LIVE NOW
Published : Sep 15, 2026, 07:01 AM ISTUpdated : Sep 15, 2026, 08:33 AM IST

Karnataka News Live: ಮಂಡ್ಯ - ಗಣಪತಿ ಹಬ್ಬದ ಸಂಭ್ರಮದ ನಡುವೆ ಮದ್ದೂರಲ್ಲಿ ಘೋರ ದುರಂತ! ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು!

ಸಾರಾಂಶ

ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ಆಡಳಿತ ಸರ್ಕಾರಕ್ಕೆ 100 ದಿನದ ಸಾಧನಾ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅಸಮಾಧಾನಗೊಂಡಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಈ ಸಂಬಂಧ ಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಕಾರ್ಯಕ್ರಮಕ್ಕೆ ಎಲ್ಲಾ ಪಕ್ಷದ ಶಾಸಕರನ್ನೂ ಕರೆದಿದ್ದೇವೆ. ನಮ್ಮ ಪಕ್ಷದ ಅಧ್ಯಕ್ಷರಿಗೂ ಕಾರ್ಯಕ್ರಮಕ್ಕೆ ಆಹ್ವಾನ ಮಾಡಲಾಗಿದೆ. ಪ್ರೋಟೋಕಾಲ್ ನಿಂದಾಗಿ ವೇದಿಕೆ ಮೇಲೆ ಕರೆದಿಲ್ಲ. ಆಹ್ವಾನ ನೀಡಿಲ್ಲ ಅಂತ ಯಾರು ಹೇಳಿದ್ದು ಎಂದು ಪ್ರಶ್ನೆ ಮಾಡಿದರು. ಪಕ್ಷದಲ್ಲಿ ಜೊತೆಗೆ ನಾವು ಕೆಲಸ ಮಾಡಿಕೊಂಡು ಹೋಗ್ತಿದ್ದೇವೆ. ಇದರಲ್ಲಿ ನೀವು ರಾಜಕೀಯ ಮಾಡ್ತಿದ್ದೀರಿ ಎಂದು ಸಿಎಂ ಹೇಳಿದರು.

ಶಿಷ್ಟಾಚಾರಕ್ಕಾದರೂ ಒಂದು ಸಣ್ಣ ಫೋಟೋ ಕೂಡ ಹಾಕಿಲ್ಲ. ವಿಧಾನಪರಿಷತ್ ಸದಸ್ಯನಾಗಿದ್ದೇನೆ, ಆದರೂ ಆಹ್ವಾನ ಕೊಟ್ಟಿಲ್ಲ ಎಂದು ಎಐಸಿಸಿ ನಾಯಕರ ಬಳಿ ಬಿಕೆ ಹರಿಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದೆ.

08:33 AM (IST) Sep 15

ಮಂಡ್ಯ - ಗಣಪತಿ ಹಬ್ಬದ ಸಂಭ್ರಮದ ನಡುವೆ ಮದ್ದೂರಲ್ಲಿ ಘೋರ ದುರಂತ! ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು!

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪ ಬಳಿ ಹಾಲಿನ ಟ್ಯಾಂಕರ್ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ. ಗಣಪತಿ ಹಬ್ಬಕ್ಕಾಗಿ ಬೆಂಗಳೂರಿನಿಂದ ಬಂದಿದ್ದ ಒಂದೇ ಕುಟುಂಬದ ಮಗು ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Read Full Story

08:13 AM (IST) Sep 15

ನಿಂತಲ್ಲೇ ನಿಂತ ತಾಳಗುಪ್ಪ ಎಕ್ಸ್‌ಪ್ರೆಸ್‌ - ಬೆಂಗಳೂರಿಗೆ ಬರುತ್ತಿರೋ ಪ್ರಯಾಣಿಕರು ಹೈರಾಟು

ತಾಳಗುಪ್ಪದಿಂದ ಬೆಂಗಳೂರಿಗೆ ಹೊರಟಿದ್ದ ಎಕ್ಸ್‌ಪ್ರೆಸ್ ರೈಲು (20652) ಆನೆಯೊಂದು ಮರವನ್ನು ಉರುಳಿಸಿದ್ದರಿಂದ ಆನಂದಪುರ ನಿಲ್ದಾಣದಲ್ಲಿ ನಿಂತಿದೆ. ಮರ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ರೈಲು ಸಂಚಾರದಲ್ಲಿ ಹಲವು ಗಂಟೆಗಳ ವಿಳಂಬ ಉಂಟಾಗಿದೆ.
Read Full Story

More Trending News