನಗತ್ಯತೆಯನ್ನು ಇದು ಪ್ರತಿಪಾದಿಸುತ್ತದೆ.
Read Full Story

06:37 AM (IST) Jun 15

ಕಲಬುರಗಿ ಜಿಲ್ಲೆಯಲ್ಲಿ ಮತ್ತೊಂದು ಶಾಲೆ ಮೇಲ್ಛಾವಣಿ ಕಾಂಕ್ರೀಟ್‌ ಕುಸಿತ - ತಪ್ಪಿದ ಅವಘಡ

ಸಂಗೋಳಗಿ ಗ್ರಾಮದ ಸರ್ಕಾರಿ ಶಾಲೆಯ ಹಳೆಯ, ಬಳಕೆಯಲ್ಲಿಲ್ಲದ ಕಟ್ಟಡದ ಛಾವಣಿ ಕುಸಿದಿದೆ. ಅದೃಷ್ಟವಶಾತ್, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲವಾದರೂ, ಈ ಘಟನೆಯು ತಾಲೂಕಿನಲ್ಲಿರುವ ಶಿಥಿಲಗೊಂಡ ಶಾಲಾ ಕಟ್ಟಡಗಳ ಸುರಕ್ಷತೆಯ ಗಂಭೀರ ಸಮಸ್ಯೆಯನ್ನು ಮತ್ತೊಮ್ಮೆ ಮುನ್ನೆಲೆಗೆ ತಂದಿದೆ.

Read Full Story

06:28 AM (IST) Jun 15

ಮುನಿಸು ಮರೆತು ಒಂದಾದ ಮೈತ್ರಿ ಪಕ್ಷದ ನಾಯಕರು; ಅಕ್ಕಪಕ್ಕ‌ ಕುಳಿತು ಖುಷಿಯಿಂದಲೇ ಮಾತುಕತೆ

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್‌ ಜೊತೆ ಮೈತ್ರಿ ಬೇಡ ಎಂದಿದ್ದ ಬಿಜೆಪಿ ನಾಯಕ ಕೆ.ಸಿ.ನಾರಾಯಣಗೌಡ, ಇದೀಗ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಜೊತೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ನರೇಂದ್ರ ಮೋದಿ ಆಡಳಿತ ಸ್ಮರಣೆ ಕಾರ್ಯಕ್ರಮದಲ್ಲಿ ಇಬ್ಬರೂ ನಾಯಕರು ಅಕ್ಕಪಕ್ಕ ಕುಳಿತು ಖುಷಿಯಿಂದ ಮಾತನಾಡಿದ್ದು, ಮೈತ್ರಿ ಪಕ್ಷಗಳ ನಡುವಿನ ಮುನಿಸು ಶಮನವಾದಂತೆ ಕಂಡುಬಂದಿದೆ.
Read Full Story

06:16 AM (IST) Jun 15

ಉಚ್ಛಾಟಿತ ಈಶ್ವರಪ್ಪ, ಯತ್ನಾಳ್ ಮತ್ತೆ ಬಿಜೆಪಿ ಸೇರ್ಪಡೆ ಆಗ್ತಾರಾ? ರಮೇಶ ಜಾರಕಿಹೊಳಿ ಹೇಳಿದ್ದೇನು?

ಬಿಜೆಪಿಯಿಂದ ಉಚ್ಛಾಟಿತ ನಾಯಕರ ಮರುಸೇರ್ಪಡೆಗೆ ತಮ್ಮ ಬೆಂಬಲವಿದೆ, ಆದರೆ ಅಂತಿಮ ನಿರ್ಧಾರ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದ್ದಾರೆ. ತಮ್ಮ ಸಹೋದರ ಸತೀಶ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಗದಿರುವುದೇ ಒಳ್ಳೆಯದಾಯಿತು, ಇಲ್ಲದಿದ್ದರೆ ನಮ್ಮ ಸಮುದಾಯಕ್ಕೆ ಕೆಟ್ಟ ಹೆಸರು ಬರುತ್ತಿತ್ತು ಎಂದು ಅವರು ಅಭಿಪ್ರಾಯಪಟ್ಟರು.
Read Full Story

06:08 AM (IST) Jun 15

ಫ್ರೀ ಬಸ್‌ ಪಾಸ್‌ ಅರ್ಜಿ - ತಾಂತ್ರಿಕ ದೋಷದಿಂದ ವಿದ್ಯಾರ್ಥಿಗಳ ಪರದಾಟ

ಶಾಲಾ-ಕಾಲೇಜು ವಿದ್ಯಾರ್ಥಿಗಳ ಉಚಿತ ಬಸ್‌ಪಾಸ್‌ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಸರ್ವರ್ ಸಮಸ್ಯೆಯಿಂದಾಗಿ ಸ್ಥಗಿತಗೊಂಡಿದೆ. ಒಟಿಪಿ ಬಾರದಿರುವುದು ಮತ್ತು ಬೋರ್ಡಿಂಗ್/ಡ್ರಾಪಿಂಗ್ ಪಾಯಿಂಟ್ ದೋಷಗಳಿಂದಾಗಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಸಾಧ್ಯವಾಗದೆ, ಪ್ರತಿದಿನ ಹಣ ಕೊಟ್ಟು ಪ್ರಯಾಣಿಸುವಂತಾಗಿದೆ. ಈ ತಾಂತ್ರಿಕ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಬೇಕೆಂದು ವಿದ್ಯಾರ್ಥಿಗಳು ಮತ್ತು ಪೋಷಕರು ಆಗ್ರಹಿಸುತ್ತಿದ್ದಾರೆ.
Read Full Story

05:44 AM (IST) Jun 15

ವರುಣನ ಅಬ್ಬರಕ್ಕೆ ಸಿಲುಕಿದ ಬೆಂಗಳೂರು, ದಕ್ಷಿಣ ಕನ್ನಡ; ಎಲ್ಲಿ, ಎಷ್ಟು ಮಳೆ? ಇಲ್ಲಿದೆ ಮಾಹಿತಿ

ಭಾನುವಾರ ಬೆಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿದ ಮುಂಗಾರು ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಬೆಂಗಳೂರಿನ ರಸ್ತೆಗಳಲ್ಲಿ ನೀರು ನಿಂತು ಸಂಚಾರಕ್ಕೆ ಅಡ್ಡಿಯುಂಟಾದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರಕ್ಕೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಮುಂದಿನ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
Read Full Story

05:39 AM (IST) Jun 15

ಗೃಹಲಕ್ಷ್ಮೀ ಗ್ಯಾರಂಟಿ ಯೋಜನೆ ಸ್ಥಗಿತದ ಸುದ್ದಿಗೆ ಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ

‘ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿದಂತೆ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ, ಅವು ಶೇಕಡಾ ನೂರಕ್ಕೆ ನೂರರಷ್ಟು ಮುಂದುವರಿಯುತ್ತವೆ’ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ನಕಲಿ ಖಾತೆಗಳನ್ನು ತಡೆಯಲು ಫಲಾನುಭವಿಗಳ ದೃಢೀಕರಣಕ್ಕಾಗಿ ಮರು ಅರ್ಜಿ ಕೇಳಲಾಗಿದೆಯೇ ಹೊರತು, ಯೋಜನೆ ನಿಲ್ಲಿಸಲು ಅಲ್ಲ ಎಂದು ಅವರು ತಿಳಿಸಿದ್ದಾರೆ.
Read Full Story

05:32 AM (IST) Jun 15

ಹಣ ಇಲ್ಲದಿದ್ರೆ ಗ್ಯಾರಂಟಿ ಸ್ಕೀಂ ನೀಡಬೇಡಿ, ಸರಿಯಾಗಿ ಪ್ಲ್ಯಾನ್ ಮಾಡ್ಕೊಳ್ಳಿ - ವಿತ್ತ ಸಚಿವೆ ಸಲಹೆ

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಗ್ಯಾರಂಟಿಗಳಿಂದ ರಾಜ್ಯದ ಆರ್ಥಿಕತೆ ಮೇಲೆ ದುಷ್ಪರಿಣಾಮ ಬೀರುತ್ತಿದ್ದು, ಫಲಾನುಭವಿಗಳಿಗೆ ಕತ್ತರಿ ಹಾಕಲು ಸರ್ಕಾರ ಮುಂದಾಗಿದೆ ಎಂದು ಅವರು ಆರೋಪಿಸಿದ್ದಾರೆ.
Read Full Story

05:26 AM (IST) Jun 15

ಹೆಚ್ಚು ತೆರಿಗೆ ಕಟ್ಟಿದ್ದಕ್ಕೆ ಹೆಚ್ಚಿನ ಅನುದಾನ ಸಿಗದು - ನಿರ್ಮಲಾ ಸೀತಾರಾಮನ್ ತಿರುಗೇಟು

ಕೇಂದ್ರದಿಂದ ಕರ್ನಾಟಕಕ್ಕೆ ಅನುದಾನ ಹಂಚಿಕೆಯಲ್ಲಿ ಅನ್ಯಾಯವಾಗಿದೆ ಎಂಬ ರಾಜ್ಯ ಸರ್ಕಾರದ ಆರೋಪಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ತಿರುಗೇಟು ನೀಡಿದ್ದಾರೆ. ರಾಜ್ಯಗಳಿಗೆ ಅನುದಾನ ನಿಗದಿ ಮಾಡುವುದು ಹಣಕಾಸು ಆಯೋಗವೇ ಹೊರತು ಕೇಂದ್ರ ಸರ್ಕಾರವಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
Read Full Story

More Trending News