Published : Aug 16, 2026, 07:18 AM ISTUpdated : Aug 16, 2026, 11:34 PM IST

Karnataka News Live: Exclusive - ಕರಾವಳಿಯ ಮಹಾಬಲ ಪಾತ್ರ ನನಗೆ ಬಲ ತುಂಬಿದೆ - ನಟ ಮಿತ್ರ ಸಂದರ್ಶನ

ಸಾರಾಂಶ

ಹಾನಗಲ್ಲ: ರಾಜ್ಯ ಸರ್ಕಾರದಿಂದ ಬಡವರಿಗೆ ಕಡಿಮೆ ದರದಲ್ಲಿ ನಿವೇಶನ, ಕಡುಬಡವರಿಗೆ ಉಚಿತ ನಿವೇಶನ ಯೋಜನೆ ಅರಂಭವಾಗಲಿದೆ. ಅಲ್ಲದೆ, 6 ತಿಂಗಳಲ್ಲಿ 72 ಸಾವಿರ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಿದ್ದೇವೆ ಎಂದು ರಾಜ್ಯ ಕರ್ನಾಟಕ ಗೃಹ ಮಂಡಳಿ ನೂತನ ಅಧ್ಯಕ್ಷ ಶಾಸಕ ಶ್ರೀನಿವಾಸ್ ಮಾನೆ ತಿಳಿಸಿದರು. 

ಸ್ವಾತಂತ್ರ್ಯ ದಿನೋತ್ಸವದಲ್ಲಿ ಮಾತನಾಡಿದ ಅವರು, ಜನಸಾಮಾನ್ಯರ ಸಮಸ್ಯೆಗಳನ್ನು ಈಡೇರಿಸಲು ಬದ್ಧರಾಗಿದ್ದೇವೆ. ದೆಹಲಿಯಲ್ಲಿ ನಮ್ಮ ರಾಜ್ಯದ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ಕರ್ನಾಟಕ ಭವನ ಆರಂಭಿಸಲಾಗಿದೆ. ಸಮರ್ಥ ಸಮೃದ್ಧ ಭಾರತ ನಿರ್ಮಾಣ ನಮ್ಮ ಆದ್ಯತೆ ಎಂದರು

11:34 PM (IST) Aug 16

Exclusive - ಕರಾವಳಿಯ ಮಹಾಬಲ ಪಾತ್ರ ನನಗೆ ಬಲ ತುಂಬಿದೆ - ನಟ ಮಿತ್ರ ಸಂದರ್ಶನ

‘ರಾಗ’ ಮತ್ತು ‘ಪರಸಂಗ’ ಸಿನಿಮಾಗಳಿಂದ. ಯಾಕೆಂದರೆ ‘ರಾಗ’ ಸಿನಿಮಾ ನಂತರ ನನ್ನ ಎಲ್ಲರು ನಿರ್ಮಾಪಕ, ಹೀರೋ ಅಂದುಕೊಂಡರು. ಹೀಗಾಗಿ ನನಗೆ ಪಾತ್ರಗಳು ಬರಲೇ ಇಲ್ಲ ಎಂದು ಸಂದರ್ಶನದಲ್ಲಿ ನಟ ಮಿತ್ರ ಹೇಳಿದರು.

Read Full Story

11:07 PM (IST) Aug 16

Rocking - ಯಶ್‌ ಜತೆ ಫೋಟೋ ತೆಗೆಸಿಕೊಳ್ಳುವಾಗ ಕಣ್ಣೀರಿಟ್ಟ ಅಭಿಮಾನಿ! ಒಂದೇ ಹೃದಯ ಸರ್‌, ಎಷ್ಟು ಬಾರಿ ಗೆಲ್ತೀರಿ? ಎಂದಾಗ ರಾಕಿ ಭಾಯ್ ಭಾವುಕ; ವೈರಲ್‌ ಆಯ್ತು ಪೋಸ್ಟ್!

'ಆಪ್‌ ಕೀ ಅದಾಲತ್‌' ಕಾರ್ಯಕ್ರಮದ ನಂತರ ನಟ ಯಶ್‌ ಜೊತೆ ಫೋಟೋ ತೆಗೆಸಿಕೊಳ್ಳುವಾಗ ಅಭಿಮಾನಿಯೊಬ್ಬರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. "ನಮಗಿರೋದು ಒಂದೇ ಹೃದಯ ಸರ್‌, ಅದನ್ನ ಎಷ್ಟು ಬಾರಿ ಗೆಲ್ತೀರಿ?" ಎಂಬ ಅಭಿಮಾನಿಯ ಮಾತಿಗೆ ಯಶ್ ಕೂಡ ಭಾವುಕರಾದರು. ಈ ಭಾವನಾತ್ಮಕ ಕ್ಷಣದ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Read Full Story

10:49 PM (IST) Aug 16

ಶಾಲಾ-ಕಾಲೇಜುಗಳು ಸೇರಿ ಉಡುಪಿ ಜಿಲ್ಲೆಗೆ ನಾಳೆ ಸಾರ್ವತ್ರಿಕ ರಜೆ ಘೋಷಣೆ..!

ನಾಗರಪಂಚಮಿ ಹಬ್ಬದ ಪ್ರಯುಕ್ತ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಎಲ್ಲಾ ಶಾಲೆಗಳು, ಕಾಲೇಜುಗಳು ಮತ್ತು ಸರ್ಕಾರಿ ಕಚೇರಿಗಳಿಗೆ ನಾಳೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.

Read Full Story

10:22 PM (IST) Aug 16

Hanuru - ಚಾಮರಾಜನಗರ ಎನ್‌ಕೌಂಟರ್‌ ಪ್ರಕರಣಕ್ಕೆ ತಮಿಳುನಾಡು ಸಿಎಂ ಎಂಟ್ರಿ; ಕೇಸ್‌ಗೆ ಬಿಗ್‌ ಟ್ವಿಸ್ಟ್‌!

ಚಾಮರಾಜನಗರದ ಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮೃತಪಟ್ಟಿದ್ದಾರೆ. ಈ ಘಟನೆಗೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಪ್ರತಿಕ್ರಿಯಿಸಿದ್ದು, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ್ದಾರೆ. ಈ ಬೆಳವಣಿಗೆಯು ಪ್ರಕರಣಕ್ಕೆ ರಾಜಕೀಯ ಆಯಾಮವನ್ನು ನೀಡಿದ್ದು, ಕರ್ನಾಟಕ ಮತ್ತು ತಮಿಳುನಾಡು ನಡುವೆ ಗಮನ ಸೆಳೆದಿದೆ.
Read Full Story

09:34 PM (IST) Aug 16

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಶಾಲಾ ಕಾಲೇಜು ಸೇರಿ ಸರ್ಕಾರಿ ಕಚೇರಿಗಳಿಗೆ ರಜೆ, ಜಿಲ್ಲಾಧಿಕಾರಿ ಆದೇಶ

ದಕ್ಷಿಣ ಕನ್ನಡದಲ್ಲಿ ನಾಳೆ (ಆ.17) ಒಂದು ದಿನದ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ದರ್ಶನ್ ಆದೇಶ ಹೊರಡಿಸಿದ್ದಾರೆ. ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳು ಸೇರಿದಂತೆ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ.

Read Full Story

09:30 PM (IST) Aug 16

ಚಾಮರಾಜನಗರ ಎನ್‌ಕೌಂಟರ್ ಕೇಸ್‌ಗೆ ಬಿಗ್ ಟ್ವಿಸ್ಟ್! ಬರೋಬ್ಬರಿ 30 ಕೆಜಿ ಮಾಂಸ ಪತ್ತೆ..!

ಚಾಮರಾಜನಗರ ಶೂಟೌಟ್‌ ಕೇಸ್‌ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅರಣ್ಯಾಧಿಕಾರಿಗಳು ಇವತ್ತು ಮತ್ತೊಂದು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಅದರಲ್ಲಿ ಇರುವ ವಿಚಾರಗಳು ಪ್ರಕರಣಕ್ಕೆ ಮೇಜರ್ ತಿರುವು ನೀಡುವ ಸಾಧ್ಯತೆಗಳು ದಟ್ಟವಾಗಿವೆ.

Read Full Story

09:21 PM (IST) Aug 16

Bollywood - ಆ ಖಡಕ್ ಆಫೀಸರ್‌ ಮಾತಿಗೆ ಬಾಲಿವುಡ್ ಶೇಕ್? ಶಾರುಖ್‌, ಅಜಯ್ ದೇವಗನ್‌, ಟೈಗರ್‌ಗೆ ಎದುರಾಯ್ತು ಕಾನೂನು ಸಂಕಷ್ಟ! ಏನು ಶಿಕ್ಷೆ?

ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್ ಅವರು ಪಾನ್ ಮಸಾಲಾ ಬ್ರ್ಯಾಂಡ್‌ನ ಪರೋಕ್ಷ ಪ್ರಚಾರದ (ಸರೋಗೇಟ್ ಜಾಹೀರಾತು) ಆರೋಪದ ಮೇಲೆ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಹಾರಾಷ್ಟ್ರದ ಎಫ್‌ಡಿಎ ಮುಖ್ಯಸ್ಥ ತುಕಾರಾಮ್ ಮುಂಢೆ ಅವರು ಈ ನಟರಿಗೆ ಶೋ-ಕಾಸ್ ನೋಟಿಸ್ ಜಾರಿ ಮಾಡಿದ್ದು, 15 ದಿನಗಳಲ್ಲಿ ಉತ್ತರಿಸಲು ಗಡುವು ನೀಡಿದ್ದಾರೆ.
Read Full Story

09:14 PM (IST) Aug 16

ಮದುವೆ ಮನೆಯಲ್ಲಿ ಡಿ-ಬಾಸ್ ಜೈಕಾರ - ಅಭಿಮಾನಿಗಳಿಗೆ ಪ್ರೀತಿಯಿಂದಲೇ ವಾರ್ನಿಂಗ್ ಕೊಟ್ರು ವಿಜಯಲಕ್ಷ್ಮಿ!

ನಟ ದರ್ಶನ್ ಅವರಿಗೆ ಇರುವ ಅಭಿಮಾನಿ ಬಳಗದ ಕ್ರೇಜ್‌ ಬಗ್ಗೆ ಪ್ರತ್ಯೇಕವಾಗಿ ಹೇಳಬೇಕಿಲ್ಲ. ದರ್ಶನ್ ಎಲ್ಲೇ ಕಾಣಿಸಿಕೊಂಡರೂ, ಅವರ ಹೆಸರು ಕೇಳಿದರೂ ಅಭಿಮಾನಿಗಳು ‘ಡಿ-ಬಾಸ್’ ಎಂದು ಜೈಕಾರ ಹಾಕುವುದು ಸಾಮಾನ್ಯ.

Read Full Story

08:45 PM (IST) Aug 16

Cricket - ಮ್ಯಾಚ್‌ ನಡೆಯುತ್ತಿರುವಾಗಲೇ ದಿಗ್ಗಜ ಆಟಗಾರನ ಅಸಮಾಧಾನ ಸ್ಫೋಟ! ಟೀಮ್‌ಗೆ ನನ್ನ ಮೇಲೆ ನಂಬಿಕೆಯಿಲ್ಲ, ಒಳೊಳಗೆ ತಾರತಮ್ಯ ನಡಿತಿದೆ ಎಂದ ಸ್ಟಾರ್‌ ಪ್ಲೇಯರ್!

ಟೀಮ್ ಇಂಡಿಯಾದ ದಿಗ್ಗಜ ಆಟಗಾರರೊಬ್ಬರು ರವೀಂದ್ರ ಜಡೇಜಾ ಅವರು ತಮ್ಮ ಬ್ಯಾಟಿಂಗ್ ಕ್ರಮಾಂಕದಲ್ಲಿನ ಹಿನ್ನಡೆ ಮತ್ತು ತಂಡದಲ್ಲಿನ ತಾರತಮ್ಯದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇಶೀಯ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದರೂ, ಅಶ್ವಿನ್‌ಗಿಂತಲೂ ಕೆಳ ಕ್ರಮಾಂಕಕ್ಕೆ ತಳ್ಳಿದ್ದು ತಮ್ಮ ಆತ್ಮವಿಶ್ವಾಸವನ್ನು ಕುಗ್ಗಿಸಿತ್ತು ಎಂದು ಅವರು ಬಹಿರಂಗಪಡಿಸಿದ್ದಾರೆ.

Read Full Story

08:36 PM (IST) Aug 16

ಅತ್ಯಂತ ವಿದ್ಯಾವಂತೆ.. ನಲಪಾಡ್ ಕೈಹಿಡಿದ ಮಲಿಹಾ ಫಾತಿಮಾ ಯಾರು?

ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಕೊಡಗಿನ ಮಡಿಕೇರಿಯಲ್ಲಿ ಕಾನೂನು ಪದವೀಧರೆ ಹಾಗೂ ಎಂಎನ್‌ಸಿ ಉದ್ಯೋಗಿ ಮಲಿಹಾ ಫಾತಿಮಾ ಅವರನ್ನು ವಿವಾಹವಾದರು. ಯಾರು ಈ ಮಲಿಹಾ ಫಾತಿಮಾ?

Read Full Story

08:15 PM (IST) Aug 16

ಮದುವೆ ಸಂಭ್ರಮದಲ್ಲಿ ನಲಪಾಡ್.. ಅದ್ದೂರಿ ಕಾರ್‍ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್, ಸುದೀಪ್, ಯಶ್ ಭಾಗಿ

ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಅವರು ಕೊಡಗಿನ ಮಡಿಕೇರಿಯ ರೆಸಾರ್ಟ್‌ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಕಾನೂನು ಪದವೀಧರೆ ಮಲಿಹಾ ಫಾತಿಮಾ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಈ ಹೈ-ಪ್ರೊಫೈಲ್ ಮದುವೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್, ನಟರಾದ ಕಿಚ್ಚ ಸುದೀಪ್ ಮತ್ತು ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿ ನವದಂಪತಿಗೆ ಶುಭ ಹಾರೈಸಿದರು.

Read Full Story

08:06 PM (IST) Aug 16

‘ನಮ್ಮದೇ ಸರ್ಕಾರ ಅಂತ ಕಾನೂನು ದುರ್ಬಳಕೆ ಮಾಡೋಕೆ ಆಗಲ್ಲ’ - RSS ವಿವಾದದಲ್ಲಿ ಡಿಕೆಶಿ ಸ್ಪಷ್ಟನೆ

ಆರ್ ಎಸ್ ಎಸ್ ಹಿಂದೆಯೂ ನೋಂದಣಿಯಾಗಿಲ್ಲ ಮುಂದೆಯೂ ನೋಂದಣಿ ಆಗಲ್ಲ ಎಂದಿರುವ ಆರ್ಎಸ್ಎಸ್ ರಾಷ್ಟ್ರೀಯ ನಾಯಕ ಸಂತೋಷ್ ಅವರಿಗೆ ಸಿಎಂ ಡಿ.ಕೆ. ಶಿವಕುಮಾರ್ ಅವರು ತಣ್ಣಗೆ ತಿರುಗೇಟು ನೀಡಿದ್ದಾರೆ.

Read Full Story

08:02 PM (IST) Aug 16

Police - ಹಾಡು ಹಗಲೇ ಖಾಕಿ ದರ್ಪ; ಜಗಳ ಬಿಡಿಸಲು ಹೋದ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡಿದ ಪಿಎಸ್‌ಐ! ಅತಂತ್ರವಾದ ಸಂತ್ರಸ್ತರು!

ಬೆಂಗಳೂರಿನ ಕೆ.ಆರ್. ಪುರಂನಲ್ಲಿ ಜಗಳ ಬಿಡಿಸಲು ಮಧ್ಯಪ್ರವೇಶಿಸಿದ ವಿದ್ಯಾರ್ಥಿಯೊಬ್ಬನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ಹಲ್ಲೆಗೊಳಗಾದ ಯುವಕನ ದೂರು ನಿರ್ಲಕ್ಷಿಸಿ, ಪಿಎಸ್‌ಐ ದೂರಿನ ಮೇರೆಗೆ ಯುವಕರ ವಿರುದ್ಧವೇ ಎಫ್‌ಐಆರ್ ದಾಖಲಿಸಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.ಮಹಿಳಾ ಪಿಎಸ್‌ಐ

Read Full Story

07:52 PM (IST) Aug 16

‘35 ವರ್ಷದ ಹೋರಾಟಕ್ಕೆ ಫಲ ಸಿಕ್ಕಿದೆ’ ಎಂದ ಸಿಎಂ ಡಿಕೆಶಿ - ಕೊಡಗಿನಲ್ಲಿ ಮಹತ್ವದ ಘೋಷಣೆಗಳೇನು?

ನನ್ನ 35 ವರ್ಷದ ಹೋರಾಟಕ್ಕೆ ಫಲ ಸಿಕ್ಕಿದೆ, ನಾನು ಪ್ರಾರ್ಥನೆ ಸಲ್ಲಿಸಿದ್ದೆ ಫಲ ಸಿಕ್ಕಿದೆ ಎಂದ ಸಿಎಂ ಡಿ.ಕೆ. ಶಿವಕುಮಾರ್ ತಾವು ಸಿಎಂ ಆಗಿರುವುದಕ್ಕೆ ಮಾರ್ಮಿಕವಾಗಿ ನುಡಿದಿದ್ದಾರೆ. ನಮ್ಮ ನೀರು ನಮ್ಮ ಹಕ್ಕು..

Read Full Story

07:46 PM (IST) Aug 16

ಸೋನಿಯಾ ಗಾಂಧಿ ವಿರುದ್ಧ ಮಂಗಳೂರಲ್ಲಿ ಕೇಸ್! FIR ದಾಖಲಿಸದಿದ್ದರೆ ಹೈಕೋರ್ಟ್‌ಗೆ ಹೋಗುವ ಎಚ್ಚರಿಕೆ

ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ವಂದೇ ಮಾತರಂ ಗೀತೆಗೆ ಅಪಮಾನ ಮಾಡಿದ ಆರೋಪದ ಮೇಲೆ ಸೋನಿಯಾ ಗಾಂಧಿ ವಿರುದ್ಧ ಮಂಗಳೂರಿನ ಉರ್ವ ಠಾಣೆಯಲ್ಲಿ ದೂರು ನೀಡಲಾಗಿದೆ. ಪೊಲೀಸರು ಎಫ್‌ಐಆರ್ ದಾಖಲಿಸದಿದ್ದರೆ ಹೈಕೋರ್ಟ್ ಮೂಲಕ ಕಾನೂನು ಹೋರಾಟ ನಡೆಸುವುದಾಗಿ ಬಿಜೆಪಿ ಮುಖಂಡ ವಿಕಾಸ್ ಪುತ್ತೂರು ಎಚ್ಚರಿಸಿದ್ದಾರೆ.

Read Full Story

07:19 PM (IST) Aug 16

Cinema - ಬೆಂಗಳೂರಿನಿಂದ ನಟನಾದವನ 90ರ ದಶಕದ ಚಿತ್ರ ರೀ-ರಿಲೀಸ್; ಹಳೇ ಪ್ರೊಜೆಕ್ಟರ್‌ನಲ್ಲಿ ಸಿನಿಮಾ ನೋಡಲು ಥಿಯೇಟರ್‌ಗೆ ಮುಗಿಬಿದ್ದ ಜನ!

ಬೆಂಗಳೂರಿನಿಂದ ಸ್ಟಾರ್ ಆದ ಖ್ಯಾತ ನಟನ ಅಭಿನಯದ 1995ರ ಚಿತ್ರವನ್ನು ಹಳೆಯ ಫಿಲ್ಮ್ ರೀಲ್ ಮತ್ತು ಪ್ರೊಜೆಕ್ಟರ್ ಬಳಸಿ ಮರು ಪ್ರದರ್ಶಿಸಲಾಯಿತು. ಈ ವಿಶಿಷ್ಟ ಪ್ರದರ್ಶನವು ಪ್ರೇಕ್ಷಕರಿಗೆ ಡಿಜಿಟಲ್ ಯುಗದ ಮೊದಲು ಇದ್ದ ಥಿಯೇಟರ್ ಅನುಭವವನ್ನು ಮರಳಿ ನೀಡಿತು, ಮತ್ತು ಜನರು ಹಳೆಯ ದಿನಗಳನ್ನು ನೆನಪಿಸಿಕೊಳ್ಳಲು ಥಿಯೇಟರ್‌ಗೆ ಮುಗಿಬಿದ್ದರು.

Read Full Story

07:16 PM (IST) Aug 16

ತಾಲೂಕು, ಜಿಲ್ಲಾ ಪಂಚಾಯತ್ ಚುನಾವಣೆಗೆ ಮುಹೂರ್ತ ನಿಗಧಿ - ಸಿಎಂ ಶಿವಕುಮಾರ್ ಮಹತ್ವದ ಘೋಷಣೆ

ಮಡಿಕೇರಿಯಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಡಿಸೆಂಬರ್ ಒಳಗೆ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳನ್ನು ಪೂರ್ಣಗೊಳಿಸುವುದಾಗಿ ಘೋಷಿಸಿದರು. ಪ್ರತಿ ಗ್ರಾಮ ಪಂಚಾಯಿತಿಗೆ 10 ಲಕ್ಷ ರೂ. ಅನುದಾನ ಹಾಗೂ 'ಭಾರತ್ ಜೋಡೋ ಯುವ ಘಟಕ'ಗಳ ಸ್ಥಾಪನೆಯ ಮೂಲಕ ಅಭಿವೃದ್ಧಿಗೆ ವೇಗ ನೀಡಲಾಗುವುದು ಎಂದು ಅವರು ತಿಳಿಸಿದರು.

Read Full Story

06:45 PM (IST) Aug 16

90% ಮಂದಿಗೆ ಗೊತ್ತಿಲ್ಲದ ವಾಷಿಂಗ್ ಮೆಷಿನ್ ಕ್ಲೀನಿಂಗ್ ಟ್ರಿಕ್ - ಮನೆಯಲ್ಲೇ ಸ್ವಚ್ಛಗೊಳಿಸುವ ಸುಲಭ ವಿಧಾನ!

ವಾಷಿಂಗ್ ಮೆಷಿನ್‌ನಲ್ಲಿ ಬಟ್ಟೆ ತೊಳೆದ ಬಳಿಕ ಅವುಗಳಿಂದ ಕೆಟ್ಟ ವಾಸನೆ ಬರುತ್ತಿದೆಯೇ? ಡ್ರಮ್ ಒಳಗೆ ಕೊಳೆ, ಡಿಟರ್ಜೆಂಟ್ ಅವಶೇಷ ಅಥವಾ ಗಾರ ಜಮೆಯಾಗಿದೆಯೇ? ಹಾಗಾದರೆ ಮೆಷಿನ್‌ನ್ನೇ ದೂಷಿಸುವ ಮೊದಲು..

Read Full Story

06:20 PM (IST) Aug 16

ಅಂದಕ್ಕೆ ಕಡಿಮೆಯೇ ಇಲ್ಲ, ಆದರೆ ಅವಕಾಶಗಳೇ ಇಲ್ಲವೇ? ಮುಂಗಾರು ಮಳೆ ಸುಂದರಿ ನೇಹಾ ಶೆಟ್ಟಿಗೆ ಏನಾಯ್ತು?

ನೇಹಾ ಶೆಟ್ಟಿ ಕನ್ನಡದ ‘ಮುಂಗಾರು ಮಳೆ 2’ ಚಿತ್ರದ ಮೂಲಕ ಪರಿಚಿತರಾದ ನಟಿ. ಸದ್ಯ ಟಾಲಿವುಡ್‌ನಲ್ಲಿ ಕೆಲವೇ ಸಿನಿಮಾಗಳ ಮೂಲಕವೇ ಭಾರೀ ಕ್ರೇಜ್ ಸಂಪಾದಿಸಿದ ನಟಿಯರ ಪೈಕಿ ನೇಹಾ ಶೆಟ್ಟಿ ಕೂಡ ಒಬ್ಬರು.

Read Full Story

06:15 PM (IST) Aug 16

Bihar Boy Success Story - ಕನ್ನಡದ ಕಂಪು ಬೀರಿದ ಬಿಹಾರಿ ಕಂದ; ಹೆತ್ತವರಿಗೆ ಕನ್ನಡ ಬರಲ್ಲ, ಆದರೆ ಮಗ ಮಾತ್ರ ಕನ್ನಡ ಕ್ಲಾಸ್ ಟಾಪರ್!

ಬಿಹಾರದಿಂದ ವಲಸೆ ಬಂದ ಕೂಲಿ ಕಾರ್ಮಿಕ ದಂಪತಿಯ 14 ವರ್ಷದ ಮಗ ಸತ್ಯಕುಮಾರ್ ಪಾಸ್ವಾನ್, ಭಾಷೆಯ ತಡೆಗೋಡೆ, ಬಡತನದಂತಹ ಎಲ್ಲಾ ಅಡೆತಡೆಗಳನ್ನು ಮೀರಿ ಕಾರವಾರದ ಕನ್ನಡ ಮಾಧ್ಯಮ ಶಾಲೆಯಲ್ಲಿ ತರಗತಿಯ ಟಾಪರ್ ಆಗಿ ಹೊರಹೊಮ್ಮಿದ್ದಾನೆ. ಬರಿಗಾಲಲ್ಲಿ ಶಾಲೆಗೆ ನಡೆದು ಹೋಗುತ್ತಿದ್ದ ಈತನ ಕಲಿಕೆಯ ಹಸಿವನ್ನು ಕಂಡು, ಸ್ಥಳೀಯರು ಬೈಸಿಕಲ್ ಕೊಡುಗೆ ನೀಡಿ ಪ್ರೋತ್ಸಾಹಿಸಿದ್ದಾರೆ.
Read Full Story

05:23 PM (IST) Aug 16

IND vs SL - ಭಾರತ-ಶ್ರೀಲಂಕಾ ಟೆಸ್ಟ್ ಪಂದ್ಯದ ನಡುವೆ ದುಃಖದ ಸುದ್ದಿ; ಭಾರತೀಯ ಕ್ರಿಕೆಟಿಗ ಇನ್ನಿಲ್ಲ, ಕ್ರೀಡಾ ಲೋಕದಲ್ಲಿ ಶೋಕ!

ಯುವ ಆಲ್‌ರೌಂಡರ್ ವೈಷ್ಣವ್ ವಿಶ್ವನಾಥ್ ರಸ್ತೆ ಅಪಘಾತದಲ್ಲಿ ದುರಂತ ಸಾವನ್ನಪ್ಪಿದ್ದಾರೆ. ತೆಲಂಗಾಣ ಟಿ20 ಲೀಗ್‌ನಲ್ಲಿ ಮೊಹಮ್ಮದ್ ಸಿರಾಜ್ ಅವರ ತಂಡವಾದ ವಾರಂಗಲ್ ವಾರಿಯರ್ಸ್‌ಗೆ ಆಯ್ಕೆಯಾಗಿದ್ದ ಅವರ ಅಕಾಲಿಕ ನಿಧನವು ಕ್ರಿಕೆಟ್ ಲೋಕಕ್ಕೆ ಆಘಾತವನ್ನುಂಟು ಮಾಡಿದೆ.
Read Full Story

05:09 PM (IST) Aug 16

ಅಮ್ಮ, ಅಪ್ಪ, ಹೆಂಡತಿಯಲ್ಲ.. ಯಶ್‌ಗೆ ಜಗತ್ತಿನಲ್ಲೇ ಅತ್ಯಂತ ಇಷ್ಟವಾದ ವ್ಯಕ್ತಿ ಇವರೇ!

ಯಶ್ ಎಂದರೆ ಇಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡಿರುವ ಹೆಸರು. ‘ಕೆಜಿಎಫ್’ ಸರಣಿಯ ಯಶಸ್ಸಿನ ಬಳಿಕ ಅವರ ಖ್ಯಾತಿ ದೇಶದ ಗಡಿ ದಾಟಿದ್ದು, ವಿಶ್ವದಾದ್ಯಂತ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ.

Read Full Story

04:55 PM (IST) Aug 16

ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು AI ತಂತ್ರಜ್ಞಾನ.. ಇದು ಗುತ್ತಿಗೆದಾರನ ಜಾತಕ ಬಯಲು ಮಾಡಿಬಿಡುತ್ತೆ, ಹುಷಾರ್!

ಬೆಂಗಳೂರಿನ ಎಂಜಿನಿಯರ್ ಗೌರವ್ ಸೇನ್ ಅವರು ರಸ್ತೆ ಗುಂಡಿಗಳನ್ನು ಪತ್ತೆಹಚ್ಚಲು ಮತ್ತು ಅವುಗಳ ಗಾತ್ರವನ್ನು ವಿಶ್ಲೇಷಿಸಲು ಎಐ (AI) ಚಾಲಿತ ಹೊಸ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿದ್ದಾರೆ. ಈ ತಂತ್ರಜ್ಞಾನವು ಗುಂಡಿಗಳಿಗೆ ಕಾರಣರಾದ ಗುತ್ತಿಗೆದಾರರನ್ನು ಗುರುತಿಸಿ, ಅವರ ವಿರುದ್ಧ ಸಂಬಂಧಪಟ್ಟ ಅಧಿಕಾರಿಗಳಿಗೆ ಸಲ್ಲಿಸಲು ಸಿದ್ಧವಿರುವ ದೂರನ್ನು ಸ್ವಯಂಚಾಲಿತವಾಗಿ ಸಿದ್ಧಪಡಿಸುತ್ತದೆ.

Read Full Story

04:52 PM (IST) Aug 16

ವಿಜಯ್ ಬಳಿಕ ಯಶ್ ರಾಜಕೀಯಕ್ಕೆ ಬರ್ತಾರಾ? ರಾಕಿಂಗ್ ಸ್ಟಾರ್ ಕೊಟ್ಟ ಉತ್ತರಕ್ಕೆ ಫ್ಯಾನ್ಸ್ ಫಿದಾ

ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮತ್ತೊಮ್ಮೆ ಸ್ಟಾರ್ ನಟರ ರಾಜಕೀಯ ಪ್ರವೇಶದ ಬಗ್ಗೆ ಚರ್ಚೆ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಯಶ್ ಅವರಿಗೂ ರಾಜಕೀಯಕ್ಕೆ ಬರುವ ಆಸೆ ಇದೆಯೇ ಎಂಬ ಪ್ರಶ್ನೆ ಎದುರಾಗಿದೆ.

Read Full Story

04:26 PM (IST) Aug 16

'ಟಾಕ್ಸಿಕ್' ಇಂಟಿಮೇಟ್ ದೃಶ್ಯ ನೋಡಿ ಪತ್ನಿ ರಾಧಿಕಾ ಪಂಡಿತ್ ಏನಂದ್ರು? ಯಶ್ ಕೊಟ್ಟ ಉತ್ತರವೇನು?

‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರದಲ್ಲಿ ಯಶ್ ಸೇರಿದಂತೆ ಕೆಲ ನಟರು ಕಾಣಿಸಿಕೊಂಡಿರುವ ಇಂಟಿಮೇಟ್ ದೃಶ್ಯಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಅಭಿಪ್ರಾಯಗಳು ವ್ಯಕ್ತವಾಗಿದ್ದವು.

Read Full Story

04:06 PM (IST) Aug 16

ಹುಟ್ಟುಹಬ್ಬದ ಕೇಕ್‌ನಲ್ಲಿ ಹಲ್ಲಿ.. ಮಕ್ಕಳೂ ಸೇರಿದಂತೆ 11 ಮಂದಿ ಆಸ್ಪತ್ರೆಗೆ ದಾಖಲು

ಹುಟ್ಟುಹಬ್ಬದ ಸಂಭ್ರಮದಲ್ಲಿ ಕೇಕ್ ಕತ್ತರಿಸುವುದು ಸಾಮಾನ್ಯ. ಆದರೆ ಅದೇ ಕೇಕ್ ಸಂಭ್ರಮದ ಮನೆಯನ್ನು ಆಸ್ಪತ್ರೆಗೆ ಸೇರಿಸುವಂತೆ ಮಾಡಿದೆ. ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ನಲಸೋಪಾರಾದಲ್ಲಿ ಹುಟ್ಟುಹಬ್ಬದ ಕೇಕ್‌ನಲ್ಲಿ ಸತ್ತ ಹಲ್ಲಿ ಪತ್ತೆಯಾಗಿದ್ದು, ಇದನ್ನು ಸೇವಿಸಿದ 11 ಮಂದಿ ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ.

Read Full Story

04:03 PM (IST) Aug 16

WTC - ಟೀಮ್ ಇಂಡಿಯಾಗೆ ಶಾಕ್ ಕೊಟ್ಟ ಬಾಂಗ್ಲಾದೇಶ! WTC ಫೈನಲ್ ರೇಸ್‌ನಿಂದ ಭಾರತ ಔಟ್?

ಬಾಂಗ್ಲಾದೇಶ ಕ್ರಿಕೆಟ್ ತಂಡವು ಆಸ್ಟ್ರೇಲಿಯಾ ನೆಲದಲ್ಲಿ ಮೊದಲ ಬಾರಿಗೆ ಟೆಸ್ಟ್ ಪಂದ್ಯ ಗೆದ್ದು ಇತಿಹಾಸ ನಿರ್ಮಿಸಿದೆ. ಈ ಗೆಲುವಿನಿಂದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಏರಿದ್ದು, ಭಾರತದ ಫೈನಲ್ ಪ್ರವೇಶದ ಹಾದಿಗೆ ಸವಾಲು ಎದುರಾಗಿದೆ.
Read Full Story

02:15 PM (IST) Aug 16

ಕರ್ನಾಟಕದಲ್ಲಿ ವಾಹನ ಸವಾರರಿಗೆ ಶಾಕ್ - ವಾಯು ಮಾಲಿನ್ಯ ತಪಾಸಣೆ ದರ ಹೆಚ್ಚಳ! ಯಾವ ಗಾಡಿಗೆ ಎಷ್ಟೆಷ್ಟು?

ಕರ್ನಾಟಕದಲ್ಲಿ ವಾಹನ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರದ (PUCC) ಶುಲ್ಕವನ್ನು ಸಾರಿಗೆ ಇಲಾಖೆ ಪರಿಷ್ಕರಿಸಿದೆ. ಮಾಲಿನ್ಯ ಪರೀಕ್ಷಾ ಕೇಂದ್ರಗಳ ನಿರ್ವಾಹಕರ ಮನವಿ ಮೇರೆಗೆ ದ್ವಿಚಕ್ರ ವಾಹನ, ಕಾರು, ಮತ್ತು ಡೀಸೆಲ್ ವಾಹನಗಳು ಸೇರಿದಂತೆ ಎಲ್ಲಾ ವಾಹನಗಳ ಪರೀಕ್ಷಾ ಶುಲ್ಕವನ್ನು ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ. ಈ ನಿರ್ಧಾರವು ಈಗಾಗಲೇ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ವಾಹನ ಸವಾರರ ಮೇಲೆ ಮತ್ತಷ್ಟು ಆರ್ಥಿಕ ಹೊರೆ ಬೀರಲಿದೆ.
Read Full Story

01:52 PM (IST) Aug 16

ಮೊಬೈಲ್ ನೋಡುತ್ತಾ ಕುಳಿತ ತಾಯಿ; 4ನೇ ಮಹಡಿಯಿಂದ ಕೆಳಗೆ ಬಿದ್ದ ಮಗು, ಸಾವು-ಬದುಕಿನ ನಡುವೆ ಹೋರಾಟ

ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಎರಡು ವರ್ಷದ ಮಗುವೊಂದು ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದೆ. ಸದ್ಯ ಮಗು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

Read Full Story

01:49 PM (IST) Aug 16

ಬಾಂಗ್ಲಾ ವಲಸಿಗರ ಗಡಿಪಾರಿಗೆ ಭಾರೀ ಪ್ರತಿಭಟನೆ - ಅಕ್ರಮ ನುಸುಳುಕೋರರು, ಜನಸಂಖ್ಯಾ ಬದಲಾವಣೆ, ಚಿಂತಕ ಸೂಲಿಬೆಲೆ ಎಚ್ಚರಿಸಿದ್ದೇನು?

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಷ್ಟ್ರ ರಕ್ಷಣಾ ಪಡೆಯ ನೇತೃತ್ವದಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಗಡಿಪಾರು ಮಾಡಲು ಆಗ್ರಹಿಸಿ ಪ್ರತಿಭಟನೆ ನಡೆಯಿತು. ಈ ಹೋರಾಟದಲ್ಲಿ ಮಾತನಾಡಿದ ಚಕ್ರವರ್ತಿ ಸೂಲಿಬೆಲೆ, ಹೋರಾಟ ಗುರಿ ಮುಟ್ಟುವವರೆಗೂ ನಿಲ್ಲಬಾರದು ಎಂದರು. ಜನಸಂಖ್ಯಾ ಹೆಚ್ಚಳದ ಆತಂಕ..

Read Full Story

01:33 PM (IST) Aug 16

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಬಂದು ಚಂದನ್‌ ಶೆಟ್ಟಿಯನ್ನೇ ನಾಮಿನೇಟ್ ಮಾಡಿದ ಕುಮಾರಿ

ಬಿಗ್‌ಬಾಸ್ ಸೀಸನ್ 13ರ ಅಗ್ನಿಪರೀಕ್ಷೆ ಆರಂಭವಾಗಿದ್ದು, ಕುಮಾರಿ ಎಂಬ ಯುವತಿ ಗಮನ ಸೆಳೆಯುತ್ತಿದ್ದಾರೆ. ತನ್ನ ಫಿಲ್ಟರ್ ಇಲ್ಲದ ಮಾತುಗಳಿಂದ ತೀರ್ಪುಗಾರರ ಮನಗೆದ್ದ ಈಕೆ, ಚಂದನ್ ಶೆಟ್ಟಿಯವರನ್ನೇ ನಾಮಿನೇಟ್ ಮಾಡಿ ಅಚ್ಚರಿ ಮೂಡಿಸಿದ್ದಾರೆ.

Read Full Story

12:50 PM (IST) Aug 16

ಸಖತ್ ಮೋಡಿ ಮಾಡಿದ ಆದಿತ್ಯ ಶಶಿಕುಮಾರ್ 'ಮೊದಲ ಪ್ರೀತಿ'.. 'ರಾಶಿ' ಮೊದಲ ಹಾಡು ಭಾರೀ ವೈರಲ್!

ವಿಜಯ್ ಪಾಳೇಗಾರ್ ನಿರ್ದೇಶನದ , ಸುಪ್ರೀಂ ಹೀರೋ ಶಶಿಕುಮಾರ್ ಪುತ್ರ ಆದಿತ್ಯ ಶಶಿಕುಮಾರ್ ನಾಯಕತ್ವದ ‘ರಾಶಿ’ ಚಿತ್ರದ ಮೊದಲ ಹಾಡು "ಮೊದಲ ಪ್ರೀತಿ" ಇತ್ತೀಚೆಗೆ ಬಿಡುಗಡೆಯಾಗಿದೆ. ಚಿತ್ರದ ನಿರ್ದೇಶಕ ವಿಜಯ್ ಪಾಳೇಗಾರ್ ಬರೆದು, ಸಂಗೀತ ಸಂಯೋಜಿಸಿರುವ ಈ ಹಾಡನ್ನು ಖ್ಯಾತ ಗಾಯಕ ಅರ್ಮಾನ್ ಮಲ್ಲಿಕ್ ಹಾಡಿದ್ದಾರೆ.

Read Full Story

12:42 PM (IST) Aug 16

ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹಿಸಿ ರಾಷ್ಟ್ರ ರಕ್ಷಣಾ ಪಡೆ ಬೃಹತ್ ಪ್ರತಿಭಟನೆ - ವಸಂತ್ ಗಿಳಿಯಾರ್ ಪ್ರತಿಕ್ರಿಯೆ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಗಡಿಪಾರು ಮಾಡಬೇಕೆಂದು ರಾಷ್ಟ್ರ ರಕ್ಷಣಾ ಪಡೆಯು ಬೃಹತ್ ಪ್ರತಿಭಟನೆ ನಡೆಸಿತು. ಈ ವೇಳೆ ಮಾತನಾಡಿದ ಹಿಂದೂ ಮುಖಂಡ ವಸಂತ್ ಗಿಳಿಯಾರ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

Read Full Story

11:11 AM (IST) Aug 16

BCCI Centre of Excellence - ಬೆಂಗಳೂರಲ್ಲಿದೆ ಭಾರತದ ಕ್ರಿಕೆಟ್‌ ಫ್ಯಾಕ್ಟ್ರಿ; ₹500 ಕೋಟಿ ವೆಚ್ಚ

ಸುಮಾರು ₹500 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಈ ಕೇಂದ್ರವು, ಕ್ರೀಡಾ ವಿಜ್ಞಾನ, ತಂತ್ರಜ್ಞಾನ, ಮತ್ತು ವಿವಿಧ ಬಗೆಯ ಪಿಚ್‌ಗಳನ್ನು ಬಳಸಿ ಆಟಗಾರರ ಕೌಶಲ್ಯ ಮತ್ತು ಫಿಟ್‌ನೆಸ್‌ ಅನ್ನು ಸುಧಾರಿಸುತ್ತದೆ. ಇದು ಕೇವಲ ಪುನಶ್ಚೇತನ ಕೇಂದ್ರವಲ್ಲ, ಬದಲಿಗೆ ಭಾರತೀಯ ಕ್ರಿಕೆಟ್‌ನ ಪ್ರತಿಭಾ ಅಭಿವೃದ್ಧಿಯ ಹೃದಯವಾಗಿದೆ.

Read Full Story

09:29 AM (IST) Aug 16

ಬೆಂಗಳೂರು ವಾಹನ ಸವಾರರಿಗೆ ಅಲರ್ಟ್; ಅಕ್ಟೋಬರ್‌ನಿಂದ ಜನವರಿವರೆಗೂ ಹೆಚ್ಚಾಗಲಿದೆ ಟ್ರಾಫಿಕ್‌ ತಲೆನೋವು, ಇಲ್ಲಿದೆ ಕಾರಣ!

ಬೆಂಗಳೂರಿನ ಔಟರ್ ರಿಂಗ್ ರೋಡ್‌ನಲ್ಲಿ ಅಕ್ಟೋಬರ್‌ನಿಂದ ವೈಟ್ ಟಾಪಿಂಗ್ ಕಾಮಗಾರಿ ಆರಂಭವಾಗಲಿದ್ದು, ತೀವ್ರ ಸಂಚಾರ ದಟ್ಟಣೆ ಉಂಟಾಗಲಿದೆ. ಇದಕ್ಕೆ ಪರಿಹಾರವಾಗಿ ಸರ್ಕಾರವು ಐಟಿ ಕಂಪನಿಗಳಿಗೆ ಹೈಬ್ರಿಡ್ ಕೆಲಸದ ಮಾದರಿಗೆ ಮನವಿ ಮಾಡಿದೆ.

Read Full Story

08:47 AM (IST) Aug 16

Priyank kharge - ರಜಾಕಾರರ ದಾಳಿಯಿಂದ ನಮ್ಮನ್ನು ರಕ್ಷಿಸಿದ್ದು ನೆಹರು, ಪಟೇಲ್ ಹೊರತು ಆರೆಸ್ಸೆಸ್ ಅಲ್ಲ - ಪ್ರಿಯಾಂಕ್‌

ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು, ಹೈದರಾಬಾದ್‌ ನಿಜಾಮ್‌ ಕಾಲದಲ್ಲಿ ತಮ್ಮ ಕುಟುಂಬವನ್ನು ರಕ್ಷಿಸಿದ್ದು RSS ಎಂಬ ಬಿ.ಎಲ್. ಸಂತೋಷ್ ಅವರ ಹೇಳಿಕೆ ತಳ್ಳಿಹಾಕಿದ್ದಾರೆ. ತಮ್ಮನ್ನು ರಕ್ಷಿಸಿದ್ದು ನೆಹರು, ಸರ್ದಾರ್‌ ಪಟೇಲ್ ಮತ್ತು ಭಾರತೀಯ ಸೇನೆಯೇ ಹೊರತು ಬೇರೆ ಯಾರೂ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Read Full Story

08:20 AM (IST) Aug 16

ಜೈಲಲ್ಲಿ ನಟಿ ಪವಿತ್ರಾ ಗೌಡಗೆ ಬಿಗ್ ಶಾಕ್; ಇಬ್ಬರಿದ್ದ ಬ್ಯಾರಕ್‌ನಿಂದ 16 ಜನ ಇರುವೆಡೆ ಸ್ಥಳಾಂತರ! ಯಾಕೆ ಗೊತ್ತಾ?

ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟಿ ಪವಿತ್ರಾ ಗೌಡ ಅವರನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇಬ್ಬರಿದ್ದ ಬ್ಯಾರಕ್‌ನಿಂದ 16 ಕೈದಿಗಳಿರುವ ಬ್ಯಾರಕ್‌ಗೆ ವರ್ಗಾಯಿಸಲಾಗಿದೆ. ಪ್ರಜ್ವಲ್‌ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್‌ ಪತ್ತೆಯಾದ ಹಿನ್ನೆಲೆಯಲ್ಲಿ ಜೈಲಿನಲ್ಲಿ ಕಟ್ಟುನಿಟ್ಟಿನ ಕ್ರಮ.

Read Full Story

07:50 AM (IST) Aug 16

ಆಸ್ಟ್ರೇಲಿಯಾದ ಮೌಂಟ್ ಕೊಸ್ಸಿಯಸ್ಕೊ ಶಿಖರವನ್ನೇರಿದ ಕೊಡಗಿನ ಜಮ್ಮಡ ಪ್ರೀತ್ ಅಪ್ಪಯ್ಯ

ಕೊಡಗಿನ ಸಾಹಸಿ ಮಹಿಳೆ ಜಮ್ಮಡ ಪ್ರೀತ್ ಅಪ್ಪಯ್ಯ ಅವರು ಆಸ್ಟ್ರೇಲಿಯಾದ ಮೌಂಟ್ ಕೊಸ್ಸಿಯಸ್ಕೊ ಶಿಖರವನ್ನು ಕೊಡವ ಉಡುಪಿನಲ್ಲಿ ಏರಿ ಸಾಧನೆ ಮಾಡಿದ್ದಾರೆ. ಇದೇ ವೇಳೆ, ಕೊಡಗು ಸೈನಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನವನ್ನು ಅದ್ದೂರಿಯಾಗಿ ಆಚರಿಸಲಾಯಿತು.
Read Full Story

07:47 AM (IST) Aug 16

ಬೆಂಗಳೂರಲ್ಲಿ ಬಂಧಿತ ಶಂಕಿತ ಉಗ್ರನ ಶಾಕಿಂಗ್ ಹಿಸ್ಟರಿ!ಕೂಲಿ ಹಣದಲ್ಲಿ ₹10,000 ಪ್ಯಾಲೆಸ್ತೀನ್ ಪರ ದೇಣಿಗೆ, ಐಬಿ ಕಣ್ಣಿಗೆ ಬಿದ್ದಿದ್ದು ಹೇಗೆ?;

ಬೆಂಗಳೂರಿನಲ್ಲಿ ಬಂಧಿತನಾದ ಶಂಕಿತ ಉಗ್ರ ಅಸಾಫೂಲ್ ಮಲ್ಲಿಕ್‌, ತನ್ನ ಕೂಲಿ ಹಣದಲ್ಲಿ 10 ಸಾವಿರ ರುಪಾಯಿಯನ್ನು ಇಸ್ರೇಲ್ ವಿರುದ್ಧದ ಹೋರಾಟಕ್ಕಾಗಿ ಪ್ಯಾಲೆಸ್ತೀನ್‌ ಸೇನೆಗೆ ದೇಣಿಗೆ ನೀಡಿದ್ದ. ಪಾಕಿಸ್ತಾನದ ಟಿಟಿಪಿ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಈತ, ಫೇಸ್‌ಬುಕ್‌ ಮೂಲಕ ಉಗ್ರರ ಸಂಪರ್ಕಕ್ಕೆ ಬಂದಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ.
Read Full Story

07:40 AM (IST) Aug 16

Shivamogga - ಹೆಲಿಕಾಪ್ಟರ್‌ನಲ್ಲಿ ಹಾರಾಡಿದ ಸರ್ಕಾರಿ ಶಾಲೆಯ ಮಕ್ಕಳು!

ಶಿಕಾರಿಪುರದ ಕಡೇನಂದಿಹಳ್ಳಿ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸುವ ಸೌಭಾಗ್ಯ ಲಭಿಸಿತು. ಶಾಲೆಯ ಹಳೇ ವಿದ್ಯಾರ್ಥಿಗಳ ಸಂಘ ಹಾಗೂ ವಿಶ್ವಾಗ್ರಹ ಫೌಂಡೇಶನ್ ಈ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿ, ಮಕ್ಕಳ ಶಿಕ್ಷಣಕ್ಕೆ ಸ್ಫೂರ್ತಿ ತುಂಬಿದವು.

Read Full Story

More Trending News