ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಹುಬ್ಲೋಟ್ ವಾಚನ್ನು ಧರಿಸಿ ಭಾರಿ ಸುದ್ದಿಯಾಗಿದ್ದರು. ಇದೀಗ ಇಂಥಹ ಸುದ್ದಿಯಲ್ಲಿ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಸಿಲುಕಿದ್ದು, ಬಿಸಿ ಬಿಸಿ ಚರ್ಚೆ ಆಗುತ್ತಿದೆ. ಇತ್ತೀಚೆಗೆ ಹಿರೇಬಗನಾಳ ಗ್ರಾಮಕ್ಕೆ ಆಗಮಿಸಿದ್ದ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರಸ್ವಾಮಿರೊಂದಿಗೆ ಸುತ್ತಾಡುವಾಗ ಹಿಟ್ನಾಳ ₹18 ಲಕ್ಷ ಮೌಲ್ಯದ ಹುಬ್ಲೋಟ್ ವಾಚ್ ಕಟ್ಟಿಕೊಂಡಿದ್ದರು. ಆ ಫೋಟೋ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಶಾಸಕರು ಶನಿವಾರದ ಕಾರ್ಯಕ್ರಮಕ್ಕೆ ಹುಬ್ಲೋಟ್ ಬದಲು ಬೇರೆಯ ವಾಚ್ ಕಟ್ಟಿಕೊಂಡಿದ್ದಾರೆ.
ಮಾಧ್ಯಮದವರು ಕೇಳಿದ್ದಕ್ಕೆ ‘ಯಾಕೆ ಅಂಥ ದುಬಾರಿ ವಾಚ್ ಕಟ್ಟಬಾರದೆ? ಅದು ನನ್ನ ಸಹೋದರನ ವಾಚ್, ಎರಡು ದಿನ ಕಟ್ಟಿಕೊಳ್ಳಲು ಕೊಟ್ಟಿದ್ದರು’ ಎಂದು ಶಾಸಕರು ಸಮರ್ಥಿಸಿಕೊಂಡಿದ್ದಾರೆ.
11:45 PM (IST) Mar 15
ಆಟೋಮೋಟೀವ್ ರೀಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾದಿಂದ ವಾಹನಗಳ ಪರೀಕ್ಷೆ, ಪ್ರಮಾಣೀಕರಣ ಮತ್ತು ತಾಂತ್ರಿಕ ಸಂಶೋಧನೆಗಳನ್ನು ಇಲ್ಲಿಯೇ ನಡೆಸಲಾಗುವುದು ಎಂದು ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
11:21 PM (IST) Mar 15
ಮಗ ಮಾಡಿದ ಅವಾಂತರಕ್ಕೆ ಇಲ್ಲಿ ತಾಯಿಯೊಬ್ಬರು ಪ್ರಾಣ ಬಿಟ್ಟಿದ್ದಾರೆ. ಮಗ ಅನೈತಿಕ ಸಂಬಂಧ ಹೊಂದಿರುವುದಕ್ಕೆ ಇಡೀ ಕುಟುಂಬಕ್ಕೆ ಬಹಿಷ್ಕಾರ ಹಾಕಿ ಕಿರುಕುಳ ನೀಡಿದ್ದರಿಂದ ಆ ಯುವಕನ ತಾಯಿ ಮನನೊಂದು ನದಿಗೆ ಹಾರಿ ಸಾವಿಗೆ ಶರಣಾಗಿದ್ದಾರೆ.
10:37 PM (IST) Mar 15
10:35 PM (IST) Mar 15
10:24 PM (IST) Mar 15
09:29 PM (IST) Mar 15
KSRTC bus accident Honnavar: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹೆರಂಗಡಿ ಬಳಿ ಕೆಎಸ್ಆರ್ಟಿಸಿ ಬಸ್ ಮತ್ತು ಓಮ್ನಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓಮ್ನಿ ಚಾಲಕ ಮೃತಪಟ್ಟಿದ್ದಾರೆ.
09:19 PM (IST) Mar 15
ಬೆಂಗಳೂರಿನಲ್ಲಿ ತಿಂಗಳಿಗೆ ₹1.5 ಲಕ್ಷ ಸಂಬಳ ಪಡೆಯುವ ಯುವ ಸಾಫ್ಟ್ವೇರ್ ಡೆವಲಪರ್, ನಗರದ ದುಬಾರಿ ಜೀವನ ವೆಚ್ಚದಿಂದಾಗಿ ನಿರೀಕ್ಷಿತ ಉಳಿತಾಯ ಮಾಡಲು ವಿಫಲರಾಗುತ್ತಾರೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಈ ಪೋಸ್ಟ್, ಹೆಚ್ಚಿನ ಸಂಬಳದ ಹೊರತಾಗಿಯೂ ಬಾಡಿಗೆ, ಆಹಾರ, ಮತ್ತು ಪ್ರಯಾಣದಂತಹ ಖರ್ಚುಗಳು ಹೇಗೆ ಆದಾಯವನ್ನು ಕಬಳಿಸುತ್ತವೆ ಎಂಬುದನ್ನು ವಿವರಿಸುತ್ತದೆ.
08:31 PM (IST) Mar 15
Actor Shiva Rajkumar Son in Law Dileep: ನಟ ಶಿವರಾಜ್ಕುಮಾರ್ ಅವರ ಮೊದಲ ಮಗಳು ನಿರುಪಮಾ ಕೂಡ ಟಾಕ್ಟರ್, ಅವರ ಪತಿ ದಿಲೀಪ್ ಕೂಡ ಡಾಕ್ಟರ್. ರ್ಯಾಪಿಡ್ ರಶ್ಮಿ ಯುಟ್ಯೂಬ್ ಚಾನೆಲ್ಗೆ ನೀಡಿದ ಸಂದರ್ಶನದಲ್ಲಿ ದಿಲೀಪ್ ಅವರು ಪತ್ನಿ, ಮಾವ ಶಿವರಾಜ್ಕುಮಾರ್ ಬಗ್ಗೆ ಮಾತನಾಡಿದ್ದಾರೆ.
08:05 PM (IST) Mar 15
07:52 PM (IST) Mar 15
ಬಾಗಲಕೋಟೆ ಮತ್ತು ದಾವಣಗೆರೆ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ, ಬಾಗಲಕೋಟೆ ನಗರದಲ್ಲಿ ರಾಜಕೀಯ ನಾಯಕರ ಬ್ಯಾನರ್ಗಳು ಮತ್ತು ಫ್ಲೆಕ್ಸ್ಗಳನ್ನು ತೆರವುಗೊಳಿಸಲಾಗುತ್ತಿದೆ.ಎಚ್ ವೈ ಮೇಟಿ ಮತ್ತು ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಈ ಉಪಚುನಾವಣೆಗಳು ನಡೆಯುತ್ತಿವೆ.
07:41 PM (IST) Mar 15
ಮಾರುಕಟ್ಟೆಯಲ್ಲಿ 'ಧುರಂಧರ್ 2' ಸಿನಿಮಾ ಬಗ್ಗೆ ಸಿಕ್ಕಾಪಟ್ಟೆ ಕ್ರೇಜ್ ಇದೆ. ಈ ಸಿನಿಮಾ ಮಾರ್ಚ್ 19 ರಂದು ವಿಶ್ವಾದ್ಯಂತ ರಿಲೀಸ್ ಆಗಲಿದೆ. ಇದಕ್ಕೂ ಮುನ್ನ ಮಾರ್ಚ್ 18 ರಂದು ಪೇಯ್ಡ್ ಪ್ರಿವ್ಯೂ ಶೋ ಇರಲಿದೆ. ಈ ಎಲ್ಲದರ ನಡುವೆ ಒಂದು ದೊಡ್ಡ ಬ್ರೇಕಿಂಗ್ ನ್ಯೂಸ್ ಬಂದಿದೆ. ಅದೇನು ಅಂತ ನೋಡಿ..
07:35 PM (IST) Mar 15
Karna Kannada Serial Episode: ಕರ್ಣ ಧಾರಾವಾಹಿಯಲ್ಲಿ ಕರ್ಣ, ನಿಧಿ, ನಿತ್ಯಾ ಸುತ್ತವೇ ಕಥೆ ಸಾಗುತ್ತಿದೆ. ಕರ್ಣ ಯಾರನ್ನು ಮದುವೆ ಆಗ್ತಾನೆ? ನಿತ್ಯಾ ಕಥೆ ಏನಾಗಲಿದೆ ಎಂದು ಕಾದು ನೋಡಬೇಕಿದೆ. ಹೀಗಿರುವಾಗ ಒಂದು ಪಾತ್ರ ಅಂತ್ಯ ಆಗಲಿದೆಯಾ ಎಂಬ ಪ್ರಶ್ನೆ ಶುರುವಾಗಿದೆ.
06:30 PM (IST) Mar 15
06:14 PM (IST) Mar 15
ಮಲೆನಾಡು ಭಾಗದಲ್ಲಿ ಮಳೆ ಅಬ್ಬರಿಸಿದ್ದು, ಮಲೆನಾಡಿಗರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಮಳೆಗಾಗಿ ನಡೆದ ವಿಶೇಷ ಪೂಜೆ ಮುಗಿಯುವಷ್ಟರಲ್ಲೇ ಭಾರೀ ಮಳೆ ಸುರಿದ ಘಟನೆ ಭಕ್ತರಲ್ಲಿ ಸಂತಸ ಮೂಡಿಸಿದೆ.
05:39 PM (IST) Mar 15
ಗ್ಯಾರಂಟಿ ಯೋಜನೆಗಳಿಂದಾಗಿ ಅಭಿವೃದ್ಧಿಗೆ ಸರಕಾರ ಬಳಿ ಹಣವಿಲ್ಲ ಎಂದು ಬಿಜೆಪಿಯವರು ಸುಳ್ಳು ಆರೋಪ ಮಾಡುತ್ತಿದ್ದಾರೆ. ನಮ್ಮ ಸರಕಾರ ಗ್ಯಾರಂಟಿ ಹಾಗೂ ಅಭಿವೃದ್ಧಿಯನ್ನು ಸಮಾನ ಆದ್ಯತೆ ನೀಡುತ್ತಿದೆ.
05:21 PM (IST) Mar 15
04:20 PM (IST) Mar 15
ಪಾರಂಪರಿಕ ಕಲೆಯ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಯಶವಂತಪುರದಲ್ಲಿರುವ ಇಲಾಖೆಯ ಒಂದೂವರೆ ಎಕರೆ ಪ್ರದೇಶದಲ್ಲಿ ಕಟ್ಟಡ ನಿರ್ಮಿಸಲಾಗುವುದು ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.
02:44 PM (IST) Mar 15
02:41 PM (IST) Mar 15
ಒಡಿಶಾ ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ, ಬಿಜೆಪಿ 'ಆಪರೇಷನ್ ಕಮಲ'ದ ಮೂಲಕ ಶಾಸಕರಿಗೆ ತಲಾ 5 ಕೋಟಿ ರೂ. ಹಾಗೂ ಬ್ಲ್ಯಾಂಕ್ ಚೆಕ್ ಆಮಿಷವೊಡ್ಡಿದೆ ಎಂದು ಕಾಂಗ್ರೆಸ್ ಸಂಸದ ಸಪ್ತಗಿರಿ ಉಲಾಖ ಆರೋಪಿಸಿದ್ದಾರೆ. ಬಿಡದಿಯ ರೆಸಾರ್ಟ್ನಲ್ಲಿ ಕುದುರೆ ವ್ಯಾಪಾರ ಯತ್ನದ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ.
01:58 PM (IST) Mar 15
Monetize AI ಕೃತಕ ಬುದ್ಧಿಮತ್ತೆ (AI) ಬಳಸಿ ಮನೆಯಿಂದಲೇ ಹಣ ಗಳಿಸುವುದು ಹೇಗೆ? ಆರಂಭಿಕರಿಗಾಗಿ ಇಲ್ಲಿದೆ ಸಂಪೂರ್ಣ ಮಾಹಿತಿ. ಹಣ ಗಳಿಸಲು 5 ಅತ್ಯುತ್ತಮ ಮಾರ್ಗಗಳನ್ನು ಇಲ್ಲಿ ವಿವರಿಸಲಾಗಿದೆ.
01:45 PM (IST) Mar 15
01:23 PM (IST) Mar 15
ಪರಮ್ ಫೌಂಡೇಶನ್ ಆಯೋಜಿಸಿದ್ದ ಕಲಾ ಸಂವಾದದಲ್ಲಿ ತೆಲುಗಿನ ಶ್ರೇಷ್ಠ ನಿರ್ದೇಶಕ ಕೆ. ವಿಶ್ವನಾಥ್ ಅವರ 'ಸ್ವರ್ಣಕಮಲಂ' ಚಿತ್ರದ ಬಗ್ಗೆ ಶತಾವಧಾನಿ ಡಾ. ಆರ್. ಗಣೇಶ್ ಅವರ ಮಾತುಗಳಲ್ಲಿ ರಸದರ್ಶನ
01:19 PM (IST) Mar 15
ಟೀಂ ಇಂಡಿಯಾದ ಸ್ಟಾರ್ ಸ್ಪಿನ್ನರ್ ಕುಲ್ದೀಪ್ ಯಾದವ್ ತಮ್ಮ ಜೀವನದ ಅತಿ ಮುಖ್ಯ ಇನ್ನಿಂಗ್ಸ್ ಆರಂಭಿಸಿದ್ದಾರೆ. ಕುಲ್ದೀಪ್ ಮನೆಗೆ ಬಂದಿರುವ ವಂಶಿಕಾ ಚಡ್ಡಾ, ಇನ್ಮುಂದೆ ಅವರ ಪ್ರತಿಯೊಂದು ಸುಖ-ದುಃಖದಲ್ಲಿ ಜೊತೆಯಾಗಿರಲಿದ್ದಾರೆ.
01:10 PM (IST) Mar 15
ರಶ್ಮಿಕಾ ಮಂದಣ್ಣ ಅವರ ಮದುವೆ ಸುದ್ದಿಯ ಬಳಿಕ, ರಕ್ಷಿತ್ ಶೆಟ್ಟಿ ಅಭಿನಯದ 'ಸಪ್ತಸಾಗರದಾಚೆ ಎಲ್ಲೋ' ಚಿತ್ರದ ಪ್ರೇಮ ವೈಫಲ್ಯದ ಕಥೆಯು ಅವರ ನಿಜ ಜೀವನದ ಕಥೆಯೇ ಎಂಬ ಚರ್ಚೆ ಶುರುವಾಗಿದೆ. ತಮಗೆ ಒಂದಲ್ಲ ಹಲವು ಬ್ರೇಕಪ್ಗಳಾಗಿವೆ ಎಂದು ರಕ್ಷಿತ್ ಶೆಟ್ಟಿ ಹೇಳಿದ್ದು, ಸಿನಿಮಾ ಬಗ್ಗೆ ಏನಂದ್ರು?
01:09 PM (IST) Mar 15
01:00 PM (IST) Mar 15
ಕಲರ್ಸ್ ಕನ್ನಡದ ಜನಪ್ರಿಯ 'ನಂದಗೋಕುಲ' ಧಾರಾವಾಹಿ ಚಿತ್ರೀಕರಣದ ವೇಳೆ ನಡೆದ ಘಟನೆಯೊಂದು ವೈರಲ್ ಆಗಿದೆ. ಭಾವುಕ ದೃಶ್ಯವೊಂದರಲ್ಲಿ ನಟಿಸುವಾಗ ನಿರ್ದೇಶಕರ ಮಾತಿಗೆ ನಟಿ ಊರ್ಜಿತಾ ವಾಲ್ತಾಜೆ (ಅಮೂಲ್ಯ) ನಿಜವಾಗಿಯೂ ಕಣ್ಣೀರು ಹಾಕಿದ್ದಾರೆ. ಈ ಕ್ಷಣವನ್ನು ಸಹನಟ ಅಭಿಷೇಕ್ ಮೊಬೈಲ್ನಲ್ಲಿ ಸೆರೆಹಿಡಿದಿದ್ದಾರೆ.
12:49 PM (IST) Mar 15
ಯಲಹಂಕದ ಖಾಸಗಿ ಶಾಲೆಯೊಂದರಲ್ಲಿ 2 ನಿಮಿಷ ತಡವಾಗಿ ಬಂದ ಒಂದನೇ ತರಗತಿ ಮಕ್ಕಳಿಗೆ ಪ್ರಾಂಶುಪಾಲರು 2 ಗಂಟೆಗಳ ಕಾಲ ಬಿಸಿಲಿನಲ್ಲಿ ನಿಲ್ಲಿಸಿ ಶಿಕ್ಷೆ ನೀಡಿದ್ದಾರೆ. ಈ ಅಮಾನವೀಯ ಘಟನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಪ್ರಶ್ನಿಸಿದ ಪೋಷಕರಿಗೆ ಪ್ರಾಂಶುಪಾಲೆ ಉಡಾಫೆ ಉತ್ತರ ನೀಡಿದ್ದಾರೆ.
12:25 PM (IST) Mar 15
ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಹಮಾಸ್ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದೆ. ಅಮೆರಿಕ-ಇಸ್ರೇಲ್ ದಾಳಿಗೆ ಪ್ರತಿಯಾಗಿ ದಾಳಿ ಮಾಡುವ ಹಕ್ಕು ಇರಾನ್ಗೆ ಇದೆ, ಆದರೆ ಅಕ್ಕಪಕ್ಕದ ದೇಶಗಳನ್ನು ಟಾರ್ಗೆಟ್ ಮಾಡಬಾರದು ಎಂದು ಹಮಾಸ್ ಮನವಿ ಮಾಡಿದೆ. ಈ ಯುದ್ಧವನ್ನು ತಕ್ಷಣ ನಿಲ್ಲಿಸುವಂತೆ ಎಲ್ಲ ದೇಶಗಳಿಗೂ ಮನವಿ
12:12 PM (IST) Mar 15
12:02 PM (IST) Mar 15
11:50 AM (IST) Mar 15
ಬೆಂಗಳೂರಿನಲ್ಲಿ ಆಸ್ತಿ ವಿಚಾರವಾಗಿ ನಡೆದ ಜಗಳದಲ್ಲಿ, ಹಿರಿಯ ಮಗ ಪ್ರಕಾಶ್ ತನ್ನ ವೃದ್ಧ ತಾಯಿ ಲಕ್ಷ್ಮೀ ಅವರ ಮೇಲೆ ವಾಕಿಂಗ್ ಸ್ಟಿಕ್ನಿಂದ ಮಾರಣಾಂತಿಕ ಹಲ್ಲೆ.. ಗಂಭೀರವಾಗಿ ಗಾಯಗೊಂಡ ತಾಯಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು, ಈ ಸಂಬಂಧ ತಿಲಕನಗರ ಪೊಲೀಸರು ಆರೋಪಿ ಮಗ ಪೊಲೀಸರ ವಶಕ್ಕೆ
11:44 AM (IST) Mar 15
ಬೆಂಗಳೂರಲ್ಲಿ 2BHK ಮನೆಗೆ ತಿಂಗಳಿಗೆ 60 ಸಾವಿರ ಬಾಡಿಗೆ, ವಿಡಿಯೋ ಮಾಡಿ ಕಾರಣ ಬಹಿರಂಗಪಡಿಸಿದ ಜೋಡಿ, ಬೆಂಗಳೂರಿನ ದುಬಾರಿ ಬಾಡಿಗೆ ಪ್ರತಿ ಬಾರಿ ಸದ್ದು ಮಾಡುತ್ತೆ. ಆದರೆ ಈ ಬಾರಿ ಈ ಮನೆಗೆ ಇಷ್ಟು ಕೊಡುವುದು ಸರಿಯಾಗಿದೆ ಎಂದಿದ್ದಾರೆ.
11:00 AM (IST) Mar 15
ಶ್ರೀರಂಗಪಟ್ಟಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಶ್ರೀಗಳ ಸಮ್ಮುಖದಲ್ಲೇ 'ಸ್ವಾಮೀಜಿ ದಾರಿ ತಪ್ಪುತ್ತಿದ್ದಾರೆ' ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಬೇಸರ
09:52 AM (IST) Mar 15
09:11 AM (IST) Mar 15
ಬೆಂಗಳೂರಿನ ನಿವಾಸಿಯೊಬ್ಬರು ತಮ್ಮ 6.5 ಕಿಲೋಮೀಟರ್ ಆಫೀಸ್ ಪ್ರಯಾಣಕ್ಕೆ ಒಂದು ಗಂಟೆಗಿಂತ ಹೆಚ್ಚು ಸಮಯ ತೆಗೆದುಕೊಂಡ ವಿಡಿಯೋವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ವೈರಲ್ ಆಗಿದ್ದು, ಸಿಲಿಕಾನ್ ಸಿಟಿಯ ಟ್ರಾಫಿಕ್ ಸಮಸ್ಯೆಯ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಚರ್ಚೆ ಹುಟ್ಟುಹಾಕಿದೆ.
08:50 AM (IST) Mar 15
Bengaluru: ಹಸಿ ಕಸದಿಂದ ಜೈವಿಕ ಅನಿಲ ಉತ್ಪಾದಿಸುವ ಬೃಹತ್ ಯೋಜನೆಗೆ ಚಾಲನೆ ನೀಡಲಾಗಿದ್ದು, ಕೋರಮಂಗಲ, ಕನ್ನಹಳ್ಳಿಗಳಲ್ಲಿ ಹೊಸ ಘಟಕಗಳು ಸ್ಥಾಪನೆಯಾಗುತ್ತಿದ್ದು, ಉತ್ಪಾದನೆಯಾದ ಗ್ಯಾಸ್ ಅನ್ನು ಬಯೋ ಸಿಎನ್ಜಿ ರೂಪದಲ್ಲಿ ಮಾರಾಟ ಮಾಡಿ, ಮನೆಗಳಿಗೆ ತಲುಪಿಸುವ ಯೋಜನೆಯೂ ಇದೆ.
08:38 AM (IST) Mar 15
ಕಾರ್ಕಳ ಮತ್ತು ಬೆಳ್ತಂಗಡಿ ತಾಲೂಕಿನ ಹಲವೆಡೆ ಶನಿವಾರ ಗುಡುಗು ಸಹಿತ ಅಕಾಲಿಕ ಮಳೆ ಸುರಿದಿದೆ. ಕಳೆದ ಕೆಲವು ದಿನಗಳ ಉರಿ ಬಿಸಿಲಿನಿಂದ ಬಳಲಿದ್ದ ಜನರಿಗೆ ಈ ಮಳೆಯು ತಂಪೆರೆದಿದ್ದು, ವಾತಾವರಣವನ್ನು ತಂಪಾಗಿಸಿದೆ.
08:18 AM (IST) Mar 15
08:18 AM (IST) Mar 15
ಪುಂಜಾಲಕಟ್ಟೆ-ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯ ಭಾಗವಾಗಿ, ಸೋಮಾವತಿ ನದಿಗೆ ಅಡ್ಡಲಾಗಿರುವ 70 ವರ್ಷ ಹಳೆಯ ಬೆಳ್ತಂಗಡಿ ಸೇತುವೆಯನ್ನು ತೆರವುಗೊಳಿಸಲಾಗುತ್ತಿದೆ. ಹೊಸ ಸರ್ವಿಸ್ ರಸ್ತೆ ಸೇತುವೆ ನಿರ್ಮಾಣಕ್ಕಾಗಿ ಈ ಐತಿಹಾಸಿಕ ಸೇತುವೆಯನ್ನು ಕೆಡವಲಾಗುತ್ತಿದೆ.
08:00 AM (IST) Mar 15
ಬೆಂಗಳೂರಿನಲ್ಲಿ ಪಾರ್ಟಿ ಮುಗಿಸಿ ಉಬರ್ ಕ್ಯಾಬ್ನಲ್ಲಿ ಮನೆಗೆ ಮರಳುತ್ತಿದ್ದ ಪ್ರಯಾಣಿಕ ನಿದ್ರೆಗೆ ಜಾರಿದ್ದಾರೆ. ಇದೇ ಸಮಯ ಸಾಧಿಸಿದ ಚಾಲಕ, ಪ್ರಯಾಣಿಕನ ಚಿನ್ನಾಭರಣ ಹಾಗೂ ಐಪೋನ್ ದೋಚಿ, ಮಾರ್ಗ ಮಧ್ಯದಲ್ಲೇ ಇಳಿಸಿ ಪರಾರಿಯಾಗಿದ್ದಾನೆ.