ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಹುಬ್ಲೋಟ್ ವಾಚನ್ನು ಧರಿಸಿ ಭಾರಿ ಸುದ್ದಿಯಾಗಿದ್ದರು. ಇದೀಗ ಇಂಥಹ ಸುದ್ದಿಯಲ್ಲಿ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಸಿಲುಕಿದ್ದು, ಬಿಸಿ ಬಿಸಿ ಚರ್ಚೆ ಆಗುತ್ತಿದೆ. ಇತ್ತೀಚೆಗೆ ಹಿರೇಬಗನಾಳ ಗ್ರಾಮಕ್ಕೆ ಆಗಮಿಸಿದ್ದ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರಸ್ವಾಮಿರೊಂದಿಗೆ ಸುತ್ತಾಡುವಾಗ ಹಿಟ್ನಾಳ ₹18 ಲಕ್ಷ ಮೌಲ್ಯದ ಹುಬ್ಲೋಟ್ ವಾಚ್ ಕಟ್ಟಿಕೊಂಡಿದ್ದರು. ಆ ಫೋಟೋ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಶಾಸಕರು ಶನಿವಾರದ ಕಾರ್ಯಕ್ರಮಕ್ಕೆ ಹುಬ್ಲೋಟ್ ಬದಲು ಬೇರೆಯ ವಾಚ್ ಕಟ್ಟಿಕೊಂಡಿದ್ದಾರೆ.
ಮಾಧ್ಯಮದವರು ಕೇಳಿದ್ದಕ್ಕೆ ‘ಯಾಕೆ ಅಂಥ ದುಬಾರಿ ವಾಚ್ ಕಟ್ಟಬಾರದೆ? ಅದು ನನ್ನ ಸಹೋದರನ ವಾಚ್, ಎರಡು ದಿನ ಕಟ್ಟಿಕೊಳ್ಳಲು ಕೊಟ್ಟಿದ್ದರು’ ಎಂದು ಶಾಸಕರು ಸಮರ್ಥಿಸಿಕೊಂಡಿದ್ದಾರೆ.
09:11 AM (IST) Mar 15
ಬೆಂಗಳೂರಿನ ನಿವಾಸಿಯೊಬ್ಬರು ತಮ್ಮ 6.5 ಕಿಲೋಮೀಟರ್ ಆಫೀಸ್ ಪ್ರಯಾಣಕ್ಕೆ ಒಂದು ಗಂಟೆಗಿಂತ ಹೆಚ್ಚು ಸಮಯ ತೆಗೆದುಕೊಂಡ ವಿಡಿಯೋವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ವೈರಲ್ ಆಗಿದ್ದು, ಸಿಲಿಕಾನ್ ಸಿಟಿಯ ಟ್ರಾಫಿಕ್ ಸಮಸ್ಯೆಯ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಚರ್ಚೆ ಹುಟ್ಟುಹಾಕಿದೆ.
08:50 AM (IST) Mar 15
Bengaluru: ಹಸಿ ಕಸದಿಂದ ಜೈವಿಕ ಅನಿಲ ಉತ್ಪಾದಿಸುವ ಬೃಹತ್ ಯೋಜನೆಗೆ ಚಾಲನೆ ನೀಡಲಾಗಿದ್ದು, ಕೋರಮಂಗಲ, ಕನ್ನಹಳ್ಳಿಗಳಲ್ಲಿ ಹೊಸ ಘಟಕಗಳು ಸ್ಥಾಪನೆಯಾಗುತ್ತಿದ್ದು, ಉತ್ಪಾದನೆಯಾದ ಗ್ಯಾಸ್ ಅನ್ನು ಬಯೋ ಸಿಎನ್ಜಿ ರೂಪದಲ್ಲಿ ಮಾರಾಟ ಮಾಡಿ, ಮನೆಗಳಿಗೆ ತಲುಪಿಸುವ ಯೋಜನೆಯೂ ಇದೆ.
08:38 AM (IST) Mar 15
ಕಾರ್ಕಳ ಮತ್ತು ಬೆಳ್ತಂಗಡಿ ತಾಲೂಕಿನ ಹಲವೆಡೆ ಶನಿವಾರ ಗುಡುಗು ಸಹಿತ ಅಕಾಲಿಕ ಮಳೆ ಸುರಿದಿದೆ. ಕಳೆದ ಕೆಲವು ದಿನಗಳ ಉರಿ ಬಿಸಿಲಿನಿಂದ ಬಳಲಿದ್ದ ಜನರಿಗೆ ಈ ಮಳೆಯು ತಂಪೆರೆದಿದ್ದು, ವಾತಾವರಣವನ್ನು ತಂಪಾಗಿಸಿದೆ.
08:18 AM (IST) Mar 15
08:18 AM (IST) Mar 15
ಪುಂಜಾಲಕಟ್ಟೆ-ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯ ಭಾಗವಾಗಿ, ಸೋಮಾವತಿ ನದಿಗೆ ಅಡ್ಡಲಾಗಿರುವ 70 ವರ್ಷ ಹಳೆಯ ಬೆಳ್ತಂಗಡಿ ಸೇತುವೆಯನ್ನು ತೆರವುಗೊಳಿಸಲಾಗುತ್ತಿದೆ. ಹೊಸ ಸರ್ವಿಸ್ ರಸ್ತೆ ಸೇತುವೆ ನಿರ್ಮಾಣಕ್ಕಾಗಿ ಈ ಐತಿಹಾಸಿಕ ಸೇತುವೆಯನ್ನು ಕೆಡವಲಾಗುತ್ತಿದೆ.
08:00 AM (IST) Mar 15
ಬೆಂಗಳೂರಿನಲ್ಲಿ ಪಾರ್ಟಿ ಮುಗಿಸಿ ಉಬರ್ ಕ್ಯಾಬ್ನಲ್ಲಿ ಮನೆಗೆ ಮರಳುತ್ತಿದ್ದ ಪ್ರಯಾಣಿಕ ನಿದ್ರೆಗೆ ಜಾರಿದ್ದಾರೆ. ಇದೇ ಸಮಯ ಸಾಧಿಸಿದ ಚಾಲಕ, ಪ್ರಯಾಣಿಕನ ಚಿನ್ನಾಭರಣ ಹಾಗೂ ಐಪೋನ್ ದೋಚಿ, ಮಾರ್ಗ ಮಧ್ಯದಲ್ಲೇ ಇಳಿಸಿ ಪರಾರಿಯಾಗಿದ್ದಾನೆ.
07:49 AM (IST) Mar 15
07:36 AM (IST) Mar 15
ಶ್ರೀರಂಗಪಟ್ಟಣದ ಶರವಣ ಹೋಟೆಲ್ನಲ್ಲಿ ಸಪ್ಲೈಯರ್ ಹರೀಶ್, ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ರೆಕಾರ್ಡಿಂಗ್ ಮಾಡುತ್ತಿದ್ದ. ಹೋಟೆಲ್ಗೆ ಬಂದ ಮಹಿಳೆಯೊಬ್ಬರ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
07:08 AM (IST) Mar 15
ಬೆಂಗಳೂರಿನ ಪ್ರಸಿದ್ಧ ಎಂ. ಚಿನ್ನಸ್ವಾಮಿ ಕ್ರೀಡಾಂಗಣವು ಇದೀಗ ಕನ್ನಡಮಯವಾಗುತ್ತಿದೆ. ಈ ಹಿಂದೆ ಕನ್ನಡ ಕಡೆಗಣನೆಗೆ ಟೀಕೆಗೊಳಗಾಗಿದ್ದ ಕೆಎಸ್ಸಿಎ, ಇದೀಗ ಹೊಸ ಗೇಟ್ಗಳು, ಸೂಚನಾ ಫಲಕಗಳಲ್ಲಿ ಕನ್ನಡಕ್ಕೆ ಮತ್ತು ಕರ್ನಾಟಕದ ಬಾವುಟದ ಹಳದಿ-ಕೆಂಪು ಬಣ್ಣಗಳಿಗೆ ಆದ್ಯತೆ ನೀಡಿದೆ.